Author: admin

ಎಐಎಂಐಎಂ ಅಧ್ಯಕ್ಷ ಓವೈಸಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಬೆನ್ನಲ್ಲೇ ಐವರು ಪುಂಡರ ಗುಂಪೊಂದು ಅವರ ದೆಹಲಿಯ ನಿವಾಸದ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ವೇಳೆ ಓವೈಸಿ ಅವರ ನಾಮಫಲಕಕ್ಕೆ ಕಪ್ಪು ಶಾಯಿ ಹಾಕಲಾಗಿದ್ದು, ಇಸ್ರೇಲ್ ಪರ ಪೋಸ್ಟರ್ ಹಾಕಲಾಗಿದ್ದು,  ‘ಐ ಸ್ಟ್ಯಾಂಡ್ ವಿತ್ ಇಸ್ರೇಲ್’ ಎಂಬ ಶೀರ್ಷಿಕೆ ಪೋಸ್ಟ್ ನಲ್ಲಿ ಪತ್ತೆಯಾಗಿದೆ. ಓವೈಸಿ ಅವರು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್’ ಎಂದು ಹೇಳುವ ಮೂಲಕ ತಮ್ಮ ಪ್ರಮಾಣ ವಚನವನ್ನು ಮುಗಿಸಿದರು. ಈ  ಘೋಷಣೆ ವಿರೋಧಿಸಿ ಆಡಳಿತ ಪಕ್ಷದ ಪೀಠದಿಂದ ಭಾರೀ ಪ್ರತಿಭಟನೆ ನಡೆಯಿತು. ಇದೀಗ ಓವೈಸಿ ಮನೆ ಮೇಲೆ ದಾಳಿ ನಡೆಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…

Read More

ಛತ್ತೀಸ್‌ ಗಢದಲ್ಲಿ ಮನೆಗೆ ನುಗ್ಗಿದ ಕಳ್ಳನೊಬ್ಬ ಬೆಡ್ ರೂಮ್ ನಲ್ಲಿ ಮಲಗಿದ್ದ ದಂಪತಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ಉದ್ದೇಶದಿಂದ ಯುವಕ ಮನೆಗೆ ಎಂಟ್ರಿ ನೀಡಿದ್ದ. ಆದರೆ ಬೆಡ್ ರೂಮ್ ನಲ್ಲಿ ದಂಪತಿ ನೋಡಬಾರದ ಸ್ಥಿತಿಯಲ್ಲಿ ಪತ್ತೆಯಾದಾಗ ವಿಡಿಯೋ ಮಾಡಿಕೊಂಡು ಸ್ಥಳದಿಂದ ತೆರಳಿದ್ದ. ಬಳಿಕ ಮನೆಯ ಯಜಮಾನನ ವಾಟ್ಸಾಪ್ ನಂಬರ್ ಸಂಗ್ರಹಿಸಿ, ಫೋಟೊ, ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ವಿಡಿಯೋ ವೈರಲ್ ಮಾಡದಿರಲು 10 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಬ್ಲ್ಯಾಕ್ ಮೇಲ್ ನಿಂದ ಕಂಗಾಲಾದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ವಿನಯ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಆರೋಪಿ ನಿಜ ವಿಷಯ ಬಾಯ್ಬಿಟ್ಟಿದ್ದಾನೆ. ಆರೋಪಿಯು ಸಿವಿಲ್  ಪರೀಕ್ಷೆ ಬರೆದಿದ್ದರೂ ಪಾಸ್ ಆಗಿರಲಿಲ್ಲ, ಹೀಗಾಗಿ ಕಳ್ಳತನಕ್ಕೆ ಇಳಿದಿದ್ದ.  ಕಳ್ಳತನಕ್ಕೆ ಎಂದು ಮನೆಗೆ ನುಗ್ಗಿದ ವೇಳೆ ದಂಪತಿ ಖಾಸಗಿ ಕ್ಷಣದಲ್ಲಿ…

Read More

ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ 13 ಜನ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಪೂನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರು  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು   ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಭದ್ರಾವತಿಗೆ ಮರಳಿ ಹೋಗುತ್ತಿರುವ ಸಂದರ್ಭದಲ್ಲಿ ತಡರಾತ್ರಿ 3.30ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟಿಟಿ ವಾಹನ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಟಿ ವಾಹನದಲ್ಲಿ 17 ಜನರು ಪ್ರಯಾಣ ಮಾಡುತ್ತಿದ್ದು, ಇದರಲ್ಲಿ ಒಟ್ಟು 13 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಹಾಗೂ ಕಬಾಬ್ ಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಿರುವ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಪಾನಿಪುರಿ ಕೂಡ ಬ್ಯಾನ್ ಆಗುವ  ಸಾಧ್ಯತೆಗಳಿವೆ ಎನ್ನಲಾಗಿದೆ. ಜನರು ಮುಗಿಬಿದ್ದು ತಿನ್ನುವ  ಪಾನಿಪೂರಿಯಲ್ಲೂ ಕೂಡ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ. ಪಾನಿಪೂರಿಗೆ ಬಳಸೋ ಐದು ಮಾದರಿಯ ಸಾಸ್‌ ಗಳು ಹಾಗೂ ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಹೀಗಾಗಿ ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇತ್ತೀಚೆಗೆ ಬೆಂಗಳೂರಿನ 49 ಪ್ರದೇಶಗಳಿಂದ ಈ ಕುರಿತಂತೆ ಮಾಹಿತಿ ಸಂಗ್ರಹಿಸಲಾಗಿದೆ. 49 ಕಡೆ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರ ಮಾಡಲಾಗಿದೆ. ಅಂದಹಾಗೆ ಕೆಲವು ದಿನಗಳ ಹಿಂದೆ ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ…

Read More

ದೆಹಲಿ: ದೇಶದ ಅತಿದೊಡ್ಡ ವಿಮಾನ ನಿಲ್ದಾಣವಾದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದ್ದು, ಪರಿಣಾಮವಾಗಿ 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯಿಂದಾಗಿ   ಅನೇಕ ಕಾರುಗಳು ಮತ್ತು ಟ್ಯಾಕ್ಸಿಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಛಾವಣಿಯ ಶೀಟ್‌ ನ ಹೊರತಾಗಿ ಸಪೋರ್ಟ್ ಬೀಮ್ ಕೂಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಬ್ಬಿಣ ಸರಳುಗಳು ಬಿದ್ದ ಕಾರಿನಿಂದ ಆರು ಮಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತದ ನಂತರ, ಟರ್ಮಿನಲ್ 1 ರಿಂದ ಹೊರಡುವ ಮತ್ತು ಟರ್ಮಿನಲ್ 1 ಗೆ ಆಗಮಿಸುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆಯೇ ಮೇಲ್ಛಾವಣಿ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ದೆಹಲಿಯಲ್ಲಿ ಭಾರೀ ಪ್ರವಾಹ ಮತ್ತು ರಸ್ತೆಗಳು ಮತ್ತು ಇತರ ಪ್ರದೇಶಗಳಲ್ಲಿ ನೀರು ನಿಂತಿದೆ. ನಮ್ಮತುಮಕೂರಿನ ಕ್ಷಣ…

Read More

ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟಿದ್ದ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು,  ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಡಿಸಿದೆ. ಸುಳ್ಳು ಅತ್ಯಾಚಾರದ ದೂರು ನೀಡಿದ ಬಿ.ವಿ.ಸಿಂಧೂ ಸೇರಿದಂತೆ 13 ಜನರಿಗೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಮಹತ್ವದ ತೀರ್ಪು ನೀಡಿದ್ದಾರೆ. 2014ರ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ಎಂಬವರ ವಿರುದ್ಧ ಬಿ.ವಿ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್‌ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ತನಿಖೆಯಲ್ಲಿ ಅತ್ಯಾಚಾರ, ಜೀವಬೆದರಿಕೆ ಹಾಕಿದ್ದು ಸುಳ್ಳು ಎಂದು ಬಯಲಾಗಿತ್ತು. ಆ ನಂತರ…

Read More

ಕೋಲಾರ : ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ ವೇಳೆ ಮಸೀದಿ ಎದುರು ಡಿಜೆ ಸೌಂಡ್ ಹಾಕಿರುವ ವಿಚಾರಕ್ಕೆ  ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಕೋಲಾರದಲ್ಲಿ ನಡೆದ ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಮಂಗಳಮುಖಿಯರು ಅಸಭ್ಯ ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅರ್ಧಂಬರ್ಧ, ತುಂಡು ಬಟ್ಟೆ ತೊಟ್ಟು ಯುವಕರೊಂದಿಗೆ ಅಶ್ಲೀಲ ನೃತ್ಯ ಮಾಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು : ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಚಾರ ಬಾಲಕಿ ಮನೆಯಲ್ಲಿ ಗೊತ್ತಾಗುತ್ತಿದ್ದಂತೆಯೇ ಯಾರಿಗೂ ಹೇಳದಂತೆ ಬಾಲಕಿ ತಾಯಿಗೆ(ಸೊಸೆ) ಬಂಗಾರ, ಮನೆ ಆಮಿಷವೊಡ್ಡಿದ್ದಾನೆ. ಆದ್ರೆ, ಅತ್ಯಾಚಾರಕ್ಕೆ ಒಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿ ಪರಾರಿಯಾಗಲು ಬಾಲಕಿ ತಂದೆಯೇ ಸಹಕರಿಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ನಂತರ ಮೊಮ್ಮಗಳ ತಾಯಿ ಮತ್ತು ತಂದೆಗೆ ನಿನ್ನ ಮಗಳ ಹೆಸರಿಗೆ ಮನೆ ಬರೆದು ಕೊಡುತ್ತೇನೆ ಪೊಲೀಸರಿಗೆ ದೂರು ಕೊಡಬೇಡಿ ಎಂದು ಆಮಿಷವೊಡಿದ್ದಾನೆ. ಇದಾದ ನಂತರ ಸುಮ್ಮನಿದ್ದ ಬಾಲಕಿಯ ತಾಯಿ ನಾನು ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಂತರ ಅಲ್ಲಿಗೆ…

Read More

ಲೋಕಸಭಾ ಸದಸ್ಯರಾಗಿ ಚುನಾಯಿತರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿದೆ. ಕರುನಾಡಿನ ಮತದಾರರಿಂದ ಆಯ್ಕೆಯಾದ ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕನ್ನಡವನ್ನು ಕಡೆಗಣಿಸಿ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಅವರಿಗೆ ಧಿಕ್ಕಾರ ಹೇಳುತ್ತೇವೆ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್  ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಾಯಿಯ ಸಂಪ್ರದಾಯವನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ, ತಾಯಿ ಸುಷ್ಮಾ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಬಗ್ಗೆ ನೆನಪಿಸಿಕೊಂಡಿದ್ದರು. ಈಗ ವಿಶ್ವೇಶ್ವರ ಹೆಗಡೆ ಕಾಗೇರಿ ಅದೇ ರೀತಿ ಅನುಸರಿಸಲು ಹೋಗಿ ಕನ್ನಡ ಸಂಘಟನೆಗಳು ಮತ್ತು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿವೆ.…

Read More

ದೆಹಲಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಮಂಡಿಸಿದ ವಿಚಾರಗಳ ಹೈಲೈಟ್ಸ್ ಗಳು… ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು * ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ * ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ. * 18172 ಕೋಟಿ ಬರ ಪರಿಹಾರ ಕೇಳಿದ್ದೆವು.…

Read More