Subscribe to Updates
Get the latest creative news from FooBar about art, design and business.
- ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
Author: admin
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಯುವಕನೊಬ್ಬ ಅಪಹರಿಸಿರುವ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿರುವ ಘಟನೆ ವರದಿಯಾಗಿದೆ. ಶಂಕರ್ ಎಂಬ ಯುವಕ 16 ರ ಹರೆಯದ ಬಾಲಕಿಯನ್ನು ಕಿಡ್ನಾಪ್ ಮಾಡಿರುವುದಾಗಿ ದೂರಲ್ಲಿ ತಿಳಿಸಲಾಗಿದೆ. ಬಾಲಕಿ ಕಿಡ್ನಾಪ್ ಆಗಿ 14 ದಿನಗಳಾಗಿದ್ದು, ಪೋಷಕರು ಚಿಂತಾಕ್ರಾಂತರಾಗಿದ್ದಾರೆ. ಕಾಲೇಜಿಗೆಂದು ಹೋದ ಮಗಳು ನಂತರ ಕಾಲೇಜಿನಿಂದ ವಾಪಸ್ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆದಿದೆ. ಮೊಬೈಲ್ ಫೋನ್ ಗೆ ಕರೆ ಮಾಡಿದರೆ ಸ್ವಿಚ್ ಆಫ್ ಆಗಿದೆ ಎಂದು ಪೋಷಕರು ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ. ಶಂಕರ್ ಮೊಬೈಲ್ ಟ್ರೇಸ್ ಮಾಡಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆಯಲ್ಲಿ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಕಂಡು ಬಂದಿದೆ. ಹೀಗಾಗಿ ಆಂಧ್ರಪ್ರದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಲೋನಾವಾಲಾದ ಭೂಶಿ ಅಣೆಕಟ್ಟಿನ ನೀರಿನಲ್ಲಿ ಕೊಚ್ಚಿ ಹೋಗಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಪುಣೆಯ ಹಡಪ್ಸರ್ ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಾಹಿತಿಯ ಪ್ರಕಾರ, ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು…
ವಿಪರೀತ ಮಳೆಯಿಂದ ಆಗುಂಬೆ ಘಾಟ್ ನಲ್ಲಿ ಭೂಕುಸಿತದ ಭೀತಿ ಎದುರಾಗಿದ್ದು, ಈ ಹಿನ್ನೆಲೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ವಾಹನಗಳ ದಟ್ಟಣೆಯಿಂದ ಉಂಟಾದ ಸುರಕ್ಷತಾ ಕಾಳಜಿಗಳನ್ನು ಉಲ್ಲೇಖಿಸಿ ಆಗುಂಬೆ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 115 ಮತ್ತು ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಸೆಕ್ಷನ್ 221(ಎ)(2) ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್ನಲ್ಲಿ ವಾಹನ ಸಂಚಾರ ನಿಷೇಧ ಜಾರಿಯಲ್ಲಿರಲಿದೆ. ಆಗುಂಬೆ ಘಾಟ್ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎಯ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ತೀರ್ಥಹಳ್ಳಿಯಿಂದ ಉಡುಪಿಗೆ ತೆರಳುವ ಭಾರಿ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ. ವ್ಯತಿರಿಕ್ತವಾಗಿ ಉಡುಪಿಯಿಂದ ತೀರ್ಥಹಳ್ಳಿಗೆ ತೆರಳುವ ಭಾರಿ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮಾರ್ಗವಾಗಿ ಸಂಚರಿಸಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಭೂಕುಸಿತಗಳು ಆದಲ್ಲಿ ಅಪಾಯಗಳನ್ನು ತಗ್ಗಿಸಲು, ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹಾನಿಯನ್ನು ಕಡಿಮೆ ಮಾಡಲು, ಅಧಿಕಾರಿಗಳು…
ರಾಜ್ಯದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಜುಲೈ 15ರಿಂದ 26ರವರೆಗೆ ಅಧಿವೇಶನ ನಡೆಯಲಿದೆ. ಈ ಬಾರಿ 10 ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಈ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು , ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ದಿನಾಂಕ: 15.07.2024 ರಿಂದ 26.07.2024 ರವರೆಗೆ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅಧಿವೇಶನದ ದಿನಾಂಕವನ್ನ ಅಂತಿಮಗೊಳಿಸಿದ್ದು ಜುಲೈ 15ರಿಂದ ಅಧಿವೇಶನ ಆರಂಭವಾಗಿ ಜುಲೈ 26 ರಂದು ಕೊನೆಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಸಂಸತ್ತಿನ ಕೆಳಮನೆ, ಲೋಕಸಭೆಯಲ್ಲಿ ಸೋಮವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮೊಂದಿಗೆ ಭಗವಾನ್ ಶಿವ ಮತ್ತು ಸಿಖ್ ಗುರು ಶ್ರೀ ಗುರುನಾನಕ್ ದೇವ್ ಅವರ ಪೋಸ್ಟರ್ ಪ್ರದರ್ಶಿಸುವ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ “ವ್ಯವಸ್ಥಿತ ಮತ್ತು ಪೂರ್ಣ ಪ್ರಮಾಣದ ಆಕ್ರಮಣ” ನಡೆಸಿದರು. 18ನೇ ಲೋಕಸಭೆಯ ಅಧಿವೇಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತದ ಕಲ್ಪನೆ, ಸಂವಿಧಾನ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ವಿರೋಧಿಸಿದ ಜನರ ಮೇಲೆ ವ್ಯವಸ್ಥಿತ ಮತ್ತು ಪೂರ್ಣ ಪ್ರಮಾಣದ ದಾಳಿ ನಡೆದಿದೆ” ಎಂದು ದೂಷಿಸಿದರು. ಕೆಲವು ನಾಯಕರು ಇನ್ನೂ ಜೈಲಿನಲ್ಲಿದ್ದಾರೆ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಅಧಿಕಾರ ಮತ್ತು ಸಂಪತ್ತಿನ ಕೇಂದ್ರೀಕರಣ, ಬಡವರು ಮತ್ತು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ಆಕ್ರಮಣದ ಕಲ್ಪನೆಯನ್ನು ವಿರೋಧಿಸುವ ಸರ್ವರನ್ನು ಹತ್ತಿಕ್ಕಲಾಯಿತು” ಎಂದರು. ಭಾರತ ಸರ್ಕಾರದ ಆದೇಶದಿಂದ ಭಾರತದ ಪ್ರಧಾನ ಮಂತ್ರಿಯ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ಮಾಡಲಾಯಿತು. ಅದರಲ್ಲಿ ಅತ್ಯಂತ ಆನಂದದಾಯಕ ಭಾಗವೆಂದರೆ ED ಯ…
ಸಿನಿಮಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಘಟನೆ ಸ್ಫೋಟಕ ಮಾಹಿತಿಗಳು ಒಂದೊಂದಾಗಿ ಬಯಲಾಗುತ್ತಿದೆ. ಇದೀಗ ಭಾರತದ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಿತ್ರಗಳ ಮೂಲಕ ಹೆಸರು ಮಾಡಿರುವ ನಟಿ ಸಾಯಿ ತಮ್ಹಂಕರ್ ಕಾಸ್ಟಿಂಗ್ ಕೌಚ್ ಘಟನೆ ಬಿಚ್ಚಿಟ್ಟಿದ್ದಾರೆ. ಮರಾಠಿ ಚಿತ್ರಗಳಲ್ಲಿ ಭಾರಿ ಜನಪ್ರಿಯತೆ ಪಡೆದಿರುವ ಸಾಯಿ ತಮ್ಹಂಕರ್ ತಮ್ಮ ಸಿನಿ ಕರಿಯರ್ ನಲ್ಲಿ ನಡೆದ ಘಟನೆ ಹೇಳಿದ್ದಾರೆ. ಒಂದು ದಿನ ನನಗೆ ಫೋನ್ ಕರೆ ಬಂದಿತ್ತು. ನಿರ್ದೇಶಕ, ನಿರ್ಮಾಪಕರ ಜೊತೆಗೆ ಗುರುತಿಸಿಕೊಂಡಿದ್ದ ಆ ವ್ಯಕ್ತಿ, ಸಿನಿಮಾ ಕುರಿತು ಮಾತನಾಡಲು ಫೋನ್ ಮಾಡಿದ್ದರು. ಒಂದು ಉತ್ತಮ ಚಿತ್ರವಿದೆ. ನೀವೇ ನಾಯಕಿ ಎಂದು ನಿರ್ಮಾಪಕರು, ನಿರ್ದೇಶಕರು ಒಪ್ಪಿದ್ದಾರೆ. ಈ ಪಾತ್ರ ನೀವು ಮಾಡಿದರೆ ಮಾತ್ರ ತುಂಬಾ ಉತ್ತಮ ಎಂದಿದ್ದಾರೆ. ಈ ಚಿತ್ರಕ್ಕೆ ನೀವು ನಾಯಕಿ, ಆದರೆ ನೀವು ನಿರ್ಮಾಪಕ ಹಾಗೂ ನಿರ್ದೇಶಕರ ಜೊತೆ ಮಲಗಬೇಕು. ನೀವಾಗಿರುವ ಕಾರಣ ನಾನು ಹೀರೋ ಜೊತೆ ಮಲಗಿ ಎಂದು ಹೇಳಲ್ಲ. ಸಾಮಾನ್ಯವಾಗಿ ಹೀರೋ ಜೊತೆಗೂ ಮಲಬೇಕು. ಆದರೆ ನೀವು ನಿರ್ಮಾಪಕ…
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಎಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-1 ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 4 ಅಸಿಸ್ಟೆಂಟ್ ಎಂಜಿನಿಯರ್(E&M)-1 ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-1 ವಿದ್ಯಾರ್ಹತೆ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ, ಬಿಇ/ಬಿ.ಟೆಕ್ ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಅಸಿಸ್ಟೆಂಟ್ ಎಂಜಿನಿಯರ್(E&M)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಬಿಇ/ಬಿ.ಟೆಕ್ ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಬಿ.ಆರ್ಕ್, ಎಂಬಿಎ ವಯೋಮಿತಿ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- 45 ವರ್ಷ ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 40 ವರ್ಷ ಅಸಿಸ್ಟೆಂಟ್ ಎಂಜಿನಿಯರ್(E&M)-40 ವರ್ಷ ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- 40 ವರ್ಷ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- ಮಾಸಿಕ ₹…
ಕನ್ನಡ ನಟ ಗೊಲ್ಡನ್ ಸ್ಟಾರ್ ಗಣೇಶ್ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ವರ್ಷ ಹುಟ್ಟುಹಬ್ಬ ಆಚರಿಸದೆ ಇರಲು ಕಾರಣವನ್ನೂ ಗಣೇಶ್ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ” ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡಿದ್ದಾರೆ. “ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೇ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ್” ಎಂದು ಟ್ವೀಟ್ ಮಾಡಿದ್ದಾರೆ. 2019ರಲ್ಲಿ ನಟ ಗಣೇಶ್ ಅವರು ತನ್ನ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಕೆಲವು ವಾರಗಳ ಹಿಂದೆ ತಂದೆ ಅಗಲಿದ ಕಾರಣ ಹುಟ್ಟುಹಬ್ಬ ಕ್ಯಾನ್ಸಲ್ ಮಾಡಿಕೊಂಡಿದ್ದರು. 2021ರಲ್ಲೂ ಕೊರೊನಾದಿಂದ ಜಗತ್ತು ನೋವಿನಲ್ಲಿರುವ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ನನ್ನ ಆತ್ಮೀಯ…
ಹತ್ಯೆ ಆರೋಪ ದರ್ಶನ್ ಮೇಲೆ ಬಂದ ದಿನದಿಂದ ಚಿತ್ರರಂಗದ ಯಾರೊಬ್ಬರೂ ತುಟಿ ಬಿಚ್ಚಿರಲಿಲ್ಲ. ಇದೀಗ ಒಬ್ಬೊಬ್ಬರೆ ಬಂದು ದರ್ಶನ್ ಪರ ಮಾತನಾಡುತ್ತಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ನಟ ದರ್ಶನ್ ನನ್ನ ಮಗು. ಮಗು ಆ ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನೋವು ನಾನೂ ತಿಂತಿದ್ದೀನಿ. ಆ ಮಗು ಕೂಡ ಅಷ್ಟೆ ನೋವು ತಿಂತಿರುತ್ತೆ ಅಂತ ಹಂಸಲೇಖ ದರ್ಶನ್ ಪರ ಕನಿಕರದ ಮಾತುಗಳನ್ನಾಡಿದ್ದಾರೆ. ದರ್ಶನ್ ನಿಂದ ಕನ್ನಡ ಚಿತ್ರರಂಗ ಎಷ್ಟು ಕೀರ್ತಿ ಪಡೆದಿತ್ತು, ಎಷ್ಟು ಪ್ರಶಸ್ತಿ ಪಡೆದುಕೊಂಡಿತ್ತು. ಮೇಲಿದ್ದವರು ಕೆಳಗೆ ಬೀಳಲೇ ಬೇಕು ಎಂಬಂತಹ ಮಾತಿದೆ. ಆದ್ರೆ ಹಾಗಾಗೋದು ಬೇಡ. ಕೆಳಗೆ ಬಿದ್ದರೂ ಮೇಲೆಳಲು ಸಾಧ್ಯವಿದೆ ಅಂತ ಹಂಸಲೇಖ ಅಭಿಪ್ರಾಯ ಪಟ್ಟಿದ್ದಾರೆ. ಸಿನಿಮಾ ಕಲಾವಿದರು ಸಿಟ್ಟು ಹಾಗೂ ಕೋಪವನ್ನು ಜೀವನದಲ್ಲಿ ರೂಢಿಸಿಕೊಳ್ಳಬಾರದು ಎಂದು ಹಂಸಲೇಖ ಸಲಹೆ ನೀಡಿದ್ದಾರೆ. “ನಾವು ಯೋಚನೆ ಮಾಡಬೇಕು. ಅದರಲ್ಲೂ ನಾನು ಸಿನಿಮಾ ಕಲಾವಿದರು. ನಾನು ಸಿಟ್ಟನ್ನು…
ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಮತ್ತು ಸಂಕೇನಹಳ್ಳಿ ಗ್ರಾಮಗಳಲ್ಲಿ ಕೆಪಿಟಿಸಿಎಲ್ ವತಿಯಿಂದ ನಿರ್ಮಾಣವಾಗಿರುವ 66/11 ಕೆವಿ ವಿದ್ಯುತ್ ಉಪಕೇಂದ್ರಗಳ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮಾತನಾಡಿದರು. ಗುಣಮಟ್ಟದ ವಿದ್ಯುತ್ಛಕ್ತಿ ಸಿಗುತ್ತಿರಲಿಲ್ಲ. ಈ ಭಾಗದ ರೈತರು ವಿದ್ಯುತ್ ಸಮಸ್ಯೆಯ ಕುರಿತು ಅನೇಕ ಸಲ ಮನವರಿಕೆ ಮಾಡಿದ್ದರು. ತುಂಬಾಡಿ ಮತ್ತು ಸಂಕರೆನಹಳ್ಳಿಗಳಲ್ಲಿ ಎರಡು ಕಡೆ ವಿದ್ಯುತ್ ಉಪಸ್ಥಾವರಗಳನ್ನು ನಿರ್ಮಿಸಲಾಗಿದೆ ಎಂದರು. ಪ್ರಪಂಚದ ಭೂಪಟದಲ್ಲಿ ಎರಡನೇ ಅತಿದೊಡ್ಡ ಸೋಲಾರ್ ಪಾರ್ಕ್ ಪಾವಗಡದಲ್ಲಿ ಸ್ಥಾಪನೆಯಾಗಿದೆ. ಮೂರು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಅವರು ಹೇಳಿದರು. 7 ರಿಂದ 8 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಸಮಸ್ಯೆಯಾಗುತ್ತಿತ್ತು. ಹೊರ ರಾಜ್ಯದಿಂದ ಖರೀದಿಸಲಾಗುತ್ತಿತ್ತು. ಪ್ರಸ್ತುತ ಕರ್ನಾಟಕದಲ್ಲಿ 32 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ನಮ್ಮ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಪ್ರತಿ ಬಾರಿಯು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಕುಸುಮ್…