Subscribe to Updates
Get the latest creative news from FooBar about art, design and business.
- ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
- ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
- ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್ ಬುಕ್ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲು
- ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
Author: admin
ಆನೇಕಲ್: ಪುರಸಭೆ ಸದಸ್ಯನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ವೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ. ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಕಳೆದ 24ನೇ ತಾರೀಕು ಬುಧವಾರ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಆರೋಪಿಗಳ ಬಂಧನಕ್ಕೆ…
ನವದೆಹಲಿ: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ELCIA ಟೆಕ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಅವರು, ಭಾರತವು ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್ ಮಾಡಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು. ಚೀನಾವನ್ನು ಹಿಂದಿಕ್ಕಿ ಜಾಗತಿಕ ಉತ್ಪಾದನಾ ಕೇಂದ್ರವಾಗುವುದು ಸುಲಭವಲ್ಲ, ಹಾಗಾಗಿ “ಹಬ್” ಮತ್ತು “ವಿಶ್ವ ಗುರು” ನಂತಹ ಭವ್ಯವಾದ ಪದಗಳನ್ನು ಸುಖಾ ಸುಮ್ಮನೆ ಬಳಸದಂತೆ ಅವರು ಸಲಹೆ ನೀಡಿದರು. ಐಟಿ ವಲಯವು ರಫ್ತಿನ ಮೇಲೆ ಅವಲಂಬಿತವಾಗಿರುವಾಗ, ಉತ್ಪಾದನಾ ಉದ್ಯಮಕ್ಕೆ ಹೆಚ್ಚಿನ ದೇಶೀಯ ಕೊಡುಗೆ ಮತ್ತು ಸರ್ಕಾರದ ಬೆಂಬಲದ ಅಗತ್ಯವಿದೆ. ಉತ್ಪಾದನೆಗೆ ದೇಶೀಯ ಕೊಡುಗೆ ಹೆಚ್ಚು. ಉತ್ಪಾದನೆಯ ಯಶಸ್ಸಿನಲ್ಲಿ ಸರ್ಕಾರವು ದೊಡ್ಡ ಪಾತ್ರವನ್ನು ವಹಿಸುತ್ತದೆ. ದುರದೃಷ್ಟವಶಾತ್, ಭಾರತದಂತಹ…
ತುಮಕೂರು: ಆಯತಪ್ಪಿ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಪುಟ್ಟಮಾದಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಕೆಂಪಮ್ಮ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದ್ದಿದೆ. ಬಾವಿಗೆ ಬಿದ್ದ ಮೇಲೆ ಬರಲು ಸಾಧ್ಯವಾಗದೆ ಪ್ರಾಣ ಬಿಟ್ಟಿದ್ದು ಎರಡ್ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಮಾಲೀಕರು ತೋಟಕ್ಕೆ ಬಂದು ಬಾವಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿ ತಲುಪಿರುವ ಚಿರತೆ ಕಳೆಬರ ಪತ್ತೆಯಾಗಿದೆ. ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಚಿರತೆ ಶವ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಕರೆದು ಮಹಿಳೆಯೊಬ್ಬರ ಮೇಲೆ ಪೂಜಾರಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಸದ್ಯ ಬಾಗಲಗುಂಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್(39) ಬಂಧಿತ ಆರೋಪಿಯಾಗಿದ್ದಾನೆ. ಕೆಲವು ದಿನಗಳ ಹಿಂದೆ ದೋಷ ನಿವಾರಣೆ ಮಾಡುವುದಾಗಿ ಮಹಿಳೆಯಿಂದ ಹಣಪಡೆದುಕೊಂಡಿದ್ದ ಪೂಜಾರಿ, ಮಹಿಳೆಯನ್ನು ಕರೆಸಿಕೊಂಡಿದ್ದು, ಬಳಿಕ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮಹಿಳೆಯ ದೂರಿನ್ವಯ ಬಾಗಲಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇದೀಗ ಆರೋಪಿ ದಯಾನಂದ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ತಿಪ್ಪೇಶ್ ಆರ್.ಟಿ.ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು. ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಮಧುಗಿರಿ ಉಪ ವಿಭಾಗಾಧಿಕಾರಿಗಳ ನಿರ್ದೇಶನದಂತೆ ಅನುಸೂಚಿತ ಜಾತಿಗೆ ಮೀಸಲಿದ್ದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು. ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅನುಸೂಚಿತ ಜಾತಿಗೆ ಮೀಸಲಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ತಿಪ್ಪೇಶ್ ಆರ್ ಟಿ ಅವಿರೋಧ ಆಯ್ಕೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತಿಪ್ಪೇಶ್, ಗ್ರಾಮ ಪಂಚಾಯಿತಿ ಎಲ್ಲ ಸದಸ್ಯರು ಸಾಮರಸ್ಯದಿಂದ ಒಟ್ಟಾಗಿ ಅವಿರೋಧವಾಗಿ ಅಯ್ಕೆ ಮಾಡಿದ್ದಾರೆ. ಎಲ್ಲಾ ಸದಸ್ಯರಿಗೂ ಸಹಕಾರದಿಂದ ನೀಡುತ್ತೇನೆ. ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ ಎಂದರಲ್ಲದೇ , ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರಿಗೆ ನೂತನವಾಗಿ ಧನ್ಯವಾದಗಳನ್ನು ತಿಳಿಸಿದರು.. ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಮತದಾರರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಹಾರ…
ಸಾಮಾನ್ಯವಾಗಿ ಮದುವೆ ಆದ ಕೆಲ ತಿಂಗಳು ಕಳೆಯುತ್ತಿದ್ದಂತೆ, ನಮ್ಮ ಸುತ್ತಲಿನ ಆಪ್ತರು, ಸ್ನೇಹಿತರು, ಕುಟುಂಬದವರು ಗುಡ್ ನ್ಯೂಸ್ ಯಾವಾಗ? ಎಂದು ಪ್ರಶ್ನೆ ಮಾಡುವುದು ಸಹಜ. ಈ ಸಹಜ ಪ್ರಕ್ರಿಯೆ ಬಗ್ಗೆಯೂ ಕೊಂಚ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ ಅನು ಪ್ರಭಾಕರ್. ಅದು ಅವಳ ಗರ್ಭ, ಅವಳ ನಿರ್ಧಾರ ಅದನ್ಯಾಕೆ ಪ್ರಶ್ನಿಸಬೇಕು? ಎಂಬುದು ಅನು ಅವರ ವಾದ. ಆ ಬೇಸರದ ವಿಷಯದ ಬಗ್ಗೆ ರ್ಯಾಪಿಡ್ ರಶ್ಮಿ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಸುದೀರ್ಘವಾಗಿ ಹೇಳಿಕೊಂಡಿದ್ದಾರೆ ಅನು. “8 ವರ್ಷ ಆಯ್ತು ಮದುವೆ ಆಗಿಲ್ಲ. ಆಕೆಗೆ ಕಿರುಕುಳ ಕೊಡ್ತಿದ್ದಾರೆ. ಬಂಜೆ ಅದೂ ಇದೂ ಎಂದೆಲ್ಲ ಕರೆಸಿಕೊಳ್ಳುವ ಪರಿಸ್ಥಿತಿ ಅವಳದ್ದು. ಇದೆಲ್ಲದರ ಮೇಲೆ ಅವಳಿಗೆ ಮಗು ಆಗುತ್ತದೆ. ಆದರೆ, ಆ ಮಗು ವಿಕಲಚೇತನ ಆಗಿರುತ್ತೆ. ಡಾಕ್ಟರ್ ಬೇಡ ಅಂತ ಹೇಳಿದ್ರೂ, ಆಕೆ ಆ ಮಗುವನ್ನು ಪಡೆದುಕೊಳ್ತಾಳೆ. ಇಷ್ಟು ದಿನ ಕಾದರೂ ನನಗೆ ಸಿಕ್ಕಿರಲಿಲ್ಲ. ಇದೀಗ ಇದು ದೇವರ ಮಗು ನನಗೆ. ನಾನು ಇದನ್ನ ಸಾಕ್ತಿನಿ. ಆ…
ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ ಎಂದು ಅಧಿವೇಶದಲ್ಲಿ ದೇವೇಗೌಡರು ಮಾತಾನ್ನಾಡಿದ್ದಾರೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದರು. ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ. ಮುಂದಿನ ಬಜೆಟ್ ವೇಳೆಗೆ ಇರ್ತೇನೋ ಇಲ್ವೊ ಗೊತ್ತಿಲ್ಲ. ಹಾಗಾಗಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಜನರು ಕುಡಿಯುವ ನೀರಿಲ್ಲದೇ ಸಂಕಷ್ಟದಲ್ಲಿದ್ದಾರೆ ಎಂದಿದ್ದಾರೆ. ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ. ಒಂದು ಮಳೆ ಬರದಿದ್ದರೆ ಪರಿಸ್ಥಿತಿ ಏನು ಹೇಳಿ ಎಂದು ಪ್ರಶ್ನಿಸಿದ್ದಾರೆ. ಹಳೇ ಮೈಸೂರು ಭಾಗ, ಬೆಂಗಳೂರಿಗೆ ಇದೇ ಆಧಾರ. ಇದಕ್ಕಾಗಿ ಜನರು ಎನ್ಡಿಎಗೆ ಮತವನ್ನ ಹಾಕಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಬಜೆಟ್ ಹೃದಯಪೂರ್ವಕವಾಗಿ ಬೆಂಬಲಿಸುತ್ತೇನೆ. 1991ರಲ್ಲಿ ಸಂಸತ್ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ…
ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ. ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರ ಜಾರಿಯಾಗಲಿದೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ ಕನಿಷ್ಠ 5 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಲಿದೆ. ಸರ್ಕಾರ ಬಿಯರ್ ಮೇಲಿನ ತೆರಿಗೆಯನ್ನು ಕಳೆದ ಜುಲೈ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಪ್ರತಿ ಬಾಟಲ್ ಬಿಯರ್ ಬೆಲೆ ಕನಿಷ್ಠ 10 ರೂಪಾಯಿ ಜಾಸ್ತಿಯಾಗಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಕಚ್ಚಾ ಸಾಮಗ್ರಿ ದರ ಹೆಚ್ಚಳ ಕಾರಣ ನೀಡಿ ಪ್ರತಿ ಬಿಯರ್ ಬಾಟಲ್ ಮೇಲೆ ಕನಿಷ್ಠ 5 ರಿಂದ 20 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಿವೆ.…
ತಿಪಟೂರು: ನಗರದ ಶ್ರೀಬಿಎಂಸಿ ರೆಸಿಡೆನ್ಸಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಮಾವೇಶ ನಡೆಯಿತು. ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹರಿಸಮುದ್ರ ಗಂಗಾಧರ್, ಬಿಸ್ಲೆಹಳ್ಳಿ ಜಗದೀಶ್, ಗಂಗರಾಜು, ಪ್ರಸನ್ನ ಕುಮಾರ್, ರಾಮಮೋಹನ್, ಗುಲಾಬಿ, ಸುರೇಶ್, ಬಳ್ಳೇಕಟ್ಟೆ ಸುರೇಶ್, ಹಾಯ್ರಳ್ಳಿ ಶಂಕ್ರಪ್ಪ, ನಾಗರಾಜ್ ಹಾಲ್ಕುರ್ಕೆ, ಕ್ಯಾಪ್ಟನ್ ಲೋಕೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ನಾವು ಈ ಬಾರಿ ತುಮಕೂರು ಲೋಕಸಭಾ ಸಂಸತ್ ಸದಸ್ಯ ವಿ.ಸೋಮಣ್ಣನವರಿಗೆ ಅತ್ಯಧಿಕ ಮತಗಳಿಂದ ಜಯಗಳಿಸಿ ಕೊಟ್ಟಿದ್ದೇವೆ. ಸೋಮಣ್ಣನವರು ಯಾವುದೇ ಕಾರ್ಯಕ್ರಮಕ್ಕೆ ಹೋದರು ತಿಪಟೂರಿನ ಬಗ್ಗೆ ಅವರಿಗೆ ಅಪಾರ ಗೌರವ ಮತ್ತು ಹೆಮ್ಮೆ ಇದೆ. ಕಾರಣ ಇಷ್ಟೇ ತಿಪಟೂರಿನ ಕಾರ್ಯಕರ್ತರು ಯಾವುದೇ ಪ್ರತಿ ಫಲ ಮತ್ತು ಯಾವುದೇ ಆಸೆಗಳಿಲ್ಲದೆ ನನ್ನನ್ನು ಅಧಿಕ ಮತಗಳಿಂದ ಗೆಲ್ಲಿಸಿದ್ದಾರೆ ಎಂದು ಸೋಮಣ್ಣ ಇಂದಿಗೂ ತಿಪಟೂರಿನ ಮೇಲೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದಾರೆ ಎಂದರು. ತಿಪಟೂರಿನ ಪ್ರಧಾನ ಭಾಜಪ ಕಾರ್ಯಕರ್ತರು ಇಂದಿನಿಂದಲೇ ನಾವು ಪ್ರತಿ ಮನೆಯಲ್ಲಿ ಏಕೆ…
ಬಿಟ್ರೋಟ್ ಸೇವನೆ ಈ ನಾಲ್ಕು ರೋಗಗಳನ್ನು ಬೇರಿನಿಂದಲೇ ನಿರ್ನಾಮ ಮಾಡಲು ಸಹಕಾರಿಯಾಗಿದೆ. ಬಿಟ್ರೋಟ್ ನಲ್ಲಿ ಫೈಬರ್,ನೈಸರ್ಗಿಕ ಸಕ್ಕರೆ,ಮೆಗ್ನೀಸಿಯಮ್, ಸೋಡಿಯಂ ಕೂಡಾ ಅಧಿಕವಾಗಿದೆ. ಪೊಟ್ಯಾಸಿಯಮ್ ಕೂಡಾ ಇದರಲ್ಲಿ ಹೇರಳವಾಗಿ ಕಂಡುಬರುತ್ತದೆ. ಬೀಟ್ರೂಟ್ ಅನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರ ಪರಿಣಾಮ ಕೆಲವೇ ದಿನಗಳಲ್ಲಿ ಗೋಚರಿಸುತ್ತದೆ. * ಬೆಳಗ್ಗೆ ದಿನವೂ ಬೀಟ್ರೋಟ್ ಜ್ಯೂಸ್ ಸೇವನೆ ಮಾಡುವುದರಿಂದ ಮೂತ್ರಕ್ಕೆ ಸಂಬಂಧಿಸಿದ ರೋಗಗಳ ನಿರ್ನಾಮ ಮಾಡಲು ಸಾಧ್ಯವಿದೆ. ಮೂತ್ರದ ಸೋಂಕು, ಮೂತ್ರ ಮಾಡಲು ಅಸಮರ್ಥತೆ, ಮೂತ್ರದಲ್ಲಿ ಸುಡುವಂತಹ ಸಂವೇದನೆಗಳಿಂದ ಮುಕ್ತಿ ನೀಡಲು ಬಿಟ್ರೋಟ್ ಸಹಕಾರಿಯಾಗಿದೆ. * ನಮ್ಮ ದೇಹದಲ್ಲಿ ನೀರಿನಾಂಶ ಕಡಿಮೆಯಾಗಬಾರದು. ಹಾಗೇನಾದ್ರೂ ನೀರಿನಾಂಶದ ಕೊರೆತೆಯಾದರೆ. ಅನೇಕ ರೋಗಗಳನ್ನು ಎದುರಿಸಬೇಕಾಗುತ್ತದೆ. ಬಿಟ್ರೋಟ್ ದೇಹದಲ್ಲಿ ನೀರಿನಾಂಶದ ಕೊರತೆಯಾಗದಂತೆ ಕಾಪಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ಬಿಟ್ರೋಟ್ ಸೇವನೆಯಿಂದ ದೇಹದಲ್ಲಿ ನೀರಿನಾಂಶದ ಕೊರತೆ ಬಾರದಂತೆ ಕಾಪಾಡಿಕೊಳ್ಳಲು ಸಾಧ್ಯ * ಹೆಚ್ಚುತ್ತಿರುವ ತೂಕ, ಹೊಟ್ಟೆ ಮತ್ತು ಸೊಂಟದ ಕೊಬ್ಬಿನಿಂದ ತೊಂದರೆಗೊಳಗಾದವರು ಬಿಟ್ರೋಟ್ ಸೇವನೆ ಮಾಡಬಹುದು. ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಫೈಬರ್ ಅಂಶ ಇರುವುದರಿಂದ…