Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಅತ್ಯಂತ ಭಾರವಾದ ಜೀವಿ ಅಂದರೆ ನೀಲಿ ತಿಮಿಂಗಿಲ. ಈ ಪ್ರಾಣಿಯ ಹೃದಯವು ವಿಶ್ವದಲ್ಲೇ ದೊಡ್ಡದಾಗಿದೆ ಎಂದು ನಿಮಗೆ ಗೊತ್ತು. ಅದರ ಹೃದಯದ ಉದ್ದ, ಅಗಲ ಮತ್ತು ತೂಕವನ್ನು ತಿಳಿದರೆ ನೀವು ಬೆಚ್ಚಿಬೀಳುತ್ತೀರಿ. ಈ ಬೃಹತ್ ತಿಮಿಂಗಿಲದ ಹೃದಯವನ್ನು ವಿಜ್ಞಾನಿಗಳು ಅಳೆದಿದ್ದಾರೆ. ಅವರು ನಿಜವಾಗಿಯೂ ತಿಮಿಂಗಿಲದ ಹೃದಯವು ಪ್ರಪಂಚದ ಯಾವುದೇ ಪ್ರಾಣಿಗಳಿಗಿಂತ ದೊಡ್ಡದಾಗಿದೆಯಾ ಎಂದು ಕಂಡುಹಿಡಿಯಲು ಪ್ರಯತ್ನಿಸಿದರು. ನೀಲಿ ತಿಮಿಂಗಿಲದ ಹೃದಯ ಫೋಕ್ಸ್ ವ್ಯಾಗನ್ ಬೀಟಲ್ ಕಾರಿನ ಗಾತ್ರವಷ್ಟೇ ಇದೆ ಎಂದು ಅಧ್ಯಯನ ತಿಳಿಸಿದೆ. ಇದು 14 ಅಡಿ ಉದ್ದ, 06 ಅಡಿ ಅಗಲ, 05 ಅಡಿ ಎತ್ತರ ಎಂದು ಕೆಲವರು ಹೇಳುತ್ತಾರೆ. ತಿಮಿಂಗಿಲವನ್ನು ಸಾಮಾನ್ಯವಾಗಿ 40,000 ಪೌಂಡ್ ಗಳ ತೂಕ ಎಂದು ಪರಿಗಣಿಸಲಾಗುತ್ತದೆ. ಆದರೆ ಅದರ ಹೃದಯವು 400 ಪೌಂಡ್ ಗಳ ತೂಕವನ್ನು ಹೊದಿದೆ. ಆದರೆ ಈ ಭೂಮಿಯ ಮೇಲಿನ ಯಾವ ಪ್ರಾಣಿಗೂ ಅಷ್ಟು ದೊಡ್ಡ ಹೃದಯವಿಲ್ಲ ಎಂದು ಅಧ್ಯಯನವು ತಿಳಿಸುತ್ತದೆ. ಕೆನಡಾದ ಟೊರೊಂಟೊದಲ್ಲಿರುವ ರಾಯಲ್ ಒಂಟಾರಿಯೊ ಮ್ಯೂಸಿಯಂನಲ್ಲಿ ನೀಲಿ ತಿಮಿಂಗಿಲ…
ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024(ಕೆಸೆಟ್)ನ ಅಧಿಸೂಚನೆಯು ಪ್ರಕಟವಾಗಿದ್ದು, ನ.24ರಂದು ಪರೀಕ್ಷೆಯನ್ನು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ತಿಳಿಸಿದೆ. ನವೆಂಬರ್ 24ರಂದು ಕೆ–ಸೆಟ್ ಪರೀಕ್ಷೆ ನಡೆಯಲ್ಲಿದ್ದು, ಜುಲೈ 22 ರಿಂದ ಆ. 22 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಕೆಸೆಟ್ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ವಿಶ್ವವಿದ್ಯಾಲಯ/ಪ್ರಥಮ ದರ್ಜೆ ಪದವಿ ಕಾಲೇಜು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಸ್ನಾತಕೋತ್ತರ ಪದವಿಯನ್ನು ಪಡೆದ ಅಭ್ಯರ್ಥಿಗಳು ಹಾಗೂ ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯಗಳಲ್ಲಿಯೇ ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪರೀಕ್ಷೆಗೆ ಅರ್ಜಿಯನ್ನು ಮತ್ತು ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿಯೇ ಸಲ್ಲಿಸಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸುವುದಿಲ್ಲ. ಕೆಸೆಟ್ ಪರೀಕ್ಷೆಯಲ್ಲಿ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಎರಡು ಪತ್ರಿಕೆಗಳು ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ.…
ಇದತ್ ಪ್ರಕರಣದಲ್ಲಿ ಖುಲಾಸೆಗೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ಭಾನುವಾರ ಹೊಸ ತೋಶಖಾನಾ ಪ್ರಕರಣದಲ್ಲಿ ಆರು ದಿನಗಳ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನ ಮೂಲದ ಎಆರ್ವೈ ನ್ಯೂಸ್ ವರದಿ ಮಾಡಿದೆ. ಉತ್ತರದಾಯಿತ್ವ ನ್ಯಾಯಾಲಯದ ನ್ಯಾಯಾಧೀಶರು ಇಮ್ರಾನ್ ಖಾನ್ ಮತ್ತು ಅವರ ಪತ್ನಿ ವಿರುದ್ಧ ತನಿಖೆ ನಡೆಸುವಂತೆ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೋ (ಎನ್ ಎಬಿ) ಗೆ ಆದೇಶಿಸಿದ್ದಾರೆ ಎಂದು ಎಆರ್ವೈ ನ್ಯೂಸ್ ವರದಿ ಮಾಡಿದೆ. ಫೆಡರಲ್ ಸರ್ಕಾರದ ಅನುಮೋದನೆಯ ನಂತರ, ಪಾಕಿಸ್ತಾನದ ಕಾನೂನು ಮತ್ತು ನ್ಯಾಯ ಸಚಿವಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಅವರ ಪತ್ನಿ ವಿರುದ್ಧ ಹೊಸ ತೋಶಖಾನಾ ಪ್ರಕರಣದಲ್ಲಿ ಜೈಲು ಶಿಕ್ಷೆಯನ್ನು ಅನುಮೋದಿಸಿ ಅಧಿಸೂಚನೆ ಹೊರಡಿಸಿದೆ ಎಂದು ಎಆರ್ವೈ ನ್ಯೂಸ್ ವರದಿ ಮಾಡಿದೆ. ಎನ್ ಎಬಿ ಸುಗ್ರೀವಾಜ್ಞೆ 1999 ರ ಸೆಕ್ಷನ್ 16-ಬಿ ಅಡಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಯನ್ನು ಜೈಲಿನ…
ಪಾವಗಡ: ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಕಿರ್ಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿಯನ್ನು ಪಾವಗಡ ಶಾಸಕರಾದ ಹೆಚ್.ವಿ .ವೆಂಕಟೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಾವಡ ಬರದ ನಾಡು ಎಂದು ಕರೆಯಲ್ಪಟ್ಟರೂ ವಿದ್ಯಾಭ್ಯಾಸಕ್ಕೆ ಯಾವುದೇ ಬರ ಇಲ್ಲ, ಏಕೆಂದರೆ ಪಾವಡ ಪಟ್ಟಣದಲ್ಲಿ ಓದಿದಂತಹ ಅನೇಕರು ಇಂದು ಉತ್ತಮ ಹುದ್ದೆಗಳಲ್ಲಿ ಇರುವಂತದ್ದು ನಾವು ಕಾಣುತ್ತಿದ್ದೇವೆ. ಇವತ್ತು ಕೆಎಸ್ ಐಎಸ್ ಹಾಗೂ ಯುನಿವರ್ಸಿಟಿ ಲೆವೆಲ್ ಗಳಲ್ಲಿ ದೊಡ್ಡ ದೊಡ್ಡ ಹುದ್ದೆಗಳು ಇರುವುದು ನಾವು ಗಮನಿಸಬಹುದು ಎಂದರು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಗೌರವ ಅಧ್ಯಕ್ಷ ಚಿನ್ನ ವೆಂಕಟರಮಣಪ್ಪ, ಸಂಘದ ಅಧ್ಯಕ್ಷರಾಗಿ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಸ್ಟುಡಿಯೋ ಅಮರ್, ಪ್ರಧಾನ ಕಾರ್ಯದರ್ಶಿಯಾಗಿ ಫಾಸ್ಟಿಂಗ್ ಮೈಕಲ್ ಪ್ರದೀಶ್, ಕಾರ್ಯದರ್ಶಿಯಾಗಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೆ.ಓ.ಮಾರಪ್ಪ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ನಾಗರತ್ನಮ್ಮ ಎಸ್., ಪದಾಧಿಕಾರಿಗಳಾದ ವೆಂಕಟೇಶಲು, ಮಲ್ಲಿಕಾರ್ಜುನ, ಇಮ್ರಾನ್ ಉಲ್ಲಾ, ಸತ್ಯನಾರಾಯಣ, ನರಸಿಂಹ ಮೂರ್ತಿ, ಚಿನ್ನ…
ಪಾವಗಡ: ರಾಯದುರ್ಗ–ತುಮಕೂರು ಮಾರ್ಗದ ನೂತನ ರೈಲ್ವೇ ಕಾಮಗಾರಿಯನ್ನು ಕೇಂದ್ರ ರೈಲ್ವೇ ಖಾತೆ ಸಚಿವ ವಿ.ಸೋಮಣ್ಣ ಶನಿವಾರ ರೊಪ್ಪ ಗ್ರಾಮದ ಬಳಿ ಅಧಿಕಾರಿ ಗಳೊಂದಿಗೆ ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, 2026 ಡಿಸೆಂಬರ್ 30 ರೊಳಗೆ ರಾಯದುರ್ಗ -ತುಮಕೂರು ಮಾರ್ಗದ ರೈಲ್ವೇ ಕಾಮಗಾರಿ ಮುಕ್ತಾಯಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ದವಾಗಲಿದೆ ಎಂದು ಭರವಸೆ ನೀಡಿದರು. ರಾಯದುರ್ಗ–ತುಮಕೂರು ರೈಲ್ವೇ ಯೋಜನೆಗೆ 700 ಕೋಟಿ ಹಾಗೂ ಚಿತ್ರದುರ್ಗ ತುಮಕೂರು ರೈಲ್ವೆ ಕಾಮಗಾರಿಗೆ 300 ಕೋಟಿ ರೂಪಾಯಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕಾಮಗಾರಿ ಚುರುಕುಗೊಂಡಿವೆ ಎಂದರು. ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪ, ಮಾಜಿ ಶಾಸಕ ಕೆ.ಎಂ ತಿಮ್ಮರಾಯಪ್ಪ, ರಾಜ್ಯ ರೈತ ಮೋರ್ಚಾದ ಶಿವಪ್ರಸಾದ್, ಬಿಜೆಪಿಯರಂಗಣ್ಣ, ಅಶೋಕ್, ಡಾ.ವೆಂಕಟರಾಮಯ್ಯ, ಅಲಕುಂದರಾಜ್, ಜೆಡಿಎಸ್ನ ಅಂಜಿನಪ್ಪ, ಎನ್.ಎ.ಈರಣ್ಣ, ಶಂಕರರೆಡ್ಡಿ, ಬತ್ತಿನೇನಿ ನಾನಿ, ನಲ್ದಾನಿ ಸುರೇಂದ್ರ, ಸೊಗಡು ವೆಂಕಟೇಶ್ ಇದ್ದರು. ವರದಿ : ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದರು. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ಬಳಿ ತೆರಳಿದ ಜಿಲ್ಲಾಧಿಕಾರಿ ಪಠ್ಯದ ಕುರಿತಾದ ಕೆಲ ಅಂಶಗಳನ್ನು ಮಕ್ಕಳಿಗೆ ಕೇಳಿದರು. ಈ ಕುರಿತಂತೆ ವಿದ್ಯಾರ್ಥಿಗಳು ಸಹ ಸಮರ್ಪಕ ಉತ್ತರ ನೀಡಿದರು. ಅಲ್ಲದೆ ಕೇವಲ ವಿದ್ಯಾಭ್ಯಾಸದ ಕಡೆ ಗಮನಹರಿಸಿ ಅನುಮಾನ ಬಂದ ನಂತರ ಅದನ್ನು ಗುರುತು ಮಾಡಿಕೊಂಡು ಶಿಕ್ಷಕರ ಬಳಿ ಅದನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಲ್ಲದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆಯೂ ಕೂಡ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ 44,228 ಹುದ್ದೆಗಳಿಗೆ ಬಂಪರ್ ನೇಮಕಾತಿ (ಪೋಸ್ಟ್ ಆಫೀಸ್ ಜಿಡಿಎಸ್ ಖಾಲಿ ಹುದ್ದೆ) ಬಿಡುಗಡೆ ಮಾಡಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 44000 ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಇದರ ಅಡಿಯಲ್ಲಿ, ಉತ್ತರ ಪ್ರದೇಶ, ಉತ್ತರಾಖಂಡ, ಬಿಹಾರ, ಛತ್ತೀಸ್ ಗಢ, ದೆಹಲಿ, ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಖಾಲಿ ಇರುವ ಜಿಡಿಎಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು indiapostgdsonline.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು (ಪೋಸ್ಟ್ ಆಫೀಸ್ ಜಿಡಿಎಸ್ ಖಾಲಿ ಹುದ್ದೆ 2024 ಅಧಿಸೂಚನೆ). ಇಲ್ಲಿ ಅಪ್ಲಿಕೇಶನ್ ಗಾಗಿ ಲಿಂಕ್ ಅನ್ನು ಸಕ್ರಿಯಗೊಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 5, 2024. ನ್ಯೂ ಇಂಡಿಯಾ ಪೋಸ್ಟ್ ಜಿಡಿಎಸ್ ಹುದ್ದೆ 2024 ದಿನಾಂಕ: ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-07-2024 ಅರ್ಜಿ ಸಲ್ಲಿಸಲು ಕೊನೆ…
ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರೂ. ವೆಚ್ಚವಾಗಲಿದೆ. ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು ಎಂದು ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಕಾವೇರಿ ನೀರು ಹಂಚಿಕೆಯ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ವಿಪಕ್ಷ ನಾಯಕರು ಹಾಗೂ ಸಚಿವರು ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ, ಸೋಮವಾರದಿಂದ ತಮಿಳುನಾಡಿಗೆ ರೂ.8,000 ಕ್ಯೂಸೆಕ್ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು. ತಮಿಳುನಾಡಿಗೆ ನಿತ್ಯ 11 ಸಾವಿರ ಕ್ಯೂಸೆಕ್ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತದೆ. ನಾಳೆಯಿಂದ ನಿತ್ಯ 8000 ಕ್ಯೂ ಸೆಟ್ ನೀರು ಬಿಡುಗಡೆ ಮಾಡುತ್ತೇವೆ. ಎಂದು ಅವರು ತಿಳಿಸಿದರು. ನೀರು ಬಿಡುಗಡೆ ಮಾಡಬಾರದೆಂದು ಜುಲೈ 12ರಂದು ನಿರ್ಧರಿಸಿದ್ದೆವು. ಅಂದೇ ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನ ಮಾಡಿದ್ದೆವು. ತಮಿಳುನಾಡಿಗೆ ಈಗ ನೀರು ಬಿಡುಗಡೆ ಬೇಡವೆಂದು ನಿರ್ಧರಿಸಲಾಗಿದೆ ಸಿಡಬ್ಲ್ಯೂಆರ್ ಸಿ ಶಿಫಾರಸು ವಿರುದ್ಧ ಸಿಡಬ್ಲ್ಯೂಎಂ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಮಳೆ ಕಡಿಮೆಯಾದರೆ ರೂ.8,000 ಕ್ಯೂಸೆಕ್ ಗಿಂತ ಕಡಿಮೆ ಬಿಡುತ್ತೇವೆ. ಒಂದು ವೇಳೆ ಮಳೆ ಹೆಚ್ಚಾದರೆ…
ಅನಂತ್ ಅಂಬಾನಿ ಮದುವೆ ಮುಗಿದರೂ ವಿವಾಹನ ನಂತರದ ಕಾರ್ಯಕ್ರಮಗಳು ಇನ್ನೂ ನಡೆಯುತ್ತಲೇ ಇದೆ. ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಬಾಲಿವುಡ್ ತಾರೆಗಳು ಸೇರಿದಂತೆ ಅನೇಕ ರಂಗದ ಗಣ್ಯರು ಈ ಅದ್ಧೂರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಮದುವೆಗೆ ಆಗಮಿಸಿದ ಅನಂತ್ ಅಂಬಾನಿಯ 25 ಖಾಸ್ ಗೆಳೆಯರಿಗೆ ಕೋಟಿ ಕೋಟಿ ಮೌಲ್ಯದ ಗಿಫ್ಟ್ ದೊರಕಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ವರ ಅನಂತ್ ತನ್ನ 25 ಅತ್ಯಾಪ್ತರಿಗೆ ಲಿಮಿಡೆಟ್ ಎಡಿಷನ್ Audemard Piguet ಕೈಗಡಿಯಾರ ನೀಡಿದ್ದಾರೆ ಎನ್ನಲಗಿದೆ. ಆರ್ಡರ್ ಕೊಟ್ಟು ವಿಶೇಷವಾಗಿರುವಂತಹ 25 ವಾಚ್ ಗಳನ್ನು ತರಿಸಲಾಗಿತ್ತು. ಇದರ ಬೆಲೆ ತಲಾ 1.5 ರಿಂದ 2 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ. ಈ ವಾಚನ್ನು 18 ಕ್ಯಾರಟ್ ಚಿನ್ನದಿಂದ ತಯಾರಿಸಲಾಗಿದೆ. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮೂಲಗಳ ಪ್ರಕಾರ ಈ ಕೈ ಗಡಿಯಾರವನ್ನು ಮಿಜಾನ್ ಜಾಫರಿ, ವೀರ್ ಪಹಾಡಿಯಾ, ಶಿಖರ್ ಫಹಾಡಿಯಾ, ಶಾರೂಖ್ ಖಾನ್, ರಣವೀರ್ ಸಿಂಗ್, ಹಾರ್ದಿಕ್ ಪಾಂಡ್ಯ ಸೇರಿ…