Author: admin

ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣದ ಹಿನ್ನಲೆ ಶ್ರೀರಾಮುಲು ಧರಣಿ ನಡೆಸುತ್ತಿದ್ದು,   ಡಿಸಿ ಕಚೇರಿ ಮುಂದೆ ಧರಣಿ ನಡೆಯುತ್ತಿರುವ ಧರಣಿ  ಶನಿವಾರ ಬೆಳಿಗ್ಗೆಯೂ ಮುಂದುವರೆದಿದೆ. ವಾಲ್ಮೀಕಿ ನಿಗಮದಲ್ಲಿ‌ ಸರಕಾರವು ಪಾತ್ರ ಇರುವುದರಿಂದ ಸಿಎಂ ರಾಜೀನಾಮೆಗೆ  ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು,  ಹಗರಣದ ಪ್ರತಿ ಪೈಸೆಯು ರಿಕವರಿ ಮಾಡಬೇಕು.   ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರಕಾರ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅಣ್ಣಾವ್ರು ಅವರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಅಭಿಮಾನಿಗಳ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಕರಣವೊಂದರಲ್ಲಿ ಸಿಲುಕಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜುಲೈ ತಿಂಗಳ 19 ರಂದು ಬಿಡುಗಡೆ ಆಗಬೇಕಿದ್ದ ಬಹು ನಿರೀಕ್ಷಿತ ಅಡವಿ ಚಿತ್ರದ ಬಿಡುಗಡೆಯನ್ನು ತಾತ್ಕಾಲಿಕ ವಾಗಿ ಮುಂದೂಡಲಾಗಿದೆ ಅವರ ಹುಟ್ಟುಹಬ್ಬ ಕೂಡ ಆಚರಿಸಿಕೊಳ್ಳುವುದಿಲ್ಲ ಎಂದು ನಿರ್ದೇಶಕ ನಿರ್ಮಾಪಕ ಟೈಗರ್ ನಾಗ್ ತಿಳಿಸಿದ್ದಾರೆ. ಪರಭಾಷೆ ಗಳಲ್ಲಿ ನಟಿಸದೆ ಕೇವಲ ಕನ್ನಡ ಚಿತ್ರಗಳಲ್ಲಿ ನಟಿಸುತ್ತಾ ಪ್ರತಿಭೆ ಮತ್ತು ಸ್ವ ಪ್ರಯತ್ನದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ, ಕನ್ನಡ ಚಿತ್ರಗಳಿಗೆ ಪ್ಯಾಮಿಲಿ ಆಡಿಯನ್ಸ್ ಗಳನ್ನೂ ಥಿಯೇಟರ್ ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ವಿಶಿಷ್ಟ ಗುರುತನ್ನು ಮೂಡಿಸುತ್ತಿದ್ದ ದರ್ಶನ್ ಅವರು, ಈಗ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದು ಆವರು ತಪ್ಪು ಮಾಡಿದ್ದರೆ ಖಂಡಿತಾ ಶಿಕ್ಷೆಯಾಗಲಿ ಯಾಕೆ ಅಂದ್ರೆ ನಮ್ಮ ದೇಶದ ಸಂವಿಧಾನದ ಮುಂದೆ ಯಾರು ದೊಡ್ಡವರಲ್ಲ, ಅವರು ತಪ್ಪು ಮಾಡದೆ…

Read More

ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ. ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ. ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ. ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅತೀ ಉದ್ದ ಮತ್ತು ಎತ್ತರದ…

Read More

ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಕುರಿತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ನೀಡಿದೆ. ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಾಗಿರುವ ಕರವಸೂಲಿಗಾರರರು, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನು ಸರ್ಕಾರದ ಅಧಿಸೂಚನೆ ಸಂ:ಗ್ರಾಅಪ 886 ಗ್ರಾಪಂಕಾ 2016 ದಿನಾಂಕ 29-06-2020 ರಲ್ಲಿ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹುದ್ದೆಯ ಹೆಸರು: ಕರವಸೂಲಿಗಾರರು / ಬಿಲ್ ಕಲೆಕ್ಟರ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು ವಾಟರ್ ಆಪರೇಟರ್ ಸ್ವಚ್ಛತಾಗಾರರು ಶೈಕ್ಷಣಿಕ ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪಾಸ್ ಜತೆಗೆ ಕಂಪ್ಯೂಟರ್ ಜ್ಞಾನ…

Read More

ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಜನ್ 10 ಮುಗಿದು ಅನೇಕ ತಿಂಗಳು ಕಳೆದರೂ ಸಹ ಈ ಸೀಜನ್ ನ ಸ್ಪರ್ಧಿಗಳು ಸದಾ ಸುದ್ದಿಯಲ್ಲಿ ಇರುತ್ತಾರೆ. ಈ ಪೈಕಿ ವರ್ತೂರ್ ಸಂತೋಷ್ ಹಾಗೂ ಬೆಂಕಿ ಖ್ಯಾತಿಯ ತನಿಷಾ ಕುಪ್ಪಂಡ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತಿದೆ. ವರ್ತೂರ್ ಸಂತೋಷ್ ಹಾಗೂ ತನಿಷಾ ಯಾವಾಗಲೂ ಜೊತೆಯಾಗಿ ಬಿಗ್ ಬಾಸ್ ನಲ್ಲೂ ಕಾಣಿಸಿಕೊಂಡಿದ್ದರು. ಈಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಹೀಗಾಗಿ ಇವರಿಬ್ಬರ ಮಧ್ಯೆ ಪ್ರೀತಿ ಇದೆ ಎನ್ನುವ ಗುಸು ಗುಸು ಮಾತುಗಳು ಆಗಾಗ ಕೇಳಿ ಬರುತ್ತಿರುತ್ತದೆ. ಹೀಗಾಗಿ ಬಗ್ಗೆ ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಹಳ್ಳಿಕಾರ್ ವರ್ತೂರ್ ಸಂತೋಷ್ ನೇರವಾಗಿ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ನಿಮಗೂ ಬೆಂಕಿಗೂ ಲವ್ ಇದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ವರ್ತೂರ್ ಸಂತೋಷ್, ನಮ್ಮ ನಡುವೆ ಒಳ್ಳೆ ಗೆಳೆತನ ಇದೆ. ನನಗೆ ಬೆಂಕಿ ಒಳ್ಳೆ ಫ್ರೆಂಡ್. ಹೇಗೆ ಅಂದರೆ ಅವರ ಶೋ ಮುಗಿದಿದ್ದರೂ ನಾನು ಬರುವವರೆಗೂ ಕಾದಿದ್ದರು. ಅದರಲ್ಲೇ ಗೊತ್ತಾಗುತ್ತದೆ ಅವರು ನನಗೆ ಕೊಡುವ…

Read More

ಬೆಂಗಳೂರು: ರಾಜ್ಯದಲ್ಲಿ ಬರ, ಆರ್ಥಿಕ ಮುಗ್ಗಟ್ಟು, ಅಭಿವೃದ್ಧಿ ಸ್ಥಗಿತವಾಗಿದ್ದರೂ ಮತ್ತೊಂದೆಡೆ ಶಾಸಕರು ಹಾಗೂ ಇತರ ಸಮಿತಿ ಅಧ್ಯಕ್ಷರು ವಿದೇಶ ಪ್ರವಾಸ ಕೈಗೊಳ್ಳುವಂತೆ ಸ್ಪೀಕರ್ ಯು.ಟಿ.ಖಾದರ್ ಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ಗೆ ಪತ್ರ ಬರೆದು ಆಗ್ರಹಿಸಿರುವವರಲ್ಲಿ ಬಹುತೇಕ ಬಿಜೆಪಿ ಶಾಸಕರೇ ಹೆಚ್ಚಾಗಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ. ಈ ಹಿನ್ನೆಲೆ ವಿದೇಶ ಪ್ರವಾಸಕ್ಕೆ ತೆರಳುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ವಿಧಾನ ಸಭೆ ಕಾರ್ಯದರ್ಶಿ ಗೆ ಸ್ಪೀಕರ್ ನಿರ್ದೇಶನ ನೀಡಿದ್ದಾರೆ. ಈ ಹಿನ್ನಲೆ ಖಾಸಗಿ ಏಜೆನ್ಸಿಯಿಂದ ವಿದೇಶಿ ಪ್ರಯಾಣದ ಖರ್ಚು ವೆಚ್ಚ ವಿವರವುಳ್ಳ ದರ ಪಟ್ಟಿಯನ್ನು ಕೂಡ ಸರ್ಕಾರದ ಕಾರ್ಯದರ್ಶಿಗಳು ಕಲೆ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಯುಜಿಸಿ–ನೆಟ್, ಜಂಟಿ ಸಿಎಸ್ ಐಆರ್ ಯುಜಿಸಿ ನೆಟ್, ಎನ್ ಸಿಇಟಿ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕಗಳನ್ನು ಪ್ರಕಟಿಸಿದೆ. UGC NET ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ನಡೆಸಲಾಗುವುದು ಎಂದು ಹೇಳಿದೆ. ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ಈಗಾಗಲೇ ನಿಗದಿಪಡಿಸಿದಂತೆ ಜುಲೈ 6ರಂದು ನಡೆಯಲಿದೆ. ಯುಜಿಸಿ–ನೆಟ್ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿರುತ್ತವೆ. ಈ ಹಿಂದೆ, ಯುಜಿಸಿ ನೆಟ್ ಜೂನ್ 2024 ಪರೀಕ್ಷೆ ಆಫ್‌ಲೈನ್‌ನಲ್ಲಿ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಮರು ಪರೀಕ್ಷೆಗೆ ವಿದ್ಯಾರ್ಥಿಗಳು…

