Author: admin

ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಇನ್ನು 4 ಅಡಿ ಮಾತ್ರ ಬಾಕಿ ಇದೆ.  ಜಲಾಶಯಕ್ಕೆ 51,375 ಕ್ಯೂಸೆಕ್ ಒಳ ಹರಿವು ಇದ್ದು ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಗೆ  10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು 124.80 ಅಡಿ ಸಾಮರ್ಥ್ಯವಿರುವ ಕೆಆರ್ ಎಸ್ ಜಲಾಶಯ ಸದ್ಯ 119.90 ಅಡಿ ತುಂಬಿದ್ದು ಸಂಪೂರ್ಣ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಎರಡು ವರ್ಷದ ಬಳಿಕ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…

Read More

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಬಿಬಿಎಂಪಿ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್​ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್​ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಘೋಷಿಸಿದೆ. ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್​ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದ್ದು, ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ.…

Read More

ಭಾರತ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಬಳಕೆ ಮಾಡಲಾದ ದೊಡ್ಡ ಪ್ರಮಾಣದ ಮಾರ್ಟರ್ ಶೆಲ್ ಗಳನ್ನು ಕೆರೆಯೊಳಗೆ ಪತ್ತೆ ಮಾಡಲಾಗಿದೆ. ಬಾಂಗ್ಲಾದೇಶದ ವಿಮೋಚನೆಗಾಗಿ ಈ ಯುದ್ಧ ನಡೆದಿತ್ತು. ತ್ರಿಪುರಾ ಜಿಲ್ಲೆಯ ರಂಗೂತಿಯ ಪ್ರದೇಶದಲ್ಲಿ ಮೀನುಗಾರಿಕೆ ಹೊಂಡವೊಂದರಲ್ಲಿ ಇದು ಪತ್ತೆಯಾಗಿದೆ. ಆರಂಭದಲ್ಲಿ ಈ ಶೆಲ್ ಗಳು ಕೆನಾನ್ ನಲ್ಲಿದ್ದವೇ ಅಥವಾ ಮೋರ್ಟರ್ ಗಳಲ್ಲಿದ್ದವೇ ಎನ್ನುವುದು ಸ್ಪಷ್ಟವಾಗಿರಲಿಲ್ಲ. ಬಳಿಕ ಇದು ಮಾರ್ಟರ್ ಶೆಲ್ ಎಂದು ದೃಢಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಇಎಸ್ ಆರ್ ಸಿಬ್ಬಂದಿಯ ನೆರವಿನೊಂದಿಗೆ ಬಮೂತಿಯಾ ಹೊರಠಾಣೆಯ ಬಳಿ ನಡೆಯುತ್ತಿರುವ ಉತ್ಖನನದ ಬಳಿಗೆ ಆಗಮಿಸಿದ್ದಾರೆ, ಒಟ್ಟು 27 ಮಾರ್ಟರ್ ಶೆಲ್ ಗಳು ಪತ್ತೆಯಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಿಠ್ಠಲ್ ದೇವಸ್ಥಾನದಿಂದ ಬೆಳ್ಳಿ ಕಿರೀಟವನ್ನು ಕದ್ದ ಘಟನೆ ಮಂಬೈನ ಬೋರಿವಲಿ ಪೂರ್ವದ ರಸ್ತೆ ಸಂಖ್ಯೆ 5ರ ದೇಗುಲದಲ್ಲಿ ನಡೆದಿದೆ. ಘನಶ್ಯಾಮ್​​​​ ವರ್ಮಾ (26) ಎಂಬಾತನನ್ನು ಕಸ್ತೂರ್ಬಾ ಪೊಲೀಸರು ಬಂಧಿಸಿದ್ದಾರೆ. ಆತ ದೇವರ ಬೆಳ್ಳಿ ಕಿರೀಟ ಕದ್ದಿಯುತ್ತಿರುವ ದೃಶ್ಯ ದೇವಾಲಯದ ಗರ್ಭಗುಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ವರ್ಮಾ ಉದ್ಯೋಗ ಅರಸಿ ಮುಂಬೈಗೆ ಬಂದಿದ್ದ. ಉದ್ಯೋಗ ಸಿಗದೆ ನಿರುದ್ಯೋಗಿಯಾದ್ದರಿಂದ ಹಣಕ್ಕಾಗಿ ಈ ಕೆಲಸ ಮಾಡಿರುವುದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. 350 ಗ್ರಾಂ ತೂಕದ ಬೆಲೆಬಾಳುವ ಕಿರೀಟವನ್ನು ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ವಿಡಿಯೋದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನೆನ್ನೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿದ್ದಾರೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್‌ ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ವರದಿಯಾಗಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅತ್ಹರ್ ಆಲಿ ಎಂಬವರ ನಿವಾಸ ಮತ್ತು ಕಚೇರಿ ಮೇಲೆ ನೆನ್ನೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಮುಂಜಾನೆ 5:30 ರ ಹೊತ್ತಿಗೆ ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ನಿವಾಸಕ್ಕೆ ತೆರಳಿದ ಲೋಕಾಯುಕ್ತ ಅಧಿಕಾರಿಗಳು ಸುಮಾರು 5 ಗಂಟೆಗಳಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಅತ್ಹರ್ ಆಲಿ ಮನೆಯಲ್ಲಿ ಅಪಾರ ಪ್ರಮಾಣದ ಹಣ, ಚಿನ್ನ ಪತ್ತೆಯಾಗಿದ್ದು, ಅಧಿಕಾರಿಗಳು ಮನೆಗೆ ಬರುತ್ತಿದ್ದಂತೆ ಅತ್ಹರ್ ಆಲಿ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದರು. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಇವರ ಮೊದಲ ಅಂತಸ್ತು ಇತ್ತು ಎನ್ನಲಾಗಿದೆ. ಬ್ಯಾಗ್ ಎಸೆದಿದ್ದನ್ನ ನೋಡಿ ನೆರೆಮನೆ ನಿವಾಸಿ…

Read More

ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್ ವೊಂದರಲ್ಲಿ ಸೆರೆವಾಸದಲ್ಲಿಟ್ಟು 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್ ​ನಲ್ಲಿ ವರದಿಯಾಗಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಎಂಬ ಹೆಸರಿನ ಇಬ್ಬರು ಆರೋಪಿಗಳು ಹೋಟೆಲ್ ​ನಲ್ಲಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಜೊತೆಗೆ ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿ ತಿಳಿಸಿದೆ. ಈ ಘಟನೆಯ ಬಳಿಕ ಜುಲೈ 6 ರಂದು ಗಾಜಿಯಾಬಾದ್​ ನ ಭೋಜ್​ ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮೋದಿನಗರ ಎಂಬ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು. ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ…

Read More

ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನಿರ್ಧಾರವನ್ನು ಪೋನ್ ಪೇ ಸಿಇಒ ಟೀಕಿಸಿದ್ದರು. ಅವರ ಟೀಕೆಯ ವಿರುದ್ಧ ಸಿಡಿದೆದ್ದಿರುವಂತ ಕನ್ನಡಿಗರು ಎಕ್ಸ್ ನಲ್ಲಿ #BoycottPhonePe #UninstallPhonePe ಅಭಿಯಾನವನ್ನೇ ಆರಂಭಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಶೇ.100ರಷ್ಟು ಉದ್ಯೋಗ ಮೀಸಲಾತಿ ಸಂಬಂಧದ ಸರ್ಕಾರದ ನಿರ್ಧಾರದ ಬಗ್ಗೆ ಪೋನ್ ಪೇ ಸಿಇಒ ಸಮೀರ್ ನಿಗಮ್ ಟೀಕಿಸಿದ್ದರು. ಅವರ ಟೀಕೆಗೆ ಕನ್ನಡಿಗರು ವ್ಯಾಪಕ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕರ್ನಾಟಕದ ಕನ್ನಡಿಗರ ವಿರುದ್ಧ ಮಾತನಾಡಿದಂತ ಪೋನ್ ಪೇ ಸಿಇಒ ಸಮೀರ್ ನಿಗಮ್ ಗೆ ಬುದ್ದಿ ಕಲಿಸಬೇಕು ಅಂತ ಕನ್ನಡಿಗರು ನಿರ್ಧರಿಸಿದ್ದಾರೆ. ಅಲ್ಲದೇ ಪೋನ್ ಪೇ ಗೆ 1 ರೇಟಿಂಗ್ ನೀಡಿ, ಮೊಬೈಲ್ ನಿಂದ ಆಪ್ ಡಿಲೀಟ್ ಮಾಡಿ ಅನ್ನೋ ಸಂದೇಶವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಈಗ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…

