Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
7 ರಾಜ್ಯಗಳ 13 ಸ್ಥಾನಗಳಿಗೆ ಜುಲೈ 10ರಂದು ಉಪ ಚುನಾವಣೆ ನಿಗದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದರಿಂದ ಹಾಗೂ ಶಾಸಕರಾಗಿದ್ದವರ ಸಾವು ಸೇರಿದಂತೆ ನಾನಾ ಕಾರಣಗಳಿಗೆ ತೆರವಾಗಿರುವ 13 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಾಣಾಘಟ್, ದಕ್ಷಿಣ್, ಭಾಗ್ದಾಹ್, ಮಣಿಕಟ್ಲಾ, ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಾಂದಿ, ಮಧ್ಯಪ್ರದೇಶದ ಅಮ್ರಾವರ, ಉತ್ತರಾಖಂಡ್ ನ ಬದರೀನಾಥ್ ಮತ್ತು ಮಂಗಲೂರ್, ಪಂಜಾಬ್ ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ದೆಹ್ರಾ, ಹಮಿರ್ಪುರ್, ನಲಘಡ್, ಕರ್ನಾಟಕದ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭೆ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ವಿಜಯಪುರ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ನಡೆಯಿತು. ನೂರಾರು ವಿದ್ಯಾರ್ಥಿಗಳು ಇಂಡಿ –ವಿಜಯಪೂರ ರಾಜ್ಯ ಹೆದ್ದಾರಿಯ ಜೋಡಗುಡಿಯ ಬಳಿ ಬಸ್ಸು ತಡೆದು ಪ್ರತಿಭಟನೆ ಮಾಡಿದರು, ಇಂಡಿಯಿಂದ ವಿಜಯಪುರಕ್ಕೆ ಹಾಗೂ ವಿಜಯಪುರದಿಂದ ಇಂಡಿಗೆ ಹೋಗುವ ಎಲ್ಲಾ ಬಸ್ಸುಗಳು ತಡವಲಗಾ ಮಾರ್ಗವಾಗಿ ಚಲಾಯಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಅಧಿಕಾರಿಗಳ ಆದೇಶ ಇದ್ದರೂ ಕೂಡಾ ಬಸ್ ಚಾಲಕರು ಹಾಗೂ ನಿರ್ವಾಹಕರು ಆದೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ, ಕಾನೂನು ಉಲ್ಲಂಘಿಸಿ, ತಡವಲಗಾ ಗ್ರಾಮಕ್ಕೆ ಬರದೆ ಜೋಡಿಗುಡಿಯ ಮೂಲಕ ಇಂಡಿ ಹಾಗೂ ವಿಜಯಪೂರಕ್ಕೆ ಹೋಗುತ್ತಾರೆ, ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಅನಾನುಕೂಲವಾಗುತ್ತದೆ , ಇದನ್ನು ಸಹಿಸದ ನೂರಾರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ದಿಢೀರನೆ ರಸ್ತೆಗಿಳಿದು ಕೆಲವು ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡಿದರು. ನಂತರ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಲ್ಯಾಣ…
ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೋಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು. ಹೆಸರನ್ನು ಎತ್ತರಕ್ಕೇರಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ ಎಂದರು. ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ: ಸಾರ್ವಜನಿಕರ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೋಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು. ರಿಯಲ್ ಎಸ್ಟೇಟ್…
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದರೆ, ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ತನಿಖೆ ನಡೆಯಲಿ. ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹೊಳೆನರಸೀಪುರ ಪ್ರಕರಣದಲ್ಲಿ ಎರಡೂ ವಾರಗಳ ಕಾಲ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್ ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು. ಇದೇ ವೇಳೆ ಸರ್ಕಾರದ ಪರ ಎಸ್ ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್ಐಟಿ ವಿಚಾರಣೆ…
