Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಜುಲೈ ತಿಂಗಳು ಆರಂಭವಾಗಿದೆ. ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ನವೀಕರಿಸಿವೆ. ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯನ್ನು 30 ರೂ. ಇಳಿಕೆ ಮಾಡಿದೆ. ಸತತ ಮೂರನೇ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ದೇಶೀಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಸಿಲಿಂಡರ್ಗಳ ಹೊಸ ದರಗಳು ಇಂದಿನಿಂದ ಜಾರಿಗೆ ಬಂದಿವೆ. ಇಂದಿನಿಂದ ವಾಣಿಜ್ಯ ಸಿಲಿಂಡರ್ಗಳು ಹೊಸ ದರದಲ್ಲಿ ಲಭ್ಯವಾಗಲಿದೆ. ವಾಣಿಜ್ಯ ಸಿಲಿಂಡರ್ ನ ಇತ್ತೀಚಿನ ದರಗಳು: * ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1676 ರೂ. ಇಂದಿನಿಂದ ಅವುಗಳ ಬೆಲೆ 1646 ರೂ. * ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1756 ರೂ.. * ಮುಂಬೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1598 ರೂ. * ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1840.50 ರೂ. ಇಂದಿನಿಂದ ಅವುಗಳ ಬೆಲೆ 1809.50 ರೂ. ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ದರ್ಶನ್ ನನ್ನ ಮುಂದೆಯೇ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ಪವಿತ್ರಾಗೌಡ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದು, ಕೇಸ್ ಗೆ ಸಂಬಂಧಿಸಿಸಿದಂತೆ ಪ್ರಮುಖ ವಿಚಾರಗಳನ್ನು ತನಿಖೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ತಿಳಿಸಿದೆ. ಸದ್ಯ 17 ಜನ ಆರೋಪಿಗಳನ್ನು ಈ ಕೇಸಿನಲ್ಲಿ ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿರಿಸಲಾಗಿದೆ. ಪವಿತ್ರಾ ಗೌಡ ಅವರು ಒಂದು ವಾರದಲ್ಲೇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಈ ಮೂಲಕ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಕೂಡಿಹಾಕಿದ್ದು, ನಂತರ ನಾನು ಒಂದು ಏಟು ಚಪ್ಪಲಿಯಲ್ಲಿ ಹೊಡೆದಿದ್ದು, ಅನಂತರ ನನ್ನ ಎದುರಿನಲ್ಲಿಯೇ ರೇಣುಕಾಸ್ವಾಮಿಯ ಮೇಲೆ ನಟ ದರ್ಶನ್ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಮೂಲಕ ನಟ ದರ್ಶನ್ ವಿರುದ್ಧವಾಗಿಯೇ ನಟಿ ಪವಿತ್ರಾ ಗೌಡ ಹೇಳಿಕೆ ನೀಡಿದ್ದಾಳೆ. ದರ್ಶನ್ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿದ್ದು ನಿಜ, ನಾನು ಶೆಡ್…
ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಏನು ಎನ್ನುವುದಕ್ಕೆ ಬಿಜೆಪಿಯ ಮಾತೃ ಸಂಸ್ಥೆ ಆರ್ ಎಸ್ ಎಸ್ ಉತ್ತರ ನೀಡಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣವಂತೆ ಅಲ್ಲದೇ ಹಲವು ಕಾರಣಗಳನ್ನು ಆರ್ ಎಸ್ ಎಸ್ ನೀಡಿದೆ. * ದಲಿತ ಮತ್ತು ಹಿಂದುಳಿದ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್–ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು. * ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯುವಕರಲ್ಲಿ ಹೆಚ್ಚುತ್ತಿರುವ ಕೋಪವೇ ಬಿಜೆಪಿಯ ಹಿನ್ನಡೆಗೆ ಮತ್ತೊಂದು ಕಾರಣ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಜೆಪಿಯ ಚುನಾವಣಾ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮೂರು ದಿನಗಳ ಕಾಲ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀನಾಯ ಸೋಲಿನಿಂದ ಪಾಠ ಕಲಿತ ಬಿಜೆಪಿ ಮಾತೃ ಸಂಸ್ಥೆಯಾದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ…
ತುಮಕೂರು: ಸರ್ಕಾರವೇ ನೇರವಾಗಿ ಜನರ ಬಳಿಗೆ ಬಂದು ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಜನ ಸ್ಪಂದನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಪಟೂರು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತಿಪಟೂರು ತಾಲ್ಲೂಕು ನೊಣವಿನಕೆರೆ ಗ್ರಾಮದ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ತಳಮಟ್ಟದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ತಿಳಿಸುವ ಮೂಲಕ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ತಾಲ್ಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪವತಿ ಖಾತೆ, ಪಹಣಿ, ನಕಾಶೆ ರಸ್ತೆ, ವಾಡಿಕೆ ರಸ್ತೆ, ಜಮೀನು ಒತ್ತುವರಿಯಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅವುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು,…
ತುಮಕೂರು: ಅನ್ನ, ಅಕ್ಷರ, ವಸತಿ ಉಚಿತವಾಗಿ ಕಲ್ಪಿಸುವ ಮೂಲಕ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ತ್ರಿವಿಧ ದಾಸೋಹದ ಕ್ಷೇತ್ರವಾಗಿರುವ ಸಿದ್ದಗಂಗಾ ಮಠದಲ್ಲಿರುವ ಸ್ಮೃತಿ ವನ ಪ್ರಸ್ತುತ ಪ್ರವಾಸಿಗರು ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಭಕ್ತ ಸಮೂಹದ ಕೇಂದ್ರಬಿಂದುವಾಗಿ ಗೋಚರಿಸುತ್ತಿದೆ. ಹೌದು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆದರ್ಶ ಜೀವನದ ಕುರಿತ ಸಂಪೂರ್ಣ ಚರಿತ್ರೆಯನ್ನು ಮನಮುಟ್ಟುವಂತೆ ಶಿಲ್ಪಕಲಾ ಕೃತಿಗಳ ಮೂಲಕ ಅನಾವರಣಗೊಳಿಸಲಾಗಿದೆ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟಿನಿಂದ ಹಿಡಿದು ಸಮಾಜದ ಅನನ್ಯ ಸೇವೆ ಸಲ್ಲಿಸುವಂತಹ ಅನೇಕ ಸಂಗತಿಗಳನ್ನು ಕಲಾಕೃತಿಗಳ ಮೂಲಕ ಕಟ್ಟಿಕೊಡಲಾಗಿದೆ. ಶ್ರೀ ಶಿವಕುಮಾರ ಸ್ವಾಮೀಜಿಯವರ ಬಾಲ್ಯಾವಸ್ಥೆ, ಪ್ರೌಢಾವಸ್ಥೆ, ದೀಕ್ಷೆ ಪಡೆದ ಕ್ಷಣ ಹಾಗೂ ಸಿದ್ದಗಂಗಾ ಮಠಕ್ಕೆ ಸ್ವಾಮೀಜಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣಗಳು ವ್ಯವಸ್ಥಿತವಾಗಿ ಕಲಾಕೃತಿಗಳ ಮೂಲಕ ಮೂಡಿ ಬಂದಿದೆ. ಶ್ರೀ ಶಿವಕುಮಾರ ಸ್ವಾಮೀಜಿಯವರು ಮಠದಲ್ಲಿ ಪ್ರಾರಂಭದ ವೇಳೆ ಸೌದೆಗಳನ್ನು ಸ್ವತಃ ಒಡೆದು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಾಯಕದ ಮಹತ್ವವನ್ನು ಕೂಡ ಸಾರಿರುವುದನ್ನು ಇಲ್ಲಿನ ಕಲಾಕೃತಿಗಳಲ್ಲಿ ನಾವು ಕಾಣಬಹುದಾಗಿದೆ. ಇದಲ್ಲದೆ ಅಂದಿನ ರಾಷ್ಟ್ರಪತಿ…
ಯಾವುದೇ ಮಾಹಿತಿ ಹಾಗೂ ಮನರಂಜನೆಗಾಗಿ ಮೊದಲು ಯೂಟ್ಯೂಬ್ ಅನ್ನು ಓಪನ್ ಮಾಡಲಾಗುತ್ತೆವೆ. ಹ್ಯಾಕರ್ಸ್ಗಳು ವಿಡಿಯೋ ಮೂಲಕ ನಿಮ್ಮನ್ನು ಎಂತಹ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಗೊತ್ತಾ!? ಹ್ಯಾಕರ್ಸ್ಗಳ ಕುತಂತ್ರ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಹ್ಯಾಕರ್ಸ್ ಯೂಟ್ಯೂಬ್ ಬಳಕೆದಾರರ ಪಾಸ್ ವರ್ಡ್ ಗಳು, ಕ್ರೆಡಿಟ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಇನ್ನಿತರೆ ಗೌಪ್ಯ ಡೇಟಾವನ್ನು ಈ ಮೂಲಕ ಸುಲಭವಾಗಿ ಕದಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಎಐ ಆಧಾರಿತ ವಿಡಿಯೋ ಮೂಲಕ ಖಾಸಗಿ ಮಾಹಿತಿ ಕದಿಯುವ ವಿಡಾರ್, ರೆಡ್ಲೈನ್ ಹಾಗೂ ರಕೂನ್ನಂತಹ ಮಾಲ್ವೇರ್ಗಳಿಗೆ ಈ ವಿಡಿಯೋಗಳು ಲಿಂಕ್ ಆಗಿದ್ದು, ಈ ಪ್ರಕ್ರಿಯೆ ನವೆಂಬರ್ 2022 ರಿಂದ, ತಿಂಗಳಿನಿಂದ ತಿಂಗಳಿಗೆ 200-300% ಏರಿಕೆಯಾಗಿದೆ ಎಂದು ಕ್ಲೌಡ್ಸೆಕ್ ಎಚ್ಚರಿಕೆ ನೀಡಿದೆ. ಫೋಟೋಶಾಪ್, ಪ್ರೀಮಿಯರ್ ಪ್ರೊ, ಆಟೋಡೆಸ್ಕ್ 3ds ಮ್ಯಾಕ್ಸ್ ಸೇರಿದಂತೆ ಇನ್ನಿತರೆ ಕ್ರ್ಯಾಕ್ಡ್ ವರ್ಸನ್ ಅನ್ನು ಡೌನ್ಲೋಡ್ ಮಾಡುವುದು ಹೇಗೆ ಎಂದು ಹೇಳಿಕೊಡುವ ವಿಡಿಯೋಗಳು ಇವಾಗಿರಲಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
‘ನಾನು ಎಲ್ಲೇ ಹೋದರು ಜನರು ನನ್ನ ಮದುವೆ ಯಾವಾಗ ಮದುವೆ ಯಾವಾಗ ಎಂದು ಕೇಳುತ್ತಲೇ ಇರುತ್ತಾರೆ. ಮದುವೆ ಮಾಡಿಕೊಳ್ಳುವುದಕ್ಕೆ ತುಂಬಾ ಸಮಯವಿದೆ. ನಾನು ಮೊದಲು ಕೆಲಸ ಮಾಡಬೇಕು. ಮದುವೆ ಅನ್ನೋದು ಒಂದು ಸುಂದರ ಅನುಭವ ಸುಮ್ಮನೆ ಯಾರ್ಯಾರನ್ನೋ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ. ದಯವಿಟ್ಟು ನನ್ನ ಮದುವೆ ಬಗ್ಗೆ ಮಾತ್ರ ಕೇಳಬೇಡಿ. ಎಷ್ಟು ಸಲ ಹೇಳಿದ್ದರೂ ಅಭಿಮಾನಿಗಳು ಅದೇ ಹೇಳುತ್ತಾರೆ’ ‘ಜೀವನದಲ್ಲಿ ನನಗೆ ಇರುವುದು ಒಂದೇ ಭಯ ನನ್ನನ್ನು ಯಾರಾದ್ರೂ ಬಿಟ್ಟು ಹೋಗುತ್ತಾರೆ ಅಂತ. ನನಗೆ ಆ ದುಃಖವನ್ನು ತಡೆದುಕೊಳ್ಳುವ ಶಕ್ತಿ ಖಂಡಿತ ಇಲ್ಲ. ದಯವಿಟ್ಟು ಇಂತಹ ವಿಚಾರಗಳನ್ನು ಕೇಳಬೇಡಿ’ ಎನ್ನುತ್ತಲೇ ಅನು ಭಾವುಕರಾಗಿದ್ದಾರೆ. ‘ಮದುವೆ ಆಗಬೇಕು ಎಂದು ಮದುವೆ ಬಗ್ಗೆ ನನ್ನ ತಾಯಿ ಪದೇ ಪದೇ ಹೇಳುತ್ತಲೇ ಇರುತ್ತಾರೆ. ಮನೆಯಲ್ಲಿ ಏನೇ ನಡೆದರೂ ಮೊದಲು ನೀನು ಮದುವೆ ಆಗು ಎನ್ನುತ್ತಾರೆ. ನೀನು ಮದುವೆ ಮಾಡಿಕೋ ಎಲ್ಲಾ ಸರಿ ಹೋಗುತ್ತೆ ಎನ್ನುತ್ತಾರೆ. ಹೀಗೆಲ್ಲಾ ಹೇಳ್ತಾರೆ ಅಂತ ಮದುವೆ ಮಾಡಿಕೊಳ್ಳಲು ಆಗಲ್ಲ. ಇಲ್ಲಿ ಜನರು…
ಸರ್ಕಾರವು NEET ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಕೆಲವು ತರಬೇತಿ ಕಾರ್ಯಕ್ರಮಗಳನ್ನು (ಕೋಚಿಂಗ್ ಸೆಂಟರ್ಗಳು) ಒದಗಿಸುತ್ತಿದೆ. ಇವು ಸಾಮಾನ್ಯವಾಗಿ ಉಚಿತ ಅಥವಾ ಕಡಿಮೆ ಶುಲ್ಕದಲ್ಲಿ ಲಭ್ಯವಿರುತ್ತವೆ. ಹೆಚ್ಚಿನ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ಈ ತರಬೇತಿಗಳನ್ನು ಆಯೋಜಿಸುತ್ತವೆ. ಇಲ್ಲಿವೆ ಕೆಲವು ಪ್ರಮುಖ ಸ್ಕೀಮುಗಳು ಮತ್ತು ಕಾರ್ಯಕ್ರಮಗಳು: 1. ಸಂತ್ಯಾಕ್ಷರ ತರಬೇತಿ (Super 30): ಅನೇಕ ರಾಜ್ಯ ಸರ್ಕಾರಗಳು “Super 30” ಮಾದರಿಯನ್ನು ಅನುಸರಿಸಿ, ನಿರ್ದಿಷ್ಟ ಸಂಖ್ಯೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ NEET ಕೋಚಿಂಗ್ ತರಬೇತಿಗಳನ್ನು ಒದಗಿಸುತ್ತವೆ. 2. ಆರ್ ಟಿ ಈ. (RTE)ಸೇವೆಗಳು: ಕೆಲ ರಾಜ್ಯಗಳು RTE (Right to Education) ಆಧಾರದ ಮೇಲೆ ಆರ್ಥಿಕವಾಗಿ ಹಿಂದುಳಿದ ಮತ್ತು ಎಸ್ಸಿ/ಎಸ್ಟಿ/ಓಬಿಸಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಅಥವಾ ಕಡಿಮೆ ಶುಲ್ಕದಲ್ಲಿ ತರಬೇತಿಗಳನ್ನು ಒದಗಿಸುತ್ತವೆ. 3. ನವೋದಯ ವಿದ್ಯಾಲಯ ಸಮಿತಿ (NVS): ನವೋದಯ ವಿದ್ಯಾಲಯ ಸಮಿತಿಯು NEET ತಯಾರಿಗಾಗಿ ವಿಶೇಷ ತರಬೇತಿಗಳನ್ನು ತನ್ನ ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. 4.…
ತುಟಿಗಳನ್ನು ಹೆಚ್ಚು ಆಕರ್ಷಕವಾಗಿಸಲು ಲಿಪ್ ಸ್ಟಿಕ್ ಬಳಸುತ್ತಿದ್ದಾರೆ.. ಅದರಿಂದ ಭವಿಷ್ಯದಲ್ಲಿ ದೊಡ್ಡ ಅಪಾಯವನ್ನು ಎದುರಿಸಲಿದ್ದಾರೆ. ಲಿಪ್ ಸ್ಟಿಕ್ನಿಂದ ಹಲವು ಆರೋಗ್ಯ ಸಮಸ್ಯೆಗಳೂ ಬರಬಹುದು ಎನ್ನುತ್ತಾರೆ ತಜ್ಞರು. ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫಾರ್ಮೇಶನ್ನ ವೆಬ್ಸೈಟ್ನಲ್ಲಿನ ಅಧ್ಯಯನದ ಪ್ರಕಾರ, ಲಿಪ್ಸ್ಟಿಕ್ನಲ್ಲಿ ಬಣ್ಣವನ್ನು ತಯಾರಿಸಲು ಮ್ಯಾಂಗನೀಸ್, ಸೀಸ ಮತ್ತು ಕ್ಯಾಡ್ಮಿಯಂನಂತಹ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇವುಗಳನ್ನು ಒಳಗೊಂಡಿರುವ ಲಿಪ್ ಸ್ಟಿಕ್ ಬಳಸುವುದರಿಂದ ದೇಹದಲ್ಲಿ ಅಲರ್ಜಿ ಉಂಟಾಗಬಹುದು. ಲಿಪ್ಸ್ಟಿಕ್ ತಯಾರಿಕೆಯಲ್ಲಿ ಬಳಸುವ ಸೀಸವು ಗರ್ಭಧಾರಣೆಗೆ ಅಪಾಯಕಾರಿ. ಇದು ಗರ್ಭಿಣಿ ಮಹಿಳೆ ಮತ್ತು ಅವಳ ಭ್ರೂಣಕ್ಕೆ ಹಾನಿ ಮಾಡುತ್ತದೆ. ಲಿಪ್ ಸ್ಟಿಕ್ ತುಟಿಗಳ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತದೆ ಮತ್ತು ರಕ್ತದಲ್ಲಿ ಸೀಸದ ಮಟ್ಟವನ್ನು ಹೆಚ್ಚಿಸುತ್ತದೆ. ಲಿಪ್ ಸ್ಟಿಕ್ ನಲ್ಲಿರುವ ರಾಸಾಯನಿಕಗಳು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತವೆ. ಲಿಪ್ ಸ್ಟಿಕ್ ಗೆ ಸೇರಿಸುವ ಪೆಟ್ರೋಕೆಮಿಕಲ್ ಬುದ್ಧಿವಂತಿಕೆ, ಸಂತಾನೋತ್ಪತ್ತಿ ವ್ಯವಸ್ಥೆ ಮತ್ತು ದೇಹದ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಲಿಪ್ ಸ್ಟಿಕ್ ಗಳನ್ನು ತುಟಿಗೆ ಹಚ್ಚುವುದರಿಂದ ತುಟಿಗಳು ಕಪ್ಪಾಗುತ್ತದೆಯಂತೆ. ಯಾಕೆಂದರೆ ಅದರಲ್ಲಿರುವ…
ಲೋಕಸಭಾ ಚುನಾವಣೆಯ ಗೆಲುವಿನ ನಂತರ ಮೊದಲ ಬಾರಿಗೆ ‘ಮನ್ ಕಿ ಬಾತ್’ ಕಾರ್ಯಕ್ರಮದ 111 ನೇ ಕಂತಿನಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವೆಲ್ಲರೂ ಫೆಬ್ರವರಿಯಿಂದ ಕಾಯುತ್ತಿದ್ದ ದಿನ ಇಂದು ಬಂದಿದೆ. ‘ಮನ್ ಕಿ ಬಾತ್’ ಮೂಲಕ ನಾನು ಮತ್ತೊಮ್ಮೆ ನಿಮ್ಮ ನಡುವೆ, ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಇಂದಿನಿಂದ ಮತ್ತೊಮ್ಮೆ, ತಮ್ಮ ಕೆಲಸದ ಮೂಲಕ ಸಮಾಜ ಮತ್ತು ದೇಶದಲ್ಲಿ ಬದಲಾವಣೆಗಳನ್ನು ತರುತ್ತಿರುವ ಅಂತಹ ದೇಶವಾಸಿಗಳ ಬಗ್ಗೆ ನಾವು ‘ಮನ್ ಕಿ ಬಾತ್’ ನಲ್ಲಿ ಚರ್ಚಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು. ನಾವು ನಮ್ಮ ಶ್ರೀಮಂತ ಸಂಸ್ಕೃತಿ, ಭವ್ಯ ಇತಿಹಾಸ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಪ್ರಯತ್ನಗಳ ಬಗ್ಗೆ ಚರ್ಚಿಸುತ್ತೇವೆ. ಸ್ನೇಹಿತರೇ, ಫೆಬ್ರವರಿಯಿಂದ ಇಲ್ಲಿಯವರೆಗೆ, ತಿಂಗಳ ಕೊನೆಯ ಭಾನುವಾರ ಸಮೀಪಿಸಿದಾಗಲೆಲ್ಲಾ, ನಿಮ್ಮೊಂದಿಗೆ ಈ ಸಂವಹನದ ಕೊರತೆಯನ್ನು ನಾನು ಅನುಭವಿಸಿದೆ.ಆದರೆ ಈ ತಿಂಗಳುಗಳಲ್ಲಿ ನೀವು ನನಗೆ ಲಕ್ಷಾಂತರ ಸಂದೇಶಗಳನ್ನು…