Subscribe to Updates
Get the latest creative news from FooBar about art, design and business.
- ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
- ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
Author: admin
ಸೋಷಿಯಲ್ ಮೀಡಿಯಾದಲ್ಲಿ ನಮ್ರತಾ ಹಾಗೂ ಕಿಶನ್ ಬೆಳಗಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಅದರಲ್ಲೂ ಇಬ್ಬರ ಡ್ಯಾನ್ಸ್ ವಿಡಿಯೋಗೇ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇಬ್ಬರು ಕೂಡ ಒಳ್ಳೆಯ ಡ್ಯಾನ್ಸರ್ಸ್. ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿ ಮೋಡಿ ಮಾಡಿದ ವಿಡಿಯೋಗಳು ಹರಿದಾಡುತ್ತಿವೆ. ನಮ್ರತಾ ಹಾಗೂ ಕಿಶನ್ ಪರಿಚಯವಾಗಿದ್ದು ‘ತಕಧಿಮಿತ’ ಡ್ಯಾನ್ಸ್ ಶೋ ಮೂಲಕ. ಆ ಸಮಯದಲ್ಲಿ ನಮ್ರತಾ ಅವರ ಡ್ಯಾನ್ಸ್ ಪಾಟ್ನರ್ ಕಾಲಿನ ಸಮಸ್ಯೆ ಆಗಿ ಅರ್ಧಕ್ಕೆ ಬಿಟ್ಟಿದ್ದರು. ಆಗ ನಮ್ರತಾಗೆ ಪಾಟ್ನರ್ ಆಗಿದ್ದು ಇದೇ ಕಿಶನ್. ಡ್ಯಾನ್ಸ್ ಮುಗಿದ ಮೇಲೆ ನಮ್ರತಾರ ತಾಯಿ ಕಿಶನ್ ಕ್ಲೋಸ್ ಆಗಿದ್ದು. ಹಬ್ಬ ಹರಿದಿನಗಳಿಗೆ ಕರೆಯುತ್ತಿದ್ದರು. ಬಳಿಕ ಮನೆಯವರೆಲ್ಲ ಕ್ಲೋಸ್ ಆಗಿದ್ದು ಅಂತ ಕಿಶನ್ ಹೇಳಿಕೊಂಡಿದ್ದಾರೆ. ಫ್ರೆಂಡ್ಸ್ ಅಂತ ಬಂದಾಗ ನೆಕ್ ನೇಮ್ ಇರುವುದು ಕಾಮನ್. ಕಿಶನ್ ಅವರು ನಮ್ರತಾರನ್ನ ಏನಂತ ಕರೆಯುತ್ತಾರೆ ಹಾಗೇ ನಮ್ರತಾ, ಕಿಶನ್ ಅವರನ್ನ ಏನಂತ ಕರೆಯುತ್ತಾರೆ ಎಂಬ ಕುತೂಹಲದ ಪ್ರಶ್ನೆಗೂ ಉತ್ತರಿಸಿದ್ದಾರೆ. ‘ನಮ್ರತಾಳನ್ನ ಗುಂಡಕ್ಕ ಅಂತ ಕರೆಯುತ್ತೀನಿ. ಆದ್ರೆ ನಂಬರ್ ಸೇವ್ ಮಾಡಿಕೊಂಡಿರುವುದು…
ಮುಂಗಾರು ಮಳೆ’ಯಿಂದ ಇಲ್ಲಿವರೆಗೂ ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆಯುತ್ತಲೇ ಇದ್ದಾರೆ. ಒಂದೊಂದು ಹಾಡು ಕೂಡ ಸಿನಿಮಾ ಪ್ರೇಮಿಗಳನ್ನು ಸೆಳೆಯುತ್ತಲೇ ಇದೆ. ಆದರೆ, ಜಯಂತ್ ಕಾಯ್ಕಿಣಿ ಸಿನಿಮಾಗಾಗಿ ಒಂದು ಪ್ರೇಮ ಕವಿತೆಯನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದರಂತೆ ! ‘ಗಾಳಿಪಟ’ ಸಿನಿಮಾದ ಮಿಂಚಾಗಿ ನೀನು ಬರಲು ಹಾಡನ್ನು ಬರೆಯಲು 20 ದಿನ ಯಾಕೆ ತೆಗೆದುಕೊಂಡರು ಅನ್ನೋದನ್ನು ಹೇಳಿಕೊಂಡಿದ್ದಾರೆ.’ಮುಂಗಾರು ಮಳೆ’ ಬಳಿಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ‘ಗಾಳಿಪಟ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದರು. ಯೋಗರಾಜ್ ಭಟ್ ಈ ಸಿನಿಮಾದಲ್ಲಿಯೂ ಜಯಂತ್ ಕಾಯ್ಕಿಣಿ ಅವರಿಂದ ಜನಪ್ರಿಯ ಹಾಡನ್ನು ಬರೆಸುವ ನಿರ್ಧಾರ ಮಾಡಿದ್ದರು. ಅದುವೇ “ಮಿಂಚಾಗಿ ನೀನು ಬರಲು..” ಅನ್ನೋ ಜನಪ್ರಿಯ ಹಾಡು. ಜಯಂತ್ ಕಾಯ್ಕಿಣಿ ಈ ಹಾಡನ್ನು ಬರೆಯುವುದಕ್ಕೆ ಸಿಕ್ಕಾಪಟ್ಟೆ ಪರದಾಡಿದ್ದಂತೆ. ಇದೊಂದು ಹಾಡು ಬರೆಯುವುದಕ್ಕೆ ಬರೋಬ್ಬರಿ 20 ದಿನಗಳನ್ನು ತೆಗೆದುಕೊಂಡಿದ್ದಾಗಿ ಸ್ವತ: ಜಯಂತ್ ಕಾಯ್ಕಿಣಿ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಒಂದು ಹಾಡನ್ನು…
‘ನ್ಯಾಷನಲ್ ಕ್ರಶ್’ ಎಂದೇ ಖ್ಯಾತರಾಗಿರುವ ನಟಿ ರಶ್ಮಿಕಾ ವಿಶ್ವದಾದ್ಯಂತ ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿದ್ದಾರೆ. ರಶ್ಮಿಕಾ ತಮಿಳು, ತೆಲುಗು, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ಪ್ರಸಿದ್ಧ ನಟರೊಂದಿಗೆ ಜೋಡಿಯಾಗಿದ್ದಾರೆ. ಮತ್ತು ಅವರ ವೃತ್ತಿಜೀವನವು ಪ್ರಸ್ತುತ ಉತ್ತುಂಗದಲ್ಲಿದೆ. ಸಾಲು ಸಾಲಾಗಿ ಆಫರ್ ಗಳು ಬರುತ್ತಲೇ ಇವೆ. ಮದನ್ ಮಂದಣ್ಣ–ಸುಮನ್ ಮಂದಣ್ಣ ಅವರ ಹಿರಿಯ ಮಗಳು ನಟಿ ರಶ್ಮಿಕಾಗೆ ಒಬ್ಬ ತಂಗಿ ಕೂಡ ಇದ್ದಾರೆ. ಅವರ ಫೊಟೋವನ್ನು ನಟಿ ಆಗಾಗ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುತ್ತಿರುತ್ತಾರೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣಗೆ ಪುಟ್ಟ ತಂಗಿ ಇರುವ ವಿಚಾರ ಅವರ ಅಭಿಮಾನಿಗಳಿಗೆ ತಿಳಿದಿದೆ. ರಶ್ಮಿಕಾ ಕೂಡ ಅಪರೂಪಕ್ಕೊಮ್ಮೆ ತಂಗಿ ಜೊತೆಗಿನ ಫೋಟೋವನ್ನು ಶೇರ್ ಮಾಡ್ತಾರೆ. ಇಂದು ರಕ್ಷಾ ಬಂಧನವಾದ ಹಿನ್ನೆಲೆ ರಶ್ಮಿಕಾ ಮಂದಣ್ಣ ತಂಗಿಗಾಗಿ ಲವ್ಲಿ ಮೆಸೇಜ್ ಕಳಿಸಿದ್ದರು. ಸೋಮವಾರ ಭಾರತದಾದ್ಯಂತ ರಕ್ಷಾ ಬಂಧನವನ್ನು ಆಚರಿಸಿದಾಗ, ನಟಿ ರಶ್ಮಿಕಾ ತನ್ನ ತಂಗಿಯ ಮೇಲಿನ ಅಪಾರ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ನಟಿ…
ತುಮಕೂರು: ಇಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು (JD) ಇರ್ಕಸಂದ್ರ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲ್ಲಿ ನೆಲೆಸಿರುವ ಕುಟುಂಬಗಳ ಸಂಕಷ್ಟಗಳನ್ನು ಪರಿಶೀಲಿಸಿದರು. ಈ ಭೇಟಿ ಸಂದರ್ಭದಲ್ಲಿ, ಕಾಲೋನಿಯ ನಿವಾಸಿಗಳ ಬೇಡಿಕೆಗಳನ್ನು ತಕ್ಷಣ ಪರಿಹರಿಸುವ ಉದ್ದೇಶದಿಂದ, ಪ್ಲಾಸ್ಟಿಕ್ ಶೀಟುಗಳು ಮತ್ತು ಟಾರ್ಪೆಲ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದಿಂದಾಗಿ, ಕಾಲೋನಿಯ ನಿವಾಸಿಗಳಿಗೆ ತಾತ್ಕಾಲಿಕ ಆಶ್ರಯದ ವ್ಯವಸ್ಥೆ ಸಾಧ್ಯವಾಗಿದ್ದು, ಇದು ಅವರಿಗೆ ತಾತ್ಕಾಲಿಕ ಸಾಂತ್ವನ ನೀಡಲು ಸಹಾಯಕವಾಗಿದೆ. ಇಂತಹ ತ್ವರಿತ ಕಾರ್ಯಾಚರಣೆಗೆ ಕಾಲೋನಿಯವರು ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಈ ಆದರ್ಶ ಸೇವೆ ಅನೇಕರ ಜೀವಕ್ಕೆ ಸಹಾಯವಾಗಿದ್ದು, ಈ ಕಾರ್ಯಕ್ಕೆ ಪ್ರಾಶಂಸೆಗಳು ವ್ಯಕ್ತವಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವ ಹಾಗೂ ರೈತರಲ್ಲಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಈ ವರ್ಷದಿಂದ ಕೃಷಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ನಗದು ರೂಪದಲ್ಲಿ ನೀಡಲಾಗುವುದು. ಆಸಕ್ತ ರೈತರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31ರೊಳಗಾಗಿ ತಮ್ಮ ಸಮೀಪದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಮಾಹಿತಿಗಾಗಿ ಸಂಬAಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್…
ತುಮಕೂರು: ಮಳೆಗಾಲದಲ್ಲಿ ಡೆಂಗ್ಯೂ, ಕಾಲರಾ, ಮಲೇರಿಯಾ, ಚಿಕನ್ ಗುನ್ಯಾದಂತಹ ಇತರೆ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳನ್ನು ನಗರ ಪ್ರದೇಶದಿಂದ ಹೊರಸಾಗಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಹಂದಿ ಸಾಕಾಣಿಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಬೀಡಾಡಿ ಹಂದಿಗಳು ಸಾರ್ವಜನಿಕವಾಗಿ ರಸ್ತೆ, ಖಾಲಿ ನಿವೇಶನ ಸೇರಿ ಎಲ್ಲೆಂದರಲ್ಲಿ ಓಡಾಡುತ್ತಿರುವುದರಿಂದ ನಗರದ ಅನೈರ್ಮಲ್ಯಗಳಿಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ 3 ದಿನಗಳ ಒಳಗಾಗಿ ಮಾಲೀಕರು / ಸಾಕಾಣಿಕೆದಾರರು ಬೀಡಾಡಿಯಾಗಿ ಓಡಾಡಿಕೊಂಡಿರುವ ತಮ್ಮ ಹಂದಿಗಳನ್ನು ಹಿಡಿದು ನಗರದ ಹೊರ ಪ್ರದೇಶಕ್ಕೆ ಸಾಗಿಸಬೇಕು. ಇಲ್ಲವಾದಲ್ಲಿ ಕುರಿ/ಕೋಳಿ ಸಾಕಾಣಿಕೆದಾರರು ನಿರ್ಮಿಸಿಕೊಂಡಿರುವ ಮಾದರಿಯಲ್ಲಿ ನಗರದ ಹೊರಗಡೆ ಫಾರ್ಮ್ ಹೌಸ್ ನಿರ್ಮಿಸಿಕೊಂಡು ಹಂದಿಗಳನ್ನು ಸಾಕಾಣಿಕೆ ಮಾಡತಕ್ಕದ್ದು. ನಿಯಮ ಮೀರಿ ಹಂದಿಗಳು ರಸ್ತೆಗೆ ಬಂದಲ್ಲಿ ಪಾಲಿಕೆ ವತಿಯಿಂದ ಸೂಕ್ತ ಕ್ರಮವಹಿಸಲಾಗುವುದು. ಇದರಿಂದಾಗುವ ಯಾವುದೇ ರೀತಿಯ ಕಷ್ಟ-ನಷ್ಟಗಳಿಗೆ ತುಮಕೂರು ಮಹಾನಗರಪಾಲಿಕೆಯು ಜವಾಬ್ದಾರಿಯಾಗಿರುವುದಿಲ್ಲವೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಕನ್ನಡ ಸಾಹಿತ್ಯದಲ್ಲಿ ಬಸವಾದಿ ಶರಣ ಶರಣೆಯರು ಸ್ವತಂತ್ರ ಧೀರರು ಅಲ್ಲದೆ ಸ್ವತಂತ್ರ ವಿಚಾರವಾದಿಗಳಾಗಿದ್ದರು” ಎಂದು ಆಧುನಿಕ ವಚನಕಾರರಾದ ರುದ್ರಮೂರ್ತಿ ಎಲೆರಾಂಪುರರವರು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಬಸವೇಶ್ವರ ವಿದ್ಯಾರ್ಥಿನಿಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರು ಜಿಲ್ಲಾ ಮತ್ತು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಸಹಕಾರದಲ್ಲಿ ಲಿಂ.ಸಿದ್ಧವೀರಮ್ಮ ನಂಜಣ್ಣ ಬಸವರಾಜಪ್ಪ ದತ್ತಿಯಲ್ಲಿ “ಶರಣರು ಸ್ವತಂತ್ರ ಧೀರರು” ಎಂಬ ವಿಷಯವಾಗಿ ಮಾತನಾಡುತ್ತಿದ್ದರು. ಶರಣರು ಎಂದಿಗೂ ಪರರ ಆಶ್ರಯದಲ್ಲಿ ಬೇಡಿ ಬದುಕಿದವರಲ್ಲ. ರಾಜರನ್ನ ಹೊಗಳಿ ಸಾಹಿತ್ಯ ರಚಿಸಲಿಲ್ಲ, ಸ್ವತಂತ್ರವಾಗಿ ಕಾಯಕ ನಂಬಿ ಬದುಕಿದ ವಿಚಾರವಂತರು ಎಂದರು. ಜೇಡರದಾಸಿಮಯ್ಯ ಅಲ್ಲದೆ ಅನೇಕ ಶರಣ ಶರಣೆಯರ ಹಲವು ವಚನಗಳ ದೃಷ್ಟಾಂತ ನೀಡಿ ವಿವರಿಸಿ, ತಮ್ಮ ಸ್ವರಚಿತ ವಚನಗಳನ್ನು ಹಾಡಿ ರಂಜಿಸಿದರು. ದತ್ತಿದಾನಿಗಳಾದ ಜಿ.ಎನ್.ಬಸವರಾಜಪ್ಪನವರು ಉದ್ಘಾಟಿಸಿ ಮಾತನಾಡುತ್ತಾ, ತಾವು ಬಾಲ್ಯದಲ್ಲಿ ಶಿಕ್ಷಣದಿಂದ ವಂಚಿತರಾದಾಗ ತಮ್ಮ ತಂದೆ ತಾಯಿಯವರ ಪೂರ್ಣ ಜವಾಬ್ದಾರಿಯಿಂದ ವಿದ್ಯಾವಂತರಾಗಿ ಇಂದು ಈ ಮಟ್ಟದಲ್ಲಿ ಬೆಳೆಯಲು ವಿದ್ಯೆಯೇ ಸರ್ವಸ್ವ ಎಂದರು. ಸಿದ್ಧಾರ್ಥ ಸಂಸ್ಥೆಯ ಡಿ.ಎಂ.ಗಂಗಾಧರಯ್ಯನವರ ಸಲಹೆ ಸಹಕಾರ ಸ್ಮರಿಸಿದರು.…
