Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಬೆಂಗಳೂರು: ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯ ಪಾರ್ಕ್ನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಪನ್ನಿರ್ ಸೆಲ್ವಂ(37) ಹತ್ಯೆಗೀಡಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ಆರೋಪಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಲ್ಲೇಶ್ವರಂನ ಎಂಡಿ ಬ್ಲಾಕ್ ನಿವಾಸಿಯಾಗಿದ್ದ ಪನ್ನೀರ್ ಸೆಲ್ವಂ ಗಾರೆ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪನ್ನೀರ್ ಸೆಲ್ವಂಗೆ ನಾಲ್ವರು ಚಿಕ್ಕಮಕ್ಕಳಿದ್ದು, ಪತ್ನಿ ಜೊತೆ ವಾಸವಿದ್ದರು. ನಿನ್ನೆ ಸಂಜೆ ಯಾವುದೋ ವಿಚಾರಕ್ಕೆ ಪನ್ನೀರ್ ಸೆಲ್ವಂ ಹಾಗೂ ಇತರ ಇಬ್ಬರು ವ್ಯಕ್ತಿಗಳು ಪಾರ್ಕ್ನಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಹಣಕಾಸಿನ ವಿಚಾರದಲ್ಲಿ ಗೆಳೆಯನೇ ತನ್ನ ಸ್ನೇಹಿತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆ ಯಾಕತ್ ಪುರ್ ಗ್ರಾಮದಲ್ಲಿ ನಡೆದಿದೆ. ಶಹಾಗಂಜ್ ನಿವಾಸಿ ಮೊಹಮ್ಮದ್ ಸಿರಾಜ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ತನ್ನ ಬಾಲ್ಯ ಸ್ನೇಹಿತ ಯಾಸಿನ್ ಎಂಬಾತನಿಗೆ 12 ಲಕ್ಷ ರೂಪಾಯಿ ಸಾಲ ಕೊಟ್ಟಿದ್ದ. ಯಾಸಿನ್ 11 ಲಕ್ಷ ರೂಪಾಯಿ ತೀರಿಸಿದ್ದ. ಇನ್ನು 1 ಲಕ್ಷ ರೂಪಾಯಿ ಕೊಡೋದು ಬಾಕಿ ಇತ್ತು. ಇದಕ್ಕಾಗಿ ಸಿರಾಜ್ ದಿನವೂ ಪೀಡಿಸುತ್ತಿದ್ದನಂತೆ. ಬೇಗ ಹಣ ಕೊಡುವಂತೆ ದಿನವೂ ಒತ್ತಡ ಹೇರುತ್ತಿದ್ದನಂತೆ. ಇದರಿಂದ ಆಕ್ರೋಶಗೊಂಡಿದ್ದ ಯಾಸಿನ್, ಹಣ ನೀಡುತ್ತೇನೆ ಬಾ ಎಂದು ಮೊಹಮ್ಮದ್ ಸಿರಾಜ್ ನನ್ನು ಕರೆಸಿಕೊಂಡಿದ್ದಾನೆ. ಹಣ ಕೊಡುತ್ತಾನೆ ಎಂದು ನಂಬಿಕೊಂಡು ಬಂದ ಸಿರಾಜ್ ಗೆ ಮೊದಲು ಯಾಸಿನ್ ಸುತ್ತಿಗೆಯಿಂದ ತಲೆಗೆ ಬಲವಾದ ಪೆಟ್ಟು ನೀಡಿದ್ದಾನೆ. ನಂತರ ಚಾಕುವಿನಿಂದ ಕುತ್ತಿಗೆ ಕುಯ್ದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಉತ್ತರ ಕನ್ನಡ: ಯುವತಿಯೊಬ್ಬಳ ಜೊತೆ ಪ್ರೀತಿಸುವ ನಾಟಕವಾಡಿ, ಮದುವೆಯಾಗುತ್ತೇನೆಂದು ನಂಬಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬ ಆಕೆಯಿಂದ ಸುಮಾರು 18 ಲಕ್ಷ ರೂಪಾಯಿ ಪೀಕಿ ವಂಚನೆ ಮಾಡಿದ್ದಾನೆ ಎಂದು ಆರೋಪ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಈ ಘಟನೆ ನಡೆದಿದ್ದು, ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸುಚಿತ್ರ ಎಂಬ ಯುವತಿ ದೂರು ನೀಡಿದವರಾಗಿದ್ದಾರೆ. ಮುಂಡಗೋಡು ಪೊಲೀಸ್ ಠಾಣೆಯ ಕಾನ್ಸ್’ಟೇಬಲ್ ಗಿರೀಶ್ ಲವ್ ಮಾಡುತ್ತೇನೆ. ಮದುವೆಯಾಗುತ್ತೇನೆ ಎಂದು ನಂಬಿಸಿದ್ದು, ನಂತರ ತನಗೆ ಕಷ್ಟ ಇದೆ ಎಂದು ಹೇಳಿಕೊಂಡು ಯುವತಿಯಿಂದ 18 ಲಕ್ಷ ರೂಪಾಯಿ ಪಡೆದಿದ್ದ. ಆ ಬಳಿಕ ಮದುವೆಯೂ ಆಗದೆ, ಹಣವೂ ವಾಪಸ್ ಕೊಡದೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸುಚಿತ್ರ ಮೊದಲಿಗೆ ಎಸ್ ಪಿ ವಿಷ್ಣವರ್ದನ್ ಅವರಿಗೆ ದೂರು ಕೊಟ್ಟಿದ್ದರು. ಈ ವೇಳೆ ಆರೋಪಿಯನ್ನು ಕರೆಸಿ ಮಾತನಾಡಿದ್ದಾರೆ. ಹಣ ತೆಗೆದುಕೊಂಡಿರುವ ನಿಜ. ವಾಪಸ್ ಕೊಡುತ್ತೇನೆ ಎಂದು ಹೇಳಿದ್ದಳಂತೆ. ನಂತರ ಮದುವೆಯಾಗದೇ ವಂಚಿಸಿದ್ದಾನೆಂದು ಸುಚಿತ್ರ ಕಳೆದ ರಾತ್ರಿ ಮುಂಡಗೋಡು…
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆದ್ರೆ ಅದಾಗಲೇ ದೇವಸ್ಥಾನ ಮೇಲ್ಛಾವಣಿ ಸೋರುತ್ತಿದೆಯಂತೆ. ಹೀಗಂತ ದೇಗುಲದ ಅರ್ಚಕ ಸತ್ಯೇಂದ್ರ ದಾಸ್ ಅವರೇ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಸದ್ಯ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ರಾಮಮಂದಿರದ ಛಾವಣಿ ಸೋರುತ್ತಿದೆ ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದಾರೆ. ಗರ್ಭಗುಡಿಯ ಛಾವಣಿ ಮೂಲಕ ನೀರು ಒಳಗೆ ಬಂದಿದೆ. ಸುಸಜ್ಜಿತವಾಗಿಯೇ ದೇಗುಲ ಕಟ್ಟಿದ್ದರೂ ನೀರು ಸೋರುತ್ತಿದೆ ಎಂದು ಅರ್ಚಕರು ಹೇಳಿದ್ದಾರೆ. ಇನ್ನು ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ದೇಗುಲ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ, ಇನ್ನೂ ಮಂದಿರದ ಕಾಮಗಾರಿ ಮುಗಿದಿಲ್ಲ. ಕಾಮಗಾರಿ ನಡೆಯುತ್ತಿರುವಾಗ ಸೋರುವುದು ಸಹಜ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ರಾಮಲಲ್ಲಾ ವಿಗ್ರಹದ ಮುಂಭಾಗದಲ್ಲಿ ಅರ್ಚಕರು ಕುಳಿತುಕೊಳ್ಳುವ ಸ್ಥಳದಲ್ಲಿ ಮಳೆ ನೀರು ಸೋರುತ್ತಿದೆ ಎಂದು ತಿಳಿದುಬಂದಿದೆ.. ಎಂಜಿನಿಯರ್ಗಳು ಇದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಶಿರಾ ತಾಲ್ಲೂಕು ಆಡಳಿತ ಸೌಧದಲ್ಲಿ ಶಾಸಕ ಹಾಗೂ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ೩೮೧ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈವರೆಗೂ ಜಿಲ್ಲೆಯ ಪಾವಗಡ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲೂಕುಗಳಿಗಿಂತ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಹೆಚ್ಚಿನ ಅಹವಾಲುಗಳು ಸ್ವೀಕೃತವಾಗಿವೆ. ೩೮೧ ಅರ್ಜಿ ಸ್ವೀಕಾರ: ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೩೦೭, ನಗರಸಭೆ ೧೫, ಕೃಷಿ ಇಲಾಖೆ ೧೦, ಶಿಕ್ಷಣ ಇಲಾಖೆ ೨, ಸಮಾಜ ಕಲ್ಯಾಣ ಇಲಾಖೆ ೧, ಅರಣ್ಯ ಇಲಾಖೆ ೧, ಸಣ್ಣ ನೀರಾವರಿ ೨, ಭೂ ದಾಖಲೆಗಳ ಇಲಾಖೆ ೯, ಆರೋಗ್ಯ ೧, ಕೆಎಸ್ ಆರ್ ಟಿಸಿ ೫, ತಾಲ್ಲೂಕು ಪಂಚಾಯತಿ ೨೨, ಆಹಾರ ೪, ಇತರೆ ೨ ಸೇರಿದಂತೆ ಒಟ್ಟು ೩೮೧ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ವಯೋವೃದ್ಧರಿಗೂ ಸ್ಪಂದಿಸದ ಅಧಿಕಾರಿಗಳು: ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ವಯೋವೃದ್ಧರ ಮನವಿಗಳಿಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಶಿರಾ ತಾಲ್ಲೂಕಿನ ಜನತೆ ಜನಸ್ಪಂದನ…
18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲೆಂದು ತಮ್ಮ ಸೀಟಿನಿಂದ ಮೇಲೇಳುತ್ತಿದ್ದಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ಸಂವಿಧಾನ ಸುದೀರ್ಘವಾಗಿ ಬಾಳಲಿ ಎಂದು ಘೋಷಣೆ ಕೂಗಿರುವ ಘಟನೆ ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕಾಗಿ ತಮ್ಮ ಸೀಟಿನಿಂದ ಎದ್ದೇಳುತ್ತಿದ್ದಂತೆ ಸಂವಿಧಾನ ಪುಸ್ತಕ ಹಿಡಿದು ಎದ್ದು ನಿಂತ ರಾಹುಲ್ ಗಾಂಧಿ, ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. ಯಾವುದೇ ಕಾರಣಕ್ಕೂ ಸಂವಿಧಾನಕ್ಕೆ ಅಪಮಾನವಾಗುವುದಕ್ಕೆ ಇಂಡಿಯಾ ಒಕ್ಕೂಟ ಬಿಡುವುದಿಲ್ಲ ಎಂದು ಕೂಗಿ ಕೂಗಿ ಹೇಳಿದರು. ಸಂವಿಧಾನ ಪುಸ್ತಕ ತೋರಿಸುತ್ತಾ ಮಾತನ್ನು ಆರಂಭಿಸಿದ್ದ ರಾಹುಲ್, ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದು, ಇದು ಎಂದಿಗೂ ಸ್ವೀಕಾರಾರ್ಹವಲ್ಲ ಎಂದು ಕಿಡಿಕಾರಿದರು. ಆದರೆ…
ಉತ್ತರ ಕನ್ನಡದ ಅನಂತಕುಮಾರ್ ಅವರು ಬಿಜೆಪಿ ಫೈರ್ ಬ್ರಾಂಡ್ ಆಗಿದ್ದು ಮೂರು ಬಾರಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ! ಇದೀಗ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ! ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮಾಜಿ ಸಂಸದರು ಮತ್ತು ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಗಿರಬಹುದೆಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ನಿಮಗೂ ಸ್ನ್ಯಾಕ್ಸ್ ‘ನೊಂದಿಗೆ ಮೇಯನೇಸ್ ತಿನ್ನುವ ಅಭ್ಯಾಸವಿದ್ದರೆ ಈ ಸುದ್ದಿ ತಪ್ಪದೇ ಓದಿ. ಮೇಯನೇಸ್ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ.? ಕೆಲವು ವರದಿಗಳ ಪ್ರಕಾರ, ಒಂದು ಟೀಸ್ಪೂನ್ ಮೇಯನೇಸ್ ಸುಮಾರು 1.6 ಗ್ರಾಂ ಸ್ಯಾಚುರೇಟೆಡ್ ಕೊಬ್ಬನ್ನ ಹೊಂದಿರುತ್ತದೆ, ಇದು ರಕ್ತದೊತ್ತಡ ಮತ್ತು ಹೃದ್ರೋಗಕ್ಕೆ ಕಾರಣವಾಗಬಹುದು. ಇದಲ್ಲದೆ, ಇದು ದೇಹದಲ್ಲಿ ಕೊಬ್ಬನ್ನ ಹೆಚ್ಚಿಸುತ್ತದೆ. ಆದ್ದರಿಂದ ನೀವು ಈಗಾಗಲೇ ಹೃದ್ರೋಗದ ಅಪಾಯ ಹೆಚ್ಚುತ್ತದೆ. ಅತಿಯಾಗಿ ಮೇಯನೇಸ್ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಇದು ಮಧುಮೇಹದ ಅಪಾಯವನ್ನ ಹೆಚ್ಚಿಸುತ್ತದೆ. ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಸಮಸ್ಯೆಗಳನ್ನು ಹೊಂದಿರುವುದು ಅನೇಕ ಸಮಸ್ಯೆಗಳನ್ನ ಉಂಟು ಮಾಡಬಹುದು. ನಿಮಗೆ ಮಧುಮೇಹದ ಸಮಸ್ಯೆ ಇದ್ದರೆ ಮೇಯನೇಸ್ ತಿನ್ನಬೇಡಿ. ಮೇಯನೇಸ್’ನಲ್ಲಿ ಕೊಬ್ಬು ತುಂಬಾ ಹೆಚ್ಚಾಗಿದೆ. ಈ ಕಾರಣದಿಂದಾಗಿ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಹೆಚ್ಚು ಮೇಯನೇಸ್ ತಿನ್ನುವುದು ರುಮಟಾಯ್ಡ್ ಸಂಧಿವಾತದ ಅಪಾಯವನ್ನ ಹೆಚ್ಚಿಸುತ್ತದೆ. ಏಕೆಂದರೆ ಮೇಯನೇಸ್ ಸಾಕಷ್ಟು ಒಮೆಗಾ -6 ಕೊಬ್ಬಿನಾಮ್ಲಗಳನ್ನ ಹೊಂದಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೆಲವೊಮ್ಮೆ ಸತ್ತಂತಹ ವ್ಯಕ್ತಿಗಳು ಮತ್ತೆ ಜೀವಂತವಾಗಿರುವ ಘಟನೆಗಳನ್ನು ನಾವು ಟಿವಿಯಲ್ಲಿ ನೋಡಿರುತ್ತೇವೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆ ಪತ್ನಿಯ ಅಂತ್ಯಸಂಸ್ಕಾರ ಮುಗಿಸಿ ದುಃಖದಲ್ಲಿದ್ದ ಪತಿಗೆ ಬಿಗ್ ಶಾಕ್ ಕಾದಿತ್ತು. ಸತ್ತ ಪತ್ನಿ 600 ಕಿ.ಮೀ ದೂರದಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಝಾನ್ಸಿಯಲ್ಲಿ ನಡೆದಿದೆ. ಗೋರಖ್ಪುರದ ಬನ್ಸಾಗಾವ್ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರಾಮ್ ಸುಮೆರ್ (60) ಎಂಬ ವ್ಯಕ್ತಿ ಜೂ.15 ತನ್ನ ಪತ್ನಿ ಪೂಲ್ಮತಿ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ದೂರು ನೀಡಿದ್ದ. ಇದಾದ ನಾಲ್ಕು ದಿನಕ್ಕೆ ಉರುವಾ ಬಜಾರ್ ಪ್ರದೇಶದಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾಗಿತ್ತು. ಅದನ್ನು ನೋಡಿದ ಸುಮೇರ್ ತನ್ನ ಪತ್ನಿಯ ಮೃತದೇಹ ಎಂದು ಗುರುತಿಸಿದ್ದ. ಬಳಿಕ ಮೃತದೇಹದ ಅಂತ್ಯ ಸಂಸ್ಕಾರ ನೆರವೇರಿಸಿದ್ದ. ಆ ಮಹಿಳೆಯನ್ನು ಕತ್ತು ಹಿಸುಕಿ ಸಾಯಿಸಲಾಗಿತ್ತು. ಇನ್ನು ಈ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪೂಲ್ಮತಿಯ ಮೊಬೈಲ್ ಫೋನ್ ನಂಬರ್ ಪರಿಶೀಲನೆ ನಡೆಸಿದ್ದರು. ಪೂಲ್ಮತಿಯ ಮೊಬೈಲ್ 600…
ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8861623074 ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ: ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು…