Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಎಲ್ಲರಿಗೂ ಟರ್ಮ್ ಡೆಪಾಸಿಟ್ ಬಗ್ಗೆ ತಿಳಿದಿರುತ್ತದೆ. ಆದರೆ ನಿಮಗೆ ಗ್ರೀನ್ ಟರ್ಮ್ ಡೆಪಾಸಿಟ್ ಅಥವಾ ಗ್ರೀನ್ ಎಫ್ ಡಿ ಬಗ್ಗೆ ಗೊತ್ತಿದೆಯೇ? ಹಾಗೆಂದರೆ ಏನು? ರೆಗ್ಯುಲರ್ ಎಫ್ ಡಿ ಗೂ ಇದಕ್ಕೂ ಏನು ವ್ಯತ್ಯಾಸ? ಗ್ರೀನ್ ಮತ್ತು ನಾರ್ಮಲ್ ಎಫ್ ಡಿ ಗೂ ಬಡ್ಡಿ ದರದಲ್ಲಿ ವ್ಯತ್ಯಾಸ ಇದೆಯೇ? ಇದನ್ನು ಸಹ ನಾವು ತಿಳಿದುಕೊಳ್ಳಬೇಕು. ಗ್ರೀನ್ ಎಫ್ ಡಿಯನ್ನು ಪರಿಸರ ಸ್ನೇಹಿ ಫಿಕ್ಸೆಡ್ ಡೆಪಾಸಿಟ್ ಎಂದೂ ಕರೆಯಲಾಗುತ್ತದೆ. ಇದರಿಂದ ಸಂಗ್ರಹವಾದ ಹಣವನ್ನು ಪರಿಸರಕ್ಕೆ ಅನುಕೂಲಕರವಾದ ಪ್ರಾಜೆ ಕ್ಟ್ ನಲ್ಲಿ ಹೂಡಿಕೆ ಮಾಡಲಾಗುತ್ತದೆ. ಉದಾಹರಣೆಗೆ ಸೋಲಾರ್ ಪವರ್, ವಿಂಡ್ ಫಾರ್ಮ್, ತ್ಯಾಜ್ಯ ನಿರ್ವಹಣೆ ಮತ್ತು ಇಂಧನ ರಕ್ಷಾ ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಒಂದು ಸಾಮಾನ್ಯ ಬ್ಯಾಂಕ್ ಎಫ್ಡಿ ರೀತಿಯಲ್ಲೇ, ಗ್ರಾಹಕರು ಗ್ರೀನ್ ಫಿಕ್ಸೆಡ್ ಡೆಪಾಸಿಟ್ ನಲ್ಲೂ ಕೂಡ ಫಿಕ್ಸೆಡ್ ಟೈಮಿಗೆ ಹೂಡಿಕೆ ಮಾಡಬಹುದು. ಆದರೆ ಇದರಲ್ಲಿರುವ ವ್ಯತ್ಯಾಸ ಏನೆಂದರೆ ಫಂಡ್ ಅಲೊಕೇಶನ್. ಗ್ರೀನ್ ಎಫ್ ಡಿ ಯಲ್ಲಿ ಸಂಗ್ರಹವಾದ ಹಣವನ್ನು ಎಕೋ…
ವಿಶ್ವ ಜನಸಂಖ್ಯಾ ದಿನವನ್ನು ಪ್ರತಿವರ್ಷ ಜುಲೈ 11 ರಂದು ಆಚರಿಸಲಾಗುತ್ತದೆ. 1989ರಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಪ್ರಾರಂಭಿಸಲು ವಿಶ್ವಬ್ಯಾಂಕಿನ ಉದ್ಘೋಷವನ್ನು ಅನುಸರಿಸಿ, ಜನಸಂಖ್ಯೆ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ವಿಶೇಷವಾಗಿ ನಿಶ್ಚಯಿಸಲಾಗಿದೆ. ಜಾಗತಿಕ ಸಮಸ್ಯೆಗಳು: ಜನಸಂಖ್ಯೆಯ ಹೆಚ್ಚಳವು ಪ್ರಮುಖ ಜಾಗತಿಕ ಸಮಸ್ಯೆಗಳತ್ತ ದಾರಿತೋರುತ್ತದೆ. ಸಂಪತ್ತಿನ ಸಮಾನ ಹಂಚಿಕೆ, ಶೇಖರಣಾ ಸಾಮರ್ಥ್ಯದ ಕೊರತೆ, ಪರಿಸರ ಹಾನಿ, ವಸತಿ ಸಮಸ್ಯೆ, ಆರೋಗ್ಯ ಸೇವೆಗಳ ಅಭಾವ, ಆಹಾರ ಅಸುರಕ್ಷತೆ ಇತ್ಯಾದಿ ಸಮಸ್ಯೆಗಳು ಜನಸಂಖ್ಯೆಯ ಅತಿರೇಕದಿಂದ ಉಂಟಾಗುತ್ತವೆ. ಪರಿಸರ ಹಾನಿ: ಅಧಿಕ ಜನಸಂಖ್ಯೆಯ ಪರಿಣಾಮವಾಗಿ ನೈಸರ್ಗಿಕ ಸಂಪತ್ತಿನ ಶೋಷಣೆ ಹೆಚ್ಚು ಆಗುತ್ತದೆ. ಇದರಿಂದ ವನಕ್ಷಯ, ಭೂಮಳಿನ ಸಮಸ್ಯೆ, ಜಲ ವಾಯು ಮಾಲಿನ್ಯವು ಉಂಟಾಗುತ್ತದೆ. ಆರ್ಥಿಕ ಸಮಸ್ಯೆಗಳು: ಜನಸಂಖ್ಯೆ ಹೆಚ್ಚಳವು ಬಡತನ, ನಿರುದ್ಯೋಗ, ಮೂಲಸೌಲಭ್ಯಗಳ ಕೊರತೆ ಮುಂತಾದ ಸಮಸ್ಯೆಗಳನ್ನು ತೀವ್ರಗೊಳಿಸುತ್ತದೆ. ಪರಿಣಾಮವಾಗಿ ಜನರಿಗೆ ಜೀವನಮಟ್ಟ ಸುಧಾರಣೆಯಾಗುವುದು ಕಷ್ಟವಾಗುತ್ತದೆ. ಆಹಾರ ಮತ್ತು ನೀರು ಕೊರತೆ: ಜಗತ್ತಿನ ಕೆಲವು ಭಾಗಗಳಲ್ಲಿ ಜನಸಂಖ್ಯೆಯ ಹೆಚ್ಚಳದಿಂದ ಆಹಾರ ಮತ್ತು ನೀರು…
ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದಾದ್ಯಂತ 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲಿಸಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ…
ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಲೈನ್ಮೆನ್ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದರು. ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳೀಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಅವರು ತಿಳಿಸಿದರು. ಈಗಾಗಲೇ 1000 ಸಹಾಯಕ…
ಜಿಲ್ಲಾಡಳಿತವು ನಿಷೇಧಿತ ಜಾಗ ಎಂದು ಘೋಷಿಸಿದ್ದ ಜಲಪಾತವೊಂದರಲ್ಲಿ ಮೋಜು ಮಸ್ತಿ ಮಾಡಲೆಂದು ಹೋಗಿದ್ದ ಯುವಕರನ್ನು ಪೊಲೀಸರು ಕೇವಲ ಚಡ್ಡಿಯಲ್ಲೇ ಓಡಿಸಿದ ಘಟನೆಯೊಂದು ನಡೆದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಈ ಘಟನೆ ನಡೆದಿದೆ. ಈ ಜಾಗದಲ್ಲಿ ನೀರು ಇಳಿಯುತ್ತಿರುವಲ್ಲಿ ಬಂಡೆ ಹತ್ತಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು. ಯುವಕರ ಬಟ್ಟೆಗಳನ್ನು ತಂದಿದ್ದು, ವಾಹನಕ್ಕೆ ತುಂಬಿದ ಪೊಲೀಸರು ಅವರ ಹಿಂದೆನೇ ಚಡ್ಡಿಯಲ್ಲೇ ಓಡಿ ಬಂದ ಯುವಕರು ಪ್ಲೀಸ್ ಸರ್, ಇನ್ನೊಂದು ಸಲ ಈ ರೀತಿ ಮಾಡುವುದಿಲ್ಲ, ದಯವಿಟ್ಟು ಬಟ್ಟೆ ಕೊಡಿ ಎಂದು ಓಡೋಡಿ ಬಂದಿದ್ದಾರೆ. ನಂತರ ಪೊಲೀಸರೊಂದಿಗೆ ಪ್ರವಾಸಿ ಯುವಕರು ತಮ್ಮ ಬಟ್ಟೆ ಕೊಡುವಂತೆ ವಾಗ್ವಾದಕ್ಕಿಳಿದಿದ್ದಾರೆ. ನಂತರ ಪೊಲೀಸರು ಯುವಕರಿಗೆ ಎಚ್ಚರಿಕೆ ಕೊಟ್ಟಿದ್ದು, ಅವರ ಮಾತನ್ನು ಒಪ್ಪಿದ ಯುವಕರು ತಮ್ಮ ಬಟ್ಟೆಗಳನ್ನು ಪಡೆದು ಹೋಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಕರ್ನಾಟಕದಲ್ಲಿ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಮೂರು ಗುಂಪುಗಳಾಗಿ ಒಡೆದು ಹೋಗಿದೆ. ಅದಕ್ಕೆ ಸದ್ಯದಲ್ಲಿ ಉಳಿಗಾಲವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದು ಒಂದೊಂದು ಗುಂಪು. ಪರಮೇಶ್ವರದ್ದು ದಲಿತರ ಗುಂಪು. ಸಿದ್ದರಾಮಯ್ಯನವರದು ಹಿಂದುಳಿದವರ ಗುಂಪು. ಡಿಕೆಶಿಯದ್ದು ಗೌಡರ ಗುಂಪಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹೇಳಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತ ತಪ್ಪಿದೆ. ಪಕ್ಷದ ಹೈಕಮಾಂಡಿಗೂ ತಮ್ಮದೇ ಶಾಸಕರು, ಮುಖಂಡರನ್ನು ನಿಯಂತ್ರಣದಲ್ಲಿಡಲಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪರಮೇಶ್ವರ್ ಮನೆಯಲ್ಲಿ ದಲಿತರ ಸಭೆ ಮಾಡುತ್ತಾರೆ. ಸಿದ್ದರಾಮಯ್ಯ ಪರವಾಗಿ ಹಿಂದುಳಿದವರ ಸಭೆ ಆಯ್ತು. ಸಿದ್ದರಾಮಯ್ಯ ಪರವಾಗಿ ಡಿನ್ನರ್ ಸಭೆ ಆಗಿತ್ತು. ಆದರೆ ಯಾರೂ ಎಚ್.ಕೆ. ಪಾಟೀಲರನ್ನು ಕರೆದಿರಲಿಲ್ಲ. ಅವರೊಬ್ಬ ಪ್ರತಿಷ್ಠಿತ ರಾಜಕಾರಣಿ. ಸಿಎಂ ಆಗಲಿಕ್ಕೆ ಡಿಕೆಶಿ ಎಲ್ಲ ಕಡೆ ಓಡಾಡುತ್ತಿದ್ದಾರೆ. ಕುಮಾರಸ್ವಾಮಿ ಕಡೆ ಕೂಡ ಹೋಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮಾಜಿ…
ಮಹಾರಾಷ್ಟ್ರ: ರೈಲು ನಿಲ್ದಾಣವೊಂದರಲ್ಲಿ ತಂದೆ-ಮಗ ಇಬ್ಬರು ಅಳುತ್ತಾ, ಕಣ್ಣೀರು ಒರೆಸುತ್ತಾ, ಕೈ ಕೈ ಹಿಡಿದು ಹೋಗಿ ಸೀದಾ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಭಯಾನಕ ದೃಶ್ಯವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಇದು ನೋಡುಗರನ್ನು ಒಮ್ಮೆಲೆ ಬೆಚ್ಚಿಬೀಳಿಸುತ್ತದೆ. ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಯಾಂದ್ರ ರೈಲು ನಿಲ್ದಾಣದಲ್ಲಿ ಬೆಳಗ್ಗೆ 9.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ವಸೈ ನಿವಾಸಿಯಾದ 60 ವರ್ಷದ ಹರೀಶ್ ಮೆಹ್ತಾ ಹಾಗೂ 35 ವರ್ಷದ ಪುತ್ರ ಜಯ್ ಮೆಹ್ತಾ ಅವರು ಕೈ ಕೈ ಗಟ್ಟಿಯಾಗಿ ಹಿಡಿದುಕೊಂಡು ರೈಲಿಗೆ ತಲೆಯೊಡ್ಡಿದವರಾಗಿದ್ದಾರೆ. ಇವರು ಪ್ಲಾಟ್ ಫಾರ್ಮ್ ಮೂಲಕ ನಡೆದುಕೊಂಡು ಸಾಗುವಾಗ ಒಂದು ರೈಲು ಪಕ್ಕದಿಂದಲೇ ಸಾಗಿದೆ. ಆದರೆ ಪ್ಲಾಟ್ಫಾರ್ಮ್ ಬಳಿಕ ರೈಲು ಹಳಿಗಳ ಮೇಲೆ ನಡೆದುಕೊಂಡು ಸಾಗುವಾಗ ವಿರುದ್ದ ದಿಕ್ಕಿನಿಂದ ರೈಲು ಬಂದಿದೆ. ಇಬ್ಬರು ಕೈ ಕೈ ಹಿಡಿದುಕೊಂಡಿದ್ದಾರೆ. ತಕ್ಷಣವೇ ರೈಲು ಬರುತ್ತಿರುವ ಹಳಿಯತ್ತ ತೆರಳಿದ್ದಾರೆ. ಬಳಿಕ ರೈಲಿನ ಹಳಿಯಲ್ಲಿ ತಲೆ ಇಟ್ಟು ಮಲಗಿದ್ದಾರೆ. ಅಷ್ಟೊತ್ತಿಗೆ ರೈಲು ಇವರಿಬ್ಬರ ಮೇಲಿನಿಂದ…
ಆಹಾರ ನಾಗರಿಕ ಸರಬರಾಜು ಇಲಾಖೆ ಒಂದು ವರ್ಷದ ಬಳಿಕ ಬಿಪಿಎಲ್ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಅದೇನೆಂದರೆ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಇಲಾಖೆ ಅನುಮತಿಯನ್ನು ನೀಡಿದೆ. ನಾಗರಿಕ ವೆಬ್ಸೈಟ್ ahara.kar.nic.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರ ಜೊತೆಗೆ ಮೊಬೈಲ್, ಕಂಪ್ಯೂಟ್, ಸೇವಾಸಿಂಧು ಪೋರ್ಟಲ್ನಲ್ಲಿ ಕೂಡಾ ಅರ್ಜಿಯನ್ನು ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ. ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನಿಗದಿಪಡಿಸಲಾಗಿದೆ. ಇದರಲ್ಲಿ ಬಿಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್, ಎಪಿಎಲ್ ಅರ್ಜಿ ಸಲ್ಲಿಕೆ ಕೂಡಾ ಸೇರಿದೆ. ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿಗೂ ಅವಕಾಶ ನೀಡಲಾಗಿದೆ. ಇದೀಗ ಫಲಾನುಭವಿಗಳು ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಒಂದು ವರ್ಷದ ಬಳಿಕ ಅನುಮತಿ ನೀಡಿರುವುದರಿಂದ ಬೆಂಗಳೂರು ಒನ್ ಸೆಂಟರ್ಗೆ ಬರುತ್ತಿದ್ದು, ಅರ್ಜಿ ಸಲ್ಲಿಸಲು ಪರದಾಡುತ್ತಿದ್ದು, ವೆಬ್ಸೈಟ್ ಓಪನ್ ಆಗುತ್ತಿದ್ದರೂ ಅರ್ಜಿ ರವಾನೆ ಆಗುತ್ತಿಲ್ಲ.ಇದಕ್ಕೆ ಪರ್ಮಿಷನ್ ಕೊಟ್ಟು ಆಹಾರ ಇಲಾಖೆಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು…
ಉತ್ತರ ಪ್ರದೇಶ: ಬಯಲು ಶೌಚಕ್ಕಾಗಿ ಬುಧ್ವಾ ಅರಣ್ಯದ ಬಳಿಯ ಗಂಡಕ್ ಕಾಲುವೆಯ ದಡದಲ್ಲಿ ಕುಳಿತಿದ್ದ ವೃದ್ಧನ ಮೇಲೆ ಮೊಸಳೆಯೊಂದು ದಾಳಿ ಮಾಡಿದೆ. ಬಯಲು ಶೌಚದ ವೇಳೆ ಮೊಸಳೆ ದಾಳಿಯಿಂದ ತನ್ನ ಜೀವ ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ವ್ಯಕ್ತಿ ಎದ್ದು ನಿಂತಾಗ ಮೊಸಳೆ ಅವನ ಖಾಸಗಿ ಅಂಗವನ್ನು ಕಚ್ಚಿ ಎಳೆದಿದ್ದರಿಂದ ಆ ಭಾಗ ಕಾಲುವೆಯಲ್ಲಿ ತೇಲಿ ಹೋಗಿದೆ ಎನ್ನಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉತ್ತರ ಪ್ರದೇಶದ ಕುಶಿನಗರದ ಬುಧ್ವಾ ಅರಣ್ಯದ ಬಳಿಯ ಗಂಡಕ್ ಕಾಲುವೆಯ ದಡದಲ್ಲಿ ಈ ಘಟನೆ ನಡೆದಿದೆ. 60 ವರ್ಷದ ವ್ಯಕ್ತಿ ಶೌಚಕ್ಕಾಗಿ ಬುಧ್ವಾ ಅರಣ್ಯದ ಬಳಿಯ ಗಂಡಕ್ ಕಾಲುವೆಯ ದಡದಲ್ಲಿ ಕುಳಿತಿದ್ದಾಗ ಮೊಸಳೆ ನೀರಿನಿಂದ ಹೊರ ಬಂದು ದಾಳಿ ಮಾಡಿದೆ. ಘಟನೆಯ ಬಳಿಕ ವ್ಯಕ್ತಿಯ ಕಿರುಚಾಟವನ್ನು ಕೇಳಿದ ಗ್ರಾಮಸ್ಥರು ಸಹಾಯಕ್ಕೆ ಬಂದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ…
ಟೀಂ ಇಂಡಿಯಾದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಮ್ಮ ನಿರ್ಧಾರದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 2024ರ ಟಿ20 ವಿಶ್ವಕಪ್ ಟೂರ್ನಿ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ 2.5 ಕೋಟಿ ರೂಪಾಯಿಯನ್ನು ಹಿಂದಿರುಗಿಸಿ, ಮಾದರಿಯಾಗಿದ್ದಾರೆ. ಸಹಾಯ ಕೋಚ್ ಸಿಬ್ಬಂದಿಯಂತೆ ತಾವೂ 2.5 ಕೋಟಿ ರೂ.ಗಳನ್ನು ಮಾತ್ರ ಪಡೆಯಲಿದ್ದು, ಉಳಿದ ಹಣವನ್ನು ಹಿಂತಿರುಗಿಸಿ ಸಮಾನತೆ ಮೆರೆದಿದ್ದಾರೆ. ಕನ್ನಡಿಗ ರಾಹುಲ್ ದ್ರಾವಿಡ್ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಟಿ20 ವಿಶ್ವಕಪ್ ಕಪ್ ಗೆದ್ದಬೆನ್ನಲೇ ಬಿಸಿಸಿಐ (BCCI) ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನದಲ್ಲಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಕುಮಾರ್ ಹಾಗೂ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಕೋಚಿಂಗ್ ಸಿಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಆದ್ರೆ ಮುಖ್ಯಕೋಚ್ ರಾಹುಲ್ ದ್ರಾವಿಡ್ ಅವರಿಗೆ 5 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದ್ರೆ ರಾಹುಲ್ ದ್ರಾವಿಡ್ 2.5 ಕೋಟಿ ರೂ. ಹೆಚ್ಚುವರಿ…