ಬೆಂಗಳೂರಿನ ಮಂಜುನಾಥ ನಗರದ ಪಿಜಿಯಲ್ಲಿ ವಿದ್ಯಾರ್ಥಿಯೋರ್ವ ಮೊಬೈಲ್ ಚಾರ್ಜ್ ಮಾಡುವ ಸಂದರ್ಭ ಚಾರ್ಜರ್ನಲ್ಲಿ ವಿದ್ಯುತ್ ಪ್ರವಾಹಿಸಿ ದುರಂತ ಸಾವಿಗೀಡಾಗಿದ್ದಾನೆ. ಮೃತ ವಿದ್ಯಾರ್ಥಿಯನ್ನು ಶ್ರೀನಿವಾಸ್ (24) ಎಂದು ಗುರುತಿಸಲಾಗಿದೆ. ಶಿಕ್ಷಣಕ್ಕಾಗಿ ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ್ ಶುಕ್ರವಾರ ರಾತ್ರಿ ಮೊಬೈಲ್ ಚಾರ್ಜ್ ಹಾಕಲು ಹೋದಾಗ ಎಲೆಕ್ಟ್ರಿಕ್ ಶಾಕ್ ಹೊಡೆದಿದ್ದು, ಚಾರ್ಜಿಂಗ್ ವೈರ್ ಅಥವಾ ಸ್ವಿಚ್ ಬೋರ್ಡ್ನಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಈತ ಬಳಸುತ್ತಿದ್ದ ಮೊಬೈಲ್ ಚಾರ್ಜರ್ ವೈರ್ ಕೂಡ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ವಿದ್ಯುತ್ ಶಾಕ್ನಿಂದ ಶ್ರೀನಿವಾಸ್ ನೆಲಕ್ಕೆ ಬಿದ್ದಿದ್ದು, ರಾತ್ರಿ ಪಿಜಿಯಲ್ಲಿ ಊಟದ ಸಮಯದಲ್ಲಿ ಪಕ್ಕದ ರೂಮ್ ನ ವಿದ್ಯಾರ್ಥಿ ಊಟಕ್ಕೆ ಬಾ ಎಂದು ಕರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಿಜಿ ಸಿಬ್ಬಂದಿ ತಕ್ಷಣ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.…
ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಅಂಜನಾಪುರದ ಗಗನ್ (11 ) ಎಂದು ಗುರುತಿಸಲಾಗಿದೆ. ಈತ ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದು, ಜ್ವರದಿಂದಾಗಿ ಕಳೆದ ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇದು ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಪುಟ್ಟ ಮಗುವಿನ ಮೊದಲ ಸಾವು ಆಗಿದೆ. ಕಳೆದ ವಾರ ಕಗ್ಗದಾಸಪುರದಲ್ಲಿ 27 ವರ್ಷ ಯುವಕ ಡೆಂಗ್ಯುವಿನಿಂದ ಮೃತಪಟ್ಟಿದ್ದ. ಹಾಸನದಲ್ಲಿ ಮೂವರು ಬಾಲಕಿಯರು ಡೆಂಗ್ಯುವಿನಿಂದ ಮೃತಪಟ್ಟಿದ್ದಾರೆ. ಒಟ್ಟು ಏಳು ಮಂದಿ ರಾಜ್ಯದಲ್ಲಿ ಇದುವರೆಗೆ ಡೆಂಗ್ಯೂವಿನಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದೆಲ್ಲಡೆ ಡೆಂಗ್ಯೂ…
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಶತಮಾನವನ್ನು ಕಂಡಿರುವ ಕನ್ನಡಿಗರ ಮಾತೃಸಂಸ್ಥೆ. ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಛೇರಿಯಲ್ಲಿ ಲಭ್ಯವಿರುವ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಗಣಕ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ ಹೊಂದಿರ ಬೇಕು, ಕನ್ನಡವನ್ನು ತಪ್ಪಿಲ್ಲದೆ ಬೆರಳಚ್ಚು ಮಾಡಲು ಬರಬೇಕು. ಪುಟ ವಿನ್ಯಾಸ – ಕಛೇರಿ ಪತ್ರ ವ್ಯವಹಾರದ ತಿಳಿವಳಿಕೆ ಅಪೇಕ್ಷಣೀಯ * ಕಛೇರಿ ಸಹಾಯಕರು – ಕಂಪ್ಯೂಟರಿನ ಪ್ರಾಥಮಿಕ ತಿಳಿವಳಿಕೆ, ಕನ್ನಡದಲ್ಲಿ ಸಂವಹನ ನಡೆಸುವ ಕೌಶಲ್ಯ, ಕಛೇರಿ ಕಾರ್ಯ ನಿರ್ವಹಣೆ ಕುರಿತ ತಿಳುವಳಿಕೆ ಅಪೇಕ್ಷಣೀಯ. * ಲೆಕ್ಕ ಪತ್ರ ಸಹಾಯಕರು – ಕಂಪ್ಯೂಟರ್ ಜ್ಞಾನದ ಜೊತೆಗೆ ಟ್ಯಾಲಿ ಗೊತ್ತಿರ ಬೇಕು, ಲೆಕ್ಕ ಪತ್ರ ನಿರ್ವಹಿಸಿರುವ ಅನುಭವ ಇರಬೇಕು. * ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣಗಳಿಗೆ ತಾಂತ್ರಿಕ ನಿರ್ವಾಹಕರು – ಸಭಾಂಗಣಗಳ ಧ್ವನಿ ಮತ್ತು ಬೆಳಕಿನ ನಿರ್ವಹಣೆಯಲ್ಲಿ ಪರಿಣಿತಿಯನ್ನು ಪಡೆದಿರಬೇಕು. ಈ ಉದ್ಯೋಗವು ತಾತ್ಕಾಲಿಕವಾದದ್ದಾಗಿರುತ್ತದೆ. ಸಂಪೂರ್ಣವಾಗಿ ಕನ್ನಡವನ್ನು ಓದಲು – ಬರೆಯಲು ಮತ್ತು ಸಂವಹನ ನಡೆಸಲು…
