Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಟೀಂ ಇಂಡಿಯಾ ತಂಡ ಕೋಟ್ಯಾಂತರ ಭಾರತೀಯರ ಕನಸನ್ನು ನನಸುಮಾಡುವ ಮೂಲಕ, ತನ್ನ ಕನಸಾದ ಐಸಿಸಿ ಟಿ20 ವಿಶ್ವಕಪ್ ಗೆಲ್ಲೋದನ್ನು ನನಸಾಗಿಸಿಕೊಂಡಿದೆ. ಹೌದು, ಬಾರ್ಬಡೊಸ್ ನ ಬ್ರಿಡ್ಜ್’ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ. ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಭರ್ಜರಿಯಾದ ಸ್ವಾಗತ ನೀಡಿದೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ತಂಡವು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಸಂಭ್ರಮವನ್ನು ಹಂಚಿಕೊಂಡಿದೆ. ಬಳಿಕ ಗೆಲುವಿನ ಪರೇಡ್ ಹಾಗೂ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಭೂತಪೂರ್ವ ಸಾಧನೆ ಗೈದ ಇಂಡಿಯಾದ ಆಟಗಾರರಿಗೆ BCCI 125 ಕೋಟಿಯ ಚೆಕ್ ಅನ್ನು ವಿತರಿಸಿದೆ. ಬಿಸಿಸಿಐ ತಾನು ಘೋಷಣೆ ಮಾಡಿದ್ದ 125 ಕೋಟಿ ರೂಪಾಯಿಯ ಬಹುಮಾನ ಮೊತ್ತದ ಚೆಕ್ಅನ್ನು ವಿಶ್ವಕಪ್ ವಿಜೇತ ತಂಡಕ್ಕೆ ಹಸ್ತಾಂತರ…
ಬೀದರ್: ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶಮಾ೯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಡಿಸಿ ಗೋವಿಂದ ರೆಡ್ಡಿ ಅವರನ್ನು ಬೀದರ ಜಿಲ್ಲೆಯಿಂದ ಗದಗ ಜಿಲ್ಲಾಧಿಕಾರಿ ಯನ್ನಾಗಿ ವಗಾ೯ವಣೆಗೊಳಿಸಿದೆ. ಬೀದರ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಶಿಲ್ಪಾ ಶರ್ಮಾ ಅವರು ಕನಾ೯ಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿದೇ೯ಶಕಿಯಾಗಿದ್ದರು. ಎರಡು ದಿನಗಳ ಹಿಂದೆ ಬೀದರ ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಪ್ರದೀಪ್ ಗುಂಟಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರನ್ನು ಎತ್ತಂಗಡಿ ಮಾಡಿದ್ದು ಅವರ ಜಾಗಕ್ಕೆ ಶಿಲ್ಪಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ವಾರದೊಳಗೆ ಡಿಸಿ. ಎಸ್ಪಿ ಇಬ್ಬರನ್ನು ವರ್ಗಾವಣೆಗೊಳಿಸಿ ಹೊಸಬರನ್ನು ನೇಮಕ ಮಾಡಿದಂತಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಯಚೂರು ನಗರದ ಕನ್ನಡ ಭವನದ ಆವರಣದಲ್ಲಿ ಕಾಲೇಜಿಗೆ ಚಕ್ಕರ್ ಹಾಕಿ ಬರುವ ಕೆಲವೊಂದಿಷ್ಟು ಜೋಡಿಗಳು ಪ್ರತಿನಿತ್ಯ ಹರಟೆ ಹೊಡೆದು, ರಸ್ತೆಯಲ್ಲಿ ಜನ ಸಂಚಾರ ಕಡಿಮೆಯಾಗುತ್ತಿದ್ದಂತೆ ರೋಮ್ಯಾನ್ಸ್ ಮಾಡುತ್ತಾ ಕಾಲ ಕಳೆಯುತ್ತಿರುವ ಆರೋಪ ಕೇಳಿ ಬಂದಿದೆ. ಹುಡುಗಿ ಕಂಪೌಂಡ್ ಮೇಲೆ ಕುಳಿತರೆ ಹುಡುಗ ಕೆಳಗಿನಿಂದ ಬಂದು ಆಕೆಯನ್ನು ತಬ್ಬಿ ಕೊಂಡು ಅಸಭ್ಯ ವರ್ತನೆ ತೋರಿದ ಘಟನೆ ನಡೆದಿದೆ. ಈ ದೃಶ್ಯ ನೋಡಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಗಳ ಈ ವರ್ತನೆ ಕುರಿತು ಜನರು ಅಸಹ್ಯ ಪಡುತ್ತಿದ್ದಾರೆ. ಇದು ನೈತಿಕತೆಯ ಪ್ರಶ್ನೆಯಾಗಿದೆ ಇವರ ಪೋಷಕರಿಗೆ ಮಾಹಿತಿ ಎಂದು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸರ್ಕಾರಕ್ಕೆ ಮನವರಿಕೆ ಆಗಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್ ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ…
2023–24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೆಪಿಎಸ್ ಸಿ ಕೆಎಎಸ್ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ವೇಳಾಪಟ್ಟಿ ಇಲ್ಲಿ ಚೆಕ್ ಮಾಡಿಕೊಳ್ಳಿ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಸೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ‘ಗ್ರೂಪ್ ಎ’ ಹುದ್ದೆಗಳು ಮತ್ತು 225 ‘ಗ್ರೂಪ್ ಬಿ’ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಮಾರ್ಚ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಪರೀಕ್ಷೆಗೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಆ.28ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಅವಧಿ: 25-08-2024ರ ಭಾನುವಾರ ಬೆಳಗ್ಗೆ 10ರಿಂದ 12 ಗಂಟೆವೆರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆವರೆಗೆ ಪತ್ರಿಕೆ-2ರ…
ಇತ್ತೀಚಿನ ಅಧ್ಯಯನವೊಂದು ನಮ್ಮ ಊಟದ ಸಮಯವು ಹೃದಯ ರಕ್ತನಾಳದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಸಿದೆ. ಅಧ್ಯಯನದಲ್ಲಿ ರಾತ್ರಿ 9 ಗಂಟೆಯ ನಂತರ ಊಟ ಮಾಡುವವರಿಗೆ ಸ್ಟ್ರೋಕ್ ಅಥವಾ ಪಾರ್ಶ್ವವಾಯು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. NCBI ಯ ಸಂಶೋಧನೆಯ ಪ್ರಕಾರ ರಾತ್ರಿ 9 ಗಂಟೆಯ ನಂತರ ಊಟ ಮಾಡುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಏಕೆಂದರೆ ನಿದ್ರೆ ಮತ್ತು ಊಟದ ನಡುವೆ 2 ಗಂಟೆಗಳ ಅಂತರವನ್ನು ಹೊಂದಿರುವುದು ಬಹಳ ಮುಖ್ಯ.ಜನರು ಆಹಾರವನ್ನು ಸೇವಿಸಿದ ತಕ್ಷಣ ಮಲಗಿದಾಗ, ಆಹಾರವು ಸರಿಯಾಗಿ ಜೀರ್ಣವಾಗದಿದ್ದಾಗ ದೇಹದ ಚಯಾಪಚಯವು ನಿಧಾನಗತಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ದೇಹವು ಅನೇಕ ರೋಗಗಳನ್ನು ಆಹ್ವಾನಿಸುತ್ತದೆ. ತಡರಾತ್ರಿಯಲ್ಲಿ ಆಹಾರವನ್ನು ತಿನ್ನುವ ಅಭ್ಯಾಸವು ಜೀರ್ಣಕಾರಿ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ರಾತ್ರಿ ಊಟದ ನಂತರ ಯಾವುದೇ ಚಟುವಟಿಕೆಯಿಲ್ಲ ಮತ್ತು ನೇರವಾಗಿ ಮಲಗಲು ಹೋಗುವುದರಿಂದ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಅಸಿಡಿಟಿ, ಹೊಟ್ಟೆ ಉಬ್ಬುವುದು ಇತ್ಯಾದಿ ಸಮಸ್ಯೆಗಳು…
ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ ಆದರೆ ಇಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಹೊಸ ಕೇಸ್ ಕೇಳಿಬಂದಿದೆ .ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆಗೆ ಶರಣಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎಂದು ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್ನ ಭಾಗಗಳನ್ನು ಸಂಗ್ರಹಿಸಲಾಗಿದೆ. ಮತ್ತು ಅದನ್ನು ವಿನ್ಯಾಸಗೊಳಿಸಿದ ಕಂಪನಿಯು ವಿಶ್ಲೇಷಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆತ್ಮಹತ್ಯೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಧಿಕಾರಿ. ಮುನ್ಸಿಪಾಲ್ ಕಾರ್ಪೊರೇಷನ್ ನ ಕೆಲಸದಲ್ಲಿ ರೋಬೋಟ್ ಸಹಾಯ ಮಾಡುತ್ತಿತ್ತು. ಕಳೆದ ಒಂದು ವರ್ಷದಿಂದ ಗುಮಿ ನಗರದ ನಿವಾಸಿಗಳಿಗೆ ಆಡಳಿತಾತ್ಮಕ ಕೆಲಸದಲ್ಲಿ ಬ್ಯುಸಿ ಆಗಿತ್ತು. ಕಳೆದ ವಾರ ಮೆಟ್ಟಿಲುಗಳ ಕೆಳಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರೋಬೋಟ್ ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳು ರೋಬೋಟ್ ಬೀಳುವ ಮೊದಲು ಓಡಾಡುತ್ತಿರೋದನ್ನು ನೋಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೆಲಸ ಮಾಡುತ್ತಿತ್ತು. ಯಾಕೆ ಹಾಗೆ ಮಾಡಿಕೊಂಡಿತು ಅನ್ನೋದ್ರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ರಸ್ತೆ ಸುರಕ್ಷತೆಯ ಫಲಕಗಳನ್ನು ಆಯ್ದ ತಿರುವುಗಳಲ್ಲಿ, ಹೈವೆಗಳಲ್ಲಿ, ಅಥವಾ ಹಲವು ಆಕ್ಸಿಡೆಂಟ್ ಆಗಿರುವ ಪ್ರದೇಶಗಳಲ್ಲಿ ಹಾಕುವುದನ್ನು ಕಾಣುತ್ತೇವೆ. ಅಪಘಾತ ವಲಯ, ಅವಸರವೇ ಅಪಘಾತಕ್ಕೆ, ನಿಧಾನವಾಗಿ ಚಲಿಸಿ, ಮುಂದೆ ತಿರುವು ಇದೆ ಇತ್ಯಾದಿ ಸೂಚನಾ ಫಲಕ ಅಳವಡಿಸಿರುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಸ್ವತ: ‘ಅರ್ಜೆಂಟ್ ಆಗಿ, ಒಂದು ಆಕ್ಸಿಡೆಂಟ್ ಮಾಡಿ ‘ ಎನ್ನುವ ನಾಮಫಲಕವನ್ನು ಹಾಕಲಾಗಿದೆ. ಈ ನಾಮಫಲಕದಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಮತ್ತು “Urgent Make An Accident” ಎಂದು ಬರೆಯಲಾಗಿದೆ. ಅರ್ಜೆಂಟ್ ಮೇಕ್ ಎನ್ ಆಕ್ಸಿಡೆಂಟ್ ಅಂದರೆ ಇಂಗ್ಲಿಷ್ ಮತ್ತು. ಕನ್ನಡ ಬಲ್ಲವರಿಗೆ ನಗು ಬರುತ್ತದೆ. ಅದರ ಅರ್ಥ ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂದಾಗುತ್ತದೆ ! ಅರ್ಜೆಂಟ್ ಅಪಘಾತಕ್ಕೆ ನಾಂದಿಯಾಗುತ್ತದೆ ಅನ್ನುವ ಬದಲು ಅರ್ಜೆಂಟಾಗಿ ಒಂದು ಆಕ್ಸಿಡೆಂಟ್ ಮಾಡಿ ಎನ್ನುವಂತೆ ಈ ಸೂಚನಾ ಫಲಕ ಬಿದ್ದಿದೆ. ಬಹುಶಃ ಕನ್ನಡದಿಂದ ಇಂಗ್ಲಿಷ್ ಗೆ ತಪ್ಪಾಗಿ ಅನುವಾದ ಮಾಡಿರುವುದರಿಂದ ಈ ಅವಾಂತರ ಉಂಟಾಗಿದೆ ಎನ್ನಲಾಗಿದೆ. ಮಡಿಕೇರಿಯ ಸಂಪಾಜೆ ಬಳಿ…
ಚಿಕ್ಕಬಳ್ಳಾಪುರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ ಬೆನ್ನಲ್ಲೇ ಇದೀಗ ರೈತರಿಗೂ ಶಾಕ್ ಎದುರಾಗಿದೆ. ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) ಆಡಳಿತ ಮಂಡಳಿಯು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್ ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್)ಗೆ ಸಂಗ್ರಹವಾಗುತ್ತಿರುವ ಹಾಲಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂದರೆ ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65…
ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮೊದಲ ಬಲಿಯಾಗಿದ್ದು, ಆರೋಗ್ಯಾಧಿಕಾರಿಯೇ ನಾಗೇಂದ್ರ (32) ನಿಧನರಗಿದ್ದಾರೆ ಎಂದು ವರದಿ ತಿಳಿಸಿದೆ. ನಾಗೇಂದ್ರ ಅವರು ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರು ಜಿಲ್ಲೆಯಲ್ಲಿ ಒಟ್ಟು 162 ಆಕ್ಟೀವ್ ಪ್ರಕರಣಗಳಿವೆ. ಇತ್ತ ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲೂ ಮಕ್ಕಳ ಸಂಖ್ಯೆಯೇ ಹೆಚ್ಚಿದೆ. ಹಿಮ್ಸ್ ನಲ್ಲಿ 48 ಮಕ್ಕಳು ಹಾಗೂ 22 ವಯಸ್ಕರು ಚಿಕಿತ್ಸೆಗೆ ದಾಖಲಾಗಿದ್ದಾರೆ. 48 ಮಕ್ಕಳ ಪೈಕಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA