Subscribe to Updates
Get the latest creative news from FooBar about art, design and business.
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
Author: admin
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ವಿವಿಧ ಸಮುದಾಯಗಳ ಸ್ವಾಮೀಜಿಗಳು ತಮ್ಮ ಸಮುದಾಯ ನಾಯಕರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ನಡುವೆಯೇ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರೂ ರಾಜಕೀಯ ವಿಚಾರಕ್ಕೆ ಎಂಟ್ರಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾಮೀಜಿಗಳು ರಾಜಕೀಯ ಮಾಡುವುದಾದರೆ, ಆ ಸ್ವಾಮೀಜಿ ಪಟ್ಟಕ್ಕೂ ಚುನಾವಣೆ ನಡೆಸುವುದು ಒಳಿತಲ್ಲವೇ ಎಂದು ಪ್ರಶ್ನಿಸಿದ್ದಾರೆ. ಗುರು ಕಿರಣ್ ಅವರ ಪೋಸ್ಟ್ ಗೆ ಕೆಲವರು ನಿಮ್ಮ ಪ್ರಶ್ನೆ ಸರಿಯಾಗಿದೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನು ಸ್ವಾಮೀಜಿಗಳು ಗೋಡಂಬಿ ದ್ರಾಕ್ಷಿ ತಿಂದುಕೊಂಡು ಆರಾಮವಾಗಿರಲಿ. ರಾಜಕಾರಣ ವಿಚಾರ ಅವರಿಗೇಕೆ ಎಂದು ಕಮೆಂಟಿಸುತ್ತಿದ್ದಾರೆ. ಈ ಬಗ್ಗೆ ಸ್ವಾಮೀಜಿಗಳು ತಮ್ಮ ಅಭಿಪ್ರಾಯಗಳನ್ನು ಹೇಳಲಿ, ಆದರೆ ಯಾವುದೇ ಒಂದು ಪಕ್ಷಕ್ಕೆ ಅದರದೇ ಆದ ಹೈಕಮಾಂಡ್, ಶಾಸಕರ ಒಮ್ಮತದಿಂದ ಸಿಎಂ ಮಾಡಲಾಗುತ್ತದೆ. ಸ್ವಾಮೀಜಿಗಳು ಹೇಳಿದ ಕೂಡಲೇ ಸಿಎಂ ಬದಲಾವಣೆ ಮಾಡಲಾಗದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ರಾಜ್ಯದ ಕೃಷ್ಣ ಹೆಗಡೆ ಹಾಗೂ ಕಮಲಾ ದಂಪತಿಯ ಪುತ್ರಿ ಡಾ.ಶೃತಿ ಹೆಗಡೆ ಅವರು ಅಮೇರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಹುಬ್ಬಳ್ಳಿಯಲ್ಲಿ ನೆಲೆಸಿದ್ದ ಇವರು ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರು ಎಂದು ತಿಳಿದುಬಂದಿದೆ. ಶೃತಿ ಅವರು 2018ರಲ್ಲಿಯೂ ಮಿಸ್ ಕರ್ನಾಟಕ ರನ್ನರ್ ಅಪ್ ಹಾಗೂ ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿಯೂ ಗುರುತಿಸಿಕೊಂಡಿದ್ದರು. ಇದೀಗ ವಿಶ್ವ ಸುಂದರಿಯಾಗಿ ಮಿಂಚಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರುವ ಇವರು ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಜೂ.6 ರಿಂದ 10 ವರೆಗೆ ಆಯೋಜಿದ್ದ ಈ ಸ್ಪರ್ಧೆಯಲ್ಲಿ ಭಾರತ ಸೇರಿ ಒಟ್ಟು 10 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ಎಲ್ಲರನ್ನೂ ಈ ನಮ್ಮ ಕನ್ನಡತಿ ಹಿಂದಿಕ್ಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಹಾವೇರಿ : ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಬಳಿ ನಡೆದಿದೆ. ಹರಳಯ್ಯ ನಗರದ ನಿವಾಸಿಗಳಾದ ನಂದನ್ ಶಿವಪ್ಪನವರ(22) ಹಾಗೂ ವೈಭವ ಪಟ್ಟಣ್ಣಶೆಟ್ಟಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಳ್ಳು ನೆಪ ಹೇಳಿ ಮನೆಯಿಂದ ಹೋಗಿದ್ದ ಇಬ್ಬರು ಸ್ನೇಹಿತರು ರಾತ್ರಿ ಪೂರ್ತಿ ಕುಡಿದು, ಮನೆಗೆ ತೆರಳಿದ್ದಾರೆ. ಈ ವೇಳೆ ರಾಣೇಬೆನ್ನೂರು ನಗರದ ನೇಕಾರ ಕಾಲೋನಿ ಬಳಿ ಬರುವಾಗ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಗಂಭೀರ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮದುವೆಯಾಗಿ ಒಂದು ಮಗುವಿದ್ದರೂ ಇನ್ನೊಂದು ಮಗು ಬೇಕು ಎಂದು ಕೇಳಿದ ಪತಿಗೆ ಇಬ್ಬರು ಪತ್ನಿಯರು ಸೇರಿ ಮತ್ತೊಂದು ಮದುವೆ ಮಾಡಲು ಮುಂದಾಗಿರುವ ಅಚ್ಚರಿಯ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪೆದ್ದಬಯಲು ಗ್ರಾಮದಲ್ಲಿ ನಡೆದಿದೆ. ಪಂಡನ್ನ ಎಂಬ ವ್ಯಕ್ತಿಯೇ ಮೂರನೇ ಮದುವೆಗೆ ಸಜ್ಜಾಗಿರುವ ವ್ಯಕ್ತಿಯಾಗಿದ್ದಾನೆ. ಈ ಮೊದಲು ಮೊದಲ ಹೆಂಡತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಮೊದಲ ಹೆಂಡತಿಯೇ ಮುಂದೆ ನಿಂತು ಗಂಡನಿಗೆ ಎರಡನೇ ಮದುವೆಯನ್ನು 2007ರಲ್ಲಿ ಮಾಡಿಸಿದ್ದಳು. ಅವರಿಗೆ ಒಬ್ಬ ಗಂಡು ಮಗ ಕೂಡಾ ಇದ್ದಾನೆ. ಆದರೂ ಪಂಡನ್ನ ಇನ್ನು ಒಂದು ಮಗು ಬೇಕು ಅಂತ ತನ್ನ ಇಬ್ಬರೂ ಪತ್ನಿಯರನ್ನ ಕೇಳಿದ್ದಾನೆ. ಆಗ ಇಬ್ಬರೂ ಪತ್ನಿಯರು ತನ್ನ ಗಂಡನಿಗೆ ಮೂರನೇ ಮದುವೆ ಮಾಡಲು ನಿರ್ಧಾರ ಮಾಡಿದ್ದಾರೆ. ಪಂಡನ್ನಾ ಪತ್ನಿಯರಾದ ಪಾರ್ವತಮ್ಮ ಮತ್ತು ಅಪ್ಪಲಮ್ಮ ಮೂರನೇ ಮದುವೆಗೆ ಭರ್ಜರಿ ತಯಾರಿಯನ್ನು ನಡೆಸಿ ಪೆದ್ದಬಯಲು ಗ್ರಾಮದಲ್ಲಿ ಬ್ಯಾನರ್ ಗಳನ್ನು ಕಟ್ಟಿಸಿ ಅದ್ದೂರಿ ಮದುವೆ ಮಾಡಿಸಲಾಗಿದೆ. ಇದೇ ತಿಂಗಳ 25 ರಂದು ಪಂಡನ್ನ ಮದುವೆ ವಿಜೃಂಭಣೆಯಿಂದ ನೆರವೇರಿತು.…
ಕುಮಾರಸ್ವಾಮಿ ರಾಜೀನಾಮೆಯಿಂದಾಗಿ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯಲಿದೆ. ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೂ ಈ ಹೈವೋಲ್ಟೇಜ್ ಕ್ಷೇತ್ರ ಚರ್ಚೆಯಲ್ಲಿದೆ. ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡಬಹುದು ಎಂದು ಹೇಳಲಾಗುತ್ತಿರುವುದರಿಂದ ಈ ಕ್ಷೇತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಜೆಡಿಎಸ್–ಬಿಜೆಪಿ ಮೈತ್ರಿ ಇರುವುದರಿಂದ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಅನ್ನೋದು ಕೂಡಾ ಕುತೂಹಲ ಮೂಡಿಸಿದೆ. ಜೆಡಿಎಸ್ ಅವರು ಬಿಜೆಪಿಗೆ ಈ ಕ್ಷೇತ್ರ ಬಿಟ್ಟುಕೊಟ್ಟರೆ ಸಿ.ಪಿ.ಯೋಗೇಶ್ವರ್ ಅವರು ಅಭ್ಯರ್ಥಿಯಾಗೋದು ಪಕ್ಕಾ ಎನ್ನಲಾಗುತ್ತಿದೆ. ಒಂದು ವೇಳೆ ಜೆಡಿಎಸ್ ಪಕ್ಷದವರೇ ಅಭ್ಯರ್ಥಿಯಾಗೋದಾದರೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಇನ್ನು ಸಿ.ಪಿ.ಯೋಗೇಶ್ವರ್ ಅವರು ನಿನ್ನೆ ರಾತ್ರಿ ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿದ್ದಾರೆ. ನೀವು ಸಂಪೂರ್ಣ ಒಪ್ಪಿಗೆ ಕೊಟ್ಟರೆ ಮಾತ್ರ ನಾನು ಅಭ್ಯರ್ಥಿಯಾಗುತ್ತೇನೆ. ಇಲ್ಲದೇ ಇದ್ದರೆ ನಿಖಿಲ್ ಏನಾದರೂ ಅಭ್ಯರ್ಥಿಯಾಗುವುದಿದ್ದರೆ ನಾನೇ ಸಂಪೂರ್ಣ ಬೆಂಬಲ ಕೊಡುತ್ತೇನೆ. ನೀವೇ ಮುಂದೆ ನಿಂತು ಉಪಚುನಾವಣೆ ನಡೆಸಿ. ಆದ್ರೆ ಒಂದು ವಾರದಲ್ಲಿ ಈ ಸ್ಪಷ್ಟತೆ ಕೊಡಿ ಎಂದು ಕುಮಾರಸ್ವಾಮಿಯವರಲ್ಲಿ ಯೋಗೇಶ್ವರ್…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಅವರ ಹಿರಿಯ ಸಹೋದರ ಕೂಡಾ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಬ್ಬರೂ ಕೂಡಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಸೆಲ್ ನಲ್ಲಿದ್ದಾರೆ. ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ಪ್ರಜ್ವಲ್ ರೇವಣ್ಣರನ್ನು ಸೂರಜ್ ರೂಮಿಗೆ ಶಿಫ್ಟ್ ಮಾಡಲಾಗಿದೆ. ಆ ಕೊಠಡಿಯಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಇಬ್ಬರೂ ಕೂಡಾ ಸಾಮಾನ್ಯ ಕೈದಿಗಳಂತೆ ಇದ್ದಾರೆ. ಇವರಿರುವ ರೂಮಿನಲ್ಲಿ ಟಿವಿ, ಮಂಚ ಏನೂ ಇಲ್ಲ. ಕೇವಲ ಚಾಪೆ ಹಾಗೂ ದಿಂಬು ಮಾತ್ರ ಇದೆ ಎಂದು ತಿಳಿದುಬಂದಿದೆ. ಅಣ್ಣ, ತಮ್ಮ ಇಬ್ಬರೂ ಆಕಡೆ ಮೂಲೆಗೊಂದು ಚಾಪೆ, ಈ ಕಡೆ ಮೂಲೆಗೊಂದು ಚಾಪೆ ಹಾಕಿಕೊಂಡು ಅದರ ಮೇಲೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಹೊರಗೆ ಏನು ನಡೆಯುತ್ತಿದೆ. ರಾಜಕೀಯ ಹೇಗಿದೆ..? ಹೊರಗೆ ಜನ ಏನು ಮಾತನಾಡುತ್ತಿದ್ದಾರೆ ಇತ್ಯಾದಿಯ ಬಗ್ಗೆ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.…
ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿರುಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು. ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.…
ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋವಕಾಶ ನೀಡಲಾಗುತ್ತಿದ್ದು, ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಅದಕ್ಕಾಗಿ ಕನ್ನಡಿಗರಿಗೆ ಎಲ್ಲ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಹಾಗೂ ಡಾ.ಸರೋಜಿ ಮಹಿಷಿ ವರದಿಯನ್ನು ಅನುಷ್ಟಾನಕ್ಕೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಸೋಮವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಕರವೇ ವತಿಯಿಂದ ನಡೆದ ಬೃಹತ್ ಧರಣಿಯಲ್ಲಿ ಮಾತನಾಡಿದ ಅವರು, ‘ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಮೇಲ್ದರ್ಜೆ ಹುದ್ದೆಗಳಲ್ಲಿ ಶೇ.80ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವ ಸರೊಜಿನಿ ಮಹಿಷಿ ವರದಿ 40 ವರ್ಷಗಳ ಹಿಂದೆ ಜಾರಿಯಾಗಬೇಕಿತ್ತು. ಆದರೆ ಅದು ಜಾರಿಯಾಗಿಲ್ಲ. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಯಾವುದಕ್ಕೆ ಮಣಿದರೋ ಗೊತ್ತಿಲ್ಲ. ಅದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಎಲ್ಲ ಸರಕಾರದ ಮುಂದೆ…
ಲೋಕಸಭಾ ಚುನಾವಣೆಯಲ್ಲಿ ನಮಗೆ ಸೋಲಾಗಲು ಪ್ರಧಾನಿ ಮೋದಿಯವರ ಮೇಲಿನ ನಮ್ಮ ಅತಿಯಾದ ಆತ್ಮ ವಿಶ್ವಾಸ ಹಾಗೂ ಕಾರ್ಯಕರ್ತರ ಕಡಗಣನೆಯೇ ಕಾರಣ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ನಾವು ವಿಧಾನಸಭಾ ಫಲಿತಾಂಶದ ಹಿನ್ನೆಡೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಉತ್ತೇಜಿಸಿ ಚುನಾವಣೆ ಮಾಡುವ ಕೆಲಸ ಆಗಲಿಲ್ಲ. ಮೋದಿ ಹೆಸರಿನಲ್ಲಿ ಅತಿಯಾದ ಆತ್ಮವಿಶ್ವಾಸ ಬಿಜೆಪಿ 8 ಸೀಟ್ ಕಳೆದುಕೊಳ್ಳಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಪವರ್ ಫುಲ್ ಆಗಿ ಕಾರ್ಯಾಚರಣೆಗೆ ಇಳಿದಿದೆ ಎಂಬುದನ್ನು ಊಹಿಸಲು ನಮ್ಮ ರಾಜ್ಯದ ಸಂಘಟನೆ ವಿಫಲವಾಯಿತು. ಜೆಡಿಎಸ್ ಜೊತೆಗಿದ್ದ ಕಾರಣಕ್ಕೆ ಹಳೇ ಮೈಸೂರು ಕಡೆ ನಮಗೆ ಗೆಲುವಾಗಿದೆ ಎಂದು ಜನ ಮಾತಾಡಲು ಆರಂಭಿಸಿದ್ದು ಬಿಜೆಪಿಗೆ ಸವಾಲಾಗಿದೆ ಎಂಬುದನ್ನೂ ಅವರು ಎಚ್ಚರಿಸಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದ ಅವರು ವಿಪಕ್ಷ ನಾಯಕ ಆರ್.ಅಶೋಕ್ಗೆ ಅಧ್ಯಯನದ ಕೊರತೆ ಇದೆ. ಸದನಕ್ಕೆ ಅಧ್ಯಯನ ಮಾಡಿ ಬರಬೇಕು. ಅಂಕಿ ಅಂಶಗಳ ಬಗ್ಗೆ ಮಾಹಿತಿ ಇರಬೇಕು. ವಿಪಕ್ಷ ನಾಯಕ ಅಂದರೆ…
ಬಿಹಾರ: ದೈಹಿಕ ಸಂಪರ್ಕ ಓಕೆ, ಈ ಮದುವೆ ಎಲ್ಲ ಯಾಕೆ ಎಂದು ಕೇಳಿದ ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿ ಟಾಯ್ಲೆಟ್ ಗೆ ಹಾಕಿ ಫ್ಲಶ್ ಮಾಡಿದ ಘಟನೆಯೊಂದು ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಪಾಟ್ನಾದ ಮಧೌರದ 12ನೇ ವಾರ್ಡ್ನ ಕೌನ್ಸಿಲರ್ ವೇದ ಪ್ರಕಾಶ್ ನರ್ಸಿಂಗ್ ಹೋಮ್ ಮಾಲಕಿ ಜೊತೆ ಪ್ರೀತಿಯಲ್ಲಿದ್ದ. ಆಕೆಯ ಹಿಂದೆ ಬಿದ್ದು ಆಕೆಗೆ ತನ್ನ ಪ್ರೀತಿ ನಿವೇದನೆ ಮಾಡಿ ನಂತರ ಆಕೆ ಒಪ್ಪಿಗೆ ಕೊಟ್ಟು, ಇಬ್ಬರೂ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಸ್ಥಿತಿಗೆ ಬಂದಿದ್ದಾರೆ. ಪ್ರೀತಿ, ಲೈಂಗಿಕ ಸಂಪರ್ಕ ಸುದೀರ್ಘ ವರ್ಷಗಳಿಂದ ಮುಂದುವರಿದಿದೆ. ಹೀಗಿರುವಾಗ ಗೆಳತಿ ಮದುವೆಯಾಗಬೇಕು ಎಂದು ಬೇಡಿಕೆಯಿಟ್ಟಿದ್ದಳು. ಆಕೆಯ ಒತ್ತಾಯದ ಸಹಿಸಲಾಗದೇ ಮದುವೆಗೆ ವೇದ ಪ್ರಕಾಶ್ ಒಪ್ಪಿಗೆ ನೀಡಿದ್ದಾನೆ. ಮದುವೆ ದಿನಾಂಕ ಫಿಕ್ಸ್ ಆಗಿದೆ. ಎಲ್ಲಾ ತಯಾರಿ ಮಾಡಲಾಗಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ. ಮದುವೆ ದಿನಾಂಕ ಹತ್ತಿರ ಬರುತ್ತಿದ್ದಂತೆ ನಾನು ಮದುವೆಯಾಗಲ್ಲ ಎಂದು ಹೇಳಿದ್ದಾನೆ. ಹೀಗೇ ಇರೋಣ, ಮದುವೆ ಯಾಕೆ ಎಂದು ಪ್ರಶ್ನೆ ಮಾಡೋಕೆ ಶುರು ಮಾಡಿದ್ದಾನೆ. ಗೆಳತಿ…