Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಮಲೆನಾಡಿನಲ್ಲಿ ವರ್ಷಧಾರೆ ಮುಂದುವರಿದಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಶಿವಮೊಗ್ಗದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜೋಗ ಜಲಪಾತ ವೀಕ್ಷಣೆಗೆಂದು ಆಗಮಿಸಿದ್ದ ಬೆಂಗಳೂರಿನಿಂದ ಯುವಕನೋರ್ವ ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಮೂಲತಃ ಗದಗದ ಸದ್ಯ ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಆನಂದ್ (24) ಎಂಬಾತ ನಾಪತ್ತೆಯಾಗಿದ್ದಾನೆ. ಈತ ಜೋಗ ಜಲಪಾತ ವೀಕ್ಷಣೆಗೆ ಜುಲೈ 15ರಂದು ಆಗಮಿಸಿದ್ದ . ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿಗೆ ತೆರಳಿದ್ದಾನೆ ಬಳಿಕ ಆನಂದ್ ನಾಪತ್ತೆಯಾಗಿದ್ದು, ಕಳೆದ 7 ದಿನಗಳಿಂದ ಆತಗಾಗಿ ಕಾರ್ಗಲ್ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ಮೈಕ್ರೊಸಾಫ್ಟ್ ಟೆಕ್ಕಿಯೊಬ್ಬರು ತಮ್ಮ ಒಂಟಿತನ ನೀಗಿಕೊಳ್ಳಲು ವಾರಾಂತ್ಯದಲ್ಲಿ ಆಟೋ ಚಲಾಯಿಸುತ್ತಿದ್ದು, ತಂತ್ರಜ್ಞಾನ ಬೆಳೆದಷ್ಟೂ, ಮಾನಸಿಕ ಖಿನ್ನತೆ, ಒಂಟಿತನದ ಪ್ರಕರಣಗಳೂ ಏರಿಕೆಯಾಗುತ್ತಿರುವುದು ಶೋಚನೀಯ. ಜನರನ್ನು ಹತ್ತಿರ ಮಾಡಬೇಕಿದ್ದ ಸಂಪರ್ಕ ಸಾಧನಗಳೇ ಜನರನ್ನು ದೂರ ಮಾಡುತ್ತಿವೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವೆಂಕಟೇಶ್ ಗುಪ್ತ ಎಂಬ ಟೆಕ್ಕಿಯೊಬ್ಬರು, “ವಾರಾಂತ್ಯದಲ್ಲಿ ತಮ್ಮ ಒಂಟಿತನವನ್ನು ನೀಗಿಕೊಳ್ಳಲು ಕೋರಮಂಗಲದ ಮೈಕ್ರೊಸಾಫ್ಟ್ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿರುವ 35 ವರ್ಷದ ಸಾಫ್ಟ್ವೇರ್ ಸಿಬ್ಬಂದಿಯೊಬ್ಬರು ಆಟೋ ಚಲಾಯಿಸುತ್ತಿರುವುದನ್ನು ಕಂಡೆ” ಎಂದು ಬರೆದುಕೊಂಡಿದ್ದಾರೆ. ಹಲವರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ವಿದೇಶಗಳಲ್ಲಿ ವಾರಾಂತ್ಯದ ದಿನಗಳಲ್ಲಿ ವೃತ್ತಿಪರರು ಊಬರ್ ವಾಹನಗಳನ್ನು ಚಲಾಯಿಸುವುದು ಸಾಮಾನ್ಯ ಸಂಗತಿಯಾಗಿದೆ. ಇದು ಹಣದ ಗಳಿಕೆಯನ್ನು ಮೀರಿದ್ದು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪ್ರಧಾನಿ ಮೋದಿ 3 ನೇ ಅವಧಿಗೆ ಪ್ರಧಾನಿ ಆಗುವ ಮೂಲಕ NDA ಸರ್ಕಾರದ ರಚನೆಗೆ ಪ್ರಮುಖ ಕಾರಣ ಆಗಿರೋ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ. ಇಂದು NDA ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೋದಿ ಎದುರು ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಇವುಗಳಿಗೆ ನಿರ್ಮಲಾ ಸೀತಾರಾಮನ್ ಅವರು ಹೇಗೆ ಸ್ಪಂದಿಸಿದ್ದಾರೆ ಎಂದು ನೋಡಬೇಕಿದೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ವ್ಯಾಪಿಸಿರುವ ಬುಂಧೇಲ್ ಖಂಡ್ ರೀತಿಯಲ್ಲಿ ವಿಶೇಷ ಪ್ಯಾಕೇಜ್ * ಕೈಗಾರಿಕಾ ಪ್ರೋತ್ಸಾಹಧನ, ರಾಜಧಾನಿಯಾಗಿ ಅಮರಾವತಿ ನಗರವನ್ನು ನಿರ್ಮಿಸಲು ಪ್ಯಾಕೇಜ್. * ಪೋಲಾವರಂ ವಿವಿಧೋದ್ದೇಶ ಯೋಜನೆಗೆ ಹಣ ಬಿಡುಗಡೆ. * ರಾಜ್ಯ ಆರ್ಥಿಕ ವ್ಯವಹಾರಗಳ ಮೇಲೆ ತಾತ್ಕಾಲಿಕ ಹಿಡಿತ ಸಾಧಿಸಲು ಅಲ್ಪಾವಧಿಯ ಸಹಾಯ. * ವಿಶೇಷ ನೆರವಿನ ಯೋಜನೆಯಡಿಯಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚುವರಿ ಆರ್ಥಿಕ ಸಹಾಯ. *…
ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಇಂದು ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದೆ ಇರೋದನ್ನು ಕಂಡು ಅಧಿಕಾರಿಗಳು ಹಾಗೂ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರೋಗಿಗಳ ಪರಿಸ್ಥಿತಿಯನ್ನು ಅವಲೋಕಿಸಿದವರು ಸೂಕ್ತ ಚಿಕಿತ್ಸೆ ನೀಡದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳದೆ ಇರುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಇನ್ನೊಂದೆಡೆ ತುಮಕೂರು ನಗರದ ಆದ್ಯಂತ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು ಆಸ್ಪತ್ರೆಯಲ್ಲಿಯೇ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಿಶೇಷ ಗಮನಹರಿಸಬೇಕೆಂದು ಆದೇಶ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಯುದ್ಧಪೀಡಿತ ಸೂಡಾನ್ ದೇಶದಲ್ಲಿ ಕುಟುಂಬದ ನಿರ್ವಹಣೆಗಾಗಿ ಆಹಾರ ಬೇಕಾದರೆ ಮಹಿಳೆಯರು ಯೋಧರ ಜೊತೆ ಮಲಗುವಂತೆ ಒತ್ತಡ ಹೇರಲಾಗುತ್ತಿದೆ.ಸುಡಾನ್ ನ ಒಮ್ರುಮನ್ ನಗರದ ಸುಮಾರು 25ಕ್ಕೂ ಹೆಚ್ಚು ಮಹಿಳೆಯರು ತಾವು ಕೇವಲ ಕುಟುಂಬ ಹೊಟ್ಟೆ ತುಂಬಿಸಲು ಆಹಾರ ಮುಂತಾದ ಅಗತ್ಯ ವಸ್ತುಗಳನ್ನು ಪಡೆಯಲು ಸೈನಿಕರ ಜೊತೆ ದೇಹ ಹಂಚಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಸೂಡಾನ್ ನಲ್ಲಿ ನಾಗರಿಕ ಧಂಗೆ ಶುರುವಾದ ಹಿನ್ನೆಲೆಯಲ್ಲಿ ಪ್ಯಾರಾ ಮಿಲಿಟರಿ ಹೇರಲಾಗಿದ್ದು, ದೇಶದ ಪ್ರಮುಖ ಫ್ಯಾಕ್ಟರಿ ಆವರಿಸಿಕೊಂಡಿರುವ ಸೈನಿಕರು ಊಟ ಬೇಕಾದರೆ ಸೆಕ್ಸ್ ಮಾಡಿ ಎಂದು ಮಹಿಳೆಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆಹಾರ ಸಂಗ್ರಹಿಸುವ ಉಗ್ರಾಣ ಸೇರಿದಂತೆ ಕಾರ್ಖಾನೆಗಳು ಸೈನಿಕರ ವಶದಲ್ಲಿದೆ. ಇದರಿಂದ ದೇಶದ ಜನರು ಆಹಾರಕ್ಕಾಗಿ ಪರದಾಡುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈನಿಕರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಊಟ, ನೀರು ಬಯಸುವ ಮಹಿಳೆಯರು ಮೊದಲು ಸರತಿ ಸಾಲಿನಲ್ಲಿ ನಿಲ್ಲಬೇಕು. ನಂತ್ರ ಸೈನಿಕರ ಜೊತೆ ಶಾರೀರಿಕ ಸಂಬಂಧ ಬೆಳೆಸಬೇಕು. ಸೂಡಾನ್ ಅಂತರ್ಯುದ್ಧ ಮಹಿಳೆಯರನ್ನು ಈ ದುಸ್ಥಿತಿಗೆ ತಳ್ಳಿದೆ. ಅಲ್ಲಿನ…
ಹಾವೇರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾವೇರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ: ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು. ವಯೋಮಿತಿ: ಹಾವೇರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 31, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು ಅರ್ಜಿ ಶುಲ್ಕ: PWD ಅಭ್ಯರ್ಥಿಗಳು:…
ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ಥರಟಿ ಗ್ರಾಮದಲ್ಲಿ ಒಂದು ಕುಟುಂಬವೊಂದು ವಾಸಿಸಲು ಸೂಕ್ತ ಮನೆಯಿಲ್ಲದೇ ಸಂಕಷ್ಟದಲ್ಲಿ ಜೀವಿಸುತ್ತಿರುವ ಘಟನೆ ಗೃಹ ಸಚಿವರ ಕ್ಷೇತ್ರದಲ್ಲೇ ನಡೆದಿದೆ. 8 ಜನರಿರುವ ಕುಟುಂಬ ಈ ಬಡ ಕುಟುಂಬದಲ್ಲಿ ಮಂಜಮ್ಮ ತಿಮ್ಮಣ್ಣ ದಂಪತಿಯ ಮನೆಯಲ್ಲಿ ಹಿರಿಯ ಜೀವಗಳು ಮೂರು ಜನ ಇದ್ದಾರೆ. ಯಾರಿಗೂ ಪೆನ್ಷನ್ ಬರುತ್ತಿಲ್ಲ. ನಾಲ್ಕು ವರ್ಷದಿಂದ ಒಂದು ಟಾರ್ಪಲ್ ಅಡಿಯಲ್ಲಿ ವಾಸ ಮಾಡುತ್ತಿದ್ದಾರೆ. ನಮ್ಮ ಮನೆ ಬಿದ್ದುಹೋಗಿದೆ ಎಂದು ಅಧಿಕಾರಿಗಳಿಗೆ ಅಂಗಲಾಚಿದರು ಯಾರು ಬಂದಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಈ ಹಿಂದೆ ಇವರಿಗೆ ಮನೆ ಮಂಜೂರು ಮಾಡಲಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯೆ ದ್ರಾಕ್ಷಯಿಣಿ ತಿಳಿಸಿದರು. ಆದರೆ ಮನೆ ಕಂದಾಯ ಕಟ್ಟಲು ಸಹ ಹಣವಿಲ್ಲ. ಹೀಗಿರುವಾಗ ಮನೆ ಕಟ್ಟಲು ಚೈತನ್ಯವಿಲ್ಲದ ನಮ್ಮ ಬಳಿ ಹಣ ಎಲ್ಲಿದೆ ಎಂದು ಕುಟುಂಬಸ್ಥರು ಪ್ರಶ್ನಿಸಿದ್ದಾರೆ. ಅನಾರೋಗ್ಯ ಪೀಡಿತ ತಾಯಿ ವಯಸ್ಸಾದ ತಂದೆ ಇವರ ಆಸ್ಪತ್ರೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ನಮ್ಮ ಬಳಿ…
ಔರಾದ್: ಪತ್ರಕರ್ತರು ಸಾಮಾಜಿಕ ನ್ಯಾಯಕ್ಕಾಗಿ ಜನರ ಧ್ವನಿಯಾಗಬೇಕು ಎಂದು ಮಾಜಿ ಸಚಿವ ಹಾಲಿ ಶಾಸಕ ಪ್ರಭು ಚವ್ಹಾಣ ಕರೆ ನೀಡಿದರು. ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯುನಿಯನ್ ಸಂಘದಿಂದ ಆಯೋಜಿಸಿದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲೆಡೆ ನಿರೀಕ್ಷೆಗಳು ಹುಸಿಯಾದಾಗ ಜನಸಾಮಾನ್ಯರು ನ್ಯಾಯದ ಭರವಸೆ ಮಾಡುವುದು ಕೇವಲ ಪತ್ರಿಕಾ ಮಾಧ್ಯಮದ ಮೇಲೆ ಎಂಬುದನ್ನು ಅರಿಯಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸ ಈ ಹಿಂದಿನಿಂದಲೂ ಮಾಡಿದ್ದು, ಮುಂದೆಯು ಸಹ ಮಾಡುತ್ತೇನೆ. ಪತ್ರಕರ್ತರ ಅನುಕೂಲಕ್ಕೆ ಜೀವವಿಮೆಯಂತಹ ಸೌಲಭ್ಯಗಳು ನೀಡುವ ಕುರಿತು ಯೋಚಿಸುತ್ತೇನೆ ಎಂದರು. ತಾಲೂಕಿನಲ್ಲಿ ಪತ್ರಿಕಾ ಭವನ ಇಲ್ಲದಿರುವುದು ನನ್ನ ಗಮನಕ್ಕೂ ಇದೆ. ಹಿಂದಿನಿಂದಲೂ ಭವನ ನಿರ್ಮಾಣದ ಕುರಿತು ಪತ್ರಕರ್ತರ ಜೊತೆ ಚರ್ಚಿಸಿದ್ದೇನೆ. ಪಟ್ಟಣ ಪ್ರದೇಶದಲ್ಲಿ ನಿವೇಶನ ದೊರೆತಲ್ಲಿ ಶೀಘ್ರ ಪತ್ರಿಕಾ ಭವನ ನಿರ್ಮಿಸಲು ಸಿದ್ದನಿರುವುದಾಗಿ ಭರವಸೆ ನೀಡಿದರಲ್ಲದೇ. ಎಲ್ಲ ಪತ್ರಕರ್ತರು ಒಂದಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದರೆ…
ಕೋರ್ಟ್ ಆವರಣದಲ್ಲೇ ನಿಲ್ಲಿಸಿದ್ದ ಹಿಟಾಚಿ ಕದ್ದಿದ್ದ ಖದೀಮರು ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಜಿಗಣಿಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಕಾಮಗಾರಿಗೆಂದು ಹಿಟಾಚಿ ತರಿಸಲಾಗಿತ್ತು. ಕಾಮಗಾರಿ ಬಳಿಕ ಕೋರ್ಟ್ ಆವರಣದಲ್ಲೇ ಹಿಟಾಚಿ ನಿಲ್ಲಿಸಲಾಗಿತ್ತು. ಜು.17ರ ರಾತ್ರಿ 1 ಗಂಟೆ ಸುಮಾರಿಗೆ ನಾಲ್ವರು ಕಳ್ಳರು ಲಾರಿ ಸಮೇತ ಕೋರ್ಟ್ ಬಳಿ ಬಂದಿದ್ದರು. ಸೆಕ್ಯೂರಿಟಿ ಬಳಿ ಆವರಣದಲ್ಲಿರುವ ಹಿಟಾಚಿ ನಮ್ಮದೆ, ಕೆಲಸ ಮುಗಿದಿದೆ ತೆಗೆದುಕೊಂಡು ಹೋಗ್ತೀವಿ ಅಂತ ಕಥೆ ಕಟ್ಟಿದ್ದರು. ಇದನ್ನು ನಂಬಿದ ಸೆಕ್ಯೂರಿಟಿ ಆರೋಪಿಗಳನ್ನು ಒಳಗೆ ಬಿಟ್ಟಿದ್ದಾರೆ. ಬಳಿಕ ಕಳ್ಳರು ಲಾರಿಯಲ್ಲಿ ಹಿಟಾಚಿ ಹೇರಿಕೊಂಡು ಪರಾರಿಯಾಗಿದ್ದಾರೆ. ಹಿಟಾಚಿ ಕದಿಯುವ ಖತರ್ನಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಜಿಗಣಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರಿಗೆ ಹುಡುಕಾಟ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆರಳಿನ ಫಂಗಸ್ ಇನ್ಫೆಕ್ಷನ್ ನಿವಾರಣೆ ಹಲವರ ಸಮಸ್ಯೆ ಆಗಿದೆ. ಮುಖ್ಯವಾಗಿ ಪಾದಗಳು ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಬೆರಳು ಸಂಧಿಗಳಲ್ಲಿ ಫಂಗಸ್ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಕಾಲಿನ ಬೆರಳಲ್ಲಿ ಕಾಣಿಸಿಕೊಳ್ಳುವ ಟೋನಲ್ ಫಂಗಲ್ ಇನ್ಫೆಕ್ಷನ್ ಬೆರಳೇ ಎದ್ದು ಬಂದ ಹಾಗೆ, ಕೀವು ತುಂಬಿಕೊಂಡು ಹಳದಿ ಬೆರಳಾಗಿ ಕಾಣಿಸಿಕೊಳ್ಳುತ್ತವೆ. ಕಾಲು ತುರಿಕೆ ವಿಪರೀತ ಆಗಿರುತ್ತದೆ, ಅದಲ್ಲದೆ ಮಳೆಗಾಲದಲ್ಲಿ ಹೆಚ್ಚಾಗಿ ಸೋಂಕುಗಳು ಹರಡುವುದರಿಂದ ದೇಹದಲ್ಲಿ ನಾನಾ ರೀತಿಯ ಸಮಸ್ಯೆಗಳು ಶುರುವಾಗುತ್ತವೆ. ಶೀತ, ಜ್ವರ, ಕೆಮ್ಮು ಇವುಗಳ ಜತೆಗೆ ಇನ್ನೆಕ್ಷನ್ಗಳು ಉಂಟಾಗುತ್ತವೆ. ಇದೀಗ ಕಾಲು ಬೆರಳಿನ ಫಂಗಲ್ ಇನ್ನೆಕ್ಷನ್ ತಡೆಯುವ ಸಿಂಪಲ್ ಟಿಪ್ಸ್ ಇಲ್ಲಿದೆ. ಕಾಲು ಬೆರಳಿನಲ್ಲಿ ಕಾಣಿಸಿಕೊಳ್ಳುವ ಈ ಟೋನಲ್ ಫಂಗಲ್ ಇನ್ಸೆಕ್ಷನ್ ಅನ್ನು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿ ಗುಣಪಡಿಸುವ ಸರಳ ವಿಧಾನ ಇಲ್ಲಿದೆ. ಕೊಬ್ಬರಿ ಎಣ್ಣೆ: ತೆಂಗಿನಕಾಯಿ ಎಣ್ಣೆ ಎಲ್ಲರ ಮನೆಯಲ್ಲಿ ಇದ್ದೇ ಇರುತ್ತದೆ. ಇದನ್ನು ಬಳಸುವುದರಿಂದ ದೇಹದಲ್ಲಿನ ಸತ್ತ ಚರ್ಮವನ್ನು ತೆಗೆದು ಹಾಕಿ ಚರ್ಮ ಹೊಳೆಯುವಂತೆ ಮಾಡುತ್ತದೆ. ಅಲ್ಲದೆ ಇದರಲ್ಲಿನ ಔಷಧೀಯ ಗುಣಗಳು…