Subscribe to Updates
Get the latest creative news from FooBar about art, design and business.
- ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗೆ ಒತ್ತಾಯ
- ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
Author: admin
ದಿವಂಗತ ನಟ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಿಂದಾಗಿ ಇದುವರೆಗೆ ಹತ್ತು ಮಂದಿಯ ಪ್ರಾಣ ಉಳಿದಿದೆ.. ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ 45 ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿ ಮಾಡಲಾಗಿದ್ದು, ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಜೀವ ರಕ್ಷಕವಾಗಿರುವ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಈಗ ಲಭ್ಯವಿದ್ದು, ಗೋಲ್ಡನ್ ಅವರ್ ನಲ್ಲಿ 10 ಜನರಿಗೆ ಈ ಚುಚ್ಚು ಮದ್ದು ನೀಡಿ ವೈದ್ಯರು ಜೀವ ಉಳಿಸಿದ್ದಾರೆ. 71 ತಾಲೂಕು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 86 ಸರಕಾರಿ ಆಸ್ಪತ್ರೆಗಳನ್ನು ಈ ಯೋಜನೆಯಲ್ಲಿ ಸ್ಪೋಕ್ ಕೇಂದ್ರಗಳನ್ನಾಗಿ ಮಾಡಲಾಗಿದೆ.. ಇನ್ನು ಜಯದೇವ ಹಾಗೂ ಇತರ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಕೇಂದ್ರಗಳನ್ನಾಗಿ ಮಾಡಲಾಗಿದೆ. ಈ ಆಸ್ಪತ್ರೆಗಳಿಗೆ ಹೃದಯಾಘಾತವಾದ ತಕ್ಷಣ ಕರೆದುಕೊಂಡು ಬಂದರೆ, 6 ನಿಮಿಷದೊಳಗೆ ಎಐ ತಂತ್ರಜ್ಞಾನದ ಮೂಲಕ ರೋಗಿಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ.. ತೀವ್ರ ಹೃದಯಾಘಾತವಾಗುವ ಮೂನ್ಸೂಚನೆ ದೊರೆತರೆ ಅವರಿಗೆ ಈ ಚಿಕಿತ್ಸೆ ನೀಡಲಾಗುತ್ತದೆ.. ಈ ಟೆನೆಕ್ಟೆಪ್ಲೇಸ್ ಚುಚ್ಚುಮದ್ದಿನ ಬೆಲೆ 25 ಸಾವಿರ ರೂಪಾಯಿ ಆಗಿದ್ದು,…
ವೈರಸ್ ಸಾಮಾನ್ಯಕ್ಕಿಂತ ಹೆಚ್ಚಿನ ದೇಹದ ಉಷ್ಣತೆಯನ್ನು ಉಂಟುಮಾಡುತ್ತದೆ, ಇದನ್ನು ವೈರಲ್ ಜ್ವರ ಎಂದು ಕರೆಯಲಾಗುತ್ತದೆ. ವೈರಲ್ ಸೋಂಕು ಉಂಟಾದಾಗ ನಮ್ಮ ದೇಹಕ್ಕೆ ಅದರ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದಾಗ ಜ್ವರ ಹೆಚ್ಚಾಗುತ್ತದೆ. ಕಣ್ಣುಗಳಲ್ಲಿ ಉರಿ, ತಲೆನೋವು, ಹೆಚ್ಚಿನ ಜ್ವರ, ದೇಹ ನೋವು