Author: admin

ಉತ್ತರ ಕನ್ನಡ ಜಿಲ್ಲೆಯ 12 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರಪ್ರದೇಶಗಳಲ್ಲಿ ನೈರ್ಮಲ್ಯ ಮತ್ತು ಸಾರ್ವಜನಿರ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1368.81 ಲಕ್ಷ ರೂ ಗಳ ವೆಚ್ಚದಲ್ಲಿ 12 ಎಂ.ಆರ್.ಎಫ್.(Materials Recovery Facility ) ಕೇಂದ್ರಗಳನ್ನು ಆರಂಭಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಾದ, ಕಾರವಾರದಲ್ಲಿನ 31 ವಾರ್ಡ್, ದಾಂಡೇಲಿಯ 31, ಶಿರಸಿಯ 31, ಭಟ್ಕಳದ 23, ಕುಮಟಾದ 23, ಅಂಕೋಲದ 23, ಹಳಿಯಾಳದ 23, ಹೊನ್ನಾವರದ 20, ಸಿದ್ದಾಪುರದ 15, ಯಲ್ಲಾಪುರದ 19, ಮುಂಡಗೋಡ 19 ಮತ್ತು ಜಾಲಿಯ 20 ಸೇರಿದಂತೆ ಒಟ್ಟು 298 ವಾರ್ಡ್ಗಳಿಂದ ಪ್ರತಿ ದಿನ 125.6 ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 43.96 ಟನ್ ಘನ ತ್ಯಾಜ್ಯವನ್ನು ಸಂಗ್ರಹವಾಗಿದೆ. ಈ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ಪರಿಸರದಲ್ಲಿ ನೈರ್ಮಲ್ಯ ಕಾಪಾಡುವುದು…

Read More

ಕಾರವಾರ: ಡೆಂಗ್ಯೂ ರೋಗ ನಿಯಂತ್ರಣ ಕುರಿತಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುವ ಎಲ್ಲಾ ನಿಯಂತ್ರಣ ಕ್ರಮಗಳನ್ನು ಸಾರ್ವಜನಿಕರು ತಮ್ಮ ಮನೆಯ ಒಳಗೆ ಮತ್ತು ಮನೆಯ ಸುತಮುತ್ತಲಿನ ಅವರಣದಲ್ಲಿ ತಪ್ಪದೇ ಅಳವಡಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಳ್ಳದಂತೆ ತಡೆಯುವ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು. ಅವರು ಶುಕ್ರವಾರ, ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯ ಅಂಗವಾಗಿ, ಕಾರವಾರದ ಅರ್ಜುನ್ ಟಾಕೀಸ್ ಬಳಿಯಲ್ಲಿನ ಮನೆಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ, ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಮನೆಯಲ್ಲಿನ ಅಲಂಕಾರಿಕ ಕುಂಡಗಳಲ್ಲಿ ನೀರು ನಿಲ್ಲದಂತೆ ಮತ್ತು ಮನೆಯ ಒಳಗೆ ಫ್ರಿಡ್ಸ್ ಗಳ ಕೆಳಗೆ ಸಹ ನೀರು ಶೇಖರವಾಗದಂತೆ ಎಚ್ಚರವಹಿಸಬೇಕು. ಡ್ರಮ್, ಬ್ಯಾರಲ್ ಗಳಲ್ಲಿ ತುಂಬಿರುವ ನೀರನ್ನು ಆಗಾಗ್ಗೆ ಬದಲಾಯಿಸುವ ಮೂಲಕ ಸೊಳ್ಳೆಗಳು ಮೊಟ್ಟೆಗಳನ್ನು ಇಡದಂತೆ ಮತ್ತು ಈಗಾಗಲೇ ಇಟ್ಟಿರುವ ಮೊಟ್ಟೆಗಳನ್ನು ನಾಶ…