ತುಮಕೂರು: ಲಾಲ್ ಕೃಷ್ಣ ಅಡ್ವಾಣಿ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಮುನ್ನವೇ ಕೇಂದ್ರ ಸಚಿವ ವಿ.ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಶೃದ್ಧಾಂಜಲಿ ಸಲ್ಲಿಸಿದ ಸೋಮಣ್ಣ ಬಹಿರಂಗ ಸಭೆಯಲ್ಲಿಯೇ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ದೆಹಲಿಗೆ ಹೊರಡುವ ಕಾರಣ ನೀಡಿ ಸಭೆ ಮೊಟಕುಗೊಳಿಸಿದ ಸೋಮಣ್ಣ ಇದೀಗ ತಾನೇ ಮಾಹಿತಿ ಬಂದಿದೆ, ಅಡ್ವಾಣಿಯವರು ಸಾವನ್ನಪ್ಪಿದ್ದಾರೆ ಎಂದರು. ನಾನು ದೆಹಲಿಗೆ ಹೋಗಬೇಕಿದೆ ಎಂದ ಸೋಮಣ್ಣ, ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವಂತೆ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಯೇ ಬಿಟ್ಟರು. ಸೋಮಣ್ಣಗೆ ಗುಬ್ಬಿಯ ಬಿಜೆಪಿ–ಜೆಡಿಎಸ್ ಮುಖಂಡರು ಸಾಥ್ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಅನೇಕ ದಿನಗಳಿಂದ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟದ ಬೆನ್ನಲ್ಲೆ ಜಿಲ್ಲೆಯ ಕುಣಿಗಲ್ ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಪರ ಪ್ರತಿಭಟನೆ ನಡೆದಿದೆ. ಕುಣಿಗಲ್ ತಾಲ್ಲೂಕು ಕಚೇರಿ ಬಳಿ ನೂರಾರು ರೈತರಿಂದ ಪ್ರತಿಭಟನೆ ನಡೆಸಲಾಗಿದ್ದು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸದಂತೆ ಒತ್ತಾಯಿಸಲಾಯಿತು. ನಮ್ಮ ಪಾಲಿನ ನೀರನ್ನ ನಮಗೆ ಕೊಡಿ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ರೈತರು. ಅಮೃತೂರು ಹಾಗೂ ಯಡಿಯೂರು ಹೋಬಳಿ ವ್ಯಾಪ್ತಿಯ ರೈತರಿಂದ ಪ್ರತಿಭಟನೆ ನಡೆಸಲಾಯಿತು. ಕೆಲ ದಿನಗಳಿಂದ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ಜಿಲ್ಲೆಯ ವಿವಿಧಡೆ ಹಲವು ಬಾರಿ ಹೋರಾಟ ಹಾಗೂ ತುಮಕೂರು ಜಿಲ್ಲೆಯನ್ನ ಬಂದ್ ಮಾಡಲಾಗಿತ್ತು. ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಸಮಿತಿಯಿಂದ ತುಮಕೂರು ಬಂದ್ ಗೆ ಕರೆ ಕೊಡಲಾಗಿತ್ತು. ಯಾವುದೇ ಕಾರಣಕ್ಕೂ ಹೇಮಾವತಿ ನೀರನ್ನ ಕೊಡಲ್ಲ ಎಂದು ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಬೆನ್ನಲ್ಲೆ ಕುಣಿಗಲ್ ಭಾಗದ ರೈತರಿಂದ ಇಂದು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕಾಮಗಾರಿ…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರಿವು ವಿದ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇ, ವಿಐಎ, ಸಿಇಟಿ/ ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಕ್ರಿಕಲ್ಚರ್ ಸೈನ್ಸ್, ವೆಟರಿನರಿ, ಫಾರ್ಮಾ ಸೈನ್ಸ್, ಎಲ್ಎಲ್ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ನಲ್ಲಿ ನಿಗಮದ ಜಾಲತಾಣ https://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 080-22114815ಗೆ ಮತ್ತು ಹೆಲ್ಪ್ಲೈನ್ ಸಂಖ್ಯೆ: 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…