Author: admin

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, “ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ . ವಿಜಯನಗರ,  ಯಾದಗಿರಿ ,ಗದಗ ,ಕೋಲಾರ, ಚಾಮರಾಜನಗರ, ರಾಮನಗರ,ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದರು. ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯ ವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಿಸಿದ ಕೃಷಿ ಸಚಿವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು. ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ  ಜಿ.ಟಿ ಪುತ್ರ ಅಪರ ನಿರ್ದೇಶಕರಾದ ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು. ನಮ್ಮತುಮಕೂರಿನ…

Read More

ಕರ್ನಾಟಕ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಕಡೆಯ ಸಚಿವರು ರಾಜ್ಯ ಸರ್ಕಾರದಲ್ಲಿ  ಹೆಚ್ಚಿನ ಉಪಮುಖ್ಯಮಂತ್ರಿಗಳ ಬೇಡಿಕೆ ಇಟ್ಟಿದ್ದಾರೆ. ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಸಚಿವರ ಬೇಡಿಕೆಗಳಿಗೆ ಡಿ.ಕೆ. ಶಿವಕುಮಾರ್ ತೃಪ್ತಿ ಇಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ. ಇನ್ನೂ ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂಬ ನಿಲುವಿನಲ್ಲಿ ಸಿದ್ದರಾಮಯ್ಯ ಇದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ನಿರೀಕ್ಷಿತ ಗೆಲುವು ಸಾಧಿಸದಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರೇ ಸಂಪೂರ್ಣ ಹೊಣೆ ಎಂದು ಸಿದ್ದರಾಮಯ್ಯ ಅವರ ಕಡೆಯ ಕೆಲ ಸಚಿವರು ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಷ್ಟು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕಾರವಾರ: ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆಗಳನ್ನು ಕಡಿಮೆ ಖರ್ಚಿನಲ್ಲಿ ಒದಗಿಸಲು ಮಾಡಬೇಕಾದ ಸುಧಾರಣೆಗಳನ್ನು ಹಾಗೂ ಇಲಾಖೆಗಳ ಒಟ್ಟಾರೆ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಆದ್ಯತೆಯನ್ನು ನೀಡಿದ್ದು, ಜನವರಿ 2024 ರ ಅಂತ್ಯಕ್ಕೆ 39 ಇಲಾಖೆಗಳಿಗೆ ಸಂಬ0ಧಿಸಿದ 7 ವರದಿಗಳನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಗಳಲ್ಲಿ ಒಟ್ಟು 5039 ಶಿಫಾರಸ್ಸುಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಆಡಳಿತ ಸುಧಾರಣೆಯ ಬಗ್ಗೆ ಸಲಹೆಗಳನ್ನು ಸ್ವೀಕರಿಸಿ ಮಾತನಾಡಿದರು. ಮೇ 2024 ರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆ.ಸು) ಯವರೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನÀದ…

Read More

ತುಮಕೂರು‌: ನಟ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಾಲ್ವರು ಆರೋಪಿಗಳನ್ನ ತುಮಕೂರಿನ ಕಾರಾಗೃಹಕ್ಕೆ  ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಆದೇಶ ಹಿನ್ನೆಲೆ‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಯಿತು. ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ತಂದು ಇರಿಸಲಾಗಿದೆ. ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ  ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನ ಸ್ಥಳಾಂತರ ಮಾಡಲಾಯಿತು. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು:  ಕಳವು ಮಾಲು  ಸ್ವೀಕರಿಸಿದ ಆರೋಪದ ಮೇರೆಗೆ ಅಟ್ಟಿಕಾ ಗೋಲ್ಡ್ ಕಂಪನಿಯ ಬಾಬು @ಪಿ.ಎಸ್.ಅಯ್ಯೂಬ್ ಬಿನ್ ಸೈಯದ್ ಬಾಷಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಟ್ಟಿಕ ಬಾಬು ಮನೆಯ ಬಳಿ  ವಶಕ್ಕೆ ಪಡೆದಿರುವ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕ ಲೋಹಿತ್ ಬಿ.ಎನ್ ಮತ್ತು ಸಿಬ್ಬಂದಿಯವರು ಕುಣಿಗಲ್ ಡಿ.ಎಸ್.ಪಿ  ರವರ ಮತ್ತು ತುಮಕೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹಾಗೂ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ತುರುವೇಕೆರೆ ಪೊಲೀಸ್ ಠಾಣಾ ಮೊ.ನಂ-185/2023 ಕಲಂ–454, 380, 411, 413 ಐಪಿಸಿ ಪ್ರಕರಣದಲ್ಲಿ ಕಳುವು ಮಾಲು ಸ್ವೀಕರಿಸಿರುವ ಆರೋಪಿಯನ್ನಾಗಿ ಪರಿಗಣಿಸಲಾಗಿತ್ತು. ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕರು, ನಂ–ಟಿ–3, ಮರಿಯಮ್ಮ ಅಪಾರ್ಟ್ಮೆಂಟ್ಸ್, ಪ್ರೆಜರ್ ಟೌನ್ ಬೆಂಗಳೂರು ಇವರನ್ನು ಜೂನ್ 26ರಂದು ಸಂಜೆ 6.00 ಗಂಟೆಗೆ ಬೆಂಗಳೂರಿನ ಇವರ ಮನೆಯ ಬಳಿ ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಚುನಾವಣೆ ರ‍್ಯಾಲಿ ಇರಲಿ, ರಕ್ಷಾಬಂಧನವೇ ಇರಲಿ, ಎಲ್ಲಿಯೇ ಮಕ್ಕಳನ್ನು ಕಂಡರೂ ಅವರೊಂದಿಗೆ ಮೋದಿ ಬೆರೆಯುತ್ತಾರೆ. ಅವರ ಜತೆ ಒಂದಷ್ಟು ಕಾಲ ಕಳೆಯುತ್ತಾರೆ. ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 26)  ಸಂಸತ್‌ ಅಧಿವೇಶನ, ಪ್ರತಿಪಕ್ಷಗಳ ಗಲಾಟೆ, ನೂತನ ಸ್ಪೀಕರ್‌ ಆಯ್ಕೆಯ ಭರಾಟೆಯ ಮಧ್ಯೆಯೂ ಮೋದಿ ಅವರು ಇಬ್ಬರು ಪುಟಾಣಿಗಳೊಂದಿಗೆ ಕಾಲ ಕಳೆದಿದ್ದಾರೆ. ಇಬ್ಬರು ಪುಟಾಣಿಗಳೊಂದಿಗೆ ಮೋದಿ ಸಮಯ ಕಳೆದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.ಆ ಇಬ್ಬರು ಪುಟಾಣಿಗಳು ಯಾರು ಎಂದು  ಎಲ್ಲರಿಗೂ ಪ್ರಶ್ನೆಯಾಗಿದ್ದು ಇಲ್ಲಿದೆ ಉತ್ತರ‌‌. ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಇಬ್ಬರು ಮೊಮ್ಮಕ್ಕಳು ಸಂಸತ್‌ ಗೆ ಆಗಮಿಸಿದ್ದಾರೆ. ಅವರು ನರೇಂದ್ರ ಮೋದಿ ಅವರ ಕಚೇರಿಗೆ ತೆರಳಿದ್ದು, ಇಬ್ಬರೂ ಆಗಮಿಸುತ್ತಲೇ ಮೋದಿ ಅವರು ನಗುತ್ತಲೇ ಅವರನ್ನು ಸ್ವಾಗತಿಸಿದ್ದಾರೆ. ಇನ್ನು, ಪುಟಾಣಿಗಳೂ ಅಷ್ಟೇ, ಮೋದಿ ಅವರ ಎದುರು ದೇಶಭಕ್ತಿ ಗೀತೆಯನ್ನು ಒಟ್ಟಿಗೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಕಾರಣವೇನು ಗೊತ್ತೆ ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಿಗ್ಗೆವರೆಗೆ ಭಾರೀ ಮಳೆಯಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗುತ್ತಿದೆ. ನಾಳೆ ಭಾರೀ ಮಳೆ ಸುರಿಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದಲ್ಲಿ ಮಂಗಳವಾರ ಗ್ರಾಮದೇವತೆ ಕರಿಯಮ್ಮದೇವಿ ಹಾಗೂ ಕೊಲ್ಲಾಪುರದಮ್ಮದೇವಿಯರ ಜಾತ್ರಾ ಮಹೋತ್ಸವವು ವೈಭವದಿಂದ ನೆರವೇರಿತು. ಜಾತ್ರೆಯ ಅಂಗವಾಗಿ ಮೊದಲ ಸೋಮವಾರ ಗಂಗಾಪೂಜೆ, ಗಣಪತಿ ಪೂಜೆ, ನವಗ್ರಹ ಹೋಮ ದುರ್ಗಾ ಹೋಮ ಪೂರ್ಣಾಹುತಿ ಇತ್ಯಾದಿಗಳು ನೆರವೇರಿದವು. ಅನ್ನಲಪುರಿ ಆಂಜನೇಯಸ್ವಾಮಿಗೆ ಗ್ರಾಮಸ್ಥರು ಜ್ಯೋತಿ ಬೆಳಗಿದರು. ಮಂಗಳವಾರ ಗ್ರಾಮದೇವತೆಗಳಿಗೆ ಗ್ರಾಮದ ಮಹಿಳೆಯರು ಜ್ಯೋತಿ ಬೆಳಗಿ ಸಂಭ್ರಮಿಸಿದರು. ಬುಧವಾರದಂದು ಶ್ರೀ ಪಾತಲಿಂಗೇಶ್ವರ ದೇವರಿಗೆ ವಿಶೇಷ ಪೂಜೆಗಳು ನೆರವೇರಿದವು. ಹಬ್ಬದ ಹಿನ್ನೆಲೆ ಗ್ರಾಮದಲ್ಲಿ ಮೂರು ದಿನಗಳ ಕಾಲ ಸಂಭ್ರಮ ಮನೆ ಮಾಡಿತ್ತು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ತನ್ನನ್ನ ನಿರ್ಲಕ್ಷ್ಯ ಮಾಡಿ ನಿರ್ಮಾಣಕ್ಕೆ ಮುಂದಾದ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ದೈವ ಮುನಿಸಿಕೊಂಡಿದೆ. ದೈವ ಮುನಿಸಿಕೊಂಡ ಪರಿಣಾಮ ಅಲ್ಲಿ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡಿಯುತ್ತಿವೆ. ಆದ್ರೆ, ಮಂಗಳೂರಿನ ಹಂಪನಕಟ್ಟೆಯಹಳೆ ಬಸ್ ನಿಲ್ದಾಣ ಇದ್ದ ಸ್ಥಳದಲ್ಲಿ ಕಳೆದ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. ಈ ಗುಳಿಗನ ಕೋಪದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಕಾಮಗಾರಿ ಸ್ಥಳದಲ್ಲಿ ಪಿಲ್ಲರ್ ಎದ್ದಿರೋದು ಬಿಟ್ರೆ ಬಹುಅಂತಸ್ತಿನ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ : ನೀನೇನು ಎಸಿನಾ ಅಥವಾ ಡಿಸಿನಾ ನಿನ್ನಿಂದ ನಾನು ಹೆದರೋಕೆ.. ನಿನ್ನ ಹೆಸರೇನು ಹೇಳಿ ನೋಡು ನಾನೇನು ಮಾಡ್ತೀನಿ ಅಂತಾ ಗೊತ್ತಾಗುತ್ತೆ.. ನಾನು ಯಾರಿಗೂ ಹೆದರೋದಿಲ್ಲ ಹೆದರಿಸೋಕೆ ಬರಬೇಡಿ ನೀವು. ನಾನು ಪ್ರಕರಣ ದಾಖಲು ಮಾಡ್ತಿದ್ರೇ ನೀವು ಜೈಲಿಗೆ ಹೋಗ್ತಿರಾ ಹುಷಾರ್ ಎಂದು ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ.ನವೀನ್ ಚಿಕಿತ್ಸೆಗೆಂದು ನಾನು ಹೋದ ಸಂದರ್ಭದಲ್ಲಿ ನನಗೆ ಬೆದರಿಕೆ ಹಾಕಿದ್ದಾನೆ ಎಂದು ದಲಿತ ಹೋರಾಟಗಾರ ಚಿಕ್ಕರಂಗಯ್ಯ ಆರೋಪಿಸಿದ್ದಾರೆ. ಕೊರಟಗೆರೆ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಜೂನ್ 25ರ ಮಂಗಳವಾರ ಬೆಳಿಗ್ಗೆ 11ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಡಾ.ನವೀನ್ ಜೂನ್ 24ರ ಸೋಮವಾರ ಬೆಳಿಗ್ಗೆ 9ರಿಂದ ಜೂನ್ 25ರ ಮಂಗಳವಾರ ಬೆಳಿಗ್ಗೆ 9ರವರೆಗೆ ಕರ್ತವ್ಯನಿರತ ವೈದ್ಯರು.  ಆದರೆ ಅವರು ಕರ್ತವ್ಯದಲ್ಲಿರಲಿಲ್ಲ. ಅವರನ್ನು ಪ್ರಶ್ನೆ ಮಾಡಿದರೆ ಸಮವಸ್ತ್ರವೂ ಧರಿಸದೇ ರೋಗಿಗಳ ಜೊತೆಗೆ ಉದ್ಧಟತನದಿಂದ ವರ್ತಿಸಿದ್ದಾರೆ.  ಘಟನೆಗೂ ನವೀನ್ ಗೂ  ಸಂಬಂಧ ಏನು.? ಕೊರಟಗೆರೆ…

Read More