Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಭವಾನಿ ರೇವಣ್ಣಗೆ ಜುಲೈ 10ರಂದು ನೋಟಿಸ್ ಜಾರಿ ಮಾಡಿದೆ, ಹೀಗಾಗಿ ಮತ್ತೊಮ್ಮೆ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿನ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣನ ಸಂಬಂಧಿ ಬಾಬು ಈ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎನ್ನಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಭವಾನಿ ರೇವಣ್ಣ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇನ್ನು ದರ್ಶನ್ ಗೆ ನೀಡಿರುವ ವಿಚಾರಣಾಧೀನ ಕೈದಿ ನಂಬರ್ 6106 ಅನ್ನು ವಾಹನಗಳಲ್ಲಿ, ಬಟ್ಟೆಗಳಲ್ಲಿ ಅಭಿಮಾನಿಗಳು ಹಾಕಿಕೊಂಡು ಸುದ್ದಿಯಾಗಿದ್ದಾರೆ. ಈ ನಡುವೆ ಹೇರ್ ಕಟಿಂಗ್ ಶಾಪ್ ವೊಂದಲ್ಲಿ ಯುವಕನೊಬ್ಬ ತಲೆಯಲ್ಲಿ ದರ್ಶನ್ ನ ಕೈದಿ ನಂಬರ್ ಬರೆಸಿಕೊಂಡು ವಿಡಿಯೋ ಮಾಡಿಸಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಈ ಮೂಲಕ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ. ಮತ್ತೊಂದೆಡೆ ಪತ್ನಿ ವಿಯಲಕ್ಷ್ಮಿ ಮತ್ತು ಕುಟುಂಬಸ್ಥರು ಜೈಲು ಸೇರಿರುವ ದರ್ಶನ್ ಅವರನ್ನು ಹೊರತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ದರ್ಶನ್ ಕೈದಿ ನಂಬರ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂಥವರ ಮೇಲೆ ಹಲವು ಕಡೆಗಳಲ್ಲಿ ಕ್ರಮ ಕೈಗೊಂಡಿದ್ದಾರೆ. ವಾಹನಗಳಿಗೆ ಹಾಕಿಸಿದ್ದ ಕೈದಿ ನಂಬರ್ ಗಳನ್ನು ತೆಗೆಸಿದ್ದಾರೆ. ಈ ನಡುವೆಯೇ ಕೆಲವರು ದರ್ಶನ್ ಗೆ ನೀಡಿರುವ ವಿಚಾರಣಾಧೀನ ಕೈದಿ ನಂಬರ್ 6106 ಅಚ್ಚೆ ಹಾಕಿಸಿಕೊಳ್ಳುವುದು, ಮಕ್ಕಳ ಬಟ್ಟೆಗಳ ಮೇಲೆ ಬರೆಸುವುದು, ವಾಹನಗಳ…
ಇದು ಮಗುವಿನ ಪ್ರತಿರೂಪ ಸಿಲಿಕಾನ್ ಗೊಂಬೆ . ಈ ಮಗು ಪಡೆಯಲು ನವಮಾಸ ಕಾಯಬೇಕಿಲ್ಲ. ಜೀವಂತ ಶಿಶು ಹಾಗೂ ಸಿಲಿಕಾನ್ ಶಿಶುವಿನಲ್ಲಿ ಕೊಂಚವೂ ವ್ಯತ್ಯಾಸ ವಿಲ್ಲದಂತೆ ಸಿಲಿಕಾನ್ ಶಿಶುವೊಂದನ್ನು ಫ್ಲೋರಿಡಾ ಮೂಲದ ಮಹಿಳೆ ತಯಾರಿಸುತ್ತಿದ್ದಾರೆ. ಶಿಶುಗಳನ್ನು ಹೋಲುವ ಹೈಪರ್ ರಿಯಲಿಸ್ಟಿಕ್ ಗೊಂಬೆ ತಯಾರಿಸುವ ಡ್ರೀಮ್ ಶೈರ್ ಎಂಬ ಸಂಸ್ಥೆಯ CEO ಆಗಿರುವ ಮಾಮಾ ಕೋಲಿ ನವಜಾತ ಶಿಶುಗಳ ಪ್ರತಿರೂಪವನ್ನು ತಯಾರಿಸುತ್ತಾರೆ. ಗರ್ಭಪಾತದಿಂದ ಬಳಲುತ್ತಿರುವ ಮಹಿಳೆಯರಿಗೆ, ಮಗುವನ್ನು ಕಳೆದುಕೊಂಡಿದ್ದರೆ ಅಥವಾ ಮಾನಸಿಕ ಆರೋಗ್ಯ ಅಸ್ವಸ್ಥತೆಗಳೊಂದಿಗೆ ಹೋರಾಡುತ್ತಿರುವ ಮಹಿಳೆಯರು ಗುಣಮುಖರಾಗುವ ಪ್ರಯಾಣದಲ್ಲಿ ಸಿಲಿಕಾನ್ ಶಿಶು ಸಹಾಯಕಾರಿ ಎನ್ನುತ್ತಾರೆ ಮಾಮಾ. ಮಾಮಾ 2020 ರಲ್ಲಿ ತನ್ನ ಗೊಂಬೆಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ. ಪುಟ್ಟ ಸಿಲಿಕೋನ್ ಗೊಂಬೆಗಳ ಬೆಲೆ $45 (ಸುಮಾರು ರೂ. 4,000) ದಿಂದ ಪ್ರಾರಂಭಿಸಿ ದೊಡ್ಡ ಗೊಂಬೆಗಳ ಬೆಲೆ $1,500 (ಅಂದಾಜು ರೂ. 1,25,000) ಆಗಿದೆ. View this post on Instagram A post shared by Mama Coly…
ಈ ದೇಶವು ಒಂದು ವಿಚಿತ್ರ ಸಂಪ್ರದಾಯವನ್ನು ಹೊಂದಿದೆ. ಈ ದೇಶದಲ್ಲಿ ಪುರುಷರು ಎರಡು ಬಾರಿ ಮದುವೆಯಾಗಬೇಕು. ಇಷ್ಟು ಮಾತ್ರವಲ್ಲದೆ, ಹಾಗೆ ಮಾಡಲು ನಿರಾಕರಿಸುವವರಿಗೆ ಶಿಕ್ಷೆ ಸಹ ಆಗುತ್ತೆ. ಭಾರತದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ, ಒಬ್ಬ ಪುರುಷನು ಒಂದು ಮದುವೆಯಾದ ನಂತರ ಇನ್ನೊಬ್ಬರನ್ನು ಮದುವೆಯಾದರೆ, ಅವನಿಗೆ ಶಿಕ್ಷೆಯಾಗುತ್ತದೆ. ಆದರೆ ಈ ದೇಶದಲ್ಲಿ ಪುರುಷರು ಬಲವಂತವಾಗಿ ಮರುಮದುವೆಯಾಗುತ್ತಾರೆ. ಆಫ್ರಿಕನ್ ದೇಶವಾದ ಎರಿಟ್ರಿಯಾದಲ್ಲಿ, ಎಲ್ಲಾ ಪುರುಷರು ಎರಡು ಬಾರಿ ಮದುವೆಯಾಗುವಂತೆ ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದಲ್ಲಿ ಜೈಲು ಪಾಲಾಗಬಹುದು. ಇದಕ್ಕಾಗಿ ಇಲ್ಲಿನ ಸರ್ಕಾರ ಕಾನೂನು ಕೂಡ ಮಾಡಿದೆ. ಇದನ್ನು ತಡೆಯಲು ಪ್ರಯತ್ನಿಸುವವರಿಗೆ ಸಹ ಜೀವಾವಧಿ ಶಿಕ್ಷೆ ವಿಧಿಸಬಹುದು. ಇನ್ನು ಮೊದಲ ಹೆಂಡತಿ ಎರಡನೇ ಮದುವೆಗೆ ವಿರೋಧಿಸಿದರೆ ಅವಳಿಗೂ ಶಿಕ್ಷೆಯಾಗುತ್ತದೆ. ಎರಿಟ್ರಿಯಾದಲ್ಲಿ ಪುರುಷರ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಈ ವಿಚಿತ್ರ ಕಾನೂನನ್ನು ಜಾರಿಗೊಳಿಸಲಾಗಿದೆ. ಆದ್ರೆ ಇಲ್ಲಿ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಎರಡು ಪಟ್ಟು ಹೆಚ್ಚು. ಅದಕ್ಕಾಗಿಯೇ ಇಲ್ಲಿ ಪುರುಷರನ್ನು ಎರಡು ಬಾರಿ ಮದುವೆಯಾಗಲು ಒತ್ತಾಯಿಸಲಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ದರ್ಶನ್ ನಟನೆಯ ” ಶಾಸ್ತ್ರಿ ‘ ಚಿತ್ರವನ್ನು ರೀ ರಿಲೀಸ್ ಮಾಡಲು ತಯಾರಿ ನಡೆದಿದ್ದು, ಜು.12ರಂದು ಬಿಡುಗಡೆಯಾಗಲಿದೆ. ವಿತರಕ ವಿ.ಎಂ.ಶಂಕರ್ ಎನ್ನುವವರು ರಿಲೀಸ್ ಮಾಡುತಿದ್ದಾರೆ. ದರ್ಶನ್ ನಟನೆಯ ಈ ಚಿತ್ರ 2005ರಲ್ಲಿ ತೆರೆಕಂಡಿತ್ತು. ಅಣಜಿ ನಾಗರಾಜ್ ನಿರ್ಮಾಣದ ಈ ಚಿತ್ರವನ್ನು ಪಿ.ಎನ್.ಸತ್ಯ ನಿರ್ದೇಶನ ಮಾಡಿದ್ದು, ಮಾಸ್ ಅಭಿಮಾನಿಗಳನ್ನು ರಂಜಿಸುವಲ್ಲಿ ಈ ಚಿತ್ರ ಯಶಸ್ಸು ಕಂಡಿತ್ತು. ದರ್ಶನ್ ಜೈಲಿಗೆ ಹೋಗುವ ಆರು ತಿಂಗಳ ಮುಂಚೆಯೇ ಈ ಸಿನಿಮಾವನ್ನು ಮರುಬಿಡುಗಡೆ ಮಾಡಲು ಪ್ಲಾನ್ ನಡೆದಿತ್ತಂತೆ. ಅದರಂತೆ ಈಗ ರಿಲೀಸ್ ಮಾಡುತ್ತಿದ್ದಾರೆ. ಸದ್ಯ ದರ್ಶನ್ ಜೈಲಿನಲ್ಲಿರುವುದರಿಂದ ಅಭಿಮಾನಿಗಳು ಈ ಸಿನಿಮಾಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕು. ರೀ-ರಿಲೀಸ್ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿತರಕರು, ದರ್ಶನ್ ಅವರ ಸದ್ಯದ ಪರಿಸ್ಥಿತಿಗೂ ಸಿನಿಮಾ ರಿ ರಿಲೀಸ್ ಮಾಡುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅವರ ಇಂಡಿಯನ್ 2 ಹೊರತುಪಡಿಸಿ ಈ ವಾರ ಯಾವುದೇ ಹೊಸ ಕನ್ನಡ ಚಲನಚಿತ್ರಗಳು ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಶಾಸ್ತ್ರಿ…
ಮುಂಬೈ: ಮದುವೆ ಅಂದರೆ ಶಾಸ್ತ್ರ, ಸಂಪ್ರದಾಯ ಹಾಗೂ ಜೊತೆಜೊತೆಗೆ ಆಯಾ ಟ್ರೆಂಡ್ ಗೆ ತಕ್ಕ ಹಾಗೆ ಸಂಭ್ರಮ, ಸಂತೋಷ ಇತ್ಯಾದಿ ಇತ್ಯಾದಿ. ಭಾರತದ ಟಾಪ್ ಕಂಪನಿಯ ಒಡೆಯ ಎನಿಸಿಕೊಂಡಿರುವ ಮುಕೇಶ್ ಅಂಬಾನಿ- ನೀತಾ ಅಂಬಾನಿ ದಂಪತಿಯ ಕಿರಿ ಮಗ ಅನಂತ್- ರಾಧಿಕಾ ಮದುವೆಗೆ ಮುಂಚಿನ ಶಾಸ್ತ್ರ- ಸಂಪ್ರದಾಯದ ಆಚರಣೆಗಳು ನಿತ್ಯವೂ ಸೋಷಿಯಲ್ ಮೀಡಿಯಾ, ಮೈಕ್ರೋಬ್ಲಾಗಿಂಗ್ ಸೈಟ್ ಗಳಲ್ಲಿ ವೈರಲ್ ಆಗುತ್ತಿವೆ. ಜುಲೈ ಹನ್ನೆರಡನೇ ತಾರೀಕು ಮದುವೆ. ಅದಕ್ಕೂ ಮುಂಚೆ ಹಾಗೂ ನಂತರದಲ್ಲಿ ಹಲವು ಕಾರ್ಯಕ್ರಮಗಳ ವೇಳಾಪಟ್ಟಿ ಸಿದ್ಧವಾಗಿದ್ದು, ಇದೀಗ ಮುಂಬೈನಲ್ಲಿ ನಡೆದ ಅರಿಶಿಣದ ಶಾಸ್ತ್ರ (ಉತ್ತರ ಭಾರತದಲ್ಲಿ ಹಳದಿ ಕಾರ್ಯಕ್ರಮ ಅಂತಾರೆ) ಸಾಂಪ್ರದಾಯಿಕವಾಗಿಯೂ ಅದೇ ವೇಳೆ ಅದ್ಧೂರಿಯಾಗಿಯೂ ಮುಗಿದಿದೆ. ಅದಕ್ಕೂ ಮುಂಚೆ ಸಂಗೀತ್ ಕಾರ್ಯಕ್ರಮ, ವರನ ತಾಯಿ ಮನೆಯ ತವರಿನವರಿಂದ ನಡೆಯುವ ಕಾರ್ಯಕ್ರಮ ಹಾಗೂ ಆರಂಭದಲ್ಲಿ ಸಾಮೂಹಿಕ ವಿವಾಹ ಸಮಾರಂಭ, ದಾನ- ಧರ್ಮ ಇತ್ಯಾದಿಗಳು ನಡೆದವು. ಅರಿಶಿಣದ ಶಾಸ್ತ್ರ ನಡೆದದ್ದು ಮುಂಬೈ ಅಷ್ಟೇ ಅಲ್ಲ, ಜಗತ್ತಿನಲ್ಲಿಯೇ ಹೆಸರಾದ ಆಂಟಿಲಿಯಾ ಮನೆಯಲ್ಲಿ. ಸಲ್ಮಾನ್…
ಮಹಿಳೆಯೊಬ್ಬಳು ಬರೋಬ್ಬರಿ 50 ಜನರನ್ನು ಮದುವೆಯಾಗಿ ವಂಚಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸಂಧ್ಯಾ (30) ಎಂಬ ಮಹಿಳೆಯು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್ ಲೈನ್ ಪ್ಲಾಟ್ ಫಾರ್ಮ್ ʼದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು. ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ ಆಧಾರ್ ಕಾರ್ಡ್ ಪರಿಶೀಲಿಸಿದ್ದಾರೆ. ಆಧಾರ್ ಕಾರ್ಡ್ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ಸೀದಾ ಹೋಗಿ ತಾರಾಪುರಂ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ವಿಚಾರಣೆ ಒಳಪಡಿಸಿದಾಗ ಆಕೆಯ ವಂಚನೆಗಳು ಬಯಲಾಗಿವೆ. 10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು…
ಕುದ್ಮಲ್ ರಂಗರಾವ್ ಸ್ಮಾರಕಕ್ಕೆ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ ಮೇನಾಲ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಸಿ ಸ್ಮಾರಕ ಆಗುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಕುದ್ಮಲ್ ರಂಗರಾವ್ ಪ್ರಗತಿಗೆ ವಿದ್ಯೆಯೇ ಮೂಲ ಎಂದು ನಂಬಿದ್ದರು. ಡಿ.ಸಿ.ಎಂ. ಎಂಬ ಸಂಸ್ಥೆಯನ್ನು ಸ್ಥಾಪಿಸಿ ಮಂಗಳೂರಿನ ಕಂಕನಾಡಿ, ಮೂಲ್ಕಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ಬಾಬುಗುಡ್ಡೆ, ದಡ್ಡಲ್ ಕಾಡುಗಳಲ್ಲಿ ಉಚಿತ ಶಾಲೆಗಳನ್ನು ತೆರೆದರು. ಆ ಶಾಲೆಗಳನ್ನು ‘ಪಂಚಮ ಶಾಲೆ’ಗಳೆಂದು ಕರೆಯುತಿದ್ದರು ಎಂದು ತಿಳಿಸಿದರು. ದಲಿತರಿಗೆ ವೃತ್ತಿಪರ ಶಿಕ್ಷಣ ನೀಡಲು ಶೇಡಿಗುಡ್ಡೆ ಎಂಬಲ್ಲಿ ಕೈಗಾರಿಕಾ ತರಬೇತಿ ಶಾಲೆ ಪ್ರಾರಂಭಿಸಿದರು. ತಾವು ಸ್ಥಾಪಿಸಿದ ಡಿ.ಸಿ.ಎಂ. ಮಿಶನ್ ಶಾಲೆಗಳಲ್ಲಿ ಮತ್ತು ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ಬಡಗಿ, ನೇಯ್ಕೆ ತೋಟಗಾರಿಕೆ, ಕಸೂತಿ, ರೇಷ್ಮೆ ಹುಳು ಸಾಕಾಣಿಕೆ ಇತ್ಯಾದಿ ವೃತ್ತಿಗಳನ್ನು ಅವಲಂಬಿಸಲು ಅಗತ್ಯವಾದ ತರಬೇತಿಯನ್ನು ದಲಿತರಿಗೆ ಕೊಡಿಸಿದರು; ಸ್ವಾವಲಂಬಿ ಜೀವನಕ್ಕೆ ದಾರಿ ತೋರಿದರು ಎಂದರು. ಅನ್ಯರ ಅನ್ನಕ್ಕಿಂತ ಆತ್ಮಗೌರವದ…
ಉತ್ತರಾಖಂಡ ಸರ್ಕಾರವು ಪರವಾನಗಿ ನಿಷೇಧಗೊಳಿಸಿರುವ ತನ್ನ 14 ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿರುವುದಾಗಿ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಮಂಗಳವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ. ಪತಂಜಲಿಯ 14 ಉತ್ಪನ್ನಗಳ ದಕ್ಷತೆ ಬಗ್ಗೆ ಸುಳ್ಳು ಜಾಹೀರಾತು ನೀಡಿ ಮಾರಾಟ ಮಾಡುತ್ತಿದ್ದ ಕಾರಣ ಅವುಗಳ ಪರವಾನಗಿಯನ್ನು ಉತ್ತರಾಖಂಡ ಸರ್ಕಾರ ರದ್ದುಪಡಿಸಿತ್ತು. ಈ ಉತ್ಪನ್ನಗಳ ಬಗ್ಗೆ ಜಾಹೀರಾತು ಪ್ರಸಾರವಾಗುತ್ತಿಲ್ಲ, ಮಾರಾಟ ಮಾಡುತ್ತಿಲ್ಲ ಎಂಬುದನ್ನು ಖಾತರಿ ಪಡಿಸಿಕೊಂಡು 2 ವಾರದ ಒಳಗೆ ಅಫಿಡವಿಟ್ ಸಲ್ಲಿಸುವಂತೆ ಪತಂಜಲಿ ಸಂಸ್ಥೆಗೆ ಸುಪ್ರೀಂ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಪೀಠದ ಮುಂದೆ ಪತಂಜಲಿ ಸಂಸ್ಥೆ ಅಫಿಡವಿಟ್ ಸಲ್ಲಿಸಿದೆ. ಈ ವೇಳೆ ಸಂಸ್ಥೆಯ 5,606 ಫ್ರಾಂಚೈಸಿಗಳಿಗೂ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿರ್ದೇಶಿಸಿದೆ ಹಾಗೂ ಮಾಧ್ಯಮಗಳಿಗೂ ಈ ಉತ್ಪನ್ನಗಳಿಗೆ ಸಂಬಂಧಿಸಿದ ಜಾಹೀರಾತು ಪ್ರದರ್ಶಿಸದಂತೆ ತಿಳಿಸಿರುವುದಾಗಿ ಹೇಳಿದೆ ಎಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗ್ಯೂ ಪ್ರಕರಣಗಳ ಕುರಿತು ಹೆಲ್ತ್ ಬುಲೇಟ್ ಬಿಡುಗಡೆ ಮಾಡಲಾಗಿದ್ದು ತುಮಕೂರು ಜಿಲ್ಲೆಯಲ್ಲಿ ಈವರೆಗೆ 190 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 89 ಸಂಶಯಾತ್ಮಕ ರೋಗಿಗಳ ರಕ್ತ ಪರೀಕ್ಷೆ ನಡೆಸಲಾಗಿದೆ. 18 ಹೊಸ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಡೆಂಗ್ಯೂ ರೋಗಿ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಸೊಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ, ಆರು ಮಂದಿ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA