Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಜಿಟಿ ಮಾಲ್ ನಲ್ಲಿ ಇತ್ತೀಚೆಗೆ ಪಂಚೆ ಉಟ್ಟುಕೊಂಡು ಬಂದ ಕಾರಣಕ್ಕೆ ರೈತನನ್ನು ಒಳಗೆ ಬಿಡದೇ ಅವಮಾನಿಸಿದ ಘಟನೆ ಈಗ ಸದನದಲ್ಲೂ ಪ್ರಸ್ತಾಪವಾಗಿದೆ. ಈ ಬಗ್ಗೆ ಎಲ್ಲಾ ಶಾಸಕರೂ ಪ್ರಸ್ತಾಪ ಮಾಡಿದ್ದು ಮಾಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಹಿತಿ ನೀಡಿದ್ದಾರೆ. ಮೊನ್ನೆಯಷ್ಟೇ ಹಾವೇರಿ ಜಿಲ್ಲೆಯ ರೈತರೊಬ್ಬರು ಪಂಚೆ ಉಟ್ಟುಕೊಂಡು ತಮ್ಮ ಮಗನ ಜೊತೆ ಸಿನಿಮಾ ನೋಡಲು ಜಿಟಿ ಮಾಲ್ ಗೆ ಬಂದಿದ್ದಾಗ ಅವರ ಡ್ರೆಸ್ ನೋಡಿ ಒಳಗೆ ಬಿಟ್ಟುಕೊಳ್ಳದೇ ಮಾಲ್ ಸಿಬ್ಬಂದಿ ಅವಮಾನಿಸಿದ್ದರು. ಈ ಬಗ್ಗೆ ಅವರ ಪುತ್ರ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿದ್ದರು. ಇದು ಬೆಳಕಿಗೆ ಬರುತ್ತಿದ್ದಂತೇ ಕೆಲವು ಕನ್ನಡ ಸಂಘಟನೆಗಳು ಮಾಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲ, ರೈತನನ್ನು ಕರೆದುಕೊಂಡು ಮಾಲ್ ಸಿಬ್ಬಂದಿಯಿಂದ ಕ್ಷಮೆ ಕೇಳಿಸಿದ್ದರು. ಬಳಿಕ ಮಾಲ್ ಇನ್ ಚಾರ್ಜ್ ಕ್ಷಮೆ ಕೇಳಿ ಸನ್ಮಾನಿಸಿ ಕಳುಹಿಸಿದ್ದರು. ಈ ಘಟನೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ಇಂದು ಸದನದಲ್ಲೂ ಈ ವಿಚಾರ ಚರ್ಚೆಯಾಗಿದೆ.…
ಕೊರಟಗೆರೆ ತಾಲೂಕಿನ ಪುಣ್ಯಕೋಟಿ ಫ್ಯಾಕ್ಟರಿಯಲ್ಲಿ ನಡೆದ ಬಾಯ್ಲರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವಾಹಿನಿಯ ವರದಿಯ ಬೆನ್ನಲ್ಲೇ ಅಧಿಕಾರಿ ವರ್ಗ ಎಚ್ಚೆತ್ತುಕೊಂಡಿದ್ದು, ಯಾವ ಇಲಾಖೆಯಿಂದಲೂ ಅನುಮತಿ ಪಡೆಯದೆ ಅನಧಿಕೃತ ಪುಣ್ಯಕೋಟಿ ಫ್ಯಾಕ್ಟರಿ ಮಾಲೀಕನಿಗೆ ಸಂಬಂಧಪಟ್ಟ ಇಲಾಖೆಗಳಿಂದ ನೋಟಿಸ್ ಜಾರಿ ಮಾಡಲಾಗಿದೆ. ಈ ಫ್ಯಾಕ್ಟರಿಯಲ್ಲಿ ಹಾಲು ಮಾರಾಟಕ್ಕೆ ಮಾತ್ರವೇ ಅನುಮತಿ ಪಡೆದುಕೊಳ್ಳಲಾಗಿದೆ. ಆದರೆ ಇಲ್ಲಿ ಮಸಾಲೆ ಮಜ್ಜಿಗೆ ಹಾಗೂ ಪೇಡ, ಜಾಮೂನ್ ಫ್ಯಾಕ್ಟರಿ ನಡೆಸಲಾಗುತ್ತಿದೆ. ಅದೂ ಅಲ್ಲದೇ ಯಾವುದೇ ಭದ್ರತೆ ಇಲ್ಲದೆ ಮನೆಯೊಳಗೆ ದೊಡ್ಡ ದೊಡ್ಡ ಮಿಷನ್ ಗಳ ಅಳವಡಿಸಿ ಬಳಕೆ ಮಾಡಲಾಗುತ್ತಿದೆ. ಮನೆಯೊಳಗೆ ಫ್ಯಾಕ್ಟರಿ ತೆಗೆಯಲು ಅನುಮತಿ ಕೊಟ್ಟವರು ಯಾರು..??? ಹಣದ ಆಮಿಷಕ್ಕೆ ಅನುಮತಿ ಕೊಟ್ಟರೆ ಸಂಬಂಧಪಟ್ಟ ಅಧಿಕಾರಿಗಳು ? ಅನಧಿಕೃತ ಫ್ಯಾಕ್ಟರಿ ಎಂದು ಗೊತ್ತಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು ಯಾಕೆ? ಇಷ್ಟೆಲ್ಲ ಅನಾಹುತವಾದರು ಮಾಲೀಕನ ವಿರುದ್ಧ ಕ್ರಮ ಕೈಗೊಂಡಿಲ್ಲ ಯಾಕೆ..? ಎನ್ನುವ ಪ್ರಶ್ನೆಗಳು ಇದೀಗ ವ್ಯಾಪಕವಾಗಿ ಕೇಳಿ ಬಂದಿದೆ. ಪಾಲಿಸಬೇಕಾದ ನಿಯಮಗಳು ಗಾಳಿಗೆ ತೂರಿ 15 ವರ್ಷದಿಂದ ಮಾಲಿಕ ಫ್ಯಾಕ್ಟರಿ…
ಕೇದಾರನಾಥ ದೇಗುಲದ ಕೇದಾರನಾಥ ಧಾಮದಲ್ಲಿ ಚಿನ್ನ ಕಣ್ಮರೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರ ಹೇಳಿಕೆ ನೀಡಿದ್ದು, ಇದು ಎಲ್ಲೆಡೆ ಸಂಚಲನ ಮೂಡಿಸಿದೆ. ಕೇದಾರನಾಥ ದೇಗುಲದಿಂದ 228 ಕಿಲೋಗ್ರಾಂ ಚಿನ್ನ ಕಳ್ಳತನವಾಗಿದೆ ಎಂದು ಸ್ವಾಮಿಜಿಯವರು ಆರೋಪ ಮಾಡಿದ್ದಾರೆ. ಅವರು ಮಾಡಿರುವ ಆರೋಪಕ್ಕೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಉತ್ತರ ನೀಡಿದ್ದಾರೆ. ಸ್ವಾಮಿ ಅವಿಮುಕ್ತೇಶ್ವರಾನಂದರು ಹೇಳಿಕೆಗಳನ್ನು ನೀಡುವ ಬದಲು ಪ್ರಾಧಿಕಾರವನ್ನು ಸಂಪರ್ಕಿಸಿ ತನಿಖೆಗೆ ಒತ್ತಾಯಿಸಬೇಕು ಅಥವಾ ಸಾಕ್ಷ್ಯಾಧಾರಗಳಿದ್ದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ಗೆ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಅಜೇಂದ್ರ ತಿಳಿಸಿದ್ದಾರೆ. ಜುಲೈ 15 ಸೋಮವಾರ ಸ್ವಾಮಿ ಅವಿಮುಕ್ತೇಶ್ವರಾನಂದರು ಕೇದಾರನಾಥದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದರು. “ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಇವರು ಏಕೆ ಚಕಾರ ಎತ್ತುತ್ತಿಲ್ಲ? ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣ ಮಾಡಲು ಹೊರಟಿದ್ದಾರೆ. ಅಲ್ಲಿಯೂ ಮತ್ತೊಂದು ಹಗರಣ ನಡೆಯಲಿದೆ. ಕೇದಾರನಾಥದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ;…
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡು ಬಳಿಕ ಡಿಲೀಟ್ ಮಾಡಿದ್ದಾರೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಿಎಂ ಕನ್ನಡಿಗರಿಗೆ ಉದ್ಯೋಗದಲ್ಲಿ ಆಧ್ಯತೆ ನೀಡುವ ನಿರ್ಧಾರಕ್ಕೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ–ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂದೇಶವನ್ನು ಡಿಲೀಟ್ ಮಾಡಿಕೊಂಡಿದ್ದಾರೆ. ಇದಕ್ಕೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಉದ್ಯಮಿಗಳ ಒತ್ತಡಕ್ಕೆ ಮಣಿದು ಸಿಎಂ ಸಂದೇಶ ಡಿಲೀಟ್ ಮಾಡಿದ್ರಾ? ಅಥವಾ ಮಸೂದೆಯಲ್ಲಿರುವುದು ತಾವು ಸಾಮಾಜಿಕ ಜಾಲತಾಣದಲ್ಲಿ ಹೇಳಿರುವ ಮಾಹಿತಿ ಬೇರೆ ಬೇರೆ ಆಗಿದ್ಯಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಸಾಮಾಜಿಕ…
ಕ್ರೈಸ್ತ ಪ್ರಾರ್ಥನಾ ಸಭೆಯೊಂದು ನಡೆಯುತ್ತಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಸಂಘ ಪರಿವಾರದ ಕಾರ್ಯಕರ್ತರು ಮನೆಯಲ್ಲಿದ್ದ ಕನಿಷ್ಠ ಏಳು ಮಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಅಲ್ಲಿದ್ದವರ ವಿರುದ್ಧ ಸಂಘ ಪರಿವಾರದ ಸದಸ್ಯರು ಮತಾಂತರದ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಾರ್ಥನಾ ಸಭೆ ದೀಕ್ಷಾ ಪೌಲ್ ಎಂಬವರ ಮನೆಯಲ್ಲಿ ನಡೆಯುತ್ತಿತ್ತು. ದೀಕ್ಷಾ ಅವರ ಪತಿ ರಾಜೀಶ್ ಹರಿದ್ವಾರ್ ನಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಘಟನೆ ಸಂಬಂಧ ನೆಹ್ರೂ ಕಾಲನಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಸಂಘ ಪರಿವಾರದ 11 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ತಮ್ಮ ಮನೆ ಮೇಲೆ ದಾಳಿ ನಡೆಸಿದ ಗುಂಪಿನ ನೇತೃತ್ವವನ್ನು ದೇವೇಂದ್ರ ದೋಭಲ್ ಎಂಬವರು ವಹಿಸಿದ್ದರು ಎಂದು ದೀಕ್ಷಾ ಆರೋಪಿಸಿದ್ದಾರೆ. ಈ ವ್ಯಕ್ತಿಯ ಫೇಸ್ಬುಕ್ ಪ್ರೊಫೈಲ್ ಪ್ರಕಾರ ಈತ ಮಾಜಿ ಸೈನಿಕ ಹಾಗೂ ಆರೆಸ್ಸೆಸ್ ಸದಸ್ಯ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಇತ್ತೀಚೆಗೆ ಪ್ರತಿಷ್ಠಿತ ಕುಟುಂಬಗಳ ಮಕ್ಕಳು ಐಷಾರಾಮಿ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಅಮಾಯಕರ ಸಾವಿಗೆ ಕಾರಣವಾದ ಘಟನೆಗಳು ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿವೆ. ಈ ನಡುವೆ, 2016ರಲ್ಲಿ ನಡೆದಿದ್ದ ಇದೇ ರೀತಿಯ ಪ್ರಕರಣದಲ್ಲಿ, ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರಿಗೆ ಬಲಿಯಾಗಿದ್ದ 32 ವರ್ಷದ ವ್ಯಕ್ತಿಯ ಪೋಷಕರಿಗೆ 1.98 ಕೋಟಿ ರೂ. ಪರಿಹಾರ ಕಾರು ಮಾಲಕನ ಕಡೆಯಿಂದ ನೀಡುವಂತೆ ವಿಮಾ ಕಂಪೆನಿಗೆ ಕೋರ್ಟ್ ಆದೇಶಿಸಲಾಗಿದೆ. ದಿಲ್ಲಿಯ ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ (ಎಂಎಸಿಟಿ) ಈ ಆದೇಶ ಪ್ರಕಟಿಸಿದೆ. ಅಪಘಾತದಲ್ಲಿ ಬಲಿಯಾದ ಸಿದ್ಧಾರ್ಥ್ ಶರ್ಮಾ ಪೋಷಕರಿಗೆ 30 ದಿನಗಳ ಒಳಗೆ 1.21 ಕೋಟಿ ರೂ ಪರಿಹಾರ ಹಾಗೂ ಸುಮಾರು 77.61 ಲಕ್ಷ ರೂ ಸೇರಿದಂತೆ 1.98 ಕೋಟಿ ರೂ ಹಣ ಪಾವತಿಸುವಂತೆ ನ್ಯಾಯಮಂಡಳಿ ನಿರ್ದೇಶಿಸಿದೆ. 2016ರ ಏಪ್ರಿಲ್ 4ರಂದು ದಿಲ್ಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಕ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದು 32 ವರ್ಷದ ಸಿದ್ಧಾರ್ಥ್ ಶರ್ಮಾ ಜೀವ ಕಳೆದುಕೊಂಡಿದ್ದರು. ಈ ಭಯಾನಕ ಅಪಘಾತದ ದೃಶ್ಯವು…
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಿಂದಲೇ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಬೇನಾಮಿಯಾಗಿ ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರರ ಮನೆ…
ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಗೃಹ ಮಂತ್ರಾಲಯ ಭಾರತ ಸರ್ಕಾರದ ಅಧಿಸೂಚನೆಯಂತೆ ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳನ್ನು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024-25ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಪ್ರಸ್ತಾವನೆ / ಮನವಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ರಲ್ಲಿ ಲಭ್ಯವಿರುತ್ತದೆ. ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು 2024ರ ಆಗಸ್ಟ್ 23ರೊಳಗಾಗಿ…
ಕರ್ನಾಟಕ ಸರ್ಕಾರ ಕನ್ನಡಿಗರಿಗೆ ಒಂದು ಸುವಾರ್ತೆಯನ್ನು ತಂದಿದೆ. ಇನ್ನು ಮುಂದೆ ರಾಜ್ಯದ ಖಾಸಗಿ ಕಂಪನಿಗಳಲ್ಲಿ ಶೇ. 50–75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲು ಮಾಡುವ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಈ ಹೊಸ ನಿಯಮವನ್ನು ಕೇಂದ್ರವಾಗಿಟ್ಟುಕೊಂಡು, ಸರ್ಕಾರ ಸ್ಥಳೀಯ ಜನರಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸಲು ಬದ್ಧವಾಗಿದೆ. ಅಗತ್ಯವಿರುವ ನೀತಿ: ಇತ್ತೀಚೆಗೆ, ಸ್ಥಳೀಯ ಕನ್ನಡಿಗರು ತಮ್ಮ ಸ್ವಂತ ರಾಜ್ಯದಲ್ಲಿ ಕೆಲಸದ ಅವಕಾಶಗಳು ಕಡಿಮೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅನೇಕ ಕಂಪನಿಗಳು ರಾಜ್ಯದ ಹೊರಗಿನ ಪ್ರತಿಭೆಯನ್ನು ಪ್ರಾಧಿಕಾರಕ್ಕೆ ತರಿಸಿಕೊಂಡು, ಕನ್ನಡಿಗರನ್ನು ತಳ್ಳಿಹಾಕುತ್ತಿದ್ದವು. ಈ ಹಿನ್ನಲೆಯಲ್ಲಿ, ಈ ಹೊಸ ಮೀಸಲಾತಿ ನೀತಿ ಕನ್ನಡಿಗರಿಗೆ ಹೆಚ್ಚು ಕೆಲಸದ ಭರವಸೆ ನೀಡಲು ಸಹಾಯಕವಾಗಲಿದೆ. ಪ್ರಯೋಜನಗಳು: ಸ್ಥಳೀಯ ಉದ್ಯೋಗಾವಕಾಶಗಳು: ಈ ಮೀಸಲಾತಿ ನೀತಿಯು ಕನ್ನಡಿಗರು ತಮ್ಮ ರಾಜ್ಯದಲ್ಲಿಯೇ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗಲಿದೆ. ಆರ್ಥಿಕ ಪ್ರಗತಿ: ಕನ್ನಡಿಗರು ಹೆಚ್ಚು ಉದ್ಯೋಗಕ್ಕೆ ಸೇರಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿಯು ಉತ್ತಮವಾಗಲಿದೆ. ಸಾಮಾಜಿಕ ಸುಧಾರಣೆ: ಸ್ಥಳೀಯ ಜನರ ಜೀವನಮಟ್ಟ ಹೆಚ್ಚಾಗುವುದು, ಹಾಗೆಯೇ ಸಾಮಾಜಿಕ ಸಮಾನತೆ ಸ್ಥಾಪನೆಯಾಗುವುದು. ಪ್ರತಿಕ್ರಿಯೆಗಳು: ರಾಜ್ಯದ…
ಜುಲೈ 17 ಅನ್ನು ಪ್ರಪಂಚದಾದ್ಯಂತ ಅಂತರರಾಷ್ಟ್ರೀಯ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. 1998ರಲ್ಲಿ ರೂಮ್ ಸಂಸ್ಥೆಯ ಅಂಗಸಂಸ್ಥೆಯಾದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯದ (ICC) ಸ್ಥಾಪನೆಗೊಂಡ ದಿನವಾಗಿದ್ದು, ಈ ದಿನದ ಆಚರಣೆ ಮಾನವೀಯತೆ, ನ್ಯಾಯ ಮತ್ತು ಮಾನವ ಹಕ್ಕುಗಳ ಪರ ಹೋರಾಟದ ಸಂಕೇತವಾಗಿದೆ. ಈ ವಿಶೇಷ ದಿನವು ನ್ಯಾಯದ ಮಹತ್ವವನ್ನು ನೆನಪಿಸುತ್ತದೆ ಮತ್ತು ಕಾನೂನು ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಹಾಸಿಲು ಮಾಡುತ್ತದೆ. ಮಾನವೀಯ ಹಕ್ಕುಗಳ ಉಲ್ಲಂಘನೆ, ಗಂಭೀರ ಅಪರಾಧಗಳು, ಮತ್ತು ಅತಿರೇಕದ ಘಟನೆಗಳನ್ನು ತಡೆಹಿಡಿಯಲು ಮತ್ತು ನ್ಯಾಯ ಒದಗಿಸಲು ಬದ್ಧತೆ ನೀಡಿದೆಯೆಂದು ಪ್ರತಿಬಿಂಬಿಸುತ್ತದೆ. ವಕೀಲನಾಗಿ, ನಾನು ಭಾರತೀಯ ಸಂವಿಧಾನದ ಸಿದ್ಧಾಂತಗಳಿಗೆ ತಲೆಬಾಗುತ್ತೇನೆ ಮತ್ತು ನನ್ನ ಕೊನೆಯ ಉಸಿರು ಇರುವವರೆಗೂ ಕಷ್ಟದಲ್ಲಿರುವ ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ಪ್ರತಿಜ್ಞೆ ಮಾಡುತ್ತೇನೆ. ನಮ್ಮ ದೇಶದ ನ್ಯಾಯ ವ್ಯವಸ್ಥೆಯ ಆಧಾರ ಸತ್ಯ ಮತ್ತು ಧರ್ಮದ ಮೇಲೆ ನಿಂತಿದೆ. ಸಂವಿಧಾನವು ನಮಗೆ ಹಕ್ಕುಗಳನ್ನು ಮಾತ್ರವಲ್ಲ, ಕರ್ತವ್ಯಗಳನ್ನೂ ನೀಡುತ್ತದೆ. ಈ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸುವ ಮೂಲಕ ಮಾತ್ರ ನಿಜವಾದ ನ್ಯಾಯವನ್ನು ಪ್ರಜಾಪ್ರಭುತ್ವದಲ್ಲಿ ಸಾಧಿಸಲು…