Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
‘ಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಸುದೀಪ್ ಅವರನ್ನು ಸಂದರ್ಶನ ಮಾಡಿದ್ದಾರೆ. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳನ್ನು ಅವರು ಸುದೀಪ್ಗೆ ಕೇಳಿದ್ದಾರೆ. ‘ನನ್ನ ನೆಚ್ಚಿನ ಕಲಾವಿದರು ನೀವು, ನಿಮ್ಮ ನೆಚ್ಚಿನ ಕಲಾವಿದರು ಯಾರು?’ ಎಂದು ಕೇಳಿದರು ಸಮರ್ಜಿತ್ ಲಂಕೇಶ್. ಇದಕ್ಕೆ ಸುದೀಪ್ ಅವರು ಉತ್ತರ ನೀಡಿದ್ದಾರೆ. ‘ನನ್ನ ಫೇವರಿಟ್ ಹೀರೋ ವಿಷ್ಣು ಸರ್. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ. ಜೀವನದಲ್ಲಿ ನಾನು ಇಬ್ಬರಿಗೆ ಮಾತ್ರ ಬಾಸ್ ಎಂದು ಕರೆದಿದ್ದು. ನಮ್ಮ ತಂದೆಗೆ, ಅದನ್ನು ಇವತ್ತಿಗೂ ಕರೆಯುತ್ತೇನೆ. ಹಾಗೂ ವಿಷ್ಣು ಸರ್ ಗೆ. ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್’ ಎಂದಿದ್ದಾರೆ ಸುದೀಪ್. ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು…
ಆಸ್ಪತ್ರೆಯೊಂದರಲ್ಲಿ ಕಾನೂನು ಬಾಹೀರವಾಗಿ ಚಿತ್ರೀಕರಣ ನಡೆಸಿದ ಸಂಬಂಧ ನಟ ಫಹಾದ್ ಫಾಜಿಲ್ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಫಾಹದ್ ಫಾಜಿಲ್ ಒಳ್ಳೆಯ ಕ್ರೇಜ್ ಹುಟ್ಟಿಸಿದ್ದರು. ಈ ನಡುವೆ ಸಿನಿಮಾವೊಂದರ ಶೂಟಿಂಗ್ ಕಾರಣದಿಂದಾಗಿ ನಟನ ವಿರುದ್ಧ ಕೇರಳ ಮಾನವ ಹಕ್ಕುಗಳ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಜತೆಗ ಅವರ ವಿರುದ್ಧ ಸುಮೋಟೋ ಪ್ರಕರಣವೂ ದಾಖಲಾಗಿದೆ. ಮಲಯಾಳಂ ಚಿತ್ರರಂಗದಲ್ಲಿ ಹೀರೋ ಪಾತ್ರದಲ್ಲಿ ಕಾಣಿಸಿಕೊಳ್ಳುವ ಫಹಾದ್ ಫಾಜಿಲ್ ಮಲಯಾಳಂ ಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಗುರುವಾರ ರಾತ್ರಿ ಎರ್ನಾಕುಲಂ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಅಲ್ಲಿನ ರೋಗಿಗಳು ಪರದಾಡಿದ್ದಾರೆ ಎಂದು ವರದಿಯಾಗಿದೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಸಾಮಾನ್ಯ ರೋಗಿಗಳನ್ನು ಸಹ ಅನುಮತಿಸಲಾಗುವುದಿಲ್ಲ. ಇಂತಹ ಕಡೆ ಶೂಟಿಂಗ್ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇದು ಉನ್ನತ ಅಧಿಕಾರಿಗಳ ಗಮನಕ್ಕೆ ಹೋಗಿ, ಈ ಬಗ್ಗೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಬೀನಾ ಕುಮಾರಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಆದೇಶಿಸಿದ್ದಾರೆ. ಆದರೆ ಈ ಆರೋಪಗಳನ್ನು…
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಾಸ್ಕೋ ತಲುಪಿದ್ದು, ರಷ್ಯಾ ಮತ್ತು ನಂತರ ಆಸ್ಟ್ರಿಯಾದ ಎರಡು ದಿನಗಳ ರಾಜ್ಯ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. ಮಾಸ್ಕೋದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ರಷ್ಯಾದವರು ಭಾರತೀಯ ನೃತ್ಯಗಳನ್ನು ಪ್ರದರ್ಶಿಸಿ ಮೋದಿಯವರಿಗೆ ಸ್ವಾಗತ ಕೋರಿದ್ದಾರೆ. ಮೋದಿಯನ್ನು ರಷ್ಯಾದ 1ನೇ ಉಪಪ್ರಧಾನಿ (1ನೇ ಡಿಪಿಎಂ) ಡೆನಿಸ್ ಮಂಟುರೋವ್ ಬರಮಾಡಿಕೊಂಡರು. 1ನೇ ಡಿಪಿಎಂ ಮಂಟುರೊವ್ ಕೂಡ ಇದೇ ಕಾರಿನಲ್ಲಿ ಪ್ರಧಾನಿ ಮೋದಿಯವರೊಂದಿಗೆ ವಿಮಾನ ನಿಲ್ದಾಣದಿಂದ ಹೋಟೆಲ್ಗೆ ತೆರಳಲಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ನಾನು ರಷ್ಯಾ ಮತ್ತು ಆಸ್ಟ್ರಿಯಾದಲ್ಲಿ ಇರುತ್ತೇನೆ. ಭಾರತದ ಸ್ನೇಹಿತರಾದ ಈ ರಾಷ್ಟ್ರಗಳೊಂದಿಗೆ ಬಾಂಧವ್ಯವನ್ನು ಗಾಢಗೊಳಿಸಲು ಈ ಭೇಟಿಗಳು ಅದ್ಭುತ ಅವಕಾಶವಾಗಿದೆ. ಈ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಲು ನಾನು ಎದುರು ನೋಡುತ್ತಿದ್ದೇನೆ ”ಎಂದು ಪ್ರಧಾನಿಯ ಎಕ್ಸ್ನಲ್ಲಿ ಪೋಸ್ಟ್ ಮಾಡಲಾಗಿದೆ. ಐದು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಮೊದಲ ರಷ್ಯಾ ಭೇಟಿ ಇದಾಗಿದೆ. ಅವರು 2019 ರಲ್ಲಿ ರಷ್ಯಾದ ನಗರವಾದ ವ್ಲಾಡಿವೋಸ್ಟಾಕ್ನಲ್ಲಿ ಆರ್ಥಿಕ ಶೃಂಗಸಭೆಯಲ್ಲಿ…
ಶಿಗ್ಗಾವಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸಭೆಯಲ್ಲಿ, ಮುಂಬರುವ ಶಿಗ್ಗಾವಿ ಮತಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು ಸ್ಪರ್ಧಿಸಬೇಕೆಂದು ನಿರ್ಣಯಿಸಲಾಗಿದೆ. ಶಿಗ್ಗಾವಿ ಪಟ್ಟಣದಲ್ಲಿನ ಪಕ್ಷದ ಕಛೇರಿಯಲ್ಲಿ ನಡೆದ ಈ ಸಭೆಯಲ್ಲಿ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡ ಕಾರ್ಯನಿರ್ವಾಹಕ ಸಮಿತಿಯು ಈ ವಿಚಾರವಾಗಿ ವಿಸ್ತೃತವಾಗಿ ಚರ್ಚೆ ನಡೆಸಿತು. ನಂತರ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಲಿಂಗೇಗೌಡ ಎಸ್. ಎಚ್. ಅವರು ಈ ವಿಚಾರವಾಗಿ ನಿರ್ಣಯ ಮಂಡಿಸಿದರು. ಈ ನಿರ್ಣಯವನ್ನು ಪಕ್ಷದ ರಾಜ್ಯ ಕಾರ್ಯದರ್ಶಿ ಸೋಮಸುಂದರ್ ಎಸ್. ಕೆ. ಮತ್ತು ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಕಾಡಶೆಟ್ಟಿಹಳ್ಳಿ ಅವರುಗಳು ಅನುಮೋದಿಸಿದರು. ಈ ನಿರ್ಣಯವನ್ನು ಸಭೆಯು ಒಕ್ಕೊರಲಿನಿಂದ ಅಂಗೀಕರಿಸಿತು. ಹಾಗೆಯೆ, ಕೆ.ಆರ್.ಎಸ್. ಪಕ್ಷದ ಸಂಸ್ಥಾಪನಾ ದಿನದಂದು ನಡೆಸುವ ವಾರ್ಷಿಕ ಅಧಿವೇಶನವನ್ನು ಈ ಬಾರಿ ಶಿಗ್ಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಈ ಅಧಿವೇಶನವು ಆಗಸ್ಟ್ 10, 2024 ರಂದು ನಡೆಯಲಿದೆ.…
ಭೂತಾರಾಧನೆ ತುಳುನಾಡಿನ ಆರಾಧನೆಗಳಲ್ಲಿ ಪ್ರಮುಖವಾದದ್ದು, ಇದನ್ನು ‘ದೈವಾರಾಧನೆ’ ಎಂದೂ ಕರೆಯುತ್ತಾರೆ ಎಂದೂ ಕರೆಯುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ವಿಶೇಷವಾಗಿ ಕಂಡುಬರುವ ಒಂದು ರೀತಿಯ ಆರಾಧಾನೆ. ತುಳುನಾಡ ಸಾಂಸ್ಕೃತಿಕ ಪದಕೋಶದಲ್ಲಿ ಸಾಮಾಜಿಕ ಬದುಕಿನಲ್ಲಿ ಮುಖ್ಯವಾಗಿ ತಿಳಿಯುವ ಪದ ಭೂತ. ಭೂತ+ಆರಾಧನೆ=ಭೂತಾರಾಧನೆ. ಭೂತವನ್ನು ನಂಬಿದವರಿಗೆ ಜಯ ಕೊಡುತ್ತದೆ, ನಂಬದವನಿಗೆ ಅಪಜಯವಾಗುತ್ತದೆ(ಭೂತೊ ನಂಬಿನಕ್ಲೆಗ್ ಇಂಬು ಕೊರ್ಪುಂಡು ನಂಬಂದ್ನಕ್ಲೆಗ್ ಅಂಬು ಕೊರ್ಪುಂಡು) ಎಂಬ ನಂಬಿಕೆಯಿದೆ. ತುಳುವಿನ ಅಂಬು’ ಎಂಬ ಪದಕ್ಕೆ ಶಿಕ್ಷೆ ಎಂಬ ಅರ್ಥವಿರುವುದರಿಂದ ಶಿಕ್ಷೆ ಆಗದೆ ರಕ್ಷೆಗಾಗಿ ಭೂತವನ್ನು ನಂಬಿದರೆ ತಮಗೆ ಏನಾದರೂ ಒಳಿತಾಗಬಹುದೆಂದು ತುಳುನಾಡಿನ ಜನರು ನಂಬಿದ್ದಾರೆ. ಭೂತಾರಾಧನೆ ಎಂಬ ಪದ ಆರಾಧನಾ ಪರಂಪರೆಯಿಂದ ಹುಟ್ಟಿದ ಪದವಲ್ಲ. ಅದು ತೌಳವ ಸಂಸ್ಕೃತಿಯನ್ನು ಒಟ್ಟಾಗಿ ಸೂಚಿಸುವ ಪದ. ಭೂತನೆಲೆಯ ಸ್ಥಳವನ್ನು ಭೂತಸ್ಥಾನ, ಭೂತಸಾನ ಎಂದು ಕರೆಯುತ್ತಾರೆ. ಭೂತಸ್ಥಾನಕ್ಕೆ ಅಲೆಡೆ, ಗರಡಿ, ಕಟ್ಟೆ, ತಾನೊ, ಚಾವಡಿ ಎಂಬ ಹೆಸರುಗಳೂ ಇವೆ. ಕೋಲ ಎಂದರೆ ಅಲಂಕಾರ ಎಂದರ್ಥ. ಭೂತ ವೇಷಧಾರಿಗೆ ತೊಡಿಸುವ ವಿಶೇಷ ವೇಷ ಪರಿಕರಗಳ ಬೆಡಗಿನಿಂದಾಗಿ ಸಂಬಂಧಪಟ್ಟ ಉತ್ಸವಕ್ಕೂ ಅದೇ ಹೆಸರು…
ನಟ ದರ್ಶನ್ ಕನ್ನಡದ ಸ್ಟಾರ್ ನಟ. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ನಟನ ಸಹೋದರ ದಿನಕರ್ ತೂಗುದೀಪ ಇನ್ನೂ ಬಾಡಿಗೆ ಮನೆಯಲ್ಲಿಯೇ ವಾಸವಿದ್ದಾರೆ. ಈ ನಡುವೆ ದರ್ಶನ್ ಗೆಳತಿ ಪವಿತ್ರಾ ಗೌಡ ಮೂರಂತಸ್ತಿನ ಸ್ವಂತ ಐಶಾರಾಮಿ ಬಂಗಲೆಯಲ್ಲಿದ್ದಾರೆ. ಈ ಎರಡು ವಿಚಾರ ನಟ ದರ್ಶನ್ ಜೈಲಿಗೆ ಹೋದ ಬಳಿಕ ಚರ್ಚೆಯ ಮುನ್ನೆಲೆಗೆ ಬಂದಿವೆ. ಸಹೋದರನಿಗೆ ಒಂದು ಮನೆ ಕಟ್ಟಿಸಿಕೊಡದ ದರ್ಶನ್, ಪವಿತ್ರಾ ಗೌಡಗೆ ಮೂರಂತಸ್ತಿನ ಬಂಗಲೆ ಕಟ್ಟಿಸಿಕೊಟ್ಟಿದ್ದಾರೆ ಎಂದೇ ಮಾತನಾಡಿಕೊಳ್ಳುತ್ತಿದ್ದಾರೆ. ನಟ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ಅವರು ಸಾರಥಿ ಚಿತ್ರದ ಮೂಲಕ ಕನ್ನಡ ಸಿನಿಪ್ರೇಮಿಗಳ ಮನಸ್ಸಿಗೆ ಬಹಳಷ್ಟು ಹತ್ತಿರವಾದರು. ನಿರ್ದೇಶಕ ದಿನಕರ್ ಇನ್ನೂ ಬಾಡಿಗೆ ಮನೆಯಲ್ಲಿ ಇದ್ದಾರೆ. ಕನ್ನಡದ ಸೂಪರ್ ಸ್ಟಾರ್ ದರ್ಶನ್ ತಮ್ಮನಾಗಿದ್ದರೂ ಯಾಕೆ ಅವರಿನ್ನೂ ಹಾಗೆ ಇದ್ದಾರೆ ಎಂಬುದಕ್ಕೆ ಸ್ವತಃ ದಿನಕರ್ ಅವರು ಉತ್ತರ ಕೊಟ್ಟಿದ್ದಾರೆ. ದಿನಕರ್ ಅಮ್ಮ ಮೀನಾ ಅವರು ನೀನು ನಿನ್ನ ಸ್ವಂತ ದುಡಿಮೆಯ ಹಣದಿಂದ ಏನಾದರೂ ಮಾಡು. ಮನೆ ಕಟ್ಟುವುದಿರಲಿ,…
ಪಾವಗಡ: ಪ್ರಸ್ತುತ ದಿನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮುಂದಿನ ಪೀಳಿಗೆಯ ಬಗ್ಗೆ ಯೋಚಿಸದೆ ಮರಗಳನ್ನು ಕಡಿಯುತ್ತಿದ್ದು, ಇದರಿಂದ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪಾವಗಡ ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರೇಣುಕಾರಾಜ್ ಹೇಳಿದರು. ಪರಿಸರ ಯುವಮಿತ್ರ ಬಳಗದ ಹೆಸರಿನಲ್ಲಿ ಐತಿಹಾಸಿಕ ಸ್ಥಳವಾದ ನಿಡಿಗಲ್ಲು ದುರ್ಗದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಬೀಜ ಉತ್ಪಾದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಸಹಕರಿಸಿ, ಅರಣ್ಯ ಬೆಳೆಸಲು ಶ್ರಮಿಸಬೇಕು ಎಂದು ಕೋರಿದರು. ಶಾಲಾ ವಿದ್ಯಾರ್ಥಿಗಳು, ಯುವಮಿತ್ರ ಬಳಗದ ಸದಸ್ಯರಾದ ವಿನಯ್ಕುಮಾರ್, ಭೂತೇಗೌಡ, ವಿದ್ಯಾಶಂಕರಗೌಡ, ತ್ರಿಶೂಲ್ ಗೌಡ, ಮಹೇಶ್, ಶ್ರೀನಿವಾಸುಲು, ಗುಜ್ಜರಿ, ದಿನೇಶ್, ಆರ್.ಟಿ.ಗೌಡ, ರೂಪಿತ್ ಮತ್ತು ಹೇಮಂತ್ ಅವರನ್ನು ಶಾಲಾ ಸಿಬ್ಬಂದಿ ಅಭಿನಂದಿಸಿದರು. ವರದಿ : ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ತಿಪಟೂರು: ತಾಲೂಕಿನ ಹೆಡಗರಹಳ್ಳಿ ಗ್ರಾಮದ ಮಹಾನವಮಿ ಮಂಟಪದಲ್ಲಿ ನವಜಾತ ಶಿಶು ಪತ್ತೆಯಾದ ಘಟನೆ ನಡೆದಿದೆ. ಗ್ರಾಮದ ನಿವಾಸಿ ಆಶಾ ಕಾರ್ಯಕರ್ತೆ ಕಲಾವತಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಅಳುವಿನ ಶಬ್ದ ಕೇಳಿದ್ದು, ಸಮೀಪ ಹೋಗಿ ನೋಡಿದ ವೇಳೆ ಮಂಟಪದ ಬಳಿ ಸುಮಾರು ಎರಡರಿಂದ ಮೂರು ತಿಂಗಳ ನವಜಾತ ಶಿಶು ಕಂಡು ಬಂದಿದೆ. ಕಲಾವತಿ ಅವರು ತಕ್ಷಣವೇ ನೊಣವಿನಕೆರೆ ಪೊಲೀಸ್ ಠಾಣೆಗೆ ಕರೆ ಮಾಡಿ 108 ಆಂಬುಲೆನ್ಸ್ ಕರೆ ಮಾಡಿ ನಂತರ ಸಿಬ್ಬಂದಿಗೆ ತಿಳಿಸಿದ್ದಾರೆ. ಬಳಿಕ ನೊಣವಿನಕೆರೆ ಪಿಎಸ್ ಐ ಅಭಿಷೇಕ್ ಅವರ ಸಹಕಾರದೊಂದಿಗೆ 108 ಆಂಬುಲೆನ್ಸ್ ಸಿಬ್ಬಂದಿಗಳಾದ ಚಾಲಕ ಚಿದಾನಂದ ಹಾಗೂ ಸಹಾಯಕಿ ಧನಲಕ್ಷ್ಮಿ ಸ್ಥಳಕ್ಕೆ ಆಗಮಿಸಿ ನವಜಾತ ಶಿಶುವನ್ನು ಆಂಬುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ತಿಪಟೂರುಗೆ ದಾಖಲು ಮಾಡಿದ್ದಾರೆ. ಮಗು ಆರೋಗ್ಯವಾಗಿದ್ದು ಸುಮಾರು 4.5 ಕೆ.ಜಿ. ತೂಕವಿದೆ ಸಾರ್ವಜನಿಕ ಆಸ್ಪತ್ರೆ ಮಕ್ಕಳ ತಜ್ಞೆ ಶೀರಿಷ ಮಗುವಿನ ಆರೋಗ್ಯ ತಪಾಸಣೆಯನ್ನು ಮಾದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಮಾಣಿಕ್ಯ ಮ್ಯಾನ್ ಪವರ್ ಅಕಾಡೆಮಿ ವತಿಯಿಂದ ತುಮಕೂರಿನ ಹೆಸರಾಂತ ಕಂಪೆನಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಲು ಯುವಕರು ಮತ್ತು ಯುವತಿಯರು ಬೇಕಾಗಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗದ ವಿವರ ಈ ಕೆಳಗಿನಂತಿದೆ: * ಲೋಡಿಂಗ್ ಮತ್ತು ಆನ್ಲೋಡಿಂಗ್ ಕೆಲಸ ಮಾಡುವವರು ಬೇಕಾಗಿದ್ದಾರೆ * ವಿದ್ಯಾರ್ಹತೆ : SSLC, PUC, ITI, Bsc. ( ಪಾಸ್/ ಫೇಲ್ ) * ನೇರ ಸಂದರ್ಶನ ಇರುತ್ತದೆ. * ESI & PF ಸೌಲಭ್ಯ ಇರುತ್ತದೆ. ಉದ್ಯೋಗಾಸಕ್ತರು ಹೆಚ್ಚಿನ ಮಾಹಿತಿಗಳಿಗಾಗಿ ಈ ಕೂಡಲೇ ಫೋನ್ +91 97431 03968(ನವೀನ್ ಜಿ.ಎಲ್.) ಅವರನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಪ್ರೆಸ್ ಕ್ಲಬ್ ನ 2024-25ನೆ ಸಾಲಿನ ಕಾರ್ಯಕಾರಿ ಸಮಿತಿಗೆ ರವಿವಾರ ನಡೆದ ಚುನಾವಣೆಯಲ್ಲಿ ಆರ್.ಶ್ರೀಧರ್ ಅವರು ಎರಡನೆ ಬಾರಿಗೆ ಅಧ್ಯಕ್ಷರಾಗಿದ್ದು, ನೂತನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಿವಕುಮಾರ್ ಬೆಳ್ಳಿತಟ್ಟೆ ಅವರು ಆಯ್ಕೆಯಾಗಿದ್ದಾರೆ. ಒಟ್ಟು 1,040 ಮತಗಳ ಪೈಕಿ 767 ಮತಗಳು ಚಲಾವಣೆಯಾಗಿದ್ದು, ಅಧ್ಯಕ್ಷ ಶ್ರೀಧರ್ ಆರ್.-404 ಮತಗಳು ಪಡೆದರು. ಉಪಾಧ್ಯಕ್ಷ ವಿ.ಎನ್.ಮೋಹನ್ ಕುಮಾರ್-417, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ-336, ಖಜಾಂಚಿ ಜಿ.ಗಣೇಶ್-556, ಕಾರ್ಯದರ್ಶಿ-ಜಿ.ವೈ.ಮಂಜುನಾಥ್-288, ಜಂಟಿ ಕಾರ್ಯದರ್ಶಿ ಬಿ.ಎನ್.ಧರಣೀಶ್ 195, ಮಹಿಳಾ ಸ್ಥಾನ- ಮಿನಿ ತೇಜಸ್ವಿ ಮತಗಳು-491 ಮತಗಳನ್ನು ಪಡೆದರು. ಅದೇ ರೀತಿ, ಸಮಿತಿ ಸದಸ್ಯರಾಗಿ ಶಿವಣ್ಣ-234, ಶರಣಬಸಪ್ಪ-258, ಯಾಸೀರ್ ಮುಸ್ತಾಕ್-259, ಎಂ.ಅಲೀಂ-272, ರೋಹಿಣಿ ಅಡಿಗ-306, ಮಂಜುನಾಥ್-281 ಮತಗಳನ್ನು ಪಡೆದರು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA