Subscribe to Updates
Get the latest creative news from FooBar about art, design and business.
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
Author: admin
ಹೋಂವರ್ಕ್ ಮಾಡುವಾಗ ಮಂಚದಿಂದ ಕೆಳಗೆ ಬಿದ್ದ ಮಗುವಿನ ಕೈಯಲ್ಲಿದ್ದ ಪೆನ್ನಿನ ತುದಿ ಮಗುವಿನ ತಲೆಯೊಳಗೆ ಚುಚ್ಚಿದ್ದು, ಪರಿಣಾಮವಾಗಿ ಮಗು ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣದ ಭದ್ರಾಚಲಂ ನಗರದಲ್ಲಿ ನಡೆದಿದೆ. ಯುಕೆಜಿ ಓದುತ್ತಿರುವ ಈ ಪುಟ್ಟ ಕಂದಮ್ಮ ನಂತರ ಎಂದಿನಂತೆ ಹೋಂವರ್ಕ್ ಮುಗಿಸಲು ಮಂಚದ ಮೇಲೆ ಕೂತಿದೆ. ಈ ವೇಳೆ ಆಟವಾಡುತ್ತಾ ಹೋಂವರ್ಕ್ ಮಾಡುವಾಗ ಮಂಚದಿಂದ ಕೆಳಗೆ ಬಿದ್ದಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ನಡೆದ ಮಗುವನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಸರ್ಜರಿ ಮಾಡಿದರೂ ಮಗು ಬದುಕಿಳಿಯಲಿಲ್ಲ ಎನ್ನಲಾಗಿದೆ. ಮಗುವಿನ ಭವಿಷ್ಯ ಬೆಳಗಬೇಕಾಗಿದ್ದ ಪೆನ್ ಮಗುವಿನ ಜೀವ ತೆಗೆದಿರುವ ವಿಚಿತ್ರ ಘಟನೆ ಇದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನಿವೃತ್ತ ಶಿಕ್ಷಕ ದಂಪತಿಯ ಮನೆಯಲ್ಲಿ ಕಳ್ಳನೊಬ್ಬ ಕೈಗೆ ಸಿಕ್ಕ ಬೆಲೆಬಾಳುವ ವಸ್ತುಗಳು ಮತ್ತು ನಗದು ಸಮೇತ ಪರಾರಿಯಾಗಿದ್ದಾನೆ. ಆದರೆ ಅದರ ಜತೆಗೆ ಆತ ಅಲ್ಲಿ ಕ್ಷಮಾಪಣೆ ಪತ್ರವೊಂದನ್ನು ಸಹ ಇರಿಸಿ ಹೋದ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮೇಗ್ನಾನಪುರಂನ ಸಥಾಂಕುಲಂ ರಸ್ತೆಯಲ್ಲಿರುವ ಮನೆಯೊಂದರಲ್ಲಿ ನಡೆದಿದೆ. 79 ವರ್ಷದ ಚಿತಿರಾಯ್ ಸೆಲ್ವಿನ್ ಮತ್ತು ಅವರ ಪತ್ನಿ ಇಬ್ಬರೂ ನಿವೃತ್ತ ಶಿಕ್ಷಕರು. ಜೂನ್ 17ರಂದು ಮಗನನ್ನು ಭೇಟಿ ಮಾಡಲು ಅವರು ತೂತುಕುಡಿ ಜಿಲ್ಲೆಯಿಂದ ಸುಮಾರು 600 ಕಿಮೀ ದೂರದಲ್ಲಿರುವ ಚೆನ್ನೈಗೆ ತೆರಳಿದ್ದರು. ಮನೆಯಲ್ಲಿ ತಾವು ಇಲ್ಲದೆ ಇರುವಾಗ ಸ್ವಚ್ಛಗೊಳಿಸುವ ಹೊಣೆಯನ್ನು ಕೆಲಸದಾಕೆ ಸೆಲ್ವಿಗೆ ವಹಿಸಿದ್ದರು. ಜೂನ್ 26ರಂದು ಎಂದಿನಂತೆ ಸೆಲ್ವಿ ಮನೆ ಕ್ಲೀನ್ ಮಾಡಲು ಮನೆಗೆ ಬಂದಾಗ ಮುಖ್ಯ ಬಾಗಿಲು ತೆರೆದಿರುವುದನ್ನು ಕಂಡು ಹೆದರಿದ್ದಾಳೆ. ಕೂಡಲೇ ಆಕೆ ಚಿತಿರಾಯ್ ಸೆಲ್ವಿನ್ ಅವರಿಗೆ ಕರೆ ಮಾಡಿ ಕಳ್ಳತನದ ವಿಚಾರ ತಿಳಿಸಿದ್ದಾಳೆ. ಚೆನ್ನೈನಲ್ಲಿದ್ದ ಸೆಲ್ವಿನ್ ದಂಪತಿ, ತರಾತುರಿಯಲ್ಲಿ ಊರಿಗೆ ಮರಳಿದ್ದರು. ಅವರು ಪರಿಶೀಲನೆ ನಡೆಸಿದಾಗ 60 ಸಾವಿರ…
ತುಮಕೂರು: ಪ್ರಪಂಚದಲ್ಲಿಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತುರಾಜಕೀಯವಾಗಿಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದುಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳು ಗುರುವಾರ ಆಯೋಜಿಸಿದ್ದ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅನ್ಯಾಯಕ್ಕೆ ಒಳಪಟ್ಟ ನಿಕೃಷ್ಟ ವರ್ಗಗಳಿಗೆ ಸಮಾನತೆ ಸಿಗಬೇಕು, ಸರ್ವರಿಗೂ ಸಮಾನವಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂಬ ದೃಷ್ಟಿಯಿಂದ ಸಂವಿಧಾನರಚನೆಯಾಗಿದೆ. ಭಾರತದ ಸಂವಿಧಾನಕ್ಕೆ ಬಡವ ಮತ್ತು ಶ್ರೀಮಂತನೆಂಬ ಭೇದವಿಲ್ಲ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಅಧಿಕಾರದಲ್ಲಿರುವ ವ್ಯಕ್ತಿತನ್ನ ಕೆಲಸದ ಮೂಲಕ ಮಾತನಾಡಬೇಕು ಎಂಬ ಸೂಕ್ಷ್ಮವನ್ನು ಡಾ. ಬಿ. ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ತಿಳಿಸುತ್ತದೆ. ಸಂವಿಧಾನದ ಪೂರ್ವ ಪೀಠಿಕೆಯು ಸಂವಿಧಾನದ ಮೂಲ ಆಶಯವನ್ನು ತಿಳಿಸುತ್ತದೆ ಎಂದರು. ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಮಾತನಾಡಿ, ವೈವಿಧ್ಯತೆ ತುಂಬಿರುವ, ವಿಭಿನ್ನಜನಾಂಗ, ಧರ್ಮವಿರುವ ರಾಷ್ಟ್ರದಲ್ಲಿ ಎಲ್ಲರೂ…
ತುಮಕೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಮನೆ–ಮನೆಗೂ ಭೇಟಿ ನೀಡಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ಅವರಿಗೆ ಸೂಚನೆ ನೀಡಿದರು. ಬೆಂಗಳೂರಿನ ವಿಕಾಸಸೌಧದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿ/ ಸಿಬ್ಬಂದಿ, ಆಶಾ/ ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಗುಂಪು, ಸ್ವಯಂ ಸೇವಾ ಸಂಘಗಳನ್ನು ತೊಡಗಿಸಿಕೊಂಡು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಡೆಂಗ್ಯೂ ರೋಗ ಲಕ್ಷಣ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಬೇಕೆಂದು ನಿರ್ದೇಶನ ನೀಡಿದರು. ಡೆಂಗ್ಯೂ ರೋಗದ ಪ್ರಕರಣಗಳ ಸಂಖ್ಯೆ ಆಗಸ್ಟ್–ಸೆಪ್ಟೆಂಬರ್ ಮಾಹೆಯಲ್ಲಿ ಹೆಚ್ಚಾಗುವ…
ಮಳೆಗಾಲದಲ್ಲಿ ಪ್ರಕೃತಿ ಹಾಗೂ ಜಲಧಾರೆ ತಾಣಗಳ ಸೊಬಗು ನೋಡೋದೆ ಚೆಂದ. ಆದರೆ, ಕಳೆದೊಂದು ವಾರದಿಂದ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಜಲಪಾತಗಳ ತವರೂರು ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಕರ್ನಾಟಕದ ಪ್ರಸಿದ್ಧವಾದ ಯಲ್ಲಾಪುರ ತಾಲೂಕಿನ ಸಾತೋಡ್ಡಿ ಜಲಪಾತ ವೀಕ್ಷಣೆಗೆ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಒಂದಷ್ಟು ಅವಘಡಗಳು ಸಂಭವಿಸುತ್ತಿವೆ. ಈ ನೀರಿನ ಝಳ ಜಾಸ್ತಿ ಇರುವಾಗ ಮತ್ತು ಅವಘಡಗಳಿಗೆ ಕಾರಣವಾಗುತ್ತದೆ. ಪ್ರವಾಸಿಗರು ನೀರಿಗಿಳಿದು ಅಪಾಯವನ್ನು ತಂದುಲೊಳ್ಳುತ್ತಾರೆನ್ನುವ ಕಾರಣಕ್ಕೆ ನಿಷೇಧ ಹೇರಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವರ್ಷದ ಅಮೆಜಾನ್ ಪ್ರೈಮ್ ಡೇ ಸೇಲ್ಸ್ (Amazon Prime Day Sale) ಜುಲೈ 20 ಮತ್ತು ಜುಲೈ 21ರಂದು ನಡೆಯಲಿದೆ. ಬಿಗ್ ಸೇಲ್ ಆಫರ್ ಜುಲೈ 20ರ ಮಧ್ಯರಾತ್ರಿ 12 ಗಂಟೆಯಿಂದಲೇ ಆರಂಭವಾಗಲಿದೆ. ಈ ಬಾರಿ ಪ್ರೈಮ್ ಡೇ ಸೇಲ್ನಲ್ಲಿ ಹಲವು ರಿಯಾಯ್ತಿ ಲಭ್ಯವಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಪೀಠೋಪಕರಣ, ಬಟ್ಟೆ ಸೇರಿದಂತೆ ಎಲ್ಲಾ ವಿಧದ ವಸ್ತುಗಳ ಮೇಲೆ ದೊಡ್ಡಮಟ್ಟದ ರಿಯಾಯ್ತಿ, ಇಎಂಐ ಸೌಲಭ್ಯ ಹಾಗೂ ಆಕರ್ಷಕ ಕೊಡುಗೆಗಳು ಗ್ರಾಹಕರಿಗೆ ಸಿಗಲಿವೆ ಎಂದು ಅಮೆಜಾನ್ ಹೇಳಿಕೊಂಡಿದೆ. Amazon ICICI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸ್ವಾಗತ ಬಹುಮಾನವಾಗಿ ರೂ.2500 ಸಿಗುತ್ತದೆ. ಪ್ರೈಮ್ ಗ್ರಾಹಕರು 300 ರೂಪಾಯಿ ಕ್ಯಾಶ್ಬ್ಯಾಕ್ ಮತ್ತು 2,200 ರೂಪಾಯಿ ಮೌಲ್ಯದ ಬಹುಮಾನಗಳನ್ನು ಪಡೆಯಬಹುದು. ಇದರ ಜೊತೆಗೆ 30 ದಿನದ ಮೆಂಬರ್ಶಿಪ್ ತೆಗೆದುಕೊಳ್ಳುವ ಗ್ರಾಹಕರಿಗೆ ಕೊಡುಗೆಗಳು ಸಿಗುವ ಸಾಧ್ಯತೆಗಳಿರುತ್ತವೆ. Intel, Samsung, OnePlus, Iqoo, Honor, Sony, Asus ನಂತಹ ಭಾರತೀಯ ಮತ್ತು ವಿದೇಶಿ ಬ್ರ್ಯಾಂಡ್ಗಳು ಸೇರಿದಂತೆ 450 ಕ್ಕೂ ಹೆಚ್ಚು ಬ್ರಾಂಡ್…
2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ.5ರ ರಿಯಾಯಿತಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ.5% ರಿಯಾಯಿತಿಯನ್ನು ದಿ:31-07-2024 ರವರೆಗೆ ವಿಸ್ತರಿಸಲು ಪೌರಾಡಳಿತ ನಿರ್ದೇಶನಾಲಯ ಸರ್ಕಾರಕ್ಕೆ ಪ್ರಸ್ತಾಪಿಸಿದೆ. ಈಗಾಗಲೇ ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ, ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ: 31.07.2024ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಪ್ರಸ್ತಾವನೆಗಳಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ…
ಶ್ರೀದೇವಿ ಭೈರಪ್ಪ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಯುವ ರಾಜ್ಕುಮಾರ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಯುವ ರಾಜ್ಕುಮಾರ್ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಫ್ಯಾಮಿಲಿ ಕೋರ್ಟ್ನಲ್ಲಿ ನಡೆಯಲಿದೆ. ಹೀಗಿರುವಾಗಲೇ, ಸೋಷಿಯಲ್ ಮೀಡಿಯಾದಲ್ಲಿ ಶ್ರೀದೇವಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ. ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು…
ತುರುವೇಕೆರೆ : ಎಂ.ಗುರುಮೂರ್ತಿ ಸಾರಥ್ಯದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪ್ರೊಫೆಸರ್ ಬಿ.ಕೃಷ್ಣಪ್ಪನವರಿಂದ ಸ್ಥಾಪನೆಯಾಗಿ ದಲಿತ ಚಳುವಳಿಗಳನ್ನ ಮಾಡಿ 50 ವಸಂತಗಳನ್ನು ತುಂಬಿದ ನೆನಪಿಗಾಗಿ ಸಂಭ್ರಮಾಚರಣೆಯನ್ನು ಆಚರಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುರುವೇಕೆರೆ ತಾಲೂಕು ಸಂಚಾಲಕ ದಂಡಿನಶಿವರ ಕುಮಾರ್ ರವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು. ಜುಲೈ 10 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಐವತ್ತು ವರ್ಷಗಳ ಸಂಭ್ರಮೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಂಪುಟ ದರ್ಜೆಯ ಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕರು 10 ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳ ಹಾಗೂ ಸಂಪುಟ ದರ್ಜೆಯ ಸಚಿವರಗಳ ಬಳಿ ಮಂಡಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುರುವೇಕೆರೆ ತಾಲೂಕಿನಿಂದ ಸುಮಾರು ನೂರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನಾ ಸಂಚಾಲಕ ಮಲ್ಲೂರು ತಿಮ್ಮೇಶ್, ಖಜಾಂಚಿ ಆನೆಕೆರೆ ಶಿವನಂಜಪ್ಪ,…
ತುರುವೇಕೆರೆ : ತಾಲೂಕಿನ ಮಾಯಸಂದ್ರ ಟಿ ಬಿ ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್( ರಿ ) ನ SBG ಪ್ರಥಮ ದರ್ಜೆ ಕಾಲೇಜಿನಲ್ಲಿ ಜುಲೈ 2ರಂದು SBG ಕ್ರೀಡಾಂಗಣದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಕ್ರೀಡಾಕೂಟವು ಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ರವರು ಪ್ರಧಾನ ಕಾರ್ಯದರ್ಶಿಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ತುಮಕೂರು ವಿಶ್ವವಿದ್ಯಾನಿಲಯದ ಕುಲ ಸಚಿವರು(ಪರೀಕ್ಷಾಂಗ) ಪ್ರಸನ್ನ ಕುಮಾರ್, ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರು ಡಾ.ಮಂಜುನಾಥ್, ಪ್ರೊ, ಪುಟ್ಟರಂಗಪ್ಪ , ಮಂಡ್ಯ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ MN ಪರಮಶಿವಯ್ಯ ಕ್ರೀಡಾಪಟುಗಳಿಗೆ ಶುಭ ಕೋರಿದರು . ಈ ಕ್ರೀಡಾಕೂಟದಲ್ಲಿSBG ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟುಗಳು ಪ್ರಥಮ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜಯಶಾಲಿ ಕ್ರೀಡಾಪಟುಗಳಿಗೆ ಬ್ರಹ್ಮಚಾರಿ ಶ್ರೀ ರಾಜಶೇಖರನಾಥ ಜಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು AB ಚಂದ್ರಶೇಖರ್, ಉಪ ಪ್ರಾಂಶುಪಾಲರು ಸೈಯದ್,…