Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿ ಚಿನ್ನು ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಇನ್ನೊಂದೆಡೆ ರಿಜ್ವಾನ್ ಎಂಬಾತನ ಮಾಹಿತಿ ಪಡೆದ ಪೊಲೀಸರು ಹೊಸಪೇಟೆಯಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಬ್ಬರು ಸೇರಿ ಮಧುಗಿರಿ ಕೊರಟಗೆರೆ ಭಾಗದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮೇಲಿದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗುತ್ತಿದ್ದರು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಆರೋಪಿಗಳು ಚಿನ್ನಾಭರಣವನ್ನು ಸ್ಥಳೀಯ ಚಿನ್ನದ ಅಂಗಡಿಗೆ ಮಾರಾಟ ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು. ಈ ನಡುವೆ ಪೋಲಿಸ್ ವಿಶೇಷ ತಂಡವು ಪ್ರಮುಖ ಆರೋಪಿ ಚಿನ್ನು ಎಂಬತನನ್ನು ಬಂಧಿಸಿ ನಂತರ ವಿಚಾರಣೆ ವೇಳೆ ಆತನ ಸಹಚರ ರಿಜ್ವಾನ್ ಎಂಬತನನ್ನು ಕೂಡ ವಶಕ್ಕೆ ತೆಗೆದುಕೊಂಡು ಮಧುಗಿರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ರಿಜ್ವಾನ್ ಎಂಬಾತನು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದನು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಆತನ ಕೈಗೆ ಗುಂಡು ಹಾರಿಸಿದರು. ಅಲ್ಲದೆ ಹೆಚ್ಚಿನ ಅನಾಹುತ ಆಗದಂತೆ ತಡೆಗಟ್ಟಿದ್ದರು. ಇದೀಗ ಗುಂಡು…
ತುಮಕೂರು : ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಜೂನ್ 25ರಂದು ತುಮಕೂರು ಜಿಲ್ಲಾ ಬಂದ್’ಗೆ ಕರೆ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಸರ್ಕಾರಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಖಾಸಗಿಗೆ ರಜೆ: ಖಾಸಗಿ ಮತ್ತು ಅನುದಾನಿತ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ರೂಪ್ಪಾ(ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾ ಬಂದ್ ಬೆಂಬಲಿಸಿ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತಿಪಟೂರು: ರಾಜ ಕಾಲುವೆ ಒತ್ತುವರಿ ತೆರವುಕಾರ್ಯಚರಣೆ ಮುಂದುವರಿದಿದ್ದು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಒಂದು ಇಂಚು ಜಾಗ ಅನ್ಯರಪಾಲಾಗಲು ಬಿಡುವುದಿಲ್ಲ ಎಂದು ಶಾಸಕ ಷಡಕ್ಷರಿ ಪುನರ್ ಉಚ್ಚರಿಸಿದರು. ತಿಪಟೂರು ನಗರದ ಶಾಸಕರ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ದಿನದ ಬಾಡಿಗೆ ಆಧಾರದ ಮೇಲೆ ಕೆಲ ದಿನಗಳ ಮಟ್ಟಿಗೆ ಅಯ್ಯಪ್ಪ ಪೂಜೆ ಮಾಡುತ್ತೇವೆ ಎಂದು ಲಿಖಿತ ಬರೆದು ಕೊಟ್ಟಿದ್ದರು. ಈಗ ಜಾಗ ನಮಗೆ ಸೇರಬೇಕೆಂದು ಬಯಸಿ ಮುಜರಾಯಿ ಇಲಾಖೆ ಜಾಗದ ಮೇಲೆ ಹಕ್ಕು ಸಾಧಿಸಲು ಮುಂದಾಗಿದ್ದಾರೆ. ಒಂದು ವೇಳೆ ಮಂದಿರ ಕಟ್ಟಲೇ ಬೇಕೆಂದಿದ್ದರೆ ನಗರ ಸಭೆ ಸಿಎ ನಿವೇಶನವನ್ನು ಕಡಿಮೆ ಬೆಲೆಗೆ ಕೊಡಿಸುವ ಭರವಸೆ ಕೊಡುತ್ತೇನೆ. ಜೊತೆಗೆ ನನ್ನಿಂದಾದ ಅನುದಾನವನ್ನು ಒದಗಿಸುವೆ, ಆದರೆ ಮುಜರಾಯಿ ಇಲಾಖೆಯ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದರು. ದೇವಸ್ಥಾನದ ಪೋಳಿಯನ್ನು ಕ್ರಮಬದ್ಧವಾಗಿ ಮತ್ತು ಶಾಸನಬದ್ಧವಾಗಿ ನಿರ್ಮಿಸಬೇಕೆಂದು ಅನಧಿಕೃತವಾಗಿ ನಿರ್ಮಿಸ ಲಾಗಿರುವ ಶೆಡ್ ಅನ್ನು ತೆರವಿಗೆ ಆದೇಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೂರು ಕೋಟಿ ರೂಪಾಯಿ…
ಶ್ರವಣಬೆಳಗೊಳ: ಜಗತ್ತನ್ನೇ ತನ್ನತ್ತ ಸೆಳೆಯುವ ದಿವ್ಯಶಕ್ತಿ ಹೊಂದಿರುವ, ತ್ಯಾಗ, ಅಹಿಂಸೆ, ನಿಸ್ವಾರ್ಥತೆಯನ್ನು ಸಾರುವ ಶ್ರವಣಬೆಳಗೊಳದ ಭಗವಾನ್ ಬಾಹುಬಲಿಯ ವೀಕ್ಷಣೆಗಾಗಿ ಬಹುದಿನಗಳ ಬಯಕೆಯಿಂದ ಬಂದಿದ್ದೇವೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಬೆಂಗಳೂರಿನ ರಾಜಾಜಿನಗರ ಪೆಡಲ್ ಪವರ್ ಸಂಘದ ವತಿಯಿಂದ ಶನಿವಾರ ಸಂಜೆ ಸೈಕಲ್ ಜಾಥಾ ಮೂಲಕ ಶ್ರವಣಬೆಳಗೊಳಕ್ಕೆ ಆಗಮಿಸಿದ ಅವರು, ಹುಣ್ಣಿಮೆಯ ದಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಿ ಬೆಳದಿಂಗಳಲ್ಲಿ ಬಾಹುಬಲಿ ಮೂರ್ತಿಯನ್ನು ಕಣ್ತುಂಬಿಕೊಳ್ಳಬೇಕು ಎಂಬ ಅಪೇಕ್ಷೆ ಹೊಂದಿದ್ದೆವು ಎಂದರು. ನಮ್ಮ ತಂಡವು ಪ್ರತಿ ತಿಂಗಳು 350 ರಿಂದ 400 ಕಿಲೋಮೀಟರ್ ಸೈಕಲ್ ಮೂಲಕ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುತ್ತೇವೆ. ಅದೇ ರೀತಿ ಈಗಾಗಲೇ ಧರ್ಮಸ್ಥಳ, ಪಾಂಡಿಚೆರಿಗೆ ಭೇಟಿ ನೀಡಿದ್ದು ಈ ವರ್ಷದ ಕೊನೆಯಲ್ಲಿ ಕನ್ಯಾಕುಮಾರಿಗೆ ಸೈಕಲ್ ಮೂಲಕ ತೆರಳುವ ಉದ್ದೇಶ ಹೊಂದಿದ್ದೇವೆ ಎಂದರು. 2018ರ ಮಹಾಮಸ್ತಕಾಭಿಷೇಕದಲ್ಲಿ ನಾನು ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ್ದೆ, ಹಿಂದಿನ ಚಾರುಕೀರ್ತಿ ಶ್ರೀಗಳ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆ ಅಪಾರವಾದುದು ಎಂದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ…
ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ ನಡೆಸಿ ಅವರು ಮಾತನಾಡಿದರು. ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು, ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು. ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚಿಸಿದರು. ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ…
ಕಲಬುರಗಿ: ಪ್ರಸಕ್ತ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ವಾಡಿಕೆಗಿಂತ ಹೆಚ್ಚಾಗಿರುವುದರಿಂದ ಕೃಷಿ ಚಟುವಟಿಕೆ ಆಶದಾಯಕವಾಗಿವೆ. ಈ ವರ್ಷ ರಾಜ್ಯದಾದ್ಯಂತ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಸೋಮವಾರ ಇಲ್ಲಿನ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೂವರೆಗೆ 33 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಇದು ಗುರಿಗೆ ಶೇ.40ರಷ್ಟು ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಕೇವಲ 8.37 ಲಕ್ಷ ಹೆಕ್ಟೇರ್ ಪ್ರದೇಶ ಮಾತ್ರ ಬಿತ್ತನೆಯಾಗಿತ್ತು ಎಂದು ಸಚಿವರು ಮಾಹಿತಿ ನೀಡಿದರು. ರಾಜ್ಯದಲ್ಲಿ ಮುಂಗಾರು ಪೂರ್ವ 115 ಮಿ.ಮೀ ಮಳೆಯಾದರೆ ಜೂನ್ ಮಾಹೆಯಲ್ಲಿ ಒಟ್ಟಾರೆ 148 ಮಿ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 95 ಮಿ.ಮೀ. ಮಳೆಯಾಗಿದ್ದು, ಇದು ವಾಡಿಕೆಗಿಂತ 40 ಮಿ.ಮೀ ಹೆಚ್ಚು. ಅದೇ ರೀತಿ ಉತ್ತರ ಒಳನಾಡಿನಲ್ಲಿ 78 ಮಿ.ಮೀ. ಮಳೆ ವಾಡಿಕೆಯಾದರೆ, ಮಳೆ ಬಿದ್ದಿದ್ದು 134 ಮಿ.ಮೀ. ಇನ್ನು ಮಳೆನಾಡು, ಕರಾವಳಿಯಲ್ಲಿ…
ಸರಗೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಪವಿತ್ರಗೌಡ ವಿರುದ್ಧ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ದರ್ಶನ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದಕ್ಕಾಗಿ ಕೊಲೆಯಾಗಿರುವ ರೇಣುಕಾ ಸ್ವಾಮಿ ಪರವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ದರ್ಶನ್ ಮತ್ತು ಪವಿತ್ರಗೌಡ ಹಾಗೂ ಸಹಚರರು ಆರೋಪಿಗಳನ್ನು ಗಲ್ಲಿಗೆ ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ತಾಲ್ಲೂಕಿನ ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ದರ್ಶನ್ ವಿರುದ್ಧ ವಿವಿಧ ಘೋಷಣೆ ಕೂಗುತ್ತ ನಡೆಸಿ ಅದೇ ಬಸ್ ನಿಲ್ದಾಣದ ಮಾರ್ಗವಾಗಿ ತಹಶೀಲ್ದಾರ್ ಕಚೇರಿ ತೆರಳಿ ಮುಂಭಾಗದಲ್ಲಿ ಪ್ರತಿಭಟನಕಾರರು ಜಮಾಯಿಸಿ ಮಳೆಯನ್ನು ಲೆಕ್ಕಿಸದೆ ಮಳೆಯಲ್ಲಿ ಪ್ರತಿಭಟನೆ ನಡೆಸಿದರು. ನಂತರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಡಿ ಜಿ ಶಿವರಾಜಪ್ಪ ಮಾತನಾಡಿ ಚಿತ್ರದುರ್ಗದ ಮೃತ…
ಪಾವಗಡ: ನಾಡಿನ ಸಮಕಾಲಿನ ಕನ್ನಡ ಸಾಹಿತ್ಯದ ಮೇರು ಬರಹಗಾರ್ತಿ ನಾಡೋಜ ಡಾ.ಕಮಲಾ ಹಂಪನಾರವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ತಿಳಿಸಿದರು. ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಬಾಲಕರ ಶಾಲೆಯಲ್ಲಿ ಭಾನುವಾರದಂದು ಹೋಬಳಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತರಾದ ನಾಡೋಜ ಡಾ. ಕಮಲಾ ಹಂಪನಾರವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು. ತಾಲ್ಲೂಕಿನ ಮೂಲದ ಮಹಿಳೆಯಾದ ಕಮಲಾ ಹಂಪನಾ ರವರು ಉತ್ತಮ ಸ್ತ್ರೀ ಸಂವೇದನಾ ಬರಹಗಾರರು ಹಾಗೂ 71 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರ ಸಾಹಿತ್ಯ ಸೇವೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಶ್ರೀಮಂತಗೊಂಡಿದೆ ಎಂದರು. ಹೋಬಳಿ ಘಟಕದ ಅಧ್ಯಕ್ಷರಾದ ಹೊ.ಮ.ನಾಗರಾಜು ಮಾತನಾಡಿದರು. ಪದಾಧಿಕಾರಿಗಳಾದ ಕೃಷ್ಣಕುಮಾರ್, ಎ.ಎಸ್.ರಘುನಂದನ್, ಸತ್ಯನಾರಾಯಣಚಾರಿ, ತಿರುಮಲೇಶ ಸೇರಿದಂತೆ ನಂದೀಶ್ ನಾಯ್ಕ, ಹರೀಶ್, ತೇಜಸ್ ಇದ್ದರು. ವರದಿ : ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸಶ್ಮಾನದಲ್ಲಿ ಅಂತಿಮ ವಿಧಿಗಳನ್ನು ನಡೆಸಿದ ಅನಂತರ ತಿರುಗಬಾರದು ಎಂದು ಹೇಳಲಾಗುತ್ತದೆ. ಯಾಕೆ ಗೊತ್ತೆ ? ಇಲ್ಲಿದೆ ಸನಾತನ ಧರ್ಮದ ನಿಯಮಗಳು ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಆತನ ಆತ್ಮವು ದೇಹವನ್ನು ತೊರೆಯುತ್ತದೆ. ಅಂತಿಮ ವಿಧಿಗಳನ್ನು ನಡೆಸಿದ ಬಳಿಕ ದೇಹವು ಬೂದಿಯಾಗುತ್ತದೆ. ಆದರೆ ಆತ್ಮವು ಅಲ್ಲೇ ಇರುತ್ತದೆ. ಆತ್ಮವನ್ನು ಶಾಶ್ವತ ಮತ್ತು ಅವಿನಾಶಿ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ಯಾವುದೇ ಕತ್ತಿ, ಬೆಂಕಿ ಅಥವಾ ನೀರು ಆತ್ಮವನ್ನು ನಾಶಮಾಡುವುದಿಲ್ಲ. ಸ್ಮಶಾನ ಕಾರ್ಯದ ಬಳಿಕ ವ್ಯಕ್ತಿಯ ಆತ್ಮವು ಬೇರೆ ಲೋಕಕ್ಕೆ ಪ್ರಯಾಣ ಬೆಳೆಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಸತ್ತವರ ಕುಟುಂಬದ ಸದಸ್ಯರು ಅಂತ್ಯಕ್ರಿಯೆಯ ಅನಂತರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಹಿಂತಿರುಗಿ ನೋಡಿದಾಗ ಕುಟುಂಬಕ್ಕೆ ಆತ್ಮದ ಬಾಂಧವ್ಯವು ಅದನ್ನು ಇನ್ನೊಂದು ಲೋಕಕ್ಕೆ ಹಾದುಹೋಗದಂತೆ ತಡೆಯುತ್ತದೆ. ಗರುಡ ಪುರಾಣದಲ್ಲಿ ಉಲ್ಲೇಖಿಸಿದಂತೆ ಮರಣದ ಅನಂತರ ಸತ್ತ ವ್ಯಕ್ತಿಯ ಆತ್ಮವು ಸ್ಮಶಾನದಲ್ಲಿ ನಡೆಯುವ ಅವನ ಕೊನೆಯ ಚಟುವಟಿಕೆಗಳನ್ನು ವೀಕ್ಷಿಸುತ್ತದೆ. ಮೃತನ ಕುಟುಂಬದ ಸದಸ್ಯರು ಸ್ಮಶಾನದಲ್ಲಿ ಇರುವುದರಿಂದ ಸತ್ತ…
ಬೆಂಗಳೂರು: 17 ವರ್ಷ ವಯಸ್ಸಿನ ಬಾಲಕನನ್ನು ರಾಡ್ ನಿಂದ ಹೊಡೆದು ಹತ್ಯೆ ಮಾಡಿ, ಖಾಲಿ ಜಾಗವೊಂದರಲ್ಲಿ ಎಸೆದು ಹೋಗಿರುವ ಘಟನೆ ಬೆಂಗಳೂರಿನ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಬಳಿ ನಡೆದಿದೆ. ಅಬ್ಬಿಗೆರೆಯ 17 ವರ್ಷದ ಬಾಲಕ ಮಂಜುನಾಥ್ ಎಂಬಾತನೆ ಕೊಲೆಯಾದ ಬಾಲಕ. ಕಳೆದ ರಾತ್ರಿ ಈತನನ್ನು ಹತ್ಯೆ ಮಾಡಲಾಗಿದೆ. ರಾಡ್ ನಲ್ಲಿ ತಲೆಗೆ ತೀವ್ರವಾಗಿ ದಾಳಿ ಮಾಡಿದ್ದರಿಂದ ಮಂಜುನಾಥ್ ಸಾವನ್ನಪ್ಪಿದ್ದಾನೆ. ನಂತರ ದುಷ್ಕರ್ಮಿಗಳು ಮೃತದೇಹವನ್ನು ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಎಸೆದು ಪರಾರಿಯಾಗಿದ್ದಾರೆ. ಪ್ರೀತಿ ವಿಚಾರಕ್ಕಾಗಿ ಜಗಳ ನಡೆದು, ಅದು ವಿಕೋಪಕ್ಕೆ ತಿರುಗಿದ್ದರಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA