Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಮುಂಬೈ: ಭಾನುವಾರ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರೈಲು ಸೇವೆಯನ್ನು ರದ್ದುಗೊಳಿಸಲಾಗಿದ್ದು, ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯಿಂದಾಗಿ ಮುಂಬೈನ ಪ್ರಮುಖ ರಸ್ತೆಗಳು, ರೈಲು ಮಾರ್ಗಗಳು ನೀರು ತುಂಬಿಕೊಂಡಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಹವಾಮಾನ ವೈಪರಿತ್ಯದಿಂದ ವಿಮಾನ ಸಂಚಾರದಲ್ಲೂ ವ್ಯತ್ಯಯಗೊಂಡಿದ್ದು, ಜನರು ಪರದಾಡುವಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ಜುಲೈ 8ರಂದು ಇಡೀ ದಿನ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಬೈನಲ್ಲಿ ನಿನ್ನೆ ಒಂದೇ ದಿನ ದಾಖಲೆಯ 300 ಮಿ.ಮೀ. ಮಳೆಯಾಗಿದೆ. ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ಹಲವಾರು ಬಡಾವಣೆಗಳ ತಗ್ಗುಪ್ರದೇಶಗಳಲ್ಲಿ ಮನೆಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ರೈಲು ಮಾರ್ಗಳಲ್ಲಿ ನೀರು ತುಂಬಿದೆ. ಕೆಲವು ಕಡೆ ಮಣ್ಣು ಕುಸಿದಿದ್ದು, ಮರವೊಂದು ಹಳಿಗಳ ಮೇಲೆ ಬಿದ್ದಿದೆ. ಇದರಿಂದ ರೈಲು ಸೇವೆ ಅಪಾಯಕಾರಿ ಎಂಬ ಕಾರಣಕ್ಕೆ ಕೆಲವು ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಾಸರ ಮತ್ತು ಟಿಟ್ವಾಲಾ ನಡುವಿನ ರೈಲು ಸಂಚಾರ ತಾತ್ಕಾಲಿಕವಾಗಿ…
ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೊದಲ ಕಂತಿನ ಹಣ ಪಡೆದ ಮಹಿಳೆಯರು, ತಮ್ಮ ಗಂಡಂದಿರನ್ನು ಬಿಟ್ಟು, ತಮ್ಮ ತಮ್ಮ ಪ್ರೇಮಿಗಳ ಜೊತೆ ಊರಿನಿಂದ ಪರಾರಿಯಾಗಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಹಾರಾಜ್ ಗಂಜ್ ಜಿಲ್ಲೆಯ ಗ್ರಾಮವೊಂದರಲ್ಲಿ ಇಂಥದ್ದೊಂದು ವಿಲಕ್ಷಣ ಘಟನೆ ನಡೆದಿವೆ. ಬರೋಬ್ಬರಿ 11 ಮಹಿಳೆಯರು ತಮ್ಮ ಗಂಡನನ್ನು ಬಿಟ್ಟು, ಪ್ರೇಮಿಗಳ ಜೊತೆ ಊರು ಬಿಟ್ಟು ಓಡಿ ಹೋಗಿರೆ ಎನ್ನಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ ತಕ್ಷಣ 11 ಮಹಿಳೆಯರು ತಮ್ಮ ಪತಿಯನ್ನು ತೊರೆದು ಪ್ರೇಮಿಗಳೊಂದಿಗೆ ಓಡಿಹೋಗಿದ್ದಾರಂತೆ. ಮಹಾರಾಜ್ ಗಂಜ್ ನ ನಿಚ್ಲಾಲ್ ಬ್ಲಾಕ್ ಪ್ರದೇಶದ ಒಟ್ಟು 108 ಗ್ರಾಮಗಳಲ್ಲಿ 2023–24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 2,350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಎರಡು ಸಾವಿರಕ್ಕೂ ಹೆಚ್ಚು ಫಲಾನುಭವಿಗಳ ಮನೆಗಳೂ ಪೂರ್ಣಗೊಂಡಿವೆ. ಇದರ ಅಡಿಯಲ್ಲಿ 11 ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಮೊದಲ ಕಂತಿನ ಹಣವಾಗಿ 40 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಅತ್ತ…
ಇತ್ತೀಚಿನ ದಿನಗಳಲ್ಲಿ ಜಾಲತಾಣದಲ್ಲಿ ಯದ್ವಾತದ್ವಾ ವಿಡಿಯೋ ಹಂಚಿಕೊಳ್ಳುವವರನ್ನು ನೋಡಿದ್ದೇವೆ. ಕೆಲವರು ಸಭ್ಯರಂತೆ, ಇನ್ನೂ ಕೆಲವರು ಅಸಭ್ಯರಂತೆ ವರ್ತಿಸಿ ಜನರಿಂದ ವಿಪರೀತ ಟೀಕೆಗೆ ಒಳಗಾಗುತ್ತಿರುತ್ತಾರೆ. ಆದರೆ ಇಲ್ಲೊಂದು ಜೋಡಿ ಇದೆಲ್ಲ ದಾಖಲೆಯನ್ನು ಮುರಿದು ತಮ್ಮ ಮೊದಲ ರಾತ್ರಿಯ ವಿಡಿಯೋವನ್ನೇ ಅಪ್ ಲೋಡ್ ಮಾಡಿ ಬಿಟ್ಟಿದ್ದಾರೆ. ರಿಲ್ಸ್ ಆಸೆಗೆ ಬಲಿಯಾಗಿದ್ದ ಈ ಇಬ್ಬರು ಜೋಡಿಗಳು ಮದುವೆಯ ದಿನದ ರಾತ್ರಿಯಂದು ಫಸ್ಟ್ ನೈಟ್ ವಿಡಿಯೋ ಮಾಡಿ ರೀಲ್ಸ್ ನಲ್ಲಿ ಹಾಕಿದ್ದಾರೆ. ಇಬ್ಬರೂ ಇತ್ತೀಚೆಗೆ ಮದುವೆಯಾಗಿದ್ದಾರೆ. ಫಸ್ಟ್ ನೈಟ್ ಮುಗಿದ ಬಳಿಕ ಕೊಠಡಿಯ ವಿಡಿಯೋ ಮಾಡಿ ಅದನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವರನು ವಧುವನ್ನು ಕೇಳುತ್ತಾನೆ, ಫಸ್ಟ್ ನೈಟ್ ಹೇಗಿತ್ತು..ಅಂತ?, ಇದಕ್ಕೆ ಮದುಮಗಳು ಚೆನ್ನಾಗಿತ್ತು ಅಂತ ಹೇಳುತ್ತಾಳೆ, ಬಳಿಕ ಇಬ್ಬರು ಕೂಡ ಹಾಸಿಗೆಯ ಮೇಲಿದ್ದ ಅಲಂಕಾರವನ್ನು ತೋರಿಸಲು ಮುಂದಾಗುತ್ತಾರೆ. ಈ ವಿಡಿಯೋವನ್ನು ಸುನಂದಾ ರಾಯ್ ಅನ್ನುವ ಮಹಿಳೆ ಹಂಚಿಕೊಂಡಿದ್ದಾರೆ. ಈ ಫಸ್ಟ್ ನೈಟ್ ವಿಡಿಯೋ ವೈರಲ್ ಆಗುತ್ತಿದ್ದು ಅನೇಕ ಜನರು ಛೀ..ಥೂ ಅಂತ ಉಗಿಯುತ್ತಿದ್ದಾರೆ. ನಿಮಗೆ…
ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಜನರು ಬಾಡಿಗೆ ಮನೆಯನ್ನೇ ಆಶ್ರಯಿಸಿಕೊಂಡಿರುತ್ತಾರೆ. ಒಂದು ಮನೆ ಹುಡುಕಿ ವಾಸ ಮಾಡುತ್ತ ದಿನ ಕಳೆಯುತ್ತಿರುತ್ತಾರೆ. ಆದರೆ ಕೆಲವೊಂದು ಸಂದರ್ಭದಲ್ಲಿ ಮನೆ ಮಾಲೀಕರ ಕಿರಿ ಕಿರಿ ವಿಪರೀತವಾಗಿ ಹೋಗುತ್ತದೆ. ಹಾಗಿದ್ದರೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಾಡಿಗೆದಾರರ ಹಕ್ಕುಗಳು ಏನು? ಅನಗತ್ಯ ಮೇಂಟೆನೆನ್ಸ್ ಚಾರ್ಜ್ ಮತ್ತು ಸೊಸೈಟಿ ಫೀ ನಿಮಗೂ ವಿಧಿಸಿದ್ದರೆ, ನೀವು ಅದನ್ನು ಪ್ರತಿರೋಧಿಸಬೇಕು. ನಿಮ್ಮ ಒಟ್ಟು ಬಾಡಿಗೆಗೆ ಹೋಲಿಸಿದರೆ 50% ಕ್ಕಿಂತ ಹೆಚ್ಚು ಹಣವನ್ನು ಮೇಂಟೆನೆನ್ಸ್ ಗೆ ಅಂತ ವಿಧಿಸಿದ್ದರೆ ಅದು ಅಕ್ರಮ. ಬಾಡಿಗೆದಾರರಿಂದ ಮೇಂಟೆನೆನ್ಸ್ ಗೆ ಅಂತ ಪಡೆದ ಹಣದಿಂದ ಮಾಲೀಕರು ಲಾಭ ಮಾಡಿಕೊಳ್ಳುವಂತಿಲ್ಲ. ಯಾವುದೇ ಶುಲ್ಕವನ್ನು ಕಟ್ಟಿ ಎಂದು ಮಾಲೀಕರು ಬಾಡಿಗೆದಾರರಿಗೆ ಹೇಳುವಂತಿಲ್ಲ. ಮಾಲೀಕರು ಬಾಡಿಗೆ ಹೆಚ್ಚಳ ಮಾಡಬೇಕು ಎಂದಾದರೆ, ಬಾಡಿಗೆದಾರರಿಗೆ 3 ತಿಂಗಳು ಮೊದಲೇ ಸೂಚನೆ ನೀಡಿದ ನಂತರವೇ ಏರಿಕೆ ಮಾಡಬಹುದು. ಒಂದು ವರ್ಷಕ್ಕೂ ಹೆಚ್ಚು ಕಾಲದವರೆಗೆ ಬಾಡಿಗೆಗೆ ವಾಸಿಸುತ್ತೀರಿ ಎಂದಾದರೆ ಬಾಡಿಗೆ ಕರಾರನ್ನು ನೋಂದಣಿ ಮಾಡಿಕೊಳ್ಳಬೇಕು. ನೀವು…
ಡೆಂಗ್ಯೂ ಬಹಳ ಅಪಾಯಕಾರಿ ರೋಗವಾಗಿದೆ. ಡೆಂಗ್ಯೂ ಸಮಸ್ಯೆ ರಕ್ತಸ್ರಾವದ ಅಪಾಯವಿದೆ ಮತ್ತು ರೋಗಿಯು ಸಹ ಸಾಯಬಹುದು.ಡೆಂಗಿ ಜ್ವರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಡಂಗಿ ಜ್ವರ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ರೋಗ ಲಕ್ಷಣಗಳು: * ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು. *ತೀವ್ರ ತಲೆನೋವು, ಮೈಕೈ & ಕೀಲು ನೋವು, ವಾಕರಿಕೆ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು * ಬಾಯಿ, ಮೂಗು & ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು * ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು ಕಪ್ಪು ಬಣ್ಣದ ಮಲ ವಿಸರ್ಜನೆ * ವಿಪರೀತ ಬಾಯಾರಿಕೆ * ತಣ್ಣನೆಯ ಬಿಳಿಚಿದ ಚರ್ಮ * ಜ್ಞಾನ…
ಒಂದು ತಿಂಗಳ ಮೊದಲು ಮಧ್ಯಪ್ರದೇಶದ ಗ್ವಾಲಿಯರ್ ಬಳಿಯ ತೇಕನಾಪುರದಲ್ಲಿರುವ ಬಿಎಸ್ಎಫ್ ಅಕಾಡೆಮಿಯಿಂದ ನಾಪತ್ತೆಯಾಗಿರುವ ಇಬ್ಬರು ಮಹಿಳಾ ಪೊಲೀಸರಿಗಾಗಿ ಹಲವು ಏಜೆನ್ಸಿಗಳು ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಅಂತರರಾಷ್ಟ್ರೀಯ ಗಡಿಗಳಲ್ಲಿರುವ ಬಿಎಸ್ಎಫ್ ಘಟಕಗಳಿಗೆ ಕೂಡಾ ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಆದರೂ ಪತ್ತೆಯಾಗಿಲ್ಲ. ಜಬಲ್ಪುರದ ಆಕಾಂಕ್ಷಾ ನಿಖಾರ್ ಮತ್ತು ಬಂಗಾಳದ ಮುರ್ಷಿದಾಬಾಧ್ನ ಶಹನಾ ಖಾಟೂನ್ ಎಂಬವರು 2021ರಿಂದ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇವರು 2024ರ ಜೂನ್ 6ರಂದು ಕಣ್ಮರೆಯಾಗಿದ್ದರು ಎನ್ನಲಾಗಿದೆ. ಈ ಇಬ್ಬರ ಫೋನ್ ಗಳ ಜಾಡು ಹಿಡಿದಾಗ ಸಂಶಯಾಸ್ಪದ ಚಟುವಟಿಕೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದು, ತನಿಖೆ ನಡೆಯುತ್ತಿದೆ. ಇವರ ಫೋನ್ ಬಳಕೆ ಸ್ಥಳಗಳು ದೆಹಲಿ, ಹೌರಾ ಮತ್ತು ಬೆಹ್ರಾಂಪುರವನ್ನು ತೋರಿಸುತ್ತಿವೆ. ಫೋನ್ ದಾಖಲೆಗಳನ್ನು ಮತ್ತು ಹಲವು ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳು ವಿಶ್ಲೇಷಿಸುತ್ತಿದ್ದು, ವಿವಿಧ ರಾಜ್ಯಗಳಿಗೆ ಇವರು ಪ್ರಯಾಣ ಕೈಗೊಳ್ಳಲು ಏನು ಕಾರಣ ಎಂಬ ಅಂಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತಿಪಟೂರು: ಜಗತ್ತಿನಾದ್ಯಂತ ರೋಟರಿಸಂಸ್ಥೆ ಹಲವಾರು ಸಮಾಜಸೇವೆ ಮಾಡುವ ಮೂಲಕ ಸಮಾಜದ ಏಳಿಗೆಗೆ ಕೈ ಜೋಡಿಸಿದೆ, ಸೇವಾ ಮನೋಭಾವ ಹೊಂದಿರುವವರಿಗೆ ಉತ್ತಮ ವೇದಿಕೆಯಾಗಿದೆ ಎಂದು ನೂತನ ರೋಟರಿ ಅಧ್ಯಕ್ಷ ಗವಿಯಣ್ಣ ತಿಳಿಸಿದರು. ನಗರದ ಶ್ರೀಗುರು ಕನ್ವೆಷನ್ ಹಾಲ್ ನಲ್ಲಿ ಆಯೋಜಿಸಿದ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾಪಾಲಕರಾದ ಎನ್.ಎಸ್.ಮಹದೇವ ಪ್ರಸಾದ್ ನೂತನ ಅಧ್ಯಕ್ಷರಿಗೆ ಕಾಲರ್ ಅರ್ಪಿಸುವ ಮೂಲಕ ಪದಗ್ರಹಣ ನೆರವೇರಿಸಿದರು ನೂತನ ಅಧ್ಯಕ್ಷರಾದ ಅಧಿಕಾರ ಸ್ವೀಕರಿಸಿದ ಗವಿಯಣ್ಣ ಮಾತನಾಡಿ, ರೋಟರಿ ಸಂಸ್ಥೆ ಜಗತ್ತಿನಾದ್ಯಂತ ಸಮಾಜ ಸೇವೆ ಮಾಡುವ ಮೂಲಕ ಸೇವಾಮನೋಭಾವ ಉಳ್ಳವರಿಗೆ ಉತ್ತಮ ವೇದಿಕೆ ನೀಡಿದೆ, ಅತ್ಯಂತ ಬಡ ಕುಟುಂಬದಲ್ಲಿ ಬೆಳೆದ ನಾನು ರೋಟರಿಯಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸವಮಾಡುವ ಅವಕಾಶ ಕಲ್ಪಸಿರುವುದಕ್ಕೆ ಹೆಮ್ಮೆಎನ್ನಿಸುತ್ತಿದೆ. ರೋಟರಿ ಸಂಸ್ಥೆ ಸಮಾಜಮುಖಿಯಾಗಿ ಮಾನವೀಯ ನೆಲಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ನಾವು ಸಂಪಾದಿಸಿದ ಗಳಿಕೆಯಲ್ಲಿ ಸಮಾಜಕ್ಕೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶ ದೊರೆಯುತ್ತದೆ, ತಿಪಟೂರು ರೋಟರಿ ಸಂಸ್ಥೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಜೊತೆಗೆ, ಬಡವರ…
ತುಮಕೂರು: ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಚಿರತೆಯೊಂದು ಭೀತಿಯ ವಾತಾವರಣ ನಿರ್ಮಾಣ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವಗರಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಮೇಕೆ, ರಾತ್ರಿ ಸಾಕು ನಾಯಿ ಹೊತ್ತೊಯ್ದ ಚಿರತೆ ಸಂಜೆಯಾಗುತ್ತಿದ್ದಂತೆ ಗ್ರಾಮದಲ್ಲಿ ಹೊರಗಿ ಬಂದು ಓಡಾಡ ದಂತಹ ಭಯದ ವಾತಾವರಣ ನಿರ್ಮಾಣವಾಗಿದೆ. ರಾಜಣ್ಣ ಎಂಬುವರಿಗೆ ಸೇರಿದ ಮೇಕೆಯಾಗಿದ್ದು ಒಂದೇ ದಿನ ಎರಡು ಬಾರಿ ಚಿರತೆ ದಾಳಿ ನಡೆಸಿದ್ದು ಗ್ರಾಮಸ್ಥರು ಹೆದರಿ ಹೋಗಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲೆಯಲ್ಲಿ ಈವರೆಗೂ 182 ಡೆಂಗ್ಯೂ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಡೆಂಗ್ಯೂ ಪ್ರಕರಣಗಳು ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುವುದರಿಂದ ಮಹಾನಗರ ಪಾಲಿಕೆ, ಆರೋಗ್ಯ, ಶಿಕ್ಷಣ ಇಲಾಖೆಗಳು ಸೇರಿದಂತೆ ಮತ್ತಿತರ ಇಲಾಖೆಗಳ ಸಹಭಾಗಿತ್ವದಲ್ಲಿ ಈಗಾಗಲೇ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಈವರೆಗೆ ಸುಮಾರು 5700 ಡೆಂಗ್ಯು ಪ್ರಕರಣಗಳು ವರದಿಯಾಗಿದ್ದು, ಸಾವುಗಳು ಸಂಭವಿಸಿವೆ. ಇದರಿಂದ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ–ಚಿಕುಗುನ್ಯಾದಿದ ಯಾವುದೇ ಸಾವು-ನೋವು ಸಂಭವಿಸಿಲ್ಲವಾದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ…
ಬೆಂಗಳೂರಿನ ಆಟೋ ಚಾಲಕರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಬೆಂಗಳೂರು ನಗರದಲ್ಲಿ ಆಟೋಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಹೊಸ ಆಟೋ ಪರ್ಮಿಟ್ ಪಡೆಯಲು ಸರ್ಕಾರ ಷರತ್ತುಗಳನ್ನು ಸಹ ನಿಗದಿ ಮಾಡಿದೆ. ಸರ್ಕಾರ ಹೊಸ ಆಟೋ ಪರ್ಮಿಟ್ ಪಡೆಯುವ ಸಂಖ್ಯೆಯನ್ನು 1.55 ಲಕ್ಷದಿಂದ 2.55ಕ್ಕೆ ಏರಿಕೆ ಮಾಡಿದೆ. ಮುಂದಿನ 5 ವರ್ಷಗಳಿಗೆ ಇದು ಅನ್ವಯವಾಗಲಿದೆ ಎಂದು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಜನಸಂಖ್ಯೆ ಹೆಚ್ಚಾದಂತೆ ನಗರದಲ್ಲಿ ಹೊಸ ಆಟೋ ಪರ್ಮಿಟ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಆದರೆ ಇದಕ್ಕೆ ಷರತ್ತುಗಳು ಅನ್ವಯ ಎಂದು ಸ್ಪಷ್ಟಪಡಿಸಲಾಗಿದೆ. ಹಸಿರು ಆಟೋ ರಿಕ್ಷಾಗಳಿಗೆ ಮಾತ್ರ ಪರ್ಮಿಟ್ ನೀಡಬೇಕು. ಬಿಎಸ್–6 ಇಂಜಿನ್ ಹೊಂದಿರುವ ಪ್ರಮಾಣೀಕೃತ ಎಲ್ ಪಿಜಿ/ ಸಿಎನ್ ಜಿ/ ಎಲೆಕ್ಟ್ರಿಕ್ ಕಿಟ್ ಮತ್ತು ಡಿಜಿಟರ್ ದರದ ಮೀಟರ್ಗಳನ್ನು ಆಟೋಗಳು ಹೊಂದಿರಬೇಕು. ಈಗಾಗಲೇ ಆಟೋ ರಿಕ್ಷಾ ಚಾಲನೆ ಪರ್ಮಿಟ್ ಹೊಂದಿರುವ ಯಾವುದೇ ಚಾಲಕರಿಗೆ ಹೊಸದಾಗಿ ಪರ್ಮಿಟ್ ನೀಡಬಾರದು. ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಸರಿಯಾದ ದಾಖಲೆಗಳನ್ನು ಪರಿಶೀಲನೆ ಮಾಡಬೇಕು.…