Author: admin

ತುಮಕೂರು: ಯಾವುದೇ ಸಭೆ ಸಮಾರಂಭಗಳಲ್ಲಿ ಮೇಲ್ವರ್ಗದವರು, ಕೆಳವರ್ಗದವರು ಎಂಬ ಪದ ಬಳಕೆ ಮಾಡಬಾರದು. ಬದಲಾಗಿ ಮುಂದುವರಿದವರು ಮತ್ತು ಹಿಂದುಳಿದವರು ಎಂಬ ಪದ ಬಳಕೆ ಮಾಡಿ ಎಂದು ಮಾಜಿ ಸಚಿವರು, ಶಾಸಕರಾದ ಕೆ.ಎನ್.ರಾಜಣ್ಣ ಸಲಹೆ ನೀಡಿದರು. ಇಲ್ಲಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಚರಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಕಾರ್ಯಕ್ರಮಗಳಲ್ಲಿ ಮೇಲು–ಕೀಳು ಎಂಬ ಪದ ಬಳಕೆ ಮಾಡಲಾಗುತ್ತದೆ. ಇದನ್ನು ಬದಲಾಯಿಸಿಕೊಳ್ಳುವುದು ಒಳಿತು. ಏಕೆಂದರೆ, ಯಾರೂ ಕೀಳಲ್ಲ. ಮೇಲು–ಕೀಳು ಎಂಬ ಪದ ಬಳಕೆಯೇ ಸರಿ ಇಲ್ಲ. ಇದರ ಬದಲಿಗೆ ಹಿಂದುಳಿದವರು ಎಂಬ ಪದ ಬಳಕೆ ಮಾಡುವುದು ಸೂಕ್ತ ಎಂದರು. ಹಿಂದುಳಿದ ವರ್ಗಗಳಲ್ಲಿಯೂ ಸಾಕಷ್ಟು ಬುದ್ಧಿವಂತಿದ್ದಾರೆ. ಅವರನ್ನು ನಾವುಗಳು ಗುರುತಿಸಬೇಕು. ಇಂತಹ ಸಮಾರಂಭಗಳಲ್ಲಿ ಅವರ ಸಾಧನೆಯನ್ನು ಗೌರವಿಸಿದಾಗ ಮತ್ತಷ್ಟು ಕೆಲಸ ಮಾಡಲು ಶಕ್ತಿ ನೀಡಿದಂತಾಗುತ್ತದೆ. ಈ ಕಾರಣಕ್ಕಾಗಿ ಅಭಿನಂದನಾ ಸಮಾರಂಭಗಳು ಮುಖ್ಯವಾಗುತ್ತವೆ ಎಂದರು. ದಲಿತ ಸಂಘಟನೆಗಳ…

Read More

ಬಳ್ಳಾರಿ:  ​ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ: ​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ: ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.  ​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ​ಜಿಲ್ಲಾಡಳಿತದ ಕ್ರಮಗಳು : ​ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.  ​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ. ​ಸಹಾಯವಾಣಿ ಸಂಖ್ಯೆಗಳಿಗೆ ​ಬಳ್ಳಾರಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು: ​ಬಳ್ಳಾರಿ…

Read More

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ ಮಾತಿನಂತೆ ಇವುಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂದು ಹೇಳಿಕೆ ನೀಡಿದ್ದಕ್ಕೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ವಾಗ್ದಾನದ ಪಾಲನೆ: “ಚುನಾವಣೆಗೂ ಮುನ್ನ ಜನರಿಗೆ ನಂಬಿಕೆ ನೀಡಿ ಈ ಯೋಜನೆಗಳನ್ನು ಘೋಷಿಸಲಾಗಿದೆ. ಹೊರೆಯಾಗುತ್ತದೆ ಎಂದಾದಲ್ಲಿ ಘೋಷಣೆ ಮಾಡುವ ಮುನ್ನವೇ ಯೋಚಿಸಬೇಕಿತ್ತು. ಈಗ ಮಾತು ಕೊಟ್ಟ ಮೇಲೆ ಐದು ವರ್ಷಗಳ ಕಾಲ ಎಂತಹ ಕಷ್ಟ ಬಂದರೂ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸರ್ಕಾರದ ಕರ್ತವ್ಯ” ಎಂದು ಸುರೇಶ್ ತಿಳಿಸಿದರು. ಗ್ಯಾರಂಟಿ ಯೋಜನೆಗಳು ಮುಖ್ಯವಾಗಿ ಬಡವರು ಮತ್ತು ಅಸಹಾಯಕರ ಬದುಕು ಕಟ್ಟಿಕೊಳ್ಳಲು ಇರುವುದಾಗಿದೆ. ಸಿರಿವಂತರು ಈ ಯೋಜನೆಗಳ ಲಾಭ ಪಡೆಯುತ್ತಿದ್ದರೆ ಅದು ತಪ್ಪು. ಸ್ವಯಂಪ್ರೇರಿತವಾಗಿ ಅವರು ಇವುಗಳನ್ನು ಬಿಟ್ಟುಕೊಡುವುದು ಸೂಕ್ತ…

Read More

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ (86) ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ವರದಿ ಮಾಡಿದೆ. ಮಾರ್ಚ್ 1, 2026ರ ಭಾನುವಾರ ಬೆಳಿಗ್ಗೆ ಇರಾನ್ ಮಾಧ್ಯಮಗಳು ಈ ಸುದ್ದಿಯನ್ನು ದೃಢಪಡಿಸಿವೆ. ಟೆಹ್ರಾನ್‌ನಲ್ಲಿರುವ ಖಮೇನಿ ಅವರ ನಿವಾಸದ ಮೇಲೆ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದರು. “ಇತಿಹಾಸದ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬನ ಅಂತ್ಯವಾಗಿದೆ. ಇರಾನ್ ಜನರು ತಮ್ಮ ದೇಶವನ್ನು ಮರಳಿ ಪಡೆಯಲು ಇದು ಸುವರ್ಣ ಅವಕಾಶ” ಎಂದು ಟ್ರಂಪ್ ಬಣ್ಣಿಸಿದ್ದಾರೆ. ವರದಿಗಳ ಪ್ರಕಾರ, ಈ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗ ಕೂಡ ಸಾವನ್ನಪ್ಪಿದ್ದಾರೆ. ಇರಾನ್ ಸರ್ಕಾರವು ದೇಶದಲ್ಲಿ 40 ದಿನಗಳ ಶೋಕಾಚರಣೆ ಮತ್ತು 7 ದಿನಗಳ ಸಾರ್ವಜನಿಕ ರಜೆಯನ್ನು ಘೋಷಿಸಿದೆ. ಖಮೇನಿ ಹತ್ಯೆಯ…

Read More

ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದರು. ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ತೂಕದಲ್ಲಿ ವ್ಯತ್ಯಾಸ, ರೈತರಿಗೆ ಮೂಲ ಸೌಕರ್ಯ ಸೇರಿದಂತೆ ಅಲ್ಲಿನ ವ್ಯವಸ್ಥೆ ಬಗ್ಗೆ ದೂರು ಬಂದ ಹಿನ್ನೆಲೆ ಅಕ್ಕಿರಾಂಪುರದಲ್ಲಿ ಇತ್ತೀಚಿಗೆ ತಾಲ್ಲೂಕಿನ ರೈತರಿಗೆ ಅನುಕೂಲವಾಗಲಿ ಎಂದು ಕಳೆದ ವರ್ಷದಿಂದ ಅಕ್ಕಿರಾಂಪುರ ಎಪಿಎಂಸಿ ಆವರಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಆದೇಶದಂತೆ ರಾಗಿ ಖರೀದಿ ಕೇಂದ್ರ ತೆರೆಯಲಾಯಿತು. ದೂರದ ತಾಲ್ಲೂಕಿಗೆ ಹೋಗಿ ರೈತರು ತೊಂದರೆ ಅನುಭವಿಸುತ್ತಿದ್ದರು. ಆದರೆ, ಇದೇ ತಾಲೂಕಿನಲ್ಲಿ ರೈತರು ತಾವು ಬೆಳೆದ ರಾಗಿಯನ್ನು ಇಲ್ಲಿಯೇ ಮಾರಾಟ ಮಾಡಿದರೆ ಖರ್ಚು ಹಾಗೂ ಸಮಯ ಉಳಿಯುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಈಗಾಗಲೇ ರಾಜ್ಯ ಸರಕಾರ ರೈತರಿಗೆ 4,886 ರೂ. ನಿಗದಿ ಮಾಡಿದ್ದು, ಅದರಂತೆ ರೈತರಿಂದ ರಾಗಿ ಖರೀದಿಮಾಡಲಾಗುತ್ತಿದೆ. ರಾಗಿ ಖರೀದಿ ಕೇಂದ್ರದಲ್ಲಿ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದಾರೆ ಎಂದು ರೈತರಿಂದ ದೂರು ಬಂದ…

Read More

ಕೊರಟಗೆರೆ : ಕರ್ನಾಟಕದಲ್ಲಿ ನಮ್ಮ ಸಂಘಟನೆಯು ಸಮುದಾಯದ ಸಮಸ್ಯೆಗಳಿಗೆ ಹೋರಾಟದ ಮೂಲಕ ನ್ಯಾಯ ದೊರಕಿಸಿ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ, ಆಹಾರ ಮತ್ತು ನಾಗರಿಕ ಖಾತೆ ಸಚಿವ ಮತ್ತು ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಹೆಚ್‌ಮುನಿಯಪ್ಪನವರ ಮಾರ್ಗದರ್ಶನದಲ್ಲಿ ಸಂಘಟನೆ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿದೆ ಎಂದು ಕರ್ನಾಟಕ ಮಾದರ ಮಹಾಸಭಾ (ರಿ) ನೂತನ ತಾ.ಅಧ್ಯಕ್ಷ ಸಿದ್ದೇಶ್ ಟಿ.ಸಿ (ವಿಭೂತಿ ಸಿದ್ದಪ್ಪ) ತಿಳಿಸಿದರು. ಕರ್ನಾಟಕ ಮಾದರ ಮಹಾಸಭಾ ತಾ.ಘಟಕ ಕೊರಟಗೆರೆ ಇವರ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಂಘಟನೆ ೨೦೧೫ ರಿಂದಲೂ ಸಕ್ರಿಯವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದೆ. ರಾಜ್ಯಾಧ್ಯಕ್ಷರ ಸೂಚನೆಯಂತೆ ತಾ.ಘಟಕದ ನೂತನ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದು ತೋವಿನಕೆರೆಯ ವಿಭೂತಿ ಸಿದ್ದಪ್ಪ ಹೇಳಿದರು. ಸಮುದಾಯ ಅಭಿವೃದ್ಧಿ ನಿಟ್ಟಿನಲ್ಲಿ ಸುಮಾರು ಎರಡು ಸಾವಿರ ಸದಸ್ಯರನ್ನು ನೋಂದಣಿ  ಮಾಡಿಕೊಳ್ಳುವಂತೆ ಜಿಲ್ಲಾ ಕಮಿಟಿ ಮತ್ತು ರಾಜ್ಯ ಕಮಿಟಿ ಸೂಚಿಸಿದೆ. ತಾ.ಘಟಕ ಜವಬ್ದಾರಿ ಹೊತ್ತು ಸದಸ್ಯರ ಜೊತೆಗೂಡಿ ಹೋಬಳಿವಾರು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಸದಸ್ಯರ ಸೇರ್ಪಡೆ ಕಾರ್ಯಾಗಾರ…

