Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ನಾಗಿಣಿ, ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಅವರು ರೀಲ್ಸ್ ಮಾಡಲು ಹೋಗಿ ಕಾಲುಜಾರಿ ಬಿದ್ದು, ಮುಖಕ್ಕೆ ಗಾಯ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಸುಂದರವಾದ ಜಾಗದಲ್ಲಿ, ಫಾಲ್ಸ್ ನಲ್ಲಿ ನೀರು ಹಿಂದೆ ಝರಿಯಂತೆ ಬೀಳುತ್ತಿರುವುದು ಈ ವೀಡಿಯೋದಲ್ಲಿ ಕಾಣಬಹುದು, ಅದರ ಒಂದು ಕಡೆ ಬಂಡೆ, ಒಂದು ಕಡೆ ನೀರಿದ್ದು, ಸಣ್ಣ ಕಾಲು ದಾರಿಯಲ್ಲಿ ದೀಪಿಕಾ ದಾಸ್ ಅವರು ತಮ್ಮ ಕೈಯಲ್ಲಿ ಹೂವನ್ನು ಹಿಡಿದುಕೊಂಡು ನಡೆದುಕೊಂಡು ಬರುತ್ತಿರುವಾಗಲೇ ದೀಪಿಕಾ ಕಾಲು ಸ್ಪಿಪ್ ಆಗಿ ಬಿದ್ದಿದ್ದು, ಕೂಡಲೇ ಅವರ ಮುಖ ಪಕ್ಕದಲ್ಲಿದ್ದ ಬಂಡೆಕಲ್ಲಿಗೆ ಹೊಡೆದಿದೆ. ರೀಲ್ಸ್ ಮಾಡಲು ಹೋಗಿ ದೀಪಿಕಾ ಬಿದ್ದಿದ್ದಾರೆ ಎನ್ನುವುದು ಅವರ ಟ್ಯಾಗ್ಸ್ನಿಂದ ಗೊತ್ತಾಗಿದೆ. ಮುಖಕ್ಕೆ ಗಾಯವಾಗಿದೆಯೇ ಎಂದು ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ದೀಪಿಕಾ ದಾಸ್ ಹೌದು ಎಂದಿದ್ದಾರೆ. ಮುಖದ ಎಡಭಾಗಕ್ಕೆ ಗಾಯವಾಗಿದ್ದು, ಈಗ ಸುಧಾರಿಸಿಕೊಂಡಿದ್ದೀನಿ ಎಂದು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಸಿಲಿಕಾನ್ ಸಿಟಿಯ ಹೆಚ್ಚು ಟ್ರಾಫಿಕ್ ಜಾಮ್ ಪೀಡಿತ ರಸ್ತೆಗಳಲ್ಲಿ ಏರ್ ಪೋರ್ಟ್ ರೋಡ್ ಕೂಡ ಒಂದು. ಎಷ್ಟು ನಿಯಮಗಳನ್ನು ಹಾಕಿದರೂ ಕೂಡ ಅಪಘಾತ ಮತ್ತು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದೇ ವೇಳೆ ಸಂಚಾರ ಪೊಲೀಸರು ಹೊಸ ರೂಲ್ಸ್ ಹಾಕಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ಲೇನ್ ಅಶಿಸ್ತು ನಿವಾರಿಸಲು, ಲೇನ್ ನಿಯಮಗಳನ್ನು ಅನುಸರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಾಹನಗಳ ವೇಗದಿಂದಾಗಿ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅನೇಕ ಅಪಘಾತಗಳು ವರದಿಯಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ರಸ್ತೆ (ಬಿಬಿ ರಸ್ತೆ — ಎನ್ ಎಚ್ -44) ನಲ್ಲಿರುವ ಎಲ್ಲಾ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ನಿಗದಿತ ಲೇನ್ನಲ್ಲಿ ಚಲಾಯಿಸಬೇಕು ಎಂದು ಬೆಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ತಪ್ಪದೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.…
ಬೆಳೆಗಳಿಂದ ತುಂಬಿ ತುಳುಕುವ ತೋಟ, ಹೊಲ ಗದ್ದೆಗಳಿಗೆ ಜನರ ದೃಷ್ಟಿ ತಾಗಬಾರದು ಅಥವಾ ಕಾಡು ಪ್ರಾಣಿ, ಪಕ್ಷಿಗಳ ಉಪಟಳ ಇರಬಾರದು ಎಂದು ರೈತರು ದೃಷ್ಟಿ ಗೊಂಬೆ ಹಾಕಿದರೆ ಇಲ್ಲೊಬ್ಬ ರೈತ ನಟಿಯರಾದ ಸನ್ನಿಲಿಯೋನ್ ಮತ್ತು ರಚಿತರಾಮ್ ಅವರ ಬ್ಯಾನರ್ ಹಾಕಿ ಸಾಕಷ್ಟು ಸುದ್ದಿಯಾಗಿದ್ದಾನೆ. ನಟಿಯರಾಗಿ ಕೋಟ್ಯಾಂತರ ಅಭಿಮಾನಿಗಳಿಗೆ ನೆಚ್ಚಿನ ಹೀರೋಯಿನ್ ಆಗಿರುವ ಸನ್ನಿಲಿಯೋನ್ ಹಾಗೂ ರಚಿತರಾಮ್ ಇಲ್ಲೊಬ್ಬ ರೈತನಿಗೆ ದೃಷ್ಟಿಗೊಂಬೆಯಾಗಿದ್ದಾರೆ. ತಾನು ಬೆಳೆದ ಟಮೋಟೋಗೆ ಯಾರ ಕಣ್ಣು ಬೀಳಬಾರದೆಂದು ಈ ಆಸಾಮಿ ಹೀರೋಯಿನ್ ಗಳ ಫೋಟೋವನ್ನೇ ಹೊಲಗಳಲ್ಲಿ ಹಾಕಿಸಿದ್ದಾನೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಅವರು ತಾವು 5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದಾರೆ. ಇನ್ನೇನು ಕಾಯಿ ಬಿಡುವ ಸಮಯವಿದೆ. ಹೀಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ, ಒಳ್ಳೆಯ ಫಸಲು ಬಂದು ಒಳ್ಳೆ ಲಾಭ ಸಿಗಲಿ ಅನ್ನೋ…
ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಾದ ಹಗರಣಕ್ಕೆ ಸಂಬಂಧಿಸಿದಂತೆ ಸ್ವಪಕ್ಷದ ನಾಯಕರು ಸೇರಿದಂತೆ ಆಡಳಿತ ಪಕ್ಷವನ್ನು ಶಾಸಕ ಯತ್ನಾಳ್ ಸದನದಲ್ಲಿ ತರಾಟೆಗೆತ್ತಿಕೊಂಡರು. ಸದನದಲ್ಲಿ ಹಗರಣಗಳ ಕುರಿತು ಪ್ರಸ್ತಾಪಿಸಿದ ಅವರು, SIT ಯಿಂದ ಯಾವುದೇ ಕಾರಣಕ್ಕೂ ನ್ಯಾಯ ಸಿಗುವುದಿಲ್ಲ, ಸರ್ಕಾರಗಳು, ರಾಜಕೀಯ ನಾಯಕರು ಅಧಿಕಾರಿಗಳನ್ನು ಬಲಿಪಶುಗಳಾಗಿ ಮಾಡುತ್ತಾರೆ. ಹೀಗೆ ಎರಡ್ಮೂರು ವರ್ಷ ಎಳೆದ ಬಳಿಕ ಮತ್ತೊಂದು ಹಗರಣ ಬಯಲಾಗುತ್ತೆ. ಆಗ ಹಳೆಯದು ಮರೆತುಹೋಗುತ್ತೆ’ ಎಂದಿದ್ದಾರೆ. ಅಲ್ಲದೆ ವಿಪಕ್ಷಗಳು ಹೋರಾಟ ಮಾಡುತ್ತಲೇ ಇರುತ್ತವೆ. ಇದನ್ನು ಮಾಧ್ಯಮಗಳ ಭಾರೀ ಹೋರಾಟ, ಗಡಗಡ ನಡುಗಿದ ಸರ್ಕಾರ ಎಂದೆಲ್ಲಾ ತೋರಿಸುತ್ತಾರೆ. ಆದರೆ ಇಲ್ಲಿ ಗಡಗಡನೂ ಇಲ್ಲ ಪಡಪಡನೂ ಇಲ್ಲ. ಮತ್ತೆ ಪ್ರತಿಭಟನೆ ಆದ ಬಳಿಕ ಮನೆ ಬಂದು ಮುಖ್ಯಮಂತ್ರಿಗಳಿಗೆ ಫೋನ್ ಮಾಡಿ, ಸರ್ ತಪ್ಪು ತಿಳಿಯಬೇಡಿ, ಮೇಲಿನ ಪ್ರೆಶರ್, ಹೈಕಮಾಂಡ್ ಒತ್ತಡ ಇದೆ. ಹೀಗಾಗಿ ನಾವು ಮಾಡಲೇ ಬೇಕು. ನಮ್ಮ ಯಾವುದನ್ನು ತೆಗೆಯಬೇಡಿ ಎನ್ನುತ್ತಾರೆ’ ಎಂದು ಯತ್ನಾಳ್ ಹೇಳಿದ್ದಾರೆ. ಯತ್ನಾಳ್ ಅವರ ಈ ಮಾತಿಗೆ ಇಡೀ ಸದನವೇ…
