Author: admin

ಬೆಂಗಳೂರು : ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್ ನಲ್ಲಿ ನಡೆದಿದೆ. ರಾಜ್ದುಲಾರಿ ಸಿನ್ಹಾ(76) ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿಯಾಗಿದ್ದಾರೆ. ವಾಕಿಂಗ್ ಮಾಡುತ್ತಿದ್ದಾಗ, ರಾಜ್ದುಲಾರಿ ಸಿನ್ಹಾ ಮೇಲೆ ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ಮಾಡಿದ್ದವು. ಇದರಿಂದ ಗಂಭೀರ ಗಾಯಗೊಂಡಿದ್ದ ರಾಜ್ದುಲಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಮಹಿಳೆಯೊಬ್ಬರ ಪ್ರಾಣ ಬಲಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯ್ತಾ ಕಾಲೇಜ್ ಪುಂಡರ ಹಾವಳಿ ಅನ್ನೋ ಪ್ರಶ್ನೆ ಇದೀಗ ಕೇಳಿ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ನ ರಂಗಮಂದಿರ ಹಿಂದೆ ಘಟನೆ. ಮಾತಿಗೆ ಮಾತು ಬೆಳೆಸಿಕೊಂಡು ಪರಸ್ಪರ ಎರಡು ಗುಂಪುಗಳು ಹೊಡೆದಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ತುಮಕೂರು ನಗರದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದರು. ಇದೀಗ ಗುಬ್ಬಿ ಸರ್ಕಾರಿ ಕಾಲೇಜ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಘಟನೆಯಿಂದ ಪೋಷಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ರಾಜ್ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಹಿರೇಮಠ್ ಹೇಳಿದರು. ತುಮಕೂರು ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿರುವ ‘ಉದ್ಯಮಶೀಲತಾ ಸಪ್ತಾಹ’ದ ಅಂಗವಾಗಿ ಮೂರು ದಿನಗಳ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಳ ನವ್ಯೋದ್ಯಮ ಮಳಿಗೆಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಭಾರತೀಯರನ್ನು ಗುಲಾಮರನ್ನಾಗಿ, ಕೆಲಸಗಾರರನ್ನಾಗಿ ರೂಪಿಸಿದ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಿ, ನಮ್ಮಉತ್ಸಾಹಕ್ಕೆ ಪೂರಕವಾದ ಮಾರ್ಗವನ್ನು ಆರಿಸಿನಡೆಯುವ ಕಾಲವಿದು. ವಾಣಿಜ್ಯೋದ್ಯಮಿಗಳಾಗುವವರಿಗೆ ನಮ್ಯತೆ, ಸ್ವಾತಂತ್ರ್ಯ ಸ್ವಾಯತ್ತತೆ, ಸೃಜನಶೀಲತೆ, ಉತ್ಸಾಹವೇ ಬಂಡವಾಳ, ವಿವಿಧ ಸೇವೆ ಒದಗಿಸುವ ವ್ಯವಹಾರವನ್ನು ಪ್ರಾರಂಭಿಸುವುದೇ ಪ್ರಸ್ತುತ ಪ್ರವೃತ್ತಿಎಂದು ತಿಳಿಸಿದರು. ಉದ್ಯಮಿ ಡಾ.ಆರ್.ಎಲ್.ರಮೇಶ್ ಬಾಬು ಮಾತನಾಡಿ, ವಿಭಿನ್ನ ಆಲೋಚನೆಗಳೇ ಯಶಸ್ವಿ ಜೀವನಕ್ಕೆ ಮುನ್ನುಡಿ. ಸಮಾಜಮುಖಿ ಉದ್ಯಮಗಳನ್ನು ಆರಂಭಿಸಿದಾಗ ಜನರನ್ನು ಬೇಗ ತಲುಪಬಹುದು. ಪರಿಸರ ಸ್ನೇಹಿ, ಜನ ಸ್ನೇಹಿ ಉತ್ಪನ್ನಗಳನ್ನು ಜನರು ಬಯಸುತ್ತಾರೆ. ಉತ್ಪನ್ನದಗುಣಮಟ್ಟದ ಮೇಲೆ ಜನರ ನಂಬಿಕೆ ಗಳಿಸಿ ಉದ್ಯಮವನ್ನು ಎತ್ತರಕ್ಕೆಕೊಂಡೊಯ್ಯಬಹುದು ಎಂದರು.…