Read More

ಮಂಡ್ಯ:  ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮ ಕರ್ನಾಟಕದ ಪ್ರಮುಖ ಪ್ರವಾಸೀ ತಾಣಗಳಲ್ಲೊಂದು.  ಇಲ್ಲಿ ಹರಿಯುವ ಕಾವೇರಿ ನದಿಯ ನಡುವಲ್ಲಿ ಚಿಕ್ಕ ಚಿಕ್ಕ ದ್ವೀಪಗಳಿದ್ದು ಇಲ್ಲೆಲ್ಲ ವಲಸೆ ಪಕ್ಷಿಗಳು ವಾಸಿಸುತ್ತವೆ. ಇದೀಗ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿದಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಬೇಸರ ಸುದ್ದಿಯಿದೆ.ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 19ರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು, ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ. ಹಾಗಾಗಿ ದೋಣಿ ವಿಹಾರ ಸ್ಥಗಿತಗೊಂಡಿದ್ದು  ರಂಗನತಿಟ್ಟು ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಶುಕ್ರವಾರ ಬೆಳಗ್ಗೆ 12 ಗಂಟೆ ಸುಮಾರಿಗೆ ಮೈಕ್ರೋಸಾಫ್ಟ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇದರ ಪರಿಣಾಮ ಅನೇಕ ದೊಡ್ಡ ಕಂಪನಿಗಳಲ್ಲಿ ಗೋಚರಿಸಿತು. ಈ ಕಂಪನಿಗಳಲ್ಲಿ, ಅನೇಕ ಉದ್ಯೋಗಿಗಳ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ಗಳು ಮಧ್ಯಾಹ್ನ 12 ರ ಸುಮಾರಿಗೆ ಸ್ವಯಂಚಾಲಿತವಾಗಿ ಸ್ವಿಚ್ ಆಫ್ ಆಗಿವೆ. ಮೈಕ್ರೋಸಾಫ್ಟ್‌ನಲ್ಲಿನ ಈ ದೋಷವು ಪ್ರಪಂಚದಾದ್ಯಂತದ ಅನೇಕ ಪ್ರಸಿದ್ಧ ಕಂಪನಿಗಳಲ್ಲಿ ಕಂಡುಬಂದಿದೆ.ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ವ್ಯವಸ್ಥೆಯಲ್ಲಿ ಇದ್ದಕ್ಕಿದ್ದಂತೆ ನೀಲಿ ಪರದೆಯು ಕಾಣಿಸಿಕೊಳ್ಳಲು ಪ್ರಾರಂಭಿಸಿತು. ಪರದೆಯ ಮೇಲೆ ಸಂದೇಶವೊಂದೂ ಕಾಣಿಸಿಕೊಂಡಿತು. ಅದರಲ್ಲಿ ನಿಮ್ಮ ಸಿಸ್ಟಂ ಅನ್ನು ಮರುಪ್ರಾರಂಭಿಸಬೇಕಾಗಿದೆ ಎಂದು ಬರೆಯಲಾಗಿತ್ತು. ಬ್ಲ್ಯಾಕ್ ಸ್ಕ್ರೀನ್ ಎರರ್, ಅಥವಾ STOP ಕೋಡ್ ಎನ್ನಲಾಗುವ ಬ್ಲೂ ಸ್ಕ್ರೀನ್ ಎರರನ್ನು ವಿಂಡೋಸ್‌ನೊಂದಿಗಿನ ಗಂಭೀರ ಸಮಸ್ಯೆಯು ಅದನ್ನು ಶಡೌನ್​ ಅಥವಾ ಅನಿರೀಕ್ಷಿತವಾಗಿ ಮರುಪ್ರಾರಂಭಿಸಲು ಪ್ರತ್ನಿಸಿದಾಗ ಸಂಭವಿಸಬಹುದು. ಈ ಸಮಯದಲ್ಲಿ ನೀವು ಪರದೆಯ ಮೇಲೆ ಬರೆದ ಸಂದೇಶವನ್ನು ಕಾಣಬಹುದು. ನಿಮ್ಮ ಕಂಪ್ಯೂಟರ್ ಅನ್ನು ಹಾನಿಯಿಂದ ರಕ್ಷಿಸಲು ವಿಂಡೋಸ್ ಅನ್ನು ಮುಚ್ಚಲಾಗಿದೆ ಎಂದು ಈ ಸಂದೇಶವು ಹೇಳುತ್ತದೆ.…

Read More

ಪಾವಗಡ: ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡುವಂತೆ ಸೂಚನೆ ನೀಡಿದರು ಸಹ ಪಾವಗಡ ತಾಲೂಕಿನ ಜೆ.ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಲ್ಲೇನಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಹರಡುವ ಭೀತಿ ಎದುರಾಗಿದೆ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಯಲ್ಲಿಯೇ ಗಲೀಜು ನೀರು ಹರಿಯುತ್ತಿದ್ದು ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ . ಈ ಬಗ್ಗೆ ಗ್ರಾಮದ ಅಶೋಕ್ , ನಾಗರಾಜು, ಬಿ ಎಂ ರಾಮು, ಸುಬ್ಬರಾಯಪ್ಪ ಮಾತನಾಡಿ, ನಮ್ಮ ಗ್ರಾಮದಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಹಾಳಾಗುತ್ತಿದೆ, ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಜೆ.ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮಾಹಿತಿ ನೀಡಿದರು ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More