Subscribe to Updates
Get the latest creative news from FooBar about art, design and business.
- ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
- ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
- ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್ ಬುಕ್ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲು
- ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
Author: admin
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರು, ಮನೆ ಊಟಕ್ಕಾಗಿ ಕಾನೂನು ಸಮರ ಮುಂದುವರಿಸಿದ್ದಾರೆ. ಇತ್ತೀಚೆಗೆ ದರ್ಶನ್ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರಿಗೆ ಜೈಲಿನ ಊಟದಿಂದಾಗಿ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅತಿಸಾರ ಭೇದಿಯಾಗುತ್ತಿದೆ ಎಂದು ದೂರಿದ್ದರು. ತನಗೆ ಮನೆಯ ಊಟಕ್ಕೆ ಅವಕಾಶ ನೀಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ದರ್ಶನ್ ಕೋರ್ಟ್ ಮುಂದಿಟ್ಟಿದ್ದಾರೆ. ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರಿಗೆ ಮನೆ ಊಟ ಸಿಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಂದೇ ಭಾರತ್ ರೈಲಿನಲ್ಲಿ ಸಸ್ಯಾಹಾರದ ಬದಲು ಮಾಂಸಾಹಾರದ ಆಹಾರ ನೀಡಿದ ಹಿನ್ನಲೆಯಲ್ಲಿ ವೃದ್ಧ ಪ್ರಯಾಣಿಕರೊಬ್ಬರು ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಜುಲೈ 26ರಂದು ಈ ಘಟನೆ ನಡೆದಿದೆ. ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ–ಪ್ರಯಾಣಿಕ ಕುನಾಲ್ ವರ್ಮಾ ಅವರು ತಮ್ಮ ‘ಎಕ್ಸ್’ ಪುಟದಲ್ಲಿ ಹಂಚಿಕೊಂಡಿದ್ದು, ಘಟನೆಯನ್ನು ವಿವರಿಸಿದ್ದಾರೆ. ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ದರೊಬ್ಬರು ಸಸ್ಯಾಹಾರವನ್ನು ಆರ್ಡರ್ ಮಾಡಿದ್ದರು. ಆದರೆ ತಪ್ಪಿ ಮಾಂಸಾಹಾರವನ್ನು ನೀಡಲಾಯಿತು. ಪ್ರಯಾಣಿಕ ಆಹಾರ ಪ್ಯಾಕೆಟ್ ಅನ್ನು ತೆರೆದು ಒಂದು ಭಾಗದಷ್ಟು ಆಹಾರವನ್ನು ಸೇವಿಸಿದ ನಂತರ ಮಾಂಸಹಾರವೆಂದು ತಿಳಿದಿದ್ದು ನಂತರ ಕೋಪಗೊಂಡ ಪ್ರಯಾಣಿಕ ರೈಲಿನಲ್ಲಿ ಗಲಾಟೆ ಮಾಡಿ ರೈಲಿನ ಕ್ಯಾಟರಿಂಗ್ ವಿಭಾಗಕ್ಕೆ ಕರೆ ಮಾಡಲು ಒತ್ತಾಯಿಸಿದ್ದಾರೆ. ನಂತರ, ಸ್ವಲ್ಪ ಸಮಯದಲ್ಲಿ ಪೋಲೀಸ್ ಸಿಬ್ಬಂದಿಯೊಂದಿಗೆ ಅಡುಗೆ ವಿಭಾಗದ ಸಿಬ್ಬಂದಿಗಳು ಮತ್ತು ಊಟ ಬಡಿಸಿದ ಸಿಬ್ಬಂದಿ ಬಂದರು. ಸಿಬ್ಬಂದಿಯನ್ನು ನೋಡಿದ ಕೂಡಲೇ ವೃದ್ಧ ಪ್ರಯಾಣಿಕ…
