Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತುಮಕೂರು: ಚಿತ್ರಕಲೆ ಕ್ಷೇತ್ರ ಅವನತಿಯತ್ತ ಸಾಗುತ್ತಿದ್ದು, ಕಲೆ ಉಳಿಯುವತ್ತಾ ತಾವು ಕೆಲಸ ಮಾಡಬೇಕು. ಕಾಲೇಜು ಶಿಕ್ಷಣ ಇಲಾಖೆಯು ಚಿತ್ರಕಲಾ ಕ್ಷೇತ್ರದ ಅಭಿವೃದ್ದಿಗೆ ಬದ್ದವಾಗಿರುತ್ತದೆ ಎಂದು ಕಾಲೇಜು ಶಿಕ್ಷಣ ಪ್ರಾದೇಶಿಕ ಕಛೇರಿ ನಿರ್ದೇಶಕ ಡಾ.ರಾಮಕೃಷ್ಣರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರದ ಬಗ್ಗೆ ಅಸಡ್ಡೆ ಪಡಬೇಡಿ, ಅಂತಹ ಸರ್ಕಾರಗಳಿಂದಲೇ ನಾವಿಂದು ಉನ್ನತ ಹುದ್ದೆಯಲ್ಲಿ ಇರೋಕೆ ಸಾಧ್ಯ. ನಮ್ಮ ಶ್ರಮಕ್ಕೆ ತಕ್ಕ ಫಲ ಸಿಕ್ಕೆಸಿಗುತ್ತದೆ. ನಾನು ಕೂಡ ಬಡತನ ಕುಟುಂಬದಿಂದ ಬಂದವನು, ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಓದಿ ಬೆಳೆದವನು. ಕಲಿಯುವ ಹಂತದಲ್ಲಿ ಕಷ್ಟಪಟ್ಟು ಅಭ್ಯಾಸ ಮಾಡಿದ್ದರ ಪರಿಣಾಮ ಸರ್ಕಾರಿ ಕೆಲಸ ಸಿಕ್ಕದೆ. ಹಾಗಾಗಿ ಸರ್ಕಾರ ನೀಡುವಂತಹ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಕಿವಿ ಮಾತು ಹೇಳಿದರು. ಸರ್ಕಾರಿ ಕಾಲೇಜು ನಮ್ಮದು ಎನ್ನುವ ಭಾವನೆ ಎಲ್ಲರಲ್ಲಿ ಮೂಡಬೇಕು. ಪ್ರಾಂಶುಪಾಲರ ಹೊರತಾಗಿಯೂ ಎಲ್ಲಾರೂ ಕಾಲೇಜಿನ ಸುತ್ತಮುತ್ತ…
ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹಾಗಾಗಿ ರೇವಣ್ಣ ಅವರಿಗರೆ ಸುದ್ದಿಗಾರರು ಕೆಲ ಪ್ರಶ್ನೆಗಳನ್ನು ಕೇಳಿದಾಗ ರೇವಣ್ಣ ಕೊಟ್ಟ ಉತ್ತರ ಇಲ್ಲಿದೆ. ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನನಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ, ಗೌರವವಿದೆ. ಯಾವುದೇ ವಿಷಯ ಇದ್ರೂ ನ್ಯಾಯಾಂಗ, ದೇವರ ಮೇಲೆ ನಂಬಿಕೆಯಿದೆ ಎಂದರು. ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಅದೆಲ್ಲವನ್ನು ಕಾಲವೇ ಉತ್ತರಿಸಲಿದೆ. ಮಾಜಿ ಶಾಸಕ ಪ್ರೀತಂ ಗೌಡ ಷಡ್ಯಂತ್ರದ ಬಗ್ಗೆಯೂ ಮಾತನಾಡಲ್ಲ. ನಾನು ಈಗ ಪ್ರಜ್ವಲ್, ಸೂರಜ್ ಬಗ್ಗೆ ಯಾವುದೇ ಮಾತನಾಡೋದಿಲ್ಲ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಗೊತ್ತಿಲ್ಲ. ಅದೆಲ್ಲ ದೊಡ್ಡವರ ವಿಷಯವಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ ಅವಧಿ ನಿಗದಿಪಡಿಸಿದ್ದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಈ ಹಿಂದೆ ಇದ್ದಂತೆ 4 ಗಂಟೆಗಳ ಸಮಯವನ್ನೇ ಮರು ನಿಗದಿಪಡಿಸಲು ಒಪ್ಪಿಕೊಂಡಿದೆ. ರಾಜ್ಯ ಶಿಕ್ಷಣ ನೀತಿಯಲ್ಲಿ ನಾಲ್ಕು ವರ್ಷಗಳ ಪದವಿ ರದ್ದು ಮಾಡಿ ಹಿಂದೆ ಇದ್ದಂತೆ ಮೂರು ವರ್ಷದ ಪದವಿಯನ್ನು ಪುನರ್ ಜಾರಿ ಮಾಡಿದ ನಂತರ ಕನ್ನಡ ಭಾಷಾ ಬೋಧನೆಗೆ ಇದ್ದ ಅವಧಿಯನ್ನು ಮೂರು ಗಂಟೆಗೆ ಇಳಿಸಲಾಗಿತ್ತು. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಬೋಧನಾ ಅವಧಿ ಕಡಿತ ಮಾಡುವುದು ಕನ್ನಡ ಭಾಷೆಗೆ ಮಾಡುತ್ತಿರುವ ಅನ್ಯಾಯವಾಗಿದ್ದು, ಶೀಘ್ರವೇ ಸರಿಪಡಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಸಚಿವರು, ಈ ಮೊದಲು ಇದ್ದಂತೆ ನಾಲ್ಕು ಗಂಟೆಗಳಿಗೆ ಮರು ನಿಗದಿ ಮಾಡುವಂತೆ ಎಲ್ಲಾ ವಿವಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬರಗೂರು ರಾಮಚಂದ್ರಪ್ಪ ಅವರ ಕಾಳಜಿ ಬಗ್ಗೆ…
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಹಲವು ಅಚ್ಚರಿಯ ಹೆಸರುಗಳು ಕೂಡ ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಚನ್ನಪಟ್ಟಣವನ್ನು ಪಡೆಯಲು ಡಿ.ಕೆ. ಶಿವಕುಮಾರ್ ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸುತ್ತಾರೆ ಎನ್ನಲಾಗಿತ್ತು. ಈಗ ಸ್ವತಃ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಕುಟುಂಬದಿಂದ ಇನ್ಯಾರಿಗೂ ಚುನಾವಣಾ ರಾಜಕೀಯಕ್ಕೆ ಬರಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದಿದ್ದಾರೆ ಡಿಕೆಶಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಜಿಲ್ಲೆ ತಿಪಟೂರು ನಗರದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಬನಶಂಕರಿ ನಗರ ನಾರಾಯಣರಾಜು ವಿಧಿವಶರಾದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಮಾದಿಗ ದಂಡೋರ ಸಮಿತಿಯಿಂದ ಭಾವಪೂರ್ಣಶ್ರದ್ಧಾಂಜಲಿ ಅರ್ಪಿಸಲಾಯಿತು . ನಾರಾಯಣರಾಜು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ದಲಿತ ಮುಖಂಡರು ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಕೊಪ್ಪ ಶಾಂತಪ್ಪ ಬನಶಂಕರಿ ನಗರ, ನಾರಾಯಣರಾಜು ರವರು ನ್ಯಾಯಾಂಗ ಇಲಾಖೆಯ ನೌಕರರಾಗಿ ವೃತ್ತಿ ನಿರ್ವಹಿಸುವ ಜೊತೆಗೆ, ಸದಾ ಶೋಷಣೆ, ಅಸಮಾನತೆಯಿಂದ, ನೊಂದು ಬೆಂದ ಜನರಿಗೆ , ನೆರವು ನೀಡುವ ಕೆಲಸ ಮಾಡಿದವರಾಗಿದ್ದಾರೆ. ಅಲ್ಲದೇ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯರಾಗಿ ಪ್ರೊಫೆಸರ್ ಬಿ.ಕೃಷ್ಣಪ್ಪ ನವರ ಆತ್ಮೀಯ ಒಡನಾಡಿಯಾಗಿದ ಎಂದು ತಿಳಿಸಿದರು. ಗ್ರಾಮೀಣ ಭಾಗದಲ್ಲಿ ದಲಿತಪರಚಳುವಳಿ ಕಟ್ಟುವ ನಿಟ್ಟಿನಲ್ಲಿ ಅನೇಕ ನಾಯಕರಿಗೆ ಮಾರ್ಗದರ್ಶಕರಾಗಿ, ಗ್ರಾಮೀಣ ಭಾಗದ ಬಡವಿದ್ಯಾರ್ಥಿಗಳಿಗೆ ಆರ್ಥಿಕ…
ತುಮಕೂರು: ಜಿಲ್ಲೆಯಲ್ಲಿ ಬರೋಬ್ಬರಿ 18 ಕಡೆ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ತುಮಕೂರು ಜಿಲ್ಲಾ ಪೊಲೀಸರು 29 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಜಿ.ಆರ್. ಚಿನ್ನ ಮತ್ತು ರಿಜ್ವಾನ್ ಭಾಷಾ ಎಂಬುವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸರಗಳ್ಳತನ ಆರೋಪಿಗಳು, ಜಿಲ್ಲೆಯ ಮಿಡಿಗೇಶಿ, ಕೊಡಿಗೇನಹಳ್ಳಿ, ಮಧುಗಿರಿ ಉಪವಿಭಾಗದ ಕೊರಟಗೆರೆ, ಪಟ್ಟನಾಯಕನಹಳ್ಳಿ ಬಡವನಹಳ್ಳಿ ಗೌರಿಬಿದನೂರು ಗ್ರಾಮಾಂತರ ಮಂಚೇನಹಳ್ಳಿ ಮಡಕಶಿರಾ ಠಾಣಾ ಸರಹದ್ದಿನಲ್ಲಿ ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಹೆಂಗಸಿರ ಕೊರಳಿನಲ್ಲಿದ್ದ ಚಿನ್ನದ ಸರ, ಕಿವಿ ಒಲೆ ಮತ್ತು ಮೊಬೈಲ್ ಕಿತ್ತುಕೊಂಡು ಪರಾರಿ ಯಾಗುತ್ತಿದ್ದರು. ಮಾರ್ಚ್ 12ರಂದು ಅಂಬಿಕಾ ಎಂಬುವರು ಮಿಡಿಗೇಶಿ– ಐಡಿಹಳ್ಳಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಅದೇ ಸಮಯಕ್ಕೆ ಮಿಡಿಗೇಶಿ ಕಡೆಯಿಂದ ಐ.ಡಿ. ಹಳ್ಳಿ ಕಡೆಗೆ ಸುಮಾರು 35–40 ವರ್ಷ ವಯಸ್ಸಿನ ಇಬ್ಬರು ಅಪರಿಚಿತ ವ್ಯಕ್ತಿಗಳು ಒಂದು ಸ್ಕೂಟಿಯಲ್ಲಿ ಬಂದು ಇಬ್ಬರೂ ಹಿಂಬದಿಯಿಂದ ಬಂದು, ಒಬ್ಬ ವ್ಯಕ್ತಿಯು ನನ್ನ ಬಾಯಿಯನ್ನು ಹಿಂದಿನಿಂದ ಮುಚ್ಚಿಕೊಂಡು ಇಬ್ಬರೂ ಸೇರಿಕೊಂಡು ಅವ್ರ ಕೊರಳಲ್ಲಿದ್ದ…
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೋಗಿದ್ದ ತಂಡದಲ್ಲಿ ಒಬ್ಬನಿಗೆ ಹಾವು ಕಚ್ಚಿದ್ದು ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಅದ ಘಟನೆ ಚಾಮರಾಜನಗರದ ಕಾವೇರಿ ವನ್ಯಧಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ಮರಿಯ ಮಂಗಲ ಗ್ರಾಮದ ಸೆಲ್ವನಾಥ್, ವಿನ್ಸೆಂಟ್, ಲೂಯಿಸ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಆರೋಪಿಗಳು ನಿನ್ನೆ ರಾತ್ರಿ ಕಾವೇರಿ ವನ್ಯಧಾಮದಲ್ಲಿ ಜಿಂಕೆ, ಸಾರಂಗದ ಬೇಟೆಗೆ ಮೂವರು ಕಾಡುಗಳ್ಳರು ಹೋಗಿದ್ದರು, ಈ ವೇಳೆ ಲ್ವನಾಥ್ ಎಂಬಾತನಿಗೆ ಹಾವು ಕಚ್ಚಿದೆ. ಹಾವು ಕಚ್ಚುತ್ತಿದ್ದಂತೆ ಕಾಡಿನಿಂದ ಆಚೆ ಬರುವ ವೇಳೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಆರೋಪಿಗಳನ್ನು ಕೂಡಲೇ ಬಂಧಿಸಿದ್ದಾರೆ. ಬಂಧಿತರಿಂದ ಎರಡು ನಾಡ ಬಂದೂಕು, ಟಾರ್ಚ್ ಮಚ್ಚು ಜಪ್ತಿ ಮಾಡಲಾಗಿದೆ. ಸದ್ಯ ಹಾವು ಕಚ್ಚಿದ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಿದ್ದು, ಮಿಕ್ಕ ಆರೋಪಿಗಳನ್ನ ಅರಣ್ಯ ಇಲಾಖಾ ಸಿಬ್ಬಂದಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನ ಡಿಕ್ಚು– ಸಂಕ್ಲಾಂಗ್ ರಸ್ತೆಯಲ್ಲಿ 70 ಅಡಿ ಬೈಲಿ ಸೇತುವೆಯನ್ನು 72 ಗಂಟೆಗಳೊಳಗೆ ಸೇನೆಯ ಎಂಜಿನಿಯರ್ ಗಳು ನಿರ್ಮಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ಪ್ರವಾಹದಿಂದ ಬಹುತೇಕ ಸ್ಥಳಗಳಲ್ಲಿ ಸಂಪರ್ಕ ಕಡಿದುಹೋಗಿದ್ದು, ಭಾರತೀಯ ಸೇನೆ ಪ್ರವಾಹ ಪೀಡಿತ ಪ್ರದೇಶಗಳ ಜನರು ಸಹಜ ಸ್ಥಿತಿಗೆ ಮರಳು ಸಹಾಯ ಮಾಡುತ್ತಿದೆ. ತ್ರಿಶಕ್ತಿ ಕಾರ್ಪ್ಸ್ ಆರ್ಮಿ ಎಂಜಿನಿಯರ್ ಗಳು ಜೂನ್ 23 ರಂದು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದ್ದರು ಎಂದು ಮೂಲಗಳು ತಿಳಿಸಿವೆ. ಸಂಪರ್ಕವನ್ನು ಮರುಸ್ಥಾಪಿಸಲು ಮತ್ತು ಪ್ರತ್ಯೇಕವಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಹಜ ಸ್ಥಿತಿಗೆ ತರಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಮತ್ತು ಸ್ಥಳೀಯ ಆಡಳಿತ ಸಹಕರಿಸಿದೆ ಎಂದು ಡಿಫೆನ್ಸ್ ಪಿಆರ್ ಒ ಹೇಳಿದ್ದಾರೆ. ದಿಕ್ಚು-ಸಂಕ್ಲಾಂಗ್ ರಸ್ತೆಯಲ್ಲಿ ಡೆಟ್ ಖೋಲಾದಲ್ಲಿ ನಿರ್ಮಿಸಲಾದ ಸೇತುವೆಯು ಡಿಕ್ಚುದಿಂದ ಸಂಕ್ಲಾಂಗ್ ಗೆ ಚುಂಗ್ ಥಾಂಗ್ ಕಡೆಗೆ ವಾಹನ ಸಂಚಾರವನ್ನು ಸಕ್ರಿಯಗೊಳಿಸಲು ಮಹತ್ವದ ಕೊಂಡಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಕ್ಕಿಂನ ಅರಣ್ಯ ಮತ್ತು ಪರಿಸರ ಸಚಿವ ಪಿಂಟ್ಸೊ ನಮ್ಗ್ಯಾಲ್ ಲೆಪ್ಚಾ…
70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರನ್ವಯ 70 ವರ್ಷ ಕ್ಕಿಂತ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು. ಈಗಾಗಲೇ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55 ಕೋಟಿ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಕೆಲಸವೂ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದರು. ಆಯುಷ್ಮಾನ್ ಭಾರತವು ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಆರೋಗ್ಯ ವಿಮಾ ಯೋಜನೆ ಆಗಿದೆ. 12 ಕೋಟಿ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ ತಲಾ 5 ಲಕ್ಷರೂ. ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ…
ಉತ್ತರ ಪ್ರದೇಶದಲ್ಲಿ ಹಲವು ಯುವಕರನ್ನು ಮದುವೆಯಾಗಿ ಅವರಿಂದ ಬೆಲೆಬಾಳುವ ವಸ್ತುಗಳನ್ನು ಪಡೆದು ಪರಾರಿಯಾಗುತ್ತಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದು, ಬಂಧನದ ಬಳಿವೂ ಈ ಮಹಿಳೆ ಈಕೆಯ ಮೋಸದ ವಿವಾಹದಿಂದ ವಂಚನೆಗೊಳಗಾದವರಿಗೆ ಶಾಕ್ ನೀಡಿದ್ದಾಳೆ. ಬಂಧನಕ್ಕೊಳಗಾಗಿದ್ದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಇನ್ನೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬಂಧಿತ ಮಹಿಳೆ ಎಚ್ ಐವಿ ಪಾಸಿಟಿವ್ ಆಗಿದ್ದು, ಈಕೆಯನ್ನು ವಿವಾಹವಾಗಿ ದೈಹಿಕ ಸಂಬಂಧ ಹೊಂದಿದವರು ಇದೀಗ ಆತಂಕದಲ್ಲಿದ್ದಾರೆ. ಮಹಿಳೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಲವರನ್ನು ಈ ಮಹಿಳೆ ಬಲೆಗೆ ಕೆಡವಿದ್ದಾಳೆ. ಯುವತಿ ಮದುವೆಯಾಗುವುದಾಗಿ ಭರವಸೆ ನೀಡಿ ಯುವಕರಿಂದ ಬೆಲೆಬಾಳುವ ವಸ್ತುಗಳು ಹಾಗೂ ಹಣ ವಸೂಲಿ ಮಾಡುತ್ತಿದ್ದರು. ಸುಮಾರು ಇಪ್ಪತ್ತೈದು ವರ್ಷ ವಯಸ್ಸಿನ ಯುವತಿ ಈ ಕೃತ್ಯ ಎಸಗುತ್ತಿದ್ದಳು. ಈಕೆಯ ಜೊತೆಗೆ ಸಂಬಂಧಿಕರು ಎಂದು ಪರಿಚಯಿಸಿಕೊಳ್ಳುವ ಕೆಲವರು ಜೊತೆಗಿದ್ದರು. ಮಹಿಳೆಗೆ ಎಚ್ ಐವಿ ಪಾಸಿಟಿವ್ ಕಂಡು ಬಂದ ಕೂಡಲೇ ಉತ್ತರ ಪ್ರದೇಶದ ಆರೋಗ್ಯ ಇಲಾಖೆ ವಂಚನೆಗೊಳಗಾದ ಯುವಕನನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದೆ.…