Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ನಿಮ್ಮ ವಾಹನದ ವಿಂಡ್ಸ್ಕ್ರೀನ್ ಮೇಲೆ ಫಾಸ್ಟ್ಟ್ಯಾಗ್ ಸ್ಟಿಕ್ಕರ್ ಅನ್ನು ನೀವು ಸರಿಪಡಿಸದಿದ್ದರೆ, ನೀವು ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಮಾರ್ಗಸೂಚಿಗಳ ಪ್ರಕಾರ ಸುಸ್ತಿದಾರರನ್ನು ಕಪ್ಪುಪಟ್ಟಿಗೆ ಸೇರಿಸಬಹುದು. ಮುಂಭಾಗದ ವಿಂಡ್ಶೀಲ್ಡ್ನಲ್ಲಿ ಫಾಸ್ಟ್ಟ್ಯಾಗ್ ಅಂಟಿಸದಿದ್ದರೆ ದುಪ್ಪಟ್ಟು ಬಳಕೆದಾರ ಶುಲ್ಕವನ್ನು ವಿಧಿಸಲು ಎಲ್ಲಾ ಬಳಕೆದಾರರ ಶುಲ್ಕ ಸಂಗ್ರಹ ಏಜೆನ್ಸಿಗಳು ಮತ್ತು ರಿಯಾಯಿತಿದಾರರಿಗೆ ವಿವರವಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು (ಎಸ್ಒಪಿ) ನೀಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್ಟಿಎಚ್) ಗುರುವಾರ ತಿಳಿಸಿದೆ. ಈ ಮಾಹಿತಿಯನ್ನು ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಪ್ರಮುಖವಾಗಿ ಪ್ರದರ್ಶಿಸಲಾಗುವುದು, ಮುಂಭಾಗದ ವಿಂಡ್ಶೀಲ್ಡ್ನಲ್ಲಿ ಸ್ಥಿರ ಫಾಸ್ಟ್ಟ್ಯಾಗ್ ಇಲ್ಲದೆ ಟೋಲ್ ಲೇನ್ಗೆ ಪ್ರವೇಶಿಸದಿದ್ದರೆ ದಂಡದ ಬಗ್ಗೆ ಹೆದ್ದಾರಿ ಬಳಕೆದಾರರಿಗೆ ತಿಳಿಸಲಾಗುವುದು ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. “ಶುಲ್ಕ ಪ್ಲಾಜಾದಲ್ಲಿ ವಾಹನ ನೋಂದಣಿ ಸಂಖ್ಯೆಯೊಂದಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಫಾಸ್ಟ್ಟ್ಯಾಗ್ ಮಾಡದ ಪ್ರಕರಣಗಳಲ್ಲಿ ದಾಖಲಿಸಲಾಗುವುದು. ಇದು ವಿಧಿಸಿದ ಶುಲ್ಕ ಮತ್ತು ಟೋಲ್ ಲೇನ್ನಲ್ಲಿ ವಾಹನದ ಉಪಸ್ಥಿತಿಯ ಸರಿಯಾದ…
ಔರಾದ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ಔರಾದ ತಾಲೂಕು ವತಿಯಿಂದ ಜುಲೈ 20ರ ಶನಿವಾರ ಪಟ್ಟಣದ ತಾಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯೂನಿಯನ್ ತಾಲೂಕು ಅಧ್ಯಕ್ಷ ಸಂತೋಷ ಚಾಂಡೇಶ್ವರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಳೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹಾಗೂ ಹಣೇಗಾಂವ ಶಂಕರಲಿಂಗ ಶಿವಾಚಾರ್ಯ ಸ್ವಾಮಿಜಿಗಳು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆ ಶಾಸಕ ಪ್ರಭು ಚವ್ಹಾಣ,ಅಧ್ಯಕ್ಷ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಚಂದ್ರಶೇಖರ ಜಿ., ಮುಖ್ಯ ಅತಿಥಿಗಳಾಗಿ ಭಾಲ್ಕಿ ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ, ಸ್ವಾಮಿ ನಕಿರೆಕಂಟಿ, ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ, ಇಒ ಬಿರೇಂದ್ರಸಿಂಗ್ ಠಾಕೂರ್, ತಾಪಂ ಎಡಿ ಶಿವಕುಮಾರ ಘಾಟೆ, ಅನೀಲಕುಮಾರ ದೇಶಮುಖ ಹಿರಿಯ ಪತ್ರಕರ್ತರು, ವಿಶೇಷ ಉಪನ್ಯಾಸ ಸದಾನಂದ ಜೋಶಿ ಹಿರಿಯ ಸಂಪಾದಕರು, ಪ್ರಾಸ್ತಾವಿಕ ನುಡಿ ಸಂತೋಷ ಚಾಂಡೇಶ್ವರೆ ಮಾಡಲಿದ್ದಾರೆ. ವಿವಿಧ ಸಂಸಘ ಸಂಸ್ಥೆಯ ಮುಖಂಡರು ಸಾರ್ವಜನಿಕರು ಮತ್ತು ವಿವಿಧ…
2024–25ನೇ ಸಾಲಿನ ಆಯವ್ಯಯದ ಕಂಡಿಕೆ–163 ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದೆಂದು ಘೋಷಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ರಾಜ್ಯದ 31 ಜಿಲ್ಲೆಗಳು, 231– ತಾಲ್ಲೂಕುಗಳಲ್ಲಿ 770 ಹೋಬಳಿಗಳ ಪೈಕಿ, ಪರಿಶಿಷ್ಟ ಜಾತಿ– 503, ಪರಿಶಿಷ್ಟ ವರ್ಗದ –144 ಹಾಗೂ ಹಿಂದುಳಿದ ವರ್ಗದ–174 ವಸತಿ ಶಾಲೆಗಳು ಒಟ್ಟಾರೆ 821 ವಸತಿ ಶಾಲೆ / ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ ಮತ್ತು ಕಸಬಾ ಹೋಬಳಿಗಳನ್ನು ಹೊರತುಪಡಿಸಿ, ಒಟ್ಟು 114 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ. 2024-25ನೇ ಸಾಲಿನ ಆಯವ್ಯಯದಲ್ಲಿ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು ಮಂಜೂರು ಮಾಡಲು ಹಾಗೂ ಪ್ರತಿ ಶಾಲೆಗೆ 8 ರಿಂದ 10 ಎಕರೆ ಜಮೀನಿನ ಅವಶ್ಯಕತೆ ಇದ್ದು, 31 ಜಿಲ್ಲೆಗಳ ಪೈಕಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾಸನ,…
ಯಾವುದೇ ರೀತಿಯ ಒಮ್ಮತದ ಸಂಬಂಧವು ತನ್ನ ಸಂಗಾತಿಯ ಮೇಲೆ ಹಲ್ಲೆ ನಡೆಸಲು ವ್ಯಕ್ತಿಗೆ ಪರವಾನಗಿ ನೀಡುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದಾಗ್ಯೂ, ಅತ್ಯಾಚಾರ ಮತ್ತು ವಂಚನೆಗೆ (ಮದುವೆಯ ಭರವಸೆಯ ಮೇಲೆ) ಸಂಬಂಧಿಸಿದಂತೆ ನ್ಯಾಯಾಲಯವು ಆರೋಪವನ್ನು ರದ್ದುಗೊಳಿಸಿತು. ಅರ್ಜಿದಾರರು ಮತ್ತು ದೂರುದಾರರು ಇಬ್ಬರೂ ಸಾಫ್ಟ್ವೇರ್ ವೃತ್ತಿಪರರಾಗಿದ್ದು, ಬೆಂಗಳೂರಿನ ನಿವಾಸಿಗಳಾಗಿದ್ದು, ಸಾಫ್ಟ್ವೇರ್ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದರು. ಅವರು ಐದು ವರ್ಷಗಳಿಂದ ಸಂಬಂಧದಲ್ಲಿದ್ದರು. ಜುಲೈ 2022 ರಲ್ಲಿ, ಅರ್ಜಿದಾರರು ಮದುವೆಯ ಭರವಸೆಯ ಅಡಿಯಲ್ಲಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾರೆ ಮತ್ತು ಈ ಭರವಸೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 417 (ವಂಚನೆಗೆ ಶಿಕ್ಷೆ), 504 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಮದುವೆಯ ಭರವಸೆಯ ಮೇಲೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿ ದೂರುದಾರರು ಫೆಬ್ರವರಿ 2020…
ಅಂಕೋಲ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಇನ್ನು ಈ ಕುರಿತು ಅಂಕೋಲ ತಹಶೀಲ್ದಾರ್ ಮಾತನಾಡಿದ್ದು, ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನ ಸಿಕ್ಕಿದ್ದಾರೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…
ಭಾರೀ ಮಳೆಯು ಸಾವು–ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ ೨-೩ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ. ಮಲೆನಾಡಿನಲ್ಲಿ ಹರಿಯುವ ಸಣ್ಣ ಸಣ್ಣ ಹಳ್ಳಗಳು ಜಲಪಾತದಂತೆ ಬೋರ್ಗರೆ ಯುತ್ತಿವೆ. ಮೂಡಿಗೆರೆ ತಾಲೂಕಿನ ಹಬ್ಬಿಹಳ್ಳ ಜಲಪಾತದ ರೂಪ ಪಡೆದುಕೊಂಡು ಹಾಲ್ನೋರೆಯಂತೆ ಧುಮ್ಮಿ ಕ್ಕುತ್ತಿದೆ. ಗುರುವಾರ ರಾತ್ರಿಯಿಂದ ಬಿಡುವು ನೀಡಿದ್ದ ವರುಣ ಚಿಕ್ಕಮಗಳೂರು ಸುತ್ತಮುತ್ತ ಮತ್ತೇ ಆರ್ಭಟಿಸಲು ಶುರುಮಾಡಿದ್ದಾನೆ. ಕಡೂರು, ತರೀಕೆರೆ, ಅಜ್ಜಂಪುರ ಭಾಗದಲ್ಲೂ ಮಳೆಯಾಗುತ್ತಿದೆ. ಒಟ್ಟಾರೆ ಆರ್ಭಟಿಸುತ್ತಿರುವ ಮಳೆಗೆ ಜಿಲ್ಲೆಯ ಜನರು ಸುಸ್ತಾಗಿದ್ದಾರೆ. ಮಳೆ ನಿಲ್ಲುವಂತೆ ವರುಣ ದೇವನಿಗೆ ಕೈಮುಗಿಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮಲೆನಾಡು ಭಾಗದಲ್ಲಿ ಅಲ್ಪ ವಿರಾಮ ನೀಡಿದ ಪುನರ್ವಸು ಮಳೆ ಮತ್ತೆ ತನ್ನ ಆರ್ಭಟವನ್ನು ಮುಂದೂವರೆಸಿದೆ. ಭದ್ರಾ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಮುಳುಗು ಸೇತುವೆ ಎಂದು ಖ್ಯಾತಿ ಪಡೆದಿರುವ ಹೆಬ್ಬಾಳೆ ಸೇತುವೆ ಭದ್ರಾ ನದಿ ನೀರಿನಲ್ಲಿ ಎರಡನೇ ಬಾರಿ ಮುಳುಗಿದೆ. ಸೇತುವೆ ಮುಳುಗಿರುವ ಪರಿಣಾಮ ಕಳಸ-ಹೊರನಾಡು ಸಂಪರ್ಕ ಮತ್ತೋಮ್ಮೆ ಕಡಿತ ಗೊಂಡಿದೆ. ಕಳಸ ಹೊರನಾಡು ಸೇರಿ ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾದ ಹಿನ್ನಲೆ ಭದ್ರಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಪ್ಪ ಭಾಗದಲ್ಲಿ ಮಳೆಯಾ ಗುತ್ತಿದ್ದು, ಗುಡ್ಡೇತೋಟ ಸಮೀಪದ ಶಾಂತಿಗ್ರಾಮದಲ್ಲಿ ಮನೆಯೊಂದು ನೋಡಾ ನೋಡುತ್ತಿದ್ದಂತೆ ಉರುಳಿ ಬಿದ್ದಿದೆ. ಮನೆ ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಹಿನ್ನಲೆ ಅನಾಹುತ ತಪ್ಪಿದೆ. ಶೃಂಗೇರಿ ತಾಲೂಕಿನ ನೆಮ್ಮಾರ್ ಎಸ್ಟೇಟ್ ಬಳಿ ರಾಷ್ತ್ರೀಯ ಹೆದ್ದಾರಿ ಬಿರುಕು ಬಿಟ್ಟಿದೆ. ಶೃಂಗೇರಿ ಕಾರ್ಕಳ ಸಂಪರ್ಕಿಸುವ ಹೆದ್ದಾರಿ ಇದಾಗಿದ್ದು, ತುಂಗಾನದಿ ಸಮೀಪದಲ್ಲೇ ರಸ್ತೆ ಬಿರುಕು ಕಾಣಿಸಿಕೊಂಡಿದ್ದು ವಾಹನ…
ಕಬಿನಿ ಜಲಾನಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ನಂಜನಗೂಡು ಬಳಿ ಮೈಸೂರು ಊಟಿ ರಸ್ತೆ ಬಂದ್ ಆಗಿದ್ದು, ಮಲ್ಲನ ಮೂಲೆ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿ 766 ಸಂಪೂರ್ಣ ಬಂದ್ ಆಗಿದೆ. ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನ ಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಮೈಸೂರು ಊಟಿ ರಸ್ತೆ ಸಂಚಾರಕ್ಕೆ ಸವಾರ ಪರದಾಡುವಂತಾಗಿದ್ದು, ಸದ್ಯ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮೈಸೂರಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನ ಹುಂಡಿ, ಹೆಜ್ಜಿಗೆ ಮಾರ್ಗ ನಂಜನಗೂಡು ಸಂಚಾರಿಸಲು ಸೂಚನೆ ನೀಡಲಾಗಿದೆ. ಗುಂಡ್ಲುಪೇಟೆ,ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇದರ ಬೆನ್ನಲ್ಲೇ ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಪ್ರಯಾಣಿಕರು ಪರದಾಡುವಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ನಟಿ ಊರ್ವಶಿ ರೌಟೆಲ್ಲಾರ ಖಾಸಗಿ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಊರ್ವಶಿ ರೌಟೆಲ್ಲಾ ಬಾತ್ರೂಂನಲ್ಲಿ ವಿವಸ್ತ್ರರಾಗುತ್ತಿದ್ದಾರೆ. ಆದರೆ ಈ ವಿಡಿಯೋವನ್ನು ಪ್ರಚಾರಕ್ಕಾಗಿ ಖುದ್ದು ಊರ್ವಶಿಯೇ ಲೀಕ್ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಈ ಹಿಂದೆ ಕ್ರಿಕೆಟಿಗ ರಿಷಬ್ ಪಂಥ್ ಬಗ್ಗೆ ಇಲ್ಲ ಸಲ್ಲದ ಮಾತನಾಡಿ ಸುದ್ದಿಯಾಗಿದ್ದ ನಟಿ ಊರ್ವಶಿ ರೌಟೆಲಾ ಈಗ ತಮ್ಮದೇ ಖಾಸಗಿ ವಿಡಿಯೋವನ್ನು ಪ್ರಚಾರಕ್ಕಾಗಿ ವೈರಲ್ ಮಾಡಿದ್ದಾರೆ ಎನ್ನುವ ಆರೋಪ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಊರ್ವಶಿ ರೌಟೆಲ್ಲಾ ಬಾತ್ರೂಂ ವಿಡಿಯೋ ಲೀಕ್ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಮಾಡಲಾಗುತ್ತಿದೆ. ಈ ಹಿಂದೆಯೂ ಕೆಲವು ಬಾರಿ ಊರ್ವಶಿ ರೌಟೆಲ್ಲಾ ಪ್ರಚಾರಕ್ಕಾಗಿ ಕೆಲವು ಸ್ಟಂಟ್ ಗಳನ್ನು ಮಾಡಿದ್ದಿದೆ. ಈ ಹಿಂದೆ ತಮ್ಮ ತಾರಾ ಮೌಲ್ಯದ ಬಗ್ಗೆ ಸುಳ್ಳು ಹೇಳಿ ಟ್ರೋಲ್ ಆಗಿದ್ದರು. ರಿಷಬ್ ಪಂತ್ ಬಗ್ಗೆ ಮಾತನಾಡಿಯೂ ಟ್ರೋಲ್ ಆಗಿದ್ದರು. ಈಗ ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿಸಿ ಸುದ್ದಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ಯಾವುದೋ ಸಿನಿಮಾ…
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡ ಕುಸಿತದಿಂದ ಸುಮಾರು 10 ಕಿ.ಮೀ. ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಂಕರ್ ಓಡಾಟಕ್ಕೆ ತಾತ್ಕಾಲಿಕ ತಡೆ ವಿಧಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಸಂಚಾರಕ್ಕೆ ಪ್ರಮುಖ ಆಧಾರವಾಗಿದ್ದ ಶಿರಾಡಿ ಘಾಟ್ ಬಂದ್ ನಿಂದ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಗಿದೆ. ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ನಲ್ಲೂ ಪ್ರಯಾಣ ದುಸ್ಥರವಾದ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸಕಲೇಶಪುರದವರೆಗೆ ತೆರಳುವ ಸಾರಿಗೆ ಬಸ್ ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಮಂಗಳೂರು ಕಡೆಗೆ ಹೋಗೊ ಬಸ್ ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆ ಒಡ್ಡಲಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…