Author: admin

ರಜೆಗೆಂದು ಭಾರತಕ್ಕೆ ಬಂದಿದ್ದ ಕುಟುಂಬವೊಂದು ಕುವೈತ್‌ ಗೆ ಮರಳಿದ ಅದೇ ದಿನ ತಮ್ಮ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ. ಕುವೈತ್‌ ನ ಭಾರತೀಯ ರಾಯಭಾರ ಕಚೇರಿಯು “ಕಳೆದ ರಾತ್ರಿ ಅಬಾಸಿಯಾದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಬೆಂಕಿಯಿಂದಾಗಿ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಮತ್ತು 2 ಮಕ್ಕಳ ದುರಂತ ಸಾವಿನ ಬಗ್ಗೆ ಕುವೈತ್‌ ನ ಭಾರತೀಯ ರಾಯಭಾರ ಕಚೇರಿ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ. ಅಬ್ಬಾಸಿಯಾ ಪ್ರದೇಶದ ಒಂದು ಕಟ್ಟಡದಲ್ಲಿ ಇರುವ ಎರಡನೇ ಮಹಡಿಯಲ್ಲಿ ಈ ದಂಪತಿ ವಾಸವಾಗಿದ್ದರು. ರಾತ್ರಿ ಎ.ಸಿ.ಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯಿಂದಾಗಿ ಉಸಿರುಗಟ್ಟಿ ನಾಲ್ವರು ಮೃತ ಹೊಂದಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಕುವೈತ್‌ ನಲ್ಲಿ ವಾಸವಾಗಿದ್ದು, ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಹೊಂದಿದವರನ್ನು ಮ್ಯಾಥ್ಯೂ ಮುಜಕ್ಕಲ್, ಅವರ ಪತ್ನಿ ಲಿನ್ ಅಬ್ರಹಾಂ ಮತ್ತು ಅವರ ಮಕ್ಕಳಾದ ಐಸಾಕ್ ಮತ್ತು ಎರಿನ್ ಎಂದು ಗುರುತಿಸಲಾಗಿದೆ. ಮ್ಯಾಥ್ಯೂ ಅವರು ಕಳೆದ 15 ವರ್ಷಗಳಿಂದ ಕುವೈತ್‌…

Read More

ಬಂದೂಕಿನಿಂದ ಪತಿಯೇ ಪತ್ನಿಯನ್ನು ಗುಂಡಿಟ್ಟು ಕೊಂದ ಭಯಾನಕ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಿಲ್ಪಾ (36) ಎಂದು ಗುರುತಿಸಲಾಗಿದೆ. ಆರೋಪಿ ಪತಿ ನಾಯಕಂಡ ಬೋಪಣ್ಣ (45) ಎಂಬಾತ ಈ ಕೃತ್ಯವೆಸಗಿದ ಬಳಿಕ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಹಾರಾಷ್ಟ್ರದ ಪಂಡರಾಪುರಕ್ಕೆ ತೆರಳಿದ್ದ ಬೆಳಗಾವಿಯ ವಿಠ್ಠಲ ಭಕ್ತರ ಮೇಲೆ ಕೀಡಿಗೇಡಿಗಳ ತಂಡವೊಂದು ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಸುರೇಶ್ ರಾಜುಕರ್, ಪರಶುರಾಮ ಜಾಧವ್, ಲಾರಿ ಚಾಲಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಷಾಢ ಏಕಾದಶಿ ನಿಮಿತ್ತ ತುರಮುರಿ ಗ್ರಾಮದ ಭಕ್ತರು ಬಾಡಿಗೆ ಲಾರಿ ಮಾಡಿಕೊಂಡು ಪಂಡರಾಪುರಕ್ಕೆ ತೆರಳಿದ್ದರು. ಪಂಡರಾಪುರ ವಿಠ್ಠಲನ ದರ್ಶನ ಪಡೆದು ಬೆಳಗಾವಿಗೆ ವಾಪಸ್ ಬರುತ್ತಿದ್ದ ವೇಳೆ ದಾರಿ ತಪ್ಪಿದ್ದಾರೆ. ಬೆಳಗಾವಿಗೆ ಬದಲು ಮಾಲಗಾಂವ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಲಾರಿಗೆ ಕಾರು ಅಡ್ಡ ಬಂದಿದ್ದು,  ಪಾನಮತ್ತನಾಗಿದ್ದ ಕಾರಿನ ಚಾಲಕ ಭಕ್ತರೊಂದಿಗೆ ಕಿರಿಕ್ ಮಾಡಿದ್ದಾನೆ. ಬಳಿಕ ಮೊಬೈಲ್ ಕರೆ ಮಾಡಿ ಸ್ಥಳಕ್ಕೆ ಪುಂಡರನ್ನು ಕರೆಸಿಕೊಂಡು ಭಕ್ತರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮೂವರು ವಿಠ್ಠಲ ಭಕ್ತರು ಗಾಯಗೊಂಡಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮಿರಜ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ…