ತುಮಕೂರು: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೇಳಾಪಟ್ಟಿಯನ್ವಯ ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪರಿಶೀಲನಾ ವೇಳೆಯಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಮರಣ ಹೊಂದಿದ/ 18 ವರ್ಷ ತುಂಬಿದ / ಸ್ಥಳಾಂತರಗೊಂಡ ಮತದಾರರ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಇದ್ದಲ್ಲಿ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆಯಲಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ–ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ನಮೂದಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ 6; ಅನಿವಾಸಿ ಭಾರತೀಯರ ಹೆಸರು ಸೇರ್ಪಡೆಗೆ ನಮೂನೆ 6ಎ; ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ…
ತುಮಕೂರು: ದಲಿತರಾಮಯ್ಯ ಎಂದು ಹೇಳಿಕೊಂಡು ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಸಿದ್ದರಾಮಯ್ಯ ಅವರು ಬೇರೆ ಯೋಜನೆಗಳಿಗೆ ಉಪಯೋಗಿಸಿದ್ದಾರೆ. ಅವರ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರ ನಡೆ ಸರಿಯಾಗಿದ್ದು, ಕೂಡಲೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಭಾಸ್ಕರ್ ಪ್ರಸಾದ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಸಿದ್ದರಾಮಯ್ಯ ಕುಟುಂಬದ ವೈಯಕ್ತಿಕ ಹಗರಣ, ಆದರೆ ಅದಕ್ಕಿಂತಲೂ ಹೆಚ್ಚಿನ ಹಗರಣಗಳು ದಲಿತರ ಹೆಸರಿನಲ್ಲಿ ನಡೆದಿವೆ. ಹಾಗಾಗಿ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಆ. 28 ರಂದು ಬೆಂಗಳೂರಿನಲ್ಲಿ ‘ಕಾಂಗ್ರೆಸ್ ಹಠಾವೋ ದಲಿತ ಬಚಾವೋ’ ಎಂಬ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪರಿಶಿಷ್ಟರ ರಕ್ಷಣೆ, ನಮ್ಮ ಹಕ್ಕು ಕೇಳಲು ಪ್ರತಿಭಟನೆ ನಡೆಯಲಿದೆ. ನಮ್ಮ ಪಾಲಿನ ಹಣದಿಂದ ಬೇರೆಯವರ ಹೊಟ್ಟೆ ತುಂಬುತ್ತಿದೆ. ಪ್ರತಿ ವರ್ಷ ಸಾವಿರಾರು ಕೋಟಿ ಮೀಸಲಿಟ್ಟರೂ ಸಮುದಾಯಗಳ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು. ಅಹಿಂದ ಸಂಘಟನೆಗಳ ಒಕ್ಕೂಟದ ಮತ್ತೊಬ್ಬ ಸಂಚಾಲಕ ಪ್ರೊ.ಹರಿರಾಮ್…
ತುಮಕೂರು: ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕಪಟ್ಟಿಯಲ್ಲಿತುಮಕೂರು ವಿವಿಯು ಮೊದಲ 100 ಸ್ಥಾನಗಳಲ್ಲಿ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಸಂತಸ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯವು ನಿಟ್ಟೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಂಶೋಧನೆಯನ್ನು ತಂತ್ರಜ್ಞಾನವಾಗಿ ಪರಿವರ್ತಿಸುವ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಸಂಶೋಧನೆ, ಪ್ರಾಯೋಗಿಕ ಬೋಧನೆ, ಸಂಶೋಧನೆ ಆಧಾರಿತ ಶಿಕ್ಷಣದಿಂದ ವಿಶ್ವವಿದ್ಯಾನಿಲಯಗಳ ಬೆಳವಣಿಗೆ ವೃದ್ಧಿಯಾಗಲಿದೆ ಎಂದರು. ಕಳೆದ ಒಂದು ವರ್ಷದಲ್ಲಿಸಂಶೋಧನಧನ ಸಹಾಯ ಸಂಸ್ಥೆಗಳಿಗೆ 80 ಸಂಶೋಧನ ಪ್ರಸ್ತಾವನೆಗಳನ್ನು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಸಲ್ಲಿಸಿದ್ದರು. ಅದರಲ್ಲಿ, 22 ಸಂಶೋಧನ ಪ್ರಸ್ತಾವನೆಗಳಿಗೆ ಅನುಮೋದನೆದೊರೆತಿದ್ದು, 1.5 ಕೋಟಿಯಷ್ಟುಧನ ಸಹಾಯದ ಮಾನ್ಯತೆದೊರೆತಿರುವುದು ವಿವಿಯ ಸಂಶೋಧನ ಗುಣಮಟ್ಟಕ್ಕೆ ನಿದರ್ಶನವಾಗಿದೆ ಎಂದರು. ನಿಟ್ಟೆ ವಿಶ್ವವಿದ್ಯಾನಿಲಯದಸಲಹೆಗಾರಡಾ.ಇಡ್ಯಾಕರುಣಾಸಾಗರ ಮಾತನಾಡಿ, ವಿಭಿನ್ನ ಸಂಶೋಧನ ಕಲ್ಪನೆಯಿಂದ ವಾಣಿಜ್ಯಿಕ ತಂತ್ರಜ್ಞಾನಗಳತ್ತ ಸಾಗಲು ಅನುವು ಮಾಡಿಕೊಡುವುದು ತಂತ್ರಜ್ಞಾನ ಕಾರ್ಯಗತಗೊಳಿಸುವ ಕೇಂದ್ರದ ಧ್ಯೇಯವಾಗಿದೆ. ಸಂಶೋಧನೆಯ ಫಲಿತಾಂಶಗಳು ಸಮಾಜಕ್ಕೆ ತಲುಪಿ, ಅನುಕೂಲವಾಗುವಂತೆ ತಂತ್ರಜ್ಞಾನವಾಗಿ ಪರಿವರ್ತನೆಯಾಗಬೇಕು ಎಂದು ತಿಳಿಸಿದರು. ಸಂಶೋಧನೆಯ ಗರಿಷ್ಠ ಸದುಪಯೋಗಕ್ಕಾಗಿ ವಿಶ್ವವಿದ್ಯಾನಿಲಯದ ವಿವಿಧ ನಿಕಾಯಗಳು ಹಾಗೂ ವಿಭಾಗಗಳು…