Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತಿಪಟೂರು: ಅರವಿಂದ ಆಯುರ್ವೇದ ಚಿಕಿತ್ಸಾಲಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಪರವಗೊಂಡನಹಳ್ಳಿ ಜಾನಕಿ ರಾಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ 40 ಮಂದಿ ಮಹಿಳಾ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಬಿ.ಪಿ, ಶುಗರ್, ಹಾಗೂ ಆರೋಗ್ಯ ತಪಾಸಣೆ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಅರವಿಂದ ಆಯುರ್ವೇದದ ಅನುಭವಿ ವೈದ್ಯರ ತಂಡ ಭಾಗಿಯಾಗಿದ್ದರು. ಮಹಿಳೆಯರ ಆರೋಗ್ಯ ಸಂಬಂಧಿ ಕಾಯಿಲೆಗಳು ಹಾಗೂ ವೈದ್ಯಕೀಯ ಸಲಹೆ ಸೂಚನೆಗಳನ್ನು ಸಹ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖ್ಯಾತ ಆಯುರ್ವೇದ ತಜ್ಞರಾದ ಡಾ.ಪ್ರಶಾಂತ್ ನೈಸರ್ಗಿಕ ಆಯುರ್ವೇದ ಚಿಕಿತ್ಸೆ ಮೂಲಕ ಸಂಪೂರ್ಣ ಸ್ವಾಸ್ಥ್ಯವನ್ನು ಪಡೆದುಕೊಳ್ಳಬಹುದು, ಮಹಿಳೆಯರಿಗೆ ದೀರ್ಘ ಕಾಲದಿಂದಲೂ ಕಾಡುವ ಸಮಸ್ಯೆಗಳನ್ನು ಸಹ ಪರಿಣಾಮಕಾರಿಯಾಗಿ ಆಪ್ತ ಸಮಾಲೋಚನೆಗಳು, ವೈಯಕ್ತಿಕ ಚಿಕಿತ್ಸಾ ವಿಧಾನಗಳ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ನುಡಿದರು. ಅರವಿಂದ ಆಯುರ್ವೇದದಲ್ಲಿ ಇರುವಂತಹ ಶಾಸ್ತ್ರೀಯ ಆಯುರ್ವೇದ ಮಾದರಿಯ ಚಿಕಿತ್ಸಾ ವಿಧಾನಗಳು ಬಹಳ ಪರಿಣಾಮಕಾರಿಯಾಗಿರುತ್ತವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.…
ತುಮಕೂರು: ಮಕ್ಕಳ ಮಾರಾಟ ಜಾಲವನ್ನು ಪತ್ತೆಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಮಾರಾಟ ಮಾಡಲಾಗಿದ್ದ 5 ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಹೇಶ ಯು.ಡಿ., ಮಹಬೂಬ್, ಕೆ.ಎನ್. ರಾಮಕೃಷ್ಣಪ್ಪ, ಹನುಮಂತರಾಜು, ಮುಬಾರಕ್ ಪಾಷ, ಪೂರ್ಣಿಮಾ ಹಾಗೂ ಸೌಜನ್ಯ ಎಂಬ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜೂನ್ 9ರಂದು ರಾತ್ರಿ ಗುಬ್ಬಿ ತಾಲೂಕಿನ ಅಂತಾಪುರ ಬಳಿ ಮಹಾದೇವಿ ರವರ 11 ತಿಂಗಳ ಮಗುವನ್ನು ದುಷ್ಕರ್ಮಿಗಳು ಅಪಹರಿಸಿರುವ ಬಗ್ಗೆ ಗೋಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೇವಸ್ಥಾನದ ಬಳಿ ಸಂತ್ರಸ್ತ ತನ್ನ ಕುಟುಂಬದೊಂದಿಗೆ ಮಲಗಿದ್ದಾಗ ರಾತ್ರಿ ವೇಳೆಯಲ್ಲಿ 11 ತಿಂಗಳ ಮಗುವನ್ನು ವ್ಯವಸ್ಥಿತ ರೀತಿಯಲ್ಲಿ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ತಂಡವನ್ನು ರಚನೆ ಮಾಡಲಾಗಿತ್ತು. ತನಿಖಾ ತಂಡವು ಮಗುವನ್ನು ಕಳ್ಳತನ ಮಾಡಿದ ಆರೋಪದ ಮೇರೆಗೆ ಗುಬ್ಬಿ ತಾಲ್ಲೂಕು ಬಿಕ್ಕೇಗುಡ್ಡವಾಸಿ ರಾಮಕೃಷ್ಣ ಹಾಗೂ ತುಮಕೂರು ನಗರ ಭಾರತೀ ನಗರದ ವಾಸಿ ಹನುಮಂತರಾಜು ಬಿನ್ ಲೇಟ್ ಕರಿಯಪ್ಪ ಎಂಬುವರನ್ನು ಬಂಧಿಸಿದ್ದರು. ಅವರು…
ಬೆಂಗಳೂರು: ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂನ್ 26ರಂದು ಆಚರಿಸಲು ನಿರ್ಣಯಿಸಿತು. ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು. ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು. ಕೊಲೆ ಪ್ರಕರಣಗಳನ್ನು…
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಐಡಿ ವಶದಲ್ಲಿರುವ ವಿಧಾನಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಸೂರಜ್ ರೇವಣ್ಣ ವಿರುದ್ಧ ಇದೀಗ ಮತ್ತೊಂದು ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ. ಕೊರೋನ ಸಂದರ್ಭದಲ್ಲಿ ಸೂರಜ್ ರೇವಣ್ಣ ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಅವರ ಆಪ್ತ ಶಿವಕುಮಾರ್ ಹೊಳೆನರಸೀಪುರ ಠಾಣೆಯಲ್ಲಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಶಿವಕುಮಾರ್ ಈ ಹಿಂದೆ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತನ ವಿರುದ್ಧವೇ ಬ್ಲ್ಯಾಕ್ ಮೇಲ್ ಪ್ರಕರಣ ದಾಖಲಿಸಿದ್ದು, ಬಳಿಕ ನಾಪತ್ತೆಯಾಗಿದ್ದರು. ಮಂಗಳವಾರ ಶಿವಕುಮಾರ್ ಹೊಳೆನರಸೀಪುರ ಠಾಣೆಗೆ ಹಾಜರಾಗಿ ಸೂರಜ್ ರೇವಣ್ಣ ವಿರುದ್ಧವೇ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಮೊದಲ ಸಂತ್ರಸ್ತ ಸೂರಜ್ ರೇವಣ್ಣ ಅವರನ್ನು ಬ್ಲ್ಯಾಕ್ಮೇಲ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸೂರಜ್ ರೇವಣ್ಣರ ಒತ್ತಡದ ಹಿನ್ನೆಲೆಯಲ್ಲಿ ಮೊದಲ ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ದಾಖಲಿಸಿದ್ದೆ. ಸೂರಜ್ ನನಗೆ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ ಸಂಬಂಧ ಅಶ್ಲೀಲ ವಿಡಿಯೊ ಪೆನ್ ಡ್ರೈವ್ ಹಂಚಿಕೆ ಆರೋಪದಡಿ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ)–ಲೈಂಗಿಕ ಕಿರುಕುಳ, 354 (ಡಿ) ಮಹಿಳೆಯ ನಿರಾಸಕ್ತಿಯ ಹೊರತಾಗಿಯೂ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿರುವುದು, 354 ಬಿ-ಮಹಿಳೆ ಮೇಲೆ ಆಕ್ರಮಣ ಹಾಗೂ ಮಾಹಿತಿ, 506-ಜೀವ ಬೆದರಿಕೆ ಹಾಗೂ ಐಟಿ ಕಾಯ್ದೆಯಡಿ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಹೊಳೆನರಸೀಪುರ, ಕೆ.ಆರ್.ನಗರ, ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದೆ. ನಾಲ್ಕನೇ ಪ್ರಕರಣದಲ್ಲಿ ಪ್ರಜ್ವಲ್ ಮೊದಲ ಆರೋಪಿಯಾದರೆ, ಪ್ರೀತಂ ಗೌಡ ನಾಲ್ಕನೇ ಆರೋಪಿಯಾಗಿದ್ದಾರೆ. ಹೀಗಾಗಿ,…
ರಸ್ತೆ ಅಪಘಾತವೊಂದರಲ್ಲಿ ನಟ ದರ್ಶನ್ ಅಭಿಮಾನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ನಡೆದಿದೆ. ಟಿ.ನರಸೀಪುರ ಪಟ್ಟಣದ ವಿನಾಯಕ ಕಾಲೋನಿಯಲ್ಲಿ ವಾಸವಿದ್ದ ದರ್ಶನ್ ಅಭಿಮಾನಿ ರವಿ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ರವಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಮೃತ ಧರಿಸಿದ್ದ ಟಿ ಶರ್ಟ್ ಮೇಲೆ ದರ್ಶನ್ ಅವರ ಫೋಟೋ ಇರುವುದು ಕಂಡುಬಂದಿದೆ.. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಮೃತದೇಹವನ್ನು ಟಿ. ನರಸೀಪುರ ಸಾರ್ವಜನಿಕರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದು ಮೃತ ಸಂಬಂಧಿಕರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ ಭಾಗ್ಯ ಎಂದು ಹಾಲಿನ ದರ ಏರಿಕೆ ಬಗ್ಗೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾಸ್ವಾಮಿ ಅವರು ಮಾಡಿರುವ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿ ನಾಳೆ ಈ ಬಗ್ಗೆ ಜಾಹೀರಾತು ನೀಡಲಾಗುತ್ತಿದೆ. ಬೆಲೆ ಏರಿಕೆ ಮಾಡಿಲ್ಲ. ಹಾಲಿನ ಪ್ರಮಾಣ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದರು. ಹಾಲಿನ ಉತ್ಪಾದನೆ ಜಾಸ್ತಿಯಾಗಿದ್ದು ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಹೆಚ್ಚು ಹಾಲು ನೀಡಿ ದರ ಹೆಚ್ಚಿಸಲಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಚಿಕನ್ ಪೀಸ್ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶಾದ್ ನಗರದಲ್ಲಿ ನಡೆದಿದೆ. ಅಣ್ಣಾರಾಮ್ ಗ್ರಾಮದ ಶ್ರೀಕಾಂತ್(39 ವರ್ಷ) ಮೃತಪಟ್ಟ ಯುವಕನಾಗಿದ್ದು, ಚಿಕನ್ ಬಿರಿಯಾನಿ ತಿನ್ನುವಾಗ ಚಿಕನ್ ಪೀಸ್ ಗಂಟಲಲ್ಲಿ ಸಿಕ್ಕಿಕೊಂಡಿದ್ದು, ಇದರಿಂದ ಉಸಿರುಗಟ್ಟಿ ವ್ಯಕ್ತಿ ಸಾವನ್ನಪ್ಪಿದ್ದಾನೆ. ಬಿರಿಯಾನಿ ತಿನ್ನುವಾಗ ಚಿಕನ್ ಪೀಸ್ ವೊಂದು ಗಂಟಲಲ್ಲಿ ಸಿಕ್ಕಿಕೊಂಡಿದೆ. ಇದರಿಂದಾಗಿ ಸಂಕಟ ತಡೆಯಲಾರದೇ ಆತ ಹೊರಗೆ ಎದ್ದು ಬಂದಿದ್ದಾನೆ.. ಅದನ್ನು ಉಗುಳಲು ಎಷ್ಟು ಪ್ರಯತ್ನಿಸಿದರೂ ಆಗಿಲ್ಲ. ಅಷ್ಟಲ್ಲಿ ಉಸಿರುಗಟ್ಟಿ ಬಾರ್ ಮುಂದೆಯೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಅತಿಯಾದ ಮದ್ಯ ಸೇವನೆಯಿಂದ ಸಾವನ್ನಪ್ಪಿರಬಹುದೆಂದು ಮೊದಲು ಶಂಕಿಸಲಾಗಿತ್ತು.. ಆದ್ರೆ ಗಂಟಲಲ್ಲಿ ಚಿಕನ್ ಸಿಕ್ಕಿ ಹಾಕಿಕೊಂಡಿದ್ದರಿಂದಲೇ ಸಾವನ್ನಪ್ಪಿರೋದು ಅಂತ ವೈದ್ಯರು ಪರೀಕ್ಷೆ ಮಾಡಿದ ನಂತರ ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಗಂಟಲಲ್ಲಿ ಚಿಕನ್ ಪೀಸ್ ಇರುವುದು ಗೊತ್ತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…
ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಣೆ ಸಾಧ್ಯವಿದೆಯಂತೆ. ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಗ್ಯಾಸ್ ಸಮಸ್ಯೆ ನಿವಾರಣೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಹಸಿ ಬೆಳ್ಳುಳ್ಳಿಯನ್ನು ಜಗಿಯುವ ಅಭ್ಯಾಸ ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಹಲವಾರು ಆರೋಗ್ಯಕರ ಲಾಭಗಳಾಗಲಿವೆ. ಬೆಳ್ಳುಳ್ಳಿಯಲ್ಲಿರುವ ‘ಅಲಿಸಿನ್’ ಎಂಬ ಅಂಶ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬೆಳ್ಳುಳ್ಳಿ ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳನ್ನು ಹೊಂದಿದೆ. ಪ್ರತಿದಿನ ಬೆಳಗ್ಗೆ ಬೆಳ್ಳಳ್ಳಿಯ ಒಂದು ಎಸಳನ್ನು ಜಗಿಯುವ ಅಭ್ಯಾಸ ಮಾಡೊಕೊಳ್ಳಬೇಕು. ಇದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಪರಿಹಾರವಾಗುತ್ತವೆ. ಹಸಿ ಬೆಳ್ಳುಳ್ಳಿ ಉತ್ತಮ ಜೀರ್ಣಕ್ರಿಯೆಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದೆ. ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಗ್ಯಾಸ್, ಹೊಟ್ಟೆಯುಬ್ಬರ, ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಕರುಳಿನ ಚಲನೆಯನ್ನು ಸರಾಗಗೊಳಿಸುತ್ತದೆ. ಬೆಳ್ಳುಳ್ಳಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಅವು ಹೊಟ್ಟೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಮಾಡುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಚಿಕ್ಕಮಗಳೂರು: ಮದ್ಯದ ಅಂಗಡಿ ನುಗ್ಗಿ ಮದ್ಯ ಹಾಗೂ ಲಕ್ಷಾಂತರ ಹಣ ದೋಚಿದ್ದ ಮೂವರು ಅಂತರ್ ಜಿಲ್ಲಾ ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಲ್ಲಿ ಒಬ್ಬ ಕುರಿಕಳ್ಳ, ಮತ್ತೊಬ್ಬ ದೇವಸ್ಥಾನದ ಹುಂಡಿ ಕಳ್ಳ, ಇನ್ನೊಬ್ಬ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸದಸ್ಯನಾಗಿದ್ದಾನೆ. ಹಾಸನ, ಚಿಕ್ಕಮಗಳೂರು ಜಿಲ್ಲೆಯ ಈ ಮೂವರು ಎಣ್ಣೆ ಕಳ್ಳರು, ವಿವಿಧ ಜಿಲ್ಲೆ ಸುತ್ತಿ ಎಣ್ಣೆ ಅಂಗಡಿಗಳನ್ನು ದೋಚುವುದೇ ಇವರ ಕೆಲಸ, ನಗರ ಪ್ರದೇಶಗಳಿಂದ ದೂರ ಇರುವ ಎಣ್ಣೆ ಅಂಗಡಿಗಳೇ ಇವರ ಟಾರ್ಗೆಟ್ಯಾಗಿತ್ತು ಎಂದು ಹೇಳಲಾಗಿದೆ. ದಾವಣಗೆರೆ ತುಮಕೂರು ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಕಳ್ಳತನ ಮಾಡಿದ್ದಾರೆ. ಇವರಲ್ಲಿ ಇಬ್ಬರು ಡ್ರೈವರ್ ಗಳು ಮತ್ತೊಬ್ಬ ಮಾನವ ಹಕ್ಕುಗಳ ಆಯೋಗದ ಸದಸ್ಯ, ಕಳೆದ ಮೇ 5 ರಂದು ಮರ್ಲೆ ಗ್ರಾಮದ ಎಂಎಸ್ ಐಎಲ್ ಮದ್ಯದ ಅಂಗಡಿಗೆ ಕನ್ನ ಹಾಕಿದ್ದ ಇವರ ಬೆನ್ನಿಗೆ ಬಿದ್ದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ನೇತೃತ್ವದ ತಂಡ ಮೂವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸ್ಟ್ರಿಎಣ್ಣೆಗಳು ಬಿಯರ್…