Read More

ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ದಾಳಿ ಮಾಡಿದ ಘಟನೆ ಗದಗದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯನ್ನು ಕರೆದುಕೊಂಡು ಹೋಗಿದ್ದಾರೆ. 392 ಕೇಸ್‌ನಲ್ಲಿ ಆರೋಪಿ ಅಮ್ಜದ್ ಅಲಿ ಗಂಗಾವತಿ ಶಹರ ಪೊಲೀಸರಿಗೆ ಬೇಕಿದ್ದ. ಈ ವೇಳೆ ಬಂದ ದುಷ್ಕರ್ಮಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿಯನ್ನು ಬಿಡಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ, ಡಿವೈಎಸ್ಪಿ ಭೇಟಿ ನೀಡಿ ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ. ಈವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ ಒಟ್ಟು 7 ಜನ ಬಲಿಯಾಗಿದ್ದು ಈಗ ಬೆಂಗಳೂರಿನಲ್ಲಿ 27 ವರ್ಷದ ಯುವಕ ಹಾಗೂ 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಈ ಎರಡೂ ಪ್ರಕರಣಗಳು ಬಿಬಿಎಂಪಿಯ ಪೂರ್ವ ವಲಯದಲ್ಲಿ ದಾಖಲಾಗಿವೆ. ಜ್ವರದಿಂದ ಬಳಲುತ್ತಿದ್ದ ಸಿ.ವಿ. ರಾಮನ್ ನಗರದ ವಾಸಿ ಅಭಿಲಾಷ್ (27) ಜೂನ್ 25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಡೆಂಗ್ಯೂ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 27 ರಂದು ಅಭಿಲಾಷ್ ಮೃತಪಟ್ಟರು. ಇನ್ನೊಂದು ಪ್ರಕರಣದಲ್ಲಿ ತಮಿಳುನಾಡಿನ ಮೂಲದ ನೀರಜಾದೇವಿ (80) ಡೆಂಗ್ಯೂಗೆ ಬಲಿಯಾಗಿದ್ದಾರೆ. ಇವರು ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ಜೂನ್ 20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಇವರಿಗೂ ಡೆಂಗ್ಯೂ ಇರುವುದು ತಿಳಿದು ಬಂದಿತ್ತು. ಇವರಿಗೆ ಚಿಕಿತ್ಸೆ ನೀಡಲಾಗಿತ್ತಾದರೂ ಫಲಕಾರಿಯಾಗದೇ ಜೂನ್ 23ರಂದು ಮೃತಪಟ್ಟರು. ರಾಜ್ಯದಲ್ಲಿ ಈವರೆಗೆ ಒಟ್ಟು 5,749 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಬಿಬಿಎಂಪಿ ಹೊರತು…

Read More

ರಾಮನಗರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ನೌಕರ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶುಕ್ರವಾರ ರಾಮನಗರದಲ್ಲಿ ನಡೆದಿದೆ. ಯೋಗ್ಯ ಕುಮಾರ್(45) ಮೃತ ನೌಕರ. ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗ್ಯ ಕುಮಾರ್ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣವೇ ಇತರ ಸಹೋದ್ಯೋಗಿಗಳು ಯೋಗ್ಯ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More