Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಮಲೆನಾಡು ಎಂದರೆ ಕಣ್ಮುಂದೆ ಬರುವುದು ಸೌಂದರ್ಯ, ಬೆಟ್ಟ-ಗುಡ್ಡಗಳ ಸಾಲು. ಬಾನಿಗೆ ಮುತ್ತಿಕ್ಕುವ ಮಂಜಿನ ರಾಶಿ. ನಿರಂತರ ಮಳೆಗೆ ಹಸಿರ ಬೆಟ್ಟಗಳ ಸಾಲಿನಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ ಚಾರ್ಮಾಡಿ ಘಾಟಿಯ ಸೊಬಗನ್ನು ಇಮ್ಮಡಿಗೊಳಿಸಿದೆ. ಇಳೆಗೆ ಹಸಿರ ಹೊದಿಕೆ, ಮುಗಿಲೆತ್ತರದ ಬೆಟ್ಟಗುಡ್ಡಗಳು, ರಸ್ತೆಯ ಉದ್ದಕ್ಕೂ ದಟ್ಟ ಮಂಜಿನ ಕಣ್ಣಾಮುಚ್ಚಾಲೆ ಆಟ. ಹಸಿರ ವನಸಿರಿಯ ನಡುವೆ ಸಾಗುವ ಬೆಳ್ಮುಗಿಲ ಸಾಲು. ಆಗೊಮ್ಮೆ, ಈಗೊಮ್ಮೆ ಇಣುಕುವ ಸೂರ್ಯ ರಶ್ಮಿಗೆ ನಾಚಿ ನೀರಾಗುವ ಮಂಜು. ಘಾಟಿಯಲ್ಲಿ ಜಲಧಾರೆಯ ಜಲಪಾತದ ಸೊಬಗು ಇವುಗಳು ಮಲೆನಾಡಿನಲ್ಲಿ ಈಗ ದೃಶ್ಯ ಕಾವ್ಯವೇ ಮೇಳೈಸಿರುವುದು ಕಂಡು ಬರುತ್ತದೆ. ಪ್ರಕೃತಿಯ ತವರು ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿಯಲ್ಲಂತೂ ನಿಸರ್ಗದ ಸೊಬಗು ಅನಾವರಣ ಗೊಂಡಿದೆ. ಬೆಟ್ಟದ ಮೇಲಿಂದ ಝುಳುಝಳು ನೀನಾದದೊಂದಿಗೆ ಹರಿದು ಬರುತ್ತಿರುವ ಜಲಪಾತಗಳು ಹೊಸ ಲೋಕವನ್ನೇ ಸೃಷ್ಠಿಸಿವೆ. ಇಲ್ಲಿ ಉಗಮಗೊಂಡಿರುವ ಜಲಪಾತಗಳಿಗೆ ಜೀವಕಳೆ ಬಂದಿದ್ದು,ಝುಳು ಝುಳು ನೀನಾದದೊಂದಿಗೆ ಹಾಲ್ನೊರೆಯಂತೆ ಹರಿದು ಬರುತ್ತಿರುವ ಜಲಪಾತವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಲ್ಲಿ ಸೃಷ್ಟಿಯಾಗಿರುವ ದೃಶ್ಯಕಾವ್ಯವನ್ನು ವರ್ಣಿಸಲಸದಳ ಹಾಗಾಗಿ ಈ ದೃಶ್ಯವನ್ನು…
ನಿತ್ಯಾನಂದ ಸೃಷ್ಟಿರುವ ಕೈಲಾಸ ದೇಶ ಎಲ್ಲಿದೆ ಅನ್ನೋ ಕುತೂಹಲಕ್ಕೆ ಉತ್ತರ ಸಿಗುವ ದಿನ ದೂರವಿಲ್ಲ. ಈ ಬಾರಿ ಗುರು ಪೂರ್ಣಿಮೆ ದಿನ ನಿತ್ಯಾನಂದ ತಮ್ಮ ಕೈಲಾಸ ದೇಶದ ವಿಳಾಸ ಬಹಿರಂಗಪಡಿಸಲಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ 2019ರಲ್ಲಿ ನಿತ್ಯಾನಂದ ಬಿಡದಿ ಆಶ್ರಮದಿಂದ ಪರಾರಿಯಾಗಿದ್ದ.ನಂತರ ಕೈಲಾಸ ಸೃಷ್ಟಿಸಿರುವ ನಿತ್ಯಾನಂದನ ಕೈಲಾಸ ದೇಶ ಎಲ್ಲಿದೆ ಅನ್ನೋ ಪ್ರಶ್ನೆಗಳಿಗೆ ಮಾತ್ರ ಉತ್ತರವೇ ಇರಲಿಲ್ಲ. ನಿತ್ಯಾನಂದ ಹೇಳುವ ಪ್ರಕಾರ ಕೈಲಾಸ ದೇಶ ನಿಜವಾಗಿಯೂ ಅಸ್ತಿತ್ವದಲ್ಲಿ ಇದೆಯಾ ಅನ್ನೋ ಅನುಮಾನಗಳು ಇವೆ. ಈ ಅನುಮಾನ, ಕುತೂಹಲದ ನಡುವೆ ಇದೀಗ ಸ್ವತಃ ನಿತ್ಯಾನಂದ ಕೈಲಾಸ ದೇಶದ ವಿಳಾಸ ಬಹಿರಂಗ ಮಾಡುವುದಾಗಿ ಹೇಳಿದ್ದಾನೆ. ಗರು ಪೂರ್ಣಿಮೆ ದಿನ(ಜುಲೈ 21) ಸೌರ್ವಭೌಮ ದೇಶವಾದ ಕೈಲಾಸದ ವಿಳಾಸ ಬಹಿರಂಗಪಡಿಸುತ್ತಿದೆ. ಕೈಲಾಸ ದೇಶ ನಿಜಕ್ಕೂ ಇದೆಯಾ? ಅನ್ನೋ ಪ್ರಶ್ನೆ, ವದಂತಿಗಳನ್ನು ನೀವು ಕೇಳಿರುತ್ತೀರಿ. ಈ ಗುರು ಪೂರ್ಣಿಮೆ ದಿನ ಕೈಲಾಸ ಜಗತ್ತಿಗೆ ತನ್ನ ಬಾಗಿಲು ತೆರೆಯುತ್ತಿದೆ. ಕೈಲಾಸ ಹಿಂದುಗಳ ದೇಶ. ಅಪ್ಪಟ ಹಿಂದುಗಳು ಕೈಲಾಸದ ದೇಶದ ಪ್ರಜೆಯಾಗಲು…
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಲ್ಲಿರೋ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದ್ದು ಭಾರೀ ಅನಾಹುತ ಒಂದು ತಪ್ಪಿದೆ. ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ನಸುಕಿನ ಜಾವ ಟೀ ಕುಡಿಯಲು 15 ಕಾರ್ಮಿಕರು ತೆರಳಿದ್ದ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಮಾಹಿತಿ ಪ್ರಕಾರ, ಮುಂದಿನ ಅವಧಿಗೆ ಕಬ್ಬು ನುರಿಸಲು ಕಾರ್ಖಾನೆ ಸಿದ್ದತೆ ಮಾಡುವ ವೇಳೆ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ ಹಿಂದೆ 2023 ರ ಮಾರ್ಚ್ 4 ರಂದು ಕೂಡ ಬಾಯ್ಲರ್ ಬ್ಲಾಸ್ಟ್ ಆಗಿತ್ತು. ಈ ವೇಳೆ ಓರ್ವ ಕಾರ್ಮಿಕ ಮೃತಪಟ್ಟು ಇತರೇ ನಾಲ್ವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಇದೀಗ ಪದೇ ಪದೇ ಬಾಯ್ಲರ್ ಬ್ಲಾಸ್ಟ್ ಆಗಲು, ಕಳಪೆ ಬಾಯ್ಲರ್ ನಿರ್ಮಾಣವೇ ಅವಘಢಕ್ಕೆ ಕಾರಣವೆಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಈ ಹಿನ್ನೆಲೆ ಕಾರ್ಖಾನೆ ಬಾಯ್ಲರ್ ಸ್ಫೋಟ ಪ್ರಕರಣದ ತನಿಖೆಯ ಜೊತೆಗೆ ಯೋಜನೆ ಕಳಪೆತನ ಹಾಗೂ ಅರ್ಥಿಕ…
ಉತ್ತರಪ್ರದೇಶದ ಜೌನಪುರ್ ಕಾನ್ವೆಂಟ್ ಶಾಲೆಯಲ್ಲಿ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿಯ ನಡುವಿನ ಅನೈತಿಕ ಚಟುವಟಿಕೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರತಿಷ್ಠಿತ ಕಾನ್ವೆಂಟ್ ಶಾಲೆಯಲ್ಲಿ ಈ ಘಟನೆ ನಡೆದಿದು, ಪ್ರಿನ್ಸಿಪಾಲ್ ಹಾಗೂ ಟೀಚರ್ ನಡುವೆ ಸಲುಗೆ, ಆತ್ಮೀಯತೆ ಹಲವು ದಿನಗಳಿಂದ ಇತ್ತೆನ್ನಲಾಗಿದೆ. ಹಾಗಾಗಿ ಟೀಚರ್ ಪದೇ ಪದೇ ಟೀಚರ್ ಪ್ರಿನ್ಸಿಪಾಲ್ ಕೊಠಡಿಗೆ ಹೋಗುತ್ತಿದ್ದರೆನ್ನಲಾಗಿದೆ. ಈ ಶಾಲಾ ಶಿಕ್ಷಕಿಗೆ ಶಾಲೆಯ ಕೆಲ ಜವಾಬ್ದಾರಿಗಳನ್ನು ನೀಡಲಾಗಿದ್ದು, ಇದರ ಹಿಂದೆ ಕೂಡಾ ಪ್ರಿನ್ಸಿಪಾಲ್ ಕೈವಾಡ ಇತ್ತೆನ್ನಲಾಗಿದೆ. ಬಹಳ ಗೌಪ್ಯವಾಗಿ ನಡೆಯುತ್ತಿದ್ದ ಇವರ ರೊಮ್ಯಾನ್ಸ್ ಕಡೆಗೆ ಅದೇನೋ ಆಗಿ ಹೊರಗಡೆ ಬಂದಿದೆ. ಇದು ಶಾಲೆಯ ಶಿಕ್ಷಕ– ಶಿಕ್ಷಕಿಯರಿಗೆ ಗೊತ್ತಾಗಿ, ಕೊನೆಗೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಇದೀಗ ಶಾಲಾ ಸಮಯದಲ್ಲಿ ನಡೆದ ಇವರಿಬ್ಬರ 7 ನಿಮಿಷದ ರೊಮ್ಯಾನ್ಸ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದನ್ನು ಕಂಡ ವಿದ್ಯಾರ್ಥಿಗಳ ಪೋಷಕರಿಗೆ ತೀವ್ರ ಮುಜುಗರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಸ್ಪೇನ್ ನ ಮಾರ್ಬೆಲ್ಲಾದಲ್ಲಿ ಪ್ರವಾಸಿ ತಾಣದ ಬೀಚ್ ಗಳ ಶುಚಿತ್ವ ಕಾಪಾಡಲು ಈ ಹೊಸ ನಿಮಯ ಜಾರಿಗೆ ತರಲಾಗಿದ್ದು ಸಮುದ್ರದಲ್ಲಿ ಆಟವಾಡುತ್ತಾ, ಬೀಚ್ ಬದಿಯಲ್ಲಿ, ಅಥವಾ ಸಮುದ್ರಕ್ಕೆ ಮೂತ್ರ ವಿಸರ್ಜನೆ ಮಾಡಿದರೆ ಬರೋಬ್ಬರಿ 67,000 ರೂಪಾಯಿ ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲ, 2ನೇ ಬಾರಿ ಈ ತಪ್ಪು ಮಾಡಿದರೆ 1 ಲಕ್ಷ ರೂಪಾಯಿ ದಂಡ ಕೂಡ ಬೀಳುತ್ತೆ! ಅಂದಹಾಗೆ ಸುಂದರ ಬೀಚ್ ಗಳನ್ನು ಹೊಂದಿರುವ ಈ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಕಿಕ್ಕಿರಿದು ತುಂಬುತ್ತಾರೆ. ವೀಕೆಂಡ್ ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಪ್ರವಾಸಿಗರು ತುಂಬುತ್ತಾರೆ. ಆದರೆ ಬೀಚ್ ನಲ್ಲಿ ಆಟವಾಡುತ್ತಾ ಕಾಲಕಳೆಯುವ ಪ್ರವಾಸಿಗರು, ಸಮುದ್ರ ನೀರಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ನೀರಿನ ಶುಚಿತ್ವ, ಹೈಜೀನ್ ಸಮಸ್ಯೆಯಾಗುತ್ತಿದೆ. ಹಲವರು ಪ್ರವಾಸಿಗರು ಈ ಕುರಿತು ದೂರು ನೀಡಿದ್ದಾರೆ. ಹೀಗಾಗಿ ಮಾರ್ಬೆಲ್ಲಾ ನಗರ ಕಠಿಣ ನಿಯಮ ಜಾರಿಗೊಳಿಸಿದ್ದು ಸ್ಥಳೀಯ ಕೋಸ್ಟಲ್ ಸಿಬ್ಬಂದಿಗೆ ಅಧಿಕಾರ ನೀಡಲಾಗಿದೆ. ಆದರೆ ಈ ನಿಯಮ ಜಾರಿಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಿಕ್ಕಿರಿದು…
ಗುಜರಾತ್ ಪೊಲೀಸರು ಇತ್ತೀಚೆಗೆ ವಾಪಿ ಎಂಬಲ್ಲಿ ನಡೆದ 1 ಲಕ್ಷ ರೂಪಾಯಿಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ರೋಹಿತ್ ಕನುಭಾಯಿ ಸೋಲಂಕಿ ಎಂಬ ಕಳ್ಳನನ್ನು ಬಂಧಿಸಿದ್ದರು. ಬಳಿಕ ಕಳ್ಳನ ಹಿನ್ನೆಲೆ ಕೇಳಿ ಪೊಲೀಸರೇ ಅಚ್ಚರಿಗೊಂಡಿದ್ದಾರೆ. ಪೊಲೀಸರು ರೋಹಿತ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ರೋಹಿತ್ ಇದುವರೆಗೆ 19 ದರೋಡೆಗಳನ್ನು ಮಾಡಿದ್ದಾನೆ. ಐಷಾರಾಮಿ ಜೀವನಶೈಲಿಯನ್ನು ಹೊಂದಿದ್ದಾನೆ. ಇದಲ್ಲದೆ ಈತ ಮುಂಬೈನ ಮುಂಬ್ರಾ ಪ್ರದೇಶದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅದ್ದೂರಿ ಫ್ಲಾಟ್ ನಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಈತ ದುಬಾರಿ ಆಡಿ ಕಾರನ್ನು ಓಡಿಸುತ್ತಿದ್ದ ಎನ್ನಲಾಗಿದೆ. ತೆಲಂಗಾಣದಲ್ಲಿ ಎರಡು, ಆಂಧ್ರಪ್ರದೇಶದಲ್ಲಿ ಎರಡು, ಮಧ್ಯಪ್ರದೇಶದಲ್ಲಿ ಎರಡು ಮತ್ತು ಮಹಾರಾಷ್ಟ್ರದಲ್ಲಿ ಒಂದು ಕಳ್ಳತನ ಮಾಡಿದ್ದಾನೆ. ಇದರ ಜೊತೆಗೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಲಂಚ ನೀಡಿ ಇನ್ನೂ ಆರು ಕಳ್ಳತನ ಮಾಡಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಕಳ್ಳತನ ಮಾಡಲು ಈತ ಐಷಾರಾಮಿ ಹೋಟೆಲ್ ಗಳಲ್ಲಿ ತಂಗುತ್ತಿದ್ದ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ. ಹಗಲಿನಲ್ಲಿ ಹೋಟೆಲ್ ಕ್ಯಾಬ್ ಗಳನ್ನು ಬುಕ್…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎಂದು ವರದಿ ತಿಳಿಸಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್, ಪವಿತ್ರಾ ಗೌಡ ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎನ್ನಲಾಗಿದೆ. ಕ್ರೈಂ ಸೀನ್, ಮೃತದೇಹ ಬಿಸಾಕಿದ ಜಾಗ, ಮೃತದೇಹ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಗಳನ್ನು ಸಂಗ್ರಹ ಮಾಡಲಾಗಿತ್ತು. ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದ್ದು ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪ್ರಮುಖ ಸಾಕ್ಷ್ಯವಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಕಳೆದ ಕೆಲ ಸಮಯದ ಹಿಂದೆ ಸಾವನ್ನಪ್ಪಿದ್ದಾಳೆ ಎಂದು ಇಂಟರ್ ನೆಟ್ ನಲ್ಲಿ ಸುದ್ದಿಯಾಗಿದ್ದ ನಟಿ ಪೂನಂ ಪಾಂಡೆ ಮತ್ತೆ ಟ್ರೆಂಡ್ ನಲ್ಲಿದ್ದಾರೆ. ಆದರೆ ಈ ಬಾರಿ ಕತ್ತಲೆ ಬೆಳಕಿನಲ್ಲಿ ಬೆತ್ತಲಾಗೋ ಫೋಟೋಗಳನ್ನು ಶೇರ್ ಮಾಡುವ ಮೂಲಕ ಮತ್ತೆ ಟ್ರೆಂಡ್ ಆಗಿದ್ದಾರೆ. ಕೆಲವು ತಿಂಗಳ ಹಿಂದೆ ಗರ್ಭ ಕಂಠಕ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ನಟಿ ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದ್ದಾಳೆ. ಹೌದು, ಪೂನಂ ಪಾಂಡೆ ಇದೀಗ ಬೆತ್ತಲಾಗಿದ್ದಾರೆ. ಪೂನಂ ಆಕೆ ತನ್ನ ಸೌಂದರ್ಯ ಪ್ರದರ್ಶಿಸಲು ನಗ್ನತೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದಾಳೆ. ಇದೀಗ ನಟಿ ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ತನ್ನ ನಗ್ನ ಫೋಟೋಗಳನ್ನು ಹಂಚಿಕೊಂಡಿದ್ದಾಳೆ. ಆದರೆ ಕತ್ತಲು ಹಾಗೂ ಬೆಳಕಿನ ನಡುವಿನ ಈ ಫೋಟೋದಲ್ಲಿ ಅಷ್ಟೇ ಕುತೂಹಲವನ್ನೂ ಹಿಡಿದಿಟ್ಟಿದ್ದಾಳೆ. ಸದ್ಯ ಆಕೆಯ ಸಂಪೂರ್ಣ ನಗ್ನ ಫೋಟೋಗಳು ಇದೀಗ ಭಾರಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಹಾಟ್ ಅವತಾರಗಳನ್ನು ಪ್ರದರ್ಶಿಸುವ ಫೋಟೋಗಳನ್ನು…
ಮುಡಾ ಹಗರಣ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಸುಮಾರು 5000 ಕೋಟಿ ರೂಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದ್ದು ಈ ವಿಚಾರವಾಗಿ ಘಟಾನುಘಟಿಗಳ ಹೆಸರು ಕೇಳಿಬಂದಿದೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಗಿಬಿದ್ದ ಬೆನ್ನಲ್ಲೇ ಇದರ ತನಿಖೆಗಾಗಿ ಸರ್ಕಾರ ಸಮಿತಿಯನ್ನೂ ರಚಿಸಿ 15 ದಿನಗಳೊಳಗೆ ವರದಿ ನೀಡುವಂತೆ ಆದೇಶ ನೀಡಿದೆ. ಅಷ್ಟೇ ಅಲ್ಲ ಮುಡಾ ಹಗರಣ ವಿಚಾರವು ಇದೀಗ ಗೂಗಲ್ ನಲ್ಲಿ ಸಹ ಟ್ರೆಂಡ್ ಆಗಿದೆ. ಕರ್ನಾಟಕದಲ್ಲಿ ಇದು ಶೇಕಡಾ 100ರಷ್ಟು ಅಂತಾರ್ಜಾಲ ಬಳಕೆದಾರರು ಸರ್ಚ್ ಕೊಟ್ಟಿದ್ದರೆ, ಉತ್ತರ ಭಾರತದ ಹಿಮಾಚಲ ಪ್ರದೇಶದಲ್ಲೂ ಶೇಕಡಾ 30ರಷ್ಚು ನೆಟ್ಟಿಗರು ಈ ಬಗ್ಗೆ ಜಾಲಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ. 50-50 ಅನುಪಾತ…
ಸುಪ್ರೀಂ ಕೋರ್ಟ್ ಇಂದು ನೀಟ್ ಪ್ರಕರಣಗಳ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಸುಮಾರು ಮೂವತ್ತು ಅರ್ಜಿಗಳನ್ನು ಒಟ್ಟಿಗೆ ಪರಿಗಣಿಸುತ್ತದೆ. ನೀಟ್ ಪರೀಕ್ಷೆಯನ್ನು ಮರು ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಮೂಲಕ ತಿಳಿಸಿದೆ. ಅವ್ಯವಹಾರದ ಪ್ರತ್ಯೇಕ ಘಟನೆಗಳು ನಡೆದಿವೆ ಎಂಬ ಕಾರಣಕ್ಕೆ ಪರೀಕ್ಷೆಯ ಒಟ್ಟಾರೆ ಪಾರದರ್ಶಕತೆಯನ್ನು ಪ್ರಶ್ನಿಸುವುದು ಸೂಕ್ತವಲ್ಲ ಎಂದು ಎನ್ಟಿಎ ಸುಪ್ರೀಂ ಕೋರ್ಟ್ನಲ್ಲಿ ಸ್ಪಷ್ಟಪಡಿಸಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನೀಟ್ ವಿಷಯದಲ್ಲಿ ಎದ್ದಿರುವ ಆರೋಪಗಳ ಬಗ್ಗೆ ಮುಂದಿನ ಕ್ರಮ ಏನು ಎಂಬುದನ್ನು ನಿರ್ಧರಿಸಲಿದೆ. ಪಾಟ್ನಾ ಮತ್ತು ಗೋಧ್ರಾದಲ್ಲಿ ಮಾತ್ರ ಅಕ್ರಮಗಳು ನಡೆದಿವೆ ಮತ್ತು ಪ್ರತ್ಯೇಕ ಸಮಸ್ಯೆಗಳಿಂದ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದಿಲ್ಲ ಎಂದು ಎನ್ಟಿಎ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಗೋದ್ರಾದಲ್ಲಿ ಉಪ ಅಧೀಕ್ಷಕ ತುಷಾರ್ ಭಟ್ಟಿ ಅವರ ನೆರವಿನಿಂದ ಅಕ್ರಮ ನಡೆದಿದ್ದು, ದೇಶದ ಇತರ ಭಾಗಗಳಲ್ಲಿ ಸೋಗು ಹಾಕಿರುವ ಆರೋಪ ಕೇಳಿಬಂದಿದೆ. ಪಾರದರ್ಶಕತೆ ಕಾಪಾಡಲು ಪರೀಕ್ಷೆ ನಡೆಸಲಾಗಿದೆ. ಘಟನೆಯ ಕುರಿತು ಸಿಬಿಐ…