Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ತುಮಕೂರು: ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೆಕೆರೆ ಗ್ರಾಮದ ರೈತರ ಜಮೀನುಗಳಿಗಿಂದು ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಸಾಲ, ಬೆಂಬಲ ಬೆಲೆ ಖರೀದಿ ಮತ್ತಿತರ ಕೃಷಿ ಇಲಾಖೆಯ ಸವಲತ್ತು ವಿತರಣೆಗೆ ಬೆಳೆ ಸಮೀಕ್ಷೆ ಅತೀ ಮುಖ್ಯ. ರೈತರೇ ಸ್ವತಃ ಮೊಬೈಲ್ ಆ್ಯಪ್ ಮೂಲಕ ತಮ್ಮ ಜಮೀನಿನ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು. ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಮಾಹಿತಿಯನ್ನು ಗ್ರಾಮಗಳಿಗೆ ನಿಯೋಜಿಸಿರುವ ವಿವಿಧ ಇಲಾಖೆಗಳ ಮೇಲ್ವಿಚಾರಣಾ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ತಮ್ಮ ಜಮೀನಿನ ಬೆಳೆ ವಿವರದ ಮಾಹಿತಿ ಬೇಕಿದ್ದಲ್ಲಿ ಬೆಳೆ ದರ್ಶಕ ಮೊಬೈಲ್ ಆ್ಯಪ್ ಬಳಸಿ ವೀಕ್ಷಿಸಬಹುದಾಗಿದೆ. ಬೆಳೆ ದರ್ಶಕ…
ಮಧುಗಿರಿ : ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು. ಗೈರಾಗಿರುವುದು ನನ್ನ ಗಮನಕ್ಕೆ ಬಂದರೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ರವರು ಎಚ್ಚರಿಸಿದರು. ಶಿಕ್ಷಕರಾದವರು ಪ್ರತಿ ಮಗುವಿನ ಮೇಲು ಗಮನವಿಡಬೇಕು. ಮಕ್ಕಳು ಗೈರು ಹಾಜರಾತಿ ಪಡೆದರೆ ಅದಕ್ಕೆ ಕಾರಣವನ್ನು ಪಡೆದು ಪೋಷಕರಿಗೆ ಮಾಹಿತಿಯನ್ನು ನೀಡಬೇಕು. ಮಕ್ಕಳು ಶಾಲೆಗೆ ಬಾರದಿದ್ದರೆ ಮಕ್ಕಳಿಗೆ ಒಂದು ದಿನದ ಪಾಠ ಮತ್ತೊಂದು ದಿನಕ್ಕೆ ಅರ್ಥವಾಗುವುದಿಲ್ಲ. ಆ ಮಗುವಿನ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ ಎಂದರು. ಮಕ್ಕಳ ಜೊತೆ ಸಂವಾದ ನಡೆಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪ್ರತಿಯೊಬ್ಬರು ಶಾಲೆಗೆ ಹಾಜರಾಗಬೇಕು. ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ಕಲಿಯಬೇಕು ಎಂದರು. ನಂತರ ಮಕ್ಕಳಿಗೆ ಮಗ್ಗಿ ಹಾಗೂ ಗಣಿತದ ಪಾಠವನ್ನು ಹೇಳಿಕೊಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ತುಮಕೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಬಡತನ ನಿರ್ಮೂಲನಾ ಸಮಿತಿಯ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ನೂರುನ್ನೀಸ ಅವರು ಜಿಲ್ಲೆಯ ಹಲವಾರು ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎನ್.ಆರ್.ಕಾಲೋನಿ, ವಡ್ಡರಹಳ್ಳಿ, ಬೆಳಗುಂಬ, ಬೆಳಗುಂಬ ಲಂಬಾಣಿ ತಾಂಡ್ಯ ಮೊದಲಾದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅವಧಿ, ತೂಕ, ದಾಸ್ತಾನನ್ನು ಪರಿಶೀಲಿಸಿದರು. ಕಟ್ಟಡಗಳ ದುರಸ್ತಿ, ಅಂಗನವಾಡಿ ಕೇಂದ್ರಗಳ ಹೊರಾಂಗಣ ಹಾಗೂ ಒಳಾಂಗಣದ ಸ್ವಚ್ಛತೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು,. ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಬರುವ ಮಾರ್ಗ ಮಧ್ಯೆ ಬೆಳಗುಂಬ ರಸ್ತೆ ಮಾರ್ಗದ ಬದಿಯಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಹಗ್ಗದ ಮೇಲೆ ನಡೆಯುತ್ತಾ ದೊಂಬರಾಟ ಆಡುತ್ತಿದ್ದು, ಅವರ ಪೋಷಕರು ಅವರಿಂದ ಭಿಕ್ಷಾಟನೆ ಮಾಡಿಸುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಮಕ್ಕಳು ಹಾಗೂ ಪೋಷಕರನ್ನು ವಿಚಾರಿಸಿದಾಗ ಪೋಷಕರು ಮಾತನಾಡುತ್ತಾ ನಾವು ಚಂಡಿಗಡ ಮೂಲದವರಾಗಿದ್ದು, ಇಡೀ…
ಕನ್ನಡದ ಖ್ಯಾತ ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರು ಇಂದು ವಿಧಿವಶರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ನಾಳೆ ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರಿಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸದಾನಂದ ಸುವರ್ಣರು ನಿರ್ಮಿಸಿದ್ದ ”ಘಟಶ್ರಾದ್ಧ” ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ”ಕುಬಿ ಮತ್ತು ಇಯಾಲ” ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ.ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸಾಹಿತ್ಯದಲ್ಲೂ ಆಸಕ್ತಿ ಹೊಂದಿದ್ದ ಅವರು ಸಣ್ಣ ಕತೆ, ಕಾದಂಬರಿಗಳನ್ನು ಕೂಡ ಬರೆದಿದ್ದಾರೆ. ತಬರನ ಕತೆ, ಮನೆ, ಕ್ರೌರ್ಯ ಚಿತ್ರಗಳ ನಿರ್ವಾಹಕ ನಿರ್ಮಾಪಕರು. ಈ ಸಿನೆಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. 1989ರಲ್ಲಿ ತೇಜಸ್ವಿ ಅವರ ಸಣ್ಣ ಕತೆ ಆಧರಿತ ಕುಬಿ…
ಸಿಎಂ ಜೊತೆ ಚರ್ಚಿಸಿ ಪರಿಹಾರ ಕಲ್ಪಿಸಲು ಕ್ರಮ ವಿಧಾನ ಪರಿಷತ್ ನಲ್ಲಿ ಗೃಹ ಸಚಿವ ಪರಮೇಶ್ವರ ಹೇಳಿಕೆ ವಿಧಾನಪರಿಷತ್: ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ ನಲ್ಲಿ ಸದಸ್ಯ ತಿಪ್ಪಣ್ಣ ಕಮಕನೂರು ಅವರು ಕೇಳಿದ, ‘ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಮತ್ತು ಪ್ರಕರಣದ ವಿಚಾರಣಗೆ ಫಾಸ್ಟ್ರ್ಯಾಕ್ ಕೋರ್ಟ್’ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. ಸಾಮಾನ್ಯವಾಗಿ ಕೊಲೆ ಪ್ರಕರಣಗಳಿಗೆ ಸರ್ಕಾರ ಪರಿಹಾರ ನೀಡುವುದಿಲ್ಲ. ಯುವತಿಯ ಕುಟುಂಬದ ಬಡತನವನ್ನು ನೋಡಿದಾಗ ಎಂಥವರಿಗಾದರೂ ಕನಿಕರ, ಅನುಕಂಪ ಬರುತ್ತದೆ. ಹೀಗಾಗಿ ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿ ಪರಿಹಾರ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಘಟನೆ ನಡೆದ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿ, ಯುವತಿಯ…
ವಿಧಾನಸೌಧ: ಬೆಂಗಳೂರು ನಗರದಲ್ಲಿನ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ವಿಧಾನಸೌಧದಲ್ಲಿ ಪ್ರಶ್ನಾವಳಿ ಅವಧಿ ವೇಳೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಪಾರ್ಕಿಂಗ್ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ನಗರದಲ್ಲಿ ಇನ್ಫ್ರಾಸ್ಟ್ರಕ್ಚರ್ ಗಳಿಗೆ ನಿಯಮಗಳನ್ನು ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟಲು ಬಿಬಿಎಂಪಿ, ಸಾರಿಗೆ ಇಲಾಖೆಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕು. ಇಂತಹ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬೆಂಗಳೂರು ನಗರದಲ್ಲಿ 1194 ನೋ ಪಾರ್ಕಿಂಗ್ ರಸ್ತೆಗಳೆಂದು ಗುರುತಿಸಲಾಗಿದೆ. 2022ರಲ್ಲಿ 12,07,651 ಪ್ರಕರಣಗಳಲ್ಲಿ 20,84,56,000 ರೂ. ದಂಡ, 2023ರಲ್ಲಿ 11,30,855 ಪ್ರಕರಣಗಳಿಗೆ ರೂ 37,30,22,000, 2024 (ಜೂನ್ 3ರವರೆಗೆ) 5,21,326 ಪ್ರಕರಣಗಳನ್ನು ದಾಖಲಿಸಿ…
ಕೆಲವು ಸಂದರ್ಭಗಳಲ್ಲಿ ಸಿಗ್ನಲ್ ಜಂಪ್ ಮಾಡಿ ಅದಕ್ಕೆ ದಂಡ ಪಾವತಿಸುವಂತೆ ಚಲನ್ ಬಂದರೆ ಏನು ಮಾಡಬೇಕು ಎಂದೂ ಬೆಂಗಳೂರು ಸಂಚಾರಿ ಪೊಲೀಸರೇ ಸಲಹೆ ನೀಡಿದ್ದಾರೆ. ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ವಿಚಾರವಾಗಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ಗೆ ದಾರಿ ಮಾಡುವಾಗ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಕ್ಯಾಮರಾಗಳ ದೃಶ್ಯ ಆಧರಿಸಿ ದಂಡ ವಿಧಿಸಿದ ಉದಾಹರಣೆಗಳಿವೆ. ಇದಕ್ಕೆ ಭಯಪಡಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಏನು ಮಾಡಬೇಕು ಎಂದೂ ತಿಳಿಸಿದ್ದಾರೆ. ಸಿಗ್ನಲ್ ಜಂಪ್ಗಾಗಿ ಚಲನ್ಗಳನ್ನು ಪಡೆದ ಪ್ರಯಾಣಿಕರು ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯ ಗಮನಕ್ಕೆ ತರಬಹುದು ಎಂದು ಎಂಎನ್ ಅನುಚೇತ್ ತಿಳಿಸಿದ್ದಾರೆ. ಅಥವಾ ಕರ್ನಾಟಕ ರಾಜ್ಯ ಪೊಲೀಸ್…
ಪಾವಗಡ: ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟಿಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಿರತ ರೈತರು ಟೋಲ್ ಗೇಟ್, ಅಂಬೇಡ್ಕರ್ ವೃತ್ತದ ಬಳಿ ಘೋಷಣೆ ಕೂಗುತ್ತಾ ಗಮನಸೆಳೆದರು. ಈ ವೇಳೆ ರಾಜ್ಯಾಧ್ಯಕ್ಷ ಬಸವರಾಜಪ್ಪ ಮಾತನಾಡಿ, ತಾಲ್ಲೂಕಿನ ರೈತರಿಗೆ ಆಗುತ್ತಿರುವ ಕೊರತೆಗಳನ್ನು ನೀಗಿಸಬೇಕು…ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರ ಸಾಗುವಳಿ ಚೀಟಿ ನೀಡಬೇಕು ಪಹಣಿ ಮಾಡಿಸಿಕೊಡಬೇಕು ಎಂದು ಆಗ್ರಹಪಡಿಸಿದರು. ಕಂದಾಯ ಇಲಾಖೆಯಿಂದ ಪಹಣಿ ಮಾಡಿಸಿಕೊಂಡ ಜಾಗದಲ್ಲಿ ಅರಣ್ಯ ಇಲಾಖೆಯವರು