Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಬೀದರ್: ಪ್ರತ್ಯೇಕ ಪ್ರಕರಣಗಳಲ್ಲಿ ಬೀದರ್ ಜಿಲ್ಲಾ ಪೊಲೀಸರು 12 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಪೌಷ್ಠಿಕ ಆಹಾರ, ವಾಹನ ಹಾಗೂ ಪಡಿತರ ಸಾಗಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ, ಭಾಲ್ಕಿ ನಗರದ ನ್ಯೂ ಮಾಸುಮಪಾಷಾ ಕಾಲೋನಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಪಡಿತರ ಅಕ್ಕಿಯನ್ನು ಭಾಲ್ಕಿ ನಗರ ಪೊಲೀಸ್ ಠಾಣೆಯ ರಾಜಕುಮಾರ, ಪಿ.ಎಸ್.ಐ, ಸಿಬ್ಬಂದಿ ವಿಕ್ರಮ, ನಿಂಗಣ್ಣಾ, ದಿಲೀಪ, ರಾಜೇಂದ್ರಕುಮಾರ, ಆಹಾರ ನಿರೀಕ್ಷಕರು ಭಾಲ್ಕಿ ಇವರ ಸಮಕ್ಷಮ ದಾಳಿ ಮಾಡಿ 13,600 ರೂಪಾಯಿ ಮೌಲ್ಯದ 4 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಯಿತು. ಅಸ್ಟೂರ ರಿಂಗ್ ರೋಡ್ ಹತ್ತಿರ ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ವಾಹನದ ಮೇಲೆ ಬೀದರ ನಗರ ಪೊಲೀಸ್ ಠಾಣೆ ಪಿ.ಎಸ್.ಐ ಪ್ರಭಾಕರ ಪಾಟೀಲ್, ಪಿ.ಎಸ್.ಐ ಸಿಬ್ಬಂದಿ ರಮೇಶ, ಗುರುನಾಥ, ಅರುಣಕುಮಾರ, ಆಹಾರ ನಿರೀಕ್ಷಕರು, ಬೀದರ್ ಇವರ ಸಮಕ್ಷಮದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ 26 ಕ್ವಿಂಟಾಲ್ ಅಕ್ಕಿ, ಗೂಡ್ಸ್ ವಾಹನ ವಶಪಡಿಸಿಕೊಳ್ಳಲಾಯಿತು. ಕಮಠಾಣಾ ಈದಗಾ ಹತ್ತಿರ…
ಶ್ರೀನಗರ: ಅಕ್ರಮ ಮಸೀದಿಯನ್ನು ಕೆಡವಲು ಅಧಿಕಾರಿಗಳು ಜೆಸಿಬಿಗಳನ್ನು ತಂದ ಬೆನ್ನಲ್ಲೇ ಪೊಲೀಸರ ಮೇಲೆ ಜನಸಮೂಹ ದಾಳಿ ಮತ್ತು ಕಲ್ಲು ತೂರಾಟ ಜಮ್ಮುವಿನ ಕಥುವಾದಲ್ಲಿ ನಡೆದಿದೆ. ಪೊಲೀಸ್ ಮತ್ತು ಅಧಿಕಾರಿಗಳ ತಂಡವು ಕಥುವಾದಲ್ಲಿನ ಕಲ್ಯಾಣಪುರ ಪಾದ್ರಿಯ ಸರ್ಕಾರಿ ಭೂಮಿಯಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡಗಳನ್ನು ತೆಗೆದುಹಾಕಲು ಹೋದರು. ಈ ಸಂದರ್ಭದಲ್ಲಿ ಜನರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಘಟನೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಹಿಳಾ ಪೊಲೀಸ್ ಸೇರಿದಂತೆ ಕನಿಷ್ಠ ಐವರು ಪೊಲೀಸರು ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ರಾಕೇಶ್ ಮಿನ್ಹಾಸ್ ಮಾತನಾಡಿ, ಅಕ್ರಮ ನಿವಾಸಿಗಳು ತಮಗೆ ಕಳುಹಿಸಲಾದ ಹಲವು ನೋಟಿಸ್ ಗಳನ್ನು ನಿರ್ಲಕ್ಷಿಸಿದ ನಂತರ ಅತಿಕ್ರಮಣ ವಿರೋಧಿ ಅಭಿಯಾನವನ್ನು ಪ್ರಾರಂಭಿಸಲಾಯಿತು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಅಮರನಾಥ ಯಾತ್ರೆ ಶನಿವಾರದಿಂದ ಆರಂಭಗೊಂಡಿದ್ದು, ಮೊದಲ ದಿನವೇ 13 ಸಾವಿರ ಮಂದಿ ಯಾತ್ರೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದಿದ್ದಾರೆ. ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಿರುವ ಅಮರನಾಥ ಯಾತ್ರೆಯಲ್ಲಿ ವಿಶಿಷ್ಟ ಭಕ್ತನೊಬ್ಬನ ಯಾತ್ರೆ ಎಲ್ಲರ ಗಮನ ಸೆಳೆದಿದೆ. ಇವರ ಹೆಸರು ಆನಂದ್ ಸಿಂಗ್. ರಾಜಸ್ಥಾನದ ಮೂಲದ ಇವರು 2002 ರಲ್ಲಿ ಅಪಘಾತವೊಂದರಲ್ಲಿ ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ಆದರೆ ಶಿವನ ಭಕ್ತರಾಗಿರುವ ಇವರು ಈ ಬಾರಿ ಹನ್ನೆರಡನೇ ಬಾರಿಗೆ ಅಮರನಾಥ ಯಾತ್ರೆಗೆ ಸಜ್ಜಾಗಿದ್ದಾರೆ. ಕಳೆದ 15 ವರ್ಷಗಳಲ್ಲಿ ಕೇವಲ ಮೂರು ಬಾರಿ ಇವರು ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡಿಲ್ಲ. ಎರಡೂ ಕಾಲುಗಳು ಇಲ್ಲದಿದ್ರೂ ಸಹ ತಮ್ಮ ಕೈಗಳಿಗೆ ಗವಸು ಧರಿಸಿ ತೆವಳುತ್ತಲೇ ಸಾಗುವ ಇವರ ದೈವ ಭಕ್ತಿ ನೂರಾರು ಜನರ ಕಣ್ಣು ತೇವವಾಗಿಸಿದೆ. ಮೊದಲ ಮೂರು ನಾಲ್ಕು ವರ್ಷಗಳ ಇಡೀ ಪರ್ವತ ಚಾರಣವನ್ನು ಕೈಗಳಲ್ಲೇ ಮಾಡಿದೆ. ಈಗ ಡೋಲಿಯಲ್ಲಿ ಸಾಗುತ್ತಿದ್ದೇನೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಜನರಲ್ ಉಪೇಂದ್ರ ದ್ವಿವೇದಿ ಅವರು ದೇಶದ 30ನೇ ಸೇನಾಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಚೀನಾ, ಪಾಕಿಸ್ತಾನ್ ಗಡಿ ಕಾರ್ಯಾಚರಣೆಯಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಹೊಂದಿರುವ ಅವರು ಎಲ್.ಎ.ಸಿ. ಸೇರಿದಂತೆ ಹಲವೆಡೆ ಭಾರತ ಸವಾಲು ಎದುರಿಸುತ್ತಿರುವ ವೇಳೆ ಅಧಿಕಾರ ವಹಿಸಿಕೊಂಡಿರುವುದು ಮಹತ್ವ ಪಡೆದುಕೊಂಡಿದೆ. ಈ ಮೊದಲು ಅಧಿಕಾರದಲ್ಲಿದ್ದ ಮನೋಜ್ ಪಾಂಡೆ ಅವರು 4 ದಶಕಗಳ ಸೇವೆ ಬಳಿಕ ನಿವೃತ್ತರಾಗಿದ್ದು, ಅವರ ಸ್ಥಾನವನ್ನು ದ್ವಿವೇದಿ ಅಲಂಕರಿಸಿದ್ದಾರೆ. ಫೆ.19ರಿಂದ ಅವರು ಸೇನೆಯ ಉಪ ಮುಖ್ಯಸ್ಥರಾಗಿದ್ದರು. ಅದಕ್ಕೂ ಮುನ್ನ 2 ವರ್ಷ ಕಾಲ ಉತ್ತರ ಕಮಾಂಡ್ ನ ಮುಖ್ಯಸ್ಥರಾಗಿದ್ದರು. ಇನ್ನು ನೌಕಾಪಡೆಯ ಹಾಲಿ ಮುಖ್ಯಸ್ಥ ಅಡ್ಡಿರಲ್ ದಿನೇಶ್ ತ್ರಿಪಾಠಿ ಅವರು ಉಪೇಂದ್ರ ದ್ವಿವೇದಿ ಅವರ ಕ್ಲಾಸ್ಮೇಟ್ ಆಗಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. 1970ರಲ್ಲಿ ಇಬ್ಬರೂ ಮಧ್ಯಪ್ರದೇಶದ ರೇವಾದ ಸೈನಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…
ಕೇರಳ : ನೆರೆಯ ರಾಜ್ಯ ಕೇರಳದಲ್ಲಿ ಕಳೆದ ಆರು ತಿಂಗಳಲ್ಲಿ 27 ಮಂದಿ ಕಾಮಾಲೆಗೆ ಬಲಿಯಾಗಿದ್ದಾರೆ. ಜೂನ್ ತಿಂಗಳೊಂದರಲ್ಲೇ ಐದು ಸಾವು ಸಂಭವಿಸಿದೆ. ಬಾಧಿತರಾದವರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ. ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಈ ತಿಂಗಳೊಂದರಲ್ಲೇ 690 ಮಂದಿಗೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ಸೋಂಕಿತರಲ್ಲಿ ಹೆಚ್ಚಿನವರು ಉತ್ತರದ ಜಿಲ್ಲೆಗಳಿಂದ ಬಂದವರಾಗಿದ್ದಾರೆ. ಜ್ವರ ಪೀಡಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಇದರ ಜೊತೆಗೆ ಡೆಂಗ್ಯೂ ಮತ್ತು ರೇಬಿಸ್ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಕೇರಳ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮಲಪ್ಪುರಂ ವಲ್ಲಿಕುಂ ಪ್ರದೇಶದಲ್ಲಿ ಹಳದಿ ಜ್ವರ ಹರಡುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಸಿಡಿಲಿನಿಂದಾಗಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಮನೆಯಿಡೀ ಹೊತ್ತಿ ಉರಿದಿದೆ. ಹೊನ್ನಕಿರಣಗಿ ಗ್ರಾಮದ ರಾಜ್ಕುಮಾರ್ ನಿಂಗಯ್ಯ ಕೋಣಿನ್ ಎಂಬುವವರ ಮನೆಗೆ ಸಿಡಿಲಿನಿಂದಾಗಿ ಬೆಂಕಿ ಬಿದ್ದಿದೆ. ಪರಿಣಾಮವಾಗಿ ಇಡೀ ಮನೆ ಸುಟ್ಟುಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇತರ ಮನೆಗಳಿಗೂ ಬೆಂಕಿ ಹರಡುವ ಅಪಾಯವಿತ್ತು. ಆದ್ರೆ ಅದನ್ನು ತಡೆಯಲಾಗಿದೆ. ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಅವರು ಸೇಫಾಗಿದ್ದಾರೆ.. ಆದ್ರೆ ಮನೆಯಲ್ಲಿ ಎಲ್ಲಾ ವಸ್ತುಗಳೂ ಬೆಂಕಿಗೆ ಆಹುತಿಯಾಗಿವೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಡೆಂಘಿ ಹಾವಳಿ ಹೆಚ್ಚಾಗಿದ್ದು, ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸುಮಾರು 2,457 ಮಂದಿಗೆ ಡೆಂಘೀ ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ಡೆಂಘಿ ಹರಡುವಿಕೆ ಹೆಚ್ಚಾಗಿದ್ದು, ಅನಾರೋಗ್ಯದಿಂದ ನೂರಾರು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಾಹಿತಿ ಪ್ರಕಾರ ಬೆಂಗಳೂರು ನಗರವೊಂದರಲ್ಲೇ ಪ್ರತಿ ಎರಡು ಗಂಟೆಗೆ ಇಬ್ಬರಲ್ಲಿ ಡೆಂಘಿ ಲಕ್ಷಣಗಳು ಕಂಡುಬರುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲೂ ಇದರ ಹಾವಳಿ ಹೆಚ್ಚಾಗುತ್ತಿದೆ. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ಕೊರತೆ ಇರುವುದರಿಂದ ಪರದಾಟ ಹೆಚ್ಚಾಗುತ್ತಿದೆ. ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋಗಲಾಗದೇ ಒದ್ದಾಡುತ್ತಿದ್ದಾರೆ. ಬೆಂಗಳೂರಿನ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ದಾಸ್ತಾನಿಲ್ಲ. ನಗರದ ಆಸ್ಪತ್ರೆಗಳಲ್ಲಿ ದಿನಕ್ಕೆ ಈಗ ಕೇವಲ 200 ರಿಂದ 250 ಟೆಸ್ಟ್ ಗಳನ್ನಷ್ಟೇ ಮಾಡಲಾಗುತ್ತಿದೆ. ಇದೀಗ 30 ಸಾವಿರ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಕೆಎಸ್ ಎಂಸಿಗೆ ಪಾಲಿಕೆ ಬೇಡಿಕೆ ಇಟ್ಟಿದೆ. ಇನ್ನು ಮೈಸೂರು, ಹಾಸನ, ಗದಗ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡಾ ಡೆಂಘೀ ಹಾವಳಿ ಜಾಸ್ತಿಯಾಗಿದೆ. ನಮ್ಮತುಮಕೂರಿನ ಕ್ಷಣ…
ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಹಾಗೂ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ‘ಸಿ ಮತ್ತು ಡಿ’ ದರ್ಜೆಯ ಹುದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಕರವೇ ಆಗ್ರಹಿಸಿದೆ. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು. 15 ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು ಎಂದು…
ಬೆಂಗಳೂರು: ಅಪಹರಣ ಪ್ರಕರಂಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಯೊಂದರ ಅಧ್ಯಕ್ಷ ಸೇರಿದಂತೆ ಆರು ಜನರ ವಿರುದ್ಧ ಇಲ್ಲಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಮಂಜುನಾಥ್ ಎಂಬಾತನನ್ನು ಅಪಹರಿಸಿದ್ದ ಆರೋಪದಡಿ ಕನ್ನಡ ಪರ ಸಂಘಟನೆಯೊಂದರ ಅಧ್ಯಕ್ಷ ಪ್ರಕಾಶ್, ಮಂಜುಳಾ ಎಂಬಾಕೆ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್, ಆರೋಪಿ ಮಂಜುಳಾ ಬಳಿ 8 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ವಾಪಸ್ ನೀಡಲಾಗದಿದ್ದಾಗ ಮಂಜುನಾಥ್ ವಿರುದ್ಧ ಮಂಜುಳಾ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಎ.4ರಂದು ಕೊರಿಯರ್ ಬಂದಿರುವುದಾಗಿ ಮಂಜುನಾಥ್ ಗೆ ಕರೆ ಮಾಡಿದ್ದ ಆರೋಪಿಗಳು, ಶಂಕರಮಠ ರಸ್ತೆಯ ಬಳಿ ಕರೆಸಿಕೊಂಡಿದ್ದಾರೆ. ಈ ವೇಳೆ ಮಂಜುಳಾ ಸೇರಿದಂತೆ ಕೆಲ ಮಹಿಳೆಯರು ಕಾರಿನಲ್ಲಿ ಬಂದು ಮಂಜುನಾಥ್ ಅವರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ಪ್ರಕಾಶ್ ಮತ್ತು ಆತನ ಚಾಲಕ ವೆಂಕಟಾಚಲಪತಿ, ಮಹಿಳೆಯರೊಂದಿಗೆ ಸೇರಿ ತನ್ನ ಕಚೇರಿಗೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಹಣ,…
ಬೆಂಗಳೂರು: ಯುವಕನನ್ನು ಅಪಹರಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಲ್ಲಿನ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಜೂ.16ರಂದು ಅಜ್ಮೀರಾ ರಾಜು ಎಂಬಾತನನ್ನು ಕಾರಿನಲ್ಲಿ ತೆಲಂಗಾಣಕ್ಕೆ ಕರೆದೊಯ್ದು ಹಲ್ಲೆಗೈದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಕೆಲಸ ಮಾಡಿಕೊಂಡಿದ್ದ ಅಜ್ಮೀರಾ ರಾಜು ಎಂಬಾತ, ಐಷಾರಾಮಿ ಕಾರು, ವಿದೇಶ ಪ್ರವಾಸ, ಕ್ರಿಕೆಟರ್ಸ್ ಜೊತೆ ಫೋಟೋಸ್ ಎಂದೆಲ್ಲಾ ವಿಲಾಸಿ ಜೀವನ ಶೈಲಿ ಹೊಂದಿದ್ದ ಎಂದು ತಿಳಿದುಬಂದಿದೆ. ಆರೇಳು ತಿಂಗಳುಗಳಿಂದ ಬೆಂಗಳೂರಿನ ಎಂ.ಜಿ.ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯನಾಗಿದ್ದ ಅಜ್ಮೀರಾ ರಾಜು ಜೀವನ ಶೈಲಿ ಗಮನಿಸಿದ್ದ ಆರೋಪಿಗಳು ಅಪಹರಿಸಲು ಸಂಚು ರೂಪಿಸಿದ್ದರು. ಜೂ.16ರಂದು ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆಂದು ತೆರಳಿದ್ದ ಅಜ್ಮೀರಾ ರಾಜುನನ್ನು ಆರೋಪಿಗಳು ಕಾರಿನಲ್ಲಿ ಹಿಂಬಾಲಿಸಿದ್ದರು. ಇದನ್ನು ಗಮನಿಸಿದ್ದ ಅಜ್ಮೀರಾ ರಾಜು, ದ್ವಿಚಕ್ರ ವಾಹನ ನಿಲ್ಲಿಸಿ ಆರೋಪಿಗಳ ಕಾರಿನ ಬಳಿ ಹೋದಾಗ ಆತನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿಕೊಂಡು ತೆರಳಿದ್ದರು. ತೆಲಂಗಾಣಕ್ಕೆ ಕರೆದೊಯ್ದು ಫಾರ್ಮ್ ಹೌಸ್…