ಹಾಸನ: ಸತತ ಮಳೆಯಿಂದ ಹಾಸನದ ಶಿರಾಡಿ ಘಾಟಿಯಲ್ಲಿ ರಸ್ತೆಯ ಮೇಲೆ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡಿದ್ದು.ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಭೂಕುಸಿತ ಸಂಭವಿಸಿದ ಹಿನ್ನಲೆಯಲ್ಲಿ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ರದ್ದುಗೊಳಿಸಲಾಗಿದೆ. ಭೂಕುಸಿತದಲ್ಲಿ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ವಾಹನಗಳಲ್ಲಿ ಇದ್ದವರನ್ನು ರಕ್ಷಿಸಲಾಗಿದೆ. ಇನ್ನು ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸಿಬ್ಬಂದಿಗಳು ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದು ಸ್ಥಳದಲ್ಲಿ ಮತ್ತಷ್ಟು ಮಣ್ಣು ಕುಸಿಯುವ ಆತಂಕ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತಿಪಟೂರು: ಧರ್ಮಸ್ಥಳ ಸಂಘದ ವತಿಯಿಂದ ಗ್ರಾಮಾಂತರ ತಾಲೂಕಿನ ಬಜಗೂರು -B ಕಾರ್ಯಕ್ಷೇತ್ರದಲ್ಲಿ ಒಕ್ಕೂಟ ಸಭೆ ಹಮ್ಮಿಕೊಳ್ಳಲಾಗಿತ್ತು. ಯೋಜನಾಧಿಕಾರಿಗಳು ಸರ್ವ ಸದಸ್ಯರ ಪ್ರಬುದ್ಧತೆ ನಮ್ಮ ಬದ್ಧತೆ ಎಂಬ ವಿಷಯವಾಗಿ, ಸಂಘದ ಗುಣಮಟ್ಟ, PRK, ವಾರದ ಸಭೆ, ಜನಮಂಗಳ, ಕಾರ್ಯಕ್ರಮ, ಪ್ರಗತಿ ನಿಧಿ, ದಾಖಲಾತಿ ನಿರ್ವಹಣೆ, ಸದಸ್ಯರ ಸೇರ್ಪಡೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಶ್ , ಒಕ್ಕೂಟ ಅಧ್ಯಕ್ಷರು ಮಂಜಣ್ಣ, ವಲಯ ಮೇಲ್ವಿಚಾರಕ ಮಧು, ವಿಚಕ್ಷಣೆ ಅಧಿಕಾರಿ ಶ್ರೀಕಾಂತ್, JVK ಸಮಾನ್ವಯಧಿಕಾರಿ ಭಾಗ್ಯಲಕ್ಷ್ಮೀ, ಸೇವಾಪ್ರತಿನಿಧಿ ಶ್ವೇತಾ ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಮನೆಯ ಬೀಗ ಮುರಿದು 6 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿರೋ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದೆ. ರಂಗನಾಥ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು ಅವರು ವಕೀಲ ವೃತ್ತಿ ಮಾಡುತ್ತಿದ್ದಾರೆ. ರಂಗನಾಥ್ ಕುಟುಂಬ ಊರಿಗೆ ತೆರಳಿದ್ದ ವೇಳೆ ಕಳ್ಳತನ ನಡೆದಿದೆ. ರಂಗನಾಥ್ ಮನೆಗೆ ವಾಪಸ್ ಬಂದಾಗ ಕಳ್ಳತನ ಕೃತ್ಯ ಪತ್ತೆಯಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಇತ್ತೀಚೆಗಷ್ಟೇ ದೇಶಕ್ಕೆ ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯ ರಾಮತೀರ್ಥನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರುವ ದಿನಗಳಲ್ಲಿ ಒಳ್ಳೆಯ ದಿನಗಳು ಸಹ ಇವೆ. ವಿಶೇಷವಾಗಿ ಕಪ್ಪು, ಬೆಳಕಿನಲ್ಲಿ ಕಪ್ಪು ಹೆಚ್ಚಾಗಿದೆ ಎಂದರು. ಒಗಟು ರೂಪದಲ್ಲಿ ಭವಿಷ್ಯ ನುಡಿದ ಶ್ರೀಗಳು, ರಾಷ್ಟ್ರ ರಾಜಕಾರಣದ ಬಗ್ಗೆ, ಮಹಾಭಾರತದಲ್ಲಿ ಕೃಷ್ಣ ಇದ್ದ ಎಂದು ಭೀಮ ಗೆದ್ದ. ದುರ್ಯೋಧನ ಸೋತ. ರಾಷ್ಟ್ರ ರಾಜಕಾರಣದಲ್ಲಿ ಕೃಷ್ಣ ಇಲ್ಲ. ದುರ್ಯೋಧನ ಗೆಲ್ಲುತ್ತಾನೆ. ಭೀಮ ಸೋಲುತ್ತಾನೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹಾಭಾರತದಲ್ಲಿ ಅಭಿಮನ್ಯುವನ್ನು ಮೋಸದಿಂದ ಕತ್ತರಿಸುತ್ತಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಸದ್ಯಕ್ಕೆ ತೊಂದರೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ಮತದಾರರು ಮತವನ್ನು ದಾನ ಮಾಡುತ್ತಿಲ್ಲ. ಮಾರಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ಈ ಹಿಂದೆ ತಾನು ರಾಜ್ಯದಲ್ಲಿ ಭೀಕರ ಮಳೆಯಾಗುತ್ತದೆ. ಗುಡ್ಡ ಕುಸಿತವಾಗುತ್ತದೆ. ಸಾವು, ನೋವು ಸಂಭವಿಸುತ್ತದೆ ಎಂದು ಹೇಳಿದ್ದೆ. ಅದು ಅಮವಾಸ್ಯೆಯವರೆಗೂ…
ಚಿಕ್ಕೋಡಿ: ಸೊಲ್ಹಾಪುರದ ಪಂಢರಪುರಕ್ಕೆ ತೀರ್ಥಯಾತ್ರೆಗೆ ತೆರಳಿದ್ದ ಕುಟುಂಬದ ಜೊತೆಗೆ ಅವರ ಮೆಚ್ಚಿನ ನಾಯಿ ಕೂಡ ತೆರಳಿತ್ತು. ಆದ್ರೆ ತೀರ್ಥಯಾತ್ರೆ ಮುಗಿಸಿ ಬರುವ ವೇಳೆ, ನಾಯಿ ನಾಪತ್ತೆಯಾಗಿತ್ತು. ಎಷ್ಟು ಹುಡುಕಿದರೂ ಸಿಗದ ಕಾರಣ ಮನೆಯವರು ವಾಪಸ್ ಬಂದಿದ್ದರು. ಆದರೆ ಇದೀಗ ಅಚ್ಚರಿಯ ಘಟನೆಯೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ‘ಮಹಾರಾಜ’ ಎಂಬ ನಾಯಿ ಮಹಾರಾಷ್ಟ್ರದ ಸೊಲ್ಹಾಪುರದ ಪಂಢರಪುರ ಕ್ಷೇತ್ರದಲ್ಲಿ ನಾಪತ್ತೆಯಾಗಿತ್ತು, ನಾಯಿಯನ್ನು ಹುಡುಕಿ ಸಿಗದಿದ್ದಾಗ ಕುಟುಂಬಸ್ಥರು ವಾಪಸ್ ಮನೆಗೆ ಬಂದಿದ್ದರು. ಕುಟುಂಬಸ್ಥರು ಮನೆಗೆ ಬಂದು ನಾಲ್ಕು ದಿನಗಳಾದಾಗ ನಾಯಿ ಮತ್ತೆ ಮನೆಯಲ್ಲೇ ಪ್ರತ್ಯಕ್ಷವಾಗಿ ಅಚ್ಚರಿ ಸೃಷ್ಟಿಸಿದೆ. ಮಹಾರಾಜ ನಾಯಿ 195 ಕಿ.ಮೀ. ದೂರದವರೆಗೆ ತನ್ನ ಮಾಲಿಕರನ್ನು ಹುಡುಕಿಕೊಂಡು ಬಂದು ಕೊನೆಗೂ ಮನೆ ಸೇರಿದೆ. ಸದ್ಯ ಸ್ವಾಮಿ ನಿಷ್ಠೆಗೆ ಹೆಸರಾಗಿರುವ ಮಹಾರಾಜನನ್ನು ಗ್ರಾಮಸ್ಥರು ಕೊಂಡಾಡಿದ್ದಾರೆ. ಮಹಾರಾಜ ವಾಪಸ್ ಬಂದ ಖುಷಿಯಲ್ಲಿ ಅವನಿಗೆ ಹಾರ ಹಾಕಿ ಗುಲಾಲ್ ಹಚ್ಚಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ನಾಯಿಯ ನಿಯತ್ತಿಗೆ ಗ್ರಾಮಸ್ಥರು ಮೆಚ್ಚುಗೆ…
ಬೆಂಗಳೂರು: ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು. ಆದರೆ, ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಅಂತ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು ಎಂದು ಹೇಳಿದರು. ಸಿದ್ದರಾಮಯ್ಯ, ದೇವೇಗೌಡರು, ಮಹದೇವಪ್ಪ, ಯಡಿಯೂರಪ್ಪ ನೆಲದಿಂದ ಬೆಳೆದು ಬಂದು ನಾಯಕರಾಗಿದ್ದಾರೆ. ಮುಂದಿನ ಪೀಳಿಗೆಗೆ ಅವರು ಏನು ಕೊಟ್ಟರು ಎಂದು ಪ್ರಶ್ನಿಸಿದ್ದಾರೆ. ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಖರ್ಗೆ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು? ! pic.twitter.com/tb1liXDd3b — Prathap Simha (@mepratap) July 29, 2024 ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಪಾವಗಡ: ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ಸೋಮವಾರ ಜೆಡಿಎಸ್ ಮತ್ತು ಬಿಜೆಪಿ ತಾಲ್ಲೂಕು ಘಟಕ ವತಿಯಿಂದ ಚಿತ್ರದುರ್ಗ ಸಂಸದ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ನೀರಾವರಿ ಯೋಜನೆಗಳ ಕಾಮಗಾರಿ ವೇಗವಾಗಿ ಹೆಚ್ಚಿಸುವಂತೆ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಕೂಲ ಮಾಡಿಕೊಡಲಾಗುವುದು ಎಂದರು. ಮಹಾದಾಯಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆಗಳ ಸಮಗ್ರ ವರದಿ ನೀಡಲಾಗಿದೆ. ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು. ತಿಂಗಳಿಗೊಮ್ಮೆ ತಾಲ್ಲೂಕಿಗೆ ಆಗಮಿಸಿ ಒಂದು ದಿನ ಪೂರ್ತಿ ಜನತೆಯಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ತಿಳಿಸಿದರು. ಪಾವಗಡ ತಾಲ್ಲೂಕಿಗೆ ನೀರಾವರಿ ಅತ್ಯವಶ್ಯಕತೆ ವೆಂದು ರೈತರಿಗೆ ಅನುಕೂಲವಾಗುವ ರೀತಿ ನೀರಾವರಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಮಾತನಾಡಿ, ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಈ ಭಾಗದಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಅನುಕೂಲವಾಗಲಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಮಾತನಾಡಿ, ಲೋಕಸಭಾ ಸದಸ್ಯ ಗೋವಿಂದ ಕಾರಜೋಳ…
ವಯನಾಡು: ದೇವರನಾಡು ಕೇರಳದಲ್ಲಿ ಪರ್ವತ ಕುಸಿದ ಪರಿಣಾಮ ಬರೋಬ್ಬರಿ 42 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕಂಡ ಕಂಡಲ್ಲಿ ಮೃತದೇಹಗಳು ಪತ್ತೆಯಾಗುತ್ತಿವೆ. ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲಾ ಜನ ವಸತಿ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಒಂದರ ಹಿಂದೊಂದರಂತೆ ಒಟ್ಟು ಮೂರು ಬಾರಿ ಗುಡ್ಡ ಕುಸಿದಿದೆ. ಇದರ ಪರಿಣಾಮ 200ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿದ್ದು, 150ಕ್ಕೂ ಹೆಚ್ಚು ಜನರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಮತ್ತು ಸ್ಥಳೀಯ ತಂಡಗಳು ಸೇರಿ ಸುಮಾರು 250 ಜನರು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶದಲ್ಲಿ ಮುಂಜಾನೆ ಭೂಕುಸಿತ ಸಂಭವಿಸಿದೆ. ಬೆಳಗ್ಗಿನ ಜಾವ 2–4 ಗಂಟೆಯ ನಡುವೆ ಭೂಕುಸಿತ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಪಿಣರಾಯಿಗೆ ಕರೆ ಮಾಡಿದ್ದಾರೆ. ಘಟನೆ ಬಗ್ಗೆ ಆಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…