Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ದರ್ಶನ್ ಖೈದಿ ನಂಬರ್ 6106 ಸ್ಟಿಕ್ಕರ್ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ನೀಡಿದ್ದಾರೆ. ದರ್ಶನ್ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್ ಅನ್ನೇ ಸ್ಟಿಕರ್ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ. ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್ ಪ್ಲೇಟ್ ಇರುವ ಕಡೆ ಸ್ಟಿಕ್ಕರ್ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
14 ವರ್ಷಗಳ ನಂತರ ಭಾರತ ತಂಡಕ್ಕೆ ಮತ್ತೊಮ್ಮೆ ಐಸಿಸಿ ಟಿ20 ವಿಶ್ವಕಪ್ ಸಿಕ್ಕಂತಾಗಿದೆ. ಹಾಗಾದ್ರೆ ಈಗ ಕಪ್ ಗೆದ್ದಿರುವ ಭಾರತ ತಂಡಕ್ಕೆ ಸಿಕ್ಕ ಬಹುಮಾನದ ಹಣ ಎಷ್ಟು ಕೋಟಿ? ಬಹುಮಾನದ ಹಣದಲ್ಲಿ ಯಾವ ಯಾವ ಆಟಗಾರರಿಗೆ ಎಷ್ಟು ಕೋಟಿ ರೂಪಾಯಿ ಹಣ ಹಂಚಿಕೆ ಆಗಲಿದೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ. ಭಾರತ ತಂಡಕ್ಕೆ ಒಟ್ಟಾರೆ 20 ಕೋಟಿ 40 ಲಕ್ಷ ರೂಪಾಯಿಗು ಹೆಚ್ಚು ಹಣ ಬಹುಮಾನದ ರೂಪದಲ್ಲಿ ಸಿಕ್ಕಿದೆ. ಫೈನಲ್ ಪಂದ್ಯದಲ್ಲಿ ಸೋತ ದಕ್ಷಿಣ ಆಫ್ರಿಕಾಗೆ 10 ಕೋಟಿ 68 ಲಕ್ಷ ರೂಪಾಯಿ ಹಣ ಸಿಕ್ಕಿದೆ. ಇನ್ನು ಭಾರತ ತಂಡಕ್ಕೆ ಈಗ ಸಿಕ್ಕಿರುವ 20 ಕೋಟಿ 42 ಲಕ್ಷ ರೂಪಾಯಿ ಹಣದಲ್ಲಿ ತಂಡದ ಪ್ರತಿಯೊಬ್ಬ ಆಟಗಾರ, ಕೋಚ್, ಸಹಾಯಕ ಸಿಬ್ಬಂದಿ ಸೇರಿದಂತೆ ತಂಡದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಇಷ್ಟು ಅಂತಾ ಹಣ ಸಿಗಲಿದೆ. ಇದು ಕೇವಲ ಆ ತಂಡಕ್ಕೆ ಸಿಗುವ ಹಣವಾಗಿದ್ದರೆ, ಮ್ಯಾನ್ ಆಫ್ ದಿ ಸೀರಿಸ್, ಅತಿಹೆಚ್ಚು ವಿಕೆಟ್ ತೆಗೆದ…
ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಸೇರ್ಪಡೆಗೊಂಡಿರುವುರಿಂದ ತುಳುನಾಡಿಗೆ ಬರುವ ಪ್ರವಾಸಿಗರಿಗೆ ತುಳುವರೊಂದಿಗೆ ಮಾತನಾಡಲು ಅನುಕೂಲವಾಗಲಿದೆ. ಗೂಗಲ್ ಟ್ರಾನ್ಸ್ಲೇಟರ್ ಪಟ್ಟಿಯಲ್ಲಿ ತುಳು ಭಾಷೆಗೂ ಮಾನ್ಯತೆ ಲಭಿಸಿದ್ದು, ಇದು ತುಳು ಭಾಷಾ ಪ್ರೇಮಿಗಳಲ್ಲಿ ಸಂತಸವನ್ನು ತಂದಿದೆ. ಇನ್ಮುಂದೆ ತುಳು ಭಾಷಿಗರು ಇಂಗ್ಲಿಷ್ ಅಥವಾ ಬೇರೆ ಯಾವುದೇ ಪದಗಳನ್ನು ಗೂಗಲ್ ಅನುವಾದದಲ್ಲಿ ನೇರವಾಗಿ ತುಳಿವಿನಲ್ಲಿಯೇ ಅರ್ಥ ಮಾಡಿಕೊಳ್ಳಬಹುದು. ಇದಲ್ಲದೆ, ಇದು ಅನ್ಯ ಭಾಷಿಕರಿಗೂ ತುಳು ಪದಗಳನ್ನು (ಭಾಷೆ) ಅರ್ಥ ಮಾಡಿಕೊಳ್ಳುವುದಕ್ಕೆ ಅನುಕೂಲವಾಗಿದೆ. ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ ಸಂದರ್ಭಗಳಲ್ಲಿ ಅಲ್ಲೇ ಇರುವ ಫೀಡ್ ಬ್ಯಾಕ್ ಕಾಲಮ್ ನಲ್ಲಿ ಸರಿಯಾದ ಶಬ್ದವನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿದರೆ ಗೂಗಲ್ ಅದನ್ನು ಮುಂದಕ್ಕೆ ಸರಿ ಮಾಡಿಕೊಳ್ಳುವುದು. ಈ ಅಂಶವನ್ನು ತುಳುವರು ಸಮರ್ಪಕವಾಗಿ ಬಳಸಿಕೊಂಡರೆ ತುಳುವರಿಗೆ ಹಾಗೂ ತುಳುವೇತರರಿಗೂ…
ಬೆಂಗಳೂರು: ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಸಿಎಂ, ಡಿಸಿಎಂ ಬದಲಾವಣೆ ವಿಚಾರವಾಗಿ ಲಿಂಗಾಯತ ಸ್ವಾಮೀಜಿಗಳು ಸೇರಿದಂತೆ ಎಲ್ಲಾ ವಿಚಾರಗಳಲ್ಲಿ ಪದೇ, ಪದೇ ಸ್ವಾಮೀಜಿಗಳ ಮಧ್ಯ ಪ್ರವೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು, ಸಿದ್ದರಾಮಯ್ಯ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಸಚಿವರು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಹೇಳಿದರು. ಹೈಕಮಾಂಡ್ ಬಳಿ ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಯಿತೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ. ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಸಿಎಂ ಆಗಲು…
ಚಿಕ್ಕಮಗಳೂರು: 6 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಬಾಲಕಿಯನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಕಾರಣ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಜೂ.29 ರಾತ್ರಿ ಮೃತಪಟ್ಟಿದ್ದಾಳೆ. ಡೆಂಗ್ಯೂ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಸಕಾಲದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗಳು ಬದುಕುತ್ತಿದ್ದಳು ಎಂದು ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ.…
ಚೆನ್ನೈ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ವಿರುದುನಗರದ ಸತ್ತೂರಿನಲ್ಲಿ ನಡೆದಿದೆ. ಸತ್ತೂರು ನಗರದಲ್ಲಿರುವ ಖಾಸಗಿ ಒಡೆತನದ ಪಟಾಕಿ ತಯಾರಿಕಾ ಘಟಕದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ರಾಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ವಿರುದುನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಫೋಟವಾಗುತ್ತಿದ್ದಂತೆ ಬೆಂಕಿಯು ಭಾರೀ ಮಟ್ಟದಲ್ಲಿ ವ್ಯಾಪಿಸಿಕೊಂಡಿತ್ತು. ಬ್ಲಾಸ್ಟ್ ಆದ ರಭಸಕ್ಕೆ ಕಾರ್ಖಾನೆಯ ಒಂದು ಭಾಗದ ಕಟ್ಟಡವೂ ಸಂಪೂರ್ಣ ಕುಸಿದಿದೆ. ಅಕ್ಕಪಕ್ಕದ ಬಿಲ್ಡಿಂಗ್ಗಳು ಹಾನಿಗೊಳಗಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೂವರು ಮಕ್ಕಳು ಹಾಗೂ ಗಂಡನನ್ನು ತೊರೆದ ಮಹಿಳೆ, ನವವಧುವಿನಂತೆ ಸಿಂಗಾರಗೊಂಡು ಪ್ರಿಯತಮನ ಮನೆಗೆ ಬಂದ ಘಟನೆ ಉತ್ತರಪ್ರದೇಶದ ಸೋನ್ ಭದ್ರ ಎಂಬಲ್ಲಿ ಈ ಘಟನೆ ನಡೆದಿದೆ. ವಿಭಾ ತನ್ನ ಗಂಡ ಹಾಗೂ ಮಕ್ಕಳನ್ನು ತೊರೆದು ಪ್ರಿಯತಮನ ಮನೆಗೆ ಬಂದಿದ್ದು, ವಧುವಿನಂತೆ ಶೃಂಗರಿಸಿಕೊಂಡು ಬಂದು ನಿಂದ ವಿಭಾಳನ್ನು ಕಂಡು ಸಂದೀಪ್ ಹಾಗೂ ಕುಟುಂಬಸ್ಥರು ಶಾಕ್ ಆಗಿದ್ದಾರೆ., ಮದುವೆಗೂ ಮೊದಲು ವಿಭಾ ಹಾಗೂ ಸಂದೀಪ್ ನಡುವೆ ಪ್ರೀತಿ ಇತ್ತು. ಆದ್ರೆ ವಿಭಾಳನ್ನು ಮನೆಯವರು ಬೇರೆ ಯುವಕನ ಜೊತೆಗೆ ವಿವಾಹ ಮಾಡಿಕೊಟ್ಟಿದ್ದಾರೆ. ಇಷ್ಟಾದರೂ ವಿಭಾಳ ಹಿಂದೆ ಸಂದೀಪ್ ಬಿದ್ದಿದ್ನಂತೆ. ಅಲ್ಲದೇ ತಮ್ಮ ಪ್ರೀತಿಯ ಸಂದರ್ಭದಲ್ಲಿ ಜೊತೆಗಿದ್ದ ಫೋಟೋ ಹಾಗೂ ಖಾಸಗಿ ವಿಡಿಯೋಗಳನ್ನು ನಿನ್ನ ಪತಿ ಹಾಗೂ ಸಹೋದರನಿಗೆ ಕಳುಹಿಸುವುದಾಗಿ ಸಂದೀಪ್ ನಿರಂತರವಾಗಿ ವಿಭಾಳನ್ನು ಪೀಡಿಸುತ್ತಿದ್ದನಂತೆ. ಸಂದೀಪ್ ನ ವರ್ತನೆಯಿಂದ ಅತ್ತ ಪತಿಯೊಂದಿಗೆ ನೆಮ್ಮದಿಯಾಗಿ ಸಂಸಾರ ಮಾಡಲಾಗದೇ, ಇತ್ತ ಪ್ರಿಯಕರನನ್ನೂ ಸಮಾಧಾನ ಪಡಿಸಲಾಗದ ವಿಭಾ, ಸಂದೀಪ್ ಗೆ ಪಾಠ ಕಲಿಸಲು ಮುಂದಾಗಿದ್ದಾಳೆ. ವಧುವಿನಂತೆ ಸಿಂಗರಿಸಿಕೊಂಡು ನೇರವಾಗಿ ಸಂದೀಪ್…
ನಟಿ ತಮನ್ನಾ ಭಾಟಿಯಾ ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ ಪಠ್ಯ ವಿಷಯವಾಗಿ ಸೇರಿಸಲಾಗಿದೆ. ಇದರ ವಿರುದ್ಧ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ತಮನ್ನಾ ಬಗೆಗಿನ ಪಠ್ಯ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ. ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದು,ದೂರು ದಾಖಲಿಸಿದ್ದಾರೆ. ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ, ʼಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್’ ಅನ್ನು ಸಂಪರ್ಕಿಸುವಂತೆ ತಿಳಿಸಿದೆ ಎನ್ನಲಾಗಿದೆ. ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ಸಮಸ್ಯೆ ಇಲ್ಲ. ಆದರೆ ತಮನ್ನಾ ಭಾಟಿಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ…
ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ಚಾಂಪಿಯನ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ, ಪೋಸ್ಟ್ ಮಾಡಿದ್ದಾರೆ. ಜೊತೆಗೆ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸುವ ವೀಡಿಯೊ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತ ತಂಡವು ವಿಶ್ವಕಪ್ ಗೆದ್ದಿದೆ. ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನು ಗೆದ್ದಿದೆ. ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಅಜೇಯ ಸಾಧನೆ ಮಾಡಿರುವುದು ಸಣ್ಣ ಸಾಧನೆಯಲ್ಲ ಎಂದು ಹೇಳಿದ್ದಾರೆ. ಐಸಿಸಿ ಟಿ20 ವಿಶ್ವಕಪ್ನ ಫೈನಲ್ ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ನೇತೃತ್ವದ ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದಿತು. 2011 ರ ವಿಶ್ವಕಪ್ ಬಳಿಕ ಇದು ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ 2024 ರ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ. ಈ ವೇಳೆ ಮಾತನಾಡಿದ ರೋಹಿತ್ ಶರ್ಮಾ, “ಕಳೆದ 3–4 ವರ್ಷಗಳಲ್ಲಿ ನಾವು ಏನನ್ನು ಅನುಭವಿಸಿದ್ದೇವೆ ಎಂಬುದನ್ನು ಸಂಕ್ಷಿಪ್ತವಾಗಿ ಹೇಳುವುದು ತುಂಬಾ ಕಷ್ಟ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾವು ವೈಯಕ್ತಿಕವಾಗಿ ಮತ್ತು ತಂಡವಾಗಿ ತುಂಬಾ ಶ್ರಮಿಸಿದ್ದೇವೆ ಎಂದಿದ್ದಾರೆ. ಒಂದು ತಂಡ, ಮೈದಾನದಲ್ಲಿ ಒಂದು ಗುಂಪಾಗಿ ಇದ್ದೆವು. ನಾವು ಅದನ್ನು ಗೆಲ್ಲಲು ಬಯಸಿದ್ದೇವೆ. ಈ ರೀತಿಯ ಪಂದ್ಯಾವಳಿಯನ್ನು ಗೆಲ್ಲಲು, ಬಹಳಷ್ಟು ಪ್ರಯತ್ನಗಳು ನಡೆಯುತ್ತವೆ. ಎಲ್ಲಾ ಮನಸ್ಸುಗಳು ಒಂದಾಗುತ್ತವೆ. ನಮಗೆ ಆಟವಾಡಲು, ಅನುಸರಿಸಲು, ನಮ್ಮಲ್ಲಿ ಪ್ರತಿಯೊಬ್ಬರನ್ನು ನಂಬಲು ಸ್ವಾತಂತ್ರ್ಯವನ್ನು ನೀಡಿದ ಮ್ಯಾನೇಜ್ ಮೆಂಟ್ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಇದು ಮ್ಯಾನೇಜ್ಮೆಂಟ್, ಕೋಚ್, ಕ್ಯಾಪ್ಟನ್ ನಿಂದ ಪ್ರಾರಂಭವಾಗಿದ್ದು ಮತ್ತು ನಂತರ ಆಟಗಾರರು ಅಲ್ಲಿಗೆ ಹೋಗಿ ಅದನ್ನು ಸಾಧಿಸುತ್ತಾರೆ” ಎಂದು…