ಮತ್ತು ಕೆಲವೊಮ್ಮೆ ವಾಕರಿಕೆ ಮತ್ತು ವಾಂತಿ ವೈರಲ್ ಫೀವರ್ ನಿಂದ ಉಂಟಾಗುತ್ತದೆ. ಆಹಾರ ಮತ್ತು ಪಾನೀಯಗಳು ಮಾರಣಾಂತಿಕ ವೈರಸ್ಗಳಿಂದ ಕಲುಷಿತವಾಗಬಹುದು. ಕಲುಷಿತ ಆಹಾರವನ್ನು ಸೇವಿಸುವುದರಿಂದ ನೊರೊವೈರಸ್ ಮತ್ತು ಎಂಟ್ರೊವೈರಸ್ನಂತಹ ವೈರಲ್ ಸೋಂಕುಗಳಿಗೆ ಕಾರಣವಾಗಬಹುದು. ಸೋಂಕಿತ ವ್ಯಕ್ತಿಯು ಸೀನುವಿಕೆ , ಉಸಿರಾಟ ಮತ್ತು ಮೇಲ್ಮೈಗಳನ್ನು ಸ್ಪರ್ಶಿಸುವ ಮೂಲಕ ವೈರಲ್ ಸೋಂಕನ್ನು ಹರಡಬಹುದು . ಮಕ್ಕಳು ಮತ್ತು ಹಿರಿಯರಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ವೈರಲ್ ಜ್ವರ ಸಾಮಾನ್ಯವಾಗಿದೆ. ಸಾಮಾನ್ಯವಾಗಿ ವೈರಲ್ ಜ್ವರ 3–4 ದಿನದಲ್ಲಿ ಕಡಿಮೆಯಾಗುವುದು, ಆದರೆ ಡೆಂಗ್ಯೂ ನಂತಹ ಕೆಲವೊಂದು ವೈರಲ್ ಸೋಂಕು ಉಂಟಾದರೆ ತುಂಬಾ ದಿನ ಜ್ವರ ಇರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಇಸ್ಪೀಟ್ ಆಡುವಾಗ ಪೊಲೀಸರು ಎಂಟ್ರಿ ಕೊಟ್ಟಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ಈ ವೇಳೆ ತೆಪ್ಪ ಮಗುಚಿ ಇಬ್ಬರು ಸಾವನ್ನಪ್ಪಿರುವ ಘಟನೆ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ಪೊಲೀಸರು ಇಸ್ಪೀಡ್ ಆಡುತ್ತಿದ್ದವರನ್ನು ಹಿಡಿಯಲು ಬಂದಿದ್ದರು. ಇದನ್ನು ತಿಳಿಯುತ್ತಲೇ ಎಂಟು ಮಂದಿ ಇಸ್ಪೀಟ್ ಆಟಗಾರರು ತೆಪ್ಪದಲ್ಲಿ ಕೃಷ್ಣಾ ನದಿ ದಾಟಲು ಹೋಗಿದ್ದಾರೆ. ಆತುರದಲ್ಲಿ ತೆಪ್ಪ ನಡೆಸುವಾಗ ಅದು ಮಗುಚಿಬಿದ್ದಿದೆ. ಈ ವೇಳೆ ನಾಲ್ಕು ಜನರು ನೀರಿನಲ್ಲಿ ಸಿಲುಕಿದ್ದರು. ಅವರನ್ನು ಮೀನುಗಾರರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಮೃತಪಟ್ಟವರಾಗಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ನಾಲ್ಕು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ ನಡೆಯಲಿರುವ ನೀಟ್ –ಪಿಜಿ ಪರೀಕ್ಷೆ ಜುಲೈ ತಿಂಗಳಲ್ಲಿ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುನ್ನ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈಗಾಗಲೇ ಜೂನ್ 23 ಕ್ಕೆ ನಿಗದಿಯಾಗಿದ್ದ NEET-PG ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರಿಂದ ಹಲವು ರೀತಿಯ ಪ್ರತಿಭಟನೆ ನಡೆದಿದ್ದು, ನಂತರ ನೀಟ್–ಪಿಜಿ ಪರೀಕ್ಷೆಯ ದಿಢೀರ್ ರದ್ದು ಮಾಡಿದ್ದರಿಂದ ತೊಂದರೆಯಾಗಿರುವ ಬಗ್ಗೆ, ವಿದ್ಯಾರ್ಥಿಗಳ ಹಿತರಕ್ಷಣೆಯ ದೃಷ್ಟಿಯಿಂದಲೇ ಪರೀಕ್ಷೆ ರದ್ದು ಮಾಡಲಾಗಿತ್ತು ಎಂದು ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು. ಇದೀಗ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ NEET-PG ಪರೀಕ್ಷೆಯು ಜುಲೈ ತಿಂಗಳಲ್ಲಿ ನಡೆಯಲಿದೆ ಎಂದು ಗೃಹ ಸಚಿವಾಲಯವು ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮ ಮೂಲಗಳಿಗೆ ತಿಳಿಸಿವೆ. ಕಳೆದ ತಿಂಗಳ ನೀಟ್-ಪಿಜಿ ಪರೀಕ್ಷೆಯ ದಿಢೀರ್…
18ನೇ ಲೋಕಸಭೆಯ ಮೊದಲ ಅಧಿವೇಶನ ಭಾರೀ ಕಾವೇರಿದೆ. ಹಲವು ಮಹತ್ವದ ಚರ್ಚೆಗಳು ಚರ್ಚಿತವಾಗುವ ಜೊತೆಗೆ ಕೋಲಾಹಲ, ಗದ್ದಲಗಳಿಗೂ ಸಾಕ್ಷಿಯಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ರೊಚ್ಚಿಗೆದ್ದಿದ್ದು, ಪ್ರತಿಭಟನೆ ನಡೆಸುತ್ತಿವೆ. ಹೀಗೆ ವಿಪಕ್ಷಗಳು ಸಂಸತ್ತಿನೊಳಗೆ ಪ್ರತಿಭಟಿಸುವಾಗ ಅಪರೂಪದ ಪ್ರಸಂಗವೊಂದು ನಡೆದಿದೆ. ನರೇಂದ್ರ ಮೋದಿ ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡುವಾಗ ವಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ನರೇಂದ್ರ ಮೋದಿಯವರು ತಮ್ಮ ಮುಂದೆಯೇ ನಿಂತು ತನ್ನ ವಿರುದ್ಧ ಕಿರುಚಿ ಕಿರುಚಿ ಪ್ರತಿಭಟಿಸುತ್ತಿದ್ದ ಸಂಸದರಿಗೆ ಕುಡಿಯಲು ನೀರು ನೀಡಿದಂತ ಘಟನೆ ನಡೆದಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದ ವೇಳೆ ಸದನದ ಬಾವಿಗಿಳಿದು ಕಿರುಚಿ ಬೊಬ್ಬೆ ಹೊಡೆದು ತಮ್ಮ ವಿರುದ್ಧವೇ ಪ್ರತಿಭಟನೆ ಮಾಡುತ್ತಿದ್ದ ವಿಪಕ್ಷಗಳ ನಾಯಕರಿಗೆ ಮೋದಿ ಕುಡಿಯಲು ನೀರು ನೀಡಿದರು. ಒಬ್ಬರು ನೀರು ನಿರಾಕರಿಸಿದರೆ, ಮತ್ತೊಬ್ಬರು ನೀರು ಕುಡಿದು ದಾಹ ತೀರಿಸಿಕೊಂಡರು. ನಮ್ಮತುಮಕೂರಿನ ಕ್ಷಣ…
ಕೋಲಾರ: SSLC ಮುಗಿಸಿ ಪ್ರಥಮ ಪಿಯುಸಿ(1st PUC) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಶೌಚಾಲಯಕ್ಕೆಂದು ಹೋಗಿದ್ದಾಳೆ. ಈ ವೇಳೆ ಆಕೆ ಶೌಚಾಲಯದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗದ ದುರಂತ ಇಡೀ ದೇಶವನ್ನನೇ ಬೆಚ್ಚಿಬೀಳಿಸಿದೆ. ಸಾಗರೋಪಾದಿಯಲ್ಲಿ ನೆರೆದಿದ್ದ ಜನರ ನಡುವೆ ಬರೀ ಕಾಲ್ತುಳಿತಕ್ಕೆ 100ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಸತ್ಸಂಗ ಎಂಬುದು ಬೋಲೆ ಬಾಬ ಅವರು ನೀಡುವ ಧರ್ಮೋಪದೇಶ ಕಾರ್ಯಕ್ರಮ. ಆರಂಭದಲ್ಲಿ ಈ ಸತ್ಸಂಗದಲ್ಲಿ ಕೇವಲ 50 ಮಂದಿಗೆ ಮಾತ್ರ ಅನುಮತಿ ಕೋರಿದ್ದರು. ಆದರೆ, ಬರ ಬರುತ್ತಾ ಈ ಬಾಬನ ಸತ್ಸಂಗಕ್ಕೆ 50 ಸಾವಿರಕ್ಕೂ ಹೆಚ್ಚು ಜನ ಸೇರುತ್ತಿದ್ದರು. ಬಾಬಾ ಮೂಲತಃ ಕಾಸ್ ಗಂಜ್ ಜಿಲ್ಲೆಯ ಪಟಿಯಾಲಿಯ ಬಹದ್ದೂರ್ನಗರದವರು, ಅವರ ಹೆಸರು ಸಕರ್ ವಿಶ್ವ ಹರಿ. ಇವರು ಬಾಬಾ ಆಗುವುದಕ್ಕೂ ಮೊದಲು ಪೊಲೀಸ್ ಗುಪ್ತಚರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ, ಅವರು ಕೆಲಸವನ್ನು ತೊರೆದು ಕಥೆಗಾರರಾಗುವ ಮೂಲಕ ಭಕ್ತರ ಸೇವೆ ಪ್ರಾರಂಭಿಸಿದರು. ಕರೋನಾ ಸಮಯದಲ್ಲಿ, ಭೋಲೆ ಬಾಬಾ ಅವರ ಸತ್ಸಂಗ ಕಾರ್ಯಕ್ರಮವು ವಿವಾದಕ್ಕೆ ಒಳಗಾಗಿತ್ತು. ಆಗ ಅವರು ತಮ್ಮ ಸತ್ಸಂಗದಲ್ಲಿ ಕೇವಲ 50 ಮಂದಿಗೆ ಮಾತ್ರ ಅನುಮತಿ ಕೋರಿದ್ದರು. ಆದರೆ, ಬರ ಬರುತ್ತಾ…
ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಬಿಜೆಪಿ ವಿಫಲವಾದ ಬೆನ್ನಲ್ಲೇ ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಲಂಡನ್ ನಲ್ಲಿ ಫೆಲೋಶಿಪ್ ದೊರೆತಿದ್ದು, ಅವರು ಸದ್ಯದಲ್ಲೇ ಬ್ರಿಟನ್ ಗೆ ತೆರಳಲಿದ್ದಾರೆ. ಚೆವೆನಿಂಗ್ ಗುರುಕುಲ್ ಫೆಲೋಶಿಪ್ ಫಾರ್ ಲೀಡರ್ ಶಿಪ್ ಆ್ಯಂಡ್ ಎಕ್ಸಲೆನ್ಸ್’ ಕಾರ್ಯಕ್ರಮಕ್ಕೆ ಅವರು ಆಯ್ಕೆಯಾಗಿದ್ದು, ಮೂರು ತಿಂಗಳು ಲಂಡನ್ ನಲ್ಲೇ ನೆಲೆಸಲಿದ್ದಾರೆ. ಈ ಕುರಿತು ಬಿಜೆಪಿ ಹೈಕಮಾಂಡ್ ಜತೆಯೂ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ನಗರದ ಪ್ರತಿಷ್ಠಿತ ʼ ಪ್ರೆಸ್ ಕ್ಲಬ್ ಆಫ್ ಬೆಂಗಳೂರುʼ ಚುನಾವಣೆ ದಿನಾಂಕ ಪ್ರಕಟಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಂತಿಮವಾಗಿ ಮೂವರು ಪತ್ರಕರ್ತರು ಕಣದಲ್ಲಿದ್ದಾರೆ. ಸುದೀರ್ಘ ಇತಿಹಾಸ ಹೊಂದಿರುವ, ಬೆಂಗಳೂರು ಕಬ್ಬನ್ ಪಾರ್ಕ್ ಆವರಣದಲ್ಲಿರುವ ʼಪ್ರೆಸ್ ಕ್ಲಬ್ ʼ ಗೆ ಈಗ ಚುನಾವಣೆ ಬಿಸಿ. ಸದಾ ರಾಜಕಾರಣಿಗಳ ಚಲನವಲನ, ರಾಜಕೀಯ ತಂತ್ರಗಾರಿಕೆ ಬಗ್ಗೆ ವರದಿ ಮಾಡುತ್ತಿದ್ದ ಪತ್ರಕರ್ತರಿಗೆ ಈಗ ಖುದ್ದು ಚುನಾವಣೆ ಎದುರಿಸುವ ಸಮಯ. ಇದೇ ಜುಲೈ7 ರ ಭಾನುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ಸಂಘದ ಆವರಣದಲ್ಲಿ ಚುನಾವಣೆ ನಡೆಯಲಿದೆ. ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಮೂವರು ಪತ್ರಕರ್ತರ ನಡುವೆ ಪೈಪೋಟಿ. ಧ್ಯಾನ್ ಪೂಣಚ್ಚ, ಆರ್. ಶ್ರೀಧರ ಹಾಗೂ ಸುಭಾಷ್ ಹೂಗಾರ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು ಅಂತಿಮವಾಗಿ ಕಣದಲ್ಲಿ ಸ್ಪರ್ಧಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೊಡ್ಡ ಬೊಮ್ಮಯ್ಯ, ಟಿ. ಮಂಜುನಾಥ್ , ಎಂ.ಡಿ ಶಿವಕುಮಾರ್ ಬೆಳ್ಳಿತಟ್ಟೆ, ಹಾಗೂ ವೈ.ಎಸ್.ಎಲ್. ಸ್ವಾಮಿ ನಡುವೆ ಪೈಪೋಟಿ. ಉಪಾಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಹೀರೇಮಠ್, ಬಿ.ಎನ್.ಮೋಹನ್…
ದರ್ಶನ್ ಗೆ ನೀಡಲಾಗಿರುವ ಕೈದಿ ನಂಬರ್ 6106 ಅನ್ನು ಇತ್ತೀಚೆಗೆ ವಾಹನಗಳಲ್ಲಿ ಸ್ಟಿಕ್ಕರ್ ಮಾಡಿಸಿ ಹಾಕಿಕೊಂಡು ಅದು ಟ್ರೆಂಡ್ ಆಗಿತ್ತು ಮತ್ತು ಪೊಲೀಸರು ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದರು. ಈಗ ಏನೂ ಅರಿಯದ ಮುಗ್ಧ ಮಗುವೊಂದಕ್ಕೆ ಅಪರಾಧಿಯಂತೆ ಬಿಳಿ ಡ್ರೆಸ್ ಹಾಕಿಸಿ, ಅದರ ಮೇಲೆ ಕೈದಿ ನಂ.6106 ಎಂದು ಬರೆಯಲಾಗಿದೆ. ಇತ್ತೀಚೆಗೆ ದರ್ಶನ್ ತಾಯಿ ಪರಪ್ಪನ ಅಗ್ರಹಾರಕ್ಕೆ ಬಂದು ಮಗನನ್ನು ಭೇಟಿಯಾಗಿದ್ದರು, ಇದರ ಜೊತೆಗೆ ಜೈಲು ಸೇರಿದಾಗಿನಿಂದ ವಿಕಲಚೇತನರೂ ಸೇರಿದಂತೆ ಹಲವು ಅಭಿಮಾನಿಗಳು ದರ್ಶನ್ ನನ್ನು ನೋಡಲು ಜೈಲಿಗೆ ಬರುತ್ತಿದ್ದು, ಅನುಮತಿ ಸಿಗದೆ ನಿರಾಶರಾಗುತ್ತಿದ್ದಾರೆ. ಇದರ ಜೊತೆಗೆ ಅತಿಯಾದ ಅಭಿಮಾನದಿಂದ ಅತಿರೇಕದ ಕೆಲಸಗಳನ್ನು ಮಾಡುತ್ತಾ ದರ್ಶನ್ ಫ್ಯಾನ್ಸ್ ಮತ್ತೆ ಸುದ್ದಿಯಾಗುತ್ತಿದ್ದಾರೆ. Brand of sandalhood dboss fans Mysore’ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮೂಲಕ ಕೈದಿ ಸಂಖ್ಯೆಯ ಬಟ್ಟೆ ಹಾಕಿರುವ ಮಗುವಿನ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಕೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ ಗೆ ನೀಡಿರೋ…