Read More

ಆಷಾಢ ಮಾಸದ ಶುಕ್ರವಾರವನ್ನು ಆಷಾಢ ಶುಕ್ರವಾರವೆಂದು ಕರೆಯಲಾಗುತ್ತದೆ. ಈ ದಿನವನ್ನು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಕೆಲವರು ಆಷಾಢ ಮಾಸದ ಇಡೀ ತಿಂಗಳು ಲಕ್ಷ್ಮಿಯನ್ನು ಪೂಜಿಸುತ್ತಾರೆ. ಇನ್ನು ಕೆಲವರು ಆಷಾಢದಲ್ಲಿ ಶುಕ್ರವಾರದಂದು ವಿಶೇಷ ಪೂಜೆ ಸಲ್ಲಿಸಲಾಗುವುದು. ಆಷಾಢ ಮಾಸದಲ್ಲಿ ಹಲವಾರು ಪ್ರಮುಖ ವ್ರತಗಳನ್ನು ಆಚರಿಸಲಾಗುವುದು. ಅದರಲ್ಲೊಂದು ಆಷಾಢ ಶುಕ್ರವಾರ. ಆಷಾಢ ಮಾಸದಲ್ಲಿ ದೇವಿ ಶಕ್ತಿಗಳನ್ನು ಆರಾಧಿಸಲಾಗುವುದು. ಈ ತಿಂಗಳಿನಲ್ಲಿ ದೇವಿಯ ಶಕ್ತಿ ಭೂಮಿಯ ಮೇಲೆ ಅಧಿಕವಿರುತ್ತದೆ, ಇದರಿಂದಾಗಿ ದೇವಿಯನ್ನು ಆರಾಧಿಸುವುದರಿಂದ ಅನೇಕ ಪ್ರಯೋಜನಗಳು ಸಿಗುವುದು. ಶಕ್ತಿಯ ಆರಾಧನೆ ಇರುವ ದೇವಸ್ಥಾನಗಳಲ್ಲಿ ಈ ಮಾಸ ವಿಶೇಷ. ಉದಾರಣೆಗೆ ಮೈಸೂರಿನ ಚಾಮುಂಡಿ ದೇವಾಲಯ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಾಲಯ ಮುಂತಾದ ಕಡೆಗಳೆಲ್ಲ ಶಕ್ತಿ ಆರಾಧನೆಗೆ ಹೆಸರುವಾಸಿ, ಇಲ್ಲಿ ಆಷಾಢ ಶುಕ್ರವಾರಗಳಂದು ವಿಶೇಷ ಪೂಜೆ ನೆರವೇರುತ್ತದೆ. ಅಂದು ಅಲ್ಲಿ ದರ್ಶನ ಪಡೆಯುವುದು ಕೂಡ ಪುಣ್ಯಕಾರ್ಯ. ಆಷಾಢ ಮಾಸದ ಮತ್ತೊಂದು ಮಹತ್ವ. ಈ ಅವಧಿಯಲ್ಲಿ ರಥ ಯಾತ್ರೆ, ಚಾರ್ತುಮಾಸ ಯಾತ್ರೆ, ಪಾಲ್ಕಿ ಯಾತ್ರೆ ಮುಂತಾದ ಪೂಜೆ…

Read More

ತಂತಿ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ರಿಪ್ಪನ್‌ ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೆಳಗಿನಜಾವ ಯುವಕನ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ತಂತಿ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಂಗ ಮಾಡುತಿದ್ದ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…

Read More

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಡೆಂಗ್ಯೂ ಮುಂತಾದ ರೋಗಗಳ ಕುರಿತು ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಪ್ರಸ್ತುತ ಡೆಂಗ್ಯೂ, ಚಿಕನ್‌ ಗುನ್ಯ ಮುಂತಾದ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಈ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ವಿಸ್ತ್ರತವಾದ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಉಲ್ಲೇಖ ಮಾಡಿ ಸುತ್ತೋಲೆ ಹೊರಡಿಸಿದೆ. ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಜಾಗಗಳಲ್ಲಿ ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸತಕ್ಕದ್ದು ಮತ್ತು ಇಂತಹ ಸನ್ನಿವೇಶಗಳ ಹತ್ತಿರ ಶಾಲಾ ವಿದ್ಯಾರ್ಥಿಗಳು ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ…

Read More

ತುಮಕೂರು : ಅಂಗನವಾಡಿ ಕೇಂದ್ರದಲ್ಲಿ ಕುಕ್ಕರ್ ಸ್ಪೋಟಗೊಂಡು ಕೆಲಕಾಲ ಗಾಬರಿ ಹುಟ್ಟಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿಯ ಸಿ.ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗನವಾಡಿಯಲ್ಲಿ 14 ಮಕ್ಕಳು ಇದ್ದರು. ಸಿ ಯಡವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಊಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡಿದೆ. ಕೂಡಲೇ ಮಕ್ಕಳನ್ನ ಅಂಗನವಾಡಿ ಕೊಠಡಿಯಿಂದ ಹೊರಕರೆತಂದು ರಕ್ಷಣೆ ಮಾಡಲಾಗಿದೆ. ಅಂಗನವಾಡಿಗೆ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಿಸಿಕೊಂಡುವಂತೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದ ಗ್ರಾಮಸ್ಥರು. ಈ ಬಗ್ಗೆ ತಲೆಗೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪಾವಗಡ:  ಪಾವಗಡ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ  ಆರೋಪಿಗಳನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ  ರೈನ್ ಗೇಜ್ ಬಡಾವಣೆಯಲ್ಲಿ ವಾಸವಿದ್ದ ಗೌಸ್ ಮದ್ದೀನ್ (28) ಮತ್ತು ಪಿ.ರೊಪ್ಪ  ಗ್ರಾಮದ ಕುಮಾರ್ (27)  ಬಂಧಿತ ಆರೋಪಿಗಳು. ಪಾವಗಡ ಪೊಲೀಸ್ ಠಾಣೆಯ  ಪೇದೆಗಳಾದ ಶ್ರೀಕಾಂತ್ ನಾಯಕ್  ಮತ್ತು ಸಂತೋಷ್ ಕುಮಾರ್ ಗುಪ್ತ ಮಾಹಿತಿ ಸಂಗ್ರಹಣೆ ವಿಚಾರವಾಗಿ ಪಟ್ಟಣದಲ್ಲಿ ಗಸ್ತು ನಿರ್ವಹಿಸುತ್ತಿದ್ದು, ಪಟ್ಟಣದ ಹುಲಿ ಬೆಟ್ಟ ತಾಂಡದ ಬಳಿ ಇರುವ  ಬಾಲಾಜಿ ಲೇಔಟ್ ನ  ಸಮೀಪದ ಮೋರಿಯ ಬಳಿ  ಆಟೋ ಒಂದು ಅನುಮಾನಸ್ಪದ  ರೀತಿಯಲ್ಲಿ  ನಿಲ್ಲಿಸಿದ್ದು, ಪೊಲೀಸರನ್ನು ಕಂಡ ಕೂಡಲೇ  ಆರೋಪಿಯೊಬ್ಬನು ಓಡಲು  ಪ್ರಯತ್ನಿಸಿದ್ದು, ಪೊಲೀಸರು ಆತನನ್ನು ಹಿಡಿದು  ಆಟೋ ಬಳಿ ಕರೆ ತಂದು ಆಟೋ ಪರಿಶೀಲಿಸಿದಾಗ ಆಟೋದ ಹಿಂಬದಿ ಸೀಟಿನಲ್ಲಿ  ಗಾಟು ವಾಸನೆ ಬರುತ್ತಿದ್ದ  ಚೀಲ ಪತ್ತೆಯಾಗಿತ್ತು. ಅದನ್ನು ಪರಿಶೀಲಿಸಿದಾಗ  ಗಾಂಜಾ ಎಂದು ತಿಳಿದುಬಂದಿದ್ದು, ತೂಕ ಮಾಡಿದಾಗ   850 ಗ್ರಾಂ  ಗಾಂಜಾ ಎಂದು ತಿಳಿದು ಬಂದಿದೆ. ಗಾಂಜಾ ಸಮೇತ ಪೊಲೀಸರು ಇಬ್ಬರು…

Read More

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಎಂಬವರು ತಮ್ಮ ಖಾಸಗಿ ಔಡಿ ಸೆಡಾನ್ ಕಾರಿಗೆ ಸೈರನ್ ಹಾಗೂ ಸರ್ಕಾರಿ ಫಲಕ ಅಳವಡಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಆರೋಪದ ಬೆನ್ನಲ್ಲೇ ಪೂಜಾ ಅವರ ನೇಮಕಾತಿ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯ ಸಂದರ್ಭದಲ್ಲಿ ಇತರ ಹಿಂದುಳಿದ ವರ್ಗಗಳ ಪ್ರಮಾಣ ಪತ್ರವನ್ನು ಪೂಜಾ ಸಲ್ಲಿಸಿರುವುದು ನಕಲಿ ಎಂಬ ಆರೋಪವೂ ಇದೀಗ ಕೇಳಿಬಂದಿದೆ. ಪೂಜಾ ಖೇಡ್ಕರ್ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ 841ನೇ ರ‍್ಯಾಂಕ್ ಪಡೆದಿದ್ದರು. ಪ್ರೊಬೇಷನರಿ ಹುದ್ದೆಯ ಅವಧಿಯಲ್ಲಿ ಇವರ ವಿರುದ್ಧ ಅಧಿಕಾರ ದುರ್ಬಳಕೆಯ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪುಣೆಯಿಂದ ವಾಶೀಂ ಜಿಲ್ಲೆಗೆ ಸರ್ಕಾರ ವರ್ಗಾವಣೆ ಮಾಡಿದೆ. ನೇಮಕಾತಿ ಸಂದರ್ಭದಲ್ಲಿ ವಿನಾಯತಿ ಪಡೆಯಲು ನಕಲಿ ಒಬಿಸಿ ಪ್ರಮಾಣಪತ್ರದ ಜತೆಗೆ, ದೃಷ್ಟಿ ದೋಷ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಯ ಪ್ರಮಾಣಪತ್ರವನ್ನೂ ಇವರು ಸಲ್ಲಿಸಿದ್ದರು ಎನ್ನಲಾಗಿದೆ. ಇವುಗಳ ಪರಿಶೀಲನೆಗೆ ದೆಹಲಿಯಲ್ಲಿರುವ ಏಮ್ಸ್‌ಗೆ ಹಾಜರಾಗಿ ಪರೀಕ್ಷೆಗೆ…

