Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಮ್ಮ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಪತ್ನಿ ಶೈಲಜಾ ಮತ್ತು ಮಗಳು ದಿವ್ಯಾ ಜೊತೆಯಲ್ಲಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ನನಗೆ ಟ್ವೀಟ್ ಮಾಡಿ ದೇಶದ ವ್ಯವಸ್ಥೆಗೆ ಭದ್ರಬುನಾದಿ ಹಾಕಲು ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ. ದೇಶದ ಅಭಿವೃದ್ಧಿಗೆ ನಿಮ್ಮ ಬುದ್ಧಿಶಕ್ತಿಯಿಂದ ಯಾವುದೇ ಸಮಸ್ಯೆಗಳು ಎದುರಾಗದಂತೆ ಸಮಸ್ಯೆಗಳನ್ನು ನಿವಾರಿಸುವಂತೆ ತಿಳಿಸಿದ್ದಾರೆ ಎಂದರು. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ನಿಮಗೆ 73 ವರ್ಷವಾದರೂ ಕೂಡ ಜನಪರವಾಗಿ ಕೆಲಸ ಮಾಡುವಂತಹ ಶಕ್ತಿ ಹೊಂದಿದ್ದೀರಾ ಎಂದು ತಿಳಿಸಿ ಶುಭಾಶಯ ಕೋರಿದರು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಗೋವಾದಿಂದ ನೈಋತ್ಯಕ್ಕೆ ಸುಮಾರು 102 ನಾಟಿಕಲ್ ಮೈಲಿ ದೂರದಲ್ಲಿರುವ ಕಂಟೈನರ್ ಸರಕು ವ್ಯಾಪಾರಿ ಹಡಗಿನಲ್ಲಿ ಶುಕ್ರವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮುಂದ್ರಾದಿಂದ ಶ್ರೀಲಂಕಾದ ಕೊಲಂಬೋಗೆ ತೆರಳುತ್ತಿದ್ದ ಹಡಗಿನಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಹಡಗು ಸ್ಥಳಕ್ಕೆ ತಲುಪಿದ್ದು, ಸವಾಲಿನ ಸಮುದ್ರ ಪರಿಸ್ಥಿತಿಗಳು ಮತ್ತು ಕೆಟ್ಟ ಹವಾಮಾನದ ಹೊರತಾಗಿಯೂ ಅಗ್ನಿಶಾಮಕ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಬೆಂಕಿಯ ನಿಖರ ಕಾರಣ ಇನ್ನೂ ತಿಳಿದಿಲ್ಲ, ಆದರೆ ಪ್ರಾಥಮಿಕ ವರದಿಗಳು ಅನೇಕ ಸ್ಫೋಟಗಳು ಪರಿಸ್ಥಿತಿಯನ್ನು ಉಲ್ಬಣಗೊಳಿಸಿವೆ, ಹಡಗು ಮತ್ತು ಅದರ ಸಿಬ್ಬಂದಿಗೆ ತೀವ್ರ ಅಪಾಯವನ್ನುಂಟುಮಾಡಿದೆ ಎಂದು ಸೂಚಿಸುತ್ತವೆ. ಹಡಗು ಅಂತರರಾಷ್ಟ್ರೀಯ ಕಡಲ ಅಪಾಯಕಾರಿ (ಐಎಂಡಿಜಿ) ಸರಕುಗಳನ್ನು ಸಾಗಿಸುತ್ತಿದೆ ಎಂದು ವರದಿಯಾಗಿದೆ, ಹಡಗಿನ ಫಾರ್ವರ್ಡ್ ವಿಭಾಗದಲ್ಲಿ ಸ್ಫೋಟಗಳು ಸಂಭವಿಸಿವೆ. ವರದಿಗಳ ಪ್ರಕಾರ, ಐಸಿಜಿ ಹಡಗು ಭಯಭೀತರಾದ ಸಿಬ್ಬಂದಿಗೆ ಅವರ ಸುರಕ್ಷತೆಯ ಬಗ್ಗೆ ಭರವಸೆ ನೀಡಿತು. ಇದಲ್ಲದೆ, ಅಗ್ನಿಶಾಮಕ ಪ್ರಯತ್ನಗಳನ್ನು ಬೆಂಬಲಿಸಲು ಗೋವಾದಿಂದ ಇನ್ನೂ ಎರಡು ಐಸಿಜಿ ಹಡಗುಗಳನ್ನು ಕಳುಹಿಸಲಾಗಿದೆ. ಬೆಂಕಿಯನ್ನು…
