Author: admin

ಔರಾದ: ಬಸ್ ಪಾಸ್ ವಿಳಂಬ ಸಕಾಲಕ್ಕೆ ಬಸ್ ಗಳನ್ನು ಓಡಿಸಲು ಆಗ್ರಹಿಸಿ ಬೀದರ್ ಜಿಲ್ಲಾ ಔರಾದ ಪಟ್ಟಣದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿತು. ಬಸ್ ವಿಳಂಬ ಹಾಗೂ ಸಕಾಲಕ್ಕೆ ಬಸ್ ಪಾಸ್ ವಿತರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರಲ್ಲದೇ ಈ ಬಗ್ಗೆ ಸಿಎಂಗೆ ಬರೆದ ಪತ್ರವನ್ನು ಬಸ್ ಡಿಪೋ ವ್ಯವಸ್ಥಾಪಕ  ಎಸ್. ಟಿ. ರಾಠೋಡ್ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಶಶಿಕಾಂತ, ರಾಕಲೆ, ಅಶೋಕ ಶೆಂಬೆಳ್ಳ, ಅನೀಲ, ಇಂದ್ರಾಣಿ, ಪೂಜಾ ಇತರರಿದ್ದರು.  ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಥ್ರೆಟ್‌ ಬಂದಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ. ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್​​​​ ಕುಮಾರ್​​​​ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್​ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ. ಲಾಂಗ್​ ಲೀವ್​​​​ ಪ್ಯಾಲೆಸ್ತೇನ್​​​​ ಎಂಬ ಹೆಸರಿನ ಮೇಲ್​ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಗೋಕುಲ ರೋಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಲ್ದಾಣ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ಪರಿಶೀಲಿಸಲಾಗುತ್ತಿದೆ. ಬಾಂಬ್‌ ಬೆದರಿಕೆ ತಪಾಸಣಾ ದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ಅಲ್ಲದೇ ಪೊಲೀಸ್‌ ಅಧಿಕಾರಿಗಳು,…

Read More

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನಲ್ಲಿ ವಿವಾಹವಾಗಲಿದ್ದಾರೆ. ಅದ್ದೂರಿಯಾಗಿ ವಿವಾಹ ಪೂರ್ವ ಕಾರ್ಯಕ್ರಮ ಮಾಡಿಕೊಂಡಿದ್ದ ಜೋಡಿ ಈಗ ಮದುವೆ ತಯಾರಿಯಲ್ಲಿದೆ. ಈ ಅದ್ದೂರಿ ಮದುವೆಯ ಆಹ್ವಾನ ಪತ್ರಿಕೆ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಪ್ರಾರಂಭವಾಗಿದೆ. ಅನಂತ್ ಅಂಬಾನಿಯ ಪ್ರತಿ ಮದುವೆ ಕಾರ್ಡ್ ಬೆಲೆ ಎಷ್ಟು ಗೊತ್ತಾ? ಭಾರತದ ಅತ್ಯಂತ ದುಬಾರಿ ಮದುವೆ ಎಂದೇ ಹೆಸರಾಗಿರುವ ಈ ಮದುವೆಗೆ ವೈರಲ್ ಆಗುತ್ತಿರುವ ಆಮಂತ್ರಣ ಪತ್ರಿಕೆಯ ಬೆಲೆ ಅಕ್ಷರಶಃ ರೂ. 6.5 ಲಕ್ಷ. ಇದು 3 ಕೆಜಿ ಬೆಳ್ಳಿಯ ದೇವಾಲಯದಲ್ಲಿ 24 ಕ್ಯಾರೆಟ್ ಚಿನ್ನದ ವಿಗ್ರಹಗಳೊಂದಿಗೆ ಮದುವೆ ಕಾರ್ಡ್ ಆಗಿದೆ. ಅಂಬಾನಿಯವರ ಮದುವೆಯ ಆಮಂತ್ರಣ ಪತ್ರಿಕೆಯು ಮತ್ತೊಂದು ಬೆಳ್ಳಿಯ ಪೆಟ್ಟಿಗೆಯನ್ನು ಒಳಗೊಂಡಿದೆ. ಅದರ ಮುಂದೆ ವಿಷ್ಣುವಿನ ಆಕೃತಿಯಿದೆ. ಪೆಟ್ಟಿಗೆಯನ್ನು ತೆರೆಯುವಾಗ, ಅದರಲ್ಲಿ ಒಂದು ಶಾಲು ಇತ್ತು, ಅದರ ಮೇಲೆ ಓಂ ಕಸೂತಿ ಮಾಡಿದ ನೆಟ್ ಹ್ಯಾಂಕಿ ಇತ್ತು. ಪೆಟ್ಟಿಗೆಯಲ್ಲಿ ಚಿನ್ನದಿಂದ ಅಲಂಕರಿಸಲ್ಪಟ್ಟ ವಿವಿಧ ಹಿಂದೂ ವಿಗ್ರಹಗಳೂ ಇದೆ. ಬೆಳ್ಳಿಯಿಂದ…

Read More

ರತನ್ ಟಾಟಾ ಶ್ರೀಮಂತ ಉದ್ಯಮಿ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ದೇಣಿಯಾಗಿ ನೀಡಿದ್ದಾರೆ. ಇದೊಂದೆ ಅಲ್ಲ ಪ್ರತಿ ಭಾರಿ ಭಾರತಕ್ಕೆ ಸಂಕಷ್ಟ ಎದುರಾದಾಗ ರತನ್ ಟಾಟಾ ನೆರವು ನೀಡಿದ್ದಾರೆ.ಆದರೆ ಇದೇ ಮೊದಲ ಬಾರಿಗೆ ರತನ್ ಟಾಟಾ ಸಾರ್ವಜನಿಕರಲ್ಲಿ ನರೆವು ಕೇಳಿದ್ದಾರೆ. ಒಂದು ನಾಯಿಯ ಪ್ರಾಣ ಉಳಿಸಲು ರತನ್ ಟಾಟಾ ಸಾರ್ವಜನಿಕರಲ್ಲಿ ವಿಶೇಷ ಮನವಿ ಮಾಡಿದ್ದಾರೆ. ರತನ್ ಟಾಟಾ ತಮ್ಮ ಇನ್’ಸ್ಟಾಗ್ರಾಂ ಖಾತೆ ಮೂಲಕ ಸಹಾಯ ಕೋರಿದ್ದಾರೆ. 7 ತಿಂಗಳ ನಾಯಿ ಮರಿಯೊಂದನ್ನು ಆಸ್ಪತ್ರೆ ದಾಖಲಿಸಲಾಗಿದೆ. ಈ ನಾಯಿ ಪ್ರಾಣ ಉಳಿಸಲು ಯಾರಾದರೂ ನಾಯಿ ರಕ್ತ ದಾನ ಮಾಡಬೇಕಿದೆ. ತುರ್ತಾಗಿ ರಕ್ತದ ಅವಶ್ಯಕತೆ ಇದೆ ಎಂದು ರತನ್ ಟಾಟಾ ಮನವಿ ಮಾಡಿದ್ದಾರೆ. ಜ್ವರ ಹಾಗೂ ಇತರ ಕೆಲ ಆರೋಗ್ಯ ಸಮಸ್ಯೆಯಿಂದ ನಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮಗೆ ಈಗ ಮುಂಬೈನಲ್ಲಿ ತುರ್ತಾಗಿ ನಾಯಿಯ ರಕ್ತದಾನ ಮಾಡುವರು ಬೇಕಾಗಿದ್ದಾರೆ. ರಕ್ತದಾನ ಮಾಡುವ ನಾಯಿ ಆರೋಗ್ಯವಾಗಿರಬೇಕ. 1 ರಿಂದ 8 ವರ್ಷದೊಳಗಿರಬೇಕು. ಕನಿಷ್ಠ 25…

Read More

ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಸಮಾಜಮುಖಿಯಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ ಎಂದರು. ಕೆಂಪೇಗೌಡರು ಜಾತ್ಯಾತೀತ ವ್ಯಕ್ತಿ: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ. ಎಲ್ಲಾ ಜನಾಂಗ, ಜಾತಿಯವರನ್ನು ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದರು. ಅವರ ಆಡಳಿತ ಕಾಲದಲ್ಲಿ ಅವರು ಕೈಗೊಂಡ ಅಭಿವೃದ್ಧಿಯನ್ನು…

Read More

ಬೆಂಗಳೂರು: ರಾಜ್ಯ ಗೃಹ ಇಲಾಖೆಯ ಆಧುನೀಕರಣಗೊಳಿಸಲು ವಿಶೇಷ ಅನುದಾನಕ್ಕಾಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಯ ಕೆಲ ಯೋಜನೆಗಳು ಬಾಕಿ ಉಳಿದಿವೆ. ಹೀಗಾಗಿ ಮುಖ್ಯಮಂತ್ರಿಯವರು ಮತ್ತು ಉಪಮುಖ್ಯಮಂತ್ರಿಯವರು ನನ್ನನ್ನು ದೆಹಲಿಗೆ ಕರೆದಿದ್ದಾರೆ ಎಂದರು. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರ ಮನೆ ನಿರ್ಮಾಣ ಮಾಡಲಾಗಿದೆ. ರಾಜ್ಯ ಸರ್ಕಾರವು ಶೇ. 75ರಷ್ಟು ಪೊಲೀಸರಿಗೆ ಮನೆ ನಿರ್ಮಿಸಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ಪ್ರಸ್ತುತ ಶೇ. 40ರಷ್ಟು ಮನೆ ನಿರ್ಮಿಸಲಾಗಿದೆ. ಅಲ್ಲದೇ, ಇಲಾಖೆಯ ಆಧುನೀಕರಣಕ್ಕೆ ಅನುದಾನ ನೀಡುವಂತೆಯೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಸಿಎಂ ಅವರು ಪ್ರಧಾನ ಮಂತ್ರಿಯ ಸಮಯ ಕೇಳಿದ್ದಾರೆ. ಅಲ್ಲಿಯೂ ಪ್ರಸ್ತಾಪ ಮಾಡಲಾಗುವುದು ಎಂದು ಹೇಳಿದರು. ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಕೇಂದ್ರದ ಎಲ್ಲ ಸಚಿವರನ್ನು ಹಾಗೂ ಎಲ್ಲ ಸಂಸದರನ್ನು ಆಹ್ವಾನಿಸಲಾಗಿದೆ. ರಾಜ್ಯದ ಸಮಸ್ಯೆಗಳನ್ನು ಗಮನಕ್ಕೆ…

Read More

ಕೊರಟಗೆರೆ : ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು. ತಾಲೂಕು ಪಂಚಾಯತಿಯ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ತಹಶೀಲ್ದಾರ್ ಮಂಜುನಾಥ್ ಕೆ. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ವಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಮತ್ತು ನಿರ್ದೇಶಕರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಕೆ., ರಾಜ್ಯ ಸರ್ಕಾರದ ಆದೇಶದಂತೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಈ ಬಾರಿ ವಿಭಿನ್ನವಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಿದ್ದೇವೆ. ತಾಲೂಕಿನ ಸರ್ಕಾರಿ ಶಾಲೆಗಳ ಮಕ್ಕಳಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ,ಸನ್ಮಾನಿಸಿ, ಕೆಂಪೇಗೌಡರ ಆಶಯದಂತೆ ಅವರ ಜೀವನದ ಮೌಲ್ಯದಾರಿತ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ…

Read More

ಪಾವಗಡ: ಬೆಳೆ ವಿಮೆ ಸಮೀಕ್ಷೆ, ಬೆಳೆ ವಿಮೆ ನೋಂದಣಿ ವಿಚಾರವಾಗಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹಾಯಕ ಕೃಷಿ ನಿರ್ದೇಶಕ ಬೀರೆದ್ರ ಬಾಬು ರೈತರಿಗೆ ತರಬೇತಿ ನೀಡಿದರು. ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯತಿ ಆವರಣದಲ್ಲಿತರಬೇತಿ ನೀಡಿದ ಅವರು, ರೈತರಿಗೆ ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು. ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ…

Read More

ತುರುವೇಕೆರೆ: ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು. ಪಟ್ಟಣದ ವೈ ಟಿ ರಸ್ತೆಯ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಏಳು ಜನ ಸ್ಪಂದನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಇದು ಎಂಟನೇ ಕಾರ್ಯಕ್ರಮ ಪ್ರಮುಖವಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು. ನಮ್ಮ ಜಿಲ್ಲೆಯಲ್ಲಿ ಕಳೆದ ವರ್ಷದ ಬೆಳೆ ವಿಮೆ 70 ಕೋಟಿ ರೂಪಾಯಿಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಕೇವಲ 70000…

Read More

ಸ್ಯಾಂಡಲ್ ವುಡ್ ಸದ್ಯ ಸಿನಿಮಾಗಳ ಬದಲಿಗೆ ಕೊಲೆ ಪ್ರಕರಣ, ಡೈವೋರ್ಸ್ ಸುದ್ದಿಗೆ ಇದೀಗ ಭಾರೀ ಸದ್ದು ಮಾಡಿಕೊಂಡಿದೆ. ಈಗ ಈ ಡಿವೋರ್ಸ್ ತಮಿಳು ಚಿತ್ರರಂಗದ ಖ್ಯಾತ ನಟನಿಗೂ ತಟ್ಟಿದೆ ಎನ್ನಲಾಗಿದೆ. ಈ ಕುರಿತು ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ. ಕಾಲಿವುಡ್ ಅಂಗಳದಲ್ಲಿ ಜಯಂ ರವಿ ಮತ್ತು ಆರತಿ ರವಿ ಅವರ ದಾಂಪತ್ಯದಲ್ಲಿ ಬಿರುಕು ಮಾಡಿದೆ ಎನ್ನುವ ಸುದ್ದಿ ಬಹಳ ಬೇಗ ಹರಡುತ್ತಿದೆ. ಏಕೆಂದರೆ ಆರತಿ ರವಿ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಗಂಡ ಜಯಂ ರವಿ ಅವರ ಜೊತೆಗಿರುವ ಎಲ್ಲಾ ಫೋಟೋಗಳನ್ನು ಅಳಿಸಿ ಹಾಕಿದ್ದು, ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಈ ಊಹಾಪೋಹಗಳು ನಿಜವೇ? ಅಥವಾ ಸುಳ್ಳೂಆಗಬಹುದೇ ಎಂಬುವುದನ್ನು ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಸಿಗುತ್ತೆ ಕಾದು ನೋಡಬೇಕು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More