Read More

ತುಮಕೂರು:  ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಕೆಲಸ ಮಾಡುವ ಶಕ್ತಿ ಸಿಗಬೇಕು ಹಾಗೂ ಸೋಮವಾರದಿಂದ ಕೇಂದ್ರ  ಸರ್ಕಾರದ ಮೊದಲ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಯಾವುದೇ ಗೊಂದಲಗಳು ನಿರ್ಮಾಣವಾಗದಿರಲೆಂದು ಆಶಿಸಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಬಳಿ  ಪ್ರಾರ್ಥನೆ ಸಲ್ಲಿಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ,  ಶಿವಕುಮಾರ ಶ್ರೀಗಳು  ಇದ್ದಾಗ ಮೋದಿ ಅವರು ಮಠಕ್ಕೆ ಬರ್ತಿದ್ರು, ಆಶೀರ್ವಾದ ಪಡೆಯುತ್ತಿದ್ರು.  ಸ್ವಾಮೀಜಿಗಳು ಬಹಳ ಖುಷಿಪಡ್ತಿದ್ರು. ದೇಶಕ್ಕಾಗಿ ದುಡಿಯುವಂತಹ ಒಬ್ಬ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಅಂತ. ಇವತ್ತು ಅವರು ನಮ್ಮ ಮುಂದೆ ಇಲ್ಲ, ಆದರೆ ಅವರ ಆಶೀರ್ವಾದ ಅವರ ಪ್ರೇರಣೆ ಎಂದರು. ಅವರ ಶಕ್ತಿ ನಮ್ಮೆಲ್ಲರಿಗೂ ದೇಶದ ಕೆಲಸ ಮಾಡೋದಿಕ್ಕೆ ಪ್ರೇರಣೆ ಕೊಡುತ್ತೆ, ಶಕ್ತಿ ಕೊಡುತ್ತೆ ಎಂಬ ವಿಶ್ವಾಸ ನನಗಿದೆ. ಆ ರೀತಿಯಾಗಿ ನಾನು ಸ್ವಾಮೀಜಿಗಳ ಗದ್ದುಗೆ ಮುಂದೆ ಪ್ರಾರ್ಥನೆ ಮಾಡಿದ್ದೇನೆ ಎಂದರು. ನಮ್ಮ ಸರ್ಕಾರದಲ್ಲಿ ಗುಡಿ ಕೈಗಾರಿಕೆ ,…

Read More

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‍ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಆನ್‍ ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ ಸೈಟ್ ನಲ್ಲಿ www.klwbapps.karnataka.gov.in ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ,…

Read More

ಔರಾದ್: ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸವ೯  ಸದಸ್ಯರ ಸಹಾನುಮತದಿಂದ  ಅಧ್ಯಕ್ಷರಾಗಿ  ಮಹೇಶ ಚಾಂಬೋಳೆ ಹಾಗೂ ಉಪಾಧ್ಯಕ್ಷರಾಗಿ ಸಾವಿತ್ರಿ ರಾಜಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ, ಗ್ರಾ.ಪಂ. ಸದಸ್ಯರ ಕರಬಸಪ್ಪಾ ಸೊರಾಳೆ, ನಜೀರ್ ಚಾಯುಸ್, ಮಾಜಿ ಗ್ರಾಪಂ ಅಧ್ಯಕ್ಷ ದೇವಿದಾಸ ಧೋಳೆ, ಗ್ರಾಮಸ್ಥರಾದ ಎಮ್ ಡಿ. ನಯೂಮ್, ಸಂಜುಕುಮಾರ ಮುಗಟೆ, ವಿನೋದ ರಡ್ಡಿ, ಪರಮೇಶ್ವರ್ ಮೇತ್ರೆ ಹಾಗೂ ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಉಪಸ್ಥಿತಿಯಲ್ಲಿ ಇದ್ದರು.  ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಔರಾದ: ಸರಕಾರ ಮತ್ತು ಸಮಾಜದ ಕೊಂಡಿಯಾಗಿ ಪತ್ರಿ ಕೆಗಳು ಕೆಲಸ ಮಾಡುತ್ತಿವೆ ಅದೇ ಕಾರಣಕ್ಕೆ ಮಾಧ್ಯಮಗಳ ಪಾತ್ರ ಸಮಾಜದಲ್ಲಿ ಬಹುಮುಖ್ಯವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ಔರಾದ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕನಾ೯ಟಕ ಕಾಯ೯ನಿರತಪತ್ರ ಕತ೯ರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಜನರಲ್ಲಿ ಆತ್ಮವಿಶ್ವಾಸ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಪತ್ರಿಕೆಗಳು ಸಮಾ ಜವನ್ನು ಕಾಡುತ್ತಿರುವ ಭ್ರಷ್ಟಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಉಂಟು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದರು. ಔರಾದ ತಾಲೂಕಿನ ಪತ್ರಕರ್ತರು ಗಡಿ ಭಾಗದ ಸಮಸ್ಯೆಗಳ ಬಗ್ಗೆ ಸುದ್ದಿಗಳು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ರಕತ೯ರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸದ ಸಾಗರ ಖಂಡ್ರೆ ಮಾತನಾಡಿ. ಪತ್ರಕತ೯ರ ವರದಿ ಜನರ ಸಂವೇದನೆಗಳೊಂದಿಗೆ ಇರುವುದ ರಿಂದ ಸಮಾಜದಲ್ಲಿನ ಸೂಕ್ಷ್ಮ ತೆಗಳ ಬಗ್ಗೆ ಒಳ ನೋಟವಿರುತ್ತದೆ. ಪ್ರಶಸ್ತಿ ಪ್ರದಾನ ಈ ವೇಳೆ…

Read More

ಸರಗೂರು: ಸ್ವಾಧೀನನುಭವದಲ್ಲಿರುವ ಜಮೀನಿಗೆ ರೈತರು ಸರ್ಕಾರದ ಆದೇಶದಂತೆ ನಮೂನೆ 50, 53, 57 ನೇ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಚೀಟಿ ವಿತರಿಸುವಂತೆ ಒತ್ತಾಯ ಮಾಡುತ್ತಾ ಬಂದಿದ್ದರೂ ಕಂದಾಯ ಇಲಾಖೆ ಅಧಿಕಾರಿಗಳು ಸಾಗುವಳಿ ಪತ್ರ ನೀಡುತ್ತಿಲ್ಲ ಎಂದು ಹಾದನೂರು ಗ್ರಾ.ಪಂ. ಸದಸ್ಯ ಹಾಗೂ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಸದಸ್ಯ ಯಶವಂತಪುರ ಶಿವಲಿಂಗಯ್ಯ ಆಗ್ರಹಿಸಿದರು. ತಾಲ್ಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ದಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘಟನೆಯು ಕಳೆದ 10 ವರ್ಷಗಳಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ಹೋರಾಟ ನಡೆಸುತ್ತಾ ಬಂದಿದೆ. ಕಳೆದ 50 ಮತ್ತು 60 ವರ್ಷಗಳಿಂದ ರೈತರು ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದರು ಸಹ ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಾಗುವಳಿ ಚೀಟಿ ವಿತರಣೆ ಮಾಡದೇ ಹಿಂದೇಟು ಹಾಕುತ್ತಿದ್ದಾರೆ ಎಂದರು. ಸಾಗುವಳಿ ಚೀಟಿ ಸಿಗದೆ ಇರುವುದರಿಂದ ಪ್ರಕೃತಿ ವಿಕೋಪದಿಂದ ಕಾಡುಪ್ರಾಣಿಗಳಿಂದ ಬೆಳೆ ನಷ್ಟವಾದಾಗ, ಪರಿಹಾರ ಪಡೆಯಲು ಸಾಧ್ಯವಾಗದೆ…

Read More

ಪಾವಗಡ: ಶುಕ್ರವಾರ ಪಾವಗಡ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯಿಂದ ಡೆಂಗ್ಯೂ ಹೊರಡುವ ಬೀದಿ ಹೆಚ್ಚಾಗಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿಯ ಬೆನ್ನಲ್ಲೇ,  ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತಕ್ಷಣದಲ್ಲಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ. ವರದಿಯ  ಬೆನ್ನಲ್ಲೇ ಪಾವಗಡ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಾನಕಿ ರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಗ್ರಾಮಸ್ಥರ ಕೆಲ ಸಮಸ್ಯೆಗಳನ್ನ ಆಲಿಸಿ ಬಗೆಹರಿಸುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. 1.) ಶಾಮಸುಂದರ ಎಸ್ ಅಡಿಗ. ಹಿರಿಯ ಉಪನ್ಯಾಸಕರು, ಡಯಟ್, ಹಾವೇರಿ,ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಣೇಬೆನ್ನೂರು, ಹಾವೇರಿ ಜಿಲ್ಲೆ (ಶ್ರೀ ಎಂ.ಹೆಚ್. ಪಾಟೀಲ್ ಇವರ ಜಾಗಕ್ಕೆ). 2.) ರಾಜೇಗೌಡ, ಹಿರಿಯ ಸಹಾಯಕ ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ (ಶ್ರೀ ಕೆ.ಪಿ ನಾರಾಯಣ ಇವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ). 3.) ರಮೇಶ್ ಕೆ.ಸಿ.ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಇವರನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಶ್ರೀ ತಿಮ್ಮಯ್ಯ ಇವರ ಜಾಗಕ್ಕೆ). 4.) ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ.…

Read More