Author: admin

ತುಮಕೂರು:  ಸದ್ಯದಲ್ಲೇ  ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೆ ಬೋರ್ಡ್ ಮೀಟಿಂಗ್ ಮುಗಿದಿದ್ದು 15–20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ತೈಲ ಬೆಲೆ ಏರಿಕೆ, ಹೊಸ ಬಸ್‌ ಗಳ ಖರಿದಿಯಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಈ ಎಲ್ಲಾ  ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಎಸ್.ಆರ್.ಶ್ರೀನಿವಾಸ್ ಸಮರ್ಥನೆ ಕೊಟ್ಟಿದ್ದಾರೆ. ಕಳೆದ ತ್ರೈಮಾಸಿಕದಲ್ಲಿ ನಿಗಮಕ್ಕೆ ಬರೊಬ್ಬರಿ 295 ಕೋಟಿ ರೂ ನಷ್ಟವಾಗಿದೆ. ಇವೆಲ್ಲಾ ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಇದೀಗ ಮುಂದಿನ ದಿನದಲ್ಲಿ ಸತ್ತವರನ್ನು ಸಹ ಮತ್ತೆ ಬದುಕಿಸಬಹುದು ಎಂದು ಕಂಪನಿಯೊಂದು ಆಶ್ವಾಸನೆ ಕೊಟ್ಟಿದೆ ನೋಡಿ. ಅಮೇರಿಕನ್ ಕಂಪನಿ “Alcor Life Extension Foundation” ವಿಶ್ವದ ಅಗ್ರ ಕ್ರಯೋನಿಕ್ಸ್ ಕಂಪನಿ ಇದನ್ನು ಹೇಳಿದ್ದು, ಸತ್ತವರನ್ನು ಬದುಕಿಸುವ ಉದ್ದೇಶದಿಂದ ಈ ಸಂಸ್ಥೆ ಶವಗಳನ್ನು ಸಂರಕ್ಷಿಸಿ ಇಟ್ಟುಕೊಂಡಿದೆ. ಅಲ್ಕೋರ್ ಕಂಪನಿ ಈಗಾಗಲೇ 233 ದೇಹಗಳನ್ನು ಪಡೆದುಕೊಂಡಿದೆ. ವೈದ್ಯಕೀಯ ವಿಜ್ಞಾನವು ಅಭಿವೃದ್ಧಿ ಹೊಂದಿದ ದಿನದಲ್ಲಿ ಈಗಾಗಲೇ ಸಂರಕ್ಷಿಟ್ಟಿರು ಶವಗಳನ್ನು ಮತ್ತೆ ಜೀವಕ್ಕೆ ತರುವ ಭರವಸೆಯಲ್ಲಿ ಕೆಲಸ ನಡೆಸುತ್ತಿದೆ. ಅಲ್ಕೋರ್ ಬಳಸುವ ವಿಜ್ಞಾನವನ್ನು “ಕ್ರಯೋನಿಕ್ಸ್” ಎಂದು ಕರೆಯಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ, ಮಾನವ ದೇಹಗಳನ್ನು ಫ್ರೀಜರ್​​ನಲ್ಲಿ ಕಡಿಮೆ ತಾಪಮಾನದಲ್ಲಿ ಸಂರಕ್ಷಿಸಿಡಲಾಗುತ್ತದೆ. ನಂತರ, ಚಿಕಿತ್ಸೆ ಮೂಲಕ ಈ ಶವಗಳಿಗೆ ಜೀವ ತುಂಬುವ ಕೆಲಸ ಮಾಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಮೂಲಕ ಮನುಷ್ಯರ ಜೀವಿತಾವಧಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಜಪಾನ್‌ ನ ಯಮಗತ ರಾಜ್ಯ ಸರ್ಕಾರ ಜನರು ದಿನಕ್ಕೆ ಒಮ್ಮೆ ನಗಬೇಕು ಎಂಬ ಕಾನೂನನ್ನು ಜಾರಿಗೆ ತಂದಿದೆ. ಜನರು ದೀರ್ಘ ಆರೋಗ್ಯವಂತರಾಗಿ ಬಾಳಲು ನಗುವಿಗಿಂತ ಉತ್ತಮ ಔಷಧವಿಲ್ಲ ಎಂದು ಬಲವಾಗಿ ನಂಬಿರುವ ಆ ರಾಜ್ಯ ಸರ್ಕಾರ ಈ ಹೊಸ ಕಾನೂನನ್ನು ಜಾರಿಗೆ ತಂದಿದೆ. ಯಮಗತ ಜನರು ನಗುವಿನ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಈ ಕಾನೂನು ಹೇಳುತ್ತದೆ. ದಿನಕ್ಕೆ ಒಮ್ಮೆಯಾದರೂ ನಗುವ ಮೂಲಕ ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಇದು ಸೂಚಿಸುತ್ತದೆ. ಕೆಲಸದ ಸ್ಥಳಗಳಲ್ಲೂ ನಗುವಿನ ವಾತಾವರಣ ಮೂಡಿಸಲು ಈ ಕಾನೂನಿನಲ್ಲಿ ಹಲವು ಅಂಶಗಳನ್ನು ಸೇರಿಸಲಾಗಿದೆ. ಸಂಸ್ಥೆಯಲ್ಲಿ ನಗುವಿನ ವಾತಾವರಣ ಮೂಡಿಸುವ ಜವಾಬ್ದಾರಿಯನ್ನು ಆಡಳಿತ ಮಂಡಳಿಗೆ ವಹಿಸಲಾಗಿದೆ. ರಾಜ್ಯಾದ್ಯಂತ ಪ್ರತಿ ತಿಂಗಳು 8ರಂದು ನಗು ದಿನವನ್ನೂ ಆಚರಿಸಬೇಕು. ಕನ್ಸರ್ವೇಟಿವ್ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಈ ಮಸೂದೆಯನ್ನು ಮಂಡಿಸಿ ಸದಸ್ಯರ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಅಕ್ಟೋಬರ್ 18, 2001 ರಂದು, ಸುದೀಪ್ ಪ್ರಿಯಾ ಅವರನ್ನು ವಿವಾಹವಾದರು. ಸುಮಾರು 14 ವರ್ಷಗಳ ದಾಂಪತ್ಯದ ನಂತರ 2015 ರಲ್ಲಿ ದಂಪತಿ ನಡುವೆ ಕೆಲವು ಕಲಹಗಳು ಉಂಟಾಗಿದ್ದವು. ಎಲ್ಲ ಗಂಡ-ಹೆಂಡತಿಯಂತೆ.. ಅವರ ನಡುವೆಯೂ ಕೆಲ ಜಗಳಗಳು ಶುರುವಾದವು.. ಹೀಗಾಗಿ ವಿಚ್ಛೇದನ ಪಡೆಯಲು ನ್ಯಾಯಾಲಯದ ಮೊರೆ ಹೋಗಿದ್ದರು. ಆ ಸಮಯದಲ್ಲಿ ಒಂದು ಸಂದರ್ಶನದಲ್ಲಿ ಸುದೀಪ್.. ಮಾತನಾಡುವಾಗಲೂ ಸ್ನೇಹದಲ್ಲಿ ಮನಸ್ತಾಪಗಳಾದರೆ ನಾವು ಸ್ವಲ್ಪ ಮಾತನಾಡುವುದನ್ನು ನಿಲ್ಲಿಸುತ್ತೇವೆ ಆದರೆ ಮದುವೆ ಎನ್ನುವ ಸಂಬಂಧದಲ್ಲಿ ಹಾಗಾಗುವುದಿಲ್ಲ.. ಏನಾಗುತ್ತೋ ಗೊತ್ತಿಲ್ಲ ಎಂದಿದ್ದರು.. ಅಲ್ಲದೇ ಆಗ ಸುದೀಪ್ ಕೂಡ ಮಗಳು ಸಾನ್ವಿಯ ಜವಾಬ್ದಾರಿಯನ್ನು ಪತ್ನಿಗೆ ಬಿಟ್ಟಿದ್ದರು. ಆ ವೇಳೆಗೆ ಸುದೀಪ್ ವಿಚ್ಛೇದನ ಪಡೆದಿದ್ದರೆ ಸುಮಾರು 19 ಕೋಟಿ ಜೀವನಾಂಶ ನೀಡಬೇಕಿತ್ತು. ಆದರೆ, ಮತ್ತೆ ಎಲ್ಲವೂ ಸುಸೂತ್ರವಾಗಿದ್ದರಿಂದ ಅವರ ನಡುವೆ ಪರಿಸ್ಥಿತಿಯೂ ಸುಧಾರಿಸಿತು. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು ಆದರೆ ಸುದೀಪ್ ಮತ್ತು ಅವರ ಪತ್ನಿ ತಮ್ಮ ಮಗಳು ಸಾನ್ವಿಯ ಸಲುವಾಗಿ ಪರಸ್ಪರ ಎರಡನೇ ಅವಕಾಶವನ್ನು ನೀಡಲು ನಿರ್ಧರಿಸಿದರು. ಅಂದಿನಿಂದ, ಅವರು ವಿಚ್ಛೇದನದ…

Read More

