Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಸರಗೂರು: ತಾಲ್ಲೂಕಿನ ಪಟ್ಟಣದಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಒಂದೇ ಕಡೆಯಲ್ಲಿ ಮೂರು ವಾಸದ ಮನೆಯು ಕುಸಿದು ಬಿದ್ದಿದೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಮೂರನೇ ವಾರ್ಡಿನಲ್ಲಿ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ 10 ರಿಂದ ಸಂಜೆಯವರೆಗೂ ನಿರಂತರವಾಗಿ ಜಿಟಿ ಜಿಟಿ ಮಳೆ ಸುರಿಯುತ್ತಿತ್ತು. ಹೊರಗೆ ಯಾರೂ ಬಾರದಂತೆ ಮನೆಯಲ್ಲಿಯೇ ಜನರನ್ನು ದಿಗ್ಬಂಧನ ಮಾಡಿದಂತಿತ್ತು. ಸತತವಾಗಿ ಮೂರು ದಿನಗಳಿಂದ ಮಳೆಗೆ ಬುಧವಾರ ದಂದು ರಾತ್ರಿ ವೇಳೆಯಲ್ಲಿ ಮಲಗಿದ್ದ ಸಮಯದಲ್ಲಿ ನಡೆದು ಮೂರನೇ ವಾರ್ಡಿನ ಪುಟ್ಟಸಿದ್ದಮ್ಮ, ಚಿಕ್ಕತಾಯಮ್ಮ, ಹೆಜ್ಜೂರಮ್ಮ, ದೇವಮಣಿ ಎಂಬುವವರ ಮನೆ ಏಕಾಏಕಿ ಕುಸಿದು ಬಿದ್ದಿದೆ. ಸದ್ಯ ಮನೆ ಕಳೆದುಕೊಂಡು, ಜೀವನೋಪಾಯಕ್ಕೆ ಇದ್ದ ಮನೆಯನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ನೊಂದ ಕುಟುಂಬವು ಒತ್ತಾಯ ಮಾಡಿದೆ. ಮನೆ ಬಳಕೆ ವಸ್ತುಗಳಾದ ಟಿವಿ, ಬಟ್ಟೆ ಬರೆ ಇತ್ಯಾದಿ ವಸ್ತುಗಳನ್ನೂ ತೆಗೆದುಕೊಂಡು ಉಳಿಸಿಕೊಂಡು ಹೋಗಲು ಕೂಡ ಮನೆಯವರಿಂದ ಸಾಧ್ಯವಾಗಿಲ್ಲ, ಈ ಮನೆಯ ಮಾಲಕರು ಮನೆಯ ಜತೆಗೆ ವಸ್ತುಗಳನ್ನೂ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.…
ಕೆಲ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಇದೇ ರೀತಿಯ ವಸ್ತ್ರವನ್ನು ಧರಿಸಬೇಕು ಎಂದು ನಿಯಮ ಜಾರಿಗೆ ತರಲಾಗಿದೆ. ಅದೇ ರೀತಿ ಇದೀಗ ಶಾರದಾ ಪೀಠ ಶೃಂಗೇರಿಯಲ್ಲಿ ಶಾರದ ದೇವಿಯ ದರ್ಶನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರಲು ಶಾರದಾ ಪೀಠ ಶೃಂಗೇರಿಯ ಆಡಳಿತ ಅಧಿಕಾರಿಗಳು ತಿಳಿಸಿದ್ದು, ಮನವಿ ಮಾಡಿದ್ದಾರೆ. ಈ ಮೂಲಕ ಶೃಂಗೇರಿಯ ಭಕ್ತಾಧಿಗಳು ಇನ್ನು ಮುಂದೆ ದೇವರ ದರ್ಶನಕ್ಕೆ ಹೋಗುವಾಗ ಈ ಕೆಳಕಂಡ ಭಾರತೀಯ ಸಂಪ್ರದಾಯದಂತೆ ವಸ್ತ್ರವನ್ನು ಧರಿಸಿಯೇ ಹೊಗಬೇಕು.ಇದೀಗ ಶೃಂಗೇರಿಯ ಸುಪ್ರಸಿದ್ಧ ಶಾರದಾ ದೇವಿ ದರ್ಶನಕ್ಕೆ ಬರುವ ಭಕ್ತಾದಿಗಳು ಇದೇ ರೀತಿಯ ವಸ್ತ್ರ ಸಂಹಿತೆಯಲ್ಲಿ ಬರಬೇಕು. ಈ ಕುರಿತು ಶಾರದಾ ಪೀಠ ಶೃಂಗೇರಿಯ ಆಡಳಿತ ಅಧಿಕಾರಿಗಳು ಮಾಹಿತಿ ನೀಡದ್ದು, ಆಗಷ್ಟ್ 15ರಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳು ಇದೇ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊಂಡು ಬರಬೇಕು ಎಂದು ತಿಳಿಸಿದೆ. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯ ಧರಿಸಿಕೊಂಡು ಬರಬೇಕು. ಅದೇ ರೀತಿ ಮಹಿಳೆಯರು ಸೀರೆ ರವಿಕೆ, ಸಲ್ವಾರ್…
ಔರಾದ: ಜಿಟಿ ಜಿಟಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದ ಘಟನೆ ನಡೆದಿದ್ದು, ಮನೆ ಕುಸಿದು ಸಂಕಷ್ಟದಲ್ಲಿರುವ ಮಹಿಳೆ ಇದೀಗ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಬೀದರ ಜಿಲ್ಲೆಯ ಔರಾದ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಹಾರಾಜವಾಡಿ ಗ್ರಾಮದ ಸಲಿಂ ಸಾಬ ಹಾಗೂ ಅಜಮುಸಾಬ ಎಂಬವರ ಮನೆ ಕುಸಿದು ಬಿದ್ದಿದ್ದು, ಜಿಟಿ ಜಿಟಿ ಮಳೆಯಿಂದಾಗಿ ಗೋಡೆಯ ಕಲ್ಲುಗಳು ಕುಸಿದು ಬಿದ್ದಿದ್ದು, ಜಿಲ್ಲಾಡಳಿತ ನಮಗೆ ಪರಿಹಾರ ಒದಗಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಗೊಲನ ಎಂಟರ್ ಪ್ರೈಸಸ್ ವತಿಯಿಂದ ತುಮಕೂರಿನ ಹೆಸರಾಂತ ಕಂಪೆನಿಗಳಲ್ಲಿ ನಿರುದ್ಯೋಗಿ ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳಿವೆ. ಅಗತ್ಯವಿರುವ ವಿದ್ಯಾರ್ಹತೆ: * ಎಸ್.ಎಸ್.ಎಲ್.ಸಿ * ಪಿ.ಯು.ಸಿ * ಐ.ಟಿ.ಐ * ಬಿ.ಎಸ್ಸಿ ಪಾಸ್ ಅಥವಾ ಪೇಲ್ ಉದ್ಯೋಗಾಸಕ್ತರು ತಕ್ಷಣವೇ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ESI ಮತ್ತು PF ಸೌಲಭ್ಯ ಇರಲಿದೆ. ಸಂಪರ್ಕಿಸುವುದು ಹೇಗೆ?: ದೂರವಾಣಿ ಸಂಖ್ಯೆ 97431 03968 ಗೆ ಕರೆ ಮಾಡಿ ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಂಡು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಬಿದ್ದಿದ್ದ ಕುರಿಗಳನ್ನು ರಕ್ಷಿಸಲು ಹೋಗಿ , ಅದರೊಳಗೆ ಬಿದ್ದಿದ್ದ ವ್ಯಕ್ತಿಯನ್ನು ಎನ್ ಸಿಸಿ ಬೆಟಾಲಿಯನ್ ಕ್ಯಾಂಪ್ ಟೀಂ ನ ಸದಸ್ಯರು ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈತುಂಬ ಡಾಂಬರ್ ಮೆತ್ತಿಕೊಂಡು ಸಾವುಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ವ್ಯಕ್ತಿಯ ಜೀವ ರಕ್ಷಿಸಲಾಗಿರುವ ಘಟನೆ ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ನಡೆದಿದೆ. ಮಂದಾರಗಿರಿ ಬೆಟ್ಟದ ಬಳಿ ಕುರಿ ಮೇಯಿಸಲು ತೆರಳಿದ್ದ ಕುರಿಗಾಯಿ ಈ ವೇಳೆ ರಸ್ತೆಗೆ ಹಾಕುವ ಡಾಂಬರ್ ಸುರಿದಿದ್ದ ಗುಂಡಿಗೆ ಬಿದ್ದಿರುವ ಸುಮಾರು ಏಳೆಂಟು ಕುರಿಗಳು ಬಿದ್ದಿವೆ. ಕುರಿಗಳನ್ನ ರಕ್ಷಿಸುವ ಭರದಲ್ಲಿ ಆಯತಪ್ಪಿ ಡಾಂಬರ್ ಗುಂಡಿಗೆ ಬಿದ್ದಿದ್ದಾನೆ. ಸುಮಾರು ಎರಡು ಗಂಟೆಗಳ ಕಾಲ ಡಾಂಬರ್ ಗುಂಡಿಯಲ್ಲೇ ಬಿದ್ದಿದ್ದ ಕುರಿಗಾಯಿಯನ್ನು ಅದೇ ಸಮಯಕ್ಕೆ ಎನ್ ಸಿಸಿ ಕ್ಯಾಂಪ್ ಗೆ ತೆರಳಿದ್ದ ಟೀಂ, ಫೈರಿಂಗ್ ತರಬೇತಿ ಪಡೆಯುವ ವೇಳೆ ಆತನನ್ನ ಗಮನಿಸಿದೆ. ಕೂಡಲೇ ಆತನನ್ನ ಗುಂಡಿಯಿಂದ ಮೇಲಕ್ಕೆ ಎತ್ತಿ ರಕ್ಷಣೆ ಮಾಡಲಾಗಿದೆ. ತುಮಕೂರಿನ ನಾಲ್ಕನೇ…
ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಬಹಿರಂಗಪಡಿಸಿದ್ದಾರೆ. ಮೊನ್ನೆ ನಡೆದ ರಾಮನಗರದ ಕರಗ ಮಹೋತ್ಸವದಲ್ಲಿ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಕೆಶಿ, ನನ್ನ ಭೇಟಿಗೆ ದರ್ಶನ್ ಪತ್ನಿ ಸಮಯ ಕೇಳಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ನಾನಿಂದು ದರ್ಶನ್ ಪತ್ನಿಯನ್ನು ಭೇಟಿಯಾಗಿ ಮಾತನಾಡುವೆ. ಏನಾದರೂ ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ. ಆದರೆ, ಪ್ರತಿಯೊಬ್ಬರು ಕೂಡ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದ್ದರು. ಈ ವೇಳೆ ಅವರ ಭಾಷಣದ ಮಧ್ಯೆ ದರ್ಶನ್ ಅಭಿಮಾನಿಗಳು ಡಿಬಾಸ್ ಎಂದು ಘೋಷಣೆಗಳನ್ನು ಕೂಗಿದ್ದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಥಿತರಾಗಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು…
ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಆಧಾರದ ಮೇಲೆ ಕಿನ್ನೌರ್ ನಿವಾಸಿಯೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಮಂಡಿಯ ಬಿಜೆಪಿ ಲೋಕಸಭಾ ಸದಸ್ಯೆ ಕಂಗನಾ ರನೌತ್ ಅವರಿಗೆ ನೋಟಿಸ್ ನೀಡಿದೆ. ನೋಟಿಸ್ ಜಾರಿಗೊಳಿಸಿದ ನ್ಯಾಯಮೂರ್ತಿ ಜೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರವನ್ನು ಸಲ್ಲಿಸುವಂತೆ ರಣಾವತ್ ಅವರಿಗೆ ನಿರ್ದೇಶನ ನೀಡಿದರು. ರಣಾವತ್ ಮಂಡಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದ್ದರು. ಅವರು 5,37,002 ಮತಗಳನ್ನು ಪಡೆದರೆ, ಸಿಂಗ್ 4,62,267 ಮತಗಳನ್ನು ಪಡೆದಿದ್ದರು. ಕಂಗನಾ ರನೌತ್ ಅವರ ಆಯ್ಕೆಯನ್ನು ಬದಿಗಿಡುವಂತೆ ಮನವಿ ಮಾಡಿದ ಅರ್ಜಿದಾರರಾದ ಲಯಕ್ ರಾಮ್ ನೇಗಿ, ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ (ಮಂಡಿ ಜಿಲ್ಲಾಧಿಕಾರಿ) ತಪ್ಪಾಗಿ ತಿರಸ್ಕರಿಸಿದ್ದಾರೆ ಮತ್ತು ಅವರನ್ನು ಪಕ್ಷಗಾರರನ್ನಾಗಿ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಅರಣ್ಯ ಇಲಾಖೆಯ ಮಾಜಿ ಉದ್ಯೋಗಿಯಾಗಿರುವ ನೇಗಿ ಅವರು ಅಕಾಲಿಕ ನಿವೃತ್ತಿ ಪಡೆದಿದ್ದಾರೆ ಮತ್ತು ನಾಮಪತ್ರದೊಂದಿಗೆ…
ಉಪಗ್ರಹ ಆಧಾರಿತ ನ್ಯಾವಿಗೇಷನ್ ವ್ಯವಸ್ಥೆಯ ಸಹಾಯದಿಂದ ಟೋಲ್ ತೆರಿಗೆ ಸಂಗ್ರಹಕ್ಕಾಗಿ ನಡೆಸಿದ ಪ್ರಾಯೋಗಿಕ ಅಧ್ಯಯನವನ್ನು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿನ ಮುಂದೆ ಮಂಡಿಸಿತು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಬೆಂಗಳೂರು–ಮೈಸೂರು ವಿಭಾಗ ಎನ್ಎಚ್ –275 ಮತ್ತು ಪಾಣಿಪತ್–ಹಿಸಾರ್ ವಿಭಾಗ ಎನ್ ಎಚ್ –709 (ಹಳೆಯ ಎನ್ ಎಚ್ –71 ಎ) ನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಈ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ (ಇಟಿಸಿ) ವ್ಯವಸ್ಥೆಯನ್ನು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಆಯ್ದ ವಿಭಾಗಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಮೇಲ್ಮನೆಗೆ ಮಾಹಿತಿ ನೀಡಿದರು. ಜಿಎನ್ಎಸ್ಎಸ್ ಎಂಬುದು ಜಿಪಿಎಸ್ ಮತ್ತು ಗ್ಲೋನಾಸ್ನಂತಹ ಉಪಗ್ರಹ ಆಧಾರಿತ ನ್ಯಾವಿಗೇಷನ್ ವ್ಯವಸ್ಥೆಗಳಿಗೆ ಒಟ್ಟಿಗೆ ಬಳಸುವ ಪದವಾಗಿದೆ. ಜಿಎನ್ಎಸ್ಎಸ್ ಆಧಾರಿತ ಇಟಿಸಿ ವ್ಯವಸ್ಥೆಯನ್ನು ಫಾಸ್ಟ್ಟ್ಯಾಗ್…
ಪಂಜಾಬ್ ನ ಪಠಾಣ್ ಕೋಠ್ ನ ಫಂಗ್ಟೋಲಿ ಗ್ರಾಮದಲ್ಲಿ ಏಳು ಶಂಕಿತ ಭಯೋತ್ಪಾದಕರು ಮತ್ತು ಅವರ ಹೆಜ್ಜೆ ಗುರುತುಗಳು ಕಾಣಿಸಿಕೊಂಡ ನಂತರ ಪಂಜಾಬ್ ನ ಭದ್ರತಾ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಈ ಆತಂಕಕಾರಿ ಬೆಳವಣಿಗೆಯು ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರಿಂದ ತಕ್ಷಣದ ಮತ್ತು ಸಮಗ್ರ ಪ್ರತಿಕ್ರಿಯೆಯನ್ನು ಪ್ರೇರೇಪಿಸಿದೆ, ಅವರು ಈ ಪ್ರದೇಶವನ್ನು ಸುರಕ್ಷಿತವಾಗಿಡಲು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದ ಮೇಲೆ, ಅಧಿಕಾರಿಗಳು ಶಂಕಿತರಲ್ಲಿ ಒಬ್ಬರ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ ಮತ್ತು ಅಂತಹ ವ್ಯಕ್ತಿಯ ಯಾವುದೇ ವೀಕ್ಷಣೆಗಳನ್ನು ವರದಿ ಮಾಡುವಂತೆ ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ. ಫಾಂಗ್ಟೋಲಿಯಲ್ಲಿ ವಾತಾವರಣವು ಉದ್ವಿಗ್ನವಾಗಿದೆ, ಭಯ ಮತ್ತು ಅನಿಶ್ಚಿತತೆ ಸಮುದಾಯವನ್ನು ಆವರಿಸಿದೆ. ಗ್ರಾಮವನ್ನು ಸುತ್ತುವರೆದಿದ್ದು, ಭದ್ರತಾ ಪಡೆಗಳು ಹೆಚ್ಚಿನ ಮಟ್ಟದ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತಿವೆ. ಸಿಬ್ಬಂದಿಯ ಗಮನಾರ್ಹ ನಿಯೋಜನೆ ಪ್ರಸ್ತುತ ಶಂಕಿತರಿಗಾಗಿ ವ್ಯಾಪಕ ಶೋಧ ನಡೆಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ ಬಿಜೆಪಿಯವರ ಪಾತ್ರವೂ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದವರು ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲ ಪಕ್ಷದವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಎಲ್ಲರ ಬಣ್ಣ ಬಯಲಾಗಬೇಕು. ಪಾದಯಾತ್ರೆ ಎಲ್ಲ ನಾಟಕ ಎಂದು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದ ಯತ್ನಾಳ್ ಎಂದು ಹೇಳಿದ್ದಾರೆ. ಇನ್ನೂ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ. ಮೂಡ ಹಗರಣದ ಚರ್ಚೆಗೆ ಇಂದು ಕೂಡ ಮನವಿ ಮಾಡುತ್ತೇವೆ ಈ ಒಂದು ಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದಾರೆ ಅಧಿವೇಶನದಲ್ಲಿ ಚರ್ಚೆಯಾದರೆ ಸತ್ಯ ಸತ್ಯತೆ ಹೊರಬರಲಿದೆ. ಈ ಹಿಂದೆ ಅರ್ಕಾವತಿ ಹಗರಣ ಆಗಿದ್ದಾಗ ಸಿಎಂ ಸಿದ್ದರಾಮಯ್ಯ ಧರಣಿ ಮಾಡಿದ್ದರು. ಹಾಗಾಗಿ ನಾವು ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ನಮ್ಮತುಮಕೂರಿನ…