Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಸಕಲೇಶಪುರ: ಪಟ್ಲಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವ ಆರೋಪದ ಮೇಲೆ ಇದೀಗ ಆರೋಪಿಗಳಾದ ಜೀಪು ಚಾಲಕರ ಬಂಧನವಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪ್ರವಾಸಿತಾಣವಾದ ಪಟ್ಲಬೆಟ್ಟ ಬಳಿ ಜೀಪ್ ಹಾಗೂ ಪಿಕ್ ಅಪ್ ವಾಹನ ಚಾಲಕರು ಜೂ.23 ರಂದು ಬೈಕ್ ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದು, ಈ ಕುರಿತು ದೂರನ್ನು ನೀಡಲಾಗಿತ್ತು. ಇದೀಗ ಜೀಪು ಚಾಲಕರ ಬಂಧನವಾಗಿದೆ. ಬೈಕ್ ನಲ್ಲಿ ಬಂದಿದ್ದ ಪ್ರವಾಸಿಗರು ಪಟ್ಲಬೆಟ್ಟಕ್ಕೆ ಭೇಟಿ ನೀಡಿ ವಾಪಸ್ ಬರುವಾಗ ಅಡ್ಡಗಟ್ಟಿ ಹಲ್ಲೆ ನಡೆಸಲಾಗಿರುವ ವೀಡಿಯೋವೊಂದು ವೈರಲ್ ಆಗಿತ್ತು. ಜೀಪುಗಳನ್ನು ಬಾಡಿಗೆ ಪಡೆಯದೇ ತಮ್ಮ ಬೈಕ್ ನಲ್ಲಿ ಹೋಗಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ಕುರಿತು ದಕ್ಷಿಣ ಕನ್ನಡ ಮೂಲದ ಪ್ರವಾಸಿಗರಾದ ಭುವಿತ್ ಪೂಜಾರಿ ದೂರನ್ನು ನೀಡಿದ್ದರು. ಗಗನ್, ಕಿರಣ್, ನಿಶಾಂತ್, ಮದನ್ ಎಂಬುವವರ ಮೇಲೆ ಯಸಳೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧನ…
ಚಿತ್ರದುರ್ಗದ ರೇಣುಕಾಸ್ವಾಮಿಗೆ ಸಂಬಂಧಪಟ್ಟಂತೆ ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದ ಎಸ್.ಐ. ನೇತ್ರಾವತಿ ಎಂಬುವವರಿಗೆ ಈಗ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ. ಆರೋಪಿಯಾಗಿರುವ ಪವಿತ್ರಾ ಗೌಡಗೆ ಮೇಕಪ್ ಕಿಟ್ ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು ಎನ್ನುವ ಆರೋಪ ಪೊಲೀಸ್ ಅಧಿಕಾರಿ ನೇತ್ರಾವತಿ ಅವರ ಮೇಲೆ ಇದ್ದು, ಇದೀಗ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಸಮಯದಲ್ಲಿ ಪವಿತ್ರಾ ಗೌಡ ಮೇಕಪ್ ಮಾಡಿಕೊಂಡಿದ್ದು, ಜೂನ್ 15 ರಂದು ರಾಜರಾಜೇಶ್ವರಿ ಮನೆಗೆ ಸ್ಥಳ ಮಹಜರಿಗೆ ಹೋಗುವಾಗ ಹಿಂತಿರುಗಿ ಬರುವಾಗ ಮೇಕಪ್ ಮಾಡಿಕೊಂಡು ತುಟಿಗೆ ಲಿಪ್ಸ್ಟಿಕ್ ಹಾಕಿ ಹೊರ ಬಂದಿದ್ದರು ಎನ್ನಲಾಗಿದೆ. ಇದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಹೋಗುವಾಗ ಮಾಮೂಲಿಯಾಗಿ ಹೋಗಿದ್ದು, ಮಹಜರು ಮುಗಿಸಿ ವಾಪಸ್ ಬರುವ ಸಮಯದಲ್ಲಿ ಮೇಕಪ್ ಮಾಡಿಕೊಂಡು ಮುಖ ತಿರುವಿಕೊಂಡು ಬಂದಿದ್ದ ವೀಡಿಯೋ ವೈರಲ್ ಆಗಿತ್ತು. ವಿಜಯನಗರ ಠಾಣೆ ಎಸ್ಐ ನೇತ್ರಾವತಿ ಅವರಿಗೆ ಕರ್ತವ್ಯಲೋಪದಡಿ ರೂಲ್ 7 ರ…
ಹಾಸನ: ವೈದ್ಯರು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೆಡಿಕಲ್ ಗೆ ಹೋಗಿ ಔಷಧಿ ತಗೊಂಡು ಬನ್ನಿ ಎಂದು ಚೀಟಿ ಬರೆದುಕೊಡುವುದು ಸಾಮಾನ್ಯ. ಆದರೀಗ ಹಾಸನದ ವೈದ್ಯರೊಬ್ಬರು ಈ ರೀತಿ ಔಷಧಿಗಾಗಿ ಬರೆದುಕೊಟ್ಟ ಚೀಟಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿ ಮೂಳೆ ಮುರಿತದ ಶಸ್ತ್ರಚಿಕಿತ್ಸೆಗೆ ಏನೆಲ್ಲಾ ಔಷಧಿ ತರಬೇಕೆಂದು ವೈದ್ಯರು ಬರೆದ ಚೀಟಿ ಎಲ್ಲೆಡೆ ಸುದ್ದಿಯಾಗುತ್ತಿದೆ. ಯಾಕೆಂದರೆ ಅದರಲ್ಲಿ ಚಿಕಿತ್ಸೆಗೆ ಮೆಹಂದಿ ಕೋನ್ ತರುವಂತೆ ಬರೆದುಕೊಟ್ಟಿದ್ದಾರೆ. ಆರಂಭದಲ್ಲಿ ಮೆಹೆಂದಿ ಕೋನ್ ನಿಂದ ಯಾವ ಚಿಕಿತ್ಸೆ ನೀಡುತ್ತಾರೆ ಎಂಬ ಪ್ರಶ್ನೆ ಜನರಲ್ಲಿ ಅಚ್ಚರಿ ಮೂಡಿಸಿತ್ತು. ಆದರೆ, ಮೂಳೆ ಮುರಿತದ ಶಸ್ತ್ರಚಿಕಿತ್ಸೆಗೆ ಹಾಸನದ ವೈದ್ಯರು ಮೆಹಂದಿ ಕೋನ್ ಅನ್ನು ಔಷಧಿಯಾಗಿ ಬಳಕೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಡಾಕ್ಟರ್ ಔಷಧಿ ಚೀಟಿಯಲ್ಲಿ ಒಂದು ಮೆಹೆಂದಿ ಕೋನ್ ಹಾಗೂ ಎರಡು ಕ್ರೇಪ್ ಬ್ಯಾಂಡೇಜ್ ತರುವಂತೆ ಬರೆದುಕೊಟ್ಟಿದ್ದರು. ಕಾಲು ಮೂಳೆ ಮುರಿದು ಬ್ಯಾಂಡೇಜ್ ಹಾಕಿಕೊಂಡಿದ್ದ ರೋಗಿ ಅದನ್ನು ಹುಡುಕಿಕೊಂಡು ಮೆಡಿಕಲ್ ಶಾಪ್, ಬ್ಯಾಂಗಲ್ ಸ್ಟೋರ್ ಅಲೆಯುತ್ತಿದ್ದಾಗ…
ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಚರ್ಚಿಸಿದರು. ಈ ವೇಳೆ ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಸೂಚಿಸಿದರು. ಸಭೆಯ ಮುಖ್ಯಾಂಶಗಳು ಹೀಗಿದೆ: ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಘಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ.ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ.ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ…
18ನೇ ಲೋಕಸಭೆಯ ಸ್ಪೀಕರ್ ಆಯ್ಕೆ ಮಂಗಳವಾರ ನಾಟಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳ ಕೂಟವಾಗಿರುವ ‘ಇಂಡಿಯಾ’ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಇದರಿಂದಾಗಿ 1976ರ ಬಳಿಕ ಅಂದರೆ 48 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಲೋಕಸಭೆಯ ಮುಖ್ಯಸ್ಥ ಹುದ್ದೆಗೆ ಬುಧವಾರ ಬೆಳಗ್ಗೆ 11ಕ್ಕೆ ಚುನಾವಣೆ ನಡೆಯಲಿದೆ. ಹೊಸ ಸಂಸತ್ತಿನಲ್ಲಿ ಆಸನಗಳ ಹಂಚಿಕೆ ಮುಗಿದಿಲ್ಲ ಹಾಗೂ ಎಲೆಕ್ಟ್ರಾನಿಕ್ ಮತದಾನ ವ್ಯವಸ್ಥೆ ಕೂಡ ಜಾರಿಗೆ ಬಂದಿಲ್ಲ. ಬುಧವಾರ ಬೆಳಗ್ಗೆ 11ಕ್ಕೆ ಚೀಟಿ ಮೂಲಕ ಸಂಸದರು ಮತ ಚಲಾವಣೆ ಮಾಡಲಿದ್ದಾರೆ. ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಈವರೆಗೆ 2 ಬಾರಿ ಮಾತ್ರ ಚುನಾವಣೆ ನಡೆದಿವೆ.ಇದೀಗ ಮೂರನೇ ಬಾರಿಗೆ ಚುನಾವಣೆ ನಡೆಯುತ್ತಿದೆ. ಮಿತ್ರಪಕ್ಷಗಳಾದ ತೆಲುಗುದೇಶಂ ಹಾಗೂ ಜೆಡಿಯು ಕಣ್ಣಿಟ್ಟಿದ್ದವು ಎಂದು ಹೇಳಲಾಗಿದ್ದ ಸ್ಪೀಕರ್ ಸ್ಥಾನವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, 17ನೇ ಲೋಕಸಭೆಯಲ್ಲಿ ಐದು ವರ್ಷಗಳ ಕಾಲ ಸ್ಪೀಕರ್ ಆಗಿದ್ದ ತನ್ನ ಸಂಸದ ಓಂ ಬಿರ್ಲಾ ಅವರನ್ನು…
‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾಗೆ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ವಿಶ್ವಾದ್ಯಂತ ಸಿನಿಮಾ ಜೂನ್ 27ರಂದು ರಿಲೀಸ್ ಆಗಲಿದೆ. ಈ ಮಧ್ಯೆ ಪ್ರಭಾಸ್ ಅಭಿಮಾನಿಗಳು ಸಖತ್ ಕನ್ ಫ್ಯೂಸ್ ಮಾಡಿಕೊಂಡಿದ್ದಾರೆ. ಅದ್ಯಾವ ಮಟ್ಟಿಗೆ ಎಂದರೆ 2019ರಲ್ಲಿ ರಿಲೀಸ್ ಆದ ‘ಕಲ್ಕಿ’ ಚಿತ್ರಕ್ಕೆ ಟಿಕೆಟ್ ಬುಕ್ ಮಾಡಿದ್ದಾರೆ. ಈ ಸಿನಿಮಾ ರೀ–ರಿಲೀಸ್ ಆಗಿದ್ದು ಆರು ಶೋಗಳು ಹೌಸ್ ಫುಲ್ ಆಗಿವೆ. ತೆಲುಗು ನಟ ರಾಜಶೇಖರ್ ನಟನೆಯ ‘ಕಲ್ಕಿ’ ಸಿನಿಮಾ 2019ರಲ್ಲಿ ರಿಲೀಸ್ ಆಗಿತ್ತು. ಈ ಚಿತ್ರದ ಟಿಕೆಟ್ ನ ಫ್ಯಾನ್ಸ್ ಬುಕ್ ಮಾಡಿದ್ದಾರೆ. ಆ ಬಳಿಕ ಅವರಿಗೆ ತಪ್ಪಿನ ಅರಿವಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆಗುತ್ತಿದ್ದು, ಇದರಿಂದ ಲಾಭ ಮಾಡಿಕೊಳ್ಳಲು ರಾಜಶೇಖರ್ ಸಿನಿಮಾ ತಂಡದವರು ಮುಂದಾದರೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಪ್ರಭಾಸ್ ಫ್ಯಾನ್ಸ್ ಚಿತ್ರತಂಡವನ್ನು ಶಪಿಸುತ್ತಿದ್ದಾರೆ. ಸಾಮಾನ್ಯವಾಗಿ ಒಂದೇ ಹೆಸರಿನ ಸಿನಿಮಾಗಳು ರಿಲೀಸ್ ಆದರೆ ಜನರಿಗೆ ಗೊಂದಲ ಉಂಟಾಗುತ್ತದೆ. ಇದಕ್ಕಾಗಿಯೇ ‘ಕಲ್ಕಿ’ ತಂಡದವರು ಈ…
ಬೆಂಗಳೂರು : ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ಹೇಳಿದರು. ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು, ಉದ್ಯೋಗ ಸಿಗಬೇಕಿದೆ. ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದನ್ನೆಲ್ಲ ಬಿಟ್ಟು 49 ವರ್ಷದ…
ತುಮಕೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಾರ್ವಜನಿಕರ ಕುಂದು ಕೊರತೆ ಬಗೆಹರಿಸಲು ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಇವರ ಸಹಯೋಗದೊಂದಿಗೆ ಮಧುಗಿರಿ ಪುರಸಭೆ ಮಾಲಿಮರಿಯಪ್ಪ ರಂಗಮAದಿರ ಆವರಣದಲ್ಲಿಂದು ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು. ಅವರ ಸಮಸ್ಯೆಗಳು ತ್ವರಿತವಾಗಿ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು. ನಕಾಶೆ ರಸ್ತೆ, ವಾಡಿಕೆ ರಸ್ತೆ, ಜಮೀನು ಒತ್ತುವರಿಯಂತಹ ಪ್ರಕರಣಗಳು ಪ್ರಸ್ತುತ ಹೆಚ್ಚಾಗುತ್ತಿವೆ. ರೈತರು ತಮ್ಮ ಜಮೀನಿಗೆ ತೆರಳಲು ಸುಗಮವಾದ ರಸ್ತೆ ಅವಶ್ಯಕ. ಈ ನಿಟ್ಟಿನಲ್ಲಿ ಇರುವಂತಹ ಅಡೆ-ತಡೆಗಳನ್ನು ನಿವಾರಿಸಲು ಅಧಿಕಾರಿಗಳು ಕ್ರಮವಹಿಸಬೇಕು. ತಾಲ್ಲೂಕಿನ ೨೫ಸಾವಿರ ಪಹಣಿ ಖಾತೆಗಳ ಪ್ರಕರಣ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಕುಂದು ಕೊರತೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ಜನಸ್ಪಂದನ ಕಾರ್ಯಕ್ರಮ-ಜಿಲ್ಲಾಧಿಕಾರಿ ಕಾರ್ಯಕ್ರಮ…
ದೇಶದ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ ಶ್ರೀ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಇದೀಗ ಮತ್ತೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ ತೊಂದರೆ ಆಗಲಿದೆ. ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನು ಅನ್ನೋದನ್ನು ಸಮಗ್ರವಾಗಿ ಶ್ರಾವಣದಲ್ಲಿ ಹೇಳುವೆ. ಅಶುಭ ಈಗಲೇ ನುಡಿಯಬಾರದು. ಶುಭವೋ ಅಶುಭವೋ ಎಂದು ಶ್ರಾವಣದಲ್ಲಿ ಹೇಳುವೆ ಎಂದು ಸ್ಪಷ್ಟಪಡಿಸಿದರು. ಇನ್ನು ಇದೇ ವೇಳೆ ರಾಜಕೀಯ ಬಗ್ಗೆ ಮಾತನಾಡಿರುವ ಕೋಡಿಶ್ರೀ, ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ, ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಲಿ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ. ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ…
ತುರುವೇಕೆರೆ: ಜೂನ್ 27 ರಂದು ತುರುವೇಕೆರೆ ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ಜಯಂತಿಯನ್ನು ತಾಲೂಕು ಮಟ್ಟದ ನಾಡಹಬ್ಬದ ರೀತಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಜ್ಜಾಗಿದ್ದು, ಇದರ ಸಂಪೂರ್ಣ ನೇತೃತ್ವವನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ವಹಿಸಲಿದ್ದಾರೆ ಎಂದು ಒಕ್ಕಲಿಗ ಸಂಘದ ಅಧ್ಯಕ್ಷರಾದ ವಕೀಲರಾದ ಪಿ.ಹೆಚ್.ಧನಪಾಲ್ ತಿಳಿಸಿದರು. ತುರುವೇಕೆರೆ ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಬಿ ಜಿ ಎಸ್ ಸಮುದಾಯ ಭವನದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘವು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದು ಈ ಬಾರಿಯ ಜಯಂತಿಯನ್ನು ಜಾತ್ಯಾತೀತವಾಗಿ ಆಚರಿಸಬೇಕು ಎಂಬ ಪರಿಕಲ್ಪನೆಯನ್ನು ಮಾನ್ಯ ಶಾಸಕರು ಸೂಚನೆ ನೀಡಿದ್ದಾರೆ ಅದರಂತೆಯೇ ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿಯೂ ತೀರ್ಮಾನವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ನಶಿಸಿ ಹೋಗುತ್ತಿರುವ ಸ್ಥಳೀಯ ಜಾನಪದ ಪ್ರಕಾರಗಳನ್ನು ಗುರುತಿಸಿ ಕಲಾವಿದರುಗಳನ್ನು ಮುನ್ನಡೆಗೆ ತರಬೇಕು ಕಲೆಗಳನ್ನು ಉಳಿಸಬೇಕು ಎಂಬ ಯೋಜನೆಯನ್ನು ಹೊಂದಿದ್ದು ಕೋಲಾಟ, ಕಹಳೆ, ಸೋಮನ ಕುಣಿತ, ನಂದಿ ಧ್ವಜದಂತಹ ಕಲಾಪ್ರಕಾರಗಳು ಮೆರವಣಿಗೆ ಹೆಜ್ಜೆ ಹಾಕಲಿದ್ದು, ಮೆರವಣಿಗೆ ರಂಗನ್ನು ಹೆಚ್ಚಿಸಲಿದೆ ಎಂದರು.…