Read More

ಧಾರವಾಡ: ಜಿಲ್ಲೆಯ ಎಲ್ಲ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಅವರಿಗೆ ಅಗತ್ಯವಿರುವ ಉಪಕರಣ ಹಾಗೂ ಸೌಲಭ್ಯಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ವಿಶೇಷ ಚೇತನರನ್ನು ಸಂರಕ್ಷಿಸುತ್ತಿರುವ ಕುಟುಂಬಗಳಿಗೂ ಸರ್ಕಾರದ ನಿಯಮಾನುಸಾರ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಅವರು ಇಂದು (ಫೆ. 27) ಬೆಳಿಗ್ಗೆ ಶಿಕ್ಷಕೀಯರ ಸರ್ಕಾರಿ ತರಬೇತಿ ಕಾಲೇಜು (ಟಿಸಿಡಬ್ಲ್ಯೂ) ಸಭಾಂಗಣದಲ್ಲಿ ಜಿಲ್ಲಾ ಅಂಗವೀಕಲರ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಂತೋಷ ಲಾಡ್ ಪೌಂಡೇಶನ್ ಮತ್ತು ಜನಮುಖಿ ಸೇವಾ ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶೇಷ ಚೇತನರು ಹಾಗೂ ಅವರ ಕುಟುಂಬದವರೊಂದಿಗೆ ಸಂವಾದ ಮತ್ತು ಸಂತೋಷ ಲಾಡ್ ಪೌಂಡೇಶನ್ ನೀಡಿರುವ ವಿಕಲಚೇತನರ ಸಾಧನಗಳನ್ನು ವಿತರಿಸಿ ಮಾತನಾಡಿದರು. ವಿಕಲಚೇತನರನ್ನು ವಿಶೇಷ ಕಾಳಜಿ ಮತ್ತು ಹೆಮ್ಮೆಯಿಂದ ಸಂರಕ್ಷಿಸಬೇಕು. ಅವರ ಬಗ್ಗೆ ಬರೀ ಕರುಣೆ ತೊರದೆ, ನ್ಯಾಯಯುತವಾಗಿ ಅವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಇಲಾಖೆಗಳು, ಅಧಿಕಾರಿಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಕ್ರಮವಹಿಸಬೇಕೆಂದು ಅವರು ಹೇಳಿದರು. ಸಂತೋಷ ಲಾಡ್…

Read More

ಶಿವಮೊಗ್ಗ :  ಸತತ ಪ್ರಯತ್ನದಿಂದ ಫಲ ಲಭಿಸಲಿದೆ. ಯುವಕರು ಉದ್ಯೋಗ ಪಡೆಯುವಲ್ಲಿ ಹಾಗೂ ಸ್ವಯಂ ಉದ್ಯೋಗ ಆರಂಭಿಸುವಲ್ಲಿ ತಮ್ಮ ಪ್ರಯತ್ನ ನಿರಂತರವಾಗಿರಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯುವಕರು ತಮ್ಮ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಸದಾ ಗಮನಹರಿಸುವಂತೆ ಹಾಗೂ ದೇಶದ ಅಭ್ಯುದಯಕ್ಕಾಗಿ ಚಿಂತಿಸುವ ಸ್ವಭಾವವನ್ನು ಬೆಳೆಸಿಕೊಳ್ಳಲು, ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಂತೆ ಅವರು ಸಲಹೆ ನೀಡಿದರು. ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ಸದಸ್ಯ ಡಿ.ಎಸ್.ಅರುಣ್ ಅವರು ಮಾತನಾಡಿ, ಕೃತಕ ಬುದ್ದಿಮತ್ಯೆ ಇಂದಿನ ಯುವಕರ ಉದ್ಯೋಗದ ಸಾಧ್ಯತೆಗಳನ್ನು ಕಿತ್ತುಕೊಳ್ಳುವ ಆತಂಕವಿದೆ.…

Read More

ಬಳ್ಳಾರಿ: ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬಂಧಿಸಿದಂತೆ ಹಂತ– ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರದೊಂದಿಗೆ ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ– ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯ ಅಭಿಮತ ಬೇಕಿದೆ ಎಂದರು. ನಗರದಲ್ಲಿ ಟ್ರಾಫಿಕ್ ಕುರಿತಂತೆ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಅತ್ಯಂತ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಸಮಸ್ಯೆಗಳನ್ನು ಅರಿತು ಹಂತ– ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸೂಕ್ತ ಕ್ರಿಯಾಯೋಜನೆ…

Read More

ಬಳ್ಳಾರಿ:  ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು. ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭ–3, ವಾಣಿಜ್ಯ ಸೌರಭ–3, ವಿಜ್ಞಾನ ಸೌರಭ–3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಔದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು. ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ.…

Read More