Subscribe to Updates
Get the latest creative news from FooBar about art, design and business.
- ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
- ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
- ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್ ಬುಕ್ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲು
- ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
Author: admin
ಬೆಂಗಳೂರು: ರಾಜ್ಯಾದ್ಯಂತ ನಿರಂತರ ಗಾಳಿ ಮಳೆ, ಗುಡ್ಡ ಕುಸಿತ ಹಾಗೂ ಉಕ್ಕಿ ಹರಿಯುತ್ತಿರುವ ನದಿಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಇದರಿಂದಾಗಿ ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿವೆ. ಈ ಸಂಬಂಧ ಬೆಳೆ ಹಾನಿ ಅಧ್ಯಯನಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. 6 ತಂಡಗಳಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರ ತಂಡ ಬೆಳೆ ಹಾನಿ ಪರಿಶೀಲನೆ ನಡೆಸಲಿದೆ. ಬಿಜೆಪಿ ನಾಯಕರ ತಂಡ ರಾಜ್ಯಾದ್ಯಂತ ಸಂಚರಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದೆ. ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಆರಗ ಜ್ಞಾನೇಂದ್ರ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ನೇತೃತ್ವದ ತಂಡಗಳು ರಾಜ್ಯಾದ್ಯಂತ ಸಂಚರಿಸಲಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ತಂಡ ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ತಂಡ ಪ್ರವಾಸ ಕೈಗೊಳ್ಳಲಿದೆ. ಮಾಜಿ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎನ್. ಚಲುವರಾಯಸ್ವಾಮಿ, ಡಾ. ಹೆಚ್.ಸಿ. ಮಹದೇವಪ್ಪ, ಎನ್., ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೂಡುಬಿದಿರೆ: ಗ್ಯಾಸ್ ಗೀಸರ್ ಬಳಸುವ ಮುನ್ನ ಸಾರ್ವಜನಿಕರು ಎಚ್ಚರವಾಗಿರಬೇಕು. ಯಾಕಂದ್ರೆ ಸ್ವಲ್ಪ ಯಾಮಾರಿದ್ರೂ ದೊಡ್ಡ ಅವಘಡವೇ ಸಂಭವಿಸಬಹುದು. ಇಂತಹದ್ದೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ. ಇಲ್ಲಿನ ಕೋಟೆಬಾಗಿಲಿನ ಫ್ಯ್ಲಾಟ್ ನಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ವರದಿಗಳಿಂದ ತಿಳಿದು ಬಂದಿದೆ. ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದು, ಸಾಕಷ್ಟು ಹೊತ್ತಾದ್ರೂ ಮರಳಿ ಬಂದಿರಲಿಲ್ಲ. ಬಾತ್ ರೂಮ್ ಬಾಗಿಲು ಬಡಿದು ಕರೆದರೂ ಯಾವುದೇ ಪ್ರತಿಕ್ರಿಯೆ ಬಾರದೇ ಹೋದಾಗ ಬಾತ್ ರೂಮ್ ಬಾಗಿಲು ಮುರಿದು ನೋಡಿದಾಗಿ ಘಟನೆ ಬೆಳಕಿಗೆ ಬಂದಿದೆ. ಮೃತ ಶಾರಿಕ್ ದ್ವಿತೀಯ ಪಿಯು ಮುಗಿಸಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಮೈಸೂರು: ಮುಡಾ ವಿಚಾರದಲ್ಲಿ ನನಗೆ ಬೇಜಾರಿಲ್ಲ, ಯಾಕೆಂದರೆ ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಾಕಷ್ಟು ಹಗರಣ ಮಾಡಿದ್ದಾರೆ. ಬಿಜೆಪಿಯವರು ಒಂದೇ ಒಂದು ತನಿಖೆಯನ್ನು ನ್ಯಾಯಾಂಗಕ್ಕೆ ಕೊಟ್ಟಿಲ್ಲ ಎಂದಿರುವ ಅವರು, 40 ವರ್ಷದ ರಾಜಕಾರಣದಲ್ಲಿ ನಾನು ಯಾವುದೇ ಹಗರಣ ಮಾಡಿಲ್ಲ. ನನ್ನ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದರು. ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ, ಜು.23ರಂದು ಶಾಲೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪಘಾತ ಸಂಭವಿಸಿತ್ತು. ಲಾರಿ ಡಿಕ್ಕಿ ಹೊಡೆದ ನಂತರ ಚಂದನ ತೆಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದಳು. ನಂತರ ಚಂದನಳ ಅಂಗಾಂಗ ದಾನ ಮಾಡಲು ಒಪ್ಪಿದ ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದರು. ಚಂದನಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಲಾಗಿದ್ದು, 6 ಜೀವಗಳಿಗೆ ಚಂದನ ಬೆಳಕಾಗಿದ್ದಾಳೆ. ಇಂದು ಸಂಜೆ ಚಂದನಳ ಅಂತ್ಯಸಂಸ್ಕಾರ ನೆರವೇರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೀದರ್: ಹೃದಯಾಘಾತದಿಂದ ನಿಧನರಾದ ವೀರ ಯೋಧ ಅನಿಲ್ ಕುಮಾರ್ ಅವರ ಅಂತಿಮ ದರ್ಶನವನ್ನು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪಡೆದರು. ಸಿಕ್ಕಿಂ ಹಿಮಪಾತದಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾಗಿರುವ ಬೀದರ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ವೀರ ಯೋಧ ಅನಿಲ್ ಕುಮಾರ್ ನವಾಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೀರ ಯೋಧ ಅನಿಲ್ ಕುಮಾರ್ ಅವರ ಕುಟುಂಬ ಸದಸ್ಯರಿಗೆ ಧೈರ್ಯವನ್ನು ತುಂಬಿ ಸಾಂತ್ವನ ಹೇಳಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಹೆಚ್ಚಿನ ಮಾಂಸಾಹಾರಿಗಳು ಮೀನು ಸೇವಿಸಲು ಬಯಸುತ್ತಾರೆ ಕೂಡ ಅಂದ ಹಾಗೇ ಮೀನು ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳಿವೆ.ಮೀನು ತಿನ್ನುವುದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಮೀನಿನ ತಲೆ ನಿಮ್ಮ ದೇಹವು ಎಷ್ಟು ಪ್ರಯೋಜನ ಪಡೆಯುತ್ತದೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಮೀನಿನ ತಲೆಯನ್ನು ಮಕ್ಕಳು ಮತ್ತು ವೃದ್ಧರು ತಿನ್ನಬೇಕು. ಅಂದ ಹಾಗೇ ಮೀನಿನ ತಲೆಯಲ್ಲಿ ವಿಟಮಿನ್ ಎ ಸಮೃದ್ಧವಾಗಿರುವುದರಿಂದ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಮೀನಿನ ತಲೆಯನ್ನು ಸೇವಿಸುವುದರಿಂದ ಕಣ್ಣುಗಳಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಸಹ ತೆಗೆದುಹಾಕುತ್ತದೆ. ಆದ್ದರಿಂದ, ಮೀನಿನ ತಲೆಯನ್ನು ವಾರಕ್ಕೊಮ್ಮೆ ಸೇವಿಸಬೇಕು ಎನ್ನಲಾಗಿದೆ. ಮೀನಿನ ತಲೆಯನ್ನು ತಿನ್ನುವುದರಿಂದ ದೇಹಕ್ಕೆ ಮತ್ತು ನಿಮ್ಮ ಮೆದುಳಿಗೆ ಅನೇಕ ಪ್ರಯೋಜನಗಳಿವೆ. ನೀವು ಆಗಾಗ್ಗೆ ಮರೆಗುಳಿತನವನ್ನು ಹೊಂದಿದ್ದರೆ, ನೀವು ಮೀನಿನ ತಲೆಯನ್ನು ತಿನ್ನಬೇಕು ಏಕೆಂದರೆ ಮೀನಿನ ತಲೆಯಲ್ಲಿ ಒಮೆಗಾ 3 ಸಮೃದ್ಧವಾಗಿದೆ. ಇದು ನಿಮ್ಮ ಮನಸ್ಸನ್ನು ತೀಕ್ಷ್ಣಗೊಳಿಸುತ್ತದೆ ಮತ್ತು ಏನನ್ನಾದರೂ ನೆನಪಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕಿಡ್ನಿ ಕಲ್ಲುಗಳ ಸಮಸ್ಯೆಯನ್ನು…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್ಗಳಿಗೆ ಹೊಸ ನಿಯಮಗಳನ್ನ ಜಾರಿಗೊಳಿಸಿದೆ. ಬಿಬಿಎಂಪಿ ಹೊಸ ನಿಯಮ ಏನು? * 30 ಕೊಠಡಿಗಳಿಗಿಂತ ಮೇಲ್ಪಟ್ಟ ಹೋಟೆಲ್, ಬಾರ್ & ರೆಸ್ಟೋರೆಂಟ್, ಪಬ್ ಇದ್ರೆ 30 ಕುರ್ಚಿ ಇರುವ ಧೂಮಪಾನ ಪ್ರದೇಶ ನಿಗದಿ ಮಾಡಬೇಕು * ಧೂಮಪಾನ ವಲಯ ನಿರ್ಮಾಣ ಮಾಡಿ ಪೋಟೋ ಸಮೇತ ಸ್ಮೋಕಿಂಗ್ ಝೂನ್ ಗೆ ಪರವಾನಗಿಗೆ ಅರ್ಜಿ ಹಾಕಬೇಕು. * ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಯಮಾನುಸಾರ ಸ್ಮೋಕಿಂಗ್ ಝೂನ್ ಇದೆಯೇ ಅಂತ ರಿಪೋರ್ಟ್ ಕೊಟ್ಟರೆ, ಆಮೇಲೆ ಎನ್ಒಸಿ ವಿತರಣೆಗೆ ಸೂಚನೆ ನೀಡಲಾಗುತ್ತದೆ. * ಸ್ಮೋಕಿಂಗ್ ಏರಿಯಾ ಕೊಠಡಿಗೆ ಎಂಟ್ರಿ ಆದಾಗ ಸ್ವಯಂಚಾಲಿತವಾಗಿ ಬಾಗಿಲು ಬಂದ್ ಆಗುವ ರೀತಿಯಲ್ಲಿ ಇರಬೇಕು * ಸ್ಮೋಕಿಂಗ್ ಏರಿಯಾ ಅಂತ ನಾಮಫಲಕ ದೊಡ್ಡದಾಗಿ ಇರಬೇಕು. 60–30ರ ನಿಯಮದಲ್ಲಿ ಅಕ್ಷರಗಳು ಇರಬೇಕು * ಸ್ಮೋಕಿಂಗ್ ಝೂನ್ ಗಳಲ್ಲಿ ಏರ್ ಫ್ಲೋ ಸಿಸ್ಟಂ ಇರಬೇಕು. ಪಕ್ಕದ ಮನೆ ಅಥವಾ…
ಬಿಜೆಪಿ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲೆ ಕೇಂದ್ರ ಸಚಿವರಾದಂತಹ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವ ಆಯಿತು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ವಿಚಾರವಾಗಿ ಮಗ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಕೆಲಸದ ಒತ್ತಡದಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಆಗಿಲ್ಲ. ಆತಂಕಪಡುವ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ.ತಂದೆ–ತಾಯಿ ಆಶೀರ್ವಾದ ಕುಮಾರಣ್ಣ ಮೇಲೆ ಇದೆ. ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಡಾಕ್ಟರ್ ಕೂಡ ಹೇಳಿದ್ದಾರೆ ಆತಂಕ ಬೇಡ ಅಂತ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಏರುಪೇರು ಸಾಮಾನ್ಯ. ಆರೋಗ್ಯ ಲೆಕ್ಕಿಸದೆ ಸಂಸತ್ನಲ್ಲಿ ಮಾತಾಡಿದ್ದಾರೆ. ರಾತ್ರಿ ಪುಸ್ತಕಗಳನ್ನ ಓದುತ್ತಾರೆ. ರಾಜ್ಯದ ಜನರಿಗೆ ಏನಾದರೂ ಕೊಡಬೇಕು ಅಂತ ಕೆಲಸ ಮಾಡುತ್ತಿದ್ದಾರೆ. ಈಶ್ವರನ ನಂಬಿಕೊಂಡಿದ್ದೇವೆ, ಜನ, ರೈತರ ಆಶೀರ್ವಾದ ಇದೆ. ಇಂದು ರಾತ್ರಿಯೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು,…
ಎಚ್.ಡಿ.ಕೋಟೆ: ರಾಜ್ಯದಲ್ಲಿಯೇ ಬಹುಬೇಗ ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿ ಪಡೆದಿರುವ ಕಬಿನಿ ಜಲಾಶಯಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು ನಾಳೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಸೇರಿದಂತೆ ಸ್ವಾಗತ ಕಮಾನು ಗೇಟುಗಳು ಸೇರಿದಂತೆ ಕಟ್ಟಡಗಳಿಗೆ ಸುಣ್ಣಬಳಿಯುವ ಕಾರ್ಯ ಭರದಿಂದ ಸಾಗಿದೆ. 84 ಅಡಿ ಸಾಮರ್ಥ್ಯದ ಕಬಿನಿ ಜಲಾಶಯದ ಉಗಮ ಸ್ಥಾನ ಹಾಗೂ ಕೇರಳದ ವಯನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಈ ವರ್ಷ ಅಬ್ಬರದ ಮಳೆಯಾಗಿ ಜಲಾಶಯ ಬಹುಬೇಗ ಭರ್ತಿಯಾಗಿ ಪ್ರವಾಹದ ಭೀತಿ ಎದುರಾಗಿತ್ತು. ಈ ಹಿಂದೆ 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದ ಸಿದ್ದರಾಮಯ್ಯ ಜಲಾಶಯದ ಅಭಿವೃದ್ಧಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಎರಡನೇ ಬಾರಿ ಸಿಎಂ ಆದ ನಂತರ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕ್ಷೇತ್ರದ ಜನತೆಯಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಜಲಾಶಯದ ಮುಂಭಾಗ ಕೆಆರ್ ಎಸ್ ಮಾದರಿಯಲ್ಲಿ ಬೃಂದಾವನ ನಿರ್ಮಾಣ ಮಾಡುವುದು, ಈ ಭಾಗದ…