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಪತ್ರಕರ್ತ ಪಿ. ರಾಜೇಶ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ.ಕೃಷ್ಣಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ರಾಜ್ಯದ 50 ಮೂಲಬುಡಕಟ್ಟುಗಳ ಮುಖಂಡರು ಮತ್ತು ಸಂಘದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಾಲಿ ಆದಿವಾಸಿರಕ್ಷಣಾ ಪರಿಷತ್‌ ನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ  ಪಿ.ರಾಜೇಶ್ ರವರನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದಿದ್ದಾರೆ. ಕಳೆದ 6 ವರ್ಷಗಳಿಂದ ಆದಿವಾಸಿ ರಕ್ಷಣಾ ರಿಷತ್ ನ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆದಿವಾಸಿಗಳ ಪರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ರಾಜ್ಯ ಸಂಘಟನೆಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಶಕ್ತಿ ತುಂಬಿರುವುದನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನಲ್ಲಿ ಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ವಯಸ್ಸ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಕೂಡಲೇ ಆರೋಪಿಗೆ ಬಸ್ಸಿನಲ್ಲಿದ್ದ ಸಹ ಪ್ರಯಾಣಿಕರು ಹಲ್ಲೆ ನಡೆಸಿರುವ ಘಟನೆಯೊಂದು ಶಿರಾಡಿ ಘಾಟ್‌ ಪರಿಸರದಲ್ಲಿ ನಡೆದಿದೆ. ಈ ಕುರಿತ ವೀಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬವು ಧರ್ಮಸ್ಥಳಯಾತ್ರೆ ಕೈಗೊಂಡಿದ್ದು, ಬಾಲಕಿ ಕುಳಿತಿದ್ದ ಆಸನದ ಸನಿಹದಲ್ಲೇ ಕುಳಿತಿದ್ದ ವ್ಯಕ್ತಿ ಬಾಲಕಿಗೆ ಲೈಂಗಿಕ ಹಿಂಸೆ ನೀಡುವುದನ್ನು ಪ್ರಯಾಣಿಕರು ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಾಲಕಿ ಈ ಸಂದರ್ಭದಲ್ಲಿ ತನ್ನ ಸಂಬಂಧಿಕರಲ್ಲಿ ಈ ವಿಚಾರ ತಿಳಿಸಿದ್ದಾಳೆ. ಕೂಡಲೇ ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಕಿರುಕುಳ ನೀಡಿದ ವ್ಯಕ್ತಿಯ ಬೆಂಬಲಿಗನೋರ್ವ ಹೊರಗಿನವರಿಗೆ ಫೋನ್‌ ಮೂಲಕ ಇದನ್ನು ತಿಳಿಸಿದ್ದು, ಆ ನಂತರ ಕೆಲವು ಬಸ್ಸಿನೊಳಗೆ ಬಂದು ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಯನ್ನು ವಿಚಾರಿಸಲು ಮುಂದಾಗಿದ್ದಾರೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ವೀಡಿಯೋ…

Read More

ತಾಯಿಯೊಬ್ಬಳು ಮಗನನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಯಲಂಕದ RNZ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ.  ತಾಯಿ ರಮ್ಯಾ (40) ಎಂಬಾಕೆಯೇ ತನ್ನ ಮಗ  ಭಾರ್ಗವ್ (13)ನನ್ನು ಕೊಲೆ ಮಾಡಿ  ಬಳಿಕ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ. ಮೂರು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಕ್ಯಾನ್ಸರಿಂದ ಮೃತಪಟ್ಟಿದ್ದರು. ಹೀಗಾಗಿ ಈ ಘಟನೆಯಿಂದ  ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಪುತ್ರನನ್ನು ಮೊದಲು ಕೊಲೆಗೈದು ನಂತರ ರಮ್ಯ ನೇಣಿಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಯುವಕನೊಬ್ಬನಿಗೆ ಏಳು ಬಾರಿ ಹಾವು ಕಚ್ಚಿರುವ ಘಟನೆಯೊಂದು ಉತ್ತರಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ. ಯುವಕನನ್ನು ಉತ್ತರಪ್ರದೇಶ ಜಿಲ್ಲೆಯ ಸೌರಾ ಗ್ರಾಮದ ನಿವಾಸಿ ವಿಕಾಸ್ ದುಬೆ ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ತಿಂಗಳಲ್ಲಿ ಏಳು ಬಾರಿ ಹಾವಿನಿಂದ ಕಚ್ಚಿಸಿಕೊಂಡರೂ ಬದುಕಿದ್ದಾನೆ. ಇದೀಗ ಏಳನೇ ಬಾರಿ ಹಾವಿನಿಂದ ಕಚ್ಚಿಸಿಕೊಂಡು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಇಷ್ಟು ಬಾರಿ ಹಾವು ಕಚ್ಚಿದರೂ ಆತನ ಅದೃಷ್ಟ ಚೆನ್ನಾಗಿತ್ತು. ಇದಕ್ಕೆ ಈತನಿಗೆ ಚಿಕಿತ್ಸೆ ನೀಡುವ ವೈದ್ಯರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ವಿಕಾಸ್ ದುಬೆಗೆ ಜೂನ್‌ 2ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿತ್ತು. ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಗುಣಮುಖನಾಗಿ ಮನೆಗೆ ಬಂದಿದ್ದ. ಜೂನ್‌ 10ರಂದು ಮತ್ತೆ ಎರಡನೇ ಬಾರಿ ಹಾವು ಕಚ್ಚಿದೆ. ಈ ವೇಳೆಯೂ ಅದೇ ಆಸ್ಪತ್ರೆಗೆ ತೆರಳಿ ಅದೇ ವೈದ್ಯರ ಬಳಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದಾನೆ.…

Read More

6 ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧಿಕಾರಿಗಳು ಇದೀಗ ಅಪಹಾಸ್ಯಕ್ಕೆ ಗುರಿಯಾಗಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್ ಎಂಬವರನ್ನು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಟ್ರಾನ್ಸ್ ಫರ್ ಮಾಡಿದೆ. ವಾಸ್ತವವಾಗಿ, ಅವರು ಜನವರಿಯಲ್ಲೇ ಮೃತಪಟ್ಟಿದ್ದಾರೆ. ಜು.9ರಂದು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆ ಇಂಜಿನೀಯರ್ ಜನವರಿ 12ರಂದು ಮೃತಪಟ್ಟಿದ್ದರು. ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆರ್ಡರ್‌ ಹೊರಡಿಸಲಾಗಿದೆ. ಆರು ತಿಂಗಳ ಹಿಂದೆಯೇ ಮೃತಪಟ್ಟಿಟ್ಟಿರುವ ವಿಚಾರ ರಾಜ್ಯ ಸರ್ಕಾರಕ್ಕೆ ಮಾಹಿತಿಯೇ ಇಲ್ಲದಿರುವುದು ಇಲಾಖೆಗೆ ಭಾರಿ ಮುಜುಗರ ತಂದಿದೆ. ಹಾಗಿದ್ದರೆ ಈ ಆರು ತಿಂಗಳು ಸಂಬಳವೂ ಅವರ ಖಾತೆಗೆ ಜಮೆ ಆಗುತ್ತಿತ್ತೇ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿಲ್ಲ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿರುವ ಈ ಎಡವಟ್ಟು ಇಲಾಖೆಗೂ ಸಚಿವರಿಗೂ ಮುಜುಗರ ತಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಅಪರೂಪದ ಧ್ವನಿಯನ್ನು ಹೊಂದಿದ್ದ ನಟಿ ಹಾಗೂ ನಿರೂಪಕಿ ಅಪರ್ಣಾ ಸಾವಿನ ಬೆನ್ನಲ್ಲಿಯೇ ಬೆಂಗಳೂರಿನ ನಮ್ಮ ಮೆಟ್ರೋ ರೈಲಿನಲ್ಲಿ ಅವರ ಧ್ವನಿಯನ್ನು ಬದಲಾವಣೆ ಮಾಡುವುದಿಲ್ಲ ಎಂದು ಬಿಎಂಆರ್‌ಸಿಎಲ್ ಖಚಿತಪಡಿಸಿದೆ. ಆದರೆ  ಇನ್ನುಮುಂದೆ ಬೆಂಗಳೂರು ಮೆಟ್ರೋದ ವಿಸ್ತರಿತ ಮಾರ್ಗ ಹಾಗೂ ಹೊಸ ಮಾರ್ಗಗಳಲ್ಲಿ ಅಪರ್ಣಾ ಬದಲಾಗಿ ಬೇರೊಬ್ಬ ಮಹಿಳೆಯ ಧ್ವನಿ ನಿಮ್ಮ ಕಿವಿಗೆ ಕೇಳಲಿದೆ. ಅಪರ್ಣಾ ನಿಧನ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಹೊಸ ಮಾರ್ಗಗಳಲ್ಲಿ ಹೊಸ ಧ್ವನಿ ಬರಲಿದೆ. ಬೆಂಗಳೂರಿನ ಹೊಸ ಮೆಟ್ರೋ ಮಾರ್ಗಗಳಾದ ಆರ್.ವಿ. ರಸ್ತೆ- ಬೊಮ್ಮಸಂದ್ರ, ಹಸಿರು ಮಾರ್ಗದ ವಿಸ್ತರಿತ ಮಾರ್ಗ ನಾಗಸಂದ್ರ-ಮಾದವಾರ, ನಾಗವಾರ- ಗೊಟ್ಟಿಗೆರೆ – ವಿಮಾನ ನಿಲ್ದಾಣ ಮಾರ್ಗದಲ್ಲಿ ಅಪರ್ಣಾ ಧ್ವನಿ ಕೇಳಲು ಇರುವುದಿಲ್ಲ. ಈವರೆಗೆ ನಮ್ಮ ಮೆಟ್ರೋ ಸಂಚಾರ ಮಾಡುವ ಎಲ್ಲ ಮಾರ್ಗಗಳಲ್ಲಿ ಎಂದಿನಂತೆಯೇ ಅಪರ್ಣಾ ಧ್ವನಿ ಜೀವಂತವಾಗಿರುತ್ತದೆ. ನಮ್ಮ ಮೆಟ್ರೋದ ನೇರಳೆ ಮಾರ್ಗ ರಸ್ತೆಯ ಚಲ್ಲಘಟ್ಟ- ವೈಟ್ ಫೀಲ್ಡ್ ಹಾಗೂ ಹಸಿರು ಮಾರ್ಗದ ಯಲಚೇನಹಳ್ಳಿ- ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಅಪರ್ಣಾ ಧ್ವನಿ ಕೇಳುತ್ತಿದ್ದು,…

Read More