Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಪ್ರಾಣಿ ಪ್ರಿಯರಂತೆ ಅನೇಕರು ಪಕ್ಷಿ ಪ್ರಿಯರೂ ಇದ್ದಾರೆ. ಮನೆಗಳಲ್ಲಿಯೂ ಅವುಗಳನ್ನು ಸಾಕಿದ್ದಾರೆ. ಇಲ್ಲಇದ್ದರೆ ಪ್ರಕೃತಿಯಲ್ಲಿ ಅವುಗಳನ್ನು ಕಂಡು ಮುದ್ದಿಸಿ ಆನಂದಿಸುವವರೂ ಇದ್ದಾರೆ. ಅದರಲ್ಲಿ ಪಾರಿವಾಳ ಎಂದರೆ ಅನೇಕರಿಗೆ ಪ್ರೀತಿ. ಸುಲಭದಲ್ಲಿ ಲಭ್ಯವಾಗುವ ಇವುಗಳನ್ನು ಸಾಕುವುದು, ಮುದ್ದಿಸುವುದು, ಕಂಡಲ್ಲಿ ಅವುಗಳಿಗೆ ಆಹಾರ ಹಾಕುವುದೆಂದರೆ ಅನೇಕರಿಗೆ ಅದೇನೋ ಇಷ್ಟ. ಆದರೆ ಈ ಪ್ರೀತಿಯೇ ಬಾಲಕನ ಜೀವಕ್ಕೆ ಕುತ್ತು ತಂದಿದೆ. ಪಾರಿವಾಳದ ಸಹವಾಸದಿಂದ ಬಾಲಕನೊಬ್ಬ ಪ್ರಾಣಾಪಾಯ ಉಂಟುಮಾಡಬಲ್ಲ ಅಲರ್ಜಿಗೆ ಒಳಗಾಗಿದ್ದಾನೆ. 11 ವರ್ಷದ ದೆಹಲಿಯ ಈ ಬಾಲಕ ಸಾಮಾನ್ಯ ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷೆಗೆ ಒಳಪಡಿಸಿದಾಗ ಅಪಾಯಕಾರಿ ಅಲರ್ಜಿ ವರದಿಯಾಗಿದೆ. ಆಗ ವೈದ್ಯರು ಪಾರಿವಾಳದ ಸಂಪರ್ಕದಿಂದಲೇ ಇದು ಉಂಟಾಗಿದ್ದು, ಪಾರಿವಾಳದ ಗರಿ ಮತ್ತು ತ್ಯಾಜ್ಯಕ್ಕೆ ದೀರ್ಘಕಾಲ ತೆರೆದುಕೊಂಡಿದ್ದರಿಂದಲೇ ಹೀಗಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವೈದ್ಯರು ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಶ್ವಾಸಕೋಶ ಉರಿಯೂತವಿದ್ದು, ಎಚ್ ಪಿ ಸೂಚನೆಗಳು ಕಾಣಿಸುತ್ತಿದ್ದವು. ಎದೆಯ ಭಾಗದಲ್ಲಿ ಕಪ್ಪಗಿನ ಪ್ರದೇಶ ಬಿಳಿಯಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ. ಅಲ್ಲದೆ…
ಡೆಂಘಿ ಜ್ವರ ಮುಖ್ಯವಾಗಿ ವೈರಸ್ ಗಳಿಂದ ಹರಡುತ್ತದೆ. DENV1, DENV2, DENV3, DENV4 ಎಂಬ ನಾಲ್ಕು ವಿಧದ ವೈರಸ್ ಗಳಿಂದ ಈ ಜ್ವರ ಕಾಣಿಸಿಕೊಳ್ಳುತ್ತದೆ. ಈ ಸೋಂಕಿನ ಜ್ವರ ಎಷ್ಟು ಅಪಾಯಕಾರಿ ಎಂದರೆ ಈ ಕಾಯಿಲೆ ಬಂದಾಗ ವ್ಯಕ್ತಿಯ ರಕ್ತದಲ್ಲಿನ ಪ್ಲೇಟ್ಲೆಟ್ ಗಳು ಹಾಗೂ ಬಿಳಿರಕ್ತ ಕಣಗಳನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ. ಈ ರಕ್ತದ ಪ್ಲೇಟ್ ಲೆಟ್ ಗಳು ಅಥವಾ ಥ್ರಂಬೋಸೈಟ್ ಗಳು ಅಂದರೆ, ಇದು ನಮ್ಮ ರಕ್ತದಲ್ಲಿನ ಸಣ್ಣ ಜೀವಕೋಶದ ತುಣುಕುಗಳಾಗಿವೆ, ಅದು ಹೆಪ್ಪುಗಟ್ಟುವಿಕೆಯನ್ನು ರೂಪಿಸುತ್ತದೆ ಮತ್ತು ರಕ್ತಸ್ರಾವವನ್ನು ನಿಲ್ಲಿಸುತ್ತದೆ. ಡೆಂಗ್ಯೂ ಸೋಂಕಿನ ಪ್ರಕರಣಗಳಲ್ಲಿ ಸಾಮಾನ್ಯ ಪ್ಲೇಟ್ಲೆಟ್ ಸಂಖ್ಯೆ 1.5 ಲಕ್ಷದಿಂದ 4 ಲಕ್ಷವಿರುವುದು 20,000 40,000 ಪ್ಲೇಟ್ ಲೆಟ್ ಗಳಿಗೆ ಇಳಿಯಬಹುದು. ರಕ್ತದಲ್ಲಿ ಪ್ಲೇಟ್ ಲೆಟ್ ಎಣಿಕೆಯಲ್ಲಿ ಕಡಿಮೆ ಆದಂತೆ ರಕ್ತಸ್ರಾವದ ಜೊತೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿ ದೇಶದಲ್ಲಿ ಡೆಂಘೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ರೋಗದಿಂದ ಚೇತರಿಸಿಕೊಳ್ಳಲು, ನಿಮ್ಮ ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚಿಸಲು…
ಐಸ್ ಕ್ರೀಮ್ ಮಾರಾಟಗಾರನೊಬ್ಬ ತನ್ನ ಬಳಿ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಗೆ ಫ್ರೀ ಐಸ್ ಕ್ರೀಮ್ ಆಸೆ ತೋರಿಸಿ ಆ ಮುಗ್ಧ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿರುವ ಅಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರನೊಬ್ಬ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಮಾಹಿತಿ ಪ್ರಕಾರ ಎರಡು ವಾರಗಳ ಹಿಂದೆ ಜಹಾಂಗೀರಾಬಾದ್ನಲ್ಲಿ 11 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಐಸ್ ಕ್ರೀಮ್ ಕೊಳ್ಳಲು ಬಂದಿದ್ದು, ಆ ಸಂದರ್ಭದಲ್ಲಿ ಮಾರಾಟಗಾರ ಮೊಹಮ್ಮದ್ ಖಾಲಿದ್ ಖಾನ್ (52) ಎಂಬಾತ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈತನ ಈ ಹೇಯ ಕೃತ್ಯವನ್ನು ಸ್ಥಳೀಯ ನಿವಾಸಿಯಾದ ರಮೇಶ್ ಸಾಹು ಎಂಬಾತ ರೆಕಾರ್ಡ್ ಮಾಡಿದ್ದು, ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿಯ ತಾಯಿ ದೂರನ್ನು ನೀಡಿದ್ದು, ತಾಯಿ ನೀಡಿದ ದೂರಿನ ಹಿನ್ನೆಲೆ…
ಭಾರತದಲ್ಲಿ ಅನೇಕ ನಕಲಿ ವಿಶ್ವವಿದ್ಯಾಲಯಗಳಿವೆ. ಯುಜಿಸಿಯಿಂದ ಮಾನ್ಯತೆ ಪಡೆಯದಿದ್ದರೂ, ಈ ವಿಶ್ವವಿದ್ಯಾಲಯಗಳು ಪ್ರವೇಶ ನೀಡುವ ಮೂಲಕ ಮಕ್ಕಳ ವೃತ್ತಿಜೀವನದೊಂದಿಗೆ ಆಟವಾಡುತ್ತಿವೆ. ನೀವು ನಕಲಿ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದರೆ, ನಂತರ ಸಾಕಷ್ಟು ನಷ್ಟವಾಗಬಹುದು (ಯುಪಿ ನಕಲಿ ವಿಶ್ವವಿದ್ಯಾಲಯ ಪಟ್ಟಿ). ದಕ್ಷಿಣ ಭಾರತದ ನಕಲಿ ವಿಶ್ವವಿದ್ಯಾಲಯದ ಹೆಸರುಗಳನ್ನು ತಿಳಿಯಿರಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶಾದ್ಯಂತ ಎಲ್ಲಾ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನು ಯುಜಿಸಿ ugc.gov.in ಅಧಿಕೃತ ವೆಬ್ಸೈಟ್ನಲ್ಲಿ ಪ್ರವೇಶಿಸಬಹುದು. ದಕ್ಷಿಣ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಪುದುಚೇರಿ ಮತ್ತು ಕೇರಳದಲ್ಲಿ ಅನೇಕ ನಕಲಿ ವಿಶ್ವವಿದ್ಯಾಲಯಗಳಿವೆ. ಕರ್ನಾಟಕ ನಕಲಿ ವಿಶ್ವವಿದ್ಯಾಲಯ: ಕರ್ನಾಟಕ — ಬಡಗಾಂವಿ ಸರ್ಕಾರ್ ವಿಶ್ವ ಮುಕ್ತ ವಿಶ್ವವಿದ್ಯಾಲಯ ಶಿಕ್ಷಣ ಸೊಸೈಟಿ, ಗೋಕಾಕ್, ಬೆಳಗಾವಿ ಕೇರಳ ನಕಲಿ ವಿಶ್ವವಿದ್ಯಾಲಯ: ಕೇರಳ — ಸೇಂಟ್ ಜಾನ್ಸ್ ವಿಶ್ವವಿದ್ಯಾಲಯ, ಕಿಶನಟ್ಟಂ, ಕೇರಳ ಕೇರಳ ಇಂಟರ್ನ್ಯಾಷನಲ್ ಇಸ್ಲಾಮಿಕ್ ಯೂನಿವರ್ಸಿಟಿ ಆಫ್ ಪ್ರೊಫೆಷನಲ್ ಮೆಡಿಸಿನ್ (ಐಐಯುಪಿಎಂ), ಕುನ್ನಮಂಗಲಂ, ಕೋಝಿಕೋಡ್, ಕೇರಳ -…
ತೆರಿಗೆ ನಿಯಮಗಳನ್ನು ಅನುಸರಿಸಲು ಮತ್ತು ಅನಗತ್ಯ ದಂಡಗಳನ್ನು ತಪ್ಪಿಸಲು ಐಟಿಆರ್ ಅನ್ನು ಸರಿಯಾಗಿ ಸಲ್ಲಿಸುವುದು ಮುಖ್ಯ. ಈ ನಿರ್ಧಾರವನ್ನು ತೆಗೆದುಕೊಳ್ಳಲು, ನೀವು ನಿಮ್ಮ ಐಟಿಆರ್ ಅನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಮತ್ತು ಯಾವುದೇ ತೊಂದರೆಯಿಲ್ಲದೆ, ಈ 9 ವಿಷಯಗಳನ್ನು ನೆನಪಿನಲ್ಲಿಡಿ. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ. ಫಾರ್ಮ್ 16, ಫಾರ್ಮ್ 26 ಎಎಸ್, ಬ್ಯಾಂಕ್ ಸ್ಟೇಟ್ಮೆಂಟ್ಗಳು, ಹೂಡಿಕೆ ಮೂಲಗಳು ಮುಂತಾದ ಎಲ್ಲಾ ದಾಖಲೆಗಳನ್ನು ನೀವು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ. ಸರಿಯಾದ ಐಟಿಆರ್ ಫಾರ್ಮ್ ಅನ್ನು ಆಯ್ಕೆ ಮಾಡಿ. ನಿಮ್ಮ ಆದಾಯದ ಮೂಲ ಮತ್ತು ವರ್ಗದ ಆಧಾರದ ಮೇಲೆ ಐಟಿಆರ್ ಫಾರ್ಮ್ ಅನ್ನು ಆರಿಸಿ. ಆದಾಯದ ಎಲ್ಲಾ ಮೂಲಗಳನ್ನು ತಿಳಿದುಕೊಳ್ಳಿ. ಸಂಬಳ, ಬಾಡಿಗೆ ಆದಾಯ, ಠೇವಣಿಗಳ ಮೇಲಿನ ಬಡ್ಡಿ, ಲಾಭಾಂಶ ಮುಂತಾದ ಎಲ್ಲಾ ಆದಾಯ ಮೂಲಗಳನ್ನು ಸೇರಿಸಿ. ಟಿಡಿಎಸ್ ಪರಿಶೀಲಿಸಿ. ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಫಾರ್ಮ್ 26 ಎಎಸ್ ನಲ್ಲಿ ನೀಡಲಾದ ಆದಾಯ ಮೂಲ ಮಾಹಿತಿಯೊಂದಿಗೆ ಕ್ರಾಸ್ ಚೆಕ್ ಮಾಡಿ. ಕ್ಲೈಮ್ ಕಡಿತಗಳು ಮತ್ತು…
ಔರಾದ: ಬೀದರ ಜಿಲ್ಲೆ ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ಟಿಪ್ಪು ಸುಲ್ತಾನ ಚೌಕ್ ಮುಂಭಾಗದ ರಸ್ತೆಯಲ್ಲಿ ಕೊಳಚೆ ನೀರು ನಿಂತು ಮಾರಕ ರೋಗಕ್ಕೆ ಆಹ್ವಾನ ನೀಡುತ್ತಿದೆ ಈ ಕೊಳಚೆ ನೀರು ನಿಂತಿರುವ ರಸ್ತೆಯ ಸುತ್ತಲು ಸಾಕಷ್ಟು ಮನೆಗಳಿದ್ದು, ಇದರ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ರೋಗದ ಭೀತಿ ಕಾಡುತಿದೆ. ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಅವ್ಯವಸ್ಥೆ ಇದ್ದು ಇದನ್ನು ನೋಡಿದರೂ ಸಹ ಈ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧ ಇಲ್ಲದ ಹಾಗೆ ನೋಡುತಿದ್ದಾರೆ ರಾಜ್ಯವೇ ಮಾರಕ ರೋಗವಾದ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರೆ ಈ ಗ್ರಾಮದ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸದಸ್ಯರು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದಾರೆ. ಈ ಕೂಡಲೇ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ಗ್ರಾಮದ ಕಡೆ ಗಮನ ಹರಿಸಿ ಜನರ ಆರೋಗ್ಯ ಕಾಪಾಡಬೇಕು. ಮುಗಿಯದ ಸಮಸ್ಯೆ: ಇಲ್ಲಿನ ರಸ್ತೆಯಲ್ಲಿ ಅನೇಕ ತಿಂಗಳಿನಿಂದಲೂ ಸಮಸ್ಯೆ ಹೀಗೆ ಇದ್ದು, ಈ ಬಗ್ಗೆ …
ಹೊರಮಾವು ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಎಚ್ ಎಫ್ ಸಿ ಪ್ರೀಮಿಯರ್ ಲೀಗ್ ಸೀಸನ್ 4 ಬೆಂಗಳೂರಿನ ಮಾರ್ತಹಳ್ಳಿ ಟರ್ಫ್ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿತು. ಈ ಕ್ರೀಡಾ ಮೇಳದಲ್ಲಿ ಟೀಮ್ ಎಕ್ಸ್ ಬಾಯ್ಸ್ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದ್ದು, ದ್ವಿತೀಯ ಸ್ಥಾನವನ್ನು ಟೀಮ್ ಟ್ರೋಫಿ ಫೈಟರ್ಸ್ ಪಡೆದುಕೊಂಡಿದೆ. * ಚಾಂಪಿಯನ್ಸ್: ಟೀಮ್ ಎಕ್ಸ್ ಬಾಯ್ಸ್ (ನಾಯಕ: ಗಜ್ಜಾಲಿ) * ರನ್ನರ್ಸ್: ಟೀಮ್ ಟ್ರೋಫಿ ಫೈಟರ್ಸ್ (ನಾಯಕ: ಜಬ್ಬಾರ್) ಪ್ರಶಸ್ತಿ ವಿಜೇತರು: – ಬೆಸ್ಟ್ ಬೌಲರ್: ಇರ್ಶಾದ್ (ಟೀಮ್ ಎಕ್ಸ್ ಬಾಯ್ಸ್) – ಬೆಸ್ಟ್ ಬ್ಯಾಟ್ಸ್ಮನ್: ನೌಶಾದ್ ಗೋಳಿಯಂಗಡಿ (ಟೀಮ್ ಟ್ರೋಫಿ ಪೈಟರ್ಸ್) – ಮಾನ್ ಆಫ್ ದಿ ಸೀರೀಸ್: ಮೊಹಿನ್ (ಟೀಮ್ ಎಕ್ಸ್ ಬಾಯ್ಸ್) – ಮಾನ್ ಆಫ್ ದಿ ಮ್ಯಾಚ್: ಹಬೀಬ್ (ಟೀಮ್ ಎಕ್ಸ್ ಬಾಯ್ಸ್) ಎಲ್ಲಾ ಆಟಗಾರರು ಮತ್ತು ತಂಡಗಳು ತಮ್ಮ ಅತ್ಯುತ್ತಮ ಪ್ರದರ್ಶನ ತೋರಿದ ಕ್ರೀಡಾ ಉತ್ಸವದಲ್ಲಿ ಈ ವಿಜೇತರು ಬಹುಮಾನಗಳನ್ನು ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಔರಾದ: ಕಮಲ ನಗರ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರ ನೇಮಕ ರದ್ದುಪಡಿಸಲು ಆಗ್ರಹಿಸಿ ತಾಲೂಕಿನ ಸಂತಪುರದಲ್ಲಿ ಡಿಎಸ್ಎಸ್ ಪ್ರತಿಭಟನೆ ನಡೆಸಿತು. ಶುಕ್ರವಾರ ಸಂತಪುರ ಸಿಡಿಪಿಒ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ತಾಂಡಾಗಳಲ್ಲಿರುವ ಅಂಗನವಾಡಿಗಳಿಗೆ ಮಾತ್ರ ಅರ್ಜಿ ಕರೆದಿದ್ದಾರೆ ಎಂದು ಆರೋಪಿಸಿದರಲ್ಲದೇ ಅಂಗನವಾಡಿ ಕಾರ್ಯಕರ್ತೆ ನೇಮಕ ರದ್ದು ಪಡಿಸುವಂತೆ ಒತ್ತಾಯಿಸಿದರು. ಬೀದರ ಜಿಲ್ಲಾ ಔರಾದ ಕಮಲ ನಗರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗಳ ನೇಮಕಾತಿಯಲ್ಲಿ ಲೋಪದೋಷವಾಗಿದ್ದು, ಇದನ್ನು ನ್ಯಾಯಯುತವಾಗಿ ಸರಿಪಡಿಸುವಂತೆ ಆಗ್ರಹಿಸಿ ಇದೇ ವೇಳೆ ದಲಿತ ಸಂಘರ್ಷ ಸಮಿತಿ ( ದಲಿತ ವಾದ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಮನವಿ ನೀಡಿದರು. ಪ್ರತಿಭಟನೆಯಲ್ಲಿ ಧನರಾಜ, ಸಂಜೀವ ಕುಮಾರ, ಬಂಟಿ ದಾರಬಾರೆ, ದಿಲೀಪ, ಗೌತಮ, ತುಕಾರಾಮ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ…
ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅದರಲ್ಲೂ ವೀಕೆಂಡ್ನಲ್ಲಿ ಜನರು ಹೆಚ್ಚಾಗಿ ಬರುತ್ತಾರೆ. ಇದೀಗ ರಾಜ್ಯಾದ್ಯಂತ ಶಕ್ತಿ ಯೋಜನೆ ಚಾಲ್ತಿಯಲ್ಲಿದೆ. ಆದ್ದರಿಂದ ಮಹಿಳೆಯರು ಆಗಮಿಸುವ ನಿರೀಕ್ಷೆ ಜಾಸ್ತಿಯಿದೆ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಡ ನಿಮಿತ್ತ ಪೂಜಾ ವಿಧಿ ವಿಧಾನಗಳು ಆರಂಭವಾಗಿದೆ. ನಾಡ ದೇವತೆ ಚಾಮುಂಡಿಗೆ ಅಭಿಷೇಕ, ಅರ್ಚನೆ, ಅಷ್ಟೋತ್ತರ ಪೂಜೆಗಳು ದೇವಸ್ಥಾನದಲ್ಲಿ ನೆರವೇರುತ್ತಿವೆ. ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಇದೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ನಿನ್ನೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆಯನ್ನು…
ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ. ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯಮಟ್ಟದ ವಾರ್ ರೂಮ್ಗೆ ಸಲ್ಲಿಸಬೇಕು ಎಂದು ಇಲಾಖೆ ನಿರ್ದೇಶನ ನೀಡಿದೆ. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…