ಆನೆಗಳ ವಿದ್ಯುದಾಘಾತಕ್ಕೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ನೋಟಿಸ್ ನೀಡುವಂತೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಆಗಸ್ಟ್ 12 ರೊಳಗೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಈ ಕಂಪನಿಗಳಿಗೆ ನಿರ್ದೇಶನ ನೀಡಿತು. ಅಶ್ವತ್ಥಾಮ ಎಂಬ ಆನೆಯ ಸಾವಿನ ಬಗ್ಗೆ ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಜೂನ್ 14, 2024 ರಂದು ದಾಖಲಾದ ಸ್ವಯಂಪ್ರೇರಿತ ಪಿಐಎಲ್ ಅನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಮೈಸೂರಿನಲ್ಲಿ ಅಶ್ವತ್ಥಾಮ ಆನೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಆನೆ ಹಾಗೂ ಕೊಡಗು ಜಿಲ್ಲೆಯಲ್ಲಿ ಎರಡು ಆನೆಗಳು ಮೃತಪಟ್ಟಿವೆ. ಈ ಎಲ್ಲಾ ಸಾವುಗಳು ವಿದ್ಯುದಾಘಾತದಿಂದ ಸಂಭವಿಸಿವೆ. ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರವು ರೈಲ್ವೆ ಬ್ಯಾರಿಕೇಡ್ ಗಳು, ಸೌರ ಬೇಲಿ ಮತ್ತು ಆನೆ ನಿರೋಧಕ ಕಂದಕಗಳಂತಹ ಕ್ರಮಗಳನ್ನು ಅರಣ್ಯ ಇಲಾಖೆ ಜಾರಿಗೆ ತಂದಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ವಿದ್ಯುತ್ ಮಾರ್ಗಗಳು ಕುಗ್ಗಿರುವುದರಿಂದ ಮತ್ತು ಈ ವಿದ್ಯುತ್ ಮಾರ್ಗಗಳಿಂದ…
ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು. ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು…
ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆ ಇನ್ನು ಮುಂದೆ ಅನುಸರಿಸಬೇಕಿದೆ. ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜತೆಗೆ ದುಪ್ಪಟ ಅಥವಾ ಲಂಗ ದಾವಣಿ ಧರಿಸಿ ಶ್ರೀಗಳ ದರ್ಶನ ಪಡೆಯಬಹುದು ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಭಾರತೀಯ ಸಂಪ್ರದಾಯದ ಉಡುಗೆಗಳನ್ನು ಹೊರತುಪಡಿಸಿ ಇತರೆ ಉಡುಗೆ ತೊಟ್ಟು ಬಂದಲ್ಲಿ ಗುರುನಿವಾಸದ ಒಳಗೆ ಪ್ರವೇಶವನ್ನು ನಿರ್ಬಂಧಿಸಲು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಪ್ರಸ್ತುತ ತಮಿಳುನಾಡಿನಲ್ಲಿ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ. ಯಾಕೆಂದರೆ ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವಂತೆಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ ಸೂಚನೆ ನೀಡಿ ರಾಜ್ಯಾದ್ಯಂತ ಶಾಲಾ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಬಾರ್ ಮತ್ತು ಬೆಂಚ್ ವರದಿ ಮಾಡಿದಂತೆ, ವರ್ಗಾವಣೆ ಪ್ರಮಾಣ ಪತ್ರಗಳಲ್ಲಿ ಶಾಲಾ ಶುಲ್ಕವನ್ನು ಪಾವತಿಸದಿರುವ ಅಥವಾ ವಿಳಂಬವಾದ ಪಾವತಿಗೆ ಸಂಬಂಧಿಸಿದ ಅನಗತ್ಯ ನಮೂದುಗಳನ್ನು