Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಶಂಕರ್ ನಿರ್ದೇಶನದ ಸಿನಿಮಾ ನಟ ಕಮಲ್ ಹಾಸನ್ ಅವರ ಚಿತ್ರ ಇಂಡಿಯನ್ 2 ಭಾರತದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಸಿನಿಮಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುವಲ್ಲಿ ವಿಫಲಗೊಂಡಿದ್ದು, ವಿಮರ್ಶಕರು, ಪ್ರೇಕ್ಷಕರಿಂದ ನೆಗೆಟಿವ್ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಂಡಿಯನ್ 2 ಡಿಜಿಟಲ್ ಸ್ಟ್ರೀಮಿಂಗ್ ಹಕ್ಕನ್ನು NETFLIX ಪಡೆದುಕೊಂಡಿದೆ. ಇಂಡಿಯನ್ –2 ಗಿಂತ 28 ವರ್ಷಗಳ ಹಿಂದೆ ಬಂದಿದ್ದ ಪ್ರೀಕ್ವೆಲ್ ನ್ನು ಜನ ತುಂಬಾ ಇಷ್ಟ ಪಡುತ್ತಿದ್ದಾರೆ. ಇಂಡಿಯನ್ʼ ಸಿನಿಮಾ ನೋಡದವರು ಇದೀಗ ನೋಡಲು ಬಯಸುತ್ತಿದ್ದಾರೆ. ನೆಟ್ ಫಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ ಎನ್ನಲಾಗಿದೆ. ಇಂಡಿಯನ್ ಪ್ರೀಕ್ವೆಲ್ ಸಿನಿಮಾ ನೋಡಬಹುದು, ಆದರೆ ಸೀಕ್ವೆಲ್ ಸಿನಿಮಾ ನೋಡಲು ಆಗುವುದಿಲ್ಲ ಎಂದಿದ್ದಾರೆ. ಇವೆಲ್ಲದವರ ನಡುವೆ ಕೆಲವರು ʼಇಂಡಿಯನ್ʼ ಸಿನಿಮಾ ನೋಡಬೇಕು ಎಂದು ಬಯಸುತ್ತಿದ್ದು, ಇದೀಗ ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ. ನೆನ್ನೆ ರಾತ್ರಿಯಿಂದಲೇ ʼಇಂಡಿಯನ್ʼ ಸಿನಿಮಾ ರಿಲೀಸ್ ಆಗಲಿದೆ. 4K ವರ್ಷನ್ ನಲ್ಲಿ ನೋಡಲು ಸಿಗಲಿದೆ ಎನ್ನಲಾಗಿದೆ. ಇಂಡಿಯನ್ -2 ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ನೆಟ್ ಫ್ಲಿಕ್ಸ್ನಲ್ಲಿ…
ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಆರ್ ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ಬಳಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ. ನ್ಯಾಯ ಎಲ್ಲಿದೆ ಮತ್ತು ಗಾಳಿ ಮಾತು ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚಾಕೊಲೇಟ್ ಅಚ್ಚುಮೆಚ್ಚು. ಇದೀಗ ಬಾಯಿ ಚಪ್ಪರಿಸಿ ಡೈರಿ ಮಿಲ್ಕ್ ಚಾಕಲೇಟ್ ತಿನ್ನೋರಿಗೆ ಇಲ್ಲೊಂದು ಶಾಕ್ ಕಾದಿದೆ. ಹೌದು, ನೀವು ಮಕ್ಕಳಿಗೆ ಪ್ರೀತಿಯಿಂದ ನೀಡುವ ಚಾಕೋಲೇಟ್ ಗಳೇ ಅವರ ಜೀವಕ್ಕೆ ಅಪಾಯ ತರಬಹುದು. ಇತ್ತೀಚಿನ ದಿನಗಳಲ್ಲಿ ಕ್ಯಾಡ್ಬರಿ ಡೈರಿ ಮಿಲ್ಕ್ ಚಾಕೋಲೇಟ್ ಗಳಲ್ಲಿ ಹುಳುಗಳು ಪತ್ತೆಯಾಗುತ್ತಿರುವ ಸುದ್ದಿಗಳು ಆಗ್ಗಾಗ್ಗೆ ಕೇಳಿ ಬರುತ್ತಿದೆ. ಇದೀಗ ಮಡಿಕೇರಿಯ ಸುಲ್ತಾನ್ ಎಂಬವರು ಖರೀದಿಸಿದ ಡೈರಿ ಮಿಲ್ಕ್ ಸಿಲ್ಕ್ (ಹ್ಯಾಝಲ್ನೆಟ್) ಚಾಕೋಲೇಟ್ ನಲ್ಲಿ ಹುಳುಗಳು ಕಂಡು ಬಂದಿವೆ. ಸುಲ್ತಾನ್ ಎಂಬವರು ಮಕ್ಕಳಿಗೆಂದು ಖರೀದಿಸಿದ ಈ ಚಾಕೋಲೇಟ್ ಅನ್ನು ಓಪನ್ ಮಾಡಿದಾಗ ಅದರಲ್ಲಿನ ಹ್ಯಾಝೆಲ್ ನೆಟ್ ಗಳಿಂದ ಹುಳುಗಳು ಹೊರಬರುತ್ತಿರುವುದು ಕಂಡು ಬಂದಿದೆ. ಚಾಕೋಲೇಟ್ನ ಎಕ್ಸ್ ಪೈರಿ ಡೇಟ್ 22–1–2025 ಇದ್ದು, ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಪೋಷಕರು ಈ ಬಗ್ಗೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕೃಷಿ ಹೊಂಡಕ್ಕೆ ಬಿದ್ದು ಮಾಜಿ ಪ್ರಿಯಕರನೊಂದಿಗೆ ವಿವಾಹಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ದೊಡ್ಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನುಷಾ (19), ವೇಣು (21) ಮೃತರು ಎಂದು ಗುರುತಿಸಲಾಗಿದೆ. ಈ ಜೋಡಿಗಳು 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಚೌಡರೆಡ್ಡಿ ಎಂಬ ವ್ಯಕ್ತಿ ಜೊತೆಯಲ್ಲಿ ಯುವತಿಗೆ ಮನೆಯವರು ಮದುವೆ ಮಾಡಿದ್ದರು. ಆಷಾಡಕ್ಕೆ ಎಂದು ಮನೆಗೆ ಬಂದಾಗ ಯುವತಿ ಮತ್ತೆ ಹಳೆ ಪ್ರೇಮಿಯ ಜೊತೆ ಸಂಪರ್ಕ ಬೆಳೆಸಿದ್ದಳು. ಮೊದಲೇ ಪ್ರೀತಿಗೆ ನಿರಾಕರಿಸಿದ್ದ ಕುಟುಂಬ. ಹಾಗಾಗಿ ಮತ್ತೆ ಇಬ್ಬರು ಒಟ್ಟಿಗೆ ಬಾಳಲು ಬಿಡುವುದಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆಷಾಡಕ್ಕೆ ತವರು ಮನೆಗೆ ಬಂದ ವೇಳೆ ಸೊಂಟಕ್ಕೆ ವೇಲ್ ಬಿಗಿದುಕೊಂಡು ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದು, ಮತ್ತೆ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ನಿನಗಾಗಿ’ ಎಂಬ ಸಿರಿಯಲ್ ನಲ್ಲಿ ಪೂಜಾ ಗಾಂಧಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾ ನಟಿಯೊಬ್ಬರ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್ ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಈ ಸೀರಿಯಲ್ ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಪೂಜಾ ಗಾಂಧಿ ಜೊತೆಗಿನ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್ ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್ನಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯ ಸಿಂಚನವಾಗಲಿದೆ. ಕಲಬುರಗಿ, ಹಾವೇರಿ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು…
ನೇಪಾಳವು ಗಣರಾಜ್ಯವಾದಾಗಿನಿಂದ 2008 ರಿಂದ ನೇಪಾಳದ 14 ನೇ ಸರ್ಕಾರದ ಮುಖ್ಯಸ್ಥರಾಗಿ ಕೆಪಿ ಶರ್ಮಾ ಒಲಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ವಾರ, ಒಲಿ ಅವರ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ (ಯುಎಂಎಲ್) ಪುಷ್ಪ ಕಮಲ್ ದಹಲ್ “ಪ್ರಚಂಡ” ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿತು, ಹಿಮಾಲಯನ್ ರಾಷ್ಟ್ರದ ಎಡಪಂಥೀಯ ಶಕ್ತಿಗಳ ನಡುವಿನ ಮೈತ್ರಿಯ ಇತ್ತೀಚಿನ ಪ್ರಯತ್ನವನ್ನು ಕೊನೆಗೊಳಿಸಿತು. ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ (ಮಾವೋವಾದಿ ಸೆಂಟರ್) ಮುಖ್ಯಸ್ಥ ಪ್ರಚಂಡ ಅವರು 2022 ರ ಡಿಸೆಂಬರ್ನಿಂದ ನಾಲ್ಕು ವಿಶ್ವಾಸ ಮತಗಳಿಂದ ಬದುಕುಳಿದ ನಂತರ ಶುಕ್ರವಾರ ವಿಶ್ವಾಸ ಮತದಲ್ಲಿ ವಿಫಲರಾಗಿದ್ದಾರೆ. ಪ್ರಧಾನಿಯಾಗಿ ತಮ್ಮ 19 ತಿಂಗಳ ಅಧಿಕಾರಾವಧಿಯಲ್ಲಿ, ಮಾವೋವಾದಿ ನಾಯಕ ಮೂರು ಬಾರಿ ಸಮ್ಮಿಶ್ರ ಪಾಲುದಾರರನ್ನು ಬದಲಾಯಿಸಿದರು. ನೇಪಾಳದ 275 ಸದಸ್ಯರ ಕೆಳಮನೆಯಾದ ಪ್ರತಿನಿಧಿ ಸಭಾದಲ್ಲಿ ಮಾವೋವಾದಿ ಕೇಂದ್ರವು ಮೂರನೇ ಅತಿದೊಡ್ಡ ಪಕ್ಷವಾಗಿದೆ. ಶೇರ್ ಬಹದ್ದೂರ್ ದೇವುಬಾ ನೇತೃತ್ವದ ನೇಪಾಳಿ ಕಾಂಗ್ರೆಸ್ ಮತ್ತು ಸಿಪಿಎನ್-ಯುಎಂಎಲ್ನೊಂದಿಗೆ ಚೌಕಾಸಿ ಮಾಡುವ ಮೂಲಕ ಪ್ರಚಂಡ ನೇಪಾಳದ…
ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಪ್ರವಾಸಿಗರನ್ನು ನಿಭಾಯಿಸಲು ಹರಸಾಹಸ ಪಡುವಂತಾದರು. ನಂದಿಬೆಟ್ಟ ನೋಡಲು ಸಾವಿರಾರು ಮಂದಿ ಪ್ರವಾಸಿಗರು ಕಾರು ಹಾಗೂ ಬೈಕ್ಗಳಲ್ಲಿ ಆಗಮಿಸಿದ್ದು, ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳು ಕಿಕ್ಕಿರಿದು ತುಂಬಿವೆ. ಮುಂಜಾನೆ 5 ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ನಂದಿಗಿರಿಧಾಮ ಪೊಲೀಸರು ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾದರು. ರಸ್ತೆಯ ಎರಡು ಬದಿ ವಿರುದ್ಧ ದಿಕ್ಕಿನಲ್ಲೂ ವಾಹನಗಳು ನಿಂತಿದ್ದು ನಂದಿಬೆಟ್ಟದಿಂದ ವಾಪಾಸ್ ಬರುವವರು ಕೆಳಗೆ ಬರಲು ಪರದಾಡಬೇಕಾಯಿತು. ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರು ಅತ್ತ ಮೇಲೂ ಹೋಗಲಾಗದೆ ಇತ್ತ ಕೆಳಗೆ ವಾಪಸ್ ಸಹ ಬರಲಾಗದೆ ಪರದಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕೆಲ ದಿನಗಳಿಂದ ಬೆಂಗಳೂರಿನ ಜನರ ಮೊಬೈಲ್ ಗಳಿಗೆ ವಿದೇಶಿ ನಂಬರ್ ಗಳಿಂದ ಅಪರಿಚಿತ ಕರೆಗಳು ಬರುತ್ತಿದ್ದು, ವಾಟ್ಸಾಪ್ ಕರೆ ಮಾಡುತ್ತಿರುವ ಅಪರಿಚಿತ ವ್ಯಕ್ತಿಗಳು, ಪೊಲೀಸ್ ಠಾಣೆಯಿಂದ ಮಾತನಾಡ್ತಿದ್ದೇವೆ. ನಿಮ್ಮ ಮಗ ಅಥವಾ ಮಗಳನ್ನ ಡ್ರಗ್ಸ್ ಕೇಸ್ನಲ್ಲಿ ಅರೆಸ್ಟ್ ಮಾಡಿದ್ದೇವೆ. ಕೂಡಲೇ ನಮ್ಮ ಅಕೌಂಟ್ ಗೆ ಹಣ ಹಾಕಿ ಇಲ್ಲದಿದ್ರೆ, FIR ಮಾಡ್ತೀವಿ ಅಂತಾ ಧಮ್ಕಿ ಹಾಕುತ್ತಿದ್ದಾರೆ ಎನ್ನಲಾಗಿದೆ. ಇದೇ ರೀತಿ ಬೆಂಗಳೂರಿನ ಸೈಯದ್ ಸಮೀನ್ ಎಂಬವರಿಗೂ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಗಳು ನಿಮ್ಮ ಮಗಳನ್ನ ಬಂಧಿಸಿದ್ದೇವೆ. ಹಣ ಹಾಕಿ ಅಂತಾ ಬೆದರಿಸಿದ್ದಾರೆ. ಸದ್ಯ ಸೈಯದ್ ಸಮೀನ್ ಈ ಬಗ್ಗೆ ಸೈಬರ್ ಕ್ರೈಂಗೆ ದೂರು ಸಲ್ಲಿಸಿದ ಬಳಿಕ ಇಂತಹ ಹಲವು ಪ್ರಕರಣಗಳು ಕೆಲದಿನಗಳಿಂದೀಚೆಗೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮುಂಬೈಯಲ್ಲಿ ಇಂತಹದ್ದೇ ಪ್ರಕರಣ ನಡೆದು ಒಬ್ಬರು ಮಹಿಳೆ ಸುಮಾರು 8೦ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಇಂತಹ ಪ್ರಕರಣಗಳು ಬೆಳಕಿಗೆ ಬಂದ ತಕ್ಷಣ ಸೈಬರ್ ಪೊಲೀಸರಿಗೆ ತಿಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
12ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯದ ಖಜಾನೆಯಾದ ರತ್ನ ಭಂಡಾರವನ್ನು 46 ವರ್ಷಗಳ ನಂತರ ಬೆಲೆಬಾಳುವ ವಸ್ತುಗಳ ದಾಸ್ತಾನು ಮತ್ತು ಅದರ ರಚನೆಯ ದುರಸ್ತಿಗಾಗಿ ಮತ್ತೆ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ನೆನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಭಂಡಾರವನ್ನು ಪುನಃ ತೆರೆಯಲಾಯಿತು. “ನಿಮ್ಮ ಇಚ್ಛೆಯ ಮೇರೆಗೆ ಜಗನ್ನಾಥ ದೇಗುಲಗಳ ನಾಲ್ಕು ದ್ವಾರಗಳನ್ನು ತೆರೆಯಲಾಗಿತ್ತು. ನಿಮ್ಮ ಇಚ್ಛೆಯ ಮೇರೆಗೆ 46 ವರ್ಷಗಳ ನಂತರ ರತ್ನ ಭಂಡಾರವನ್ನು ಮಹತ್ತರ ಉದ್ದೇಶಕ್ಕಾಗಿ ತೆರೆಯಲಾಗಿದೆ” ಎಂದು ಸಿಎಂ ಪೋಸ್ಟ್ನಲ್ಲಿ ಹೇಳಲಾಗಿದೆ. ಮಧ್ಯಾಹ್ನ 1:28ರ ಶುಭ ಮುಹೂರ್ತದಲ್ಲಿ ಖಜಾನೆಯನ್ನು ಪುನಃ ತೆರೆಯಲು ನಿರ್ಧರಿಸಲಾಗಿತ್ತು ಎಂದು ಬರೆಯಲಾಗಿದೆ. ಖಜಾನೆ ತೆರೆದಾಗ11 ಜನರು ಹಾಜರಿದ್ದು, ಒರಿಸ್ಸಾದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ (ಎಸ್ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧಿ, ಎಎಸ್ಐ ಸೂಪರಿಂಟೆಂಡೆಂಟ್ ಡಿಬಿ ಗಡನಾಯಕ್ ಮತ್ತು…