ಬಾಲಿವುಡ್ ನಟ ವಿಕ್ಕಿ ಕೌಶಲ್ ತಮ್ಮ ಚಿತ್ರ ‘ಬ್ಯಾಡ್ ನ್ಯೂಸ್’ನಿಂದ ಇದೀಗ ಭಾರೀ ಸುದ್ದಿ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಈಗ ಅಭಿಮಾನಿಗಳು ಚಿತ್ರಕ್ಕಾಗಿ ಕಾಯುತ್ತಿದ್ದಾರೆ ಆದರೆ ಬಿಡುಗಡೆಗೂ ಮುನ್ನ ಚಿತ್ರಕ್ಕೆ ಹಿನ್ನಡೆಯಾಗಿದೆ. ವಿಕ್ಕಿ ಕೌಶಲ್ ಮತ್ತು ತೃಪ್ತಿ ದಿಮ್ರಿ ಅಭಿನಯದ ‘ಬ್ಯಾಡ್ ನ್ಯೂಸ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಬಿಡುಗಡೆಗೂ ಮುನ್ನವೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಕತ್ತರಿ ಹಾಕಿದ್ದು, ಅದೂ ವಿಶೇಷ ದೃಶ್ಯಕ್ಕೆ. ಬ್ಯಾಡ್ ನ್ಯೂಸ್ನ ‘ಜಾನಂ’ ಹಾಡಿನಲ್ಲಿ ವಿಕ್ಕಿ ಕೌಶಲ್ ಮತ್ತು ತೃಪ್ತಿ ದಿಮ್ರಿ ತುಂಬಾ ರೋಮ್ಯಾಂಟಿಕ್ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇವುಗಳಲ್ಲಿ ಇಬ್ಬರೂ ಚುಂಬನದ ದೃಶ್ಯಗಳನ್ನೂ ನೀಡಿದ್ದಾರೆ. ಈಗ ಒಟ್ಟು ಮೂರು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ ಎನ್ನಲಾಗುತ್ತಿದೆ. ಇದರಲ್ಲಿ ಎರಡು ಚುಂಬನದ ದೃಶ್ಯಗಳಿವೆ. ಆಡಿಯೋದಲ್ಲಿ ಯಾವುದೇ ಕಟ್ ಮಾಡಿಲ್ಲ. ದೃಶ್ಯ ಮಾತ್ರ ಬದಲಾಗಿದೆ. ಬಾಲಿವುಡ್ ಹಂಗಾಮಾ ವರದಿ ಪ್ರಕಾರ, ಚಿತ್ರದಲ್ಲಿ ಒಟ್ಟು 27 ಸೆಕೆಂಡುಗಳ ಕಿಸ್ಸಿಂಗ್ ಸೀನ್ ಗಳನ್ನು ಕಟ್ ಮಾಡಲಾಗಿದೆ. ಸೆನ್ಸಾರ್ ಮಂಡಳಿ…
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ. ಗುಜರಾತ್ ನಲ್ಲಿರುವ ವಿರಾಲ್ ಶಾ ನಿವಾಸದಿಂದ ಮುಂಬೈ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳು ನೆನ್ನೆ ಬೆಳಿಗ್ಗೆ ಅವರನ್ನು ಬಂಧಿಸಿದ್ದಾರೆ. ಪೋಸ್ಟ್ ನಂತರ ಪೊಲೀಸರು ಮದುವೆ ಕಾರ್ಯಕ್ರಮದ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎನ್ನಲಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಜುಲೈ 12 ರಂದು ನಡೆದ ಮದುವೆ ಸಮಾರಂಭದಲ್ಲಿ ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿ ಫಾರ್ಮಾ ಉದ್ಯಮಿಗಳಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು. ವ್ಯಾಪಕ ಕಳವಳವನ್ನು ಉಂಟುಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಬಗ್ಗೆ ಸಂಪೂರ್ಣ ತನಿಖೆಯ ನಂತರ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.…
ಭಾರೀ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ 7 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಎನ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಸಂಸದರು ತಿಳಿಸಿದರು. ಗುಡ್ಡ ಕುಸಿತವಾದ ಜಾಗದಲ್ಲಿ ಒಂದು ಚಹಾ ಅಂಗಡಿ ಇತ್ತು. ಇಲ್ಲಿ ಕೆಲವರು ಚಹಾ ಸೇವಿಸುತ್ತಿದ್ದರು. ಹೀಗಾಗಿ ಎಷ್ಟು ಮಂದಿ ಅಲ್ಲಿದ್ದರು ಎನ್ನುವ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ. ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಟ್ಯಾಂಕರ್ ನಿಲ್ಲಿಸಿ ಚಹಾ ಸೇವಿಸುತ್ತಿದ್ದಾಗ ದುರಂತ ಸಂಭವಿಸಿದೆ. ಕುಸಿತದ ರಭಸಕ್ಕೆ ಪಕ್ಕದ ನದಿಯ ಬದಿಗೆ ಟ್ಯಾಂಕರ್ ಎಸೆಯಲ್ಪಟ್ಟಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತೆಲಂಗಾಣದಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ಮಗುವೊಂದು ಮಂಗನಂತೆ ಬಾಲದೊಂದಿಗೆ ಹುಟ್ಟಿದೆ. ಇದೀಗ ಮಗುವಿನ ಬಾಲವನ್ನು ವೈದ್ಯರು ಶಸ್ತ್ರಚಕಿತ್ಸೆ ಮಾಡಿ ತೆಗೆದುಹಾಕಿದ್ದಾರೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಿಳೆಯೊಬ್ಬರು ಬಾಲವಿದ್ದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಮೂರು ತಿಂಗಳಾಗುವ ಹೊತ್ತಿಗೆ ಬಾಲ 15 ಸೆಂ.ಮೀ ಬೆಳೆದಿದೆ. ಇದರಿಂದ ಆತಂಕಗೊಂಡ ಪೋಷಕರು ಬೀಬಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಬಾಲ ಮಗುವಿನ ಬೆನ್ನು ಮೂಳೆಯೊಂದಿಗೆ ಕೂಡಿಕೊಂಡಿರುವುದನ್ನು ಗುರುತಿಸಿ, ಶಸ್ತ್ರಚಿಕಿತ್ಸೆ ಮಾಡಿ ಬಾಲವನ್ನು ಕತ್ತರಿಸಿದ್ದಾರೆ. ಇದೀಗ ಆಪರೇಷನ್ ನಡೆದು ಆರು ತಿಂಗಳಾಗಿದ್ದು, ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಆದರೆ ಶಸ್ತ್ರಚಿಕಿತ್ಸೆಯಾದ ಬಳಿಕ ಮಗುವಿಗೆ ನರ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಗು ಆರೋಗ್ಯದಿಂದ ಇರುವುದು ಅಪರೂಪ. ಜಗತ್ತಿನಲ್ಲಿ ಇಂತಹ ಕೇವಲ 40 ಪ್ರಕರಣಗಳನ್ನಷ್ಟೇ ಗುರುತಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಇನ್ಮುಂದೆ ಜೊಮ್ಯಾಟೋನಲ್ಲಿ ಆರ್ಡರ್ ಹಿಸ್ಟರಿಯನ್ನು ಡಿಲೀಟ್ ಮಾಡುವ ಆಯ್ಕೆಯನ್ನು ಗ್ರಾಹಕರಿಗೆ ನೀಡಲಾಗಿದೆ. 2023ರಲ್ಲಿ ಕರಣ್ ಸಿಂಗ್ ಸೇರಿದಂತೆ ಹಲವು ಬಳಕೆದಾರು ಆರ್ಡರ್ ಹಿಸ್ಟರಿ ಡಿಲೀಟ್ ಮಾಡುವ ಆಯ್ಕೆಯನ್ನು ಆಪ್ ನಲ್ಲಿ ಒದಗಿಸಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದೀಗ ಜೊಮ್ಯಾಟೋ ಸಿಇಓ ದೀಪೇಂದ್ರ ಗೋಯಲ್ , ತಮ್ಮ ಆಪ್ನಲ್ಲಿ ಹೊಸ ಫೀಚರ್ ಸೇರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. ಎಂಟು ತಿಂಗಳ ಬಳಿಕ ಫುಡ್ ಆರ್ಡರ್ ಹಿಸ್ಟರಿ ಡಿಲೀಟ್ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಲಾಗಿದೆ. ಜುಲೈ 12ರಂದು ದೀಪೇಂದ್ರ ಗೋಯಲ್ ಎಕ್ಸ್ ಖಾತೆಯ ಮೂಲಕ ಡಿಲೀಟ್ ಆಯ್ಕೆಯ ಸೇರಿಸಿರುವ ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ನೀಡುವ ಸಂದರ್ಭದಲ್ಲಿ ಕರಣ್ ಸಿಂಗ್ ಹೆಸರನ್ನು ಉಲ್ಲೇಖಿಸಿ ದೀಪೇಂದ್ರ ಗೋಯಲ್ ವಿಷಯವನ್ನು ಹಂಚಿಕೊಂಡಿದ್ದು, ಹೊಸ ಆಯ್ಕೆ ಸೇರಿಸಲು ತಾಂತ್ರಿಕ ಕಾರಣಗಳಿಂದ ವಿಳಂಬವಾಯ್ತು. ಈ ಹೊಸ ಫೀಚರ್ ಎಲ್ಲಾ ಗ್ರಾಹಕರಿಗೆ ಲಭ್ಯವಾಗಲಿದ ಎಂದು ದೀಪೇಂದ್ರ ಗೋಯಲ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ವೃದ್ಧನೊಬ್ಬ ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುರುಗಾಂವ್ ನಲ್ಲಿ ವರದಿಯಾಗಿದೆ. ಬೀದಿ ನಾಯಿ ಖಾಸಗಿ ಅಂಗವನ್ನು ಪದೇ ಪದೇ ಮುಟ್ಟಿ ಕಾಮ ತೃಷೆ ತೀರಿಸಿಕೊಳ್ಳಲು ಯತ್ನಸಿದ್ದಾನೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಗುರುಗಾಂವ್ ಸೆಕ್ಟರ್ 48 ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಾಯಿ ಆತ್ಮೀಯವಾಗುತ್ತಿದ್ದಂತೆ ವೃದ್ಧ ನಾಯಿಯ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿರುವ ಎರಡು ವಿಡಿಯೋಗಳು ವೈರಲ್ ಆಗಿವೆ. ಕಳೆದ ಹಲವು ದಿನಗಳಿಂದ ಈತ ಇದೇ ರೀತಿ ಮಾಡುತ್ತಿದ್ದಾನೆ ಎಂಬ ಆರೋಪಗಳು ಆತನ ಮೇಲಿವೆ. ಈತ ನಾಯಿಗೆ ಬಿಸ್ಕೆಟ್ ಸೇರಿದಂತೆ ಇತರ ಆಹಾರ ಹಾಕುತ್ತಿದ್ದ. ನಾಯಿ ಆತ್ಮೀಯವಾಗುತ್ತಿದ್ದಂತೆ ಖಾಸಗಿ ಅಂಗ ಮುಟ್ಟಿ, ಉದ್ರೇಕಗೊಳಿಸಿ ತನ್ನ ಕಾಮ ತೃಷೆಯನ್ನು ತೀರಿಸುವ ಯತ್ನ ಮಾಡುತ್ತಿದ್ದಾನೆ. ಈ ವೃದ್ಧನ ದೌರ್ಜನ್ಯದ ಬಗ್ಗೆ ಜನಾಕ್ರೋಶ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…