Author: admin

ನಿರ್ಮಾಣ ಹಂತದ ಸೇತುವೆಗಳು ಕುಸಿದು ಬೀಳುವ ವಿಚಾರದಲ್ಲಿ ಬಿಹಾರ ರಾಜ್ಯ ಕುಖ್ಯಾತವಾಗಿದೆ. ಕಳೆದ 9 ದಿನಗಳ ಅವಧಿಯಲ್ಲಿ ಬಿಹಾರ ರಾಜ್ಯಾದ್ಯಂತ ಐದು ಸೇತುವೆ ಕುಸಿತ ಕಂಡಿದೆ. ಶುಕ್ರವಾರ ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯು 2021 ರಿಂದ 3 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸುತ್ತಿತ್ತು. ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ಇತ್ತೀಚಿನ ಪತನವನ್ನು ಗುರುತಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಜೂನ್ 19 ರಂದು, ಅರಾರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿತ್ತು. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಸೆಕೆಂಡ್ ಗಳಲ್ಲಿ ಬೇರ್ಪಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…

Read More

ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದ್ದು, ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ. ಭಾರೀ ಮಳೆ, ಪ್ರವಾಹ ಹಾಗೂ ಗಾಳಿಗೆ ಗೋಡೆ ಕುಸಿದಿದೆ. ನಾಲ್ಕು ವರ್ಷದ ಅಹದ್, ಎಂಟು ವರ್ಷದ ಆದಿಲ್ ಮತ್ತು ಎರಡು ವರ್ಷದ ಅಲ್ಫಿಸಾ ಮೃತಪಟ್ಟವರಾಗಿದ್ದಾರೆ. ಆಯಿಷಾ, ಹುಸೇನ್, ಸೋಹ್ನಾ, ವಾಸಿಲ್ ಮತ್ತು ಸಮೀರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರೇಟರ್ ನೋಯ್ಡಾದ ಖೋಡ್ನಾ ಕಲಾನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದೇ ವೇಳೆ ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಭಾರೀ ಮಳೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತಮಿಳುನಾಡಿನ ಕೊಯಮತ್ತೂರು ಸಮೀಪದ ಹಳ್ಳಿಯೊಂದರಲ್ಲಿ ವಿಚಿತ್ರ ಪದ್ಧತಿ ಇದ್ದು, ಈ ಗ್ರಾಮದಲ್ಲಿ ಯಾರಾದ್ರೂ ಪ್ರೀತಿಸಿ ಮದುವೆಯಾದರೆ ಕಡ್ಡಾಯವಾಗಿ ಲವ್ ಟ್ಯಾಕ್ಸ್ ಕಟ್ಟಲೇಬೇಕು. ಇಲ್ಲದಿದ್ದರೆ ಗ್ರಾಮದಿಂದ ಅವರಿಗೆ ಬಹಿಷ್ಕಾರ ಹಾಕಲಾಗುತ್ತದೆ. ಈ ತೆರಿಗೆ ಪದ್ಧತಿಯನ್ನು ‘ಕುಟ್ರಮ್ ವರಿ’ ಎಂದು ಕರೆಯುತ್ತಾರೆ. ತಮಿಳಿನಲ್ಲಿ ʻಕುಟ್ರಮ್ ʼ ಎಂದರೆ ಅಪರಾಧ, ʻವರಿʼ ಎಂದರೆ ತೆರಿಗೆ ಎಂದರ್ಥ. ಕೊಯಮತ್ತೂರು ಜಿಲ್ಲೆ ಅಣ್ಣೂರು ಸಮೀಪದ ವಡಕ್ಕಲೂರು ಎಂಬ ಗ್ರಾಮದಲ್ಲಿ ಇಂತಹದ್ದೊಂದು ವಿಚಿತ್ರ ಆಚರಣೆ ಇದೆ. ಈ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗಳಿಗೆ ಗ್ರಾಮಸ್ಥರು ಊರಿಗೆ ಸೇರಿಸಿಕೊಳ್ಳುತ್ತಿಲ್ಲ. ಊರಿಗೆ ಎಂಟ್ರಿ ಸಿಗಬೇಕೆಂದರೆ ಟ್ಯಾಕ್ಸ್ ಕಟ್ಟಬೇಕು..ಪ್ರೇಮ ವಿವಾಹವಾದ ಜೋಡಿಗಳನ್ನು ‘ಕುಟ್ರಮ್ ವರಿ’ (ಅಪರಾಧ ತೆರಿಗೆ) ಪಾವತಿಸಿ ಗ್ರಾಮಕ್ಕೆ ಪ್ರವೇಶಿಸುವ ಪರಿಪಾಠ ದಶಕಗಳಿಂದ ನಡೆಯುತ್ತಾ ಬಂದಿದೆ. ವಡಕ್ಕಲೂರು ಗ್ರಾಮದಲ್ಲಿ ಬಹುತೇಕ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರೇ ಹೆಚ್ಚಿದ್ದಾರೆ.. ಈಗಲೂ ಅಲ್ಲಿ ಅನಕ್ಷರತೆ ಬಡತನ ತಾಂಡವವಾಡುತ್ತಿದೆ. ಹೀಗಾಗಿ ದಶಕಗಳಿಂದ ಬಂದ ಆಚರಣೆಯನ್ನು ಈಗಲೂ ಮುಂದುವರೆಸಿದ್ದಾರೆ. ಈ ಗ್ರಾಮದಲ್ಲಿ 220 ಮನೆಗಳಿದ್ದು, ಊರಿನಲ್ಲಿ ಯಾರಾದರೂ ಪ್ರೇಮ…

Read More

ವಿಶ್ವವಿಖ್ಯಾತ ಮೈಸೂರು ಅರಮನೆಗೆ ಈಗ ವಿಚಿತ್ರ ಸಮಸ್ಯೆ ಎದುರಾಗಿದೆ. ಅರಮನೆಗೆ ಪಾರಿವಾಳದ ಹಿಕ್ಕೆಗಳಿಂದ ಕಂಟಕ ಎದುರಾಗಿದೆ. ಇದರಿಂದ ಕಟ್ಟಡಕ್ಕೆ ಧಕ್ಕೆಯಾಗಲಿದೆ ಎಂದು ಇತಿಹಾಸ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಪಾರಿವಾಳದ ಹಿಕ್ಕೆಗಳಲ್ಲಿ ಯೂರಿಕ್ ಆಮ್ಲವನ್ನು ಹೊಂದಿರುತ್ತವೆ. ಯೂರಿಕ್ ಆಸಿಡ್ ಇರುವ ಈ ಪಾರಿವಾಳಗಳ ಹಿಕ್ಕೆ ಪಾರಂಪರಿಕ ಕಟ್ಟಡಗಳ ಮೇಲೆ ಬೀಳಿಸುವುದರಿಂದ ಕಟ್ಟಡಕ್ಕೆ ಹಾನಿಯಾಗುತ್ತದೆ ಎಂದು ಇತಿಹಾಸ ತಜ್ಞ ಪ್ರೊ. ರಂಗರಾವ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರೊ.ರಂಗರಾವ್ ಮಾತನಾಡಿದ್ದು, ಯಾವುದೇ ತಾಮ್ರ ಅಥವಾ ಉಕ್ಕಿನ ಪಾತ್ರೆಯಲ್ಲಿ ಪಾರಿವಾಳದ ಹಿಕ್ಕೆಗಳನ್ನು ಕೆಲವು ದಿನಗಳ ಕಾಲ ಇಟ್ಟರೆ ಅವುಗಳಿಗೆ ತೂತು ಬೀಳುತ್ತದೆ. ಅಂತೆಯೇ, ಅಮೃತಶಿಲೆಯ ರಚನೆಯ ಮೇಲೆ ಪಾರಿವಾಳದ ಹಿಕ್ಕೆಗಳು ಬಿದ್ದರೂ, ಅಮೃತಶಿಲೆಗೂ ಹಾನಿಯಾಗುವ ಅಪಾಯವಿದೆ.. ಹಾಗಾಗಿ ಈ ಪಾರಿವಾಳದ ಹಿಕ್ಕೆಗಳಿಂದ ಅರಮನೆಗೆ ಸಾಕಷ್ಟು ಹಾನಿಯಾಗಲಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…

Read More

ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆಯಾಗಿ ಉರ್ಸುಲಾ ವೊನ್ ಡೆರ್ ಲೆಯೆನ್ ಅವರು ಮತ್ತೆ ಐದು ವರ್ಷಗಳ ಅವಧಿಗೆ ಮರುನೇಮಕಗೊಡಿದ್ದಾರೆ. ಯುರೋಪಿಯನ್ ಮಂಡಳಿಯ ಸಭಾಧ್ಯಕ್ಷರಾಗಿ ಪೋರ್ಚುಗಲ್ ನ ಆ್ಯಂಟೊನಿಯೊ ಕೊಸ್ಟಾ ಹಾಗೂ ಯುರೋಪ್ ವಿದೇಶಾಂಗ ನೀತಿಯ ಮುಖ್ಯಸ್ಥರಾಗಿ ಎಸ್ತೊನಿಯಾದ ಕಜಾ ಕಲ್ಲಾಸ್ ಅವರು ಆಯ್ಕೆಯಾಗಿದ್ದಾರೆ. ಬ್ರುಸೆಲ್ಸ್ನಲ್ಲಿ ಶುಕ್ರವಾರ ನಡೆದ ಯುರೋಪ್ ಒಕ್ಕೂಟದ ಶೃಂಗಸಭೆಯಲ್ಲಿ ನಡೆದ ಈ ನೇಮಕಾತಿಗಳಿಗೆ 27 ರಾಷ್ಟ್ರಗಳ ಯುರೋಪ್ ನಾಯಕರು ತಮ್ಮ ಅಂಕಿತ ಹಾಕಿದ್ದಾರೆ. ಯುರೋಪ್ ಒಕ್ಕೂಟದ ಅಧ್ಯಕ್ಷೆಯಾಗಿ ಪುನಾರಾಯ್ಕೆಗೊಂಡ ವೊನ್ ಡೆರ್ ಲೆಯೆನ್ ಆನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತನ್ನನ್ನು ಎರಡನೆ ಅವಧಿಗೆ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ‘‘ನನಗೆ ದೊರೆತ ಗೌರವಕ್ಕೆ ಅಭಾರಿಯಾಗಿದ್ದೇನೆ ಹಾಗೂ ಈ ಕ್ಷಣವನ್ನು ಹಂಚಿಕೊಳ್ಳಲು ನಾನು ಸಂತಸಪಡುತ್ತೇನೆ’’ ಎಂದವರು ಹೇಳಿದರು. ಯುರೋಪ್ ಒಕ್ಕೂಟದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಮುಖ್ಯಸ್ಥರಾಗಿ ನೇಮಕಗೊಂಡ ಕಾಜಾ ಕಲ್ಲಾಸ್ ಅವರು ಮಾತನಾಡಿ ಯುರೋಪ್ನಲ್ಲಿ ಯುದ್ಧ ನಡೆಯುತ್ತಿದೆ. ಜಾಗತಿಕವಾಗಿ ಅಸ್ಥಿರತೆ ಬೆಳೆಯುತ್ತಿದೆ. ಯುರೋಪಿನ ಏಕತೆಗಾಗಿ ಶ್ರಮಿಸುವುದು ಖಂಡಿತವಾಗಿಯೂ…

Read More

ಹೈಕೋರ್ಟ್ ನಿಂದ ಕನ್ನಡದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಿದ ಬೆನ್ನಲ್ಲೇ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣನವರ ಆಗ್ರಹಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಪ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, Power Tv ಚಾನೆಲ್ ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ ರಾಕೇಶ ಶೆಟ್ಟಿ ಎಂಬ ವ್ಯಕ್ತಿ ದೃಶ್ಯಮಾಧ್ಯಮ ದುರುಪಯೋಗಪಡಿಸಿಕೊಂಡು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದು ಮಾತ್ರವಲ್ಲದೆ, ಪರವಾನಿಗೆ ಇಲ್ಲದೇ ಒಂದು satellite ಚಾನೆಲ್ ನಡೆಸುತ್ತಿದ್ದ ಕಾರಣ ದಿನಾಂಕ: 25-06-2024 ರಂದು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ Power Tv ಪ್ರಸಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ ಎಂದಿದ್ದಾರೆ. ರಾಕೇಶ್ ಶೆಟ್ಟಿ ಪತ್ರಿಕೋದ್ಯಮವನ್ನು ಕೇವಲ ತನ್ನ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಂಡು ಅನೇಕ ಕಾನೂನು ಬಾಹಿರ, ಬ್ಲಾಕ್ ಮೇಲ್, ವಸೂಲಿ ಧಂಧೆಗೆ ಬಳಸಿಕೊಂಡ ರಾಕೇಶ್ ಶೆಟ್ಟಿಯ ಮೇಲೆ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈತನನ್ನು ಬಂಧಿಸಿ ಸೂಕ್ತ…

Read More

ಮಹಾರಾಷ್ಟ್ರ ಸರ್ಕಾರವು ತನ್ನ ಬಜೆಟ್ ನಲ್ಲಿ ರಾಜ್ಯದ ಜನರಿಗೆ ಹಲವು ಬಂಪರ್ ಘೋಷಣೆ ಮಾಡಿದೆ. ಇದರಲ್ಲಿ ಮುಖ್ಯವಾಗಿ ಪ್ರತೀ ಮನೆಗೂ ವರ್ಷಕ್ಕೆ 3 ಉಚಿತ ಸಿಲಿಂಡರ್ ಕೊಡುವುದಾಗಿ ಹೇಳಿದೆ. ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಜನಪ್ರಿಯ ಸ್ಕೀಮ್ ಗಳಿಗೆ ಶರಣಾಗಿದೆ. ಇದರಲ್ಲಿ ಹಲವು ಉಚಿತ ಕೊಡುಗೆಗಳನ್ನು ನೀಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂ ನೀಡುವುದಾಗಿ ಸರ್ಕಾರ ಘೋಷಿಸಿದೆ. ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತೀ ಹೆಕ್ಟೇರ್ ಗೆ 5,000 ರೂ. ಬೋನಸ್ ಹಣವನ್ನು ರೈತರಿಗೆ ನೀಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ 1ರ ಬಳಿಕ ಪ್ರತೀ ಲೀಟರ್ ಹಾಲಿಗೆ 5 ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ…

Read More

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಪಡಿಸಬೇಕು ಮತ್ತು 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶವನ್ನು ನಡೆಸುವ ಹಿಂದಿನ ವ್ಯವಸ್ಥೆ ಮರುಸ್ಥಾಪಿಸಬೇಕು ಎಂದು ತಮಿಳುನಾಡು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಸರ್ವಾನುಮತದಿಂದ ಅಂಗೀಕರಿಸಿದೆ. NEET -UG 2024 ಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಮತ್ತು NEET-PG 2024 ಪರೀಕ್ಷೆ ಹಠಾತ್ ಮುಂದೂಡಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ವಿಧಾನಸಭೆಯಲ್ಲಿ ಈ ನಿರ್ಣಯ ಮಂಡಿಸಿದರು. ಮನಿತನೇಯ ಮಕ್ಕಳ್ ಕಚ್ಚಿ, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ತಮಿಳಗ ವೆಟ್ರಿ ಕಳಗಂ, ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದಂತೆ ಹಲವಾರು ಪ್ರಾದೇಶಿಕ ಪಕ್ಷಗಳು ನಿರ್ಣಯವನ್ನು ಬೆಂಬಲಿಸಿದವು. ಇದಕ್ಕೂ ಮೊದಲು, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಕೆ. ಕನಿಮೊಳಿ ಅವರು ದೇಶಾದ್ಯಂತ ವೈದ್ಯಕೀಯ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ( ಎನ್.ಟಿ.ಎ) ನಡೆಸಿದ ನೀಟ್ ನಿಂದ ತಮಿಳುನಾಡಿಗೆ “ವಿನಾಯಿತಿ” ನೀಡುವ ಬೇಡಿಕೆಯನ್ನು…

Read More

ನಿದ್ದೆಯಲ್ಲಿದ್ದ ಯುವಕನ ಚಡ್ಡಿಯೊಳಗೆಯೇ ಹಾವೊಂದು ಅವಿತು ಕುಳಿತು, ದೊಡ್ಡ ಅವಾಂತರವೇ ಸೃಷ್ಟಿಯಾದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಥೈಲ್ಯಾಂಡ್ ನಲ್ಲಿ ಹುಡುಗನೊಬ್ಬ ರಾತ್ರಿ ಬರೀ ಚಡ್ಡಿ ಹಾಕಿಕೊಂಡು ಮಲಗಿದ್ದಾನೆ. ನಿದ್ದೆಯಲ್ಲಿದ್ದ ಆತನ ಚಡ್ಡಿ ಒಳಗೆ ನಾಗರಹಾವೊಂದು ಸೇರಿಕೊಂಡುಬಿಟ್ಟಿದೆ. ಆದರೆ ಆತ ಅಲುಗಾಡದೆ ಮಲಗಿದ್ದರಿಂದ ಆತನಿಗೆ ಹಾವು ಕಚ್ಚಿಲ್ಲ. ಆತ ಎಚ್ಚರಗೊಂಡಾಗ ಚಡ್ಡಿಯಲ್ಲಿ ಹಾವು ಸೇರಿಕೊಂಡಿರುವುದು ಗೊತ್ತಾಗಿ ಭಯದಲ್ಲಿ ಬೆವರಿದ್ದಾನೆ. ಆದರೆ ಅಲುಗಾಡದೆ ಹಾಗೆಯೇ ಮಲಗಿದಂತೆ ನಟಿಸಿ ಬಚಾವಾಗಿದ್ದಾನೆ. ಥಾಯ್ಲೆಂಡ್ ನ ರೇಯಾಂಗ್ ನಲ್ಲಿ ಈ ಘಟನೆ ನಡೆದಿದ್ದು, ಆತ ತನ್ನ ಸ್ನೇಹಿತನಿಗೆ ಸನ್ನೆಯ ಮೂಲಕ ಅದನ್ನು ತಿಳಿಸಿದ್ದಾನೆ. ಚಡ್ಡಿಯೊಳಕ್ಕೆ ಹಾವಿರುವ ಬಗ್ಗೆ ಆತನ ಸ್ನೇಹಿತನಿಗೆ ಗೊತ್ತಾದ ಬಳಿಕ ಆತ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾನೆ. ಬಳಿಕ, ಉರಗ ತಜ್ಞರು ಬಂದು ಹಾವು ಹಿಡಿದು ಆತನ ಜೀವ ಉಳಿಸಿದ್ದಾರೆ. ಉರಗ ತಜ್ಞ ಆ ಹಾವನ್ನು ಹೊರಗೆ ತೆಗೆದ ಬಳಿಕ ಅದು ನಾಗರಹಾವು ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿದ್ದಾರೆ ಈ ನಡುವೆ ನಟ ದರ್ಶನ್ ಖೈದಿ ನಂಬರ್ 6106 ಎಂಬುದು ಎಲ್ಲರಿಗೂ ಗೊತ್ತಾಗಿದ್ದು, ಈ ಸಂಖ್ಯೆ ಈಗ ಟ್ರೆಂಡ್ ಆಗುತ್ತಿದೆ. ಇದೀಗ, 6106 ಸ್ಟಿಕ್ಕರ್ ಗೆ ಫುಲ್ ಡಿಮ್ಯಾಂಡ್ ಹೆಚ್ಚಾಗಿದ್ದು, ಬೆಂಗಳೂರು, ರಾಯಚೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ಮೊಬೈಲ್ ಅಂಗಡಿಗಳ ಮುಂದೆ ಜನರು ಕ್ಯೂ ನಿಂತಿದ್ದಾರೆ. ತಮ್ಮ ಮೊಬೈಲ್ ಕವರ್ ನಲ್ಲಿ ಕೈದಿ ನಂಬರ್ ಅನ್ನು ಸ್ಟಿಕ್ಕರ್ ಮಾಡಿ ಅಂಟಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಗಾಡಿಗಳ ಮೇಲು ಕೈದಿ ನಂ.6106 ಎಂದು ಅಂಟಿಸಿಕೊಳ್ಳುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಪರಪ್ಪನ ಅಗ್ರಹಾರದ ಜೈಲಿನಿಂದಲೇ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಜೈಲು ಅಧಿಕಾರಿಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ‘ಅಭಿಮಾನಿಗಳು ಯಾರೂ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು…

Read More