ಶಾಲೆಗಳು ಮಾಡುವುದಕ್ಕೆ ನ್ಯಾಯಾಲಯವು ನಿಷೇಧ ವಿಧಿಸಿದೆ. ಶುಲ್ಕ ಬಾಕಿಗಳನ್ನು ತೆರವುಗೊಳಿಸುವವರೆಗೆ ಶಾಲೆಗಳು ಟಿಸಿಗಳನ್ನು ಹಿಡಿದಿಟ್ಟುಕೊಳ್ಳುವುದನ್ನು, ಟಿಸಿಯಲ್ಲಿ ಬಾಕಿ ಇರುವ ಅಥವಾ ಶುಲ್ಕವನ್ನು ಪಾವತಿಸದಿರುವ ನಮೂದುಗಳನ್ನು ಮಾಡುವುದನ್ನು ಇದು ತಡೆಯುತ್ತದೆ. ಯಾಕೆಂದರೆ ಇದು ಶಿಕ್ಷಣ ಹಕ್ಕು (RTE) ಕಾಯಿದೆಯ ಉಲ್ಲಂಘನೆಯಾಗಿದೆ ಮತ್ತು ಮಾನಸಿಕ ಕಿರುಕುಳವನ್ನು ಉಂಟು ಮಾಡುತ್ತದೆ ಎಂದು ಆರ್ಟಿಇ ಕಾಯಿದೆಯ ಸೆಕ್ಷನ್ 17ರ ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ. ಈ ಕುರಿತು ನ್ಯಾಯಮೂರ್ತಿಗಳಾದ ಎಸ್.ಎಂ.…
ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ ಎದಿರೇಟು ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಅವಧಿಯಲ್ಲಾಗಿದ್ದ ಬರೋಬ್ಬರಿ 21 ಹಗರಣಗಳ ಪಟ್ಟಿಯನ್ನು ಬಯಲುಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ವಿಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಈ ಮೂಲಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ. ಸಿಎಂ ಬಿಡುಗಡೆ ಮಾಡಿದ ಹಗರಣಗಳ ಪಟ್ಟಿ: * ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ. * ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು * ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ…
ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ ಅವರು ಪಂಚೆ ಉಟ್ಟಿ ಬಂದರೆಂದು ಜಿ.ಟಿ.ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ವಿಧಾನಸಭಾ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ಇದರಿಂದ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದರು. ಇಷ್ಟೇ ಅಲ್ಲದೆ ಇದೀಗ ಮಾಲ್ ಓನರ್ ಕೂಡ ತಾನೂ ಪಂಚೆ ಉಟ್ಟುಕೊಂಡು ಪರೀಕಪ್ಪನವರಿಗೆ ಕ್ಷಮೆ ಕೇಳಿದ್ದಾರೆ. ಪವರ್ ಪುಲ್ ಪಂಚೆಗೆ ಮಾಡಿದ ಅಪಮಾನದಿಂದ ರಾಜ್ಯದಲ್ಲಿ ಕೆಲವು ದಿನಗಳಿಂದ ಆದ ಬೆಳವಣಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಾಗಿ ಇದರಿಂದ ತೀವ್ರ ಮುಜುಗರಕ್ಕೀಡಾದ ಜಿ ಟಿ ಮಾಲ್ ಮಾಲೀಕ ಆನಂದ್ ಪುತ್ರ ಮಾಧ್ಯಮಗಳ ಮುಂದೆ ಪಕೀರಪ್ಪನಿಗೆ ಕ್ಷಮೆ ಕೇಳಿದ್ದರು. ಆದರೀಗ ಆನಂದ್ ಅವರು ಸ್ವತಃ ಪಕೀರಪ್ಪ ಹಾಗೂ ಅವರ ಮಗನನ್ನು ಮನೆಗೆ ಕರೆಸಿ, ತಿಂಡಿ ತಿನ್ನಿಸಿ, ಕೈ ಮುಗಿದು ಕ್ಷಮೆ ಕೋರಿದ್ದಾರೆ. ವಿಶೇಷ ಅಂದ್ರೆ ಆನಂದ್ ಅವರು ಪಕೀರಪ್ಪನಿಗೆ ಕ್ಷಮೆ ಕೇಳುವಾಗ ತಾನೂ…
ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಕುರಿತು ಲಿಖಿತ ಹಾಗೂ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಗೌರಿ ಚಿತ್ರದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿಗೆ ಅಂತಾರೆ, ಅದೆಲ್ಲ ಬುಲ್ಶಿಟ್ ಎಂಬ ಪದವನ್ನು ಬಳಕೆ ಮಾಡಿದ್ದರು. ಈ ಹೇಳಿಕೆಗೆ ಜೈನ ಸಮುದಾಯದ ಜನತೆ ಆಕ್ರೋಶಗೊಂಡಿದ್ದರು. ಇದರಿಂದ ಎಚ್ಚತ್ತ ಹಂಸಲೇಖ ಜೈನ ಸಮುದಾಯದ ಜನತೆ ಬಳಿಕ ತಮ್ಮ ಕ್ಷಮೆ ಕೇಳಿದ್ದಾರೆ. ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮೆರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸುಮುದಾಯಕ್ಕೆ ಶಿರವಾಗಿ ಕ್ಷಮೆ ಕೋರುತ್ತೇನೆ ಎಂದು ಹಂಸಲೇಖ ಹೇಳಿದ್ದಾರೆ. ಲಿಖಿತರೂಪದಲ್ಲಿ ಬರೆದ ಕ್ಷಮಾಪಣೆ ಪತ್ರದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ ಹಂಸಲೇಖ: ಪ್ರಿಯ ಮಾಧ್ಯಮಗಳೇ, ದಯಮಾಡಿ, ನಾನು ದುಡುಕಿ ಮಾತಾಡಿದ…
ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆಯ ಮೈಸೂರು ವಿಶ್ವವವಿದ್ಯಾನಿಲಯ ಬಡಾವಣೆ ಬಳಿಕ ಸಿಗುವ ಮಾರಮ್ಮನ ದೇವಾಲಯದ ಕೂಗಳತೆ ದೂರದಲ್ಲಿ ಈ ಬಾವಿ ಪತ್ತೆಯಾಗಿದೆ. ಕಳೆದ ಕೆಲ ದಿನಗಳಿಂದ ಮೈಸೂರು ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣಕ್ಕೋ ಏನೋ ರಿಂಗ್ ರಸ್ತೆಯಲ್ಲಿ ಈ ಬೃಹತ್ ಹೊಂಡ ಪತ್ತೆಯಾಗಿದೆ. ಶುಕ್ರವಾರ ತಡ ರಾತ್ರಿ ಈ ಬಗ್ಗೆ ಮಾಹಿತಿ ಪಡೆದ ಸಂಬಂಧಿಸಿದ ಅಧಿಕಾರಿಗಳು ಪೊಲೀಸರ ನೆರವಿನಿಂದ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿರ್ಬಂಧಿಸಿದ್ದಾರೆ. ಆ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಹದಿನೈದು ವರ್ಷಗಳ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಎಡಿಬಿ ಸಹಾಯದಿಂದ ಈ ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಿತ್ತು. ಅಂದಿನ ಮುಡಾ ಅಧ್ಯಕ್ಷರಾಗಿದ್ದ ಸಂದೇಶ್ ನಾಗರಾಜ್ ಅವರ ಅವಧಿಯಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿತ್ತು. ನೂರಾರು ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ಇತ್ತೀಚೆಗೆ ವರ್ಷದ ಹಿಂದೆಯಷ್ಟೆ ರಿಂಗ್ ರಸ್ತೆ ಹಾಗೂ ಸರ್ವಿಸ್ ರಸ್ತೆಗೆ ಒಪ್ಪಂದ್ದದಂತೆ ಬಾಕಿ ಉಳಿದಿದ್ದ ಡಾಂಬರು ಹಾಕಲಾಗಿತ್ತು. ನಮ್ಮತುಮಕೂರಿನ…