Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಗುಜರಾತ್ ನ ಭಾವ್ ನಗರ ಜಿಲ್ಲೆಯ ಪಾಲಿತಾನಾ ಪಟ್ಟಣದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟ, ಮಾಂಸ ಮಾರಾಟ ಕುರಿತು ಬೋರ್ಡ್ ಅಳವಡಿಸುವುದು, ಮಾಂಸ ಸೇವಿಸುವುದನ್ನು ಈ ಪಟ್ಟಣದಲ್ಲಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜಗತ್ತಿನಲ್ಲೇ ಮಾಂಸಾಹಾರವನ್ನು ನಿಷೇಧಿಸಿದ ಮೊದಲ ಪಟ್ಟಣ ಅಥವಾ ನಗರ ಎಂಬ ಖ್ಯಾತಿಗೆ ಪಾಲಿತಾನಾ ಪಾತ್ರವಾಗಿದೆ. ಗುಜರಾತ್ನ ಪಾಲಿತಾನಾ ಪಟ್ಟಣವು ಜೈನ ದೇವಾಲಯಗಳಿಗೆ ಹೆಸರಾಗಿದೆ. ಶತ್ರುಂಜಯ ಗುಡ್ಡಗಾಡು ಪ್ರದೇಶಗಳಲ್ಲಿರುವ ನಗರವು ಜೈನ ದೇವಾಲಯಗಳ ನಗರ ಎಂದೇ ಖ್ಯಾತಿಯಾಗಿದೆ. ಈ ಪಟ್ಟಣದಲ್ಲಿ ಸುಮಾರು 800 ದೇವಾಲಯಗಳಿವೆ. ತುಂಬ ಖ್ಯಾತಿ ಪಡೆದಿರುವ ಆದಿನಾಥ ದೇವಾಲಯವೂ ಇದೆ. ಜೈನರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜೈನರು ಹಾಗೂ ಜೈನ ಸನ್ಯಾಸಿಗಳಿಗೆ ಹೆಸರುವಾಸಿಯಾಗಿರುವ ಪಟ್ಟಣದಲ್ಲಿ ಸುಮಾರು 250 ಮಾಂಸದಂಗಡಿಗಳಿವೆ ಎಂಬುದಾಗಿ 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ್ದರು. ಪವಿತ್ರ ಯಾತ್ರಾ ಸ್ಥಳಗಳಲ್ಲಿ ಮಾಂಸ ಮಾರಾಟ ನಿಷೇಧಿಸಬೇಕು ಎಂಬುದಾಗಿ ಅವರು ಪಟ್ಟು ಹಿಡಿದಿದ್ದರು. ಹಾಗಾಗಿ, ಪಟ್ಟಣದಲ್ಲಿ ಮಾಂಸ ಮಾರಾಟ, ಸೇವನೆಯನ್ನು ಕಾನೂನುಬಾಹಿರ ಎಂಬುದಾಗಿ ಘೋಷಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ನಟ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಅಭಿನಯದ ಸಿನಿಮಾ ‘ಕರಟಕ ದಮನಕ’, ಸದ್ದಿಲ್ಲದೆ ಒಟಿಟಿಗೆ ಕಾಲಿಟ್ಟಿದೆ. ಚಿತ್ರತಂಡ, ‘ಕರಟಕ ದಮನಕ’ ಸಿನಿಮಾವನ್ನು ಒಟಿಟಿ ಸ್ಟ್ರೀಮಿಂಗ್ ಮಾಡಲು ಮುಂದಾಗಿದೆ. ಶಿವಣ್ಣನ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಜುಲೈ 12 ರಂದು ಸಿನಿಮಾ ಬಿಡುಗಡೆಯಾಗಿದೆ. ಥಿಯೇಟರ್ ರೀಲಿಸ್ ಆಗಿ ನಾಲ್ಕು ತಿಂಗಳ ಬಳಿಕ ಒಟಿಟಿಗೆ ಸಿನಿಮಾ ಲಗ್ಗೆಯಿಟ್ಟಿದೆ. ಕರಟಕ ದಮನಕ ಸಿನಿಮಾ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ವಿಷಯವನ್ನ ಸ್ವತಃ ಸಿನಿಮಾ ತಂಡವೇ ಹೇಳಿಕೊಂಡಿದೆ. ಪ್ರೈಮ್ ವಿಡಿಯೋದಲ್ಲೂ ಈ ಸಿನಿಮಾ ನೋಡಿದವ್ರು, ಈ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸುತ್ತಿದ್ದಾರೆ. ಕರಟಕ ದಮನಕ ಸಿನಿಮಾದ ವಿಚಾರಕ್ಕೆ ಬಂದ್ರೆ, ಯೋಗರಾಜ್ ಭಟ್ರು ಈ ಚಿತ್ರವನ್ನ ಡೈರೆಕ್ಷನ್ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಪ್ರಭುದೇವ ಜೋಡಿಯ ಹಾಡು ಸಿಕ್ಕಾಪಟ್ಟೆ ಮೋಡಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮಳೆಗಾಲದ ಸಮಯದಲ್ಲಿ ಪ್ರಕೃತಿ ಸೌಂದರ್ಯವನ್ನು ಕಣ್ಣು ತುಂಬಿಕೊಳ್ಳಲು ಜನ ಸಹ ಪ್ಲ್ಯಾನ್ ಮಾಡಿಕೊಂಡಿರುತ್ತಾರೆ. ಇವರಿಗೆ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಈ ನಿಟ್ಟಿನಲ್ಲಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಜೋಗ ಫಾಲ್ಸ್ ಪ್ಯಾಕೇಜ್ ಟೂರ್ ಬಸ್ ಗಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ ಪ್ಯಾಕೇಜ ಟೂರ್ ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ವಿಶೇಷ ಸಾರಿಗೆಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಹುಬ್ಬಳ್ಳಿಯಿಂದ ಜೋಗ್ ಫಾಲ್ಸ್ ಗೆ ವಿಶೇಷ ಬಸ್ ಗಳನ್ನು ಆರಂಭಿಸಲಾಗಿದೆ. 3 ರಾಜಹಂಸ ಹಾಗೂ 2 ಐರಾವತ ಬಸ್ ಗಳು ಜೋಗ್ ಫಾಲ್ಸ್ ಗೆ ಹೊರಟಿವೆ. ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗುವುದು. ಜೋಗ್ ಫಾಲ್ಸ್ ಜೊತೆಗೆ ಶಿರಸಿಯ ಮಾರಿಕಾಂಬಾ ದೇವಿಯ ದರ್ಶನವನ್ನು ಪ್ಯಾಕೇಜ್ ಟೂರ್ ಒಳಗೊಂಡಿದೆ. ಮಳೆಗಾಲವಿರುವುದರಿಂದ ಸಾರ್ವಜನಿಕರು ಪ್ಯಾಕೇಜ್ ಟೂರ್ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು…
ಕೊರಟಗೆರೆ: ಸಿದ್ದರಬೆಟ್ಟ ರೋಟರಿ ಕ್ಲಬ್ ಹಾಗೂ ಫ್ಯೂಚರ್ ಫೌಂಡೇಶನ್ ಇಂಡಿಯಾ ವತಿಯಿಂದ ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಕೊರಟಗೆರೆ ತಾಲೂಕಿನ ಬೋಡ ಬಂಡೇನಹಳ್ಳಿ, ಪಾತಗನಹಳ್ಳಿ, ಅಂಚಿಹಳ್ಳಿ,ಅಕ್ಕಿರಾಂಪುರ ಸರ್ಕಾರಿ ಶಾಲೆಯ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ಸ್, ಲೇಖನಿ, ಇನ್ನಿತರ ವಸ್ತುಗಳ ವಿತರಣೆ ಮಾಡಲಾಯಿತು. ಇದೇ ವೇಳೆ ಮಾತನಾಡಿದ ರೋಟರಿ ಕ್ಲಬ್ ಸದಸ್ಯ ಬಾಲಾಜಿ ಟೆಕ್ಸ್ಟೈಲ್ ದರ್ಶನ್, ಸಿದ್ದರಬೆಟ್ಟ ರೋಟರಿ ಸಂಸ್ಥೆ ಹಾಗೂ ಫ್ಯೂಚರ್ ಫೌಂಡೇಶನ್ ಇಂಡಿಯಾದ ಮುಖ್ಯ ಉದ್ದೇಶ ಗ್ರಾಮೀಣ ಭಾಗದ ಪ್ರತಿಭೆಗಳು ಉತ್ತಮ ಭವಿಷ್ಯವನ್ನು ಹೊಂದಬೇಕು ಎನ್ನುವುದಷ್ಟೇ ನಮ್ಮ ಉದ್ದೇಶ ಎಂದು ತಿಳಿಸಿದರು. ಪ್ರತಿ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೂ ನೋಟ್ ಬುಕ್ಸ್, ಪೆನ್ಸಿಲ್, ಪೆನ್, ಜಾಮಿಟರಿ ಸೇರಿದಂತೆ ಕೆಲವು ಶಾಲೆಗಳಿಗೆ ಲ್ಯಾಬ್ ಟಾಪ್, ಟ್ಯಾಬ್, ಆಟದ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಸಿದ್ದರಬೆಟ್ಟ ರೋಟರಿ ಕ್ಲಬ್ ಹಾಗೂ ಫ್ಯೂಚರ್ ಫೌಂಡೇಶನ್ ಇಂಡಿಯಾ ಸದಸ್ಯರಾದ ರಾಮು, ರಮೇಶ್, ಮಂಜುನಾಥ್, ಬಾಬು, ಬದ್ರಿ ಸಚಿನ್, ಮಧು, ರಾಜು, ಬಾಲಾಜಿ…
ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಯುವಕರು ರೀಲ್ಸ್ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕ್ರಮ ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡು ಶಾಕ್ ನೀಡಿದ್ದಾರೆ. ದರ್ಶನ್, ರಾಕೇಶ್, ರಾಹುಲ್, ಸತೀಶ್, ಚೇತನ್ ಮತ್ತು ಇನ್ನೊಬ್ಬನ ಮೇಲೆ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ತುಂಗಾ ನಗರ ಪೊಲೀಸರು ಸುಮೊಟೊ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು. ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು. ಸಿಎಂ ಸಿದ್ಧರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ ಜಾಗ ಭೂ ಪರಿವರ್ತನೆ…
ಪತಿ ಮೇಕೆ ಮೇಯಿಸುತ್ತಾ ರೈಲ್ವೇ ಹಳಿ ಮೇಲೆ ನಿಂತಿದ್ದ ವೇಳೆ ಏಕಾಏಕಿ ರೈಲು ಬಂದಿದ್ದು, ಈ ವೇಳೆ ಪತಿಯನ್ನು ರಕ್ಷಿಸಲು ಬಂದ ಪತ್ನಿಯೂ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಇಲ್ಲಿನ ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಚಂದ್ರನಾಯಕ್(56) ಮತ್ತು ಜಯಬಾಯಿ(45) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರದ ಮೂಲದ ನಿವಾಸಿಗಳಾದ ದಂಪತಿ ಶುಕ್ರವಾರ ಸಂಜೆ 3:40ರ ಸುಮಾರಿನಲ್ಲಿ ವಡ್ಡರಹಳ್ಳಿ–ಮಾಕಳಿ ದುರ್ಗ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ತಮ್ಮ ಜಮೀನಿನ ಬಳಿಯ ರೈಲ್ವೆ ಹಳಿ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದರು ಎನ್ನಲಾಗಿದೆ. ಆ ವೇಳೆ ಚಂದ್ರನಾಯಕ್ ರೈಲ್ವೆ ಹಳಿ ಮೇಲೆ ನಿಂತಿದ್ದರು. ರೈಲು ಬರುತ್ತಿರುವುದನ್ನು ಗಮನಿಸಿದ ಪತ್ನಿ ಜಯಬಾಯಿ ರಕ್ಷಣೆಗೆ ಹೋದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಶೀಘ್ರವೇ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಾಗಿ ಶಾಸಕ ರಾಜು ಕಾಗೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದಾಗಿ ಕರ್ನಾಟಕ ಸಾರಿಗೆ ನಿಗಮ ನಷ್ಟದಲ್ಲಿದೆ. ಡೀಸೆಲ್, ಬಸ್ ಗಳ ಬಿಡಿಭಾಗಗಳ ಬೆಲೆಯೂ ಹೆಚ್ಚಳವಾಗಿದೆ. ಕಳೆದ ಹತ್ತು ವರ್ಷಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಹೀಗಾಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು 2020ರಲ್ಲಿ ಹೆಚ್ಚಳ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ KSRTC ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿಲ್ಲ. ನಿಗಮಕ್ಕೆ ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರದಿಂದ 1100 ಕೋಟಿ ಬರಬೇಕಿದೆ. ಸಾರಿಗೆ ನಿಗಮಗಳಿಂದ ದರ ಪರಿಷ್ಕರಣೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ರಾಜ್ಯದಲ್ಲಿರುವುದು 100 ಪರ್ಸೆಂಟ್ ಭ್ರಷ್ಟ ಸರ್ಕಾರ, ಕರ್ನಾಟಕದಿಂದ ತೆಲಂಗಾಣಕ್ಕೆ 1000 ಕೋಟಿ ರೂ. ಸಂಗ್ರಹಿಸಿ ಕೊಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಕಳೆದೊಂದು ವರ್ಷದಿಂದ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಸರಿ ಸುಮಾರು 1000 ಕೋಟಿ ರೂ. ಸಂಗ್ರಹಿಸಿ ತೆಲಂಗಾಣಕ್ಕೆ ಕೊಡಲಾಗಿದೆ. ಇದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಗೊತ್ತಿದ್ದೇ ಆದ ಹಗರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್ ಸಿ–ಎಸ್ ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದಲ್ಲಿ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ ವರ್ಗಾವಣೆ…
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಚುನಾವಣಾ ರ್ಯಾಲಿಯಲ್ಲಿ ಗುಂಡು ಹಾರಿಸಿದ್ದಾರೆ. ಸ್ಥಳೀಯ ಕಾಲಮಾನ 6:15ರ ಸುಮಾರಿಗೆ ಈ ಘಟನೆ ನಡೆದಿದೆ. ಅವರು ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು, ಇದ್ದಕ್ಕಿದ್ದಂತೆ ಗುಂಡಿನ ಸದ್ದಿನಿಂದ ಎಲ್ಲರೂ ಬೆಚ್ಚಿಬಿದ್ದರು. ಕೆಳಗೆ ಬಿದ್ದ ಟ್ರಂಪ್ ಅವರು ಗಂಭೀರ ಗಾಯದಿಂದ ಪಾರಾಗಿದ್ದಾರೆ, ಆದರೆ ಅವರ ಕಿವಿಗೆ ಗಾಯವಾಗಿದೆ. ದಾಳಿಕೋರರಲ್ಲಿ ಒಬ್ಬನನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಟ್ರಂಪ್ ಮೇಲಿನ ದಾಳಿಯನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖಂಡಿಸಿದ್ದಾರೆ ಘಟನೆಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ತುಣುಕಿನಲ್ಲಿ ಟ್ರಂಪ್ ಅವರ ಬಲ ಕಿವಿ ಮತ್ತು ಮುಖದಲ್ಲಿ ರಕ್ತಸ್ರಾವವನ್ನು ಕಾಣಬಹುದು. ಸದ್ಯ ಟ್ರಂಪ್ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂಬ ವರದಿಗಳು ಬರುತ್ತಿವೆ. ರಹಸ್ಯ ಸೇವೆ, ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮತ್ತು ಇತರ ಏಜೆನ್ಸಿಗಳು ತನಿಖೆಯನ್ನು ಪ್ರಾರಂಭಿಸಿವೆ. ಆರೋಪಿಗೆ ಕೊಲೆ ಮಾಡುವ ಉದ್ದೇಶವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…