Subscribe to Updates
Get the latest creative news from FooBar about art, design and business.
- ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
- ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
- ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
- ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
- ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
- ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
- ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ: ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
- ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ: ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
Author: admin
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವನ್ನು ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆಯುವಂತೆ ಮಾಡಿದ್ದ ರಿಲಯನ್ಸ್ ಉದ್ಯಮಿ ಮುಕೇಶ್ ಅಂಬಾನಿ 2024ರ ಕೇಂದ್ರ ಬಜೆಟ್ ಮಂಡನೆಯಾದ ದಿನ ಷೇರು ಮಾರುಕಟ್ಟೆಯಲ್ಲಿ ಆದ ಏರುಪೇರಿನಿಂದಾಗಿ ಬರೋಬ್ಬರಿ 9,200 ಕೋಟಿ ರೂ. ಕಳೆದುಕೊಂಡಿದ್ದಾರೆ. ಕೇಂದ್ರ ಬಜೆಟ್ ದಿನ ಷೇರು ಮಾರುಕಟ್ಟೆಯು ಸಣ್ಣ ಕುಸಿತದೊಂದಿಗೆ ಕ್ಲೋಸ್ ಆಗಿತ್ತು. ಆದರೆ ಇದು ವಹಿವಾಟಿನ ವೇಳೆ ಬಹುದೊಡ್ಡ ಪರಿಣಾಮವನ್ನು ಬೀರಿತ್ತು. ಈ ಸಂದರ್ಭದಲ್ಲಿ ವಹಿವಾಟಿನಲ್ಲಿ ಗಮನಾರ್ಹವಾದ ಏರಿಳಿತಗಳು ಕಂಡುಬಂದವು. ಕೆಲವು ಷೇರುಗಳು ತೀವ್ರವಾಗಿ ಕುಸಿದರೆ ಇನ್ನು ಸಣ್ಣ ಪ್ರಮಾಣದಲ್ಲಿ ಏರಿಕೆ ಕಂಡವು. ಇದು ದೇಶದ ದೊಡ್ಡ ಬಿಲಿಯನೇರ್ ಗಳ ಸಂಪತ್ತಿನ ಮೇಲೆ ಭಾರೀ ಪರಿಣಾಮವನ್ನು ಬೀರಿತು. ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವ್ವಳ ಮೌಲ್ಯದಲ್ಲಿ ಈ ದಿನ ಗಣನೀಯ ಇಳಿಕೆಯಾಗಿದೆ. ಬಜೆಟ್ ದಿನದಂದು, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಏರುವ ನಿರೀಕ್ಷೆ ಇತ್ತು. ಇದರಿಂದ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯವನ್ನು ಹೆಚ್ಚಾಗುತ್ತದೆ ಎಂದೇ…
ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ದೀಪಿಕಾಗೆ ಬಂದಿತ್ತು. ಆದರೆ, ಪ್ರೆಗ್ನೆಂಟ್ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಮಗುವನ್ನು ನೋಡಿಕೊಳ್ಳಲು ನಟಿ ಸರಣಿಯನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಸದ್ಯ ನಟಿ ದೀಪಿಕಾ ಪಡುಕೋಣೆ ಸುದ್ದಿಯಲ್ಲಿದ್ದಾರೆ. ಪ್ರಗ್ನೆಂಟ್ ಆಗಿರೋ ಅವರು ಸೆಪ್ಟೆಂಬರ್ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಹೀಗಾಗಿ ಈ ನಟಿ ಯಾವುದೇ ಸಿನಿಮಾದಲ್ಲಿ ನಟಿಸದಿರಲು ನಿರ್ಧರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರೆಗ್ನೆನ್ಸಿ ಆಗಿ ಸುದ್ದಿಯಾಗಿದ್ದ ನಟಿ ದೀಪಿಕಾ, ಮಗುವಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ತಾಯಿಯಾದ ನಂತರ ಕೆಲವು ವರ್ಷ ದೀಪಿಕಾ ಬಾಲಿವುಡ್ ನತ್ತ ಮುಖ ಮಾಡದಿರಲು ನಿರ್ಧರಿಸಿದ್ದಾರೆ ಎಂಬ ವರದಿಗಳಿವೆ. ನಟಿ ತನ್ನ ಮಗುವಿನೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತಾರೆ ಎಂದು ಕೂಡ ಹೇಳಲಾಗಿದೆ. ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ದೀಪಿಕಾಗೆ ಬಂದಿತ್ತು. ಆದರೆ, ಪ್ರೆಗ್ನೆಂಟ್ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಮಗುವನ್ನು…
ಹಲವು ಸರ್ಕಾರಿ ರಜೆಗಳು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್ಗಳಿಗೆ ಅನ್ವಯವಾಗುತ್ತವೆ. ಮುಂದಿನ ತಿಂಗಳು ಆಗಸ್ಟ್ನಲ್ಲಿ ಬ್ಯಾಂಕ್ಗಳು ಬರೋಬ್ಬರಿಗೆ 14 ದಿನ ಬಾಗಿಲು ಮುಚ್ಚಿವೆ.ಆಗಸ್ಟ್ ತಿಂಗಳಲ್ಲಿ ಮೂರು ಪ್ರಮುಖ ಹಬ್ಬಗಳು ಬರುತ್ತವೆ. ರಕ್ಷಾ ಬಂಧನ, ಜನ್ಮಾಷ್ಠಮಿ ಮತ್ತು ಸ್ವತಂತ್ರ ದಿನಾಚರಣೆಗಳಿಗೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮೂರು ಹಬ್ಬಗಳ ಜೊತೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರ ಸೇರಿಸಿದ್ರೆ 10 ರಜೆ ಆಗುತ್ತದೆ. ಇನ್ನುಳಿದ ನಾಲ್ಕು ರಜೆ ಯಾವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಆಗಸ್ಟ್ 2024- ಬ್ಯಾಂಕ್ ರಜಾದಿನಗಳ ಪಟ್ಟಿ: ಆಗಸ್ಟ್ 3: ಅಗರ್ತಲಾದಲ್ಲಿ ಕೇರ ಪೂಜೆ ಹಿನ್ನೆಲೆ ಈ ಭಾಗದಲ್ಲಿಯ ಬ್ಯಾಂಕ್ಗಳಿಗೆ ರಜೆ ಇರುತ್ತದೆ. ಆಗಸ್ಟ್ 4: ಭಾನುವಾರ ಆಗಸ್ಟ್ 7: ಹರಿಯಾಲಿ ತೀಜ್ ಹಬ್ಬದ ಹಿನ್ನೆಲೆ ಹರಿಯಾಣದ ಬ್ಯಾಂಕ್ಗಳಿಗೆ ರಜೆ ಆಗಸ್ಟ್ 8: ಈ ದಿನದಂದು ಸಿಕ್ಕಿಂನಲ್ಲಿ ತೇದೋಂಗ್ ಲೋರಂ ಫೈಟ್ ಆಚರಿಸಲಾಗುತ್ತದೆ. ಈ ಹಿನ್ನೆಲೆ ಸಿಕ್ಕಿಂನಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗುತ್ತದೆ. ಆಗಸ್ಟ್ 10: ತಿಂಗಳ…
ತುಮಕೂರು: ನಗರವು ಇಂದು ಇನ್ನೊಂದು ಮಹತ್ವದ ಬೆಳವಣಿಗೆಯನ್ನು ಕಂಡುಬಂದಿದೆ. ನೂತನವಾಗಿ ನಿರ್ಮಾಣಗೊಂಡ “ಶ್ರೀ ದೇವರಾಜ ಅರಸು ಬಸ್ ನಿಲ್ದಾಣ”ವನ್ನು ಇಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ KSRTC ಅಧ್ಯಕ್ಷರಾದ ಗುಬ್ಬಿ ಶ್ರೀನಿವಾಸ್ ಅವರು ಉದ್ಘಾಟಿಸಿದರು. ಈ ಹೊಸ ಬಸ್ ನಿಲ್ದಾಣವು ಸ್ಮಾಟ್ ಸಿಟಿ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿದ್ದು, ತುಮಕೂರು ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಶಕ್ತಿಮಾನ್ ಆಗಿದೆ. ಈ ಹೊಸ ನಿಲ್ದಾಣವು ತುಮಕೂರು ಜಿಲ್ಲೆಯ ಜನತೆಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ, ಅವರ ಪ್ರಯಾಣದ ಅನುಭವವನ್ನು ಸುಗಮಗೊಳಿಸುತ್ತದೆ. ಆಧುನಿಕ ಸೌಲಭ್ಯಗಳು, ಹೊಸತಾದ ಪರಿಕರಗಳು, ಹಾಗೂ ಸುಸಜ್ಜಿತ ವ್ಯವಸ್ಥೆಗಳು ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡಲು ಸಿದ್ಧವಾಗಿವೆ. ನಗರದ ಅಭಿವೃದ್ಧಿಯ ದೃಷ್ಟಿಯಲ್ಲಿ ಈ ಬಸ್ ನಿಲ್ದಾಣವು ಪ್ರಮುಖ ಹೆಜ್ಜೆಯಾಗಿದೆ. ನಗರಾಭಿವೃದ್ಧಿಯ ಜೊತೆಗೆ, ಸಾರ್ವಜನಿಕರಿಗೆ ಅನುಕೂಲಕರವಾದ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಗುರಿಯನ್ನು ಈ ಬಸ್ ನಿಲ್ದಾಣ ಸಾಧಿಸುತ್ತದೆ. ಇದು ನಗರದ ಜನತೆಗೆ ಹೆಚ್ಚಿನ ಅನುಕೂಲತೆಗಳನ್ನು ಒದಗಿಸುವ ಜೊತೆಗೆ, ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಈ ಸಂದರ್ಭದಲ್ಲಿ…
ಪಾವಗಡ: ತಾಲ್ಲೂಕಿನ ಅತ್ಯಂತ ಹಿಂದುಳಿದ ಹಾಗೂ ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಂತೆ ಇರುವ ಬಿ.ಹೊಸಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 150 ಮಕ್ಕಳಿಗೆ ಶಾಲಾ ಬ್ಯಾಗು, ನೋಟ್ ಪುಸ್ತಕಗಳು ಹಾಗೂ ನಿತ್ಯ ಉಪಯೋಗಿಸುವ ಕುಡಿಯುವ ನೀರಿನ ಬಾಟಲ್ ಗಳನ್ನು ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ವಿತರಿಸಲಾಯಿತು. ಕಾರ್ಯಕ್ರಮವು ಈ ಕುಗ್ರಾಮವಾದ ಬಿ.ಹೊಸಹಳ್ಳಿಯಲ್ಲಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಪೂಜ್ಯ ಸ್ವಾಮೀಜಿಯವರನ್ನು ಗ್ರಾಮಸ್ಥರು ಸ್ವಾಗತಿಸಿದರು. ಬಳಿಕ ಶಾಲೆಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಶಾಲಾ ಬ್ಯಾಗು ಮತ್ತಿತರ ಪರಿಕರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಸ್ವಾಮಿ ಜಪಾನಂದಜೀ ಮಹಾರಾಜ್, ಬಿ.ಹೊಸಹಳ್ಳಿ ಗ್ರಾಮದ ಗ್ರಾಮಸ್ಥರಿಗೆ ಭಾರತೀಯ ಸಂಸ್ಕೃತಿಯ, ಪರಂಪರೆಯನ್ನು ಉಳಿಸಿಕೊಂಡು ಬರಲು ಒತ್ತುಕೊಟ್ಟಿರುವುದು ಸಂತೋಷವಾಗಿದೆ ಎಂದು ತಿಳಿಸಿದರು. ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಅತ್ಯಂತ ಕುಗ್ರಾಮವಾಗಿರುವ ಹಾಗೂ ಮುಖ್ಯ ವಾಹಿನಿಯಿಂದ ದೂರವಾಗಿರುವ ಶಾಲೆಗಳನ್ನು ಗುರುತಿಸಿ ಪ್ರತಿ ವರ್ಷ ಈ ತೆರನಾದ ಸೇವೆಯನ್ನು ಮಾಡುತ್ತಿದ್ದೇವೆ. ಈ ಬಾರಿ ಬಿ.ಹೊಸಹಳ್ಳಿಗೆ ಭೇಟಿ…
ಸರಗೂರು: ತಾಲ್ಲೂಕಿನ ನುಗು ಜಲಾಶಯದ ಹಿನ್ನೀರು ಭಾಗದಲ್ಲಿ ಇರುವ ಹಳೆಹೆಗ್ಗುಡಿಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಜೋಳ ತೋಟ ನಾಶವಾಗಿದೆ. ಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಹಳೆಹೆಗ್ಗುಡಿಲು ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿದ್ದು, ಇನ್ನೂ ಒಂದೆರಡು ತಿಂಗಳಲ್ಲಿ ಕಟಾವು ಮಾಡುವ ಹಂತದಲ್ಲಿತ್ತು. ಆದರೆ ಶುಕ್ರವಾರ ರಾತ್ರಿ ವೇಳೆಯಲ್ಲಿ ಕಾಡಾನೆಗಳು ಏಕಾಏಕಿ ದಾಳಿ ನಡೆಸಿ ಬೆಳೆ ನಾಶ ಮಾಡಿವೆ. ಹಳೆಹೆಗ್ಗುಡಿಲು ಗ್ರಾಮದ ರೈತ ಸುಂದರ ಎಂಬುವರ ಜಮೀನಲ್ಲಿ ಈ ಘಟನೆ ನಡೆದಿದೆ. ಸುಂದರ ಅವರು ಎಂದಿನಂತೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಎರಡು ತಿಂಗಳಲ್ಲಿ ಫಸಲು ನೀಡಬೇಕಾದ ಗಿಡಗಳು ಮುರಿದು ಬಿದ್ದಿವೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದಿದ್ದ ಫಸಲನ್ನು ಆನೆಗಳು ತಿಂದು ನಷ್ಟ ಉಂಟು ಮಾಡಿವೆ. ಬೆಳೆ ನಾಶದಿಂದ ರೈತರು ಆತಂಕಗೊಂಡಿದ್ದು, ಜಮೀನಿಗೆ ಹೋಗಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಬೆಳೆ ನಷ್ಟಕ್ಕೆ…
ಪ್ರಪಂಚದಾದ್ಯಂತದ ಬಹು ಜನರ ಆದ್ಯತೆಗಳನ್ನು ಸಮೀಕ್ಷೆಯ ಮೂಲಕ ವಿಶ್ವದ 10 ಆಕರ್ಷಕ ಮಹಿಳೆಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಭಾರತದ ನಟಿಯೊಬ್ಬರು ಸ್ಥಾನ ಪಡೆದಿದ್ದಾರೆ. ಪ್ರಸಕ್ತ ವರ್ಷದ ವಿಶ್ವದ ಅತ್ಯಂತ ಸುಂದರ ಮಹಿಳೆ ಪಟ್ಟಿಯನ್ನು ಗೋಲ್ಡನ್ ರೇಶಿಯೋ ಬಿಡುಗಡೆ ಮಾಡಿದೆ. ಬಾಹ್ಯ ಸೌಂದರ್ಯ ಮಾತ್ರವಲ್ಲ, ಹಲವು ಆಯಾಮ ಹಾಗೂ ಮಾನದಂಡಗಳನ್ನಿಟ್ಟುಕೊಂಡು ಈ ಪಟ್ಟಿ ತಯಾರಿಸಲಾಗಿದೆ. ಈ ಪೈಕಿ ವಿಶ್ವದ ಮೋಸ್ಟ್ ಬ್ಯೂಟಿಫುಲ್ ಮಹಿಳೆ ಅನ್ನೋ ಕಿರೀಟ ನಟಿ ಅನ್ಯ ಟೇಲರ್ ಜಾಯ್ ಪಾಲಾಗಿದ್ದರೆ ಇದರಲ್ಲಿ 9ನೇ ಸ್ಥಾನವನ್ನು ನಮ್ಮ ಭಾರತದ ಬಾಲಿವುಡ್ ನಟಿ ಪಡೆದುಕೊಂಡಿದ್ದಾರೆ.. ಟಾಪ್ 10 ಪಟ್ಟಿಯಲ್ಲಿ ಹಾಲಿವುಡ್ ಸೇರಿದಂತೆ ಹಲವು ಸಿನಿಮಾ, ಮಾಡೆಲ್ ಕ್ಷೇತ್ರದ ಸುಂದರ ಮಹಿಳೆಯರು ಕಾಣಿಸಿಕೊಂಡಿದ್ದಾರೆ. ಈ ಪೈಕಿ 9ನೇ ಸ್ಥಾನದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಸ್ಥಾನ ಪಡೆದಿದ್ದಾರೆ. ಗೋಲ್ಡನ್ ರೇಶಿಯೋ ಲಿಸ್ಟ್ನಲ್ಲಿ ಅಲಿಯಾ ಭಟ್ ಶೇಕಡಾ 91.14 ರೇಟಿಂಗ್ ಪಡೆಯುವ ಮೂಲಕ 9ನೇ ಸ್ಥಾನದಲ್ಲಿದ್ದಾರೆ. ವಿಶ್ವದ 10 ಅತ್ಯಂತ ಸುಂದರ ಮಹಿಳೆಯರು…
ಗೇಮಿ ಚಂಡಮಾರುತವು ಬುಧವಾರದಿಂದ ತೈವಾನ್ ನಲ್ಲಿ ತೀವ್ರಗೊಂಡಿದೆ ಮತ್ತು ಕನಿಷ್ಠ ಎಂಟು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಕೇಂದ್ರ ತುರ್ತು ಕಾರ್ಯಾಚರಣೆ ಕೇಂದ್ರ (ಸಿಇಒಸಿ) ಉಲ್ಲೇಖಿಸಿ ಫೋಕಸ್ ತೈವಾನ್ ತಿಳಿಸಿದೆ. ಚಂಡಮಾರುತವು ದೇಶದಾದ್ಯಂತ ಹಾದುಹೋಗುವಾಗ ಮತ್ತು ನಂತರ ಒಬ್ಬ ವ್ಯಕ್ತಿ ಕಾಣೆಯಾಗಿದ್ದಾನೆ ಮತ್ತು 866 ಜನರು ಗಾಯಗೊಂಡಿದ್ದಾರೆ. ಚಂಡಮಾರುತವು ಈಗಾಗಲೇ ತೈವಾನ್ ಅನ್ನು ತೊರೆದಿದೆ ಮತ್ತು ಉಷ್ಣವಲಯದ ಚಂಡಮಾರುತವಾಗಿ ಕೆಳದರ್ಜೆಗೆ ಇಳಿಸಲಾಗಿದೆ. ಇದು ಈಗ ಚೀನಾವನ್ನು ತಲುಪಿದೆ, ಆದಾಗ್ಯೂ, ಮಧ್ಯ ಮತ್ತು ದಕ್ಷಿಣ ತೈವಾನ್ ಗಮನಾರ್ಹ ಮಳೆಯನ್ನು ಕಾಣಬಹುದು ಎಂದು ಫೋಕಸ್ ತೈವಾನ್ ವರದಿ ಮಾಡಿದೆ. ಕಾವೊಹ್ಸಿಯುಂಗ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಸಾವನ್ನಪ್ಪಿದ 64 ವರ್ಷದ ಮಹಿಳಾ ಮೋಟಾರು ಬೈಕ್ ಸವಾರರೂ ಸಾವನ್ನಪ್ಪಿದ್ದಾರೆ. ಹುವಾಲಿಯನ್ ಕೌಂಟಿಯಲ್ಲಿ ಮೇಲ್ಛಾವಣಿ ಕುಸಿದು 44 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ; ಮತ್ತು ಕಾವೊಹ್ಸಿಯುಂಗ್ನಲ್ಲಿ ಭೂಕುಸಿತದ ಸಮಯದಲ್ಲಿ 78 ವರ್ಷದ ವ್ಯಕ್ತಿ ಸಾವನ್ನಪ್ಪಿದರು. ಇದಲ್ಲದೆ, ಮನೆಯಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಾಗ 65 ವರ್ಷದ ವ್ಯಕ್ತಿಯೊಬ್ಬರು ನೆಲಕ್ಕೆ ಬಿದ್ದು…
ತುಮಕೂರು: ಅರ್ಹ ಫಲಾನುಭವಿಗಳು ತಾಲ್ಲೂಕು ಕಚೇರಿ ಹಾಗೂ ನಾಡ ಕಚೇರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪಿಂಚಣಿ ಸೌಲಭ್ಯವನ್ನು ಪಡೆಯಬೇಕೆಂದು ತಾಲೂಕು ಗ್ರೇಡ್ -2 ತಹಶೀಲ್ದಾರ್ ಕಮಲಮ್ಮ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತುಮಕೂರು ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿಂದು ಬನಶಂಕರಿ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ಪಿಂಚಣಿ ಆಂದೋಲನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರವು ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಮಾಸಾಶನಗಳನ್ನು ನೀಡುತ್ತಿದ್ದು, ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ಕಂದಾಯ ಇಲಾಖೆ/ ನಾಡ ಕಚೇರಿಗೆ ಖುದ್ದು ಭೇಟಿ ನೀಡಿ ತಮ್ಮ ಹೆಸರು ನೋಂದಾಯಿಸಿ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು. ಆಂದೋಲನವು ಶಾಂತಿನಗರ–ವಿಶ್ವಣ್ಣ ಲೇಔಟ್ ನ ಮಸೀದಿ ಮುಂಭಾಗದ ಮೂಲಕ ಮರಳೂರು ದಿಣ್ಣೆಯ ಮೂಲಕ ಸಂಚರಿಸಿ ಪಿಂಚಣಿ ಸೌಲಭ್ಯಕ್ಕಾಗಿ ಅಗತ್ಯ ದಾಖಲೆಗಳ ಮಾಹಿತಿಯನ್ನು ಹೊಂದಿರುವ ಕರ ಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಿರಸ್ತೆದಾರ್ ನರಸಿಂಹರಾಜು, ಕಂದಾಯ ನಿರೀಕ್ಷಕರಾದ ಶಿವಾನಂದ…
ತಿಪಟೂರು: ತಾಲೂಕಿನ ನೊಣವಿನಕೆರೆಪ್ರಾಥಮಿಕ ಆರೋಗ್ಯ ಕೇಂದ್ರ ಸ್ವಚ್ಛತೆ ಕಾರ್ಯವೈಖರಿಯನ್ನು ಗುರುತಿಸಿ ನ್ಯಾಷನಲಿ ಹೆಲ್ತ್ ಮಿಷನ್ ಸರ್ವೆಯಲ್ಲಿ ನೊಣವಿನಕೆರೆ ಸಾರ್ವಜನಿಕ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದ ಮನ್ನಣೆ ಆಯ್ಕೆಯಾಗಿದೆ ಎಂದು ಡಾಕ್ಟರ್ ಚನ್ನಕೇಶವ ಮಾಹಿತಿ ನೀಡಿದರು. ಈ ಆರೋಗ್ಯ ಕೇಂದ್ರದಲ್ಲಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ವರ್ಷದ 365 ದಿನವೂ ಕಾರ್ಯನಿರ್ವಹಿಸುತ್ತೇನೆ. ಪ್ರತಿದಿನ 250ರಿಂದ 300 ಜನ ಹೊರರೋಗಿಗಳಿಗೆ ಚಿಕಿತ್ಸೆನೀಡಲಾಗುತ್ತಿದ್ದು, ಪ್ರತಿ ತಿಂಗಳ ಆರು ಸಾವಿರ ರೋಗಿಗಳು ಬರುತ್ತಿದ್ದಾರೆ. ಸರ್ಕಾರದಿಂದ ಔಷಧ ಮಾತ್ರೆ ದೊರೆಯದ ಕಾರಣ, ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ರೋಗಿಗಳ ಆಧಾರ್ ಮತ್ತು ಪಡಿತರ ಚೀಟಿ ನಮೂದಿಸಿದರೆ ಪ್ರತಿ ರೋಗಿಗೆ ಒಂದು ದಿನಕ್ಕೆ 300 ಹಣ ಬರುತ್ತದೆ. ಈ ಹಣದಿಂದಸರ್ಕಾರದಿಂದ ದೊರೆಯದ ಔಷಧಗಳನ್ನು ಖರೀದಿಸಿ ಬರುವ ಯಾವುದೇ ರೋಗಿಗೆ ಔಷಧಿ ಕೊರತೆ ಬಾರದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು. ಇಲ್ಲಿ ಖಾಲಿ ಹುದ್ದೆಗಳು ಇದ್ದು ಇದಕ್ಕೆ ಭರ್ತಿ ಮಾಡಲು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…