Read More

ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಡಿಫರೆಂಟ್‌ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಖ್ಯಾತಿ ಪಡೆದಿರುವ ವಿಕಾಸ್‌, ವಿಕ್ಕಿಪೀಡಿಯಾ ಅಂತಾಲೇ ಫುಲ್ ಫೇಮಸ್‌ ಆಗಿದ್ದಾರೆ. ಕಾಮಿಡಿ ವಿಡಿಯೋಗಳು, ಹಾಡುಗಳು ಹಾಗೂ ಸಾಮಾಜಿಕ ಕಳಕಳಿ ಇರುವಂತಹ ವಿಡಿಯೋಗಳನ್ನು ಮಾಡುವ ಇವರು ನಾನು ನಂದಿನಿ ಬೆಂಗಳೂರಿಗೆ ಬಂದಿನಿ ಎನ್ನುವ ಹಾಡಿನ ಮೂಲಕ ಸಖತ್‌ ವೈರಲ್‌ ಆಗಿದ್ದರು. ಜೊತೆಗೆ ಕರಿಮಣಿ ಮಾಲೀಕ ರಾಹುಲ್ಲಾ ಎನ್ನುವ ಇವರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ನಿರೀಕ್ಷೆಗೂ ಮೀರಿ ಹಿಟ್‌ ಆಗಿತ್ತು. ಇದೀಗ ಅದೇ ರೀತಿ ಜನರನ್ನು ನಗಿಸಲು ಹೋಗಿ ವಿಕ್ಕಿಪೀಡಿಯಾ ವಿಕಾಸ್‌ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಆಗಿದೆ. ಅಮಿತ್ ಜೊತೆಗೆ ವಿಕಾಸ್‌ ಮಾಡಿದ್ದ ಹೊಸ ವಿಡಿಯೋವನ್ನು ಎರಡು ಮೂರು ದಿನಗಳ ಹಿಂದೆ ಅಪ್ಲೋಡ್‌ ಮಾಡಲಾಗಿತ್ತು. ಈ ವಿಡಿಯೋದಲ್ಲಿ ಖುಷಿಗಾಗಿ ಡ್ರಗ್ಸ್‌ ಎನ್ನುವ ವಾಕ್ಯವೊಂದನ್ನು ಬಳಸಲಾಗಿತ್ತು. ಸದ್ಯ ಆ ವಿಡಿಯೋವನ್ನು ಡಿಲೀಟ್‌ ಮಾಡಲಾಗಿದ್ದು,…

Read More

ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಕಡಿಮೆಗೊಳಿಸಿ, ತ್ವರಿತ ಓಡಾಟಕ್ಕೆ ಸಹಕಾರಿಯಾಗಿರುವ ನಮ್ಮ ಮೆಟ್ರೋ, ಇನ್ನು ಮುಂದೆ ತುಮಕೂರುವರೆಗೂ ಓಡಲಿದೆ. ಇದಕ್ಕಾಗಿ ಡಿಪಿಆರ್ ಸಿದ್ಧವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬುಧವಾರ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ತುಮಕೂರಿನ ಅಭಿವೃದ್ಧಿಗಾಗಿ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದ ಅವರು, ಅಭಿವೃದ್ಧಿಗೆ ಹಿಂಜರಿಯುವುದಿಲ್ಲ ಎಂದಿದ್ದಾರೆ. ತುಮಕೂರಿಗೆ ಬೆಂಗಳೂರು ಮೆಟ್ರೋ ತರಲು ಚಿಂತನೆ ನಡೆಸಿದ್ದು, ಈಗಾಗಲೇ ಡಿಪಿಆರ್‌ ಕಾರ್ಯ ಮುಗಿದಿದೆ . 1944ರಲ್ಲಿ ಸ್ಥಾಪಿತವಾದ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆ ಕಟ್ಟಡ ದುಸ್ಥಿತಿಯ ಬಗ್ಗೆ ಕೆ.ಎನ್‌. ರಾಜಣ್ಣ ಚರ್ಚಿಸಿದ್ದ ಪರಿಣಾಮ ಈ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ತುಮಕೂರಿನ ಅಭಿವೃದ್ಧಿಗೆ ಎಂದೂ ಹಿಂಜರಿಯುವುದಿಲ್ಲ. ಬಹುದಿನಗಳ ಬೇಡಿಕೆಯ ಪೊಲೀಸ್‌ ಕಟ್ಟಡವನ್ನು ಇಲಾಖೆಯ ಉಳಿತದ 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಉಸ್ತುವಾರಿ ಹಾಗೂ ಗೃಹ…

Read More