ಸಸಿಗಳನ್ನು ನೆಟ್ಟು ಅನ್ಯಾಯ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಅವರು ಆರೋಪಿಸಿದರು. ನೂತನವಾಗಿ ಆಯ್ಕೆಯಾದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಪೂಜಾರಪ್ಪ ಮಾತನಾಡಿ, ಈ ಹಿಂದೆ ಹಿಂದೆ 25 ಸಾವಿರ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅನುಕೂಲ ಮಾಡುತ್ತಿದ್ದರು. ಆದರೆ ಈಗ 2 ರಿಂದ 6 ಲಕ್ಷದವರೆಗೂ ಹಣ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ.…
ಹೆಚ್.ಡಿ.ಕೋಟೆ: ತಾಲೂಕಿನ ಹೆಚ್. ಮಟಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ ಕೋಂ ಸೋಮನಾಯಕ ಎಂಬುವವರ ಮನೆಯು ತುಂಬಾ ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕುಸಿದು ಬಿದ್ದಿದ್ದು, ಪರಿಣಾಮವಾಗಿ ಮನೆಯಲ್ಲಿದ್ದ ಸೋಮನಾಯಕ ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಮನೆಯ ಹೆಂಚು, ಮನೆಯ ಸಾಮಗ್ರಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಗ್ರಾಮಲೆಕ್ಕಾಧಿಕಾರಿ ಸರ್ಕಾರದಿಂದ ಬರುವ ಸಹಾಯಧನವನ್ನು ಬಿಡುಗಡೆ ಮಾಡಿಸಿ ಕೊಡುತ್ತೇವೆ ಎಂದಿದ್ದಾರೆ. ಇದೇ ವೇಳೆ ಸೋಮನಾಯಕ ಅವರು, ನಾನು ತುಂಬಾ ಬಡವನಾಗಿದ್ದು, ನನಗೆ ವಾಸಿಸಲು ಮನೆ ಇಲ್ಲ, ಗ್ರಾಮ ಪಂಚಾಯತಿ ವತಿಯಿಂದನೂ ನನಗೆ ಮನೆ ಆಗಿಲ್ಲ, ಸರ್ಕಾರದ ಸಹಾಯಧನದ ಬದಲು ನನಗೆ ಮನೆ ನಿರ್ಮಿಸಿ ಕೊಡಬೇಕು ಮನವಿ ಮಾಡಿಕೊಂಡರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿಯವರ ವಿವಾಹ ಸಮಾರಂಭದ ಪ್ರಯುಕ್ತ ಇಡೀ ಕುಟುಂಬ ವಿವಾಹ ಆಚರಣೆಯಲ್ಲಿ ಮುಳುಗಿತ್ತು. ಈ ನಡುವೆ ಈ ಸಮಾರಂಭದ ವೇಳೆ ಅನಂತ್ -ರಾಧಿಕಾ ಆರತಕ್ಷತೆಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಅಡ್ಡಿಯನ್ನುಂಟುಮಾಡಿದ್ದಾರೆ. ಜುಲೈ 14ರಂದು ನಡೆದ ಅಂಬಾನಿ ಕುಟುಂಬದ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಪ್ರವೇಶಿಸಲು ಯತ್ನಸಿದ ಯೂಟ್ಯೂಬರ್ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಕ್ರಮಕ್ಕೆ ಯೂಟ್ಯೂಬರ್ ವೆಂಕಟೇಶ್ ನರಸಯ್ಯ (26) ಮತ್ತು ಇನ್ನೊಬ್ಬ ವ್ಯಕ್ತಿ ಉದ್ಯಮಿ ಎಂದು ಹೇಳಿಕೊಂಡ ಲುಕಾಮ್ ಮೊಹಮ್ಮದ್ ಶಫಿ ಶೇಖ್ (28) ಆಂಧ್ರಪ್ರದೇಶದಿಂದ ಮುಂಬೈಗೆ ಬಂದಿದ್ದರು. ಇವರಿಗೆ ವಿವಾಹಕ್ಕೆ ಆಹ್ವಾನ ನೀಡದಿದ್ದರೂ ಕೂಡ ಗೇಟ್ ಕ್ರಾಸಿಂಗ್ ಮಾಡಿದ್ದಕ್ಕಾಗಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ವೆಂಕಟೇಶ್ ಮತ್ತು ಲುಕಮ್ ಇಬ್ಬರೂ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ ಗೆ ಆಗಮಿಸಿದ್ದರು. ಅನುಮಾನಗೊಂಡ ಭದ್ರತಾ ಅಧಿಕಾರಿಗಳು ಅವರನ್ನು…