Read More

ಮಧುಗಿರಿ: ವಿದ್ಯಾರ್ಥಿಗಳು ತಮ್ಮ ಕಲೆಯಲ್ಲಿ ನೈಪುಣ್ಯತೆ ಬೆಳಸಿಕೊಂಡು ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆ ತೋರಿಸಿ ತಮ್ಮ ಶಾಲೆಗೆ ಕೀರ್ತಿ ತರಬೇಕೆಂದು ನೇರಳೇಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ R. ರಜನಿ. ಕರೆ ನೀಡಿದರು. ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಶಿಕ್ಷಣ ಇಲಾಖೆಯ ಹೊಸಕೆರೆ ಕ್ಲಸ್ಟರ್ ವತಿಯಿಂದ ನೇರಳೇಕೆರೆ ಹಿರಿಯ ಪ್ರಾಥಮಿಕ ಪಾಠಶಾಲೆಯ ಅವರಣದಲ್ಲಿ ಆಯೋಜಿದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಶಿಕ್ಷಣ ಇಲಾಖೆ ಪ್ರತಿನಿಧಿ ಮಹಾದೇವಯ್ಯ ಮಾತನಾಡಿ, ಪ್ರತಿಭಾ ಕಾರಂಜಿ ತೀರ್ಪುಗಾರರು ಮಕ್ಕಳ ಕಲೆಯನ್ನು ಪ್ರಾಮಾಣಿಕ ಗುರುತಿಸಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಹೋಗುವಂತ ಕೆಲಸ ಆಗಬೇಕೆಂದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲಕ್ಷ್ಮೀ ಪ್ರಸಾದ್ ಮಾತನಾಡಿ, ತೀರ್ಪುಗಾರರು ಕಾರ್ಯಕ್ರಮದಲ್ಲಿ ಯಾವುದೇ ಲೋಪ ಇಲ್ಲದಂತೆ ಪ್ರತಿಭೆಗಳನ್ನು ಗುರುತಿಸಬೇಕೆಂದು ತಿಳಿಸಿದರು. ಬರಹಗಾರರಾದ ಎಸ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳಲ್ಲಿ ಸಹ ಪ್ರತಿಭಾ ಕಾರಂಜಿಯಲ್ಲಿರುವ ಕಲೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸ ಬೇಕೆ ಹೊರತು, ಸಿನಿಮಾ ಸಾಂಗ್ ಗಳನ್ನು ಬೆಳಸುವುದು ಬೇಡ. ಮಕ್ಕಳಲ್ಲಿ ಒಳ್ಳೆಯ ಅಭಿರುಚಿ…

Read More

ಬಟ್ಟೆಯ ವಿಚಾರಗಳಿಗೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿವಾದಕ್ಕೀಡಾಗುವ ಬಾಲಿವುಡ್ ಬೆಡಗಿ ಉರ್ಫಿ ಜಾವೇದ್ ಇದೀಗ ಸೌತ್ ನಟಿ ಸಮಂತಾ ನನ್ನ ಫ್ರೆಂಡ್ ಅಂತ ಕಥೆ ಕಟ್ಟಿ ಸುದ್ದಿಯಾಗಿದ್ದಾರೆ. ಫಾಲೋ ಕರ್ ಲೋ ಯಾರ್ ಶೋನಲ್ಲಿ, ತನ್ನ ಪ್ರಚಾರಕ್ಕಾಗಿ ಉರ್ಫಿ ಈ ಹೇಳಿಕೆ ನೀಡಿದ್ದು, ಇದರ ಸಂದರ್ಶನದಲ್ಲಿ ಸಮಂತಾ ನನ್ನ ಫ್ರೆಂಡ್ ಎಂದಿದ್ದಾರೆ. ನಾನು ಸಮಂತಾ ಇನ್ಸ್ಟಾಗ್ರಾಂ ಫ್ರೆಂಡ್ಸ್, ನನ್ನ ವಿಡಿಯೋ ಇಷ್ಟವಾದ್ರೆ ಅದನ್ನು ಅವರ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡುತ್ತಾರೆ ಎಂದು ಉರ್ಫಿ ಹೇಳಿದ್ದಾರೆ. ನಾನು ಅವರ ಜೊತೆ ಆಗಾಗ ಇನ್ಸ್ಟಾಗ್ರಾಂನಲ್ಲಿ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಇದೇ ಶೋನಲ್ಲಿ ಮಾತನಾಡಿರುವ ಅವರು ನಾನು 3 ವರ್ಷಗಳಿಂದ ಸೆಕ್ಸ್ ಮಾಡಿಲ್ಲ ಅಂತ ಹೇಳಿಕೆ ನೀಡಿದ್ದರು. ನನ್ನ ಬಳಿ ಎಲ್ಲಿಯವರೆಗೂ ಪ್ರೈವೇಟ್ ಜೆಟ್ ಇರುವುದಿಲ್ಲವೋ ಅಲ್ಲಿ ತನಕ ಸೆಕ್ಸ್ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದೆ ಎಂದು ಅವರು ಹೇಳಿದ್ದರು. ಅಂದ ಹಾಗೆ, ಇದೆಲ್ಲ ಶೋ ಪ್ರಚಾರಕ್ಕಾಗಿ ನೀಡುವ ಹೇಳಿಕೆಗಳಾಗಿವೆ. ಜನ ಶೋಗಳನ್ನು ನೋಡಬೇಕು…

Read More

ಬಿಗ್ ಬಾಸ್ ಖ್ಯಾತಿಯ ಸೋನುಗೌಡ ಶಾರ್ಟ್ ಶರ್ಟ್ ಮತ್ತು ಶಾರ್ಟ್ ಆಗಿರೋ ಜೀನ್ಸ್ ಅನ್ನು ಧರಿಸಿ ಡಾನ್ಸ್ ಮಾಡಿದ್ದು, ಸೋನುಗೌಡ ಡಾನ್ಸ್ ಗೆ ಪಡ್ಡೆ ಹುಡುಗರು ಕಂಗಾಲಾಗಿದ್ದಾರೆ. ಇತ್ತೀಚೆಗೆ ಗೋವಾ ವೆಕೇಷನ್ ಗೆ ಹೋಗಿದ್ದ ಸೋನುಗೌಡ ಈ ವೇಳೆ, ಶೂಟ್ ಮಾಡಿದ್ದ ರೀಲ್ಸ್ ಗಳನ್ನು ಈಗ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ‘ನೆನೆಪಿರಲಿ’ ಸಿನಿಮಾದ ‘ಹಾಡಿಗೆ ಹೃದಯ ಬಯಸುವ ಸುಖದ ಚಿತ್ರಕ್ಕೆ’ ಹಾಡಿಗೆ ಕುಣಿದು ರಂಜಿಸಿದ್ದಾರೆ. ಸೋನುಗೌಡ ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಕ್ಯಾಡ್ಬರೀಸ್ ಸಿನಿಮಾದಲ್ಲಿ ಸೋನುಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಐಟಂ ಹಾಡಿಗೆ ಸೋನು ಹೆಜ್ಜೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಫ್ಲಾಟ್ ಫಾರ್ಮ್ ಗಳಲ್ಲಿ ಬೆಳೆದ ನಟಿ ಸೋನು ಗೌಡ ಅವರು, ರೀಲ್ಸ್ ಮಾಡುವುದನ್ನು ಮುಂದುವರಿಸಿದ್ದಾರೆ. ತಮ್ಮ ರೀಲ್ಸ್ ಗಳಿಗಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ವಿಡಿಯೋದಲ್ಲಿ ಸೋನುಗೌಡ ಹಾಟ್ ಅವತಾರದಲ್ಲಿ ರಂಜಿಸಿದ್ದಾರೆ. View this post on Instagram A post shared by Shambhavi.srinivasgowda54 (@sonusrinivas.gowda54)…

Read More

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸ ಬಯಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಗಸ್ಟ್ 30 ರಿಂದ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಪರಿಶಿಷ್ಟ ಪಂಗಡದ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಉದ್ಯಮಗಳ ಆಯ್ಕೆ, ಮಾರುಕಟ್ಟೆ, ಯೋಜನಾವರದಿ, ತೆರಿಗೆ ನಿರ್ವಹಣೆ ಮತ್ತು ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಆಸಕ್ತರು ಆಗಸ್ಟ್ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯುವ ತರಬೇತಿಗೆ ನೇರವಾಗಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಬಿ.ಹೆಚ್.ರಸ್ತೆ, ತುಮಕೂರು ಅಥವಾ ದೂ.ವಾ.ಸಂಖ್ಯೆ: 8073313988ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ದರ್ಬಾರ್ ಗೆ ಬ್ರೇಕ್ ಬಿದ್ದಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಲ್ಲಿದ್ದ ದರ್ಶನ್ ನ ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ FIR ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಈಗ ಬಿಗಿ ಭದ್ರತೆಯಲ್ಲಿ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜೈಲಲ್ಲಿ ರಾಜಾತಿಥ್ಯ ನೀಡಿದ ಆರೋಪದಲ್ಲಿ 7 ಜನ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಇದೇ ವೇಳೆ ದರ್ಶನ್ ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇದೇ ಸಂದರ್ಭ ರೇಣುಕಾಸ್ವಾಮಿ ಕೊಲೆ ಕೇಸ್ ನ ಇತರ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ರೆ ಮತ್ತಿತರ ಆರೋಪಿಗಳಾದ ಆರೋಪಿ ಪವನ್ , ರಾಘವೇಂದ್ರ ನಂದೀಶ್…

Read More

ಇಂದು ದಾವಣಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಣಿಕ ನುಡಿಯನ್ನು ಪೂಜಾರಿ ನುಡಿದಿದ್ದು, ಬರುವ ದಿನಗಳಲ್ಲಿ ನಾಡಿಗೆ, ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದು ಇದರ ಸಾರಾಂಶ ಎಂಬುದಾಗಿ ಜನರು ವಿಶ್ಲೇಷಿಸಿದ್ದಾರೆ. ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂದು ಕಾರ್ಣಿಕ ಭವಿಷ್ಯ ನುಡಿದಿದ್ದು, ಇದು ಮುಂದಿನ ದಿನಗಳ ಶುಭ ಸೂಚಕವಾಗಿದೆ. ಕೃಷಿಯಲ್ಲಿ ಉತ್ತಮ ಫಸಲು ಬರಲಿದೆ ಎಂದು…

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಕುರಿತು ರೈತರಿಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಧುನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಆಗಸ್ಟ್ 29 ಮತ್ತು 30ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ. ತರಬೇತಿಗೆ ಹಾಜರಾಗಲು ಇಚ್ಛಿಸುವವರು 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More