Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಇನ್’ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ನಟ ದರ್ಶನ್ ಅವರಿಗೆ ಕೇಡು ಬಯಸಿದವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ. ಆದರೆ, ದರ್ಶನ್ ಅಭಿಮಾನಿಗಳು ತಾಳ್ಮೆ ಕಳೆದುಕೊಂಡು ಮಾತನಾಡದೇ ಶಾಂತಿಯಿಂದ ಇರಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ ನಮಗೆ ನ್ಯಾಯ ಸಿಕ್ಕೇ ಸಿಗುತ್ತೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ.…
ಚಿನ್ನ ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. ಪ್ರತಿ ಗ್ರಾಂ ಚಿನ್ನದ ರೇಟ್ ಏನು?: ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ, 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,200 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 43,200 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 52,800 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,600…
ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡ್ವಾಣಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ರಾಮ ಮಂದಿರ ಹೋರಾಟದಲ್ಲಿ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ಅಡ್ವಾಣಿ, ಇತ್ತೀಚೆಗೆ ನಡೆದ ರಾಮಮಂದಿರ ಉದ್ಘಾಟನೆಗೂ ಆಗಮಿಸಿರಲಿಲ್ಲ. 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್ ವೈದ್ಯರು ಕಾರಣವನ್ನು ಬಹಿರಂಗಪಡಿಸಿಲ್ಲ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರ ಅಡಿಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕೀಯ, ದೇಶದ ಆಡಳಿತ, ದೇಶಕ್ಕಾಗಿ ಅವರ ಅಘಮ್ಯ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗ ಭಾರತ ರತ್ನವನ್ನು ನೀಡಿ ಅಡ್ವಾಣಿಯವರನ್ನು ಗೌರವಿಸಲಾಗಿದೆ. 2024ರ ಮಾರ್ಚ್…
ಮಹಿಳೆಯರು ಹಾಗೂ ಕೆಲ ಪುರುಷರು ಬಿಳಿ ಕೂದಲನ್ನು ಮರೆ ಮಾಚಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ ದೇಹಕ್ಕೆ ತಂಪು ಎಂಬ ಭಾವನೆ ಹಲವರಲ್ಲಿ ಇದೆ. ನಿಮ್ಮ ಕೂದಲನ್ನು ಕಪ್ಪಾಗಿಸಿಕೊಳ್ಳಲು ನೀವು ಕೂಡ ಮೆಹಂದಿ ಬಳಸುತ್ತಿದ್ದರೆ, ಮೊದಲು ಅದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಮೆಹಂದಿಯು ಜನಪ್ರಿಯ ನೈಸರ್ಗಿಕ ಕೂದಲು ಬಣ್ಣ ಮತ್ತು ಕಂಡಿಷನರ್ ಆಗಿದ್ದರೂ, ಅದರ ಸಂಭಾವ್ಯ ಅಡ್ಡಪರಿಣಾಮಗಳ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ಮೆಹಂದಿಯು ಅದರ ಕಂಡೀಷನಿಂಗ್ ಗುಣಲಕ್ಷಣಗಳಿಂದ ಮೆಚ್ಚುಗೆ ಪಡೆದರೂ, ಕೆಲವರಲ್ಲಿ ಇದರಿಂದ ಕೂದಲು ಒರಟಾಗುವುದನ್ನು ನಾವು ಗಮನಿಸಬಹುದು. ನಿಮ್ಮ ಕೂದಲಿಗೆ ಮೆಹಂದಿ ಆಗಾಗ ಹಚ್ಚುವುದರಿಂದ ನಿಮ್ಮ ಕೂದಲಿನ ನೈಸರ್ಗಿಕ ಕೂದಲಿನ ಬಣ್ಣವನ್ನು ಹಾನಿಗೊಳಿಸುತ್ತದೆ. ಅಲ್ಲದೇ ಈ ಮೆಹಂದಿ ಬಣ್ಣ ಮಾಸಿದಾಗ ನಿಮ್ಮ ಕೂದಲು ಕೆಂಪು ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತದೆ. ನಿಮ್ಮ ಕೂದಲಿಗೆ ಮೆಹಂದಿ ಹಚ್ಚುವುದರಿಂದ ಕೂದಲಿನ ನೈಸರ್ಗಿಕ ತೈಲಗಳು ಹೊರಹೋಗುತ್ತವೆ. ಇದರಿಂದ ನಿಮ್ಮ ಕೂದಲು ಶುಷ್ಕವಾಗಿರುತ್ತದೆ. ಮೆಹಂದಿಯನ್ನು ನೆತ್ತಿಗೆ ಹಚ್ಚಿದ ನಂತರ ಕೂದಲನ್ನು ಸರಿಯಾಗಿ ತೊಳೆಯದಿದ್ದರೆ, ಮೆಹಂದಿ…
ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು: ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರುಗಳು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಿದಲ್ಲಿ ಜನರು ಸರ್ಕಾರವನ್ನು ದೂರುವುದು ತಪ್ಪುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. 15 ದಿನದೊಳಗೆ ಅರ್ಜಿ ವಿಲೇವಾರಿಗೆ ಸೂಚನೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ತುರುವೇಕೆರೆ ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿಂದು ಆಯೋಜಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಪಂಚಾಯಿತಿ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಜನರಿಂದ ವಿವಿಧ ಸೌಲಭ್ಯ ಕೋರಿ ಸ್ವೀಕೃತವಾದ ಅರ್ಜಿಗಳು ಅರ್ಹವೇ? ಅನರ್ಹವೇ? ಎಂದು ಪರಿಶೀಲಿಸಿ ೧೫ ದಿನಗಳೊಳಗಾಗಿ ವಿಲೇವಾರಿ ಮಾಡಬೇಕು. ಸ್ಥಳೀಯ ಅಧಿಕಾರಿಗಳು ನಿಗಧಿತ ಸಮಯದೊಳಗೆ ವಿಲೇವಾರಿ ಮಾಡದೇ ಹೋದರೆ ಜನರು ಜಿಲ್ಲಾ ಕೇಂದ್ರಕ್ಕೆ ಬರುತ್ತಾರೆ. ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ದೂರದ ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಬೇಕು ಎಂದು ತಿಳಿಸಿದರು. ಪಿಂಚಣಿ ಸೌಲಭ್ಯ ಮನೆ ಬಾಗಿಲಿಗೆ ತಲುಪಿಸಿ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿಧವಾ…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿ ಕಡಿತಕ್ಕೊಳಗಾಗುವ ನಾಗರೀಕರಿಗೆ ದಾಖಲೆಗಳ ಪರಿಶೀಲನಾ ಮತ್ತು ಪರಿಹಾರಧನ ವಿತರಣೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗುವ ವ್ಯಕ್ತಿಗಳಿಗೆ ತಗುಲುವ ಚಿಕಿತ್ಸಾ ವೆಚ್ಚ, ಪರಿಹಾರ ಧನ ಹಾಗೂ ಮರಣ ಸಂಭವಿಸಿದ್ದಲ್ಲಿ ಮರಣ ಹೊಂದಿದವರ ಸಂಬಂಧಿತರಿಗೆ ಮರಣೋತ್ತರ ಪರಿಹಾರಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ಸಮಿತಿ ರಚಿಸುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಆಯುಕ್ತರಿಂದ 5 ಮಂದಿಗೆ ಪರಿಹಾರ ಧನ ವಿತರಣೆ : ರೇಬಿಸ್ ನಾಯಿಯ ದಾಳಿಗೆ ಒಳಗಾದ ರಾಮಕೃಷ್ಣ ರಾವ್ ಬಿನ್ ನಾಗಪ್ಪ(೬೫ ವರ್ಷ), ಸಂಜೀವಿನಿ ಬಿನ್ ರಮೇಶ್(೯ ವರ್ಷ), ಶಿವಮ್ಮ ಕೋಂ ರಾಜಶೇಖರ್(೫೨ ವರ್ಷ), ಜಾಹೀದ್ ಖಾನ್ ಬಿನ್ ನಯಾಜ್ ಖಾನ್(೧೪ ವರ್ಷ) ಮತ್ತು ಬಾಬಾ ಜಾನ್ ಎಂ ಬಿನ್ ಮೆಹಬೂಬ್ ಪಾಷ (೩೦ ವರ್ಷ) ಅವರಿಗೆ ತಲಾ ೫,೦೦೦ ರೂ.ಗಳಂತೆ ಪಾಲಿಕೆ ವತಿಯಿಂದ ಆಯುಕ್ತ…
ಬೆಂಗಳೂರು: ನಾಡದೊರೆ ಕೆಂಪೇಗೌಡ ಜಯಂತಿ ಆಚರಣೆ ಸಂದರ್ಭ, ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಂಪೇಗೌಡ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ಗೊತ್ತಾಗಿದೆ. ಆದರೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ‘ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ನಗರದ ಬೆಳವಣಿಗೆಗೆ ಕೊಡುಗೆ ನೀಡಿದ್ದೇನೆ. ಕೆಂಪೇಗೌಡರಿಗೆ ಗೌರವ ತರುವ ಕೆಲಸಗಳನ್ನು ಮಾಡಿದ್ದೇನೆ. ಈಗ ಅವರು ನನ್ನ ಹೆಸರನ್ನು ಸೇರಿಸಿದರೆ, ನಾನು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ. ನಾಳೆ, ರಾಷ್ಟ್ರಪತಿಗಳು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಆಗ ನಾನು ಇಲ್ಲಿ ದೆಹಲಿಯಲ್ಲೀ ಹಾಜರಿರಬೇಕು.…
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಯಾವುದೇ ಆತಂಕವಿಲ್ಲ ಎಂದು ಎಐಐಎಂಎಸ್ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಮಾಜಿ ಉಪಪ್ರಧಾನಿ ಅವರನ್ನು ಕಳೆದ ದಿನ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್.ಕೆ.ಅಡ್ವಾಣಿ ಅವರು ಪ್ರಸ್ತುತ ಏಮ್ಸ್ನ ಜೆರಿಯಾಟ್ರಿಕ್ ವಾರ್ಡ್ನಲ್ಲಿ ನಿಗಾದಲ್ಲಿದ್ದಾರೆ. ಈ ವರ್ಷ ರಾಷ್ಟ್ರವು 96 ವರ್ಷದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್.ಕೆ.ಅಡ್ವಾಣಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ಅಡ್ವಾಣಿ ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ, ತಜ್ಞರ ಚಿಕಿತ್ಸೆಗೆ ಏಮ್ಸ್ ಎಲ್ಲಾ ಸೌಲಭ್ಯಗಳನ್ನು ಸಿದ್ಧಪಡಿಸಲಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲ, ಪಟ್ಟಣ ಮತ್ತು ನಗರಗಳಲ್ಲಿಯೂ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾರ್ವಜನಿಕರಿಂದ 10 ಮತ್ತು 20 ರೂ.ಗಳ ನಾಣ್ಯಗಳನ್ನು ತೆಗೆದುಕೊಳ್ಳಲು ಆಸಕ್ತಿ ವಹಿಸುತ್ತಿಲ್ಲ! 10, 20 ರೂಪಾಯಿ ನಾಣ್ಯಗಳು ಅಮಾನ್ಯ ಎಂಬ ಅಭಿಪ್ರಾಯ ಜನರಲ್ಲಿದೆ. ಈ ಬಗ್ಗೆ ರಿಸರ್ವ್ ಬ್ಯಾಂಕ್ ಹಲವಾರು ಪ್ರಕಟಣೆಗಳನ್ನು ಹೊರಡಿಸಿದ್ದರೂ, ವ್ಯಾಪಾರಿಗಳು 10 ಮತ್ತು 20 ರೂ.ಗಳ ನಾಣ್ಯಗಳು ಅಮಾನ್ಯವಾಗಿವೆ ಎಂದು ಸುಳ್ಳು ಮಾಹಿತಿಯನ್ನ ಹರಡುತ್ತಿದ್ದಾರೆ. ಸರ್ಕಾರಿ ಮಾನ್ಯತೆ ಪಡೆದ ಕರೆನ್ಸಿಯನ್ನು ಖರೀದಿಸಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತ ಸರ್ಕಾರವು ಅನುಮೋದಿಸಿದ 10 ಮತ್ತು 20 ರೂ.ಗಳ ನಾಣ್ಯಗಳನ್ನ ಅಮಾನ್ಯಗೊಳಿಸುವುದು ಅಥವಾ ಸ್ವೀಕರಿಸಲು ನಿರಾಕರಿಸುವುದು ಅಥವಾ ಹಣಕ್ಕೆ ಪ್ರತಿಯಾಗಿ ನೀಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಪ್ರಕಾರ, ಭಾರತ ಸರ್ಕಾರ ಅನುಮೋದಿಸಿದ ನಾಣ್ಯಗಳನ್ನ ಖರೀದಿಸಲು ನಿರಾಕರಿಸುವುದು ಅಪರಾಧವಾಗಿದೆ. ಈ ಅಪರಾಧಕ್ಕೆ ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಭಾರತ ಸರ್ಕಾರ ಅನುಮೋದಿಸಿದ ಕರೆನ್ಸಿಯನ್ನ…
ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಕ್ಕೆ ಮಲಯಾಳಿ ವಿದ್ಯಾರ್ಥಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ ಮಲಯಾಳಿ ಮತ್ತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೃಪಾ ಮರಿಯಾ ಜಾರ್ಜ್, ಒಕ್ಕೂಟದ ಅಧ್ಯಕ್ಷ ಅತೀಕ್ ಅಹಮದ್, ಮೋಹಿತ್, ಸೊಹೈಲ್ ಅಹಮದ್ ಮತ್ತು ಆಸಿಕಾ ವಿ.ಎಂ. ಉಪಕುಲಪತಿಗಳ ನಿವಾಸದ ಮೇಲೆ ಅತಿಕ್ರಮ ಪ್ರವೇಶ ಹಾಗೂ ದಾಳಿಗೆ ಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಸೇಡಿನ ಕ್ರಮ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಸಂಘಕ್ಕೆ ಅನುದಾನ ನೀಡುವಲ್ಲಿ ವಿಳಂಬ ಹಾಗೂ ವಾರ್ಷಿಕ ಸಂಭ್ರಮಾಚರಣೆ ಕಾರ್ಯಕ್ರಮ ‘ಸುಕೂಂ’ ನಡೆಸಲು ಅವಕಾಶ ನೀಡದಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ವಿಶ್ವವಿದ್ಯಾನಿಲಯ ಒಕ್ಕೂಟವು ಎಸ್ ಎಫ್ ಐ ನೇತೃತ್ವದಲ್ಲಿದೆ. ಜುಲೈ 1 ರಿಂದ ಆರು ತಿಂಗಳ ಕಾಲ ತರಗತಿಗಳಿಂದ ದೂರ ಉಳಿಯಲು ಮತ್ತು ಹಾಸ್ಟೆಲ್ ಖಾಲಿ ಮಾಡಲು ಕ್ರಮ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ತಿಳಿಸಿದೆ. ಅಂತಹ ಕ್ರಮದ ಸಂದರ್ಭದಲ್ಲಿ, ವಿದ್ಯಾರ್ಥಿಯ ಫೆಲೋಶಿಪ್ ಅನ್ನು ರದ್ದುಗೊಳಿಸಲಾಗುತ್ತದೆ.…