Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದೆ. ಈ ನಡುವೆ ಕಾಂಗ್ರೆಸ್ ನ ಪ್ರಬಲ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಬಾಂಬ್ ಸಿಡಿಸಿದ್ದು, 2028ಕ್ಕೆ ನಾನೇ ರಾಜ್ಯದ ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಕೆಂಪೇಗೌಡ ಜಯಂತಿ ದಿನ ಚಂದ್ರಶೇಖರನಾಥ ಸ್ವಾಮೀಜಿಗಳು ನೀಡಿದ ರಾಜಕೀಯ ಪ್ರೇರಿತ ಹೇಳಿಕೆ ಸಿಎಂ ಬದಲಾವಣೆಯ ಚರ್ಚೆ ಹುಟ್ಟು ಹಾಕಿತ್ತು. ಇದರಿಂದಾಗಿ ಇದೀಗ ಬೇರೆ ಬೇರೆ ಸಮುದಾಯಗಳ ಸ್ವಾಮೀಜಿಗಳು ತಮ್ಮ ಜಾತಿಯವರನ್ನು ಸಿಎಂ ಮಾಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಏನು ಮಾಡಬೇಕು ಅದನ್ನು ಮಾಡುವೆ ಎಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್ ತೀರ್ಮಾನವಾಗಿದೆ.…
ಮಂಡ್ಯ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿದಿದೆ. ಗಾಯಾಳುಗಳನ್ನು ಮಂಡ್ಯ, ಮೈಸೂರು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ ಗಳು ಜಖಂಗೊಂಡಿದೆ. ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ರಾಯಚೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಸಾವಿಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಂತೋಷ್ (22) ನೇಣುಬಿಗಿದುಕೊಂಡು ಸಾವಿಗೆ ಶರಣಾದ ಯುವಕ ಎಂದು ವರದಿ ತಿಳಿಸಿದೆ. ಮನೆಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಅತ್ತಿಗೆಯ ತಂಗಿಯನ್ನು ಪ್ರೀತಿಸುತ್ತಿದ್ದ. ಮದುವೆಗೆ ಯುವತಿಯಿಂದ ಒಪ್ಪಿಗೆ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈಗ 113ನೇ ಜನ್ಮದಿನದ ಸಂಭ್ರಮ. 113 ನೇ ವಯಸ್ಸಿಗೆ ಕಾಲಿಟ್ಟ ಸಾಲುಮರದ ತಿಮ್ಮಕ್ಕ, ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ. ತಿಮ್ಮಕ್ಕ ಅವರು ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನವರು. ತಂದೆ ಚಿಕ್ಕರಂಗಯ್ಯ. ತಾಯಿ ವಿಜಯಮ್ಮ. ಇವರಿಗೆ ಕೌಟುಂಬಿಕ ಮತ್ತು ಸಾಮಾಜಿಕ ಕಾರಣಗಳಿಂದಾಗಿ ಯಾವುದೇ ಔಪಚಾರಿಕ ಶಿಕ್ಷಣ ಸಿಕ್ಕಿಲ್ಲ. ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿದ್ದರು. ಇವರು ಚಿಕ್ಕಯ್ಯ…
ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ಮೈದಾನದಲ್ಲಿ ನಡೆದ ಟಿ 20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ T20 WC-2024ನ್ನು ಭಾರತ ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಸೋಲಿಸಿದೆ. ನಿನ್ನೆ ಬ್ರಿಡ್ಜ್ ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತದ ಬ್ಯಾಟಿಂಗ್ ಮಶೀನ್ ವಿರಾಟ್ ಕೊಹ್ಲಿ 76 ರನ್ ಹಾಗೂ ಅಕ್ಷರ್ ಪಟೇಲ್ 47 ರನ್ ಗಳ ನೆರವಿನಿಂದ 176 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಗಿದ್ದು 7 ರನ್ ಗಳಿಂದ ವಿರೋಚಿತ ಸೋಲು ಕಂಡಿದೆ. ಭಾರತ 20 ಓವರ್ಗಳಲ್ಲಿ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಂದ ದಕ್ಷಿಣ ಆಫ್ರಿಕಾಗೆ ಸಾದಾರಣ ಅನ್ನುವ ಸವಾಲ್ ನೀಡಿತ್ತು. ಈ ಸವಾಲನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಕೊನೆಗೆ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಸಾಧ್ಯವಾಯಿತು. ದಕ್ಷಿಣ ಆಫ್ರಿಕ್ರಾ ಸೋಲೊಪ್ಪಿಕೊಂಡು ಶರಣಾದ…
ತುಮಕೂರು: ಸಿದ್ದಗಂಗಾ ಮಠದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ KSRTC ಬಸ್ ವ್ಯವಸ್ಥೆ ಮಾಡಲಾಗಿದೆ. ಕುಣಿಗಲ್ ಮತ್ತು ಮದ್ದೂರು ಮಾರ್ಗ ವಾಗಿ ಪ್ರತಿ ದಿನ ಮುಂಜಾನೆ 4 ಗಂಟೆಗೆ ಸಿದ್ದಗಂಗಾ ಮಠದಿಂದ ಹೊರಟು ಬೆಳಿಗ್ಗೆ 10ಕ್ಕೆ ಮಹದೇಶ್ವರ ಬೆಟ್ಟ ತಲುಪಲಿದೆ. ಪುನಃ ಮಹದೇಶ್ವರ ಬೆಟ್ಟ ದಿಂದ ಮಧ್ಯಾಹ್ನ 2:30ಕ್ಕೆ ಹೊರಟು ರಾತ್ರಿ 9ಕ್ಕೆ ಸಿದ್ದಗಂಗಾಮಠ ತಲುಪಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಭಾರತದಲ್ಲಿ ಸಣ್ಣ ಹಾಗೂ ದೊಡ್ಡ ರೈಲ್ವೆ ಸ್ಟೇಷನ್ ಗಳನ್ನು ಹಿಡಿದು ಒಟ್ಟು 8,300 ಕ್ಕೂ ಅಧಿಕ ಸ್ಟೇಷನ್ ಗಳಿವೆ. ರೈಲಿನಲ್ಲಿ ಪ್ರಯಾಣ ಮಾಡುವಾಗ ಹಲವಾರು ದೊಡ್ಡ ಹಾಗೂ ಚಿಕ್ಕ ರೈಲು ನಿಲ್ದಾಣಗಳು ಬರುತ್ತವೆ, ನೀವು ನೋಡಿರಬಹುದು ದೊಡ್ಡ ರೈಲು ನಿಲ್ದಾಣಗಳಲ್ಲಿ ಪ್ಲಾಟ್ಫಾರ್ಮ್ ನ ರೈಲ್ವೆ ಟ್ರ್ಯಾಕ್ ಗಳನ್ನು ಕಾಂಕ್ರೀಟ್ ಮಾಡಲಾಗಿರುತ್ತದೆ, ಆದರೆ ಸಣ್ಣ ಪುಟ್ಟ ರೈಲು ನಿಲ್ದಾಣಗಳ ಬಳಿ ಇರುವ ರೈಲು ಹಳಿಗಳಿಗೆ ಕಾಂಕ್ರೀಟ್ ಮಾಡಿರುವುದಿಲ್ಲ, ಬದಲಾಗಿ ಕಲ್ಲುಗಳನ್ನು ಸುರಿಯಲಾಗಿರುತ್ತದೆ. ರೈಲು ಕಂಬಿಗಳ ನಡುವೆ ಕಲ್ಲುಗಳನ್ನು ಏಕೆ ಹಾಕಲಾಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ, ಈ ರೀತಿ ಕಲ್ಲುಗಳನ್ನು ಸುರಿದಿರುವುದನ್ನು ಬೈಲೆಸ್ಟ್ (Ballast On Track) ಅಥವಾ ನಿಲುಭಾರ ಎಂದು ಕರೆಯಲಾಗುತ್ತದೆ. ರೈಲು ಅತ್ಯಂತ ವೇಗವಾಗಿ ರೈಲು ಹಳಿಗಳ ಮೇಲೆ ಬರುವಾಗ ಕಂಬಿಗಳ ಕಂಪನ ಹಾಗೂ ಶಬ್ದವಿರುತ್ತದೆ, ಈ ರೀತಿ ಕಲ್ಲುಗಳನ್ನು ಹಳಿಗಳ ಮಧ್ಯದಲ್ಲಿ ಹಾಕುವದರಿಂದ ಕಂಪನ ಹಾಗೂ ಶಬ್ದವನ್ನು ಕಡಿಮೆಯಾಗುತ್ತದೆ. ಟ್ರ್ಯಾಕ್ ಗಳ ಕೆಳಗೆ ಸಾಕಷ್ಟು ಚಿಕ್ಕ ಕಲ್ಲುಗಳನ್ನು ಸುರಿಯಲಾಗಿರುತ್ತದೆ. ಕಂಬಿಗಳ ಕಂಪನ…
2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ ಎಂದು ಈ ಹಿಂದೆಯೇ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ. ಈಗ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ…
ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 91 86185 14684ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು…
ಕಣ್ಣೂರು: ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ನರ್ಸಿಂಗ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ರಾಮಪುರಂನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಕರ್ನಾಟಕದಿಂದ ಎರ್ನಾಕುಲಂಗೆ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಯಿಂದ ಹೈಡ್ರೋಕ್ಲೋರಿಕ್ ಆಯಸಿಡ್ ಸೋರಿಕೆಯಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸೋರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಯತ್ನಿಸಿದರಾದರೂ. ಸಂಪೂರ್ಣ ತಡೆ ಸಾಧ್ಯವಾಗಿಲ್ಲ. ಗ್ಯಾಸ್ ಸೋರಿಕೆಯ ಪರಿಣಾಮ ಇಲ್ಲಿನ ಸಮೀಪದ ಕಾಲೇಜು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಮತ್ತು ಪಳಯಾಂಗಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಟ್ಯಾಂಕರ್ ನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಗ್ಯಾಸ್ ಅನ್ನು ಮತ್ತೊಂದು ಟ್ಯಾಂಕರ್ಗೆ ವರ್ಗಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA