Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಜಮ್ಮು ಮತ್ತು ಕಾಶ್ಮೀರದ ಕತ್ವಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 5 ಯೋಧರು ಹುತಾತ್ಮರಾಗಿದ್ದಾರೆ. ಮೃತರಲ್ಲಿ ಕಿರಿಯ ಆಯೋಗದ ಅಧಿಕಾರಿಯೂ ಸೇರಿದ್ದಾರೆ. ಗಾಯಗೊಂಡ ಐವರು ಯೋಧರನ್ನು ಪಠಾಣ್ ಕೋಟ್ ನ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕತ್ವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಉಗ್ರರ ದಾಳಿ ನಡೆದಿದೆ. ಸಂಜೆ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದ ಸೇನಾ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಪ್ರದೇಶದಲ್ಲಿ ಘರ್ಷಣೆ ಮುಂದುವರಿದಿದೆ. ನಿನ್ನೆ ಮಧ್ಯಾಹ್ನ 3:30ರ ಸುಮಾರಿಗೆ ಬದ್ನೋಟಾ ಗ್ರಾಮದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಭಯೋತ್ಪಾದಕರು ವಾಹನದ ಮೇಲೆ ಗ್ರೆನೇಡ್ ಎಸೆದು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸೇನೆ ಪ್ರತಿದಾಳಿ ನಡೆಸಿತು. ಈ ಪ್ರದೇಶದಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಲಾಗಿದೆ. 48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂರನೇ ಉಗ್ರರ ದಾಳಿ ಇದಾಗಿದೆ. ಕುಲ್ಗಾಮ್ ನ ಎರಡು ಸ್ಥಳಗಳಲ್ಲಿ ನಡೆದ ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಪ್ರಧಾನಿಯವರ ರಷ್ಯಾ ಭೇಟಿಯು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಯಶಸ್ಸು. ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯರನ್ನು ಬಿಡುಗಡೆ ಮಾಡಲಾಗುವುದು. ಭಾರತೀಯರನ್ನು ವಾಪಸ್ ಕಳುಹಿಸುವುದಾಗಿ ರಷ್ಯಾ ಭರವಸೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉದ್ಯೋಗ ವಂಚನೆಯ ಪರಿಣಾಮವಾಗಿ ಅನೇಕ ಭಾರತೀಯರು ರಷ್ಯಾದ ಸೈನ್ಯದಲ್ಲಿ ಸೇವೆ ಸಲ್ಲಿಸಲು ಒತ್ತಾಯಿಸಲ್ಪಟ್ಟರು. ಇದರ ಬೆನ್ನಲ್ಲೇ, ರಷ್ಯಾದಲ್ಲಿ ಸಿಲುಕಿರುವ ಭಾರತೀಯರ ಕುಟುಂಬಗಳು ಕೇಂದ್ರ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು. ಉದ್ಯೋಗ ವಂಚನೆಯಿಂದಾಗಿ ಕೇರಳದವರೂ ಸೇರಿದಂತೆ ರಷ್ಯಾದಲ್ಲಿ ಸಿಕ್ಕಿಬಿದ್ದಿದ್ದರು. ಯಾವುದೇ ತರಬೇತಿಯಿಲ್ಲದೆ ಅವರನ್ನು ರಷ್ಯಾದ ಸೈನ್ಯದ ಜೊತೆಗೆ ಉಕ್ರೇನ್ ನ ಯುದ್ಧ ವಲಯದಲ್ಲಿ ನಿಯೋಜಿಸಲಾಯಿತು. ಭಾರತ–ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ರಷ್ಯಾಕ್ಕೆ ಆಗಮಿಸಿದರು. ಎರಡು ದಿನಗಳ ಭೇಟಿಗಾಗಿ ಮೋದಿ ರಷ್ಯಾಕ್ಕೆ ಆಗಮಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಭಾರತದ ಪ್ರಧಾನಿ ಮತ್ತು ರಷ್ಯಾ ಅಧ್ಯಕ್ಷರ ನಡುವೆ ಯಾವುದೇ…
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ಬಿಜೆಪಿ ಶಾಸಕ ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲು ಹಾಕಲಾಗಿದ್ದ ಫ್ಲೆಕ್ಸ್ ತಲೆ ಮೇಲೆ ಬಿದ್ದು ವಯೋವೃದ್ಧರೊಬ್ಬರು ಕೋಮಾ ಸ್ಥಿತಿಗೆ ಜಾರಿರುವ ಘಟನೆ ವರದಿಯಾಗಿದೆ. ಗಾಯಗೊಂಡ ವೃದ್ಧನನ್ನು ರಾಜಾನುಕುಂಟೆ ನಿವಾಸಿ ಭಕ್ತ ವತ್ಸಲಾ(70) ಎಂದು ಗುರುತಿಸಲಾಗಿದೆ. ಜು.6ರ ಶನಿವಾರ ಘಟನೆ ನಡೆದಿದ್ದು, ತನ್ನ ಮೊಮ್ಮಗನನ್ನು ಶಾಲೆಯಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂಬಕ್ಕೆ ಕಟ್ಟಲಾಗಿದ್ದ ಫ್ಲೆಕ್ಸ್ ಕಳಚಿ ಭಕ್ತ ವತ್ಸಲಾ ಅವರ ತಲೆ ಮೇಲೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಯೋವೃದ್ಧ ಭಕ್ತ ವತ್ಸಲಾ ಅವರು ಕೋಮಾ ಸ್ಥಿತಿಗೆ ಜಾರಿರುವುದಾಗಿ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿ, ಫ್ಲೆಕ್ಸ್ ಬಿದ್ದ ಸ್ಥಳ ಸಿಂಗನಾಯಕನಹಳ್ಳಿ ತನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ…
ಮೆದುಳು ತಿನ್ನುವ ಅಮೀಬಾ ಸೋಂಕಿನ ಪ್ರಕರಣಗಳು ಕೇರಳದಲ್ಲಿ ಹೆಚ್ಚಾಗುತ್ತಿದ್ದು ಭಾರಿ ಆತಂಕ ಮೂಡಿಸಿದೆ, ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ. ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೇರಳ ಮುಖ್ಯಮಂತ್ರಿ…
ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ. 132ಕ್ಕೂ ಹೆಚ್ಚು ಪ್ರಾಣಿಗಳು ಸಾವನ್ನಪ್ಪಿವೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಪ್ರವಾಹದಲ್ಲಿ ಕನಿಷ್ಠ 132 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ ಎನ್ನಲಾಗಿದೆ. ಚಿಕಿತ್ಸೆಯ ಸಮಯದಲ್ಲಿ ಒಟ್ಟು 25 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು ಇವುಗಳಲ್ಲಿ 17 ಹಂದಿ ಮತ್ತು ಉಳಿದಂತೆ ಜಿಂಕೆಗಳು, ಜೌಗು ಜಿಂಕೆ, ಮಕಾಕ್ ಮತ್ತು ಓಟರ್ ನಾಯಿ ಸೇರಿವೆ ಎನ್ನಲಾಗಿದೆ. ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. 2017 ರಲ್ಲಿ ಸಂಭವಿಸಿದ ಪ್ರವಾಹದಲ್ಲಿ 350 ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ರೈಲು ಹತ್ತುವ ವೇಳೆ ರೈಲಿನಿಂದ ಕೆಳಗೆ ಬಿದ್ದ ಮಹಿಳೆಯ ಕಾಲಿನ ಮೇಲೆ ರೈಲು ಹರಿದ ಪರಿಣಾಮ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ನೆನ್ನೆ ನಡೆದಿದೆ. ಮಳೆಯಿಂದಾಗಿ ಕೆಲವೊಂದು ಕಡೆಗಳಲ್ಲಿ ರೈಲು ಹಳಿಗಳು ಜಲಾವೃತಗೊಂಡಿದೆ ಮತ್ತು ಜಾರುತ್ತಿವೆ. ಇದರಿಂದಾಗಿ ಕೆಲವೊಂದು ರೈಲುಗಳ ಸಂಚಾರ ಸ್ಥಗಿತಗೊಂಡಿದೆ, ಇಲ್ಲೊಬ್ಬರು ಮಹಿಳೆ ಮುಂಬೈನ ಬೇಲಾಪುರ ನಿಲ್ದಾಣದಿಂದ ಥಾಣೆಗೆ ಹೋಗಲು ಬೆಳಿಗ್ಗೆ ರೈಲ್ವೆ ಪ್ಲಾಟ್ ಫಾರ್ಮ್ ಗೆ ಬಂದಿದ್ದಾರೆ ಈ ವೇಳೆ ಹೆಚ್ಚಿನ ಜನಸಂದಣಿ ಇದ್ದ ಪರಿಣಾಮ ಮಹಿಳೆ ರೈಲು ಹತ್ತುವ ವೇಳೆ ಮಹಿಳೆ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ. ಅಷ್ಟೋತ್ತಿಗಾಗಲೇ ರೈಲು ಹೊರಟಿದೆ ಇದನ್ನು ಗಮನಿಸಿದ ಅಲ್ಲಿದ್ದ ಭದ್ರತಾ ಸಿಬಂದಿ ಕೂಡಲೇ ಸೂಚನೆ ನೀಡಿ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ರೈಲಿನ ಕೆಳಗೆ ಹೋಗಿ ಮಹಿಳೆಯನ್ನು ಹೊರಗೆಳೆದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ರೈಲಿನ ಒಂದು ಬೋಗಿ ಆಕೆಯ ಕಾಲಿನ ಮೇಲೆ ಹರಿದು ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಮ್ಮತುಮಕೂರಿನ…
ದಾವಣಗೆರೆ: ಮಾಜಿ ಸಚಿವ, ಬಿಜೆಪಿ ನಾಯಕ ಬಿ.ಸಿ.ಪಾಟೀಲ್ ಅವರ ಅಳಿಯ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನೊಳಗೆ ವಿಷದ ಬಾಟಲಿಯೊಂದಿಗೆ ಆತನ ಶವ ಪತ್ತೆಯಾಗಿದೆ. ಪ್ರತಾಪ್ ಅವರು ಬಿ.ಸಿ.ಪಾಟೀಲ್ ಅವರ ಹಿರಿಯ ಪುತ್ರಿ ಸೌಮ್ಯ ಅವರನ್ನು ವಿವಾಹವಾಗಿದ್ದರು. ದಾವಣಗೆರೆ ಜಿಲ್ಲೆಯ ಅರಕೆರೆ ಅರಣ್ಯದ ಬಳಿ ನಿಲ್ಲಿಸಿದ್ದ ಕಾರಿನೊಳಗೆ ಶವ ಪತ್ತೆಯಾಗಿದೆ. ಪೊಲೀಸರ ಪ್ರಕಾರ, ಸೋಮವಾರ ಮಧ್ಯಾಹ್ನ 3.30 ರ ನಂತರ ಪ್ರತಾಪ್ ತನ್ನ ಕುಟುಂಬಕ್ಕೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾನೆ. ಪೊಲೀಸರು ಎಚ್ಚೆತ್ತು ಅವರನ್ನು ಹೊನ್ನಾಳಿ ತಾಲೂಕಿನ ಆಸ್ಪತ್ರೆಗೆ ಕರೆದೊಯ್ದರು. ನಂತರ ಅವರನ್ನು ಶಿವಮೊಗ್ಗದ ಮೆಕ್ಗನ್ ಆಸ್ಪತ್ರೆಗೆ ವರ್ಗಾಯಿಸಲಾಯಿತು, ಅಲ್ಲಿ ಅವರು ನಿಧನರಾದರು. ವಿಷ ಸೇವಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಿ ಚನ್ನಗಿರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಚನ್ನಗಿರಿ ಆಸ್ಪತ್ರೆಯ ವೈದ್ಯರು ಶಿವಮೊಗ್ಗದ ಮೆಕ್ಗನ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಅವನು ಸತ್ತನೆಂದು ಘೋಷಿಸಲಾಯಿತು.” ನಾವು ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.…
ಪ್ರತಿ ವರ್ಷ ಕೋಟ್ಯಂತರ ಭಕ್ತರು ಭೂವೈಕುಂಠ ತಿರುಮಲಕ್ಕೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಶ್ರೀ ವೆಂಕಟೇಶ್ವರ ಸ್ವಾಮಿಯ ಪುಣ್ಯಕ್ಷೇತ್ರ ತಿರುಮಲದಲ್ಲಿ ಮಹಿಳೆಯರು ಹೂ ಮುಡಿಯಬಾರದು ಎಂಬ ನಿಯಮವಿದೆ ಗೊತ್ತಾ? ಶ್ರೀಹರಿಯನ್ನು ಹೂವಿನ ಪ್ರೇಮಿ ಎಂದೂ ಕರೆಯುವುದುಂಟು. ಪುರಾಣಗಳಲ್ಲಿ ತಿರುಮಲವನ್ನು ಹೂವಿನ ಮಂಟಪ ಎಂದೇ ಹೆಸರಿಸಲಾಗಿದೆ. ತಿರುಮಲ ಹೂವಿನ ಮಂಟಪವಾಗಿರುವುದರಿಂದ ಶ್ರೀಹರಿಯು ಹೂವಿನ ಅಲಂಕಾರ ಪ್ರಿಯನಾಗಿರುವುದರಿಂದ ನಿತ್ಯವೂ ಭಗವಂತನಿಗೆ ಟನ್ ಗಟ್ಟಲೆ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಗುತ್ತದೆ. ಬ್ರಹ್ಮೋತ್ಸವದ ಸಂದರ್ಭದಲ್ಲಿ ಗೋವಿಂದ ನೂರಾರು ಅಲಂಕಾರಗಳಲ್ಲಿ ಭಕ್ತರನ್ನು ಪುಳಕಿತಗೊಳಿಸುತ್ತಾನೆ. ತಿರುಮಲದಲ್ಲಿ ಅರಳುವ ಪ್ರತಿಯೊಂದು ಹೂವು ಶ್ರೀ ಮನ್ನಾರಾಯಣನಿಗೆ ಸಮರ್ಪಿತವಾಗಿದೆ ಎಂದು ಜನರು ಮತ್ತು ಭಕ್ತರು ನಂಬುತ್ತಾರೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಭಗವಂತನ ದರ್ಶನಕ್ಕೆ ಬರುವ ಯಾವುದೇ ಭಕ್ತರಾಗಲಿ ಹೂವುಗಳನ್ನು ಮುಟ್ಟಬಾರದು ಎಂಬ ನಿಯಮ ಆಚರಣೆಯಲ್ಲಿದೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ Tirumala Tirupati Devasthanam -TTD) ಆಡಳಿತ ಮಂಡಲಿಯು ಇದನ್ನು ಕಡ್ಡಾಯವಾಗಿ ಜಾರಿಗೆ ತಂದಿದೆ. ಈ ಕಾರಣದಿಂದಲೇ ಸ್ವಾಮಿಯ ದರ್ಶನಕ್ಕೆ ಬರುವ…
ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜೊಂದರ ಬಳಿ ಜು. 8ರಂದು ನಿಂತಿದ್ದ ಯುವತಿಯರಿಗೆ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ವನ್ನು ತೋರಿಸಿದ್ದ ಕಾಮುಕ ಅಲ್ಲಿಂದ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ರೆಹಮಾನ್ ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿನಿಯರು ನಿಂತಿದ್ದ ಗುಂಪಿನ ಕಡೆ, ಸ್ಕೂಟರ್ ನಲ್ಲಿ ಬಂದಿದ್ದ ಆತ ವಿದ್ಯಾರ್ಥಿನಿಯರು ಮಾತನಾಡುತ್ತಾ ನಿಂತಿದ್ದಾಗ ಅವರ ಗಮನ ಸೆಳೆಯಲು ವಿಕೃತ ಕುಚೇಷ್ಟೆಗಳನ್ನು ಮಾಡುತ್ತಿದ್ದ. ಕೂಡಲೇ ಗುಂಪಿನಲ್ಲಿದ್ದ ಯುವತಿಯೊಬ್ಬಳು, ಆತನ ವರ್ತನೆಗಳನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದಳು. ಇದನ್ನರಿಯದ ಆತ, ತನ್ನ ಕುಚೇಷ್ಟೆಗಳನ್ನು ಮುಂದುವರಿಸಿದ್ದೇ ಅಲ್ಲದೆ, ತನ್ನ ಪ್ಯಾಂಟ್ ಜಿಪ್ ತೆಗೆದು ತೋರಿಸಿಯೇಬಿಟ್ಟಿದ್ದಾನೆ. ಅದೂ ಸಹ ಯುವತಿಯ ಮೊಬೈಲಿನಲ್ಲಿ ರೆಕಾರ್ಡ್ ಆಗಿದೆ. ತನ್ನ ಮರ್ಮಾಂಗವನ್ನು ತೋರಿಸಿದ ಕೂಡಲೇ ಯುವತಿಯರು ರೊಚ್ಚಿಗೆದ್ದಿದ್ದನ್ನು ಗಮನಿಸಿದ ಆತ ತನ್ನ ಸ್ಕೂಟರಿನಲ್ಲಿ ಪರಾರಿಯಾಗಿದ್ದಾನೆ. ಬಳಿಕ ಯುವತಿಯರು ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ, ವಿಡಿಯೋವನ್ನು…
ಕೊರಟಗೆರೆ: ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ಪಟ್ಟಣದ ಮುಖ್ಯರಸ್ತೆಯ ಪಕ್ಕದಲ್ಲಿರುವ ಪುಣ್ಯಕೋಟಿ ಫ್ಯಾಕ್ಟರಿಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಲ್ಲೇಶ್ವರ ಗ್ರಾಮದ ಯೋಗೇಶ್ (25) ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನಾಗಿದ್ದಾನೆ. ಬಾಯ್ಲರ್ ಸ್ಫೋಟದ ಶಬ್ದ ಸುಮಾರು 1/2 ಕಿಲೋ ಮೀಟರ್ ವ್ಯಾಪ್ತಿಗೆ ಕೇಳಿದ್ದು ಸ್ಫೋಟದ ಶಬ್ದದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಟೋಟದಿಂದಾಗಿ ಫ್ಯಾಕ್ಟರಿ ಮಾಲಿಕನ ಮನೆಯ ಗೋಡೆಗಳು ಬಿರುಕು ಬಿದ್ದಿದೆ. ಸ್ಫೋಟದಿಂದ ಸುಟ್ಟು, ಗಾಯಗೊಂಡಿದ್ದ ಕಾರ್ಮಿಕನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ಲಾಸ್ಟ್ ನಿಂದಾಗಿ ಕಾರ್ಮಿಕನ ದೇಹ ಸುಟ್ಟು ಕಿವಿ-ಮೂಗು-ಬಾಯಿಯಿಂದ ರಕ್ತಸ್ರಾವವಾಗಿದೆ. ಸ್ಥಳೀಯರ ಪ್ರಕಾರ ಸುಮಾರು 15 ವರ್ಷಗಳಿಂದಲೂ ಮನೆಯಲ್ಲೇ ಪುಣ್ಯಕೋಟಿ ಎಂಬ ಹೆಸರಿನಲ್ಲಿ ಅನಧಿಕೃತವಾಗಿ ಫ್ಯಾಕ್ಟರಿ ಮಾಡಿಕೊಂಡು ಕೆಲಸ ಮಾಡಲಾಗುತ್ತಿತ್ತು ಎನ್ನಲಾಗಿದೆ. ಮಸಾಲೆ ಮಜ್ಜಿಗೆ, ಪೇಡ, ಜಾಮೂನ್, ಹಾಲು ಶುದ್ಧೀಕರಣ ಘಟಕ, ಹಾಲು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ವಿಡಿಯೋ ಮಾಡಲು ತಂದೆ– ಮಗ ಆಕ್ಷೇಪ! ಬಾಯ್ಲರ್ ಸ್ಫೋಟದ…