Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಈ ಘಟನೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ನಡೆದಿದೆ. ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರೂ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ ನಲ್ಲಿ ಚಾಲಕ ಬಸ್ ಬಂದ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಬಸ್ ಸುಟ್ಟು ಭಸ್ಮವಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಜೂನ್ 11 ರ ಮಂಗಳವಾರ ದರ್ಶನ್ ಬಂಧಿಸಲಾಗಿತ್ತು. ಪೊಲೀಸರ ವಿಚಾರಣೆ ಬಳಿಕ ನ್ಯಾಯಾಲಯ ಅವರನ್ನು ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆ ಬಳಿಕ ಜುಲೈ 18 ರ ತನಕ ಆರೋಪಿ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿತ್ತು. ಮಂಗಳವಾರ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಜೈಲು ಅಧಿಕಾರಿಗಳಿಗೆ ವಿವಿಧ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ನಟ ದರ್ಶನ್ ಪರ ವಕೀಲರು ಜೈಲಿನಲ್ಲಿ ಮನೆ ಊಟ ಮಾಡಲು ಅನುಮತಿ ನೀಡಬೇಕು, ಹಾಸಿಗೆ ನೀಡಬೇಕು, ಪುಸ್ತಕ ಓದಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ರಿಟ್ ಅರ್ಜಿ ಮಂಗಳವಾರ ಸಲ್ಲಿಕೆಯಾಗಿದ್ದು, ವಿಚಾರಣೆ ಇನ್ನೂ ನಡೆಯಬೇಕಿದೆ. ‘ಜೈಲಿನ ಊಟ ನಟ ದರ್ಶನ್ ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಮಾಡುತ್ತಿರುವುದರಿಂದ ಅವರಿಗೆ ವಾಂತಿ, ಭೇದಿ ಆಗುತ್ತಿದೆ ಎಂದು ವೈದ್ಯರು…
ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗುತ್ತಿದೆ, ಇದೀಗ ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮಾಡಿ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ‘ಸ್ನೇಹಮಯಿ ಕೃಷ್ಣ’ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್.ಐ.ಆರ್ ದಾಖಲಾಗಿದೆ. ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲಾಗಿದೆ. ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್ ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಜುಲೈ 8 ರಂದು ಪ್ರಕರಣ ದಾಖಲಾಗಿದೆ. ಇನ್ನು ಪಬ್ ಓಪನ್ ಆಗಿದ್ದ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಮಾಹಿತಿ…
ಪಾವಗಡ : ಜನಸಾಮಾನ್ಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಬೇಕು. ಅವರು ಅರೋಗ್ಯವಂತರಾಗಿರಲು ಶಿಬಿರದ ಮೂಲಕ ಹೆಲ್ಪ್ ಸೊಸೈಟಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿರುಮಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಚೌದರಿ ತಿಳಿಸಿದರು. ಹೆಲ್ಪ್ ಸೊಸೈಟಿ ಪಾವಗಡ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಿರುಮಣಿ ಗ್ರಾಮದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾವಗಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಹೆಲ್ಪ್ ಸೊಸೈಟಿ ತಂಡ ಉಚಿತ ಕಣ್ಣನ ತಪಾಸಣೆ, ಕಾನ್ಸರ್ ತಪಾಸಣೆ, ಹಾಗೂ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಪ್ರಾಥಮಿಕ ಹಂತದಲ್ಲಿ ಆರೋಗ್ಯದ ಬಗ್ಗೆ ಜನರು ಹೆಚ್ಚು ಕಾಳಜಿ ವಹಿಸಿಕೊಳ್ಳಬೇಕು ಆಗ ಮುಂದಿನ ರೋಗಗಳು ಎದುರಾಗದಂತೆ ನೋಡಿಕೊಳ್ಳಬಹುದು ಎಂದು ಹೇಳಿದರು. ಶಿಬಿರದಲ್ಲಿ ತಿರುಮಣಿ ಅರೋಗ್ಯ ನಿರೀಕ್ಷಕ ರಮೇಶ್ ಮಾತನಾಡಿ, ತಮ್ಮಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರೊಂದಿಗೆ ಸಮಾಲೋಚನೆ ಮಾಡಿದಾಗ ನಮ್ಮ ದೇಹದ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹೆಲ್ಪ್…
ಪಾವಗಡ: ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸಾರಿಗೆ ಬಸ್ ಗಳು ಸಂಚರಿಸಬೇಕೆಂದು ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಕೆಎಸ್ ಆರ್ ಟಿಸಿ ಅಧಿಕಾರಿ ಹನುಮಂತರಾಯಪ್ಪ ಅವರಿಗೆ ಸೂಚಿಸಿದ್ದಾರೆ. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ನಗರಗಳಿಗೆ ಸಂಚರಿಸಲು ಸುಗಮ ಸಂಪರ್ಕ ಸಂಚಾರದ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು, ಈಗಾಗಲೇ ಸಾರಿಗೆ ಸಚಿವರಿಗೆ ಪಾವಗಡ ಡಿಪೋವನ್ನು ತುಮಕೂರು ವಿಭಾಗಕ್ಕೆ ವರ್ಗಾಯಿಸಲು ಪತ್ರ ನೀಡಲಾಗಿದೆ ಮತ್ತು ಅಧಿಕಾರಿಗಳು ತಿಳಿಸಿದ ಹಾಗೆ ಸಿಬ್ಬಂದಿ ಕೊರತೆ ಮತ್ತು ಹೆಚ್ಚುವರಿ ಬಸ್ಗಳು ವ್ಯವಸ್ಥೆಗೆ ಸಂಬಂಧಪಟ್ಟಂತೆ ನಿಗಮದ ಅಧ್ಯಕ್ಷರು ಹಾಗೂ ಸಚಿವರ ಜೊತೆ ಚರ್ಚಿಸಲಾಗುವುದು ಎಂದರು . ಪೋಲಿಸ್ ಇಲಾಖೆಯವರು ಹೆಚ್ಚಿನ ಪ್ರಮಾಣದಲ್ಲಿ ಕಾನೂನು ಆಸ್ತಿ ವ್ಯವಸ್ಥೆಯನ್ನು ರಕ್ಷಿಸಬಯಬೇಕು ಪಟ್ಟಣದಲ್ಲಿ ಹಾಡ ಹಗಲೇ ಕಳ್ಳತನ ಆಗುತ್ತಿದ್ದು ಯಾವ ಕ್ರಮ ಕೈಗೊಳ್ಳುತ್ತಿದ್ದೀರಾ ಎಂದು ಪ್ರಶ್ನಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಬಗ್ಗೆ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈರೆಸ್ಯೂಲೇಷನ್ ಜಾಮರ್ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು. ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್ಗೆ ಇಳಿಸಲಾಗಿದೆ. ಜಾಮರ್ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು. ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು…
ಬೆಂಗಳೂರು: ಈ ನೆಲದಲ್ಲಿ ಉಳ್ಳವರಿಗೂ, ಬೀದಿಯಲ್ಲಿ ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ. ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು. ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ. ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು. ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ.…
ಅಪರಿಚಿತ ವ್ಯಕ್ತಿಯೊಬ್ಬರು ಕಾಳೇಘಾಟ್ ಹೋಟೆಲ್ ಮತ್ತು ಲಾಡ್ಜ್ ಮ್ಯಾನೇಜರ್ ಎಂದು ಹೆಸರು ಹೇಳಿಕೊಂಡು ಲಾಡ್ಜ್ ನಲ್ಲಿ ಹೆಂಗಸರಿಂದ ಸೆಕ್ಸ್ ಮಸಾಜ್ ಮಾಡಿಸುವುದಾಗಿ ನಂಬಿಸಿ ಆನ್ ಲೈನ್ ನಲ್ಲಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ದಿನಾಂಕ: 29-06-2024 ರಂದು Locanto App ಮೂಲಕ ಕುಶಾಲನಗರ ಟಾಪ್ ಸೆಕ್ಸ್ ಆಂಟಿ ಸರ್ವಿಸ್ ಎಂಬ ಸೈಟ್ ಮೂಲಕ ಮಂಜು ಅವರಿಗೆ ಕರೆ ಮಾಡಿ ಮೋಸ ಮಾಡಲಾಗಿದೆ ಎನ್ನಲಾಗಿದೆ. ಕುಶಾಲನಗರದ ಕಾಳೇಘಾಟ್ ಲಾಡ್ಜ್ ಮನೇಜರ್ ಎಂದು ಯುವಕನೊಬ್ಬ ಪರಿಚಯಿಸಿಕೊಂಡು ಲಾಡ್ಜ್ ನಲ್ಲಿ ಹೆಂಗಸರಿಂದ ಸೆಕ್ಸ್/ಮಸಾಜ್ ಮಾಡಿಸಲಾಗುವುದು ಹಾಗೂ ಆನ್ ಲೈನ್ ಮೂಲಕ ಮುಂಗಡವಾಗಿ ಹಣ ಕಳುಹಿಸಿದರೆ ಈಗಲೇ ಹೆಂಗಸರ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ದೂರುದಾರರ ಮೊಬೈಲ್ ಗೆ ಕೆಲವು ಹೆಂಗಸರ ಭಾವಚಿತ್ರಗಳನ್ನು ಕಳುಹಿಸಿ ಕೊಟ್ಟು ಒಂದು ಗಂಟೆಗೆ ರೂ. 1500/- ಮತ್ತು ಒಂದು ರಾತ್ರಿಗೆ ರೂ. 4000/- ಗಳ ಹಣ ನೀಡಬೇಕಾಗುವುದು ಎಂದು ಹೇಳಿದ. ಅದರಂತೆಯೇ ದೂರುದಾರರೂ ಗೂಗಲ್ ಪೇ…
ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ ಕಸ ಬಿಸಾಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅಂತಹವರನ್ನು ಗುರುತಿಸಿ ನೋಟಿಸ್ ಕೊಡುವುದು ಕೇಸ್ ಹಾಕುವ ಕೆಲಸ ಮಾಡಲಾಗುವುದು ಎಂದರು. ಬೆಂಗಳೂರಿನಲ್ಲಿ ಕಸ ರಸ್ತೆಯಲ್ಲಿ ಹಾಕುವುದನ್ನು ತಡೆಯಲು ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಸಿಸಿಟಿವಿ ಜೊತೆ ಎಲ್ ಇಡಿ ಬಲ್ಪ್ ಹಾಕಲಾಗುವುದು. ಇದರಿಂದ ಕಸ ಹಾಕುವವರ ಮುಖ ಸ್ಪಷ್ಟವಾಗಿ ಗೊತ್ತಾಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA